ತುಮಕೂರು: ಶಾಲಾ ಶಿಕ್ಷಣದಿಂದ ಬಂದ ವಿದ್ಯಾರ್ಥಿಗಳಿಗೆ ಉತ್ತಮವಾದ ಮಾರ್ಗದರ್ಶನವನ್ನು ಮಾಡುವ ಮೂಲಕ ಉತ್ತಮ ಭವಿಷ್ಯ ಕಲ್ಪಿಸಿಕೊಡುವ ಅವಕಾಶ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರ ಮೇಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾನೂನು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ನಗರದ ಕನ್ನಡ ಭವನದಲ್ಲಿ ನಡೆದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಶಕ್ತಿ ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡುವ ಉಪನ್ಯಾಸಕರೇ ನಿಜವಾದ ಗುರುಗಳು, ವಿದ್ಯಾರ್ಥಿಗಳಲ್ಲಿ ಜಾನದ ಹಸಿವು ಹೆಚ್ಚಿಸುವ ಕೆಲಸ ಮಾಡುವ, ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ಉಪನ್ಯಾಸಕರ ಅವಶ್ಯಕತೆ ಇದೆ ಎಂದರು. ಬೋಧನೆ ಮಾಡುವವರೆಲ್ಲ ಗುರುಗಳಲ್ಲ, ವಿದ್ಯಾರ್ಥಿಗಳನ್ನು ತಿದ್ದಿತೀಡಿ, ಪ್ರೋತ್ಸಾಹಿಸುವವರನ್ನು ಮಾತ್ರ ಗುರುಗಳು ಎನ್ನುತ್ತಾರೆ, ವಿದ್ಯಾರ್ಥಿಗಳ ಭವಿಷ್ಯದ ಜವಾಬ್ದಾರಿ ಉಪನ್ಯಾಸಕರ ಮೇಲಿದೆ ಎಂದ ಅವರು, ಪದವಿ ಪೂರ್ವ ಶಿಕ್ಷಣದಿಂದ ಪಡೆಯುವ ಅಂಕಗಳಿಗೆ ಯಾವುದೇ ಮಾನ್ಯತೆ ಇಲ್ಲದಂತಾಗಿದ್ದು, ಸಿಇಟಿ ಅಂಕಗಳಿಕೆಯೇ ಮುಖ್ಯವಾಗಿದ್ದು,…
Author: News Desk Benkiyabale
ಪಾವಗಡ : ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷದಿಂದ ವಿದ್ಯಾರ್ಥಿಯೊಬ್ಬ ಶಾಲಾವರಣದಲ್ಲಿನ ತೆರೆದ ಸಂಪಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ತಾಲೂಕಿನ ಲಿಂಗದ ಹಳ್ಳಿ ಗ್ರಾಮದ ಎಂಪ್ರೈಸ್ ಖಾಸಗಿ ಶಾಲೆಯ ಯುಕೆಜಿ ವಿದ್ಯಾರ್ಥಿಯಾದ ಉಲ್ಲಾಸ್ ಶುಕ್ರವಾರ ಬೆಳ್ಳಿಗ್ಗೆ ಶಾಲಾವರಣದಲ್ಲಿ ಇರುವ ಸುಮಾರು 10 ಅಡಿ ಹಾಳದ ಸಂಪಿಗೆ ಬಿದ್ದು ಸಾವನ್ನಪ್ಪಿರುತ್ತಾನೆ. ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಗಂಗಯ್ಯ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವಿದ್ಯಾರ್ಥಿಯ ತಪಾಸಣೆ ವರದಿ ಬಂದ ಕೂಡಲೇ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ತುಮಕೂರು : ದೇಶದ ಕೃಷಿ ಕ್ಷೇತ್ರ ಬಿಕ್ಕಟ್ಟಿಗೆ ಸಿಲುಕಿದ ನಂತರ ಕಟ್ಟಡ ನಿರ್ಮಾಣ ವಲಯಕ್ಕೆ ಪ್ರತಿ ನಿತ್ಯ ಅಸಂಖ್ಯಾತ ಅಸಂಘಟಿತ ಕಾರ್ಮಿಕರು ಬದುಕು ಕಟ್ಟಿಕೊಳ್ಳಲು ವಲಸೆ ಬರುತ್ತಿದ್ದಾರೆ. ಇತ್ತ ನಿರ್ಮಾಣ ವಲಯದಲ್ಲಿ ಸುಮಾರು 10 ಕೋಟಿಗೆ ಹೆಚ್ಚಿನ ಜನರು ದುಡಿಯುತ್ತಿದ್ದಾರೆ. 80ರ ದಶಕದಿಂದ ನಿರ್ಮಾಣ ವಲಯ ವಿಸ್ತರಣೆಯಾಗುತ್ತ ಬಂದ ಸಂದರ್ಭದಲ್ಲಿ ತೀವ್ರ ಸಂಕಷ್ಟಕ್ಕೆ ಮತ್ತು ಸಾವು ನೋವಿಗೆ ತುತ್ತಾದ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರ ಸಾಮಾಜಿಕ ಭದ್ರತೆಗೆ ದೇಶಾದ್ಯಂತ ಚಳವಳಿ ಬೆಳೆದು ಬಂದಿತ್ತು. ಕಾರ್ಮಿಕರ ಅಭಿವೃದ್ಧಿಗೆ ಕಲ್ಯಾಣ ಮಂಡಳಿಗಳು ಹಾಗೂ ಸೆಸ್ ಕಾಯ್ದೆ ಕೇಂದ್ರದಲ್ಲಿ 1996ರಲ್ಲಿ ರಾಜ್ಯದಲ್ಲಿ 2006ರಲ್ಲಿ ಜಾರಿಗೆ ಬಂದಿತು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೌಲಭ್ಯಗಳು ಜಾರಿಗೆ ಪ್ರಾರಂಭದಲ್ಲಿದ್ದ ಅಧಿಕಾರಿಗಳು ಸೀಮಿತ ಅಧಿಕಾರದಿಂದ ಸೌಲಭ್ಯಗಳು ಕುಂಟುತ್ತಾ ಸಾಗಿ ಹಾಗೂ ಕಲ್ಯಾಣ ಮಂಡಳಿಗೆ ಪ್ರಭಾರ ಅಧಿಕಾರಿಗಳ ನೇಮಕವಾಗುತ್ತಿದ್ದರಿಂದ ಸಾಮಾಜಿಕ ನ್ಯಾಯ ಕೊಡಲು ಆಗದೆ ಇರುವ ಸಂದರ್ಭದಲ್ಲಿ ಸಿಐಟಿಯು ಸೇರಿದಂತೆ…
ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದು ರೈತರಿಗೆ ತೊಂದರೆ ಕೋಡುತ್ತೀದ್ದ ಚಿರತೆಗಳು ರೈತರ ಜಮೀನಿನ ಹತ್ತಿರ ಪ್ರತ್ಯೇಕ ಎರಡು ಕಡೆಯಲ್ಲಿ ಇಡಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ಬಿದ್ದು ಚಿರಾಟ ನಡೆಸಿರುವ ಘಟನೆ ಮಂಗಳವಾರ ಮತ್ತು ಬುಧವಾರ ಎರಡು ದಿನ ನಡೆದಿದೆ. ತಾಲೂಕಿನ ಕಸಬಾ ಹೋಬಳಿ ಹುಲೀಕುಂಟೆ ಗ್ರಾಪಂ ವ್ಯಾಪ್ತಿಯ ಗೌರಗಾನಹಳ್ಳಿ ಗ್ರಾಮದ ರೈತನ ತೋಟದಲ್ಲಿ ಇಡಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ಸೋಮವಾರ ತಡರಾತ್ರಿ ಬಿದ್ದಿದೆ. ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿ ವರ್ಗ ಮಂಗಳವಾರ ಮುಂಜಾನೆ ಮತ್ತೊಂದು ಅರಣ್ಯಕ್ಕೆ ರವಾನಿಸಿದ್ದಾರೆ. ಹುಲೀಕುಂಟೆ ಗ್ರಾಪಂ ವ್ಯಾಪ್ತಿಯ ಓಬಳದೇವರಹಳ್ಳಿ ತಾಂಡದ ಬೇಟ್ಟದ ಕೆಳಗೆ ಅರಣ್ಯ ಇಲಾಖೆ ಇಟ್ಟಿದ್ದ ಮತ್ತೊಂದು ಬೋನಿಗೆ ಮಂಗಳವಾರ ರಾತ್ರಿ ಮತ್ತೊಂದು ಚಿರತೆ ಬಿದ್ದಿದೆ. ಅದನ್ನು ಸಹ ಅರಣ್ಯ ಇಲಾಖೆ ಬುಧವಾರ ಮುಂಜಾನೆ ಚಿರತೆಯನ್ನು ಸೇರೆಹಿಡಿದು ಮತ್ತೊಂದು ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ. ಗೌರಗಾನಹಳ್ಳಿ ಸಮೀಪ…
ತುಮಕೂರು: ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬರುವ ವರ್ಷ 2020ರಲ್ಲಿ ಪ್ರವಾಸೋದ್ಯಮ ನೀತಿಯನ್ನು ಜಾರಿಗೊಳಿಸಲಾಗುವುದೆಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯನ್ನು ತಯಾರಿಸಿ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಅಲ್ಪಾವಧಿ ಹಾಗೂ ದೀರ್ಘಾವಧಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ಕೆಲವು ಪ್ರವಾಸಿ ಕ್ಷೇತ್ರಗಳನ್ನು ಖಾಸಗಿ ಸಹಭಾಗಿತ್ವದಲ್ಲಿ, ಕೆಲವು ಕ್ಷೇತ್ರಗಳನ್ನು ಸ್ವಯಂ ಸೇವಾ ಸಂಘಗಳ ಸಹಕಾರದಲ್ಲಿ ಹಾಗೂ ಕೆಲವು ಪ್ರವಾಸಿ ತಾಣಗಳನ್ನು ಸರ್ಕಾರಿ ಅನುದಾನ ಬಳಸಿ ಅಭಿವೃದ್ಧಿಪಡಿಸಲಾಗುವುದಲ್ಲದೆ ಜಿಲ್ಲೆಯಲ್ಲಿ ಗುರುತಿಸಿರುವ 28 ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದೆಂದರು. …
ತುಮಕೂರು: ಸರ್ಕಾರಿ ಹಿರಿಯ ಪ್ರಾಥಮಿಕ ಆರ್ಯಬಾಲಿಕಾ ಪಾಠಶಾಲೆಗೆ ದಿಢೀರ್ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಶಾಲೆಯಲ್ಲಿರುವ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಗುಬ್ಬಿಯಲ್ಲಿ ನಿಗದಿಯಾಗಿದ್ದ ಕಾರ್ಯವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಚಿವರು, ಎಂ.ಜಿ.ರಸ್ತೆಯಲ್ಲಿರುವ ಆರ್ಯಬಾಲಿಕಾ ಪಾಠಶಾಲೆಗೆ ಭೇಟಿ ನೀಡಿ, ಮೊದಲಿಗೆ ಅಡುಗೆ ಮನೆಯನ್ನು ವೀಕ್ಷಿಸಿ, ಅಡುಗೆ ಸಿಬ್ಬಂದಿಯಿಂದ ಮಾಹಿತಿ ಪಡೆದ ನಂತರ ಶಾಲಾ ಕೊಠಡಿಗಳಿಗೆ ತೆರಳಿದ ತಕ್ಷಣ ಮಕ್ಕಳು ನಲಿ-ಕಲಿ ಎಂಬ ಹಾಡನ್ನು ಸಚಿವರ ಮುಂದೆ ಹಾಡಿದರು. ನಂತರ ಶಿಕ್ಷಕಿಯಿಂದ ಮಾಹಿತಿ ಪಡೆದರು. ಮತ್ತೊಂದು ಕೊಠಡಿಗೆ ತೆರಳಿ ವಿದ್ಯಾರ್ಥಿಗೆ ಮಗ್ಗಿ ಹೇಳಲು ಹೇಳಿದರು, ನಂತರ ಕೆಲ ಮಗ್ಗಿಯನ್ನು ಮಧ್ಯೆ ಮಧ್ಯೆ ಕೇಳಿದ ಸಚಿವರು, ಮಧ್ಯಾಹ್ನದ ಊಟ ನೀಡುತ್ತಾರೆ, ಗುಣಮಟ್ಟದಿಂದ ಕೂಡಿರುತ್ತದೆಯೇ? ಶಿಕ್ಷಕರು ಚೆನ್ನಾಗಿ ಪಾಠ ಮಾಡುತ್ತಾರೆಯೇ ಎಂದೆಲ್ಲ ಕೇಳಿ ತಿಳಿದುಕೊಂಡ ಅವರು, ಸಹ ವಿದ್ಯಾರ್ಥಿಗಳಿಂದ ಮಗ್ಗಿ ಹೇಳಿದ ವಿದ್ಯಾರ್ಥಿಗೆ ಚಪ್ಪಾಳೆ ಹೊಡೆಸಿದರು. ಶಾಲೆಗೆ…
ತುಮಕೂರು : ಮಹಾತ್ಮಗಾಂಧೀಜಿಯವರ 150ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಪ್ಲಾಸ್ಟಿಕ್ ಸಾಮಗ್ರಿಗಳ ನಿಷೇಧದ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 25 ರಿಂದ ಅಕ್ಟೋಬರ್ 1ರವರೆಗೆ ಜಿಲ್ಲಾದ್ಯಂತ ಜನಾಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೆ.24ರ ಸಂಜೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಜಿಲ್ಲೆಯ ಎಲ್ಲಾ ತಹಶೀಲ್ದಾರ್, ತಾಲ್ಲೂಕು ಪಂಚಾಯತಿ ಇಓ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿಗಳ ಕಛೇರಿ ಸೇರಿದಂತೆ ಎಲ್ಲಾ ಸರ್ಕಾರಿ ಕಛೇರಿ ಹಾಗೂ ನಗರ ಸ್ಥಳೀಯ ಸಂಸ್ಥೆ ಕಛೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿರ್ಬಂಧಿಸಲಾಗುವುದು. ಯಾವುದೇ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಯನ್ನು ಕಡ್ಡಾಯವಾಗಿ ಉಪಯೋಗಿಸಬಾರದು ಎಂದು ತಿಳಿಸಿದರು. ಈ ಜನಾಂದೋಲನ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಶಾಲೆ, ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ ಜಾಥಾ ಕಾರ್ಯಕ್ರಮ, ಬೀದಿ ನಾಟಕ, ಮತ್ತಿತರ…
ತುಮಕೂರು: ಸ್ವಚ್ಛತೆಯನ್ನು ಕಾಪಾಡಲು ತಮ್ಮ ಜೀವವನ್ನೇ ಲೆಕ್ಕಿಸದಿರುವ ಪೌರಕಾರ್ಮಿಕರು ನಿಜವಾದ ಶ್ರಮಜೀವಿಗಳು ಎಂದು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಬಾಲಭವನದಲ್ಲಿಂದು ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ವಾರಕ್ಕೊಂದು ಬಾರಿ ಪತ್ರಿಕೆಯಲ್ಲಿ ಪೌರಕಾರ್ಮಿಕರು ಸಾವನ್ನಪ್ಪುವ ಸುದ್ದಿಗಳನ್ನು ನೋಡುತ್ತಲೇ ಇದ್ದೇವೆ. ತಮ್ಮ ಜೀವವನ್ನು ಲೆಕ್ಕಿಸದೆ ಸ್ವಚ್ಛತಾ ಕಾರ್ಯ ಮಾಡುವ ಪೌರಕಾರ್ಮಿಕರು ದೇಶದ ಸೈನಿಕರಿಗೆ ಸಮಾನರು ಎಂದು ಹೇಳಿದರು. ವಿದೇಶಗಳಲ್ಲಿರುವಂತೆ ನಮ್ಮ ದೇಶದಲ್ಲಿ ಎಲ್ಲರಿಗೂ ಒಂದೇ ರೀತಿಯ ಸ್ಥಾನ-ಮಾನ ಇಲ್ಲ. ಏಕವಚನದಲ್ಲಿ ಮಾತನಾಡಿಸುವ, ಕೀಳರಿಮೆಯಿಂದ ನೋಡುವ ಭಾವ ಹೋದಾಗ ಮಾತ್ರ ಸಮಾನತೆ ಎನ್ನುವುದು ದೇಶದಲ್ಲಿ ಬರುತ್ತದೆ. ಒಂದೇ ರೀತಿಯ ಸಮಾನತೆಯನ್ನು ತರಲು ಪ್ರಧಾನ ಮಂತ್ರಿ ಅಡಿಪಾಯ ಹಾಕಿಕೊಟ್ಟಿದ್ದಾರೆ. ಪಾಲಿಕೆಯು ಪೌರಕಾರ್ಮಿಕರಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಮೊದಲ ಆದ್ಯತೆಯಾಗಿ ಒದಗಿಸಬೇಕು. ಶ್ರಮಜೀವಿಗಳಾದ ಪೌರಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನವನ್ನು ನೀಡಬೇಕು ಎಂದರು. …
ತುಮಕೂರು : ಹೇಮಾವತಿ ನಾಲೆಯಲ್ಲಿ ಹರಿಯುವ ನೀರನ್ನು ನಾಲೆಯ ಕೊನೆಯ ಭಾಗದ ಪ್ರದೇಶದಲ್ಲಿರುವ ಕೆರೆಗಳನ್ನು ಭರ್ತಿ ಮಾಡಲು ಮೊದಲ ಆದ್ಯತೆ ನೀಡಬೇಕೆಂದು ಸಂಸದ ಜಿ.ಎಸ್.ಬಸವರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ನಡೆದ ದಿಶಾ (District Development Co-ordination and monitoring Committee) ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗೊರೂರು ಜಲಾಶಯ ಪ್ರದೇಶದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಹೇಮಾವತಿ ನಾಲೆಗೆ ನೀರು ಹರಿಸಲಾಗುತ್ತಿದೆ. ನಾಲೆಯ ನೀರನ್ನು ನಾಲೆಗೆ ಸಂಪರ್ಕವಿರುವ ಎಲ್ಲಾ ಕೆರೆಗಳನ್ನು ತುಂಬಿಸಿಕೊಂಡರೆ ಮುಂದಿನ ಬೇಸಿಗೆಗೆ ನೀರಿನ ಬವಣೆ ತಲೆದೋರುವುದಿಲ್ಲ. ಕಳೆದ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಜಿಲ್ಲೆಯ ಜನತೆ ತತ್ತರಿಸಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ಕೆರೆಗಳನ್ನು ತುಂಬಿಸಬೇಕೆಂದು ಹೇಮಾವತಿ ನಾಲಾ ವಲಯದ ಇಂಜಿನಿಯರ್ ಮೋಹನ್ ಅವರಿಗೆ ನಿರ್ದೇಶನ ನೀಡಿದರು. ನಾಲೆಗೆ ನೀರಿನ ಮಾಪಕವನ್ನು ಅಳವಡಿಸಿ ಪ್ರತೀದಿನ ಹರಿಯುವ ನೀರಿನ ಪ್ರಮಾಣದ ಅಂಕಿ ಅಂಶವನ್ನು ದಾಖಲಿಸಬೇಕು. ಜಲಾಶಯದಲ್ಲಿ ಸಾಕಷ್ಟು…
ಪಾವಗಡ : ತಾಲ್ಲೂಕಿನ ಗಡಿ ಭಾಗದ ನಕ್ಸಲ್ ಪೀಡಿತ ಪ್ರದೇಶವಾದ ಎನ್.ಅಚ್ಚಮ್ಮನಹಳ್ಳಿ ಗ್ರಾಮದಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಗುರುವಾರ ರಾತ್ರಿ ಶಾಲಾ ವಾಸ್ತವ್ಯ ಹೂಡಿದರು. ಸಂಜೆ 6.30 ಕ್ಕೆ ಆಗಮಿಸಿದ ಸಚಿವರಿಗೆ ಗ್ರಾಮದ ಹೆಬ್ಬಾಗಿಲಲ್ಲಿ ಗ್ರಾಮಸ್ಥರು ಹಾಗೂ ಮಕ್ಕಳು ಕುಂಭಮೇಳದೊಂದಿಗೆ ಸ್ವಾಗತ ಕೋರಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆ ಅಮೂಲಾಗ್ರವಾಗಿ ಮಾತುಕತೆ ನಡೆಸಿದ್ದೇನೆ. ಪ್ರಮುಖವಾಗಿ ಗ್ರಾಮಾಂತರ ಭಾಗಗಳ ಶಾಲೆಗಳಲ್ಲಿ ಇರುವ ಸಮಸ್ಯೆಗಳು ಗಮನಕ್ಕೆ ಬಂದಿವೆ. ಪ್ರತಿಯೊಂದು ಶಾಲೆಯಲ್ಲಿ ದೈಹಿಕ ಶಿಕ್ಷಕರ ನೇಮಕಮಾಡಬೇಕು ಎನ್ನುವ ಬೇಡಿಕೆ ಬಂದಿದ್ದು ಮಾನ್ಯ ಪ್ರಧಾನ ಮಂತ್ರಿಗಳು ಫಿಟ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಇದೇ ಉದ್ದೇಶದಿಂದ ಎಂದರು. ಇಂಗ್ಲೀಷ್ ಮಿಡಿಯಂ ಶಾಲೆಗಳನ್ನು ಹೆಚ್ಚಿಸಲು ಗಮನಹರಿಸಲಾಗುವುದು. ವರ್ಗಾವಣೆಯಲ್ಲಿ ಕೆಲ ಸಮಸ್ಯೆಗಳಿಂದ ಬಳಲುತ್ತಿರುವ ಶಿಕ್ಷಕರನ್ನು ಕಂಡಿದ್ದೇನೆ. ಅಂತಹವರ ವರ್ಗಾವಣೆ ಕೋರಿ ಬಂದಾಗ ಮಾನವೀಯ…