ತುಮಕೂರು: ಕೋಟೆನಾಡು ಸಿರಾದಲ್ಲಿ 70 ವರ್ಷದ ಬಳಿಕ ಕಮಲದ ಹೂವು ಅರಳಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಸಿರಾ ಕ್ಷೇತ್ರದಲ್ಲಿ ಮತದಾರರು ಅಭಿವೃದ್ಧಿಗೋಸ್ಕರ ಬದಲಾವಣೆ ಬಯಸಿದ್ದಾರೆ. ಹಾಗಾಗಿ ಈ ಬಾರಿ ಕ್ಷೇತ್ರದ ಜನತೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂದರು. ಸಿರಾದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ಗೌಡ ಅವರ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸವಾಲವನ್ನು ಸ್ವೀಕರಿಸಲು ಬಿಜೆಪಿ ಸಿದ್ದವಾಗಿದೆ ಎಂದರು. ನಾವು ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಯನ್ನು ಗೆಲ್ಲುತ್ತೇವೆ, ಯಾವುದೇ ಜಾತಿ ಆಧಾರದ ಮೇಲೆ ಚುನಾವಣೆ ಎದುರಿಸಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿ ಆಡಳಿತ, ರಾಜ್ಯದಲ್ಲಿ ಯಡಿಯೂರಪ್ಪನವರ ಆಡಳಿತವನ್ನು ಮೆಚ್ಚಿ ಸಿರಾ ಕ್ಷೇತ್ರದ ಜನತೆ 70 ವರ್ಷದ…
Author: News Desk Benkiyabale
ಮಧುಗಿರಿ: ಮಧುಗಿರಿ ಪೊಲೀಸ್ ಇಲಾಖಾ ವತಿಯಿಂದ ಕೋವಿಡ್-19 ರ ಬಗ್ಗೆ ಎಚ್ಚರವಿರಲಿ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ನೀಡಲು ‘ಜನಾಂದೋಲನ ಕಾರ್ಯಕ್ರಮವನ್ನು’ ಪಟ್ಟಣದಲ್ಲಿ ಬುಧವಾರದಂದು ಜಾಥಾ ನಡೆಸುವ ಮೂಲಕ ಹಮ್ಮಿಕೊಳ್ಳಲಾಯಿತು. ಡಿವೈಎಸ್ಪಿ ಎಂ.ಪ್ರವೀಣ್ ಮಾತನಾಡಿ, ಕೇಂದ್ರ ಸರಕಾರದ ಎಸ್ ಎಂಎಸ್ ಆದೇಶದಂತೆ “ಸೋಷಿಯಲ್ ದಿಸ್ಟೆನ್ಸ್, ಮಾಸ್ಕ್, ಸ್ಯಾನಿಟ್ಯೆಸರ್’ ಖಡ್ಡಾಯವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಪೊಲಿಸ್ ಇಲಾಖೆವತಿಯಿಂದ ಜಾಥ ನಡೆಸಿ, ಹಸ್ತಲಾಘವ ಮಾಡುವ ಬದಲು ನಮಸ್ಕರಿಸಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈಗಳನ್ನು ಸ್ಯಾನಿಟೈಸರ್ ನಿಂದ ಸ್ವಚ್ಛ ಮಾಡಿಕೊಳ್ಳಿ ನೊವೆಲ್ ಕೊರೊನಾ ವೈರಸ್ ನಮ್ಮ ಬಳಿ ಸುಳಿಯದಂತೆ ಎಚ್ಚರ ವಹಿಸಿ ಎಂದರು. ಜಾಥಾ ವೇಳೆ ಮಳೆಯ ಸಿಂಚನದ ನಡುವೆಯೂ ಪೊಲೀಸರು ಪಟ್ಟಣದಲ್ಲಿ ಪ್ರಮುಖ ಬೀದಿಯಲ್ಲಿ ಜಾಥಾ ನಡೆಸಿದ್ದು ವಿಶೇಷವಾಗಿತ್ತು . ಈ ಜಾಥಾವು ಮಧುಗಿರಿ ಡಿವೈಎಸ್ಪಿ ಕಚೇರಿಯಿಂದ ಆರಂಭಗೊಂಡು ದ್ವಿಪಥ ರಸ್ತೆ, ಹೈಸ್ಕೂಲ್ ರಸ್ತೆ ,ಡೂಮ್ಲೈಟ್ ವೃತ್ತ, ಕೆಎಚ್…
ತುಮಕೂರು: ರಾಜ್ಯದಲ್ಲಿ ಜನ ವಿರೋಧಿ, ನಿಷ್ಕ್ರೀಯ ಹಾಗೂ ಲೂಟಿ ಹೊಡೆಯುವ ಸರ್ಕಾರ ಇದೆ. ಈ ಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು. ಈ ನಿಟ್ಟಿನಲ್ಲಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಸಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರು ರಾಜ್ಯದ ನಿಷ್ಕ್ರೀಯ ಸರ್ಕಾರದ ವಿರುದ್ಧ ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಅವರು ಕರೆ ನೀಡಿದರು. ಸಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಮುಂದಿನ ದಿನಗಳಲ್ಲಿ ಈ ಲೂಟಿಕೋರ ಸರ್ಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಈ ಉಪಚುನಾವಣೆಯಲ್ಲಿ ಮತದಾರರು ಎಚ್ಚರಿಕೆ ವಹಿಸಬೇಕು ಎಂದರು. ಇದು ಸಾರ್ವತ್ರಿಕ ಚುನಾವಣೆಯಲ್ಲ, ಉಪಚುನಾವಣೆ. ಹಾಗಾಗಿ ಜನರು ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದರು. ಕಳೆದ ಬಾರಿ…
ತುಮಕೂರು: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕೋವಿಡ್-19ರ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಕರ್ನಾಟಕ ರಾಜ್ಯ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ಜರುಗಿಸುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಇಂದಿಲ್ಲಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ಲೈಯಿಂಗ್ ಸ್ಕ್ವಾಡ್ ಹಾಗೂ ಸೆಕ್ಟರ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ಲೈಯಿಂಗ್ ಸ್ಕ್ವಾಡ್ನ ಅಧಿಕಾರಿಗಳು ಚುರುಕಿನಿಂದ ಕಾರ್ಯನಿರ್ವಹಿಸಬೇಕು. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹೆಚ್ಚಿನ ಬಹಿರಂಗ ಪ್ರಚಾರ ನಡೆಯುವುದಿಲ್ಲ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳ ಬಗ್ಗೆ ದೂರು ಬಂದ ತಕ್ಷಣವೇ ಜಾಗೃತರಾಗಬೇಕು. ಈ ಬಗ್ಗೆ ಪರಿಶೀಲಿಸಬೇಕು. ಸದಾ ಪೊಲೀಸ್ರೊಂದಿಗೆ ಸಂಪರ್ಕದಲ್ಲಿರಬೇಕು ಎಂದರು. ಚುನಾವಣಾ ಸಂದರ್ಭದಲ್ಲಿ ಸೆಕ್ಟರ್ ಅಧಿಕಾರಿಗಳು ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳು ಆಗಿರುತ್ತಾರೆ. ಚುನಾವಣಾ…
ತುಮಕೂರು : ಶಿರಾ ವಿಧಾನಸಭಾ ಉಪಚುನಾವಣೆ-2020 ಮತ್ತು ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 13ರವರೆಗೆ ಜಿಲ್ಲೆಯಲ್ಲಿ ಸಿರಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ಒಟ್ಟು 12 ಘೋರ ಪ್ರಕರಣಗಳು, 85 15(ಎ) ಪ್ರಕರಣಗಳು, 12 ಬಿಎಲ್ಸಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, 384.030 ಲೀಟರ್ ಮದ್ಯ ಹಾಗೂ 4.780 ಲೀಟರ್ ಬಿಯರ್ ಮತ್ತು 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಮದ್ಯ ಮಾರಾಟ, ಸಾಗಾಣಿಕೆ, ಶೇಖರಣೆ ಇತ್ಯಾದಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಜಿಲ್ಲೆಯ ಅಬಕಾರಿ ಇಲಾಖೆಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಬಕಾರಿ ಉಪ ಆಯುಕ್ತರ ಕಛೇರಿ ತುಮಕೂರು ಹಾಗೂ ಅಬಕಾರಿ ನಿರೀಕ್ಷಕರ ಕಛೇರಿ ಶಿರಾ ವಲಯದಲ್ಲಿ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದೆ. ಅಬಕಾರಿ ಉಪ ಆಯುಕ್ತರ ಕಛೇರಿ ಕಂಟ್ರೋಲ್…
ತುಮಕೂರು: ಸಿರಾ ಕ್ಷೇತ್ರದ ಆರಾಧ್ಯ ದೈವ ಶ್ರೀ ಜುಂಜಪ್ಪಸ್ವಾಮಿಗೆ ನಮಸ್ಕರಿಸಿ ನಾವು ನಾಮಪತ್ರ ಸಲ್ಲಿಸಿದ್ದೇವೆ. ಜುಂಜಪ್ಪ ದೇವರ ಆಶೀರ್ವಾದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ಗೌಡರ ಮೇಲಿದೆ. ನೂರಕ್ಕೆ ನೂರರಷ್ಟು ಗೆದ್ದು ಭಾರತೀಯ ಜನತಾ ಪಕ್ಷದ ಪತಾಕೆಯನ್ನು ಸಿರಾದಲ್ಲಿ ಹಾರಿಸಲಿದ್ದೇವೆ ಎಂಬ ವಿಶ್ವಾಸವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಇಂದಿಲ್ಲಿ ವ್ಯಕ್ತಪಡಿಸಿದರು. ಸಿರಾ ಉಪಚುನಾವಣೆಯಲ್ಲಿ ಆಶ್ಚರ್ಯಕರ ರೀತಿಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ರಾಜೇಶ್ಗೌಡ ಅವರು ಗೆದ್ದೇ ಗೆಲ್ಲುತ್ತಾರೆ ಎಂದು ಅವರು ಹೇಳಿದರು. ಸಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ಗೌಡ ಅವರ ಜತೆ ತೆರಳಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ರಾಜ್ಯದ ಜನ ಭಾರತೀಯ ಜನತಾ ಪಕ್ಷ ಗೆಲ್ಲಬೇಕು ಎಂದು ಬಯಸುತ್ತಿದ್ದಾರೆ. ದೇಶದ ಶೇ. 75 ರಷ್ಟು ರಾಜ್ಯಗಳಲ್ಲಿ ಬಿಜೆಪಿ ಪಕ್ಷದ ಆಡಳಿತ ಇದೆ. ರಾಜ್ಯದಲ್ಲಿ ಯಡಿಯೂರಪ್ಪನವರ ನಾಯಕತ್ವದ ಸರ್ಕಾರ ಇದೆ. ಕೇಂದ್ರದಲ್ಲಿ ಮೋದೀಜಿ ನಾಯಕತ್ವದ ಸರ್ಕಾರವಿದೆ.…
ತುಮಕೂರು : ಶಿರಾ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ ಸತ್ಯನಾರಾಯಣ ಅವರ ಪರವಾಗಿ ಮಾಜಿ ಮಂತ್ರಿ ಹೆಚ್.ಡಿ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರ ಸ್ವಾಮಿ ಮತ್ತು ಶಿರಾ ಪುರಸಭೆ ಮಾಜಿ ಅಧ್ಯಕ್ಷ ರಾಮು ರವರುಗಳು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿರುವ ಅಮ್ಮಾಜಮ್ಮ ಅವರಿಗೆ ಕೋರೋನ ಸೋಂಕು ದೃಡಪಟ್ಟು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಅವರ ಪರವಾಗಿ ಜೆಡಿಎಸ್ ಪಕ್ಷದ ಮುಖಂಡರ ಚುನಾವಣಾಧಿಕಾರಿಗಳಾದ ಮಧುಗಿರಿ ಉಪವಿಭಾಗಾಧಿಕಾರಿ ಡಾ.ನಂದಿನಿ ದೇವಿ ಅವರಿಗೆ ಉಮೇದುವಾರಿಕೆ ಪತ್ರ ಸಲ್ಲಿಸಿದರು. ಶಿರಾ ನಗರದ ಚೆಂಗಾವರ ರಸ್ತೆಯಲ್ಲಿರುವ ಮಾಜಿ ಶಾಸಕ ದಿವಂಗತ ಸತ್ಯನಾರಾಯಣ ಅವರಿಗೆ ಸೇರಿದ ವಸತಿಗೃಹದಿಂದ ಶಿರಾ ನಗರದ ಹೊರವಲಯದಲ್ಲಿರುವ ತಾಲೂಕು ಕಚೇರಿಗೆ ಮಿನಿ ವಿಧಾನಸೌಧದವರೆಗೆ ಸಾವಿರಾರು ಕಾರ್ಯಕರ್ತ ರೊಂದಿಗೆ ಮೆರವಣಿಗೆ ನಡೆಸಿದ ಶಾಸಕ ಹಾಗೂ ಪಕ್ಷದ ಉಪಾಧ್ಯಕ್ಷ ಹೆಚ್.ಡಿ.ರೇವಣ್ಣ,ಹಾಸನ ಸಂಸದ ಹೆಚ್.ಆರ್.ಪ್ರಜ್ವಲ್ ರೇವಣ್ಣ, ಶಾಸಕರಾದ ಡಿ.ಸಿ.ಗೌರಿಶಂಕರ್,ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮಧುಗಿರಿಯ ಎಂ.ವಿ.ವೀರಭದ್ರಯ್ಯ,ಮಾಜಿ…
ಹುಳಿಯಾರು : ಬಯಲು ಬಹಿರ್ದೆಸೆ ನಿರ್ಮೂಲನೆಗೆ ಸರ್ಕಾರ ಯುದ್ದೋಪಾದಿಯಲ್ಲಿ ಕ್ರಮ ಕೈಗೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಸಹ ಪಂಚಾಯ್ತಿಯ ನಿರ್ಲಕ್ಷ್ಯದಿಂದಾಗಿ ಬಯಲು ಬಹಿರ್ದೆಸೆ ಇನ್ನೂ ಜೀವಂತವಾಗಿದ್ದು ಸಾರ್ವಜನಿಕರು ರಸ್ತೆ ಬದಿ ಮಲಮೂತ್ರ ವಿಸರ್ಜಿಸುವ ವ್ಯವಸ್ಥೆ ಇದ್ದು ನಾಗರಿಕ ಸಮಾಜವನ್ನು ಅಣಕಿಸುವಂತಿದೆ. ಹೌದು, ಜಿಲ್ಲೆಯಲ್ಲೇ ಅತೀ ಹೆಚ್ಚು ಆದಾಯವುಳ್ಳ, ತಾಲೂಕು ಸರಿಸಮಾನಕ್ಕೆ ಬೆಳೆದು ನಿಂತಿರುವ, ವ್ಯಾಪಾರ ವಹಿವಾಟಿಗೆ ಹೆಸರಾಗಿರುವ ಹುಳಿಯಾರಿನ ಸ್ಥಿತಿ ಇದು. ಹೆಚ್ಚು ಜನಸಂದಣಿ ಇರುವ ರಾಮಗೋಪಾಲ್ ಸರ್ಕಲ್ ಮತ್ತು ಬಸ್ ನಿಲ್ದಾಣದಲ್ಲಿ ಪಂಚಾಯ್ತಿಯಿಂದ ದಶಕಗಳ ಹಿಂದೆ ಶೌಚಾಲಯ ಕಟ್ಟಿಸಿ, ಪ್ರಯಾಣಿಕರು, ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕರು, ಹಮಾಲಿಗಳು, ಕೂಲಿಕಾರ್ಮಿಕರಿಗೆ, ಸಾರ್ವಜನಿಕರಿಗೆ ದೇಹಬಾಧೆ ತೀರಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದ್ದರು. ಆದರೆ ರಾಮಗೋಪಾಲ್ ಸರ್ಕಲ್ ಶೌಚಾಲಯ ಹೈವೆ ರಸ್ತೆ ಕಾಮಗಾರಿಗೆ ತೆರವು ಮಾಡಿದವರು ಪುನಃ ನಿರ್ಮಿಸಿಲ್ಲ. ಬಸ್ ನಿಲ್ದಾಣದ ಶೌಚಾಲಯವನ್ನು ಕೋವಿಡ್ ಲಾಕ್ಡೌನ್ ನೆಪದಲ್ಲಿ ಮುಚ್ಚಿದ್ದು ತೆರೆಯದಿರುವುದು ಬಯಲು ಬಹಿರ್ದೆಸೆಗೆ ಕಾರಣವಾಗಿದೆ. …
ಮಧುಗಿರಿ: ರೈತರ ಬಗ್ಗೆ ಕಾಳಜಿಯಿರುವ ನರೇಂದ್ರ ಮೋದಿಯವರ ಕಾರ್ಯಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಡ್ಡಗಾಲಾಗಿದ್ದು, ಎಪಿಎಂಸಿ ತಿದ್ದುಪಡಿಯಾಗಲು ಬಿಜೆಪಿಗೆ ಮತ ನೀಡುವಂತೆ ಶಾಸಕ ವೈ.ಎನ್.ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಗ್ನೀಯ ಪದವೀಧರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಎಂ.ಚಿದಾನಂದ ಗೌಡರ ಪರವಾಗಿ ಮತಯಾಚನೆ ಮಾಡಿದ ಅವರು ರೈತರು ದಲ್ಲಾಳಿಗಳ ಹಾವಳಿಯಿಂದ ಹೊರಬಂದು ಸ್ವತಂತ್ರವಾಗಿ ಬೆಳೆದ ಬೆಳೆಯನ್ನು ಮಾರಾಟ ಮಾಡಲು ನೂತನ ಎಪಿಎಂಸಿ ಕಾಯ್ದೆ ಸಹಕಾರಿಯಾಗಿದೆ. ಆದರೆ ಈ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳು ಅಡ್ಡಿಯಾಗಿದ್ದು, ಕಾಯ್ದೆ ಮೇಲ್ಮನೆಯಲ್ಲಿ ಬಿದ್ದುಹೋಗುವಂತೆ ಮಾಡಿವೆ. ಈಗಿನ ನಾಲ್ಕು ವಿಧಾನ ಪರಿಷತ್ ಹಾಗೂ ವಿಧಾನಸಭೆಯ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಆ ಕಾಯ್ದೆ ಜಾರಿಗೆ ಬಂದು ರೈತರಿಗೆ ಅನುಕೂಲವಾಗಲಿದೆ. ಬಿಜೆಪಿ ಕಾರ್ಯಕರ್ತರು ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿ ಗೆಲುವಿಗೆ ಕಾರಣರಾಗಬೇಕು ಎಂದರು. ಅಭ್ಯರ್ಥಿ ಎಂ. ಚಿದಾನಂದ ಗೌಡ ಮಾತನಾಡಿ ಬಡ…
ಹುಳಿಯಾರು: ಶ್ರೀಮಂತರು ತಿನ್ನುವ ಹಣ್ಣು ಎಂದೇ ಕರೆಯಲ್ಪಡುವ ಸೇಬು ಹಣ್ಣಿನ ಬೆಲೆ ಕಳೆದ ಒಂದು ವಾರದಿಂದ ಕುಸಿತ ಕಂಡಿದ್ದು ಹುಳಿಯಾರಿನಲ್ಲಿ ಸೇಬು ಹಣ್ಣಿನ ಮಾರಾಟ ಗಲ್ಲಿಗಲ್ಲಿಯಲ್ಲೂ, ಹೆಜ್ಜೆಹೆಜ್ಜೆಗೂ ಭರ್ಜರಿಯಾಗಿ ನಡೆಯುತ್ತಿದೆ. ಹಿಮಾಚಲ ಪ್ರದೇಶ ಹಾಗೂ ಕಾಶ್ಮೀರಿ ಹಣ್ಣು ಹುಳಿಯಾರಿಗೆ ಬರುತ್ತಿದ್ದು ಬೆಂಗಳೂರು, ಚಿತ್ರದುರ್ಗದ ಮಾರುಕಟ್ಟೆಯಿಂದ ಇಲ್ಲಿಗೆ ಸರಬರಾಜಾಗುತ್ತಿದೆ. ಕಳೆದ ಹತ್ತದಿನೈದು ದಿನಗಳ ಹಿಂದಷ್ಟೆ ಕೆಜಿ ಸೇಬಿಗೆ 120 ರಿಂದ 150 ರೂ. ಇದ್ದ ಬೆಲೆ ಈಗ ಶೀತದ ಕಾರಣಕ್ಕೆ ಸೇಬು ತಿನ್ನುವವರ ಸಂಖ್ಯೆ ತೀರಾ ಕಡಿಮೆಯಾಗಿ ಬೇಡಿಕೆ ಕುಸಿದಿದೆ. ಪರಿಣಾಮ ಕೆ.ಜಿ ಗೆ 80 ರೂ. ರಿಂದ 120 ರೂ ವರೆಗೆ ಮಾರಾಟವಾಗುತ್ತಿದೆ. ಐದಾರು ಕೆಜಿ ಕೊಂಡರೆ ಇನ್ನೂ ಕಡಿಮೆ ಬೆಲೆಗೆ ಕೊಡುತ್ತಿದ್ದಾರೆ. ಪರಿಣಾಮ ಪಟ್ಟಣದ ಬಸ್ ನಿಲ್ದಾಣ, ರಾಜಕುಮಾರ್ ರಸ್ತೆ, ರಾಮಗೋಪಾಲ್ ಸರ್ಕಲ್, ಬಿ.ಎಚ್.ರಸ್ತೆ ಎಲ್ಲಾ ಕಡೆ ಸೇಬುಹಣ್ಣಿನ ಮಾರಾಟವೆ ಕಾಣುತ್ತಿದೆ. ಸಾಲದಕ್ಕೆ ತಳ್ಳುವ ಗಾಡಿಯಲ್ಲಿ ಸೇಬಿನ ರಾಶಿ…











