Author: News Desk Benkiyabale

ತುಮಕೂರು :      ಜಿಲ್ಲೆಯಲ್ಲಿ 222 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6662 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 57, ಪಾವಗಡ-27, ಕುಣಿಗಲ್-21, ಮಧುಗಿರಿ-20, ಕೊರಗಟಗೆರೆ-09, ತುರುವೇಕೆರೆ-16, ಶಿರಾ-09, ತಿಪಟೂರು-27, ಗುಬ್ಬಿ-13, ಚಿಕ್ಕನಾಯಕನಹಳ್ಳಿ-23 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 222 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.        ಜಿಲ್ಲಾಸ್ಪತ್ರೆಯಿಂದ 189 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 4707 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1778 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 171 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು :     ಜಿಲ್ಲೆಯಲ್ಲಿ 292 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6440 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 124, ಪಾವಗಡ-37, ಕುಣಿಗಲ್-07, ಮಧುಗಿರಿ-10, ಕೊರಗಟಗೆರೆ-07, ತುರುವೇಕೆರೆ-12, ಶಿರಾ-32, ತಿಪಟೂರು-33, ಗುಬ್ಬಿ-10, ಚಿಕ್ಕನಾಯಕನಹಳ್ಳಿ-10 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 292 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.        ಜಿಲ್ಲಾಸ್ಪತ್ರೆಯಿಂದ 140 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 4515 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1752 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 165 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು:       ನಗರದ ವಾರ್ಡ್ ನಂ 15 ರಲ್ಲಿ ನಡೆಯುತ್ತಿರುವ ಸ್ಮಾರ್ಟಸಿಟಿ ಕಾ ಸಮಗಾರಿಗಳನ್ನು ಮುಂದಿನ 15 ದಿನಗಳಲ್ಲಿ ಮುಗಿಸಿ, ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡುವಂತೆ ಸ್ಮಾರ್ಟ್‍ಸಿಟಿ ಅಧಿಕಾರಿಗಳಿಗೆ ಆಯುಕ್ತರಾದ ಶ್ರೀಮತಿ ರೇಣುಕ ಸೂಚಿಸಿದರು.        ಹದಿನೈದನೇ ವಾರ್ಡಿನ ಕಾರ್ಪೋರೇಟರ್ ಮತ್ತು ನಾಗರಿಕರ ದೂರಿನ ಹಿನ್ನೆಲೆಯಲ್ಲಿ ಇಂದು ವಾರ್ಡಿನ ಹಲವು ರಸ್ತೆಗಳನ್ನು ಪರಿವೀಕ್ಷಣೆ ನಡೆಸಿದ ಆಯುಕ್ತರು, ವಾರ್ಡಿನ ಸಿ ಎಸ್ ಐ ಲೇಔಟ್, ಎಸ್.ಎಸ್.ಪುರಂನ ಹಲವರು ರಸ್ತೆಗಳಲ್ಲಿ ಪೈಪ್‍ಲೈನ್ ಕಾಮಗಾರಿ,ಡಕ್ ನಿರ್ಮಾಣಕ್ಕೆ ಅಗೆದಿರುವ ಜಾಗವನ್ನು ಸರಿಯಾಗಿ ಮುಚ್ಚಿಲ್ಲ. ಇದರಿಂದ ಆಯಾಯ ಬಡಾವಣೆಯ ನಾಗರಿಕರು ಒಡಾಡಲು ತೊಂದರೆಯಾಗುತ್ತಿದೆ.ಈ ಬಗ್ಗೆ ಹಲವರು ಪೋನ್ ಮೂಲಕ ದೂರು ನೀಡಿದ್ದರು,ಅಲ್ಲದೆ ಎಸ್.ಎಸ್.ಪುರ ಮೊದಲನೇ ಕ್ರಾಸ್‍ನ ಬಾಲಾಜಿ ನರ್ಸೀಂಗ ಹೋಂ ಬಳಿ ಗುಂಡಿ ತೆಗೆದು ವಾರಗಳೇ ಕಳೆದಿದ್ದರೂ ಮುಚ್ಚಿಲ್ಲ. ಇದರಿಂದ ಆ ಭಾಗದಲ್ಲಿ ಅಂಬುಲೇನ್ಸ್‍ಗಳ ಓಡಾಟಕ್ಕೆ ತೊಂದರೆಯಾಗಿದೆ ಎಂದು ಖುದ್ದ ವೈದ್ಯರೇ ಆಯುಕ್ತರಲ್ಲಿ ದೂರಿದರು.        ಸಾರ್ವಜನಿಕರ ಮನವಿಯನ್ನು ಆಲಿಸಿದ…

Read More

ಮಧುಗಿರಿ:       ಮಧುಗಿರಿ ಪಟ್ಟಣದ ಲಿಂಗೇನ ಹಳ್ಳಿಯಲ್ಲಿ ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಪೆಟ್ಟಿಗೆ ಅಂಗಡಿಯನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಉಪವಿಭಾಗಾಧಿಕಾರಿ ಡಾ.ಕೆ.ನಂದಿನಿದೇವಿ ಅವರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಪುರಸಭೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಪೆಟ್ಟಿಗೆ ಅಂಗಡಿಯನ್ನು ತೆರವುಗೊಳಿಸಲು ಮುಂದಾದಾಗ, ಪೆಟ್ಟಿಗೆ ಅಂಗಡಿ ಮಾಲೀಕರು ಹಾಗೂ ನಿವಾಸಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಮಧುಗಿರಿ ಪೆÇಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.       ಸಾರ್ವಜನಿಕ ರಸ್ತೆಯಲ್ಲಿ ಹಲವಾರು ತಿಂಗಳಿನಿಂದ ಪೆಟ್ಟಿಗೆ ಅಂಗಡಿ ಹಾಗೂ ರಸ್ತೆಯನ್ನು ಒತ್ತವರಿ ಮಾಡಿಕೊಂಡಿದ್ದರಿಂದ ವೃದ್ಧರು, ಮಹಿಳೆಯರು ಮತ್ತು ಮಕ್ಕಳಿಗೆ ಓಡಾಡಲು ದಾರಿ ಇಲ್ಲದೇ ತುಂಬಾ ತೊಂದರೆ ಅನುಭವಿಸುತ್ತಿದ್ದರು. ಒತ್ತುವರಿ ಜಾಗವವನ್ನು ತೆರವುಗೊಳಿಸಲೇಬೇಕೆಂದು ನಿವಾಸಿಗಳು ಪಟ್ಟು ಹಿಡಿದು ಪ್ರತಿಭಟನೆಗೆ ಮುಂದಾದರು. ಪುರಸಭೆ ಮುಖ್ಯಾಧಿಕಾರಿ ಅಮರನಾರಾಯಣ ಪೆಟ್ಟಿಗೆ ಅಂಗಡಿಯ ಮಾಲೀಕನಿಗೆ ಖಡಕ್ ಎಚ್ಚರಿಕೆ ನೀಡಿ ಒತ್ತುವರಿ ರಸ್ತೆಯನ್ನು ತೆರವುಗೊಳಿಸುವಂತೆ ಸೂಚಿಸಿದಾಗ, ಅಂಗಡಿ ಮಾಲೀಕ ಪೆಟ್ಟಿಗೆ ಅಂಗಡಿಯನ್ನು ಬೇರೆಡೆಗೆ ಸ್ಥಾಳಾಂತರಿಸಿದರು. ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳ…

Read More

ಚಿಕ್ಕನಾಯಕನಹಳ್ಳಿ:       ದೊಡ್ಡವರ ಬಾಯಿಯ ಮಾತು, ಹುಚ್ಚನ ಕೈನಲ್ಲಿರುವ ಕಲ್ಲು ಯಾರಿಗೆ ಬೇಕಾದರು ಬೀಸಬಹುದು ಎಂಬಂತಾಗಿದೆ ಇಂದು ಸಚಿವ ಜೆ.ಸಿ.ಮಾಧುಸ್ವಾಮಿಯವರ ಹೇಳಿಕೆ ಎಂದು ತಿಮ್ಲಾಪುರ-ಲಕ್ಷ್ಮಗೊಂಡನಹಳ್ಳಿ ಗ್ರಾಮದ ರೈತ ಗಂಗಾಧರಯ್ಯ ನುಡಿದರು.       ತಾಲೂಕಿನ ಕುಡಿಯುವ ನೀರಿನ ಹೇಮಾವತಿ ಯೋಜನೆ ಕಾಮಗಾರಿಗೆ ಸ್ವಾಧೀನ ಪಡಿಸಿಕೊಂಡಿರುವ ಜಮೀನಿನ ಪರಿಹಾರ ಕೊಡುವಂತೆ ಒತ್ತಾಯಿಸಿ ಹೇಮಾವತಿ ನಾಲೆಯ ಹತ್ತಿರ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡುತ್ತಿದ್ದರು.       ಈ ಬಗ್ಗೆ ಸಚಿವರನ್ನು ಕೇಳಲು ಸಂತ್ರಸ್ತ ರೈತರು ಅವರ ಮನೆಗೆ ಹೋದಾಗ ಬಾಯಿಗೆ ಬಂದಂತೆ ಬೈದು ಅಂದು ನೀವು ಎರಡು ಸಾವಿರ ರೂಪಾಯಿಗಳಿಗೆ ಹೇಸಿಗೆ ತಿಂದಿದ್ದೀರಿ, ಇಂದು ಅದರ ಪರಿಣಾಮವನ್ನು ಅನುಭವಿಸಿ. ಎಂದು ಹೀನಾಯವಾಗಿ ರೈತರನ್ನು ನಿಂದಿಸಿ ಮನೆಯಿಂದ ಹೊರಗೆ ಅಟ್ಟಿದರು ಎಂದು ಸುಮಾರು 40 ವರ್ಷಗಳಿಂದ ಜೆ.ಸಿ.ಮಾಧುಸ್ವಾಮಿಯವರ ಕಟ್ಟಾ ಬೆಂಬಲಿಗರಾಗಿದ್ದ ಗಂಗಾಧರಯ್ಯ ತಮ್ಮ ಆಕ್ರೋಶವನ್ನು ಹೊರಹಾಕಿದರು.       2011 ರಲ್ಲಿ ಆರಂಭವಾದ ಹೇಮಾವತಿ ಕಾಮಗಾರಿಗೆ, ಮೊದಲು ಬಿಟ್ಟುಕೊಟ್ಟದ್ದೆ ನಮ್ಮ…

Read More

ತುಮಕೂರು:      ಕೊರೊನ ಲಾಕ್‍ಡೌನ್ ಮತ್ತು ಸ್ಮಾರ್ಟ್‍ಸಿಟಿ ಕಾಮಗಾರಿಯಿಂದಾಗಿ ಖಾಸಗಿ ಬಸ್ ನಿಲ್ದಾಣದಲ್ಲಿ ಕಳೆದ ಐದಾರು ತಿಂಗಳಿಂದ ಯಾವುದೇ ವ್ಯಾಪಾರ ವಹಿವಾಟು ನಡೆಯದೇ ಇರುವುದರಿಂದ ಮಾರ್ಚ್ ನಿಂದ ಆಗಸ್ಟ್ ತಿಂಗಳವರೆಗೆ ವಾಣಿಜ್ಯ ಮಳಿಗೆಗಳ ಬಾಡಿಗೆ ಮನ್ನಾ ಮಾಡುವಂತೆ ವ್ಯಾಪಾರಿಗಳು ಮನವಿ ಮಾಡಿದ್ದಾರೆ.       ಹರಾಜಿನ ಮೂಲಕ ಮಳಿಗೆಗಳನ್ನು ಬಾಡಿಗೆ ಪಡೆದ ಕೆಲವೇ ದಿನಗಳಲ್ಲಿ ಕೊರೊನ ಸೋಂಕು ವ್ಯಾಪಿಸಿ ಲಾಕ್‍ಡೌನ್ ಹೇರಲಾಯಿತು. ಜೊತೆಗೆ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಶೋಕ ರಸ್ತೆ ಮತ್ತು ಖಾಸಗಿ ಬಸ್ ನಿಲ್ದಾಣ ಕಾಮಗಾರಿ ನಡೆಯುತ್ತಿದೆ.       ಹೀಗಾಗಿ ಖಾಸಗಿ ಬಸ್‍ಗಳ ಓಡಾಟವೂ ಇಲ್ಲವಾಗಿ ವ್ಯಾಪಾರ ಸಂಪೂರ್ಣ ಸ್ಥಗಿತಗೊಂಡಿತು. ಖಾಸಗಿ ಬಸ್ ನಿಲ್ದಾಣದಲ್ಲಿ ಇರುವ ಮಳಿಗೆಗಳಿಗೆ 10 ರಿಂದ 50 ಸಾವಿರ ರೂಪಾಯಿ ಬಾಡಿಗೆ ನಿಗದಿಪಡಿಸಿದೆ. ಬಾಡಿಗೆ ಪಡೆದ ಆರಂಭದಿಂದಲೇ ಸಂಕಷ್ಟಕ್ಕೆ ಸಿಲುಕಿದ್ದರಿಂದ ವ್ಯಾಪಾರವನ್ನೇ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಆರು ತಿಂಗಳ ಬಾಡಿಗೆ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.       ಲಾಕ್‍ಡೌನ್‍ಗೂ…

Read More

ಮಧುಗಿರಿ:      “ಉಬ್ಬೆ ಮಳೆ ಬಂದರೆ ಉಬ್ಬಿಬ್ಬಿ ಕೊಂಡು ಬರುತ್ತದೆ’ ಎಂಬುದಕ್ಕೆ ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯ ಸಾಕ್ಷಿಯಾಗಿದೆ.      ಸೋಮವಾರ ರಾತ್ರಿ ಹತ್ತರಿಂದ ಪ್ರಾರಂಭವಾದ ಮಳೆ ಬೆಳಗಿನ ಜಾವದವರೆಗೂ ನಿಂತು ನಿಂತು ಬಂದ ಮಳೆಯಿಂದ ಹಲವು ಹಳ್ಳಗಳು ಮೈದುಂಬಿ ಹರಿದಿದೆ.       ತಾಲ್ಲೂಕಿನ ಗಡಿಭಾಗದಲ್ಲಿರುವ ಮಿಡಿಗೇಶಿ ಹೋಬಳಿಯ ರೆಡ್ಡಿಹಳ್ಳಿ ಕೆರೆ ಹಳ್ಳ ಮೈದುಂಬಿ ಹರಿದಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ ಪ್ರವಾಹದ ಭೀತಿಯಂತೆ ಇಲ್ಲಿ ಅನುಭವ ಉಂಟಾಗಿದೆ. ಹಳ್ಳದ ನೀರು ಹೊಲ ಗದ್ದೆಗಳಿಗೆ ಹರಿದು ಬೆಳೆ ನಷ್ಟವಾಗಿದೆ, ರೆಡ್ಡಿಹಳ್ಳಿ ಕೆರೆಗೆ ಒಂದೇ ರಾತ್ರಿಯ ಮಳೆಯಿಂದಾಗಿ ಶೇ ಎಪ್ಪತ್ತರಷ್ಟು ಭಾಗ ಕೆರೆಗೆ ನೀರು ಹರಿದು ಬಂದಿದೆ. ವಾರ್ಷಿಕ ಬೆಳೆಗಳಿಗೆ ನಷ್ಟವಾಗಿದ್ದು ,ಹತ್ತಿ ಬೆಳೆಗೆ ತೊಂದರೆಯಾಗಿದೆ, ಶೇಂಗಾ ಬೆಳೆ ಒಣಗುವ ಸ್ಥಿತಿ ತಲುಪುತ್ತಿದ್ದರೂ ಅತಿವೃಷ್ಟಿಯ ರೀತಿಯಲ್ಲಿ ಬಿದ್ದ ಮಳೆಯಿಂದಾಗಿ ರೈತರು ಚಿಂತಕ್ರಾಂತರಾಗಿದ್ದಾರೆ.       ಹನುಮಂತಪುರ ಕೆರೆ ಹಳ್ಳ, ನೇರಳೆಕೆರೆ, ಹೊಸಕೆರೆ ಕೆರೆಗಳ ಹಳ್ಳಗಳು ಹರಿದಿವೆ…

Read More

ತುಮಕೂರು :       ಜಿಲ್ಲೆಯಲ್ಲಿ 192 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 95, ಪಾವಗಡ-22, ಕುಣಿಗಲ್-11, ಮಧುಗಿರಿ-10, ಕೊರಗಟಗೆರೆ-07, ತುರುವೇಕೆರೆ-09, ಶಿರಾ-10, ತಿಪಟೂರು-13, ಗುಬ್ಬಿ-07, ಚಿಕ್ಕನಾಯಕನಹಳ್ಳಿ-08 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 192 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

Read More

ತುಮಕೂರು:       ಕನ್ನಡ ಚಿತ್ರರಂಗದಲ್ಲಿ ಡ್ರಗ್ ದಂಧೆ ನಡೆಯುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ. ಅಂತೆ ಕಂತೆಗಳ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ನಟ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ.       ನಾನು ಕಳೆದ 24 ವರ್ಷದಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. ಆದರೆ ಚಿತ್ರರಂಗದಲ್ಲಿ ರೈಸ್, ದಾಲ್ ಕೇಳಿದ್ದೇನೆ. ಆದರೆ ಡ್ರಗ್ ಮಾಫಿಯಾ ಕೇಳೇ ಇಲ್ಲ ಎಂದರು.       ನಗರದ ಸಿದ್ದಗಂಗಾ ಮಠಕ್ಕೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಭೇಟಿ ನೀಡಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಚಿತ್ರರಂಗದಲ್ಲಿ ಡ್ರಗ್ ಮಾಫಿಯಾ ನಡೆಯುತ್ತಿದೆ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಚಿತ್ರರಂಗವನ್ನು ಎಲ್ಲ ಹಿರಿಯ ಕಲಾವಿದರು ಸೇರಿ ಕಟ್ಟಿದ್ದಾರೆ. ಚಿಕ್ಕ ವಿಚಾರಕ್ಕೆ ಇಡೀ ಚಿತ್ರರಂಗಕ್ಕೆ ಕಳಂಕ ತರುವುದು ಸರಿಯಲ್ಲ ಎಂದರು.       ಒಂದೇ ಒಂದು ವಿಚಾರವನ್ನು ಎಳೆದು ತಂದು ಚಿತ್ರರಂಗದ ದೂಷಣೆ ಮಾಡುವುದು ಬೇಡ…

Read More

ನವದೆಹಲಿ :         ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಯವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.        ನಿನ್ನೆ ರಾತ್ರಿಯಿಂದಲೇ ಅವರ ಆರೋಗ್ಯ ಹದಗೆಟ್ಟಿತ್ತು. ಶ್ವಾಸಕೋಶದ ಸೋಂಕು ಉಲ್ಬಣಗೊಂಡು ಸೆಪ್ಟಿಕ್​ ಆಗಿತ್ತು ಎಂದು ಇಂದು ಬೆಳಗ್ಗೆಯಷ್ಟೇ ಆರ್ಮಿ ಆಸ್ಪತ್ರೆ ಮಾಹಿತಿ ನೀಡಿತ್ತು       ಮುಖರ್ಜಿ ಅವರು ನಿಧನರಾದ ಸಂಗತಿಯನ್ನು ಸ್ವತಃ ಅವರ ಪುತ್ರ ಅಭಿಜಿತ್‌ ಮುಖರ್ಜಿ ಅವರು ಸೋಮವಾರ ಟ್ವೀಟ್‌ ಮಾಡಿ ತಿಳಿಸಿದ್ದಾರೆ.      ಮಿದುಳಿನಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ಹೊರತೆಗೆಯುವ ಸಲುವಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಲೆಂದು ಆಗಸ್ಟ್‌ 10ರಂದು ಪ್ರಣವ್‌ ಮುಖರ್ಜಿ ಅವರು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಕೋವಿಡ್‌ ಇರುವುದು ಖಚಿತವಾಗಿತ್ತು. ಶಸ್ತ್ರಚಿಕಿತ್ಸೆ ನಂತರ ಕೋಮಾಕ್ಕೆ ಜಾರಿದ್ದ ಪ್ರಣವ್‌ ಮುಖರ್ಜಿ ಅವರ ಶ್ವಾಸಕೋಶಕ್ಕೆ ಸೋಂಕು ತಗುಲಿ ಪರಿಸ್ಥಿತಿ ವಿಷಮವಾಗಿತ್ತು. ಇಂದೂ ಕೂಡ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದ ಆಸ್ಪತ್ರೆ, ಪ್ರಣವ್‌ ಮುಖರ್ಜಿ ಅವರು ದೀರ್ಘ ಕೋಮಾ ಸ್ಥಿತಿಯಲ್ಲಿರುವುದಾಗಿ ಹೇಳಿತ್ತು.…

Read More