ಪಾವಗಡ: ತಾಲ್ಲೂಕಿನ ನಿಡಗಲ್ ಹೋಬಳಿ ಗುಜ್ಜನಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಟಿ.ಎನ್.ಬೆಟ್ಟ ಗ್ರಾಮದ ತಿಮ್ಮಪ್ಪನ ಬೆಟ್ಟದ ತಪ್ಪಲಿನಲ್ಲಿರುವ ಸನಾತನ ಪುಷ್ಕರಣಿಯನ್ನು ಕಳೆದ ಒಂದು ವಾದದಿಂದ ಸ್ವಚ್ಛಮಾಡಲಾಗುತ್ತಿದೆ. ಇದರಲ್ಲಿ 18 ಮತ್ತು19 ನೇ ಶತಮಾನದ ನಾಣ್ಯಗಳು ದೊರೆತಿವೆ. ಈ ಅಪರೂಪದ ನಾಣ್ಯಗಳು ದೊರೆತಿರುವುದನ್ನು ಪೆಮ್ಮನಹಳ್ಳಿಯ ಗ್ರಾಮಸ್ಥರು ತಾಲ್ಲೂಕು ಆಡಳಿತದ ಗಮನಕ್ಕೆ ತಂದ ಕಾರಣ ಗುರುವಾರ ತಹಸಿಲ್ದರ್ ವರದರಾಜ್ ಅವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. ನಂತರ ಮಾತನಾಡುತ್ತಾ ಪುರಾತನ ಪುಷ್ಕರಣಿಯನ್ನು ಸ್ವಚ್ಛಗೊಳಿಸುವ ವೇಳೆ ಈ ಅಪರೂಪದ ನಾಣ್ಯಗಳು ದೊರೆತಿವೆ ಇವುಗಳನ್ನು ಗ್ರಾಮಸ್ಥರು ಸಂಗ್ರಹಿಸಿ ಶ್ರೀರಾಮನ ದೇವಸ್ಥಾನದಲ್ಲಿ ಇಟ್ಟಿದ್ದರು. ನಂತರ ಈ ಸಂಂಬಂಧ ಮೇಲಾಧಿಕಾರಿಗಳ ಗಮನಕ್ಕೆ ತಂದು ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು. ಈ ದೇವಸ್ಥಾನದ ಹತ್ತಿರ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಎಲ್ಲಾ ರೀತಿಯ ಸಮಸ್ಯೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ…
Author: News Desk Benkiyabale
ಮಧುಗಿರಿ: ಪಕ್ಷದ ಪದಾಧಿಕಾರಿಗಳು ಕೇವಲ ವಿಸಿಟಿಂಗ್ ಕಾರ್ಡ್ ಗೆ ಸೀಮಿತವಾಗಿರದೆ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪುವಂತೆ ಮಾಡಿ ತಳ ಮಟ್ಟದಿಂದ ಪಕ್ಷ ಸಂಘಟನೆಗೆ ಮುಂದಾಗ ಬೇಕು ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ಗೌಡ ಕರೆ ನೀಡಿದರು. ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಲಯದಲ್ಲಿ ಬುಧವಾರ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿ.ಎಸ್ ಬಸವರಾಜುರವನ್ನು ಬಹುಮತದಿಂದ ಇಲ್ಲಿನ ಮತದಾರರು ಆಯ್ಕೆ ಮಾಡಿದಂತೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೂ ತಲುಪಿಸಿ ಜನರನ್ನು ಸಂಘಟನೆ ಮಾಡಬೇಕಾದ ಜವಾಬ್ದಾರಿ ಹೊಸ ಕಾರ್ಯಕರ್ತರದ್ದಾಗಿದೆ. ಪಕ್ಷ ಸಂಘಟನೆ ಮಾಡುವಾಗ ಹಿರಿಯ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಂಡು ಅವರ ಮಾರ್ಗದರ್ಶನದಲ್ಲಿ ಮುಂದುವರೆಯಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು. ಇದೇ ಸಂಧರ್ಭದಲ್ಲಿ ತಾಲ್ಲೂಕಿನ ಘಟಕದ ವಿವಿಧ…
ಮಧುಗಿರಿ: ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಪ್ರೇಮಿಗಳು ಜೋಡಿಯೊಂದು ಮೌಡ್ಯತೆ ತೊರೆದು ಭೀಮನ ಅಮಾವಾಸ್ಯೆಯಂದೇ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ವಾಲ್ಮೀಕಿ ಭಾವಚಿತ್ರದ ಎದುರು ನೂತನವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ಮಧುಗಿರಿಯಲ್ಲಿ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಚಿಂಪುಗಾನಹಳ್ಳಿ ಗ್ರಾಮದ ಯುವತಿ ಚಂದನಾ (18) ಹಾಗೂ ಅದೇ ಗ್ರಾಮದ 25 ವರ್ಷದ ಯುವಕ ಶ್ರೀಧರ್ ಕಳೆದ 6 ತಿಂಗಳಿನಿಂದ ಪರಸ್ಪರ ಪ್ರಿತಿಸುತ್ತಿದ್ದರು. ಇವರ ಪ್ರೀತಿಗೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಯಲ್ಲಿ ಮನೆ ಬಿಟ್ಟು ಓಡಿ ಹೋಗಿದ್ದ ಪ್ರೇಮಿಗಳು ರಕ್ಷಣೆ ಕೊಡುವಂತೆ ವೀಡಿಯೋ ಮೂಲಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದರು. ಬಳಿಕ ಜು20 ರ ಸೋಮವಾರ ಭೀಮನ ಅಮಾವಾಸ್ಯೆಯಂದು ಮೌಡ್ಯತೆ ತೊರೆದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಲ್ಮಿಕಿ ಭಾವ ಚಿತ್ರದ ಎದುರೇ ಸಂವಿಧಾನ ಪೀಠಿಕೆಯನ್ನೇ ಮಾಂಗಲ್ಯ ಧಾರಣೆಯ ಮಂತ್ರವಾಗಿ ಓದಿ ತಾಳಿಕಟ್ಟುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಳಿಕ…
ಕೊರಟಗೆರೆ: ಗುಡುಗು-ಮಿಂಚಿನ ನಡುವೆ ಬಿರುಗಾಳಿಯ ಮಳೆ ಬೀಳು ತ್ತಿರುವ ನಡುವೆಯೇ ಸೋಮವಾರ ಮಧ್ಯರಾತ್ರಿ ಕಳ್ಳರ ತಂಡ ಬೈರೇನಹಳ್ಳಿ ಮಧ್ಯದ ಅಂಗಡಿಯ ಬೀಗ ಮುರಿದು ಸುಮಾರು 2ಲಕ್ಷ 32ಸಾವಿರ ಮೌಲ್ಯದ 498 ಲೀಟರ್ ಮಧ್ಯ ಕಳ್ಳತನ ಮಾಡಿರುವ ಘಟನೆ ನಡೆದಿದೆ. ತುಮಕೂರು ನಗರ ವಾಸಿಯಾದ ಸೀನಪ್ಪ ಮಾಲೀಕತ್ವದ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂ ವ್ಯಾಪ್ತಿಯ ಬೈರೇನಹಳ್ಳಿಯ ಸಪ್ತಗಿರಿ ವೈನ್ಸ್ನಲ್ಲಿ ಕಳೆದ ವರ್ಷ ನಡೆದಿದ್ದ ಕಳ್ಳತನ ಮಾಸುವ ಮುನ್ನವೇ ಈಗ ಅದೇ ವೈನ್ಸ್ನಲ್ಲಿ ಮತ್ತೊಂದು ಸಲ ಕಳ್ಳತನ ನಡೆದು ಸಿಸಿಟಿವಿ ಸಮೇತ ಪರಾರಿ ಆಗಿದ್ದಾರೆ. ಬೈರೇನಹಳ್ಳಿ ಗ್ರಾಮದ ಹೊರವಲಯದ ಸಪ್ತಗಿರಿ ವೈನ್ಸ್ನ ಮಾಲೀಕ ಮತ್ತು ವ್ಯವಸ್ಥಾಪಕನ ದಿವ್ಯನಿರ್ಲಕ್ಷ್ಯದಿಂದ ಕಳ್ಳತನ ನಡೆದಿದೆ. ಮೊದಲ ಸಲ ಕಳ್ಳತನ ನಡೆದಾಗ ಪೊಲೀಸ್ ಇಲಾಖೆ ಸಿಸಿಟಿವಿ ಮತ್ತು ಭದ್ರತೆಗಾಗಿ ಸೆಕ್ಯುರಿಟಿ ನೇಮಿಸುವಂತೆ ಸೂಚನೆ ನೀಡಿದ್ದಾರೆ. ವೈನ್ಸ್ ಮಾಲೀಕ ನಿರ್ಲಕ್ಷ್ಯ ಮಾಡಿರುವ ಪರಿಣಾಮ ಕಳ್ಳರ ತಂಡ…
ತುಮಕೂರು : ಜಿಲ್ಲೆಯಲ್ಲಿ ಇಂದು 51 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 864 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 23, ಪಾವಗಡ-05, ಗುಬ್ಬಿ-03, ಕುಣಿಗಲ್-07, ಮಧುಗಿರಿ-02, ಶಿರಾ-04, ತಿಪಟೂರು-03, ತುರುವೇಕೆರೆ-01, ಚಿಕ್ಕನಾಯಕನಹಳ್ಳಿ-03 ಮಂದಿ ತಾಲೂಕಿನಲ್ಲಿ ಒಟ್ಟು 51 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 48 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 485 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 349 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 30 ಸಾವನ್ನಪ್ಪಿದ್ದು, ಬುಧವಾರ-02 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಚಿಕ್ಕನಾಯಕನಹಳ್ಳಿ: ಸೀಲ್ಡೌನ್ ಪ್ರದೇಶದಲ್ಲಿನ ನಿವಾಸಿಗಳಿಗೆ ಜೀವನೋಪಾಯದ ಅಗತ್ಯವಸ್ತು ಪೂರೈಸದೆ ನಿಲ್ರ್ಯಕ್ಷಿಸಲಾಗುತ್ತಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ 10ನೇವಾರ್ಡ್ನ ಬ್ರಾಹ್ಮಣರಬೀದಿಯ ಪೂರ್ವದಿಕ್ಕಿನ ರಸ್ತೆಯನ್ನು ಕಳೆದೆರಡುದಿನದ ಹಿಂದೆ ಕೊರೊನಾ ಸೋಂಕು ಪತ್ತೆಯಾದ ಕಾರಣಕ್ಕೆ ಸೀಲ್ಡೌನ್ ಮಾಡಲಾಗಿತ್ತು. ಆದರೆ ಸೀಲ್ಡೌನ್ ಆದ ನಂತರ ಅಲ್ಲಿರುವ ನಿವಾಸಿಗಳಿಗೆ ಜೀವನೋಪಾಯದ ಅಗತ್ಯವಸ್ತುಗಳನ್ನು ಸರಬರಾಜು ಮಾಡುವಲ್ಲಿ ಸ್ಥಳೀಯ ಪುರಸಭೆ ನಿಲ್ರ್ಯಕ್ಷವಹಿಸಿದ ಕಾರಣ ಕೆಲವರು ಸೀಲ್ಡೌನ್ ಪ್ರದೇಶದಿಂದ ಹೊರಕ್ಕೆ ತೆರಳಿ ತಮಗೆಬೇಕಾದ ದಿನಸಿ, ತರಕಾರಿ, ಔಷಧಿ, ಹಾಲು ಇತ್ಯಾದಿಗಳನ್ನು ತರಲಾರಂಭಿಸಿದರು. ಈ ಓಡಾಟವನ್ನು ಗಮನಿಸಿದ ಕೆಲವರಿಂದ ದೂರುಹೋದ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸೀಲ್ದಾರ್ ಹಾಜರಾಗಿ ಸೀಲ್ಡೌನ್ ಪ್ರದೇಶದಲ್ಲಿರುವ ಜನರನ್ನುದ್ದೇಶಿಸಿ ಮಾತನಾಡಿ ನೀವು ಯಾವುದೇ ಕಾರಣಕ್ಕೆ ಹೊರಗೆಹೋಗುವ ಹಾಗಿಲ್ಲ, ನಿಮಗೇ ಏನಾದರೂ ಬೇಕಿದ್ದರೆ ಕಾವಲಿರುವ ಸಿಬ್ಬಂದಿಗಳಿಂದ ವಸ್ತುಗಳನ್ನು ತರಿಸಿಕೊಳ್ಳಬಹುದೆಂದರು. ಈ ಮಾತಿಗೆ ಪ್ರತಿಕ್ರಿಯೆ ನೀಡಿದ ಸ್ಥಳೀಯರು ಇಲ್ಲಿ ಒಬ್ಬರೇ ಸಿಬ್ಬಂದಿ ಇದ್ದಾರೆ, ಅವರೂಸಹ ಸರಿಯಾಗಿ ಇರುವುದಿಲ್ಲ, ಇಲ್ಲಿ…
ತುಮಕೂರು: ತುಮಕೂರು ತಾಲ್ಲೂಕು ಪಂಚಾಯಿತಿ ಕೊನೆಯ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕವಿತಾ ರಮೇಶ್ ಅವರು, ಬುಧವಾರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಪ್ರಭಾರ ಅಧ್ಯಕ್ಷ ಶಾಂತಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು. ತಾಪಂ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕವಿತಾ ರಮೇಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ತಾಲ್ಲೂಕು ಪಂಚಾಯಿತಿ ಎಲ್ಲಾ ಸದಸ್ಯರ ಮತ್ತು ಅಧಿಕಾರಿಗಳ ಸಹಕಾರದೊಂದಿಗೆ ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನ ಹರಿಸುವೆ ಎಂದು ತಿಳಿಸಿದರು. ಕುಡಿಯುವ ನೀರಿಗೆ ಆಧ್ಯತೆ: ತಾಲ್ಲೂಕು ಪಂಚಾಯಿತಿ ಕೊನೆಯ ಅವಧಿ 1 ವರ್ಷವಿದ್ದು, ಈ ಅವಧಿಯಲ್ಲಿ ತಾಲ್ಲೂಕಿನಾದ್ಯಂತ ಪ್ರವಾಸ ಮಾಡಿ, ತಾಲ್ಲೂಕಿನಲ್ಲಿ ಉದ್ಬವಿಸಿರುವ ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು, ಜೊತೆಗೆ ವಿವಿಧ ಅಭಿವೃದ್ದಿ ಕಾರ್ಯಗಳ ಬಗ್ಗೆಯೂ ಹೆಚ್ಚಿನ ಆಸಕ್ತಿ ವಹಿಸಿ ಕೆಲಸ ಮಾಡುವುದಾಗಿ ಹೇಳಿದರು. ಭ್ರಷ್ಟಾಚಾರ ನಿರ್ಮೂಲನೆ: ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದಿಂದ…
ಮಧುಗಿರಿ: ಕರೋನದ ವೈರಸ್ ಹರಡದಂತೆ ಸರ್ಕಾರ ಲಾಕ್ ಡೌನ್, ಸೀಲ್ ಡೌನ್ ಮತ್ತಿತರರ ಕ್ರಮ ಕೈಗೊಳ್ಳುತ್ತಿದ್ದರೂ ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ನಿಯಂತ್ರಿಸುವ ಅಂದರೆ ಚೈನ್ ಬ್ರೇಕ್ ಮಾಡಲು ನಾನಾ ಪ್ರಯತ್ನಗಳು ನಡೆಯುತ್ತಲೇ ಇದೆ. ಮಧುಗಿರಿ ಪಟ್ಟಣದ ವಿಆರ್ ಎಸ್ ಟಿ ರಸ್ತೆಯಲ್ಲಿನ ಅಮೃತ ಟ್ರೇಡರ್ಸ್ ನ ಪಶು ಆಹಾರ ಮಳಿಗೆಯವರು ಮಾತ್ರ ಮಾರ್ಚ್ ಇಪ್ಪತ್ತನಾಲ್ಕು ರಿಂದ ಇಲ್ಲಿಯವರೆಗೂ ಸಾಮಾಜಿಕ ಅಂತರ ,ಮಾಸ್ಕ್ ಧರಿಸಿದವರಿಗೆ ಮಾತ್ರ ಪಶು ಆಹಾರದ ವಸ್ತುಗಳನ್ನು ನೀಡುತ್ತಿರುವುದು ಕಾಣಬಹುದು.ಇವರ ವ್ಯಾಪಾರ ಶೈಲಿ ವ್ಯಾಪಾರಸ್ಥರಿಗೆ ಮಾದರಿಯಾಗಿದೆ. ಕೊರೋನಾದಿಂದ ದೂರ ಉಳಿಯಲು ಇವರು ಅಂಗಡಿ ಸುತ್ತಲೂ ಸೀಲ್ಡ್ ಮಾದರಿಯಲ್ಲಿ ಅಡ್ಡ ಪಟ್ಟಿಗಳನ್ನು ಕಟ್ಟಿಕೊಂಡು ರೈತರೇ ಗ್ರಾಹಕರಾಗಿರುವುದರಿಂದ ರೈತರ ಕ್ಷೇಮಕ್ಕಾಗಿ ಸ್ಯಾನಿಟೈಸರ್ ಮಾಡಿ ನಂತರ ವ್ಯಾಪಾರ ಮಾಡುತ್ತಾರೆ. ಇವರಲ್ಲಿ ನಾಲ್ವರು ಕೆಲಸ ಮಾಡುತ್ತಿದ್ದು, ಅವರ ಆರೋಗ್ಯದ ದೃಷ್ಟಿಯನ್ನು ಕೇಂದ್ರೀಕರಿಸಿಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗದು ರೂಪದಲ್ಲಿ ಹಣ ಪಡೆಯಲು ಪ್ರತ್ಯೇಕವಾಗಿ ಮಹಿಳೆಯೊಬ್ಬರನ್ನು…
ತುಮಕೂರು: ಜಿಲ್ಲೆಯಲ್ಲಿ ಇಂದು 37 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 813 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 20, ಪಾವಗಡ-03, ಗುಬ್ಬಿ-3, ಕುಣಿಗಲ್-02 ಮಧುಗಿರಿ-1, ಶಿರಾ-06, ತಿಪಟೂರು-02 ಮಂದಿ ತಾಲೂಕಿನಲ್ಲಿ ಒಟ್ಟು 78 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಿಂದ 25 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 436 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 349 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 28 ಸಾವನ್ನಪ್ಪಿದ್ದು, ಮಂಗಳವಾರ-02 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು: ತುಮಕೂರು ಗ್ರಾಮಾಂತರ ಹಾಲಿ ಜೆಡಿಎಸ್ನ ಶಾಸಕ ಡಿ.ಸಿ.ಗೌರಿಶಂಕರ್ ವಿರುದ್ಧ ಜುಲೈ 18,2020 ರಂದು ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಕಲಿ ವಿಮಾ ಪಾಲಿಸಿಗಳನ್ನ ಸ್ವತಃ ತಯಾರು ಮಾಡಿ ಆ ಕ್ಷೇತ್ರದ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ವಿತರಿಸಿರುವ ಆರೋಪ ಕುರಿತು ಮೊಕದ್ದಮೆ ದಾಖಲು ಮಾಡಲಾಗಿದೆ. 2018 ರ ಚುನಾವಣೆಯ ಸಂದರ್ಭದಲ್ಲಿ ಕರ್ತವ್ಯ ನಿರತ ಚುನಾವಣಾ ಅಧಿಕಾರಿಗಳು ನಕಲಿ ಬಾಂಡ್ ಹಂಚಿಕೆ ಮಾಡುತ್ತಿದ್ದ ಜೆಡಿಎಸ್ನ ಮುಖಂಡೆ ಗೌರಮ್ಮ ಎನ್ನುವವರಿಂದ ಬಾಂಡ್ಗಳನ್ನು ವಶಪಡಿಸಿಕೊಂಡು ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಆ ಸಮಯದಲ್ಲಿಯೇ ದೂರು ದಾಖಲು ಮಾಡಲಾಗಿತ್ತು. ನಂತರ ತನಿಖೆಯ ಹಂತದಲ್ಲಿರುವಾಗ ಉಚ್ಛಾ ನ್ಯಾಯಾಲಯದಲ್ಲಿ ತನಿಖೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಪ್ರಥಮ ವರ್ತಮಾನ ವರದಿಯನ್ನ ರದ್ದುಗೊಳಿಸುವಂತೆ ಆರೋಪಿತರ ಪರವಾಗಿ ಉಚ್ಛಾನ್ಯಾಯಾಲಯದಲ್ಲಿ ಮನವಿ ಮಾಡಿ ಮಾನ್ಯ ಉಚ್ಛಾನ್ಯಾಯಾಲ ಅರ್ಜಿದಾರರ ಮನವಿಯನ್ನು ಪುರಸ್ಕರಿಸಿತ್ತು. ನಂತರ 2018ರ ಚುನಾಣೆಯಲ್ಲಿ ನಕಲಿ…











