Author: News Desk Benkiyabale

ತುಮಕೂರು:       ವಿದ್ಯಾವಂತ ಸಮುದಾಯ ಅಮೀಷಗಳಿಗೆ ಬಲಿಯಾಗಿ ಮತ ಚಲಾಯಿಸುತ್ತಿದ್ದಾರೆ ಎಂಬ ಆರೋಪ, ಶಿಕ್ಷಕರು ಮತ್ತು ಪದವಿಧರರ ಕ್ಷೇತ್ರಗಳ ಮತದಾರರ ಮೇಲಿದ್ದು, ಇದರಿಂದ ಹೊರಬರಲು ಆಗ್ನೇಯ ಪದವಿಧರರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್‍ಬಾಬು ಅವರಿಗೆ ಮತಚಲಾಯಿಸುವಂತೆ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಮನವಿ ಮಾಡಿದ್ದಾರೆ.       ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಶಿಕ್ಷಕರು ಮತ್ತು ಪದವಿಧರರಿಗೆ ಏನಾದರೂ ಕಿಂಚಿತ್ತು ಸರಕಾರದ ಸವಲತ್ತುಗಳು ನೀಡಿದ್ದರೆ,ಅದು ಕಾಂಗ್ರೆಸ್ ಪಕ್ಷದ ಸರಕಾರವಿದ್ದಾಗ ಮಾತ್ರ. ಆದರೆ ಈ ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಕಾಣಲು ಸಾಧ್ಯವಾಗುತ್ತಿಲ್ಲ.ಇದಕ್ಕೆ ಕಾರಣ ಈ ಕ್ಷೇತ್ರಗಳ ಮತದಾರರು ಅಮೀಷಗಳಿಗೆ ಸುಲಭವಾಗಿ ತುತ್ತಾಗುತ್ತಿದ್ದಾರೆ ಎಂಬ ಅಪಾದನೆಗಳು ಕೇಳಿ ಬರುತ್ತಿದ್ದು,ಇದರ ಹೊರಬರಲು ಇರುವ ಏಕೈಕ ಮಾರ್ಗವೆಂದರೆ ಈ ಸಾಲಿನಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್‍ಬಾಬು ಗೆಲುವು ಎಂದರು.       ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ…

Read More

 ತುರುವೇಕೆರೆ:      ಪಟ್ಟಣ ಪಂಚಾಯ್ತಿ ಮೀಸಲಾತಿ ಪ್ರಕಟಗೊಂಡ ಬೆನ್ನಲೇ ಪಟ್ಟಣ ಪಂಚಾಯಿತಿ ಸದಸ್ಯರಲ್ಲಿ ರಾಜಕೀಯ ಲೆಕ್ಕಾಚಾರ ಚುರುಕುಗೊಂಡಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ಮುಡಿಗೇರಿಸಿಕೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.       ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡು ಮೀಸಲಾತಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಒಟ್ಟು 14 ಪಟ್ಟಣ ಪಂಚಾಯಿತಿ ಸದಸ್ಯರನ್ನು ಒಳಗೊಂಡಿರುವ ತುರುವೇಕೆರೆ ಪಟ್ಟಣ ಪಂಚಾಯ್ತಿ ಸ್ಥಾನಗಳಲ್ಲಿ, ಪಟ್ಟಣ ಪಂಚಾಯ್ತಿಯ ಅಧಿಕಾರದ ಆಡಳಿತ ಹಿಡಿಯಲು 8 ಸದಸ್ಯರ ಬಹುಮತ ಅಗತ್ಯವಿದೆ. ಇದರಲ್ಲಿ ಬಿಜೆಪಿ 6ರಲ್ಲಿ ಜಯಭೇರಿ ಭಾರಿಸಿ ದೊಡ್ಡ ಪಕ್ಷವಾಗಿ ಹೊರಹುಮ್ಮಿದ್ದು, ಜೆಡಿಎಸ್ 5ರಲ್ಲಿ, ಕಾಂಗ್ರೇಸ್ ಕೇವಲ 2ರಲ್ಲಿ, ಪಕ್ಷೇತರ ಒಬ್ಬರು ಸದಸ್ಯರಿದ್ದಾರೆ.       12 ನೇ ವಾರ್ಡ್‍ನಲ್ಲಿ ಜಯದ ನಗೆ ಬೀರಿರುವ ಪಕ್ಷೇತರ ಸದಸ್ಯರಾದ ಟಿ.ಕೆ. ಪ್ರಭಾಕರ್ ಈಗಾಗಲೇ ಶಾಸಕ ಮಸಾಲ ಜಯರಾಮ್‍ರವರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಮ್ಮುಖದಲ್ಲಿ ಈಗಾಗಲೇ ಬಿಜೆಪಿ ಸೇರ್ಪಡೆಗೊಂಡಿರುವುದು ಒಂದೆಡೆಯಾದರೆ ಅಧ್ಯಕ್ಷ,…

Read More

ಹುಳಿಯಾರು:      ಹುಳಿಯಾರು ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದ್ದು ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.       ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ಬಿಡಾಡಿ ನಾಯಿಗಳು ಉಪಟಳದಿಂದ ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿವೆ.       ಐಬಿ ರಸ್ತೆ, ಮಸೀದಿ ರಸ್ತೆಗಳಲ್ಲಿ ಮಾಂಸ ದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ ತ್ಯಾಜ್ಯ ಹಾಕುವುದರಿಂದ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.      …

Read More

ಹುಳಿಯಾರು:       ಪರಿಹಾರ ಮೊತ್ತ ಘೋಷಿಸದೆ ಸರ್ವೆಗೆ ಮುಂದಾಗಿರುವ ಕ್ರಮ ವಿರೋಧಿಸಿ ಹುಳಿಯಾರು ಹೋಬಳಿ ಹೊಯ್ಸಲಕಟ್ಟೆ ಹಾಗೂ ದಸೂಡಿ ಗ್ರಾಮ ಪಂಚಾಯ್ತಿಯ ರೈತರ ನಿಯೋಗ ಜಿಲ್ಲಾಧಿಕಾರಿಗಳನ್ನು ಸೋಮವಾರ ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಿತು.       ಚಿಕ್ಕನಾಯಕನಹಳ್ಳಿ ತಾಲೂಕಿನ ಮಾರ್ಗವಾಗಿ ಹಾಸನದಿಂದ ಚರ್ಲಪಲ್ಲಿಗೆ ಪೈಪ್ ಲೈನ್ ಮೂಲಕ ಅನಿಲ ಸಾಗಿಸುವ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಳ್ಳಲು ಸರ್ವೆ ಮಾಡುತ್ತಿದ್ದಾರೆ. ಆದರೆ ಸರ್ವೆವೆ ಮೊದಲೇ ಈ ಯೋಜನೆಗೆ ಆಕ್ಷೇಪಣೆ ಸಲ್ಲಿಸಿ ಬಂದಿದ್ದರೂ ಸಹ ನಮ್ಮ ಅರ್ಜಿ ಇತ್ಯಾರ್ಥ ಮಾಡದೆ ಸರ್ವೆಗೆ ಮುಂದಾಗಿದ್ದಾರೆ ಎಂದು ರೈತರು ಈ ಸಂದರ್ಭದಲ್ಲಿ ದೂರಿದ್ದಾರೆ.      ಗ್ಯಾಸ್ ಪೈಲ್‍ಲೈನ್ ಹೋಗುವ ಮಾರ್ಗದಲ್ಲಿ ಅತೀ ಸಣ್ಣ ರೈತರಿದ್ದು ಈ ಭೂಮಿಯನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಯೋಜನೆಗೆ ಭೂಸ್ವಾದೀನ ಮಾಡಿಕೊಂಡರೆ ಅನೇಕ ರೈತರ ಜೀವನ ನಿರ್ವಹಣೆ ಕಷ್ಟವಾಗುತ್ತದೆ. ಹಾಗಾಗಿ ನಮ್ಮ ಭಾಗ ಬಿಟ್ಟು ಬೇರೆಡೆ ಪೈಪ್‍ಲೈನ್ ಹಾದು ಹೋಗವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ…

Read More

ತುಮಕೂರು:      ಕೊರೊನಾ ಹಾಗೂ ಜಿಲ್ಲೆಯಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಆಗಸ್ಟ್ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ ಮಾದರಿಯಲ್ಲಿಯೇ ಸಾಮಾಜಿಕ ಅಂತರ ಹಾಗೂ ಕಡ್ಡಾಯ ಮಾಸ್ಕ್, ಜನಸಂದಣಿಯಿಲ್ಲದಂತೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.       ಕನ್ನಡ ರಾಜ್ಯೋತ್ಸವ ಸಮಾರಂಭವು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಿಂದ ತಾಯಿ ಭುವನೇಶ್ವರಿಯ ಮೆರವಣಿಗೆ ಆರಂಭವಾಗಿ ಜೂನಿಯರ್ ಕಾಲೇಜು ಮೈದಾನದವರೆಗೆ ನಡೆಯಲಿದೆ. ಇದರೊಂದಿಗೆ ಒಂದು ಕಲಾತಂಡ ಹಾಗೂ ಕೊರೋನಾ ಕುರಿತು ಅರಿವು ಮೂಡಿಸುವ ಒಂದು ಸ್ಥಬ್ಧಚಿತ್ರಕ್ಕೆ ಅವಕಾಶ ನೀಡಲಾಗುವುದು ಎಂದರು.…

Read More

ಶಿರಾ:     ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಏರ್ಪಟ್ಟಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದ ಕಾರ್ಯಕರ್ತರನ್ನ ಬಿಜೆಪಿ ತನ್ನೆಡೆ ಸೆಳೆಯಲು ರಣತಂತ್ರಗಳನ್ನು ರೂಪಿಸಿ ವಿವಿಧ ಆಮಿಷಗಳ ಮಹಾಪೂರವನ್ನೇ ಹರಿಸುತ್ತಿದೆ.      ಕಾಂಗ್ರೆಸ್ ಪಕ್ಷವೂ ಸಹ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತೀಯರನ್ನ ತನ್ನೆಡೆ ಸೆಳೆದುಕೊಳ್ಳುವಲ್ಲಿ ತಾನೂ ಸಹ ಕಡಿಮೆಯಿಲ್ಲ ಎಂಬುದನ್ನ ನಿರೂಪಿಸಲು ಹೊರಟಿದೆ. ಜ್ಯಾತ್ಯಾತೀಯ ಜನತಾ ದಳದಲ್ಲಿ ಸಮರ್ಥ ದಂಡನಾಯಕನ ಕೊರತೆ ಹೆಚ್ಚಾಗಿ ಕಂಡುಬರುತ್ತಿದ್ದು, ದಿವಂಗತ ಬಿ.ಸತ್ಯನಾರಾಯಣ್‍ರವರ ಪತ್ನಿ ಅಮ್ಮಜಮ್ಮ ಅಧಿಕೃತ ಅಭ್ಯರ್ಥಿಯೆಂದು ಘೋಷಣೆಯಾಗಿದ್ದು, ಕಣ್ಣೀರಿನ ರಾಜಕಾರಣದಲ್ಲಿ ಅನುಕಂಪದ ಅಲೆಯಲ್ಲಿ ತೇಲುವ ಕನಸು ಹೊತ್ತಿದೆ. ರಾಜ್ಯದ ಪ್ರಭಲ ನಾಯಕರ ಸಾಲಿನಲ್ಲಿ ನಿಲ್ಲುವ ಟಿ.ಬಿ.ಜಯಚಂದ್ರ 9 ಬಾರಿ ಸ್ಪರ್ಧಿಸಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿ ತಮ್ಮನ್ನು ತಾವು ಓರೆ ಹಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ರಾಜೇಶ್‍ಗೌಡರು ಮೂಲ ಬಿಜೆಪಿಗರಲ್ಲದಿದ್ದರೂ ಜಾತಿಯ…

Read More

ತುರುವೇಕೆರೆ:      ಆಸ್ತಿ ವಿಚಾರವಾಗಿ ಕಲಹ ನಡೆದು ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ಕೇಳಿ ಬಂದಿದೆ.       ತುರುವೇಕೆರೆ ತಾಲೂಕಿನ ಸೋಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುಮಾರ್ 17 ವರ್ಷದ ಯುವತಿ ದೇವಿಕ ಮೃತ ದುದೈವಿ ಎಂದು ತಿಳಿದುಬಂದಿದೆ.        ಅಜ್ಜಿ ತಾತನಿಗೆ ಸೇರಿದ ಜಮೀನು ಹಂಚಿಕೆಯ ಹಿನ್ನೆಲೆಯಲ್ಲಿ ಹತ್ಯೆಯಾದ ಯುವತಿ ಮತ್ತು ಅವರ ತಂದೆ ಮತ್ತು ದೊಡ್ಡಪ್ಪಂದಿರ ನಡುವೆ ಮಾತಿನ ವಿವಾದ ಏರ್ಪಾಟಾಗಿ ಮಾತು ಮಿತಿಮೀರಿ ಹಲ್ಲೆಯ ಹಂತ ತಲುಪಿದ್ದು, ಯುವತಿಯ ಮನೆಗೆ ನುಗ್ಗಿ ದೊಡ್ಡಪ್ಪಂದಿರಾದ ನಂಜೇಗೌಡ, ಪಂಚಾಕ್ಷರಯ್ಯ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಾದ ನಂತರ ದೇವಿಕ ತಾಯಿ ವಸಂತ ಮತ್ತು ತಂದೆ ದೇವಯ್ಯ ಹಲ್ಲೆಯ ಕುರಿತು ತುರುವೇಕೆರೆ ಪೊಲೀಸ್ ಠಾಣೆಗೆ ದೂರು ಕೊಡಲು ತೆರಳಿದ್ದು ಠಾಣೆಯಲ್ಲಿದ್ದ ಪೊಲೀಸರು ದೂರನ್ನು ಸ್ವೀಕಾರ ಮಾಡದೆ ಠಾಣೆಯಲ್ಲಿಯೇ ಬೆಳಗ್ಗೆಯಿಂದ ಸಂಜೆಯವರೆಗೂ ಕೂರಿಸಿಕೊಂಡಿದ್ದು, ಎಫ್‍ಐಆರ್ ಕೂಡ…

Read More

ಚಿಕ್ಕನಾಯಕನಹಳ್ಳಿ:       ಹೇಮಾವತಿ ನಾಲೆಯಿಂದ ತಾಲ್ಲೂಕಿನ 22 ಕೆರೆಗಳಿಗೆ ಕುಡಿಯುವ ನೀರಿಗಾಗಿ ನೀರುಣಿಸುವ ಯೋಜನೆಯ ಕಾಮಗಾರಿಯ ಒಂದು ಭಾಗ ಮುಗಿದಿದ್ದು ಪ್ರಾಯೋಗಿಕವಾಗಿ ನಾಲೆಯಲ್ಲಿ ನೀರು ಹರಿಸಲಾಗಿದೆ.       ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಸಾಸಲು ಕೆರೆಯವರೆಗೆ ಹೇಮಾವತಿ ನಾಲೆಯಿಂದ ನೀರು ಹರಿಸುವ ಕಾಮಗಾರಿ ಈಚೆಗೆ ಭರದಿಂದ ನಡೆಯುತ್ತಿತ್ತು. ಈ ಕಾಮಗಾರಿ ಕೆಲತಿಂಗಳಹಿಂದಯೇ ಮುಗಿಯಬೇಕಿತ್ತು ಆದರೆ ಭೂ ಸಂತ್ರಸ್ಥರ ಪರಿಹಾರ, ಗುತ್ತಿಗೆದಾರರ ಸಮಸ್ಯೆ, ಲಾಕ್‍ಡೌನ್ ಹಾಗೂ ಮಳೆಯಕಾರಣದಿಂದ ಕಾಮಗಾರಿ ವಿಳಂಬವಾಗಿತ್ತು. ಇದೆಲ್ಲದರ ತೊಡಕುಗಳನ್ನು ಶೀಘ್ರವಾಗಿ ನಿವಾರಿಸಿ ಕಾಮಗಾರಿ ಅತ್ಯಂತ ತ್ವರಿತಗತಿಯಲ್ಲಿ ನಡೆಸುವ ನಿಟ್ಟಿನಲ್ಲಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ತೋರಿದ ಆಸ್ಥೆಯಿಂದ ಒಂದುಭಾಗದ ಕಾಮಗಾರಿ ಪೂರ್ಣಗೊಂಡಿದ್ದು ಈಗ ಸಾಸಲುಕೆರೆವರೆಗಿನ ಕಾಮಗಾರಿಯನ್ನು ಮುಗಿಸಲಾಗಿದೆ. ಇಂದು ನಾಲೆಯಿಂದ ನೀರನ್ನು ಪ್ರಾಯೋಗಿಕವಾಗಿ ಹರಿಯಬಿಡಲಾಗಿದ್ದು ನಾಲೆಯಲ್ಲಿ ನೀರಿನ ಹರಿಯುವಿಕೆಯ ಸಮಯದಲ್ಲಿ ಆಗುವ ಮಣ್ಣುಕುಸಿತ ಮುಂತಾದ ತೊಡಕುಗಳನ್ನು ನಾಲಾ ಅಧಿಕಾರಿಗಳು ಗಮನಿಸಿ ನೀರು ಹರಿಯುವ ನಡುವೆಯೇ ಕುಸಿದ ಮಣ್ಣು ಕಲ್ಲುಗಳನ್ನು ಜೆಸಿಬಿ ಯಂತ್ರದ ಮೂಲಕ ತೆಗೆಯಲಾಗುತ್ತಿತ್ತು.    …

Read More

ಮಧುಗಿರಿ :         ಇಲ್ಲಿನ ಪುರಸಭೆಗೆ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಸರ್ಕಾರ ಆದೇಶ ಮಾಡಿರುವುದು, 22 ವರ್ಷಗಳ ನಂತರ ಅಧ್ಯಕ್ಷ ಸ್ಥಾನದ ಮೀಸಲಾತಿ ಪರಿಶಿಷ್ಟ ಪಂಗಡಕ್ಕೆ ಸಿಕ್ಕಿರುವುದರಿಂದ ಈ ಬಾರಿ ಆಯ್ಕೆಯಾಗಿರುವ ಪುರಸಭಾ ಸದಸ್ಯರ ಪೈಕಿ ಒಬ್ಬರೇ ಈ ಮೀಸಲಾತಿಯಿಂದ ಆಯ್ಕೆಯಾಗಿರುವುದು, ಪುರಸಭೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.        ಪುರಸಭೆಗೆ ವಾರ್ಡುವಾರು ಪದ್ಧತಿ ಜಾರಿಯಾದ ನಂತರ ಎರಡನೇ ಅವಧಿಯಲ್ಲಿ ಅಧ್ಯಕ್ಷ ಸ್ಥಾನ 1998 ರಿಂದ 2001ರವರೆವಿಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿ ಅಂಜಿನಪ್ಪ ಮತ್ತು ಇಂದಿರಮ್ಮ ಅಧ್ಯಕ್ಷರಾದರು. ತದನಂತರ 2020ರಲ್ಲಿ ಈ ಮೀಸಲಾತಿ ದೊರೆತಿದೆ.        ಮಧುಗಿರಿ ಪುರಸಭೆ ಸದಸ್ಯ ಸ್ಥಾನಕ್ಕೆ 2018 ರ ಆಗಸ್ಟ್ 30 ರಂದು ಚುನಾವಣೆ ನಡೆದು, ಸೆಪ್ಟೆಂಬರ್ 3 ರಂದು ಪ್ರಕಟವಾದ ಫಲಿತಾಂಶದಲ್ಲಿ ಕಾಂಗ್ರೆಸಿನಿಂದ ಹದಿಮೂರು, ಜೆಡಿಎಸ್ ನಿಂದ ಒಂಬತ್ತು ಹಾಗೂ ಒಬ್ಬರು ಪಕ್ಷೇತರರಾಗಿ ಆಯ್ಕೆಯಾಗಿದ್ದರು. ನಂತರ ಬದಲಾದ ರಾಜಕೀಯ ವಿದ್ಯಮಾನದಲ್ಲಿ ಜೆಡಿಎಸ್…

Read More

ತುಮಕೂರು:       ಶಿರಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಶುಕ್ರವಾರ ನಾಮಪತ್ರ ಸಲ್ಲಿಸಿದರು.      ಶಿರಾ ಚುನಾವಣಾಧಿಕಾರಿ ಡಾ.ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸುವ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್ ಹಾಜರಿದ್ದರು.      ಶಿರಾ ಗ್ರಾಮ ದೇವತೆ ದುರ್ಗಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ 12.1 ನಿಮಿಷಕ್ಕೆ ಚುನಾವಣಾಧಿಕಾರಿ ಕಚೇರಿ ಒಳಗೆ ತೆರಳುದ ಅವರು 12.27ಕ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು. ಈ ಅವಧಿ ಶುಭಗಳಿಗೆ ಎನ್ನುವ ಕಾರಣ ಜಯಚಂದ್ರ ನಾಮಪತ್ರ ಸಲ್ಲಿಸಿದರು.       ಕಳೆದ ವಿಧಾನಸಭೆ ಚುನಾವಣೆ ವೇಳೆ ಜಯಚಂದ್ರ, ಅವರು ಅಂದುಕೊಂಡಿದ್ದ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಆ ಸಮಯದಲ್ಲಿ ಮತ್ತೊಬ್ಬರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಈ ಕಾರಣದಿಂದ ಇಂದಿನ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.       ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,…

Read More