ಹುಳಿಯಾರು: ಹುಳಿಯಾರಿನ ವಿವಿಧ ಕೃಷಿ ಪರಿಕರ ಮಾರಾಟಗಾರರ ಅಂಗಡಿಗಳಿಗೆ ತುಮಕೂರಿನ ಉಪ ಕೃಷಿ ನಿರ್ದೇಶಕರಾದ ಡಿ.ಉಮೇಶ್ ನೇತೃತ್ವದ ತಂಡ ಅನಿರೀಕ್ಷಿತ ದಾಳಿ ನಡೆಸಿ ಪರವಾನಗಿ, ಬಿತ್ತನೆ ಬೀಜ ಹಾಗೂ ಗೊಬ್ಬರ ದಾಸ್ತಾನಿನ ಪರಿಶೀಲನೆ ನಡೆಸಿತು. ಬಿತ್ತನೆ ಸಮಯದಲ್ಲಿ ರೈತರಿಂದ ಬೇಡಿಕೆ ಹೆಚ್ಚಾದ ಸಮಯದಲ್ಲಿ ಸರಕಾರ ಫಿಕ್ಸ್ ಮಾಡಿದ ಎಂಆರ್ಪಿ ದರದಲ್ಲಿ ಬೀಜ ಹಾಗೂ ಗೊಬ್ಬರ ಮಾರಾಟ ಮಾಡಬೇಕು ಹಾಗೊಂದು ವೇಳೆ ಗೊಬ್ಬರದ ಕೃತಕ ಅಭಾವ ಸೃಷ್ಟಿಸಲು ಪ್ರಯತ್ನ ಮಾಡುವುದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಮತ್ತು ಲಿಂಕ್ ಮಾಡುವುದು ಕಂಡು ಬಂದರೆ ಶಿಸ್ತು ಕ್ರಮಕೈಗೊಳ್ಳಲಾಗುವುದೆಂದು ಪರಿಶೀಲನೆ ವೇಳೆ ವ್ಯತ್ಯಾಸ ಹಾಗೂ ನಕಲಿ ಬೀಜ ಮಾರಾಟ ಕಂಡು ಬಂದಲ್ಲಿ ಮುಲಾಜಿಲ್ಲದೆ ನೋಟಿಸ್ ನೀಡಿ ಅಂಗಡಿ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಎಲ್ಲಾ ಮಾರಾಟಗಾರರಿಗೂ ಎಚ್ಚರಿಕೆ ನೀಡಿದರು. ತಾಲ್ಲೂಕಿನಲ್ಲಿ ರಸಗೊಬ್ಬರ, ಕೀಟನಾಶಕ ಹಾಗೂ ಬಿತ್ತನೆ ಬೀಜ ಅಧಿನಿಯಮದಡಿ ಯಾವುದೇ ಕೃಷಿ ಪರಿಕರ…
Author: News Desk Benkiyabale
ತುಮಕೂರು : ಜಿಲ್ಲೆಯಲ್ಲಿ 50 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3470 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 14, ಪಾವಗಡ-11, ಕುಣಿಗಲ್-01, ಮಧುಗಿರಿ-03, ಕೊರಟಗೆರೆ-01, ತುರುವೇಕೆರೆ-02, ಶಿರಾ-01, ತಿಪಟೂರು-03, ಗುಬ್ಬಿ-05, ಚಿಕ್ಕನಾಯಕನಹಳ್ಳಿ-09 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 101 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 103 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 900 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 108 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ವೈ ಎನ್ ಹೊಸಕೋಟೆ ಪೊಲೀಸ್ ಠಾಣೆಯ ಎಸ್ಪಿ ಕಾನ್ಸ್ಟೇಬಲ್ರನ್ನುಪೊಲಿಸ್ ಠಾಣೆಯ ಮುಂದೆಯೇ ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ನಿನ್ನೆ ರಾತ್ರಿ 7:30 ರ ಸಮಯದಲ್ಲಿ ನಡೆದಿದೆ. ಠಾಣೆಯ ಸಬ್ಇನ್ಸ್ಪೆಕ್ಟರ್ ರಾಮಯ್ಯ ರವರಿಗೆ ಕರೋನಾ ಸೋಂಕು ಪಾಸಿಟಿವ್ ಆಗಿದ್ದರಿಂದ ಕ್ವಾರಂಟೈನ್ನಲ್ಲಿ ಇದ್ದಾರೆ. ಇಲ್ಲಿನ ಪೊಲೀಸ್ ಸಿಬ್ಬಂದಿಯೂ ಸಹ ಹೋಮ್ಕ್ವಾರೇಂಟೈನ್ ಮುಗಿಸಿ ನಿನ್ನೆಯಷ್ಟೇ ಕೆಲಸಕ್ಕೆ ಹಾಜರಾಗಿದ್ದರು . ಆಂಧ್ರಪ್ರದೇಶ ದಿಂದ ಜನರು ವೈ ಎನ್ ಹೊಸಕೋಟೆಯ ಮದ್ಯದಂಗಡಿಗಳಿಗೆ ಬಂದು ಮದ್ಯ ಸೇವನೆಯನ್ನು ಮಾಡುತ್ತಿದ್ದಾರೆ .ಮದ್ಯದಂಗಡಿಗಳ ಮುಂದೆ ಜನಸಂದಣಿ ಇದೆ, ರಸ್ತೆಯಲ್ಲಿ ಓಡಾಡುವ ಜನರಿಗೆ ಕಿರಿಕಿರಿಯಾಗುತ್ತಿದೆ ಇದರಿಂದ ಸಾರ್ವಜನಿಕ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಸಾರ್ವಜನಿಕರು ದೂರಿದ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ . ಮದ್ಯದಂಗಡಿಗಳ ಮುಂದೆ ಇರುವ ಕಿರಿದಾದ ದಾರಿಯಲ್ಲಿ ಜನಸಂದಣಿ ಹೆಚ್ಚಿದ್ದರಿಂದ ದ್ವಿಚಕ್ರ ವಾಹನಗಳಲ್ಲಿ ವೇಗವಾಗಿ ಓಡಾಡುವವರನ್ನು ತಡೆದು…
ತುಮಕೂರು: ತುಮಕೂರು ನಗರ ವಿಭಾಗದ ಪೊಲೀಸರು ಹಾಗೂ ಜಿಲ್ಲಾ ಶಸಸ್ತ್ರ ಮೀಸಲು ಪಡೆಯ 20 ಜನ ಪೊಲೀಸರಿಗೆ ಶನಿವಾರ ಬೆಳಿಗ್ಗೆ ಎಸ್ಪಿ ಅವರ ಕಛೇರಿಯ ಮುಂಭಾಗದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇಸಿದಿ ನತಂತರ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕೊರೊನಾ ಪಾಸಿಟೀವ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾದ ಕರ್ತವ್ಯ ನಿರ್ವಹಿಸುತ್ತಿರುವ ನಿಮ್ಮ ಕಾರ್ಯವೈಖರಿ ನಿಜಕ್ಕೂ ಮೆಚ್ಚುಗೆ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಸುಮಾರು 20 ಕ್ಕೂ ಹೆಚ್ಚು ಸಿಬ್ಬಂದಿಗಳು ಕುಟುಂಬದವರು ಪಾಸಿಟೀವ್ ಬಂದ ಸಂದರ್ಭದಲ್ಲಿ ನಿಮ್ಮ ಕುಟುಂಬದವರಿಗೆ ಆತ್ಮವಿಶ್ವಾಸ ಹೆಚ್ಚಿಸಿ ನಾವು ನಿಮ್ಮೊಂದಿಗಿದ್ದೇವೆ ಆತಂಕ ಬೇಡ ಎಂದು ಮನವಿ ಮಾಡಿದ್ದೆವು. ಇಲಾಖೆಯ ಹಿರಿಯ ಅಧಿಕಾರಿಗಳಾದ ಶಿಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ರವರು ತುಮಕೂರು ಜಿಲ್ಲೆಯ ಪೊಲೀಸರು ಕೋವಿಡ್-19 ಸಂದರ್ಭದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಇದಕ್ಕೆ ಮೂಲ…
ತುಮಕೂರು: ತುಮಕೂರು ಜಿಲ್ಲೆಯ ಗ್ರಾಮೀಣ ಪ್ರದೇಶವು ಎರಡ್ಮೂರು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿಯ ಬದಲಾವಣೆಯನ್ನು ಕಾಣಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದ್ದಾರೆ. ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಆರ್ಥಿಕ ವಿಚಾರದಲ್ಲಿ ಸ್ವಲ್ಪ ಮಟ್ಟಿನ ಸಮಾನತೆ ಸಾಧಿಸಿದ್ದರೂ, ಸಾಮಾಜಿಕವಾಗಿ ಸಮಾಜ ನಿರ್ಮಾಣಕ್ಕೆ ಇನ್ನೂ ಬಹುದೂರ ಸಾಗಬೇಕಾಗಿದೆ. ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ಕೆಲಸ ಆಗಬೇಕಾಗಿದೆ ಎಂದರು. ಸ್ವಾತಂತ್ರ ಬಂದು 73ವರ್ಷಗಳು ಕಳೆದಿದ್ದರೂ ಜಾತಿ ರಹಿತ ಸಮಾಜ ನಿರ್ಮಾಣದತ್ತ ಕೊಂಚ ಕೆಲಸಗಳಾಗಿದ್ದರೂ, ವರ್ಗರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ಹಿಂದೆ ಬಿದ್ದಿದ್ದೇವೆ. ಬಡವ, ಬಲ್ಲಿದ, ಮೇಲು, ಕೀಳು ಎಂಬ…
ತುಮಕೂರು : ಜಿಲ್ಲೆಯಲ್ಲಿ 101 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3211 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 38, ಪಾವಗಡ-12, ಕುಣಿಗಲ್-07, ಮಧುಗಿರಿ-01, ಕೊರಟಗೆರೆ-06, ತುರುವೇಕೆರೆ-10, ಶಿರಾ-07, ತಿಪಟೂರು-08, ಗುಬ್ಬಿ-11, ಚಿಕ್ಕನಾಯಕನಹಳ್ಳಿ-01 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 101 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 119 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2194 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1017 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 101 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ
ತುಮಕೂರು : ಜಿಲ್ಲೆಯಲ್ಲಿ 92 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3211 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 31, ಪಾವಗಡ-09, ಕುಣಿಗಲ್-09, ಮಧುಗಿರಿ-10, ಕೊರಗಟಗೆರೆ-07, ತುರುವೇಕೆರೆ-05, ಶಿರಾ-03, ತಿಪಟೂರು-08, ಗುಬ್ಬಿ-04, ಚಿಕ್ಕನಾಯಕನಹಳ್ಳಿ-06 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 92 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 62 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1043 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1040 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 96 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು: ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಸ್ವಯಂ ದಾಖಲಿಸುವ “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್”ಗೆ ಸಚಿವ ಬಿ.ಸಿ ಪಾಟೀಲ್ ಅವರು ಶುಕ್ರವಾರ ಚಾಲನೆ ನೀಡಿದರು. ತಾಲೂಕಿನ ಕೋರ ಹೋಬಳಿಯ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಬೆಳೆಗಳ ಫೋಟೋ ಅಪ್ಲೋಡ್ ಮಾಡುವ ಮೂಲಕ ಚಾಲನೆ ನೀಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3 ವರ್ಷಗಳಿಂದ ಬೆಳೆ ಸಮೀಕ್ಷೆ ಮಾಡಲಾಗುತ್ತಿದೆ. ಈ ಮೊದಲು ಆಯಾ ಗ್ರಾಮದ ಪಿಆರ್ಒಗಳು ರೈತರ ಜಮೀನುಗಳಿಗೆ ಬಂದು ಬೆಳೆಯ ಫೋಟೋ ತೆಗೆಯುತ್ತಿದ್ದರು. ಆದರೆ ಪ್ರಸಕ್ತ ವರ್ಷದಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರ ತೆಗೆದು ರೈತರೇ ಸ್ವಯಂ ಅಪ್ಲೋಡ್ ಮಾಡಬಹುದಾಗಿದೆ ಎಂದರು. ಬೆಳೆ ಸಮೀಕ್ಷೆಗಾಗಿ ರೈತರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವಂತಿಲ್ಲ. ರೈತ ತನ್ನ ಜಮೀನಿನಲ್ಲಿ ತಾನು ಬೆಳೆದ ಬೆಳೆಯನ್ನು ತಾನೇ ಸಮೀಕ್ಷೆ ಮಾಡಬಹುದು. ಬೆಳೆ ಸಮೀಕ್ಷೆಯಡಿ ಸಂಗ್ರಹವಾಗುವ ಮಾಹಿತಿಯನ್ನು ಪ್ರಕೃತಿ…
ತುಮಕೂರು: ವ್ಯಾಟ್ಸ್ಆ್ಯಪ್ ಕರೆಗಳ ಮೂಲಕ ಉದ್ಯಮಿಯೊಬ್ಬರಿಗೆ ಬೆದರಿಕೆ ಕರೆ ಹಾಕಿ ಸುಲಿಗೆ ಮಾಡಲು ಯತ್ನಿಸಿದ ಆರೋಪಿಗಳನ್ನು ಎನ್ಇಪಿಎಸ್ ಪೊಲೀಸರು ಬಂಧಿಸಿದ್ದಾರೆ. ನಗರದ ಮಂಡಿಯಲ್ಲಿ ಆಯಿಲ್ ಮಿಲ್ ಇಟ್ಟುಕೊಂಡಿರುವ ಉದ್ಯಮಿಯೊಬ್ಬರಿಗೆ ವ್ಯಾಟ್ಸ್ಆ್ಯಪ್ ಸಂದೇಶಗಳನ್ನು ಕಳುಹಿಸುವ ಮೂಲಕ 50 ಲಕ್ಷ ರೂ. ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಸದರಿ ಉದ್ಯಮಿಯು ವಾಲ್ಮೀಕಿ ನಗರದ ತಮ್ಮ ಮನೆಗೆ ತೆರಳುವ ವೇಳೆ ಕಾರನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿ ಬೆದರಿಕೆಯನ್ನು ಸಹ ಹಾಕಿದ್ದರು. ಈ ಸಂಬಂಧ ಹೊಸಬಡಾವಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳಾದ ಅಲಿ ಹುಸೇನ್(40), ಶಾನ್ ವಾಜ್ ಪಾಷ(40), ಮೆಹಬೂಬ್ ಖಾನ್ (40), ಸೈಯದ್ ಶವರ್(34), ಇವರನ್ನು ಬಂದಿಸಿದ್ದು, ಸ್ಟೈಲ್ ಇಮ್ರಾನ್ ಎಂಬ ವ್ಯಕ್ತಿ ತಲೆ ಮರೆಸಿಕೊಂಡಿದ್ದಾನೆ. ಇವನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೇಲ್ಕಂಡ ಆರೋಪಿಗಳು ಕೃತ್ಯಕ್ಕಾಗಿ ಬಳಸಿದ್ದ ಆರು ಮೊಬೈಲ್ ಮತ್ತು…
ತುಮಕೂರು: ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಕಿಡಿಗೇಡಿಗಳು ನಡೆಸಿದ ಹಲ್ಲೆಯನ್ನ ಖಂಡಿಸಿ ತುಮಕೂರಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ. ಪುರುಷೋತ್ತಮ್ ನೇತೃತ್ವದಲ್ಲಿ ಪತ್ರಕರ್ತರು ಪ್ರತಿಭಟನೆ ನಡೆಸಿದರು. ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ಮಾಡುವ ಮೂಲಕ ಹಲ್ಲೆಕೋರರನ್ನು ಬಂದಿಸುವಂತೆ ಒತ್ತಾಯಿಸಿ, ಹಾಗೂ ಇಂತಹ ಘಟನೆಗಳು ಮರುಕಳಿಸಿದಂತೆ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ ಪತ್ರಕರ್ತರು ಯಾವುದೇ ಜಾತಿ ಧರ್ಮ ವನ್ನ ಲೆಕ್ಕಿಸದೇ ಪಕ್ಷಾತೀತವಾಗಿ ಪ್ರಾಮಾಣಿಕತೆಯಿಂದ ಘಟನೆಯ ಸತ್ಯಾಸತ್ಯತೆಯನ್ನ ವರದಿ ಮಾಡಲು ತೆರಳಿರುತ್ತಾರೆ ಅಂತಹ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ, ಹಾಗೂ ಇದೇ ರೀತಿ ಕಳೆದ ಒಂದು ವಾರದಲ್ಲಿ ಬೇರೆ ಬೇರೆ ಕಡೆಗಳಲ್ಲಿ ಪತ್ರಕರ್ತರ…











