Author: News Desk Benkiyabale

ಗುಬ್ಬಿ :       ಕಳೆದ ಐದು ವರ್ಷದಿಂದ ಕಸ ವಿಲೇವಾರಿ ಘಟಕದಿಂದ ತೀವ್ರ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯಿತಿ ಯಾವುದೇ ಪರಿಹಾರ ಕಂಡುಕೊಳ್ಳದೇ ಮಾರುತಿನಗರ ಬಡಾವಣೆಯ ನಿವಾಸಿಗಳಿಗೆ ಅನಾರೋಗ್ಯಕ್ಕೆ ತುತ್ತು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ ಗ್ರಾಮಸ್ಥರು ಘಟಕದಲ್ಲಿ ಕೆಲಸ ಮಾಡಲು ಬಂದ ಜೆಸಿಬಿ ಯಂತ್ರವನ್ನು ತಡೆದು ಅಧಿಕಾರಿಗಳನ್ನು ಘೇರಾವ್ ಮಾಡಿ ಪ್ರತಿಭಟಿಸಿದ ಘಟನೆ ನಡೆಯಿತು.       ಕಳೆದ 10 ವರ್ಷದ ಹಿಂದೆ ಕಸ ವಿಲೇವಾರಿ ಘಟಕವನ್ನು ಪಟ್ಟಣದ ಹೊರವಲಯದ ಮಾರುತಿನಗರ ಬಡಾವಣೆ ಸಮೀಪ ನಿರ್ಮಾಣ ಮಾಡಿದ ಪಟ್ಟಣ ಪಂಚಾಯಿತಿ ಕಸವನ್ನು ಈ ಸ್ಥಳದ 4 ಎಕರೆ ಪ್ರದೇಶದಲ್ಲೇ ಶೇಖರಿಸಲಾಯಿತು. ಈ ಕಸವನ್ನು ಯಾವುದೇ ರೀತಿ ಪರಿಷ್ಕರಿಸದೇ ಒಣ ಮತ್ತು ಹಸಿ ಕಸವನ್ನು ವಿಂಗಡಿಸದೇ ಎಲ್ಲಂದರಲ್ಲಿ ಕಸವನ್ನು ಬಿಸಾಡಲಾಗಿದೆ. ಈ ಜತೆಗೆ ಸತ್ತ ಜಾನುವಾರುಗಳ ಕಳೇಬರ, ಕೋಳಿ ತ್ಯಾಜ್ಯವನ್ನು ಸಹ ಇಲ್ಲಿ ಎಸೆಯಲಾಗಿದೆ. ತ್ಯಾಜ್ಯ ತಿನ್ನಲು ಬರುವ ನಾಯಿಗಳ ಹಿಂಡು…

Read More

ತುಮಕೂರು :        ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರು ಹಾಗೂ ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರು ಜಿಲ್ಲೆಯ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕಿನ ವಿವಿಧ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.       ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೋನಿ, ಮಧುಗಿರಿ ತಾಲೂಕಿನ ಕೆರೆಗಳ ಪಾಳ್ಯ ಹಾಗೂ ಪಾವಗಡ ತಾಲ್ಲೂಕಿನ ರಾಜವಂತಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸಿದರು.       ಕೊರಟಗೆರೆ ತಾಲೂಕಿನ ಮತಗಟ್ಟೆ ಸಂಖ್ಯೆ 199ರ ಮನೆಯೊಂದಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬವೊಂದು ಹಳೆಯ ಹಾಗೂ ಹೊಸ ಎಪಿಕ್ ಕಾರ್ಡುಗಳನ್ನು ಹೊಂದಿರುವುದು ವೀಕ್ಷಕರ ಗಮನಕ್ಕೆ ಬಂದಾಗ ಮತದಾರರು ಎರಡೆರಡು ಕಾರ್ಡು ಹೊಂದದೆ ವ್ಯಾಲಿಡ್ (ಮಾನ್ಯ) ಇರುವ ಎಪಿಕ್ ಕಾರ್ಡನ್ನೇ ಹೊಂದಿರಬೇಕು. ಅಧಿಕಾರಿಗಳು ಎಲ್ಲ ಮತದಾರರು ವ್ಯಾಲಿಡ್…

Read More

ತುಮಕೂರು :       ತಾಲೂಕಿನ ಇತಿಹಾಸ ಪ್ರಸಿದ್ದ ಗೂಳೂರು ಮಹಾಗಣಪತಿ ದೇವಾಲಯಲ್ಲಿ ಮಹಾಗಣಪತಿ ಸ್ಥಿರಬಿಂಬ ಪ್ರತಿಷ್ಠಾಪನೆÀ ಮತ್ತು ಕಳಸ ಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.       ಶಿಲಾಗ್ರಹದ ಪ್ರರಿಷ್ಠಾಪನೆಯು ಜ.26 ರ ಭಾನುವಾರ ಮತ್ತು 27 ರ ಸೋಮವಾರ ಗ್ರಾಮದ ಹದಿನೆಂಟು ಕೋಮಿನ ಜನಾಂಗದವರು ಸೇರಿದಂತೆ ವಿವಿಧ ಗಣ್ಯವೆಕ್ತಿಗಳು ಹಾಗೂ ಪೂಜ್ಯ ಸ್ವಾಮೀಜಿಗಳ ಸಮ್ಮುಖದಲ್ಲಿ ನೆರವೇರಲಿದೆ 26 ರ ಭಾನುವಾರ ಸಂಜೆ 4.25 ಕ್ಕೆ ದೀಪಾರಾಧನೆ ವಾಸ್ತುಹೋಮ ಸೇರಿದಂತೆ ವಿವಿಧ ವಿಧಿವಿಧಾನಗಳು ನಡೆದು 6.30 ಕ್ಕೆ ನೂತನ ಬಿಂಬಕ್ಕೆ ಜಲಾಧಿವಾಸ ಮತ್ತು ಕ್ಷೀರಾಧಿವಾಸ ಮಹಾಮಂಗಳಾರತಿ ನಡೆಯಲಿದೆ.       27 ರ ಸೋಮವಾರ ಬೆಳಿಗ್ಗೆ 5.30ಕ್ಕೆ ಗೋಪುರ ಕಳಶ ಸ್ಥಾಪನೆ ಮತ್ತು 8 ಗಂಟೆಗೆ ನವಗ್ರಹ ಹೋಮ, ಪ್ರತಿಷ್ಠಾಂಗ ಹೋಮಾ, 12 ಗಂಟೆಗೆ ಕುಂಭಾಭಿಷೇಕ ನಡೆಯಯಲ್ಲಿದ್ದು ನಂತರ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ.       ವಿಶೇಷ ಆಹ್ವಾನಿತರು ಸ್ಥಿರಬಿಂಬ ಪ್ರತಿಷ್ಠಾಪನೆÀ ಮತ್ತು ಕಳಸ…

Read More

ತುಮಕೂರು :       ತ್ರಿವಿಧ ದಾಸೋಹ ಮೂರ್ತಿ, ನಡೆದಾಡುವ ದೇವರು ಸಿದ್ದಗಂಗಾ ಮಠಾಧ್ಯಕ್ಷರಾಗಿದ್ದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಕುಳಿತಿರುವ ಭಂಗಿಯ ಸುಮಾರು 3 ಅಡಿ ಎತ್ತರದ ಬೆಳ್ಳಿ ಮೂರ್ತಿಯನ್ನು ಅವರ ಗದ್ದುಗೆ ಮೇಲೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮುಂಜಾನೆ ಪ್ರತಿಷ್ಠಾಪಿಸಲಾಯಿತು.        ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಸೇರಿದಂತೆ ಹಲವು ಮಠಾದೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶ್ರೀಗಳು ಐಕ್ಯರಾಗಿರುವ ಶಿವಯೋಗಿ ಮಂದಿರದಲ್ಲಿರುವ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು.        ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಹಾಕಿದ ಬಳಿಕ ನೇರವಾಗಿ ಗದ್ದುಗೆಯ ಪೀಠದ ಮೇಲೆ ಬೆಳ್ಳಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಇಂದು ಮುಂಜಾನೆ ಶಿವಪೂಜೆ ಬಳಿಕ ಗದ್ದುಗೆಗೆ ರುದ್ರಾಭಿಷೇಕ, ಅಷ್ಟೋತ್ತರ ಪೂಜೆ ಸೇರಿದಂತೆ…

Read More

ಚಿಕ್ಕನಾಯಕನಹಳ್ಳಿ :       ಆರೋಗ್ಯ ಇಲಾಖೆ ಹಾಗೂ ರೋಟರಿ ಸಹಯೋಗದಲ್ಲಿ ನಡೆದ ಪೊಲಿಯೋಲಸಿಕೆ ಕಾರ್ಯಕ್ರಮವನ್ನು ಸಚಿವ ಜೆ.ಸಿ. ಮಾಧುಸ್ವಾಮಿ ಮಗುವಿಗೆ ಪೋಲಿಯೋಹನಿ ಹಾಕುವ ಮೂಲಕ ಚಾಲನೆ ನೀಡಿದರು.       ಪಟ್ಟಣದ ಖಾಸಗಿ ಬಸ್‍ನಿಲ್ದಾಣದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಮಗುವಿಗೆ ಲಸಿಕೆ ಹಾಕುವ ಮೂಲಕ ತಾಲ್ಲೂಕಿನಾದ್ಯಂತ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಹಾಗೂ ರೋಟರಿ ಸಂಸ್ಥೆಯ ಪದಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.       ಸಮಯ ಪರಿಪಾಲಿಸದ ಆರೋಗ್ಯ ಸಿಬ್ಬಂದಿಯ ಮೇಲೆ ಹರಿಹಾಯ್ದ ಸಚಿವರು: ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡುವುದಕ್ಕಾಗಿ ಬೆಳಿಗ್ಗೆ 7-30ಕ್ಕೆ ಸಮಯ ನಿಗಧಿಪಡಿಸಿದಂತೆ ಸರಿಯಾಗಿ ಪಟ್ಟಣದ ಖಾಸಗಿಬಸ್ ನಿಲ್ದಾಣಕ್ಕೆ ಆಗಮಿಸಿದ ಸಚಿವರಿಗೆ ಖಾಲಿ ಖುರ್ಚಿ ಹಾಗೂ ಬಯಲು ಶಾಮಿಯಾನದ ಸ್ವಾಗತ ಸಿಕ್ಕಿತು.       ಒಂದಿಬ್ಬರು ಆರೋಗ್ಯ ಸಿಬ್ಬಂದಿ ಖಾಲಿಕೈಯಲ್ಲಿದ್ದರೆ, ಉಳಿದಂತೆ ಸಹಭಾಗಿತ್ವದ ರೋಟರಿ ಸಂಸ್ಥೆಯ ಸದಸ್ಯರು ಹಾಗೂ ಪುರಸಭೆಯ ಕೆಲವು…

Read More

ತುರುವೇಕೆರೆ :         ತಾಲ್ಲೂಕಿನ ಜನತೆಗೆ ಸಿಹಿ ಸುದ್ಧಿಯೊಂದನ್ನು ನೀಡುತ್ತಿದ್ದು, ಗ್ರಾಮೀಣ ಪ್ರತಿಭೆಗಳನ್ನು ಅನಾವರಣಗೊಳಿಸಲು ಅಪ್ಪಟ ಹಳ್ಳಿ ಸೊಗಡಿನ “ಸುಗ್ಗಿ ಸಂಭ್ರಮ” ಎಂಬ ಕಾರ್ಯಕ್ರಮವನ್ನು ಬೆಂಕಿಯ ಬಲೆ ದಿನಪತ್ರಿಕೆ , ಬಿಬಿನ್ಯೂಸ್24*7, ಸಂಗಮ ಸಾಂಸ್ಕøತಿಕ ಟ್ರಸ್ಟ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದೆ.       ಕಾರ್ಯಕ್ರಮವು ಶನಿವಾರ ಸಂಜೆ 5 ಗಂಟೆಗೆ ತುರುವೇಕೆರೆಯ ಸರ್ಕಾರಿ ಮಾ.ಹಿ.ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ನಡೆಯಲಿದೆ. ಇನ್ನು ಕಾರ್ಯಕ್ರಮಕ್ಕೆ ಚಿತ್ರ ನಟಿಯರಾದ ರೇಷ್ಮಾ ಕಾಂಚನ, ಐಶ್ವರ್ಯ ರಾಮ್ ಭಾಗಿಯಾಗಲಿದ್ದಾರೆ.       ಇನ್ನು ಕಾರ್ಯಕ್ರಮದಲ್ಲಿ ಭರತನಾಟ್ಯ, ಮಕ್ಕಳ ಫ್ಯಾಷನ್ ಷೋ, ಫ್ಯಾಷನ್ ಷೋ, ಸಿಂಗಿಂಗ್ ಷೋ, ರಂಗೋಲಿ ಸ್ಪರ್ಧೆ, ಭಾವಗೀತೆ ಸ್ಪರ್ಧೆ ಏರ್ಪಡಿಸಿದ್ದು, ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ.

Read More

ತುಮಕೂರು :       ಜಿಲ್ಲಾದ್ಯಂತ ಶಾಲಾ-ಕಾಲೇಜುಗಳ ವ್ಯಾಪ್ತಿಯ 100 ಮೀಟರ್ ಆವರಣದೊಳಗಿರುವ ತಂಬಾಕು ಅಂಗಡಿಗಳನ್ನು ಮುಚ್ಚಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಆಸ್ಪತ್ರೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿರುವ ತಂಬಾಕು ಅಂಗಡಿಗಳನ್ನು ತೆರವುಗೊಳಿಸುವಂತೆ ಹಾಗೂ ಸರ್ಕಾರದ ಅನುಮತಿ ಪಡೆಯದ ಅಂಗಡಿಗಳ ಮಾಲೀಕರ ಮೇಲೆ ಪ್ರಕರಣ ದಾಖಲಿಸುವಂತೆ ಅವರು ಸೂಚಿಸಿದರು.       ಸ್ಮಾರ್ಟ್‍ಸಿಟಿ ವತಿಯಿಂದ ಅಳವಡಿಸಲಾಗಿರುವ ಎಲ್.ಇ.ಡಿ ಬೋರ್ಡ್‍ಗಳಲ್ಲಿ ತಂಬಾಕು ದುಷ್ಪರಿಣಾಮದ ಬಗ್ಗೆ ಜಾಹೀರಾತು ನೀಡಬೇಕು ಅಲ್ಲದೇ ಪಾಲಿಕೆ ವತಿಯಿಂದ ವ್ಯಾಪಾರಕ್ಕೆಂದು ನೀಡಲಾಗುವ ಪರವಾನಗಿಯಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧಿತ ಫಲಕಗಳನ್ನು ಹಾಕಬೇಕು.       ರಾಜ್ಯದಲ್ಲಿಯೇ ತಂಬಾಕು ನಿಯಂತ್ರಣ ಕಾರ್ಯಾಚರಣೆಯಲ್ಲಿ ತುಮಕೂರು ಜಿಲ್ಲೆ 2ನೇ ಸ್ಥಾನದಲ್ಲಿದೆ. ಈಗಾಗಲೇ ತುಮಕೂರನ್ನು ತಂಬಾಕು ನಿಯಂತ್ರಣ ತಾಲೂಕೆಂದು ಘೋಷಣೆ ಮಾಡಿದ್ದು, 2ನೇ ಬಾರಿಗೆ ತಿಪಟೂರು…

Read More

ಗುಬ್ಬಿ :       ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಯರೇಕಾವಲ್‍ನಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಬಗ್ಗೆ ಪ್ರಗತಿಯಲ್ಲಿ ಸುದ್ದಿ ಪ್ರಕಟವಾಗಿದ್ದಕ್ಕೆ ಎಚ್ಚೆತ್ತುಕೊಂಡ ಅರಣ್ಯಧಿಕಾರಿಗಳು ಕೊನೆಗೂ ಯರೇಕಾವಲ್ ಅರಣ್ಯಪ್ರದೇಶದಲ್ಲಿ ಚಿರತೆ ಹಿಡಿಯಲು ಬೋನು ಇಟ್ಟಿದ್ದಾರೆ.       ರೈತರು ಇಟ್ಟ ಬೆಳೆಗಳ ನಾಶದ ಜತೆಗೆ, ಕಾಡುಹಂದಿಗಳ ಕಾಟ ಹೆಚ್ಚಾಗಿದೆ. ಇದಕ್ಕೂ ಕೂಡ ಸುರಕ್ಷಿತ ಕ್ರಮವಹಿಸಿ ರೈತರ ಬೆಳೆಗಳನ್ನು ನಷ್ಟವಾಗದಂತೆ ಕಾಪಾಡಬೇಕು. ತಾಲ್ಲೂಕು ಅರಣ್ಯಧಿಕಾರಿಗಳು ಬೋನು ಇಟ್ಟು ಕಾಯುತ್ತಿದ್ದಾರೆ. ಆದರೆ ಚಿರತೆ ಖಚಿತವಾಗಿ ಎಲ್ಲಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಹೆಜ್ಜೆ ಗುರುತಿನ ಆಧಾರದ ಮೇಲೆ ಬೋನು ಇಡಲಾಗಿದೆ. ಆದರೆ ಚಿರತೆ ಎಲ್ಲಿದೆ? ಯಾವಾಗ ಬೀಳುತ್ತದೆ ಎಂದು ಕಾದು ನೋಡಬೇಕಾಗಿದೆ. ಜತೆಗೆ ಅಕ್ಕಪಕ್ಕದ ರೈತರು ಆತಂಕಕ್ಕೆ ಈಡಾಗಿದ್ದು, ಹಗಲು ಹೊತ್ತು ದನಕರುಗಳು, ಕುರಿ, ಮೇಕೆಗಳನ್ನು ಅರಣ್ಯಪ್ರದೇಶದ ಕಡೆಗೆ ಹೊಡೆದುಕೊಂಡು ಹೋಗಲು ಹಿಂದು ಮುಂದು ನೋಡುತ್ತಿದ್ದು, ಈ ಭಾಗದ ಗ್ರಾಮಸ್ಥರು ಭಯ ಪಡುತ್ತಿದ್ದಾರೆ.       ಇತ್ತೀಚಿಗೆ ಗುಬ್ಬಿ ತಾಲ್ಲೂಕಿನಲ್ಲಿ ಚಿರತೆ ಹಾವಳಿ…

Read More

 ತುಮಕೂರು:       ಪ್ರತಿಯೊಬ್ಬರೂ ತಮಗೆ ಸಿಗಬೇಕಾಗಿರುವ ಹಕ್ಕು ಬೇರೆಯವರಿಗೂ ಸಿಗಬೇಕು, ನಮಗೆ ಏನು ಆಗಬಾರದೆಂದು ಬಯಸುತ್ತೇವೆಯೋ ಅದು ಬೇರೆಯವರಿಗೂ ಆಗಬಾರದೆಂದು ಅರಿತಾಗ ನಿಜವಾದ ಮಾನವನ ಹಕ್ಕು ಲಭಿಸಿದಂತಾಗುತ್ತದೆ. ಮಾನವ ಜನಿಸಿದಾಗಿನಿಂದಲೆ ಅವನ ಹಕ್ಕು ಆರಂಭವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ರೂಪಕ್ ಕುಮಾರ್ ದತ್ತಾ ಅವರು ತಿಳಿಸಿದರು.       ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ ಹಾಗೂ ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿಂದು ತುಮಕೂರು ವಿಶ್ವವಿದ್ಯಾನಿಲಯದ ಡಾ||ಪಿ.ಸದಾನಂದಮಯ್ಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ಅರಿವು, ರಕ್ಷಣೆ, ನೆರವು ಸಂರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಸಂಸಾರಕ್ಕೆ ಬಂದಾಗಿನಿಂದಲೂ ಮಾನವ ಹಕ್ಕುಗಳು ಬಂದಿವೆ ಎಂದರು.       ಸಾರ್ವಜನಿಕ ಸೇವೆಯಲ್ಲಿರುವವರು ಜನರ ಹಿತಕ್ಕಾಗಿ ಕೆಲಸ ಮಾಡುವ ಮನೋಭಾವ ರೂಢಿಸಿಕೊಳ್ಳಬೇಕು. ಮಾನವನ ಹಕ್ಕು ಉಲ್ಲಂಘನೆಯಾದ ಪ್ರತಿಯೊಬ್ಬರೂ ತಮ್ಮ…

Read More

ತುಮಕೂರು:       ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರು 57ನೇ ಹುಟ್ಟು ಹಬ್ಬದ ಅಂಗವಾಗಿ ಬುಧವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದರು.       ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ಧಿಕ ಶುಭಾಶಯಗಳನ್ನು ಕೋರುತ್ತೇನೆ. ಇಂದು ನಾನು ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿಗಳಾದ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಮಾಡಿದ್ದೇನೆ. ಲಿಂ.ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ. ಅವರ ಆಶೀರ್ವಾದ, ಬಸವಣ್ಣನವರ ಆಶೀರ್ವಾದಿಂದ ನಮ್ಮ ರಾಜ್ಯ, ದೇಶದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲಸಿದೆ. ಸಾಮಾಜಿಕ ನ್ಯಾಯ ಪ್ರತಿಯೊಬ್ಬರಿಗೂ ಸಿಗಲಿ ಎಂದು ಆಶಿಸುತ್ತೇನೆ ಎಂದರು.       ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಈಗಾಗಲೇ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರಿಗೆ ಪ್ರತಿಯೊಂದು ಮಾಹಿತಿ ಇದೆ.…

Read More