ತುಮಕೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ನಿಗಮದ ತುಮಕೂರು ಬಸ್ನಿಲ್ದಾಣವನ್ನು ಹೈಟೆಕ್ ಬಸ್ನಿಲ್ದಾಣವನ್ನಾಗಿ ಮಾರ್ಪಾಡು ಮಾಡುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಹಾಲಿ ಇರುವ ಬಸ್ನಿಲ್ದಾಣವನ್ನು ಬಸವೇಶ್ವರ ರಸ್ತೆಯಲ್ಲಿರುವ ನಿಗಮದ ತುಮಕೂರು ಘಟಕ-1ರ ಸ್ಥಳಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದ್ದು ಈ ಸಂಚಾರ ವ್ಯವಸ್ಥೆಗೆ ಸಾರ್ವಜನಿಕರು ಹೊಂದಿಕೊಂಡು ಸಹಕರಿಸಬೇಕೆಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಮನವಿ ಮಾಡಿದರು. ಕಾರ್ಯಾಚರಣೆ ಮಾಡಲಿರುವ ತಾತ್ಕಾಲಿಕ ಬಸ್ ನಿಲ್ದಾಣಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ಅಶೋಕ ರಸ್ತೆಯಲ್ಲಿರುವ ಹಳೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಭಾಗದಲ್ಲಿ ನೂತನ ಅತ್ಯಾಧುನಿಕ ಬಸ್ನಿಲ್ದಾಣ ನಿರ್ಮಿಸಲು ಸುಮಾರು 82 ಕೋಟಿ ರೂ.ಗಳ ಕಾಮಗಾರಿ ಕೆಲಸಗಳನ್ನು ಪ್ರಾರಂಭಿಸಲಾಗಿದ್ದು ಸುಮಾರು ಒಂದೂವರೆಯಿಂದ ಎರಡು ವರ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಅದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಬಸವೇಶ್ವರ ರಸ್ತೆಯಲ್ಲಿರುವ ನಿಗಮದ ತುಮಕೂರು ಘಟಕ-1ರ ಸ್ಥಳಕ್ಕೆ ಸ್ಥಳಾಂತರಗೊಳಿಸಿದ್ದು, ಪ್ರಯಾಣಿಕರಿಗೆ ಯಾವುದೇ ವ್ಯತ್ಯಯವಾಗದಂತೆ ವಿಶಾಲವಾಗಿರುವ ತಾತ್ಕಾಲಿಕವಾಗಿ ಬಸ್ ನಿಲ್ದಾಣದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.…
Author: News Desk Benkiyabale
ತುಮಕೂರು : ಬೆಲೆ ಏರಿಕೆಗೆ ಕಡಿವಾಣ, ಉದ್ಯೋಗ ಸೃಷ್ಟಿ, 21 ಸಾವಿರ ರೂಪಾಯಿ ಕನಿಷ್ಟ ಕೂಲಿ, ಆರ್ಥಿಕ ಪ್ರಗತಿಗೆ ತಡೆಯೊಡ್ಡಿರುವ ನೀತಿಗಳನ್ನು ಬದಲಿಸಲು, ರೈತರ ಆತ್ಮಹತ್ಯೆ ತಡೆ, ಬೆಳೆ ವೈಜ್ಞಾನಿಕ ಬೆಂಬಲ ಬೆಲೆ, ಕೃಷಿ ಬಿಕ್ಕಟ್ಟು ನಿವಾರಣೆಗೆ ಆಗ್ರಹಿಸಿ, ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ವಿರೋಧಿಸಿ, ಸ್ಕೀಂ ನೌಕರರ ಕಾಯಂಮಾತಿಗೆ, ಗುತ್ತಿಗೆ ಪದ್ದತಿ ರದ್ದತಿಗೆ ಒತ್ತಾಯಿಸಿ, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗೆ ಆಗ್ರಹಿಸಿ, ಮಾಸಿಕ 10 ಸಾವಿರ ರೂಪಾಯಿ ಕನಿಷ್ಠ ಪಿಂಚಣಿಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳಾದ, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಐಎನ್ಟಿಯುಸಿ ಸಂಘಟನೆಗಳ ನೂರಾರು ಕಾರ್ಯಕರ್ತರು ತುಮಕೂರು ನಗರದ ಬಿಎಸ್ಎನ್ಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಈ ಮುಷ್ಕರವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ವಿವಿಧ ಸಂಘಟನೆಗಳ ನಾಯಕರನ್ನು ಹೆದರಿಸಿರುವುದು ಮತ್ತು ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವ ಪ್ರಕ್ರಿಯೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಬಿಎಸ್ಎನ್ಎಲ್ ಕಚೇರಿ ಎದುರು ನಡೆದ…
ತುಮಕೂರು : ಎತ್ತಿನಹೊಳೆ ಯೋಜನೆ ಹಾಗೂ ಹೇಮಾವತಿ ನಾಲೆಯ ಕುರಿತು ಜಿಲ್ಲೆಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಮಾಹಿತಿ ಪಡೆದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಮಧ್ಯಾಹ್ನ ಎತ್ತಿನಹೊಳೆ ಹಾಗೂ ಹೇಮಾವತಿಯ ವಿಶೇಷ ಭೂಸ್ವಾದೀನ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲೆಯಲ್ಲಿ ಎತ್ತಿನಹೊಳೆಗೆ ಅಗತ್ಯವಿರುವ ಜಮೀನು ಭೂಸ್ವಾದೀನಕ್ಕಾಗಿ ಅಗತ್ಯವಿರುವ ಹಣ ಹಾಗೂ ಬೈರಗೊಂಡ್ಲು ಜಲಾಶಯದ ಕುರಿತು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಹಾಗೂ ಭೂಸ್ವಾಧೀನಾಧಿಕಾರಿಯೊಂದಿಗೆ ಚರ್ಚಿಸಿದರು. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬಿಕ್ಕೆಗುಡ್ಡ-ಹಾಗಲವಾಡಿಯಲ್ಲಿ ಹೇಮಾವತಿ ನಾಲೆಯ ನಿರ್ಮಾಣಕ್ಕೆ ರೈತರು ನೇರವಾಗಿ ಜಮೀನು ನೀಡಲು ಮುಂದೆ ಬರುತ್ತಿದ್ದಾರೆ ಎಂದು ಹೇಮಾವತಿಯ ವಿಶೇಷ ಭೂಸ್ವಾಧೀನಾಧಿಕಾರಿ ಯಶೋಧ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ತಿಳಿಸಿದರು. ಸಭೆಯಲ್ಲಿ ಎತ್ತಿನ ಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ಜಿ.ಡಿ. ಶೇಖರ್, ಎತ್ತಿನ ಹೊಳೆಯ ಸಹಾಯಕ ಕಾರ್ಯಕಾರಿ ಇಂಜಿನಿಯರ್…
ತುಮಕೂರು : ಪೌರತ್ವ ಕಾಯ್ದೆ ಕುರಿತು ಜಾಗೃತಿ ಮೂಡಿಸಲೆಂದು ರಾಷ್ಟ್ರೀಯ ನಾಗರಿಕ ವೇದಿಕೆಯ ತುಮಕೂರು ಜಿಲ್ಲಾ ಘಟಕವು ನಗರದಲ್ಲಿ ಮಂಗಳವಾರ ಜಾಥಾ ನಡೆಸಿತು. ನಗರದ ಬಿ.ಎಚ್.ರಸ್ತೆಯಿಂದ ಆರಂಭವಾದ ಜಾಥಾ ಈಗ ಎಂ.ಜಿ.ರಸ್ತೆ, ಗುಂಚಿ ಚೌಕದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಶಾಸಕ ಜಿ.ಬಿ.ಜ್ಯೋತಿಗಣೇಶ್ ನಡೆಸುತ್ತಿರುವ ಚನ್ನಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಬಸ್ನಿಂದ ಇಳಿದು ಜಾಥಾದಲ್ಲಿ ಹೆಜ್ಜೆ ಹಾಕಿದರು. ಪುರಭವನದ ಪಕ್ಕದಲ್ಲೆ ಇರುವ ಸಿದ್ಧಗಂಗಾ ಪಿಯು ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡರು. ಕಾರ್ಯಕರ್ತರ ಕೈಯಲ್ಲಿ ರಾಷ್ಟ್ರಧ್ವಜಗಳು, ಓಂ ಚಿಹ್ನೆಯುಳ್ಳ ತ್ರಿಕೋನಾಕಾರದ ಕೇಸರಿ ಬಣ್ಣದ ಧ್ವಜಗಳು ರಾರಾಜಿಸುತ್ತಿದ್ದವು. ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಎಂಬ ಘೋಷಣೆಗಳು ಮೊಳಗಿದವು. ಜಿಲ್ಲೆಯ ವಿವಿಧ ತಾಲ್ಲೂಕು ಮತ್ತು ತುಮಕೂರು ನಗರದ ವಿವಿಧ ಪ್ರದೇಶಗಳಿಂದ ಬಂದಿರುವ ಸಾವಿರಾರು ಜನರು ಭಾಗವಹಿಸಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸರಿಂದ ಡ್ರೋನ್ ಕ್ಯಾಮೆರಾ…
ಹುಳಿಯಾರು : “ಚಲಿಸುತ್ತಿದ್ದ ಬಸ್ನ ಸ್ಟೇರಿಂಗ್ ರಾಡ್ ಕಟ್ಟಾಗಿ ಬಸ್ ಬೇಲಿ ಸಾಲಿನ ಕಡೆ ನುಗ್ಗಿದ ಘಟನೆ ಹುಳಿಯಾರು – ಹೊಸದುರ್ಗ ರಸ್ತೆಯ ಕೇಶವಾಪುರದ ಬಳಿ ಭಾನುವಾರ ಜರುಗಿದೆ. ಹೊಸದುರ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಸ್ಟೇರಿಂಗ್ ರಾಡ್ ಕಟ್ಟಾಗಿ ಚಾಲಕನ ಕಂಟ್ರೋಲ್ ತಪ್ಪಿ ರಸ್ತೆಯಿಂದ ಬೇಲಿ ಸಾಲಿನ ಕಡೆ ಬಸ್ ಚಲಿಸಿದೆ. ಅಷ್ಟರಲ್ಲಿ ಎಚ್ಚೆತ್ತ ಚಾಲಕ ತನ್ನ ಸಮಯಪ್ರಜ್ಞೆ, ಜಾಗರೂಕತೆಯಿಂದ ಚಲಿಸುತ್ತಿದ್ದ ಬಸ್ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾನೆ. ಪರಿಣಾಮ ಭಾರಿ ಅವಘಡ ತಪ್ಪಿ ಯಾವುದೇ ಸಾವು, ನೋವುಗಳು ಸಂಭವಿಸದೆ ಎಲ್ಲರೂ ಕ್ಷೇಮದಿಂದ ಬಸ್ ಇಳಿದಿದ್ದಾರೆ. ನಂತರ ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಹತ್ತಿಸಿ ಅವರವರ ಊರಿಗೆ ಕಳುಹಿಸಿಕೊಟ್ಟಿದ್ದಾರೆ.
ತುಮಕೂರು : ಆರೋಗ್ಯವಂತ ಸಮಾಜದಿಂದ ಮಾತ್ರ ಸುಭದ್ರ ದೇಶ ಕಟ್ಟಲು ಸಾಧ್ಯ ಎಂದು ಕಂದಾಯ ಸಚಿವ ಆರ್. ಅಶೋಕ್ ಅಭಿಪ್ರಾಯಪಟ್ಟರು. ಸಮಾಜದಲ್ಲಿ ವಾಸಿಸುವ ಪ್ರತಿಯೊಬ್ಬರೂ ಆರೋಗ್ಯವಂತರಾಗಿದ್ದಾಗ ಮಾತ್ರ ದೇಶವೂ ಆರೋಗ್ಯಕರವಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಒದಗಿಸುವ ಕೆಲಸ ಇನ್ನು ಹೆಚ್ಚು ಹೆಚ್ಚು ಆಗಬೇಕು ಎಂದು ಅವರು ಹೇಳಿದರು. ಇಲ್ಲಿನ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಶಾಖೆ, ಸಪ್ತಗಿರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸಂಶೋಧನಾ ಕೇಂದ್ರ, ಕಂಪೆನಿ, ಸಿಪ್ಲಾ ಕಂಪೆನಿ, ಲಯನ್ಸ್ ಕ್ಲಬ್, ಜ್ಞಾನ ಯೋಗ ಬೆಂಗಳೂರು ಹಾಗೂ ಅಶ್ವಿನಿ ಆಯುರ್ವೇದ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಬಡವರಿಗೆ ಆರೋಗ್ಯ ಸೇವೆ ಸಿಗುವುದು ದುಸ್ತರವಾಗಿದೆ. ಆರೋಗ್ಯ ಸೇವೆ ಬಡವರ ಕೈಗೆಟಕದಷ್ಟರ ಮಟ್ಟಿಗೆ ಗಗನಕುಸುಮವಾಗುತ್ತಿದೆ. ಇಂಥ ಸಂದರ್ಭದಲ್ಲಿ ಪತ್ರಕರ್ತರು ಉಚಿತ…
ತುಮಕೂರು : ಯೂನಿಸೆಫ್ ವತಿಯಿಂದ ಹೈದರಾಬಾದ್ನಲ್ಲಿ 2019ರ ಡಿಸೆಂಬರ್ 18 ರಿಂದ 20ರವರೆಗೆ ದಕ್ಷಿಣ ಭಾರತ ರಾಜ್ಯ(ತೆಲಂಗಾಣ, ಕರ್ನಾಟಕ, ಆಂದ್ರಪ್ರದೇಶ)ಗಳಿಗಾಗಿ ಆಯೋಜಿಸಲಾಗಿದ್ದ 6ನೇ ವರ್ಷದ ನೀರು, ನೈರ್ಮಲ್ಯ ಮತ್ತು ಶುಚಿತ್ವ ಸಮಾವೇಶದಲ್ಲಿ ತುಮಕೂರು ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯದ ರಾಜ್ಯಪಾಲ ತಮಿಳ್ಸೇ ಸೌಂದರ್ರಾಜನ್ ಅವರು ಜಿಲ್ಲೆಯನ್ನು ಅಭಿನಂದಿಸಿ ಪ್ರಶಂಸನಾ ಪತ್ರವನ್ನು ನೀಡಿದ್ದಾರೆ. ಸಮಾವೇಶದಲ್ಲಿ ಸ್ವಚ್ಛ ಭಾರತ ಮಿಷನ್(ಗ್ರಾ) ಜಿಲ್ಲಾ ನೋಡಲ್ ಅಧಿಕಾರಿಯಾದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಬಸನಗೌಡ ಅವರು ಸ್ವೀಕರಿಸಿದ ಪ್ರಶಂಸನಾ ಪತ್ರವನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅವರಿಗೆ ಇಂದು ಹಸ್ತಾಂತರಿಸಿದರು.
ತುಮಕೂರು : ಸುಮಾರು 200ಕ್ಕೂ ಹೆಚ್ಚಿನ ರೈತ ಸಂಘಟನೆಗಳನ್ನು ಒಳಗೊಂಡ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ (AIKSCC) ನೇತೃತ್ವದಲ್ಲಿ ದೇಶದಾದ್ಯಂತ ಹೋರಾಟ ನಡೆಸಿ ಪಾರ್ಲಿಮೆಂಟ್ ಚಲೋ ನಂತರ ವಿಶೇಷ ಸಂಸತ್ ನಡೆಸಲು ಒತ್ತಾಯಿಸಿ, ಭಾರತೀಯ ರೈತರ ಪ್ರನಾಳಿಕೆಯನ್ನು ಅಂಗೀಕರಿಸಿ ರೈತರ ಋಣಮುಕ್ತ ಮಸೂದೆ-2018 ಮತ್ತು ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಮಸೂದೆ-2018ನ್ನು ಜಾರಿಗೊಳಿಸಲು ಒತ್ತಾಯಿಸಿ ನಡೆದ ಹೋರಾಟವನ್ನು ಕೇಂದ್ರ ಸರ್ಕಾರ ಪರಿಗಣಿಸದೇ ಇರುವುದನ್ನು ಖಂಡಿಸಿ ಜನವರಿ 3ರಂದು ರಾಷ್ಪ್ರಪತಿಗಳಿಗೆ ಮುಷ್ಕರದ ನೋಟೀಸ್ ನೀಡಿ ಈ ಬೇಡಿಕೆಗಳು ಈಡೇರದಿದ್ದಲ್ಲಿ ಜನವರಿ 8ರಂದು ದೇಶಾದ್ಯಂತ ಗ್ರಾಮೀಣಾ ಭಾರತ್ ಬಂದ್ ನಡೆಸಲಾಗುವುದು ಎಂದು ತೀರ್ಮಾನಿಸಲಾಗಿದೆ. ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆದ ಸಭೆಯನ್ನುದ್ದೇಶಿಸಿ ಜಿಲ್ಲಾ ಸಂಚಾಲಕ ಸಿ.ಯತಿರಾಜು ಮಾತನಾಡಿ, ರೈತರ ಆತ್ಮಹತ್ಯೆಗಳು ಕರ್ನಾಟಕದಲ್ಲಿ ಹೆಚ್ಚಾಗಿದ್ದು ರೈತರು ಸಾಲವಸೂಲಿಗೆ ಸಿಲುಕಿದ್ದಾರೆ. ಉತ್ಪಾದನಾ ವೆಚ್ಚ ಸಹ ದುಬಾರಿಯಾಗಿದ್ದು ಕೃಷಿಗೆ ಖರ್ಚು ಮಾಡಿದ ಹಣಕ್ಕೆ…
ತುಮಕೂರು : ಸಿರಾ ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಮುಖಂಡರು ಸಿರಾದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೈಕ್ ರ್ಯಾಲಿ ನಡೆಸಿ ಪ್ರತಿಭಟಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಿರಾ ತಾಲ್ಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಎಸ್.ಬಿ.ರಮೇಶ್ ಅವರು, ಸಿರಾ ತಾಲ್ಲೂಕಿಗೆ ಹಂಚಿಕೆಯಾಗಿರುವ ಹೇಮಾವತಿ ನೀರನ್ನು ಹರಿಸಲು ತಾರತಮ್ಯ ಮಾಡಲಾಗುತ್ತಿದ್ದು, ಮದಲೂರು ಕೆರೆಗೂ ನೀರು ಹಂಚಿಕೆಯಾಗಿದ್ದರು, ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಸಲ್ಲದ ನೆಪ ಹೇಳುತ್ತಾ, ಸಿರಾಗೆ ನೀರು ಹರಿಸುವುದಕ್ಕೆ ತಡೆ ಹಾಕಲಾಗಿದೆ ಎಂದು ಆರೋಪಿಸಿದರು. ಕಳೆದ ನಲ್ವತ್ತು ದಿನಗಳಲ್ಲಿ ಹೇಮಾವತಿ ಹರಿಸುವಂತೆ ಒತ್ತಾಯಿಸಿ ಶಿರಾದಲ್ಲಿ ರೈತರು ಹೋರಾಟ ನಡೆಸುತ್ತಿದ್ದರು, ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಅವರತ್ತ ನೋಡಿಲ್ಲ, ಸಿರಾ ಏನಾದರೂ ಪಾಕಿಸ್ತಾನದಲ್ಲಿ ಇದೆಯೇ? ಇದೇ ಜಿಲ್ಲೆಯಲ್ಲಿರುವ ಸಿರಾಕ್ಕೆ ನೀರು ಹರಿಸಲು ರಾಜಕೀಯ ಮಾಡುತ್ತಿರುವುದಾದರೂ ಏತಕ್ಕೆ ಎಂದ ಅವರು, ನೀರಿನ ರಾಜಕಾರಣವನ್ನು ಬಿಟ್ಟು ಸಿರಾದ ಜನರಿಗೆ ಕುಡಿಯಲು ನೀರು ಹರಿಸಲು ಉಸ್ತುವಾರಿ…
ಬೆಂಗಳೂರು: `ಕರ್ನಾಟಕ ನೆರೆಯಿಂದ ತತ್ತರಿಸಿದೆ. ?30 ಸಾವಿರ ಕೋಟಿಗೂ ಮಿಗಿಲಾದ ನಷ್ಟವಾಗಿದೆ. ಆದರೆ ಸೂಕ್ತ ಪರಿಹಾರ ಬಂದಿಲ್ಲ. ಕೇಂದ್ರ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸಬೇಕು,’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತುಮಕೂರಿನ ರೈತ ಸಮಾವೇಶದಲ್ಲಿ ಮೋದಿ ಸಮ್ಮುಖದಲ್ಲೇ ಒತ್ತಾಯಿಸಿದರು. ಗುರುವಾರ ತಮಕೂರಿನ ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ ನೇರವಾಗಿ ರೈತ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ ಎಂಟು ಮಂದಿ ರೈತರಿಗೆ `ಕೃಷಿ ಕರ್ಮಣ ಪ್ರಶಸ್ತಿ,’ ಪ್ರದಾನ ಮಾಡಿದರು. ನಂತರ ಪ್ರಸ್ತಾವಿಕವಾಗಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೆರೆ ಪರಿಹಾರಕ್ಕಾಗಿ ಒತ್ತಾಯಿಸಿದರು. `ಆಹಾರ ಉತ್ಪಾದನೆ ದ್ವಿಗುಣಗೊಳಿಸಲು ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದಾರೆ. ರೈತರಿಗೆ ಪ್ರೋತ್ಸಾಹ ಧನ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಅದನ್ನು ಸಾಧಿಸಬೇಕು. ರಾಜ್ಯದ ನೀರಾವರಿಗೆ 50 ಸಾವಿರ ಕೋಟಿ ಅನುದಾನದ ಅಗತ್ಯವಿದೆ. ಅದನ್ನು ಪ್ರಧಾನಿ ಪೂರೈಸಬೇಕು,’ ಎಂದು ಮನವಿ ಮಾಡಿದರು. …