ಪಿತೃವಾಕ್ಯ ಪರಿಪಾಲನೆಗಾಗಿ ರಾಮ ಕಾಡಿಗೆ ಹೋದ. ಪ್ರಪಂಚದಾದ್ಯಂತ ರಾಮನಿಗೆ ಬಹುದೊಡ್ಡ ಹೆಸರು ಬಂತು. ಮಾತೃವಾಕ್ಯ ಪರಿಪಾಲನೆಗಾಗಿ ಗಣಪತಿ ತಲೆದಂಡವಾಗಿಸಿಕೊಂಡ. ವಿಶ್ವದಾದ್ಯಂತ ಗಣಪತಿಗೆ ದೊಡ್ಡ ಹೆಸರು ಬಂತು. ಆತ ಪ್ರಥಮಪೂಜಿತನಾದ, ಪ್ರಥಮವಂದಿತನಾದ. ಮಾದಕ ಪದ-ಪದಾರ್ಥಗಳ ಗುಲಾಮರಾಗಿ, ಮತ್ತವುಗಳ ದಾಸಾನುದಾಸರಾಗಿ ಹೋಗಿರುವ ಮತ್ತು ಮಾದಕದ್ರವ್ಯಗಳ ಸೇವನೆಯನ್ನು ದಿನನಿತ್ಯದ ಜೀವನದಲ್ಲಿ ಕಡ್ಡಾಯವಾಗಿಸಿಕೊಂಡಿರುವ ಯುವಕರನ್ನು ಕುರಿತು ನಾವು ಒಂದು ಪ್ರಶ್ನೆಯನ್ನು ಕೇಳಲಿಚ್ಛಿಸುತ್ತೇವೆ. “ಅದಾರ ವಾಕ್ಯಪರಿಪಾಲನೆಗಾಗಿ ನೀವು ನಮ್ಮ ಬದುಕನ್ನು ಕಾಡಾಗಿಸಿಕೊಳ್ಳುತ್ತಿದ್ದೀರಿ? ಅದಾವ ಪುರುಷಾರ್ಥಕ್ಕಾಗಿ ನೀವು ನಿಮ್ಮ ತಲೆಯನ್ನು ತಲೆದಂಡವಾಗಿಸಿಕೊಳ್ಳುತ್ತಿದ್ದೀರಿ? ಅದಾವ ಕಾರಣಕ್ಕಾಗಿ ನೀವು ನಿಮ್ಮ ಬದುಕಿಗೆ ನಶಾದೀಕ್ಷೆಯನ್ನು ಕೊಟ್ಟುಕೊಂಡಿದ್ದೀರಿ? ನೀವು ಡ್ರಗ್ಸ್ ದಾಸರಾಗಿ, ನಶಾದಾಸರಾಗಿ ದೈನಂದಿನ ಬದುಕಿನೊಂದಿಗೆ ಸಹಜವಾಗಿರದೆ ಬೇರೊಂದು ಲೋಕದಲ್ಲಿ ಕಳೆದುಹೋಗಿರುವುದನ್ನು ಕಂಡು ನಿಮ್ಮ ತಂದೆ, ತಾಯಿಗಳ ಜೀವನ ಅದೆಷ್ಟೊಂದು “ವಿಲವಿಲ’’ ಎನ್ನುತ್ತದೆ ಎಂಬ ಅರಿವು ನಿಮಗಿದೆಯಾ?’’ ನೀವು ವ್ಯಸನಾಧೀನರಾದಾಗ, ನೀವು ಮಾದಕದ್ರವ್ಯಗಳ ದಾಸಾನುದಾಸರಾದಾಗ ನಿಮ್ಮ ತಂದೆ, ತಾಯಿಗಳು ಆ ದಶರಥ ಮಹಾರಾಜ ಶ್ರೀರಾಮಚಂದ್ರ ಕಾಡಿಗೆ ಹೋಗುವಾಗ ಅದೆಷ್ಟು…
Author: News Desk Benkiyabale
ತುಮಕೂರು: ಸಾಮಾಜಿಕ ಜಾಲ ತಾಣದಲ್ಲಿ ಸುಳ್ಳು ವದಂತಿ ಹಬ್ಬಿಸಿದ್ದ ಹೇಮಂತ್ ಕುಮಾರ್ ಎಂಬ ಕಿಡಿಗೇಡಿಯನ್ನು ಕುಟುಕು ಕಾರ್ಯಾಚರಣೆ ಮಾಡಿ ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೋಲಿಸ್ ಸಿಬ್ಬಂದಿಯ ಕಾರ್ಯ ಶ್ಲಾಘನೀಯ. ಕಳೆದ 3 – 4 ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲೊಂದಾದ ಫೇಸ್ಬುಕ್ ನಲ್ಲಿ ಹೇಮಂತ್ ಗೌಡ ಎನ್ನುವ ಹೆಸರಿನ ಕಿಡಿಗೇಡಿಯೊಬ್ಬ ಕೆಲವು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದು, ತುಮಕೂರು ನಗರದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಸಮುದಾಯದವರಾದ ಮಾಜಿ ಶಾಸಕ ರಫೀಕ್ ಅಹ್ಮದ್ ಸಂಬಂಧಿಕರ ಮಗನಿಂದ ಲವ್ ಜಿಹಾದ್ ಮತ್ತು ಡ್ರಗ್ಸ್ ದಂಧೆ ನಡೆಸಲಾಗುತ್ತಿದೆ ಎಂಬ ಸುಳ್ಳು ವದಂತಿಯನ್ನು ಬಿತ್ತರಿಸುತ್ತಿದ್ದ. ಈ ಸುದ್ದಿ ನನ್ನ ಗಮನಕ್ಕೆ ಬಂದ ಕೂಡಲೇ ಕ್ಯಾತ್ಸಂದ್ರ ಪೋಲಿಸ್ ಠಾಣೆಯಲ್ಲಿ ಮತ್ತು ನಗರದ ಸೈಬರ್ ಕ್ರೈಂ ಪೋಲೀಸ್ ಠಾಣೆಯಲ್ಲಿ ಅವನ ವಿರುದ್ಧ ಕಾನೂನು ಕ್ರಮಗಳನ್ನು ತಗೆದುಕೊಳ್ಳುವಂತೆ ದೂರು ದಾಖಲಿಸಿದ್ದೆವು. ನಾವು ನೀಡಿದ ದೂರಿನನ್ವಯ ಪ್ರಕರಣದ ಸತ್ಯಾಸತ್ಯತೆಯ…
ತುಮಕೂರು: ಕುರುಬ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕøತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ. ಭಾರತ ದೇಶದಲ್ಲಿ ಬುಡಕಟ್ಟು ಜನಾಂಗವಾಗಿರುವ ಕುರುಬ ಸಮುದಾಯವು ಬ್ರಿಟಿಷರ ಆಳ್ವಿಕೆಯಲ್ಲೂ ಸಹ ಪರಿಶಿಷ್ಟ ಪಂಗಡ (ಎಸ್.ಟಿ) ಮೀಸಲಾತಿ ಪಟ್ಟಿಯಲ್ಲಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ಜೇನು ಕುರುಬ, ಕಾಡು ಕುರುಬ, ಗೊಂಡ, ರಾಜಗೊಂಡ ಮತ್ತು ಕುರುಬ (ಕೊಡಗು ಜಿಲ್ಲೆ) ಪರಿಶಿಷ್ಟ ಪಂಗಡ ಪಟ್ಟಿಯಲ್ಲಿದೆ. ಈ ಸೌಲಭ್ಯ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. 28 ನೇ ಪಟ್ಟಿಯಲ್ಲಿರುವ ಕುರುಬ (ಕೊಡಗು). ಇದನ್ನು ರಾಜ್ಯದ 30 ಜಿಲ್ಲೆಗಳಿಗೂ ವಿಸ್ತರಿಸಬೇಕೆಂದು ಇದರ ಸಂಬಂಧ ಹಲವು ವರ್ಷಗಳಿಂದ ಜಾಗೃತಿ ಸಭೆಗಳು,…
ಗುಬ್ಬಿ: ಕೋವಿಡ್ ವೈರಸ್ ಬಗ್ಗೆ ತಾತ್ಸರ ತಾಳಬಾರದು ಎಂದು ಸಭೆಯಲ್ಲಿ ಹೇಳಿದ್ದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರೇ ಈ ವೈರಸ್ಗೆ ಬಲಿಯಾಗಿದ್ದು ತೀವ್ರ ಆಘಾತಕಾರಿ ವಿಚಾರ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ವಿಷಾದಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಾಯಿ ಮತ್ತು ಅತ್ತೆಯವರನ್ನು ಕಳೆದುಕೊಂಡು ನಂತರ ತಾವೂ ಈ ಮಹಾಮಾರಿಗೆ ಬಲಿಯಾಗಿದ್ದ ನೋವಿನ ಸಂಗತಿ. ಅವರ ಸಾವು ನಮಗೆ ಪಾಠ ಕಲಿಸಲಿದೆ. ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿಕೊಂಡು ಸಾಮಾಜಿಕ ಅಂತರ ಕಾಯುವ ಸ್ವಯಂ ಪ್ರೇರಣೆ ನಿರ್ಧಾರ ಸಾರ್ವಜನಿಕರಲ್ಲಿ ಮೂಡಿಸುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ ಮಾತನಾಡಿ ಕಾರ್ಯಕರ್ತರೇ ಬಿಜೆಪಿಗೆ ಜೀವಾಳ ಎಂಬ ಅಂಶಕ್ಕೆ ಜೀವಂತ ಸಾಕ್ಷಿಯಾಗಿದ್ದ ಅಶೋಕ್ ಗಸ್ತಿ ಅಕಾಲಿಕ ಸಾವು ಪಕ್ಷಕ್ಕೆ ಪೆಟ್ಟು ನೀಡಿದಂತಾಗಿದೆ. ಈ ಜತೆಗೆ ಹಿಂದುಳಿದ ವರ್ಗಗಳ ಸಂಘಟನೆಯಲ್ಲಿ…
ತುಮಕೂರು: ರಾಷ್ಟ್ರದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಸಾಹೇ ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಹಾಗೂ ಆಸ್ಪತ್ರೆಯಲ್ಲಿ ‘ಕೊವೀಡ್ 19 ಪರಿಕ್ಷಾ ಪ್ರಯೋಗಾಲಯದ ಆರಂಭವನ್ನು ರಾಜ್ಯದ ವೈದ್ಯಕೀಯ ಸಚಿವ ಡಾ.ಸುಧಾಕರ್ ಸೆ. 19 ರಂದು ನೇರವೇರಿಸಲಿದ್ದಾರೆ. ನಗರದ ಸಮೀಪದ ಆಗಲಕೋಟೆಯಲ್ಲಿರುವ ಆಸ್ಪತ್ರೆಯಲ್ಲಿ ವಿಶೇಷ ಘಟಕವನ್ಮ್ನ ಸೆ.19ದಂದು ಬೆಳಿಗ್ಗೆ ಬೆಳಿಗ್ಗೆ 11ಕ್ಕೆ ಉದ್ಗಾಟನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಡಾ.ಜಿ.ಎಸ್. ಆನಂದ್, ಸಾಹೇ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಬಾಲಕೃಷ್ಣ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಕೇಶ್ಕುಮಾರ್ , ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗೇಂದ್ರಪ್ಪ, ಜಿಲ್ಲಾ ಸರ್ಜನ್ ಡಾ. ವೀರಭದ್ರಯ್ಯ, ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸಿಇಓ ಡಾ. ದೇವದಾಸ್ ಪಿ.ಕೆ, ಪ್ರಾಂಶುಪಾಲರಾದ ಡಾ. ಎ.ಜಿ.ಶ್ರೀನಿವಾಸಮೂರ್ತಿ, ವೈದಕೀಯ ಅಧೀಕ್ಷಕರಾದ ಎನ್.ಎಸ್.…
ತುಮಕೂರು: ತೆಂಗು ಉತ್ಪನ್ನಗಳ ಮೌಲ್ಯವರ್ಧನೆ ನಿಟ್ಟಿನಲ್ಲಿ ತಿಪಟೂರಿನಲ್ಲಿ ವಿಶೇಷ ಕೋರ್ಸ್ ಆರಂಭಿಸಲು ತುಮಕೂರು ವಿವಿ ಚಿಂತನೆ ನಡೆಸಿದೆ. ತಿಪಟೂರು ಹೊರವಲಯದ ರಂಗಾಪುರ ಹೊಸಳ್ಳಿ ಸರ್ವೇ ನಂ28ರಲ್ಲಿ ಸರ್ಕಾರ ವಿವಿಗೆ ನೀಡಿರುವ 15 ಎಕರೆ ಭೂಮಿ ಸರ್ವೇ ವೇಳೆ ಸಿಂಡಿಕೇಟ್ ಸದಸ್ಯ ರಾಜು ಈ ಬಗ್ಗೆ ಮಾಹಿತಿ ನೀಡಿದರು. ತಿಪಟೂರು ಸೇರಿ ತೆಂಗು ಸೀಮೆಯ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲು ಸರ್ಕಾರ ಭೂಮಿ ನೀಡಿದ್ದು, ಸದುಪಯೋಗ ಮಾಡಿಕೊಳ್ಳುವ ಹೊಣೆ ವಿವಿ ಮೇಲಿದೆ ಎಂದರು. ಇದರ ಮೊದಲ ಹಂತವಾಗಿ ಭೂಮಿ ಭದ್ರಪಡಿಸಿಕೊಳ್ಳುವ ಕಾರ್ಯಕ್ಕೆ ಈಗ ಚಾಲನೆ ನೀಡಲಾಗಿದ್ದು, ಭವಿಷ್ಯದಲ್ಲಿ ವಿವಿ ಆಂತರಿಕ ಸಂಪನ್ಮೂಲ ಹಾಗೂ ಸರ್ಕಾರದ ವಿಶೇಷ ಅನುದಾನ ಬಳಸಿಕೊಂಡು ಕ್ಯಾಂಪಸ್ ನಿರ್ಮಿಸುವ ಕನಸಿದೆ ಎಂದರು. ಸಿಂಡಿಕೇಟ್ ಸದಸ್ಯ ಟಿ.ಎಸ್.ಸುನೀಲ್ಪ್ರಸಾದ್ ಮಾತನಾಡಿ, ವಿವಿಗೆ ಸಂಬಂಧಪಟ್ಟ ಭೂಮಿ ತಿಪಟೂರು ಹಾಗೂ ಶಿರಾ ತಾಲೂಕಿನಲ್ಲಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ನೆರವಾಗುವಂತೆ ಶೈಕ್ಷಣಿಕ ವರ್ಷದಿಂದಲೇ ಹೊಸ ಕೋರ್ಸ್ ಆರಂಭಿಸಲು ವಿವಿ ಆಸಕ್ತಿ…
ತುಮಕೂರು: ಅಪೌಷ್ಟಿಕತೆಯನ್ನು ದೂರ ಮಾಡಲು ಪೌಷ್ಟಿಕ ಕೈತೋಟಗಳನ್ನು ಬೆಳೆಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜ್ ರೈತ ಮಹಿಳೆಯರಿಗೆ ಕರೆ ನೀಡಿದರು. “ರಾಷ್ಟ್ರೀಯ ಪೋಷಣ್ ಅಭಿಯಾನ} ಅಂಗವಾಗಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ(ಕೆವಿಕೆ), ಇಫ್ಕೊ(Iಈಈಅಔ) ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಇತ್ತೀಚೆಗೆ ಕೆವಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಜಾಗೃತಿ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಠಿಕತೆಯನ್ನು ದೂರ ಮಾಡಲು ತಮ್ಮ ಇಲಾಖೆಯಿಂದ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿದರಲ್ಲದೆ ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸಲು ಅಂಗನವಾಡಿ ಕಾರ್ಯಕತೆಯರು ಮನೆ-ಮನೆಗೆ ಭೇಟಿ ನೀಡಿ ಅರಿವು ಮೂಡಿಸುತ್ತಿದ್ದಾರೆ. ಕಾರ್ಯಕರ್ತೆಯರು ಮನೆಗೆ ಭೇಟಿ ನೀಡಿದಾಗ ಪೌಷ್ಟಿಕಯುಕ್ತ ಆಹಾರವನ್ನು ಸೇವಿಸಲು ನೀಡುವ ಸಲಹೆಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಮನವಿ ಮಾಡಿದರು. “ಕಾವೇರಿ ಕೂಗು ಅಭಿಯಾನ”ದ ಸಂಚಾಲಕ ಶರದ್ ಮಾತನಾಡಿ, ರೈತ ಮಹಿಳೆಯರು ಮರ ಆಧಾರಿತ ಕೃಷಿ…
ಗುಬ್ಬಿ: ಕಳೆದ 34 ವರ್ಷದ ನಂತರ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಕೇಂದ್ರ ಸರ್ಕಾರದ ಚಿಂತನೆಯು ಭಾರತೀಯ ಪರಂಪರೆ, ಸಂಸ್ಕøತಿಯನ್ನು ಅಳವಡಿಸುವ ಪಠ್ಯಕ್ರಮವಾಗಿದೆ. ಯಾವ ಗೊಂದಲವಿಲ್ಲದೇ ಸ್ಥಳೀಯವಾಗಿಯೇ ಪಠ್ಯಕ್ರಮವನ್ನು ಜಾರಿಗೆ ತರಲು ಆಯಾ ರಾಜ್ಯ ಸರ್ಕಾರವು ಸ್ವತಂತ್ರವಾಗಿದೆ ಎಂದು ವಿದ್ಯಾಭಾರತಿ ಕ್ಷೇತ್ರೀಯ ಸಹ ಸಂಘಟನಾ ಕಾರ್ಯದರ್ಶಿ ಜಿ.ಆರ್.ಜಗದೀಶ್ ತಿಳಿಸಿದರು. ಪಟ್ಟಣದ ಶ್ರೀ ಚಿದಂಬರಾಶ್ರಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರ ಹೊಸ ಶಿಕ್ಷಣ ನೀತಿಯ ಬಗ್ಗೆ ಹಲವು ಗೊಂದಲ ಮೂಡಿದ್ದು ಏಕ ರೂಪ ಶಿಕ್ಷಣ ಎನ್ನುವುದನ್ನು ಮತ್ತೊಂದು ರೀತಿ ಬಿಂಬಿಸಲಾಗುತ್ತಿದೆ. ಏಕ ರೂಪ ಸಿದ್ದಾಂತ ಅಳವಡಿಸಿಕೊಳ್ಳಲು ಮಾತ್ರ ಸೂಚಿಸಲಾಗಿ ನಮ್ಮ ಭಾರತೀಯ ಶಿಕ್ಷಣಕ್ಕೆ ಮಹತ್ವ ನೀಡಲು ಈ ನೀತಿ ಮುಂದಾಗಿದೆ. ಮೆಕಾಲೆ ಆಂಗ್ಲ ಮಾದರಿಯಿಂದ ಹೊರ ಬಂದು ಉದ್ಯೋಗಾಧಾರಿತ ಶಿಕ್ಷಣವನ್ನು ಮೌಲ್ಯಾಧಾರಿತ ಶಿಕ್ಷಣವಾಗಿ ಮಾರ್ಪಡಿಸಿ ನಮ್ಮ ಪರಂಪರೆಯನ್ನು ಉಳಿಸುವ ಕೆಲಸ ಮಾಡಲಾಗುತ್ತಿದೆ. ಇಲ್ಲಿ ಯಾವುದೇ ಕಡ್ಡಾಯ ಎಂಬ ಅಂಶವಿಲ್ಲ. ಉತ್ತಮ ಸಲಹೆಯ ನೀತಿ ಅಳವಡಿಸಿಕೊಳ್ಳಲು…
ತುಮಕೂರು: ಜಿಲ್ಲೆಯಲ್ಲಿ ಸೆ.21ರಿಂದ ನಡೆಯುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಸುರಕ್ಷಿತ ಹಾಗೂ ಯಶಸ್ವಿಯಾಗಿ ಜರುಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪರವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸೆಪ್ಟಂಬರ್ 21 ರಿಂದ 28 ರವರೆಗೆ ನಡೆಯುವ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯಲ್ಲಿ ಯಾವುದೇ ಲೋಪದೋಷಗಳು ಕಂಡು ಬರದಂತೆ ನಿಗಾವಹಿಸಬೇಕು. ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗೃತ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಬೇಕು ಎಂದರು. ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಪರೀಕ್ಷಾ ಕೇಂದ್ರದ ಹೊರಾಂಗಣ ಮತ್ತು ಒಳಾಂಗಣ ಕೊಠಡಿಗಳನ್ನು ಸ್ವಚ್ಚಗೊಳಿಸಿ ಸ್ಯಾನಿಟೈಸ್ ಸಿಂಪಡಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಕೋವಿಡ್-19 ಸೋಂಕಿತ ಮಕ್ಕಳಿಗೆ ಪ್ರತ್ಯೇಕವಾಗಿ ಕೋವಿಡ್ ಕೇರ್ ಸೆಂಟರ್ಗಳಲ್ಲಿ…
ಮಧುಗಿರಿ: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಎಟಿಎಂ ಕಾರ್ಡ್ನ್ನು ಅದಲು -ಬದಲು ಮಾಡಿ ಗಾರ್ಮೆಂಟ್ಸ್ ಮಹಿಳೆಯೊಬ್ಬರ ಖಾತೆಯಿಂದ ಇಪ್ಪತ್ತು ಸಾವಿರ ಹಣ ಡ್ರಾ ಮಾಡಿ ಮೋಸ ಮಾಡಿದ್ದ ವ್ಯಕ್ತಿಯನ್ನು ಮಧುಗಿರಿ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ನ್ಯಾಯದೀಶರು ಅದೇಶಿಸಿದ್ದಾರೆ. ಆಚೇನಹಳ್ಳಿ ಗ್ರಾಮದ ನಾಗರತ್ನಮ್ಮ ಕರ್ನಾ ಟಕ ಬ್ಯಾಂಕ್ ಖಾತೆಯಿಂದ ಇಪ್ಪತ್ತು ಸಾವಿರ ರೂಗಳನ್ನು ಬಿಡಿಸಿಕೊಂಡು ಬರುವಂತೆ ಅವರ ತಂದೆಯ ಮೂಲಕ ಎಟಿಎಂ ಕಾರ್ಡನ್ನು ಕೊಟ್ಟು ಕಳುಹಿಸಿದ್ದಾರೆ. ಎಟಿಎಂನಲ್ಲಿ ಹಣ ಡ್ರಾ ಮಾಡಲು ಬಾರದಿದ್ದಾಗ ಪಕ್ಕದಲ್ಲಿದ್ದ ವ್ಯಕ್ತಿಗೆ ಎಟಿಎಂ ಕಾರ್ಡ್ ನೀಡಿ ಹಣ ಡ್ರಾ ಮಾಡುವಂತೆ ಹೇಳಿದ್ದಾರೆ. ಆ ವ್ಯಕ್ತಿ ತನ್ನ ಬಳಿ ಇದ್ದ ಹಳೆ ಕಾರ್ಡನ್ನು ನೀಡಿ ಈ ಎಟಿಎಂ ಕಾರ್ಡ್ ನ್ನು ಬೇರೆ ಎಟಿಎಂ ನಲ್ಲಿ ಬಳಸಿ ಹಣ ಡ್ರಾ ಮಾಡಿದ್ದಾರೆ. ಆದರೆ ಹಣ ಡ್ರಾ ಆಗಿರುವ ಬಗ್ಗೆ ಗ್ರಾಹಕರಿಗೆ ದೂರವಾಣಿ ಮೆಸೇಜ್ ಬಂದಿದೆ. ತಂದೆಗೆ ಹಣ ದೊರೆತ್ತಿಲ್ಲ. ಈ…










