Author: News Desk Benkiyabale

ತುಮಕೂರು:      ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಗಳಲ್ಲಿ ನಿಂತಿರುವ ಲಾರಿಗಳಲ್ಲಿ ಡೀಸೆಲ್ ಕದಿಯುತಿದ್ದ ಕಳ್ಳರು ಸಬ್ ಇನ್ಸ್ಪೆಕ್ಟರ್ ಕೈಗೆ ಸಿಕ್ಕಿದರೂ ಸಹ ಪ್ರಕರಣ ದಾಖಲಿಸದೆ ಬಿಟ್ಟು ಕಳುಹಿಸಿರುವ ಆಪಾದನೆ ತುಮಕೂರು ತಿಲಕ್ ಪಾರ್ಕ್ ವೃತ್ತದ ಹೊಸ ಬಡಾವಣೆ ಪೆÇಲೀಸ್ ಠಾಣೆಯಲ್ಲಿ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.       ಇದರ ಪೂರ್ಣ ವಿವರಗಳನ್ನು ನೋಡಿದರೆ ಪೊಲೀಸರೇ ಈ ರೀತಿ ನಡೆದುಕೊಂಡರೆ ಇನ್ನೂ ಬೇರೆಯವರ ಕಥೆಯೇನು ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.       ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬದಿಗಳಲ್ಲಿ ನಿಲ್ಲಿಸಿರುವ ವಾಹನಗಳನ್ನು ಗುರಿಯಾಗಿರಿಸಿಕೊಂಡು ಡೀಸೆಲ್ ಕದಿಯುತಿದ್ದ ಕಳ್ಳರು ತುಮಕೂರು ಕಡೆ ಬರುತ್ತಿದ್ದಾಗ ರಾತ್ರಿಯ ಪಾಳೆಯದಲ್ಲಿ ಕರ್ತವ್ಯ ನಿರತ ಮಹಿಳಾ ಸಬ್ ಇನ್ಸ್ಪೆಕ್ಟರ್ ಕಾರನ್ನು ತಡೆದು ತಪಾಸಣೆಗೊಳಪಡಿಸಿ ಅನುಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದಾಗÀ ಸಿಕ್ಕಿರುವ ವ್ಯಕ್ತಿಗಳು ಕಳ್ಳತನದ ಕಸುಬಿನವರು ಎನ್ನುವುದು ತಿಳಿಯುತ್ತದೆ ಆಗ ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ ಎನ್ನುವುದು ಹಿರಿಯ ಅಧಿಕಾರಿಗಳಿಗೆ ತಿಳಿದಿರಲಿಲ್ಲ…

Read More

ಹುಳಿಯಾರು:        ಹುಳಿಯಾರು ಹೋಬಳಿಯ ಯಳನಾಡು ಗ್ರಾಪಂ ವ್ಯಾಪ್ತಿಯ ಕಾಚನಕಟ್ಟೆ ಗಂಗಮ್ಮನಕೆರೆ ಸುತ್ತಮುತ್ತ ಕಳೆದ 2 ತಿಂಗಳಿಂದ ಆಗಾಗ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬುಧವಾರ ಬೆಳಗಿನ ಜಾವ ಬಿದ್ದಿದೆ.       2 ತಿಂಗಳಿಂದ ದಿನಗಳಿಂದ ಸಾರ್ವಜನಿಕವಾಗಿ ಚಿರತೆ ಆಗಾಗ ಕಾಣಿಸಿಕೊಂಡು ಇಲ್ಲಿನ ಜನರಲ್ಲಿ ಆತಂಕ ಮೂಡಿಸಿತ್ತು. ಅಲ್ಲದೆ ಸಾಕುಪ್ರಾಣಿಗಳನ್ನು ತಿಂದು ಭಯದ ವಾತವರಣ ನಿರ್ಮಾಣವಾಗಿತ್ತು. ಈ ಬಗ್ಗೆ ಸ್ಥಳೀಯರು ಬುಕ್ಕಪಟ್ಟಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.       ಈ ಹಿನ್ನೆಲೆಯಲ್ಲಿ ಸ್ಥಳಿಯರು ಮಾಹಿತಿ ಯಂತೆ ಚಿರತೆ ನಿತ್ಯ ಓಡಾಡುವ ಜಾಗದಲ್ಲಿ ಅರಣ್ಯ ಇಲಾಖೆ ಬೋನನ್ನು ಇಟ್ಟು ಸೆರೆ ಹಿಡಿಯಲು ಮುಂದಾಗಿತ್ತು. ಅಂತಿಮವಾಗಿ ಆಹಾರ ಅರಸುತ್ತಾ ಬಂದ ಚಿರತೆ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.       ಮುಂಜಾನೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತಿಪಟೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ.ಜಿ.ರವಿ ಅವರ ಮಾರ್ಗದರ್ಶನದಂತೆ…

Read More

ತುಮಕೂರು:       ಶಿರಾ ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ರಾಜಕೀಯ ಪಕ್ಷಗಳು ಮೈಕೊಡವಿ ಮೇಲೆದ್ದಿವೆ. ಸಾವಿನ ಸೂತಕ, ಅನುಕಂಪದ ಅಲೆ ದಿವಂಗತ ಶಾಸಕ ಬಿ.ಸತ್ಯನಾರಾಯಣ್‍ರವರ ಕುಟುಂಬದ ಮೇಲಿದೆ.       ಅನುಕಂಪದ ಮತಬುಟ್ಟಿಯನ್ನ ಭದ್ರಪಡಿಸಿಕೊಂಡು ಮತ್ತೆ ತಮ್ಮ ಪಕ್ಷದ ಶಾಸಕ ಸ್ಥಾನದ ಲೆಕ್ಕ ಹಾಗೆಯೇ ಉಳಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಜಾತ್ಯಾತೀತ ಜನತಾದಳದ ವರಿಷ್ಠ ದೇವೆಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದ್ದಾರೆ. ಅದಕ್ಕಾಗಿಯೇ ಶಾಸಕ ಬಿ.ಸತ್ಯನಾರಾಯಣ್‍ರವರ ಮಗ ಸತ್ಯಪ್ರಕಾಶ್‍ರವರನ್ನು ಕಣಕ್ಕಿಳಿಸುವ ನಿರ್ಧಾರ ಬಹುಶಃ ಅಂತಿಮಗೊಂಡಂತಿದೆ. ನಿರ್ವಿವಾದಿತ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸತ್ಯಪ್ರಕಾಶ್ ಸ್ಪರ್ಧಾಳುವಾಗುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ ಪಕ್ಷದ ಟಿಕೇಟನ್ನೇ ನಂಬಿಕೊಂಡಿದ್ದ ಕೆಲವರು ನಿರಾಸೆಯಲ್ಲಿ ನಲುಗುವಂತಾಗಿದೆ.          ಕುಂಚಿಟಿಗ ಗೌಡರ ಪ್ರಭಲ ನಾಯಕ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಕಾಂಗ್ರೆಸ್‍ನ ಏಕಮೇವ ಅಭ್ಯರ್ಥಿ ಎಂದುಕೊಂಡಿದ್ದರು. ಆದರೆ ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸಾರುವ ಸಲುವಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಾನು ಸಹ…

Read More

ಮಧುಗಿರಿ:       ಚಿಕ್ಕ ಮಕ್ಕಳಿರುವ ಅಂಗನವಾಡಿ ಸುತ್ತಮುತ್ತ ಪರಿಸರ ಶುಭ್ರವಾಗಿ ಇರಬೇಕು, ಆದರೆ ಪಟ್ಟಣದ ಎಂಟನೇ ವಾರ್ಡಿನಲ್ಲಿರುವ ಅಂಗನವಾಡಿ ಕೇಂದ್ರದ ಸುತ್ತಲೂ ಪರಿಸರ ಕಲುಷಿತದಿಂದ ಕೂಡಿದೆ.       ನಿರೀಕ್ಷಣಾ ಮಂದಿರ ಮುಂಭಾಗದ ರಸ್ತೆಯಿಂದ ಜಿಲ್ಲಾ ಪಂಚಾಯತ್ ಇಇ ಕಚೇರಿಯ ಹಿಂಭಾಗವಿರುವ ಬೆಂಕಿಪುರ ಅಂಗನವಾಡಿ ಕೇಂದ್ರದ ಸಮೀಪದಲ್ಲೇ ಹಂದಿಗಳ ವಾಸ ಸ್ಥಳವಾಗಿದ್ದು. ರಸ್ತೆಯೂ ಸರಿ ಇಲ್ಲ, ಹಂದಿಗಳು ವಾಸ ಸ್ಥಳವಾಗಿರುವುದರಿಂದ ಮಕ್ಕಳಿಗೆ ಎಲ್ಲಿ ಮೆದುಳು ಜ್ವರ ಬರುವುದೆಂಬ ಆತಂಕ ಪೋಷಕರಲ್ಲಿ ಉಂಟಾಗಿದೆ.       ಇತ್ತೀಚೆಗೆ ಜಂತುಹುಳು ನಿವಾರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ಈ ಅಂಗನವಾಡಿ ಕೇಂದ್ರದಿಂದಲೇ ಆರಂಭಿ ಸಬೇಕೆಂದು ತಹಶಿಲ್ದಾರರು ಸ್ಥಳ ನಿಗದಿಪಡಿಸಿದ್ದರು. ಆದರೆ ಇಲ್ಲಿನ ಅವ್ಯವಸ್ಥೆ ಕಂಡು ಈ ಕಾರ್ಯಕ್ರಮವನ್ನು ನಿರೀಕ್ಷಣಾ ಮಂದಿರಕ್ಕೆ ಸ್ಥಳಾಂತರಿಸಲಾಯಿತು. ಉಪವಿಭಾಗಾಧಿಕಾರಿಗಳು ಏನಾದರೂ ಈ ಸ್ಥಳಕ್ಕೆ ಭೇಟಿ ನೀಡಿದರೆ ವಾಸ್ತವಾಂಶ ಅರಿಯುತ್ತಿದ್ದರೂ ಇದಕ್ಕೆ ಅವಕಾಶವೇ ದೊರೆಯಲಿಲ್ಲ. ಇನ್ನೂ ಸಿಡಿಪಿಒ ಕಚೇರಿ ಸಮೀಪದಲ್ಲಿದ್ದರೂ, ಈ ಅಂಗನವಾಡಿ ಕೇಂದ್ರಕ್ಕೆ ಒಮ್ಮೆಯೂ ಸಿಡಿಪಿಒ ಭೇಟಿ…

Read More

ಗುಬ್ಬಿ:       ಗ್ರಾಮಗಳ ಸಂಪರ್ಕ ರಸ್ತೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಿರ್ವಹಿಸಿ 3.17 ಕೋಟಿ ರೂಗಳ ಅವ್ಯವಹಾರ ಮಾಡಿದ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮವಹಿಸಬೇಕು ಎಂದು ತಾಲ್ಲೂಕಿನ ಮಲ್ಲೇನಹಳ್ಳಿ ಹಟ್ಟಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.       ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ನಮ್ಮ ಊರು ನಮ್ಮ ರಸ್ರೆ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಹಾಗೂ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಜಂಟಿಯಾಗಿ ರೂಪಿಸಿ ತಾಲ್ಲೂಕಿನ ಜೈನಿಗರಹಳ್ಳಿಯಿಂದ ಸೋಮಲಾಪುರ ಸಂಪರ್ಕಿಸುವ 5.10 ಕಿಮೀ ದೂರ ಕ್ರಮಿಸುವ ಡಾಂಬರ್ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ವರ್ಷವಾದರೂ ಕೆಲಸ ಆರಂಭವಾಗಲಿಲ್ಲ. ನಂತರದಲ್ಲಿ ತರಾತುರಿಯಲ್ಲಿ ಈ ವರ್ಷದ ಮಾರ್ಚ್‍ನಲ್ಲಿ ಕೆಲಸ ಆರಂಭಿಸಿ ಮೊದಲಿನಿಂದಲೂ ಕಳಪೆ ಕಾಮಗಾರಿಯನ್ನು ಮಾಡುತ್ತಲೇ ಬಂದಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ದೂರಿದರೂ ಪ್ರಯೋಜನವಾಗಿಲ್ಲ.        ಜನಪ್ರತಿನಿಧಿಗಳಿಂದಲೂ ತಡೆಯಲು ಸಾಧ್ಯವಾಗದೇ ಮೂರ್ನಾಲ್ಕು ತಿಂಗಳಲ್ಲೇ ರಸ್ತೆ ಡಾಂಬರ್ ಬರಿಗೈಗೆ ಬರುತ್ತಿತ್ತು. ಮಳೆಗಾಲದಲ್ಲಿ ಸಂಪೂರ್ಣ ಹಾಳಾಗಿದೆ.…

Read More

ತುಮಕೂರು:       ಕರ್ನಾಟಕ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಒತ್ತಾಯ ಪೂರ್ವಕವಾಗಿ ಕೇಂದ್ರ ಸರ್ಕಾರ ನಡೆಸಿದ ಹಿಂದಿ ಸಪ್ತಾಹ ಕಾರ್ಯಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.       ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಉಪವಿಭಾಗಾಧಿಕಾರಿ ಅಜಯ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.       ಭಾಷವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ರಾಜ್ಯಗಳ ಒಕ್ಕೂಟ ದೇಶವಾಗಿರುವ ಭಾರತ ಹಲವಾರು ಭಾಷೆ ಮತ್ತು ವಿಭಿನ್ನ ಸಂಸ್ಕøತಿಯನ್ನು ಹೊಂದಿರುವ ವಿವಿಧತೆಯಲ್ಲಿ ಏಕತೆ ಹೊಂದಿರುವ ಪ್ರಜಾಪ್ರಭುತ್ವ ದೇಶವಾಗಿದೆ. ಸ್ವಾತಂತ್ರ್ಯ ನಂತರ ರಚನೆಯಾದ ಪ್ರಜಾಪ್ರಭುತ್ವ ವ್ಯವಸ್ಥೆಯ ಕೇಂದ್ರ ಸರ್ಕಾರ ಮೊದಲಿನಿಂದಲೂ ಹಿಂದಿಯನ್ನು ಇಡೀ ದೇಶದಲ್ಲಿ ಬೆಳೆಸುವ ಉದ್ದೇಶದಿಂದ ದೇಶದ ಎಲ್ಲ ಭಾಷೆ ಗಳ ಜನರ ತೆರಿಗೆ ಹಣದಲ್ಲಿ ಪ್ರತಿ ವರ್ಷ ಸೆ. 14 ರಂದು ಕರ್ನಾಟಕ ಸೇರಿದಂತೆ ಹಿಂದಿಯೇತರ ದ್ರಾವಿಡ ಭಾಷೆಗಳನ್ನು ಮಾತನಾಡುವ…

Read More

ತುಮಕೂರು:      ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಟಾನಕ್ಕೆ ಆಗ್ರಹಿಸಿ ಮಾದಿಗ ದಂಡೋರ-ಎಂಆರ್‍ಹೆಚ್ಎಸ್ ವತಿಯಿಂದ ನಗರದಲ್ಲಿರುವ ಇಬ್ಬರು ಶಾಸಕರುಗಳ ಮನೆ ಮುಂದೆ ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು. ಮಾದಿಗ ದಂಡೋರ-ಎಂಆರ್‍ಹೆಚ್ಎಸ್‍ನ ರಾಜ್ಯ ವಕ್ತಾರ ರಾಘವೇಂದ್ರಸ್ವಾಮಿ, ಜಿಲ್ಲಾಧ್ಯಕ್ಷ ಜೆ.ಸಿ. ರಾಜಣ್ಣ ನೇತೃತ್ವದಲ್ಲಿ ಸಮಾವೇಶಗೊಂಡ ದಂಡೋರದ ಪದಾಧಿಕಾರಿಗಳು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹಾಗೂ ನಗರದಲ್ಲಿ ವಾಸವಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು. ಒಳ ಮೀಸಲಾತಿ ಜಾರಿ ಸಂಬಂಧ ಸುಪ್ರೀಂ ಕೋರ್ಟ್‍ನ ಪಂಚ ನ್ಯಾಯಮೂರ್ತಿಗಳ ಪೀಠದ ತೀರ್ಪಿನಂತೆ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಶಾಸನ ಸಭೆಯಲ್ಲಿ ಅಂಗೀಕರಿಸಬೇಕು. ಈ ಕುರಿತು ಶಾಸಕರುಗಳು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು. ನಂತರ ಇಬ್ಬರು ಶಾಸಕರಿಗೆ ಪ್ರತ್ಯೇಕವಾಗಿ ಮಾದಿಗ ದಂಡೋರದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಾಸಕರಾದ ಜ್ಯೋತಿಗಣೇಶ್ ಹಾಗೂ ಎಸ್.ಆರ್. ಶ್ರೀನಿವಾಸ್ ಅವರು…

Read More

 ಹುಳಿಯಾರು:      ಹುಳಿಯಾರು ಹೋಬಳಿಯ ತಿಮ್ಲಾಪುರ ಗ್ರಾಪಂ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ರಸ್ತೆಯು ಅನೇಕ ವರ್ಷಗಳಿಂದ ದುರಸ್ತಿಯಾಗದೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಾರ್ವಜನಿಕರ ಸಂಚಾರಕ್ಕೆ ಸಂಚಕಾರ ಉಂಟಾಗಿದ್ದರೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.       ಈ ರಸ್ತೆಯು ಹುಳಿಯಾರು ಮಾರ್ಗವಾಗಿ ಹೋಗುವ ರಾಷ್ಟ್ರೀಯ ಹೆದ್ದಾರಿ 234 ಕ್ಕೆ ಸೇರಿಕೊಳ್ಳುತ್ತದೆ. ಅಲ್ಲದೆ ಈ ಮಾರ್ಗವಾಗಿ ಹೊಸಹಳ್ಳಿ, ಹೊಸಹಳ್ಳಿಪಾಳ್ಯ, ಸೀಗೆಬಾಗಿ ಗ್ರಾಮಗಳ ಗ್ರಾಮಸ್ಥರು ಪಟ್ಟಣಕ್ಕೆ ಓಡಾಡುತ್ತಾರೆ. ಈ ಊರಿಗೆ ಬಸ್ ವ್ಯವಸ್ಥೆಯಿಲ್ಲದಿದ್ದರಿಂದ ಬೈಕ್ ಅಥವಾ ನಡೆದುಕೊಂಡೇ ಓಡಾಡಬೇಕಿದೆ.       ಆದರೆ ಮಳೆಗಾಲದಲ್ಲಿ ಬಿದ್ದ ಮಳೆಯ ನೀರು ಈ ರಸ್ತೆಯ ಮೇಲೆ ನಿಂತು ರಸ್ತೆಯು ಕೆಸರು ಗದ್ದೆಯಂತಾಗುತ್ತದೆ. ವೃದ್ಧರು, ಮಕ್ಕಳು, ವಿದ್ಯಾರ್ಥಿಗಳು ಕೆಸರು ಸಿಡಿಸಿಕೊಂಡು ಓಡಾಡುವ ಅನಿವಾರ್ಯತೆ ನಿರ್ಮಾಣವಾಗಿದೆ. ಬೈಕ್ ಸವಾರರು ಬಿದ್ದು ಪೆಟ್ಟು ಮಾಡಿಕೊಂಡ ನಿದರ್ಶನಗಳೂ ಸಾಕಷ್ಟಿವೆ.       ರಸ್ತೆ ದುರಸ್ತಿಗೆ ಗ್ರಾಮಸ್ಥರು ಹಲವಾರು ವರ್ಷಗಳಿಂದ ಸಾಕಷ್ಟು ಬಾರಿ ಮನವಿ ಮಾಡಿದರೂ ಜನಪ್ರತಿ…

Read More

ತುಮಕೂರು:        ರೈತರು ತಾವು ಬೆಳೆದ ಬೆಳೆಯ ವಿವರಗಳನ್ನು “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್”ಗೆ ಅಪ್‍ಲೋಡ್ ಮಾಡಲು ಸೆಪ್ಟೆಂಬರ್ 23 ಕಡೆಯ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜ ಸುಲೋಚನ ತಿಳಿಸಿದ್ದಾರೆ.       ರೈತರೇ ಸ್ವತಂತ್ರವಾಗಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಛಾಯಾಚಿತ್ರ ಮತ್ತು ಬೆಳೆ ವಿವರಗಳನ್ನು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ಗೆ ನಿಗಧಿತ ಅವಧಿಯೊಳಗೆ ಅಪ್‍ಲೋಡ್ ಮಾಡಲು ಅವಕಾವಿದ್ದು, ಜಿಲ್ಲೆಯ ರೈತರು ಸದುಪಯೋಗಪಡಿಸಿಕೊಳ್ಳಬೇಕು. ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‍ಗೆ ತಮ್ಮ ಬೆಳೆಗಳ ವಿವರಗಳನ್ನು ಅಪ್‍ಲೋಡ್ ಮಾಡಿದಲ್ಲಿ ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಹಾಗೂ ನಫೆಡ್ ಮೂಲಕ ಕೊಬ್ಬರಿ ಖರೀದಿ ನೋಂದಣಿಗೆ ಬೆಳೆ ಸಮೀಕ್ಷೆ ಆಧಾರದ ಮೇಲೆ ಅವಕಾಶ ದೊರೆಯಲಿದೆ.       ಅಲ್ಲದೆ ಸೆಪ್ಟೆಂಬರ್ 12 ರಿಂದ ಖಾಸಗಿ ನಿವಾಸಿಗಳನ್ನು ಬಳಸಿಕೊಂಡು ರೈತರೇ ಖುದ್ದು ತಮ್ಮ ಬೆಳೆ ವಿವರಗಳನ್ನು ಅಪ್‍ಲೋಡ್ ಮಾಡುವ ಅವಕಾಶವನ್ನು ಸಹ ಕಲ್ಪಿಸಲಾಗಿದ್ದು,…

Read More

ಗುಬ್ಬಿ:       ಹಲವಾರು ವರ್ಷಗಳಿಂದ ಇತ್ಯರ್ಥವಾಗದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಎಸ್.ಆರ್.ಶ್ರೀನಿವಾಸ್ ಎರಡು ಬಣಗಳಾಗಿದ್ದ ರೈತರೊಟ್ಟಿಗೆ ಚರ್ಚಿಸಿ ವಿಶೇಷ ಅನುದಾನದಲ್ಲಿ ಸಿಸಿ ರಸ್ತೆಯನ್ನು ನಿರ್ಮಿಸಿ ಕೊಡುವ ಭರವಸೆಯೊಂದಿಗೆ ಸುಖಾಂತ್ಯ ಕಾಣಿಸಿದರು.       ತಾಲ್ಲೂಕಿನ ಚೇಳೂರು ಹೋಬಳಿ ಸಿ.ಹರುವೇಸಂದ್ರಪಾಳ್ಯ ಗ್ರಾಮದಲ್ಲಿ ಗಂಗಣ್ಣ ಸಹೋದರರ ಮನೆಗಳಿಗೆ ತೆರಳಲು ಇದ್ದ ರಸ್ತೆ ವಿವಾದ ತಾರಕಕ್ಕೇರಿ ನ್ಯಾಯಾಲಯ ಮೆಟ್ಟಿಲೇರಿದ್ದರು. ಈ ನಡುವೆ ಅಲ್ಲಿನ ಖರಾಬುಹಳ್ಳ ತೆರವು ಮಾಡಲು ಅರ್ಜಿ ಸಲ್ಲಿಸಲಾಗಿದ್ದ ಕಾರಣ ರಸ್ತೆಗಾಗಿ ನಡೆದ ತಿಕ್ಕಾಟಕ್ಕೆ ಹಲವಾರು ಮನೆಗಳಿಗೆ ಹೋಗಲು ರಸ್ತೆ ಇಲ್ಲವಾಗುವ ಬಗ್ಗೆ ಅರಿತು ಕೂಡಲೇ ಸ್ಥಳಕ್ಕೆ ಆಗಮಿಸಿದ ಶಾಸಕರು ಅಧಿಕಾರಿಗಳಿಂದ ಆಗಬೇಕಿದ್ದ ಹಳ್ಳ ತೆರವು ಕೆಲಸ ತಾತ್ಕಾಲಿಕವಾಗಿ ನಿಲ್ಲಿಸಿ ವಿವಾದ ಮಾಡಿಕೊಂಡ ರೈತರೊಟ್ಟಿಗೆ ಎರಡು ತಾಸು ಚರ್ಚಿಸಿ ರಸ್ತೆ, ಖರಾಬು ಸ್ಥಳಗಳನ್ನು ಪರಿಶೀಲಿಸಿ ಅಂತಿಮವಾಗಿ ಎರಡೂ ಗುಂಪುಗಳಿಂದ ಐದು ಅಡಿಗಳಂತೆ ಸ್ಥಳ ಬಿಟ್ಟುಕೊಡಬೇಕು. ಒಟ್ಟು 10 ಅಡಿಗಳೊಂದಿಗೆ ದೊಡ್ಡ ಸಿಸಿ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ…

Read More