Author: News Desk Benkiyabale

ತುಮಕೂರು :       ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಲಿದ್ದು, ಜಿಲ್ಲಾದ್ಯಂತ ಹಿಂದೂಪರ ಸಂಘಟನೆಗಳು ದೇವಸ್ಥಾನಗಳಲ್ಲಿ ವಿಜಯೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.       ತುಮಕೂರು, ಸಿರಾ, ತಿಪಟೂರು, ಕುಣಿಗಲ್ ತಾಲ್ಲೂಕುಗಳು ಮತೀಯ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಾಂತಿ ಕಾಪಾಡುವ ಉದ್ದೇಶದಿಂದ ಮೇಲ್ಕಂಡ ಸೂಕ್ಷ್ಮ ಪ್ರದೇಶಗಳಲ್ಲಿ ಆಗಸ್ಟ್ 5ರ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.       ನಿಷೇಧಿತ ಅವಧಿಯಲ್ಲಿ ಎಲ್ಲಾ ರೀತಿ ಸನ್ನದು(ಕೆಎಸ್‍ಬಿಸಿಎಲ್ ಡಿಪೋ & ಡಿಸ್ಟಿಲರಿಗಳನ್ನು ಹೊರತುಪಡಿಸಿ)ಗಳನ್ನು ಮುಚ್ಚಬೇಕೆಂದು ಅವರು ಸೂಚನೆ ನೀಡಿದ್ದಾರೆ.

Read More

 ತುಮಕೂರು :       ಜಿಲ್ಲೆಯಲ್ಲಿಂದು 72 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1988 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-28, ಕುಣಿಗಲ್-12, ತಿಪಟೂರು-03, ಮಧುಗಿರಿ-05, ಪಾವಗಡ-02, ಗುಬ್ಬಿ-04, ತುರುವೇಕೆರೆ-05, ಕೊರಟಗೆರೆ-07, ಚಿಕ್ಕನಾಯಕನಹಳ್ಳಿ-04, ಶಿರಾ-02 ಸೇರಿದಂತೆ ಒಟ್ಟು 72 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಜಿಲ್ಲಾಸ್ಪತ್ರೆಯಿಂದ 76 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1047 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.      ಜಿಲ್ಲೆಯಲ್ಲಿ ಒಟ್ಟು 883 ಸಕ್ರಿಯ ಪ್ರಕರಣಗಳಿದ್ದು,  ಈವರೆಗೆ 58 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತುಮಕೂರು :          ನಗರದ ಅಮರಜ್ಯೋತಿ ನಗರದ ಬಾಲಕಿಯರ ಬಾಲಮಂದಿರದಿಂದ ಬಾಲಕಿಯೊಬ್ಬಳು ಭಾನುವಾರ ರಾತ್ರಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.      ತಿಪಟೂರು ಮೂಲದ ಈ ಬಾಲಕಿಗೆ ತಂದೆ-ತಾಯಿ ಯಾರೂ ಇಲ್ಲ ಎಂದು ತಿಳಿದುಬಂದಿದೆ. ಪರಾರಿಯಾಗಿರುವ ಬಾಲಕಿಯು ಗೌರಿ ಎಂದು ತಿಳಿದು ಬಂದಿರುತ್ತದೆ. ಈ ಹಿಂದೆಯೂ ಸಹ ಇದೇ ಬಾಲಕಿಯರ ಬಾಲಮಂದಿರದಿಂದ ಬಾಲಕಿಯರು ಪರಾರಿಯಾಗಿದ್ದಂತಹ ಪ್ರಕರಣಗಳು ಕಂಡು ಬಂದಿರುತ್ತವೆ.         ಗೌರಿ ಸುಮಾರು 15 ವರ್ಷದ ಬಾಲಕಿ ಯಾಗಿದ್ದು ಈ ಬಾಲಕಿ ಪರಾರಿಯಾಗಲು ಅಲ್ಲಿನ ಇತರೇ ಬಾಲಕಿಯರು ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.       ನಿನ್ನೆ ಮಧ್ಯರಾತ್ರಿ ವೇಳೆ ಪರಾರಿಯಾಗಿರುವ ಬಾಲಕಿ ಇದುವರೆಗೂ ಸಿಕ್ಕಿಲ್ಲ ಎಂಬ ಮಾಹಿತಿ ಇದ್ದು, ಈ ಬಾಲಕಿ ಗುಬ್ಬಿ ರೈಲ್ವೆ ಸ್ಟೇಷನ್ ಬಳಿ ಬಿಕ್ಷೆ ಬೇಡುವಾಗ ಮಕ್ಕಳ ಸಹಾಯವಾಣಿಯವರು ರಕ್ಷಣೆ ಮಾಡಿ ಬಾಲಮಂದಿರಕ್ಕೆ ಬಿಟ್ಟಿದರು ಎನ್ನಲಾಗಿದೆ.       ತುಮಕೂರು ಬಾಲಮಂದಿರದಿಂದ ಬಾಲಕಿಯರು…

Read More

ತುಮಕೂರು :       ಅಬಕಾರಿ ಉಪ ಆಯುಕ್ತ ಎಸ್. ನಾಗರಾಜಪ್ಪ ಅವರ ಮಾರ್ಗದರ್ಶನದಲ್ಲಿ 2020 ಜನವರಿ ಮಾಹೆಯಿಂದ ಜೂನ್ ಅಂತ್ಯದವರೆಗೆ ತುಮಕೂರು ಉಪ ವಿಭಾಗ ವ್ಯಾಪ್ತಿಯಲ್ಲಿರುವ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 683 ಕೇಂದ್ರಗಳ ಮೇಲೆ ದಾಳಿ ನಡೆಸಿ 203 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತುಮಕೂರು ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಹೆಚ್.ಜಿ. ವಿರೂಪಾಕ್ಷಪ್ಪ ತಿಳಿಸಿದ್ದಾರೆ. ತುಮಕೂರು ಉಪವಿಭಾಗ ವ್ಯಾಪ್ತಿಗೆ ಬರುವ ತುಮಕೂರು, ಕುಣಿಗಲ್ ಹಾಗೂ ಗುಬ್ಬಿ ತಾಲ್ಲೂಕುಗಳಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ. ಅಲ್ಲದೆ ಅಬಕಾರಿ ಕಾನೂನುಗಳನ್ನು ಉಲ್ಲಂಘಿಸಿದ ಸನ್ನದ್ದುಗಳ ಮೇಲೆ ದಾಖಲಿಸಿದ ಮೊಕದ್ದಮೆಗಳು ಸೇರಿದಂತೆ ಒಟ್ಟು 292 ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಹಾಗೂ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಸಾಗಾಣಿಕೆ ಮಾಡಲಾಗುತ್ತಿದ್ದ ಎರಡು ಕಾರು ಮತ್ತು 12 ದ್ವಿಚಕ್ರ ವಾಹನಗಳನ್ನು ರಸ್ತೆಗಸ್ತಿನ ಮೂಲಕ ಪತ್ತೆ ಮಾಡಿ 502 ಲೀಟರ್ ಮದ್ಯ, 45 ಲೀಟರ್ ಬಿಯರ್ ಹಾಗೂ 600 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಈವರೆಗೆ ಒಟ್ಟು 25,25,000 ರೂ.ಗಳ…

Read More

 ತುಮಕೂರು :        ಜಿಲ್ಲೆಯಲ್ಲಿಂದು 63 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1781 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-20, ಕುಣಿಗಲ್-08, ತಿಪಟೂರು-01, ಮಧುಗಿರಿ-01, ಪಾವಗಡ-10, ಗುಬ್ಬಿ-3, ತುರುವೇಕೆರೆ-6, ಕೊರಟಗೆರೆ-05, ಚಿಕ್ಕನಾಯಕನಹಳ್ಳಿ-07, ಶಿರಾ-2 ಸೇರಿದಂತೆ ಒಟ್ಟು 63 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಜಿಲ್ಲಾಸ್ಪತ್ರೆಯಿಂದ 86 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 917 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.      ಜಿಲ್ಲೆಯಲ್ಲಿ ಒಟ್ಟು 810 ಸಕ್ರಿಯ ಪ್ರಕರಣಗಳಿದ್ದು,  ಈವರೆಗೆ 52 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

 ತುಮಕೂರು :       ಜಿಲ್ಲೆಯಲ್ಲಿಂದು 101 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1718 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-40, ಕುಣಿಗಲ್-06, ತಿಪಟೂರು-21, ಮಧುಗಿರಿ-02, ಪಾವಗಡ-8, ಗುಬ್ಬಿ-7, ತುರುವೇಕೆರೆ-04, ಕೊರಟಗೆರೆ-07, ಚಿಕ್ಕನಾಯಕನಹಳ್ಳಿ-06, ಸೇರಿದಂತೆ ಒಟ್ಟು 101 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಜಿಲ್ಲಾಸ್ಪತ್ರೆಯಿಂದ 11 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 736 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 844 ಸಕ್ರಿಯ ಪ್ರಕರಣಗಳಿದ್ದು, ಇಂದು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈವರೆಗೆ 52 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಧುಗಿರಿ:          ರೋಗಾಣು ನಮ್ಮ ಶತೃ, ರೋಗಿಯಲ್ಲ ಎಂಬ ದ್ಯೇಯದೊಂದಿಗೆ ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ತಂಡದಲ್ಲಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದು, ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ವಿಶೇಷ ನಿಗಾವಹಿಸಲಾಗಿದೆ. ಕೆಲವೊಮ್ಮೆ ಮಧ್ಯ ರಾತ್ರಿಯವರೆಗೂ ಕರ್ತವ್ಯ ನಿರ್ವಹಿಸಬೇಕಾದ ಸಂದರ್ಭಗಳು ಒದಗಿ ಬಂದರೂ ಬೆಳಗ್ಗೆ ಮತ್ತೆ 6 ಗಂಟೆಗೆ ಕರ್ತವ್ಯಕ್ಕೆ ಹಾಜರಾಗುವ ಎಸಿ ಮತ್ತು ತಹಶೀಲ್ದಾರ್‍ರವರ ಕಾರ್ಯದಕ್ಷತೆಗೆ ಅಧಿಕಾರಿಗಳು ಮತ್ತು ವೈದ್ಯರು ಸಾಥ್ ನೀಡಿದ್ದಾರೆ. ರೆಸಾರ್ಟ್‍ನಂತಹ ವಾತಾವರಣ ನಿರ್ಮಾಣ:        ಪಟ್ಟಣದ ದಂಡಿನ ಮಾರಮ್ಮ ದೇವಸ್ಥಾನದ ಸಮೀಪ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಸೋಂಕಿತರ ಚಿಕಿತ್ಸೆಗಾಗಿ 102 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದು, ಇಲ್ಲಿ ರೆಸ್ಪಾನ್ಸ್ಟ್‍ನಂತಹ ವಾತಾವರಣ ನಿರ್ಮಿಸಲಾಗಿದೆ. ಅಲ್ಲಿಗೆ ಬರುವ ಸೋಂಕಿತರನ್ನು ಕೋವಿಡ್ ಸೆಂಟರ್‍ನ ವಿಶೇಷ ಅತಿಥಿಗಳಂತೆ ಸತ್ಕರಿಸುತ್ತಿದ್ದು, ಸೋಂಕಿತರು ಬಂದ ಮಾರನೇ ದಿನವೇ ಭಯದ ವಾತಾವರಣ ಬಿಟ್ಟು, ರೆಸಾರ್ಟ್‍ನಂತಹ ವಾತಾವರಣವನ್ನು ಅನುಭವಿಸುತ್ತಿದ್ದಾರೆ. ಏನೆಲ್ಲ ಸೌಲಭ್ಯವಿದೆ:       ಉತ್ತಮ ಪರಿಸರ, ಸ್ವಚ್ಛ್ಚತೆಗೆ…

Read More

 ತುಮಕೂರು:       ಕೋವಿಡ್-19(ಕೋರೋೀನಾ ವೈರಸ್) ಸಾಂಕ್ರಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೋಗದ ಲಕ್ಷಣಗಳು ಕಂಡು ಬಂದ ಕೂಡಲೇ ಜ್ವರ ಕ್ಲೀನಿಕ್(ಪೀವರ್ ಕ್ಲೀನಿಕ್) ಬೇಟಿ ನೀಡಿ ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕೆಂದು ಉಪವಿಭಾಗಾಧಿಕಾರಿ ಅಜಯ್ ಅವರು ತಿಳಿಸಿದ್ದಾರೆ.       ವಿಶ್ವದಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಡಳಿತವು ಮುಂದಾಗಿದೆ. ಈ ರೋಗದ ಲಕ್ಷಣಗಳಾದ ಕೆಮ್ಮು, ಸೀನು, ಜ್ವರ, ತಲೆನೋವು, ವಾಂತಿ ಬೇಧಿ, ಮೈ ಕೈ ನೋವು ಹಾಗೂ ಇತರೆ ಲಕ್ಷಣಗಳು ಕಂಡು ಬಂದರೆ ತಕ್ಷಣ ಜ್ವರ ಕ್ಲೀನಿಕ್ ನಲ್ಲಿ (ಪೀವರ್ ಕ್ಲೀನಿಕ್) ಪರೀಕ್ಷೆಗೆ ಒಳಗಾಗಿ ಹಾಗೂ ರೋಗ ದೃಢಪಟ್ಟರೆ ಸೋಕಿತರು ಯಾವುದೇ ರೀತಿಯ ಭಯಬೀತರಾಗದೆ ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್(ಸಿ,ಸಿ,ಸಿ) ಅಥವಾ ಹೋಂ ಐಸೋಲೇಷನ್ ನಲ್ಲಿ ವೈದ್ಯರ ನಿರ್ದೇಶನದಂತೆ ಪೂರಕ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.       ಜಿಲ್ಲೆಯಲ್ಲಿ ಈಗಾಗಲೇ ರ್ಯಾಪಿಡ್ ಅಂಟಿಜೆನ್…

Read More

ತುಮಕೂರು :       ಜಿಲ್ಲೆಯ ತುಮಕೂರು ನಗರದ 13 ಹಾಗೂ ತಾಲ್ಲೂಕು ಕೇಂದ್ರಗಳ 8 ಸೇರಿದಂತೆ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ಇಂದು ನಡೆದ ಸಿಇಟಿ ಪರೀಕ್ಷೆಯು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆದಿದೆ.       ಇಂದು ಬೆಳಿಗ್ಗೆ ನಡೆದ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ 7166 ವಿದ್ಯಾರ್ಥಿಗಳು ಹಾಜರಾಗಿದ್ದು, 805 ಮಂದಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.       ಮಧ್ಯಾಹ್ನ ನಡೆದ ರಸಾಯನಶಾಸ್ತ್ರ ಪರೀಕ್ಷೆಗೆ 7164 ವಿದ್ಯಾರ್ಥಿಗಳು ಹಾಜರಾಗಿದ್ದು, 807 ಮಂದಿ ವಿದ್ಯಾರ್ಥಿಗಳು ಗೈರಾಗಿರುತ್ತಾರೆ, ಪರಿಕ್ಷೆಯು ಜಿಲೆಯಲ್ಲಿ ಶಾಂತಿಯುತವಾಗಿ ನಡೆದಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೆಚ್.ಕೆ. ನರಸಿಂಹಮೂರ್ತಿ ಅವರು ತಿಳಿಸಿದ್ದಾರೆ.

Read More

ಕೊರಟಗೆರೆ:        ಸಿರಿದೇವಿಗೆ ಮೀಸಲಾದ ಕರುನಾಡಿನ ಏಕೈಕ ಧಾರ್ಮಿಕ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ಸನ್ನಿಧಾನಕ್ಕೆ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಬರುತ್ತೀದ್ದ ಲಕ್ಷಾಂತರ ಭಕ್ತರಲ್ಲಿ ಸಾವಿರಕ್ಕೂ ಕಡಿಮೆ ಭಕ್ತರು ಆಗಮಿಸಿ ಸಾಮಾಜಿಕ ಅಂತರದ ಮೂಲಕ ಶುಕ್ರವಾರ ಮುಂಜಾನೆಯಿಂದಲೇ ದರ್ಶನ ಪಡೆದಿದ್ದಾರೆ.        ಕಲ್ಪತರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೀತಾ ಸಮೀಪದ ಗೊರವನಹಳ್ಳಿ ಶ್ರೀಕ್ಷೇತ್ರದ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ನೂರಾರು ಭಕ್ತಾಧಿಗಳು ಕಲಿಯುಗದ ದೇವತೆ ಎಂದೇ ಪ್ರಸಿದ್ದಿ ಪಡೆದಿರುವ ಕಮಲಮ್ಮ ತಾಯಿಯ ಬೃಂದಾವನದ ದರ್ಶನ ಪಡೆದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಣೆ ಮಾಡಿರುವುದೇ ವಿಶೇಷವಾಗಿದೆ.       ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದ ಆಡಳಿತ ಅಧಿಕಾರಿ ಡಾ.ನಂದಿನಿದೇವಿ ನೇತೃತ್ವದಲ್ಲಿ ಪೊಲೀಸ್-ಕಂದಾಯ ಮತ್ತು ಗ್ರಾಪಂ ಸಹಕಾರದಿಂದ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಕೊವೀಡ್-19 ಆದೇಶ ಪಾಲನೆಯ ಜೊತೆ ಸಾಮಾಜಿಕ ಅಂತರದ ಬಗ್ಗೆ ಆರೋಗ್ಯದ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ.       ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಾಲಕ್ಷ್ಮೀ ದೇವಾಲಯ…

Read More