Author: News Desk Benkiyabale

ತುಮಕೂರು:       ರೈತರಿಗೆ ಶೇ.10ರಷ್ಟು ಬಡ್ಡಿಗೆ ಸಾಲವನ್ನು ನೀಡಿ, ಸಾಲ ಮರುಪಾವತಿಸಲು ಆಗದೇ ಇದ್ದಾಗ ರೈತರ ಭೂಮಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿರುವ ಮೀಟರ್ ಬಡ್ಡಿ ದಂಧೆಕೋರರಿಂದ ರೈತರಿಗೆ ರಕ್ಷಣೆ ನೀಡಬೇಕು ಹಾಗೂ ರೈತರಿಗೆ ಆಗುತ್ತಿರುವ ಶೋಷಣೆಯನ್ನು ತಪ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಕೃಷಿ ರೈತ ಬಂಧು ವೇದಿಕೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.      ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ್ ಮೇಳೆಕಲ್ಲಹಳ್ಳಿ, ಶಿರಾ ತಾಲ್ಲೂಕು ಹುಂಜನಾಳು ಗ್ರಾಮದ ಜೈಶೀಲ ಎಂಬಾಕೆ ರೈತರಿಗೆ ಸಾಲವನ್ನು ನೀಡಿ, ಬಡ್ಡಿ, ಚಕ್ರ ಬಡ್ಡಿ, ಸುಸ್ತಿ ಬಡ್ಡಿ ಎಂದು ಕಿರುಕುಳ ನೀಡಿ, ರೈತರ ಭೂಮಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿರುವುದಲ್ಲದೆ, ಸಾಲ ತೀರುವವರೆಗೆ ರೈತರನ್ನು ತನ್ನ ಮನೆಯಲ್ಲಿ ಜೀತಕ್ಕೆ ಇಟ್ಟುಕೊಂಡು ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.       ಗುಬ್ಬಿ ತಾಲ್ಲೂಕಿನ ಶಂಕರಮೂರ್ತಿ ಎಂಬ ರೈತನಿಗೆ 1 ಲಕ್ಷ ರೂ…

Read More

       ತಿಪಟೂರು ತಾಲ್ಲೂಕು ಮಡೆನೂರು ಗ್ರಾಮಲೆಕ್ಕಿಗ ರವಿಶಂಕರ್ ರವರು 5 ಸಾವಿರ ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ ಉಪಾಧೀಕ್ಷಕರಾದ ಉಮಾಶಂಕರ್ ರವರು ದಾಳಿ ಮಾಡಿ ಬಂಧಿಸಿದ್ದಾರೆ.         ಮಡೆನೂರು ಗ್ರಾಮಲೆಕ್ಕಿಗರ ವ್ಯಾಪ್ತಿಯಲ್ಲಿ ಬರುವ ಕಂದಾಯದ ಜಮೀನನ್ನು ದೂರುದಾರರಾದ ಉಮೇಶ್ ರವರ ಅಕ್ಕ ಶುದ್ಧ ಕ್ರಯಕ್ಕೆ ಖರೀದಿ ಮಾಡಿದ್ದು, ಖರೀದಿದಾರರ ಹೆಸರಿಗೆ ಸ್ವತ್ತನ್ನು ಖಾತೆ ಬದಲಾವಣೆ ಮಾಡಲು 30 ಸಾವಿರ ಲಂಚದ ಹಣಕ್ಕೆ ಒತ್ತಾಯಿಸಿದ್ದು, ದೂರುದಾರರಾದ ಉಮೇಶ್ ರವರು ಮೊದಲ ಕಂತಾಗಿ 5 ಸಾವಿರ ರೂ.ಗಳನ್ನು ಫೋನ್ ಪೇ ಮುಖಾಂತರ ಗ್ರಾಮಲೆಕ್ಕಿಗ ರವಿಶಂಕರ್ ರವರ ಖಾತೆಗೆ ವರ್ಗಾವಣೆ ಮಾಡಿದ್ದು ಉಳಿಕೆ 25 ಸಾವಿರ ರೂ.ಗಳ ಬಾಬ್ತು 2 ನೇ ಕಂತಾಗಿ ಪಾವತಿಸುವ ವೇಳೆ ತುಮಕೂರು ಭ್ರಷ್ಟಾಚಾರ ನಿಗ್ರಹದಳದ ಉಪಾದೀಕ್ಷಕ ಬಿ.ಉಮಾಶಂಕರ್ ರವರು ನೆರಳು ಸಾಕ್ಷಿಗಳ ಸಮ್ಮುಖದಲ್ಲಿ ಹಣದ ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೂರುದಾರರಾದ ಉಮೇಶ್ ರವರು ಮಡೆನೂರು ಗ್ರಾಮಲೆಕ್ಕಿಗ ರವಿಶಂಕರ್ ರವರು ಸರ್ಕಾರಿ ಕೆಲಸ…

Read More

ತುಮಕೂರು:       ಯಾವುದೋ ಅಲೆಯಲ್ಲಿ ಗೆದ್ದವರ ಯೋಗ್ಯತೆ ಏನು ಎಂಬುದು ಮತದಾರರಿಗೆ ಒಂದೇ ವರ್ಷದಲ್ಲಿ ತಿಳಿಯಿತು. ಕ್ಷೇತ್ರದ ಕ್ರಷರ್, ಗ್ರಾನೈಟ್ ಮಾಲೀಕರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ ಎಂದು ಶಾಸಕ ಗೌರಿಶಂಕರ್ ಅವರ ಹೆಸರು ಹೇಳದೆ ಮಾಜಿ ಶಾಸಕ ಬಿ.ಸುರೇಶ್‍ಗೌಡ ಹರಿಹಾಯ್ದರು.       ನಗರದ ಕ್ಯಾತ್ಸಂದ್ರದಲ್ಲಿ ಬಿ.ಸುರೇಶ್‍ಗೌಡ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ.ಶಿವಕುಮಾರಸ್ವಾಮೀಜಿ ಅವರು ಇದ್ದ ಕ್ಷೇತ್ರದಲ್ಲಿ ಶಾಸಕನಾಗಿ ಉತ್ತಮ ಕೆಲಸ ಮಾಡಿರುವ ಹೆಮ್ಮೆ ನನಗಿದೆ, ಮೋದಿ ಅವರು ನೀಡಿರುವ ಸ್ಮಾರ್ಟ್‍ಸಿಟಿ ವ್ಯವಸ್ಥಿತವಾಗಿ ರೂಪುಗೊಳ್ಳಬೇಕೆಂದರೆ ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.       ಪಾಲಿಕೆಯಲ್ಲಿ ಬಹಳಷ್ಟು ಬದಲಾವಣೆ ತಂದ ಟಿ ಭೂಬಾಲನ್ ರವರ ರೀತಿಯ ಅಧಿಕಾರಿಗಳು ನಮ್ಮ ನಗರ ಮತ್ತು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದ ಅವರು, ವಸಂತ ನರಸಾಪುರದಲ್ಲಿ ರೈಲ್ವೆ ಕಾರಿಡಾರ್ ಮಾಡಬೇಕು ಇಂಡ್ರಸ್ಟಿಯಲ್ ಕಾರಿಡಾರ್ ಅಭಿವೃದ್ಧಿಯಾಗಬೇಕು ಇದನ್ನು ಕೂಡಲೇ ಕಾರ್ಯ ರೂಪಕ್ಕೆ ತರಬೇಕು ಎಂದರು. ಕ್ಷೇತ್ರದಲ್ಲಿ…

Read More

ಗುಬ್ಬಿ :       ಐಟಿ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ವೈಯಕ್ತಿಕ ದ್ವೇಷದ ಮಾತು ಇಲ್ಲಿ ಬರುವಂತಿಲ್ಲ. ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡಿರುವ ಸಿದ್ದರಾಮಯ್ಯನವರ ಆರೋಪ ಸತ್ಯಕ್ಕೆ ದೂರವಾದದು ಎಂದು ಸಂಸದ ಜಿ.ಎಸ್.ಬಸವರಾಜು ಸ್ಪಷಪಡಿಸಿದರು.       ಪಟ್ಟಣದ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ದೇವಾಲಯ ಜೀಣೋದ್ದಾರ ಸಮಿತಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಆದಾಯ ತೆರಿಗೆ ಇಲಾಖೆ ಅವರ ಕರ್ತವ್ಯವನ್ನು ಕಾನೂನು ರೀತಿ ನಡೆಸಿದ್ದಾರೆ. ಮೆಡಿಕಲ್ ಸೀಟ್ ಮಾರಾಟ ದಂಧೆ ನಡೆದಿರುವ ದೂರಿನ ಹಿನ್ನಲೆಯಲ್ಲಿ ಈ ದಾಳಿ ನಡೆಯುತ್ತಿದೆ. ಪರಮೇಶ್ವರ್ ಅವರು ನನಗೆ ಒಳ್ಳೆಯ ಸ್ನೇಹಿತ. ಅವರ ವ್ಯವಹಾರದ ಬಗ್ಗೆ ತಿಳಿದಿರಲಿಲ್ಲ ಎಂದರು.       ಸೇವಾ ಕಾರ್ಯ ನಡೆಸಬೇಕಾದ ಶಿಕ್ಷಣರಂಗ ಸಂಪೂರ್ಣ ಕಮರ್ಷಿಯಲ್ ಆಗಿ ಕಲುಷಿತಗೊಂಡಿರುವುದು ವಿಷಾದಕರ ಸಂಗತಿ. ಪರಮೇಶ್ವರ್ ಆಪ್ತ ಸಹಾಯಕನ ಆತ್ಮಹತ್ಯೆ ನೋವಿನ ಘಟನೆ. ಹಿನ್ನಲೆತಿಳಿಯಲು ಪೊಲೀಸ್ ಇಲಾಖೆ ತನಿಖೆ ನಡೆಸಲಿದೆ ಎಂದ ಅವರು ಹೇಮಾವತಿ…

Read More

ಕೊರಟಗೆರೆ:       ಅಬಕಾರಿ ನಿಯಮಗಳಿಗೆ ವಿರುದ್ಧವಾಗಿ ಸ್ವಾಧೀನತೆ, ಸಾಗಾಣಿಕೆ, ಮಾರಾಟ ಇತ್ಯಾದಿಗಳಲ್ಲಿ ಜಪ್ತಿ ಮಾಡಿ ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ಮದ್ಯದ ಸಿಟ್ರಾ ಪಾಕೇಟ್‍ಗಳನ್ನು ಅಬಕಾರಿ ಆವರಣದಲ್ಲಿ ಸೋಮವಾರ ನಾಶಪಡಿಸಲಾಯಿತು.       ಕೊರಟಗೆರೆ ಅಬಕಾರಿ ವಲಯ ಕಚೇರಿ ಆವರಣದಲ್ಲಿ ಮಧುಗಿರಿ ಅಬಕಾರಿ ಉಪಅಧೀಕ್ಷಕ ಸುಭಾಶ್‍ಚಂದ್ರ ನೇತೃತ್ವದೊಂದಿಗೆ ತುಮಕೂರು ಕೆಎಸ್‍ಬಿಸಿಎಲ್ ವ್ಯವಸ್ಥಾಪಕ ಹೆಚ್.ಎಂ.ಗೌಡ, ಕೊರಟಗೆರೆ ಅಬಕಾರಿ ನಿರೀಕ್ಷಕ ರಾಮಮೂರ್ತಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಸಮಕ್ಷಮದಲ್ಲಿ ಸುಮಾರು 50ಸಾವಿರ ಮೌಲ್ಯದ 66.09 ಲೀಟರ್ ಮದ್ಯವನ್ನು ನಾಶಪಡಿಸಿದ್ದಾರೆ.       2019-20ನೇ ಸಾಲಿನ ಲೋಕಸಭಾ ಚುನಾವಣೆ ವೇಳೆಯಲ್ಲಿ ಅಕ್ರಮವಾಗಿ ಮದ್ಯ ಶೇಖರಣೆ ಮತ್ತು ಸಾಕಾಣಿಕೆ ಮಾಡುತ್ತಿದ್ದ ದಾಳಿ ನಡೆಸಿ ವಶಪಡಿಸಿಕೊಳ್ಳಲಾದ ಮಧ್ಯವನ್ನು ಸೋಮವಾರ ಮಧ್ಯಾಹ್ನ ಕಚೇರಿ ಆವರಣದಲ್ಲಿ ನಾಶಪಡಿಸಲಾಗಿದೆ. ಕಚೇರಿ ಆವರಣದಲ್ಲಿ ಗುಂಡಿ ತೋಡಿ ಅದರಲ್ಲಿ ಮಧ್ಯದ ಸಿಟ್ರಾ ಪಾಕೇಟ್ ಹರಿದು ಮದ್ಯವನ್ನು ಸುರಿದು ಅಬಕಾರಿ ಇಲಾಖೆ ನಾಶಪಡಿಸಿದ್ದಾರೆ.       ಅಬಕಾರಿ ಇಲಾಖೆಯ ಉಪನೀರಿಕ್ಷಕ ಅರುಣಕುಮಾರ್,…

Read More

       ರೋಗಿಗಳ ತ್ವರಿತ ಸೇವೆಗಾಗಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಂಸ್ಥೆಯು ಡಿಜಿಟಲ್ ನರ್ವ್ ಸೆಂಟರ್ ಅನ್ನು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ.       ಜನರು, ತಂತ್ರಜ್ಞಾನ ಹಾಗೂ ಪ್ರಕ್ರಿಯೆಗಳ ಸಂಯೋಜನೆ ಆಧಾರದಡಿ ಪರಸ್ಪರ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿರುವ ಈ ಡಿಜಿಟಲ್ ನರ್ವ್ ಸೆಂಟರ್ ಯೋಜನೆಯನ್ನು 2.27 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು, ಕೆಲವೇ ದಿನಗಳಲ್ಲಿ ಚಾಲನೆಗೊಳ್ಳಲಿದೆ.       ಗಂಭೀರ ಪರಿಸ್ಥಿತಿಯಲ್ಲಿರುವ ನಗರ ವ್ಯಾಪ್ತಿಯೊಳಗಿನ ರೋಗಿಗಳಿಗೆ ತ್ವರಿತವಾಗಿ ಆರೋಗ್ಯ ಸೇವೆ ಒದಗಿಸುವ ಯೋಜನೆ ಇದಾಗಿದೆ. ರೋಗಿಗಳು ಡಿಜಿಟಲ್ ನರ್ವ್ ಸೆಂಟರ್ ಟೋಲ್ ಫ್ರೀ ಸಂಖ್ಯೆ 1800-425-4325ಕ್ಕೆ ಕರೆ ಮಾಡಿ ತಮ್ಮ ರೋಗದ ಬಗ್ಗೆ ಮಾಹಿತಿ ನೀಡಿದಲ್ಲಿ ಸೆಂಟರ್‍ನಲ್ಲಿರುವ ಆರೋಗ್ಯ ಸೇವಾ ಕಾರ್ಯಕರ್ತರು ತ್ವರಿತವಾಗಿ ವೈದ್ಯಕೀಯ ಸಲಹೆ ನೀಡುವುದರೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆರೋಗ್ಯ ಸೇವಾ ಕೇಂದ್ರಗಳಾದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಾಗಲು ಮಾರ್ಗದರ್ಶನ ನೀಡಲಿದ್ದಾರೆ.       ರೋಗಿಯನ್ನು…

Read More

ತುಮಕುರು:       ಇಲ್ಲಿನ ಝೆನ್ ಟೀಮ್ ವತಿಯಿಂದ ಇದೇ ತಿಂಗಳ 14 ಮತ್ತು 15 ರಂದು ಎಂ.ಜಿ. ರಸ್ತೆಯ ಬಾಲಭವನದಲ್ಲಿ ಸಂಜೆ 6.30 ಕ್ಕೆ ನೀನಾಸಂ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ಝೆನ್ ಟೀಮ್‍ನ ಉಗಮ ಶ್ರೀನಿವಾಸ್ ತಿಳಿಸಿದ್ದಾರೆ.       14 ರ ಸೋಮವಾರ ಸಂಜೆ 6.30 ಕ್ಕೆ ಗಿರೀಶ್ ಕಾರ್ನಾಡ್ ರಚಿಸಿರುವ ರಾಕ್ಷಸ- ತಂಗಡಿ ನಾಟಕ ಪ್ರದರ್ಶನವಿದೆ. ಈ ನಾಟಕವನ್ನು ಬಿ.ಆರ್. ವೆಂಕಟರಮಣ ಐತಾಳ್ ನಿರ್ದೇಶಿಸಿದ್ದಾರೆ. 15 ರ ಮಂಗಳವಾರ ಸಂಜೆ ಕರ್ಣ ಸಾಂಗತ್ಯ ನಾಟಕ ಪ್ರದರ್ಶನವಿದೆ. ಈ ನಾಟಕವನ್ನು ಗಣೇಶ್ ಮಂದರ್ತಿ ನಿರ್ದೇಶಿಸುತ್ತಿದ್ದಾರೆ.       ನಾಟಕ ಪ್ರದರ್ಶನಕ್ಕೂ ಮುನ್ನ ನಡೆಯುವ ಕಾರ್ಯಕ್ರಮದಲ್ಲಿ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ, ಲೇಖಕ ಹಾಗೂ ನಿವೃತ್ತ ಪ್ರಾಧ್ಯಾಪಕ ಮುಕುಂದರಾವ್ ಮತ್ತು ಗೋಮಾರದಹಳ್ಳಿ ಮಂಜುನಾಥ್ ಆಗಮಿಸಲಿದ್ದಾರೆ. 15 ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಹಾಗೂ…

Read More

ತುಮಕೂರು:       ಕಾಂಗ್ರೆಸ್ ಶಾಸಕ, ಮಾಜಿ ಡಿಸಿಎಂ ಪರಮೇಶ್ವರ್ ಅವರ ನಿವಾಸದ ಮೇಲೆ ಐಟಿ ದಾಳಿ ಆದ ಬೆನ್ನಲ್ಲೆ ಪರಮೇಶ್ವರ್ ಅವರ ಆಪ್ತ ರಮೇಶ್ ಅವರು ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.       ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಯಿ ಗ್ರೌಂಡ್ ಬಳಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಮೇಶ್ ಶವ ಪತ್ತೆ ಆಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.        ಹಲವು ವರ್ಷಗಳಿಂದ ರಮೇಶ್ ಅವರು ಪರಮೇಶ್ವರ್ ಗೆ ಆಪ್ತರಾಗಿದ್ದಾರೆ. ಪರಮೇಶ್ವರ್ ಅವರ ಮೇಲೆ ಐಟಿ ದಾಳಿ ಆದಾಗ ರಮೇಶ್ ಅವರನ್ನೂ ಸಹ ಹಲವು ಗಂಟೆಗಳ ಕಾಲ ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.       ಇಂದು ಬೆಳಿಗ್ಗೆ ಹಲವರಿಗೆ ಕರೆ ಮಾಡಿದ್ದ ರಮೇಶ್ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮೊಬೈಲ್ ಅನ್ನು ಸ್ವಿಚ್‌ ಆಫ್ ಮಾಡಿದ್ದರು. ರಮೇಶ್ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು, ಆದರೆ ಕೆಲವೇ…

Read More

ತುಮಕೂರು:       ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ತುಮಕೂರು ಮಹಾನಗರ ಪಾಲಿಕೆಗೆ ಮಹಾ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕೋಟಿ ಕೋಟಿ ರೂ ತೆರಿಗೆ ಕಟ್ಟದೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ವಂಚನೆ ಮಾಡಿದೆ ಎಂಬುದು ಐಟಿ ದಾಳಿ ವೇಳೆ ಬೆಳಕಿಗೆ ಬಂದಿದೆ.        ತುಮಕೂರು ಮಹಾನಗರ ಪಾಲಿಕೆಗೆ ತೆರಿಗೆ ಕಟ್ಟದೆ 2002 ರಿಂದಲೂ ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ವಂಚನೆ ಮಾಡಿದೆ. ಎಂಜಿನಿಯರಿಂಗ್ ಕಾಲೇಜು ಆರಂಭವಾದಾಗಿಂದ ಒಮ್ಮೆಯೂ ತೆರಿಗೆ ಕಟ್ಟಿಲ್ಲ ಎನ್ನಲಾಗಿದೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಪಾಲಿಕೆಗೆ ಸರಿಸುಮಾರು 2 ಕೋಟಿ ರೂ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂಬುದು ಐಟಿ ದಾಳಿ ವೇಳೆ ಬೆಳಕಿಗೆ ಬಂದಿದೆ.       ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಶಿಕ್ಷಣ ಸಂಸ್ಥೆ 1,83,20,439 ರೂ. ಬಾಕಿ ಇರಿಸಿಕೊಂಡಿದೆ. ಈ ಸಂಬಂಧ ತುಮಕೂರು ಮಹಾನಗರ ಪಾಲಿಕೆ ನೀಡಿದ್ದ ನೋಟಿಸ್ ಐಟಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಇನ್ನೊಂದೆಡೆ, ಅಳತೆ ಮಾಡಲೂ ಒಪ್ಪದ ಎಂಜಿನಿಯರಿಂಗ್ ಕಾಲೇಜಿನ…

Read More

ಕೊರಟಗೆರೆ :       ಜಂಪೇನಹಳ್ಳಿ ಕೆರೆಯ ಪುನಶ್ಚೇತನ ಮತ್ತು ಅಭಿವೃದ್ಧಿ ಕಾಮಗಾರಿ ಯೋಜನಾ ವರದಿ ಸಿದ್ಧಪಡಿಸಿ ಕೆರೆ ಏರಿ ಕಾಮಗಾರಿಗೆ ತುರ್ತು ಕ್ರಮಕೈಗೊಂಡು ನೀರು ರಕ್ಷಣೆ ಮಾಡಿ ಎಂದು ಸಣ್ಣ ನೀರಾವರಿ ಇಲಾಖೆ ಎಇ ರಮೇಶ್ ಅವರಿಗೆ ಶಾಸಕ ಡಾ.ಜಿ.ಪರಮೇಶ್ವರ ಸೂಚಿಸಿದರು.       ಪಟ್ಟಣದ ಹೊರವಲಯದ ಜಂಪೇನಹಳ್ಳಿ ಕೆರೆ ಕೋಡಿ ಬಿದ್ದ ಕಾರಣ ಗುರುವಾರ ಗಂಗಾಪೂಜೆ ಮಾಡಿ ಬಾಗಿನ ಅರ್ಪಿಸಿದ ನಂತರ ರೈತರು ಕೆರೆ ಏರಿಯಿಂದ ನೀರು ಜಿನುಗುತ್ತಿರುವ ಬಗ್ಗೆ ಸ್ಥಳೀಯರು ಗಮನ ಸೆಳೆದ ವೇಳೆ ಸ್ಥಳ ಪರಿಶೀಲನೆ ಮಾಡಿದ ಅವರು ಕೂಡಲೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡು ಏರಿ ದುರಸ್ತಿ ಮಾಡುವಂತೆ ತಿಳಿಸಿದರು.        ಅಧಿಕಾರಿಗಳ ಜೊತೆ ಕೆರೆ ಏರಿ ಪರಿಶೀಲನೆ ನಡೆಸಿದ ವೇಳೆ ತುರ್ತಾಗಿ ಏರಿಯ ಮೇಲಿರುವ ಬೇಲಿ ತೆರವುಗೊಳಿಸಿ ಅಗತ್ಯ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಪಟ್ಟಣ ಸೇರಿದಂತೆ ಕ್ಷೇತ್ರದ ಆರು…

Read More