Author: News Desk Benkiyabale

ತುಮಕೂರು:       ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಖಿಖಂI)ವು ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ಸಲುವಾಗಿ ಮೈಕಾಲ್, ಮೈಸ್ಪೀಡ್ ಹಾಗೂ ಡಿಎನ್‍ಡಿ ಎಂಬ ಮೂರು ಹೊಸ ಮೊಬೈಲ್ ಅಪ್ಲಿಕೇಶನ್‍ಗಳನ್ನು ಪ್ರಾರಂಭಿಸಿದೆ ಎಂದು ಕಾರ್ಯದರ್ಶಿ ಸುನಿಲ್ ಕೆ ಗುಪ್ತಾ ತಿಳಿಸಿದರು.       ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರವು ನಗರದ ಕನ್ನಡ ಭವನದಲ್ಲಿಂದು ಏರ್ಪಡಿಸಿದ್ದ ಗ್ರಾಹಕರ ಸಂಪರ್ಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು ಹಲವಾರು ಉತ್ತಮ ದೂರಸಂಪರ್ಕ ಸೇವೆಗಳನ್ನು ಪ್ರಾಧಿಕಾರ ಒದಗಿಸುತ್ತಾ ಬಂದಿದ್ದು, ಈಗ ಹೊಸದಾಗಿ 3 ಅಪ್ಲಿಕೇಶನ್‍ಗಳನ್ನು ಪ್ರಾರಂಭಿಸಿದೆ. ದೂರವಾಣಿ ಕರೆಯ ಗುಣ ಮಟ್ಟ ತಿಳಿಯಲು ಮೈಕಾಲ್, ಮೊಬೈಲ್ ನೆಟ್‍ವರ್ಕ್ (ಡೌನ್‍ಲೋಡಿಂಗ್ ಹಾಗೂ ಅಪ್‍ಲೋಡಿಂಗ್)ವೇಗವನ್ನು ತಿಳಿಯಲು ಮೈ ಸ್ಪೀಡ್ ಹಾಗೂ ಅನಪೇಕ್ಷಿತ ವಾಣಿಜ್ಯಾತ್ಮಕ ಸಂದೇಶ/ಕರೆಗಳನ್ನು ನಿಷ್ಕ್ರಿಯಗೊಳಿಸಲು ಡಿಎನ್‍ಡಿ ಅಪ್ಲಿಕೇಶನ್‍ಗಳೊಂದಿಗೆ ಹೊಸ ವೆಬ್ ಪೋರ್ಟಲ್ ಅನ್ನು ಪರಿಚಯಿಸಲಾಗಿದೆ. ಹೊಸ ಅಪ್ಲಿಕೇಶನ್‍ಗಳನ್ನು ಗೂಗಲ್ ಪ್ಲೇಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.       ದೇಶದಲ್ಲಿ 116ಕೋಟಿ ಗ್ರಾಹಕರು ಮೊಬೈಲ್…

Read More

ತುಮಕೂರು :       ನಗರದ ಹೊರವಲಯದ ಊರುಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಸದಸ್ಯರಿಗೆ ಹಾಗೂ ಸಂಘದ ನಿರ್ದೇಶಕರಿಗೂ ಸಹ ವಹಿವಾಟಿನ ಲೆಕ್ಕವನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.       ಸಂಘದ ಅಧ್ಯಕ್ಷ ಸುರೇಶ್ ಹಾಗೂ ಕಾರ್ಯದರ್ಶಿ ಶ್ರೀನಿವಾಸ್ ಅವರು ಹಾಲು ಉತ್ಪಾದಕರ ಸಂಘದ ವಹಿವಾಟಿನ ಮಾಹಿತಿಯನ್ನು ನೀಡುತ್ತಿಲ್ಲ, ಡೇರಿಗೆ ಹಾಕುವ ಹಾಲಿನ ಸಂಬಂಧಿಸಿದ ಚೀಟಿಯನ್ನು ನೀಡುತ್ತಿಲ್ಲ, ಹಾಲಿನ ಬಡವಾಡೆಯಲ್ಲಿಯೂ ಮೋಸ ಮಾಡುತ್ತಿದ್ದಾರೆ, ವಹಿವಾಟಿನ ಬಗ್ಗೆ ಲೆಕ್ಕ ಹೇಳುವಂತೆಯೇ ಇಲ್ಲ ಎಂದು ಹಾಲು ಉತ್ಪಾದಕರ ಸಂಘದ ನಿರ್ದೇಶಕ ಮಂಜುನಾಥ್ ದೂರಿದರು.       ಹಾಲು ಉತ್ಪಾದಕರ ಸಂಘವನ್ನು ಕುಟುಂಬದ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ, ಬಹುತೇಕ ಹಾಲು ಉತ್ಪಾದಕರ ಅನಕ್ಷರಸ್ಥರಾಗಿದ್ದು, ಅವರಿಗೆ ಯಾವುದೇ ಚೀಟಿಯನ್ನು ನೀಡುತ್ತಿಲ್ಲ, ಪ್ರತಿ ಬಟವಾಡೆಯಲ್ಲಿ ಮೂರು, ನಾಲ್ಕು ಲೀಟರ್ ಹಾಲಿನ ಹಣ ವ್ಯತ್ಯಾಸ ಬರುತ್ತಿದ್ದು, ಈ ಬಗ್ಗೆ ಪ್ರಶ್ನಿಸಿದರೇ, ಅದನೆಲ್ಲಾ ಕೇಳಲು ನೀನ್ಯಾರು ಎನ್ನುತ್ತಾರೆ ಎಂದು ಆಪಾದಿಸಿದರು.    …

Read More

ತುಮಕೂರು :       ಏನೇ ಕಷ್ಟ ಎದುರಾದರೂ ಸರಿ ಗ್ರಾಮಾಂತರ ಭಾಗದ ನಾಗವಲ್ಲಿ ಹಾಗು ಹೊನ್ನುಡಿಕೆ ಕೆರೆಗಳನ್ನು ಶೇ 80 ರಷ್ಟು ತುಂಬಿಸಿಕೊಡುವುದಾಗಿ ಗ್ರಾಮಾಂತರ ಶಾಸಕ ಡಿ ಸಿ ಗೌರೀಶಂಕರ್ ಭರವಸೆ ನೀಡಿದರು.       ಅವರು ಗೂಳೂರು,ಹೊನ್ನುಡಿಕೆ,ನಾಗವಲ್ಲಿ,ಹೆಬ್ಬೂರು ,ತೊಂಡಗೆರೆ,ಹೊನಸಿಗೆರೆ ಗೂಳರಿವೆ ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಿ ಮಾತನಾಡುತ್ತಿದ್ದರು, ಏತನೀರಾವರಿ ವ್ಯಾಪ್ತಿಗೊಳಪಡುವ ಕೆರೆಗಳನ್ನು ತುಂಬಿಸಲು 300 ಎಂಸಿಎಫ್ಟಿ ನೀರು ನಿಗದಿ ಮಾಡಲಾಗಿದೆ ,ಇದು ಸಂಪೂರ್ಣಅವೈಜ್ಞಾನಿಕವಾದುದು,ನಾಗವಲ್ಲಿ ಕೆರೆ ತುಂಬಿಸಲು 300 ಎಂಸಿಎಪ್ಟಿ ನೀರು ಬೇಕು, ಏತನೀರಾವರಿ ಯೋಜನೆ ವ್ಯಾಪ್ತಿಗೊಳಪಡುವ ಎಲ್ಲಾ ಕೆರೆ ತುಂಬಿಸಲು ಒಂದು ಟಿಎಂಸಿ ಗೂ ಅಧಿಕ ಪ್ರಮಾಣದ ನೀರು ಬೇಕು,ಈ ನೀರಿನ ಮಿತಿಯನ್ನು ಒಂದು ಟಿಎಂಸಿ ಗೆ ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪ್ರಸ್ತಾವನೆಯನ್ನೂ ಸಲ್ಲಿಸಲಾಗಿತ್ತು,ಇದರ ದಾಖಲೆಯನ್ನು ಕ್ಷೇತ್ರದ ಜನತೆಯ ಮುಂದಿಡುವುದಾಗಿ ತಿಳಿಸಿದರು.       ಚಿಕ್ಕಣ್ಣ ಸ್ವಾಮಿ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾಗವಲ್ಲಿ ಕೆರೆಗೆ ನೀರು ಬಿಡಬೇಡಿ ಬೇರೆ ಕೆರೆಗೆ…

Read More

ಗುಬ್ಬಿ :       ರಾಜಕೀಯದಲ್ಲಿ ಪರ ವಿರೋಧದ ಪ್ರತಿಭಟನೆ ಸಾಮಾನ್ಯವಾದದು. ಆದರೆ ಡಿ.ಕೆ.ಶಿವಕುಮಾರ್ ಅವರ ಬಂಧನಕ್ಕೂ, ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.       ಗುಬ್ಬಿ ತಾಲ್ಲೂಕು ನಿಟ್ಟೂರಿನ ಮರಿಯಮ್ಮ ದೇವಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಅಗ್ನಿವಂಶ ಕ್ಷತ್ರಿಯ (ತಿಗಳರ) ಸೇವಾ ಟ್ರಸ್ಟ್ ಆಯೋಜಿಸಿದ್ದ ನೂತನ ಅಂಗಡಿ ಮಳಿಗೆ ಉದ್ಘಾಟನೆ ಹಾಗೂ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಕ್ರಮ ಹಣದ ಪ್ರಕರಣದಲ್ಲಿ ಇಡಿ ತನಿಖೆ ನಡೆಸಿದೆ. ಶಿವಕುಮಾರ್ ಅವರಿಂದ ಸರಿಯಾದ ಮಾಹಿತಿ ಸಿಗದ ಹಿನ್ನಲೆಯಲ್ಲಿ ಬಂಧನಕ್ಕೆ ಒಳಪಡಿಸಿದ್ದಾರೆ. ಈ ಘಟನೆಗೂ ಬಿಜೆಪಿಯ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದರು.      ಪ್ರತಿಭಟನೆ ಮೂಲಕ ನ್ಯಾಯ ಕೇಳುವ ಹಕ್ಕು ಸಾಮಾನ್ಯರಿಗಿದೆ. ಪ್ರಜಾಪ್ರಭುತ್ವದಂತೆ ನ್ಯಾಯ ಸಮ್ಮತವನ್ನು ಪ್ರಶ್ನಿಸಬಹುದಾಗಿದೆ. ಆದರೆ ಸಾರ್ವಜನಿಕರಿಗೆ ತೊಂದರೆರ ಕೊಡದೆ ಶಾಂತರೀತಿಯಲ್ಲಿ ಪ್ರತಿಭಟನೆ ನಡೆಸಲಿ ಎಂದ ಅವರು ತಿಗಳ ಸಮುದಾಯ…

Read More

ಕೊರಟಗೆರೆ:       ರಾಜ್ಯದಲ್ಲಿ ಪ್ರವಾಹದಿಂದ ನಲುಗಿರುವ ನೆರೆ ಸಂತ್ರಸ್ಥರ ಬಗ್ಗೆ ನಿರ್ಲಕ್ಷ, ಕೇಂದ್ರ ಸರಕಾರದ ದ್ವೇಷದ ರಾಜಕಾರಣ ಮತ್ತು ಕೇಂದ್ರ ಸರಕಾರದ ಹತ್ತಾರು ಏಕಪಕ್ಷೀಯ ನಿರ್ಧಾರಗಳಿಂದ ಆಗಿರುವ ವೈಫಲ್ಯಗಳ ವಿರುದ್ದ ಬ್ಲಾಕ್ ಕಾಂಗ್ರೇಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.       ಪಟ್ಟಣದ ಸರಕಾರಿ ಬಸ್ ನಿಲ್ದಾಣದಿಂದ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ಕೊರಟಗೆರೆ ಬ್ಲಾಕ್ ಕಾಂಗ್ರೇಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಕೊರಟಗೆರೆ ತಹಶೀಲ್ದಾರ್ ಗೋವಿಂದರಾಜು ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.       ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಬಿ.ಎಸ್.ದಿನೇಶ್ ಮಾತನಾಡಿ ಕೇಂದ್ರ ಸರಕಾರದ ವೈಫಲ್ಯ ಮರೆಮಾಚಲು ಹಾಗೂ ಜನತೆಯ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರಕಾರ ಸ್ವತಂತ್ರ ಸ್ವಾಯತ್ತತೆ ಸಂಸ್ಥೆಗಳಾದ ಐಟಿ, ಈಡಿ ಹಾಗೂ ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ. ದ್ವೇಷದ ರಾಜಕಾರಣದ ಮೂಲಕ ಕೇಂದ್ರ ಮಾಚಿ ಸಚಿವ ಚಿದಂಬರಂ ಹಾಗೂ ಡಿ.ಕೆ.ಶಿವಕುಮಾರ್ ಬಂಧಿಸಿ ವಿರೋಧ ಪಕ್ಷದ…

Read More

ಮಧುಗಿರಿ:       ಶಾಲೆಯಲ್ಲಿ ಸುಮಾರು 6 ತಿಂಗಳಿಂದ ಶಿಕ್ಷಕ ಕರ್ತವ್ಯಕ್ಕೆ ಹಾಜರಾಗದ ಕಾರಣ ಗ್ರಾಮ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿ ಪೋಷಕರು ಬೀಗ ಹಾಕಿ ಪ್ರತಿಭಟಿಸಿದರು.       ತಾಲೂಕಿನ ಪುರವರ ಹೊಬಳಿಯ ಕೊಂಡವಾಡಿ ಗ್ರಾಪಂನ ಕಂಸಾನಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 40 ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಇಬ್ಬರು ಶಿಕ್ಷಕರಿದ್ದು ಕಳೆದ 3 ತಿಂಗಳ ಹಿಂದೆ ರಜೆಯಲ್ಲಿ ಹೋದ ಶಿಕ್ಷಕರೊಬ್ಬರು ರಜೆಗೆ ಹೋದವರು ಮತ್ತೆ ಇತ್ತ ಕಳೆ ಸುಳಿದಿಲ್ಲಾ, ಇಲ್ಲಿ ಏಕೈಕ ಶಿಕ್ಷಕರಿದ್ದಾರೆ, ಇಲಾಖೆಯ ಮೀಟಿಂಗ್, ಅಕ್ಷದಾಸೋಹ, ಇದರ ಜತೆ ಬಿಎಲ್‍ಓ ಹೊಣೆಯನ್ನು ನಿಭಯಿಸುತಿದ್ದು ಈ ಭಾಗಗ ಮಕ್ಕಳು ಶಿಕ್ಷಣ ವಂಚಿತರಾಘುತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.       ಕಳೆದ ಆರು ತಿಂಗಳಿಂದ ಗೈರಾಗುತ್ತಿರುವ ಶಿಕ್ಷಕರನ್ನು ತೆಗೆದು ಬೇರೆ ಶಿಕ್ಷಕರನ್ನು ನಿಯೋಜಿಸುವಂತೆ ಹಲವು ಬಾರಿ ಮನವಿ ಪತ್ರ ನೀಡಿದದ್ದೇವೆ, ಆದರೆ ಇಲಾಖೆಯ ಅಕಾರಿ ಈ ಬಗ್ಗೆ ನಿರ್ಲಕ್ಷ್ಯಿಸಿದ್ದು ಬಡ ಮಕ್ಕಳು ಅಕ್ಷರಬ್ಯಾಸದಿಂದ ವಂಚಿತರಾಗುತಿದ್ದಾರೆ. ನರಸಿಂಹರೆಡ್ಡಿ…

Read More

ತುಮಕೂರು:       ಪಾಲಿಕೆ ವ್ಯಾಪ್ತಿಯಲ್ಲಿರುವ 35 ವಾರ್ಡು ಹಾಗೂ 22 ಹಳ್ಳಿಗಳಲ್ಲಿರುವ ಅನಧಿಕೃತ ಆಸ್ತಿ/ಸ್ವತ್ತು/ಕಟ್ಟಡಗಳ ಮೇಲೆ ವಿಧಿಸಲಾಗುತ್ತಿರುವ ದುಪ್ಪಟ್ಟು ತೆರಿಗೆ ನಿಯಮವನ್ನು ಕೈಬಿಡಬೇಕೆಂದು ಪಾಲಿಕೆ ಸದಸ್ಯರೆಲ್ಲಾ ಒಕ್ಕೊರಲಿನಿಂದ ಆಗ್ರಹಿಸಿದರು.       ಪಾಲಿಕೆ ಸಭಾಂಗಣದಲ್ಲಿಂದು ಜರುಗಿದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ಪಾಲಿಕೆಯಿಂದ ದುಪ್ಪಟ್ಟು ತೆರಿಗೆ ವಸೂಲಿ ಮಾಡುವುದರಿಂದ ಬಡಜನರಿಗೆ ಹೊರೆಯಾಗುತ್ತಿದೆ. ಈ ನಿಯಮವನ್ನು ಕೈಬಿಡಬೇಕೆಂದು ಹಿಂದಿನ ತುರ್ತು ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದರೂ ಇದುವರೆಗೂ ಕ್ರಮಕೈಗೊಂಡಿಲ್ಲದಿರುವುದು ಅಧಿಕಾರಿಗಳ ಬೇಜವಾಬ್ದಾರಿತನ. ಕೂಡಲೇ ನಿಯಮವನ್ನು ಕೈಬಿಡಬೇಕೆಂದು ಸದಸ್ಯರೆಲ್ಲ ಒಮ್ಮತದಿಂದ ಪಟ್ಟು ಹಿಡಿದರು.       ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಯಾಜ್ ಮಾತನಾಡಿ, ಅನಧಿಕೃತ ಆಸ್ತಿಗಳಿಂದ ವಸೂಲಿ ಮಾಡುತ್ತಿರುವ ದುಪ್ಪಟ್ಟು ತೆರಿಗೆ ನಿಯಮವನ್ನು ಕೈಬಿಡುವುದರೊಂದಿಗೆ ಪಾಲಿಕೆ ವ್ಯಾಪ್ತಿಯಲ್ಲಿರುವ ಅನಧಿಕೃತ ಆಸ್ತಿಗೆ ಸಂಬಂಧಿಸಿದ ಖಾತಾ ನಕಲ(ನಮೂನೆ 3)ನ್ನು ನೀಡಬೇಕು ಹಾಗೂ ವಿದ್ಯುತ್ ಸಂಪರ್ಕಕ್ಕಾಗಿ ಎನ್‍ಓಸಿ (ನಿರಾಕ್ಷೇಪಣಾ ಪತ್ರ)ಯನ್ನು ಕಡ್ಡಾಯಗೊಳಿಸಬಾರದೆಂದು ಮೂರು ಬೇಡಿಕೆಗಳನ್ನು ಸಭೆಯ ಮುಂದಿಟ್ಟರಲ್ಲದೆ…

Read More

ತುಮಕೂರು:        ಜಿಲ್ಲೆಯಲ್ಲಿ ರಸ್ತೆ ಸುರಕ್ಷಾತಾ ನಿಯಮಗಳನ್ನ ಉಲ್ಲಂಘಿಸಿರುವ 257 ವಾಹನ ಸವಾರರ ಚಾಲನಾ ಪರವಾನಗಿ(ಡಿ.ಎಲ್) ಹಾಗೂ 45 ವಾಹನ ಪರವಾನಗಿಯನ್ನು ಅಮಾನತ್ತು ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಅವರು ತಿಳಿಸಿದರು.       ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ರಸ್ತೆ ಸುರಕ್ಷಾತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತೀ ಹೆಚ್ಚು ಸಂಖ್ಯೆಯ ಅಪಘಾತಗಳು ಹಾಗೂ ಮರಣಗಳು ಸಂಭವಿಸುತ್ತಿವೆ. ಅಪಘಾತಗಳನ್ನು ತಡೆಗಟಲು ಆರ್.ಟಿ.ಒ ಹಾಗೂ ಹೆದ್ದಾರಿ ಪ್ರಾಧಿಕಾರ, ಪೊಲೀಸ್, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.       ಅಪಘಾತ ತಡೆಗಟ್ಟಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಿರ್ಮಾಣಗೊಂಡಿರುವ ಕಿರು ಚಿತ್ರವನ್ನು ಎಲ್ಲಾ ಶಾಲಾ-ಕಾಲೇಜು, ಸಂಸ್ಥೆಗಳಲ್ಲಿ ಅರಿವು ಮೂಡಿಸಬೇಕು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ, ಇಲಾಖೆಗಳ ವೆಬ್‍ಪೇಜ್‍ಗಳಲ್ಲಿ ಪ್ರಚಾರ ಪಡಿಸಿ ಎಲ್ಲರಿಗೂ ಶೇರ್ ಮಾಡಬೇಕು ಎಂದು ಆರ್.ಟಿ.ಒ ಹಾಗೂ…

Read More

ತುಮಕೂರು:       ಒಕ್ಕಲಿಗ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯ ಬೇರೆ ಸಮುದಾಯದವರಿಗೆ ಆಗಿದ್ದರೆ, ಸಂಘಟಿತರಾಗಿ ಹೋರಾಡುತ್ತಿದ್ದರು, ಆದರೆ ಒಕ್ಕಲಿಗ ಸಮುದಾಯವನ್ನು ತುಳಿಯುವ ಯತ್ನ ಮಾಡುತ್ತಿದ್ದರು, ಒಕ್ಕಲಿಗ ಸಮುದಾಯವು ಮಲಗಿದೆ, ಇದೇ ಮನೋಸ್ಥಿತಿ ಮುಂದುವರೆದರೆ ಸಮಾಜ ಕೆಟ್ಟ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಎಚ್ಚರಿಕೆ ನೀಡಿದರು.       ನಗರದ ಕುಂಚಿಟಿಗರ ಸಮುದಾಯಭವನದಲ್ಲಿ ನಡೆದ ತುಮಕೂರು ಜಿಲ್ಲಾ ಒಕ್ಕಲಿಗ ನೌಕರರ ವೇದಿಕೆ ಏರ್ಪಡಿಸಿದ್ದ 11ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.        ಕುಮಾರಸ್ವಾಮಿ ಮುಖ್ಯಮಂತ್ರಿ ಪದವಿಯಿಂದ ಕೆಳಗೆ ಇಳಿದ ಕ್ಷಣದಿಂದ ವಿಧಾನಸೌಧದಲ್ಲಿ ಒಕ್ಕಲಿಗ ಸಮುದಾಯದ ನೌಕರರಿಗೆ ಆಗಿರುವ ತೊಂದರೆಯನ್ನು ಅರಿತುಕೊಳ್ಳಬೇಕಿದೆ, ದೇಶದಲ್ಲಿ ಯಾರು ಮಾಡದೇ ಇರುವುದನ್ನು ಡಿ.ಕೆ.ಶಿವಕುಮಾರ್ ಅವರು ಮಾಡಿದ್ದಾರೆಯೇ? ವೀರಶೈವ-ಲಿಂಗಾಯತ ಸಮುದಾಯದ ಯಡಿಯೂರಪ್ಪ ಅವರಿಗೆ ಸಿಎಂ ಪದವಿ ತಪ್ಪಿದ ತಕ್ಷಣವೇ ರಾಜ್ಯದಲ್ಲಿ ಹೋರಾಟ ಶುರುವಾದವು, ಆದರೆ ಜಿಲ್ಲೆಯಲ್ಲಿ ದೇವೇಗೌಡರು ಸೋತರು, ಕುಮಾರಸ್ವಾಮಿ ಅವರನ್ನು ಕುತಂತ್ರದಿಂದ…

Read More

ತುರುವೇಕೆರೆ :       ಮಾಜಿ ಸಚಿವ ಡಿ.ಶಿವಕುಮಾರ್‍ರವರನ್ನು ಭಂದಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಒಕ್ಕಲಿಗರನ್ನು ತುಳಿಯ ಪ್ರಯತ್ನಕ್ಕೆ ಮುಂದಾಗಿದೆ ಎಂದು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.       ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಫ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ದ್ವೇಶ ರಾಜಕಾರಣಕ್ಕೆ ಮುಂದಾಗಿ ಸಂವಿಧಾನ ಭದ್ದವಾಗಿ ರೂಪಿತಗೊಂಡಿರುವ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಇ.ಡಿ, ಐ.ಟಿ ಹಾಗೂ ಸಿ.ಬಿ.ಐ.ಗಳ ಮೂಲಕ ಪ್ರಜಾಫೃಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ.         ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಭಂದಿಸುವ ಮೂಲಕ ಗುಜರಾತ್ ಚುನಾವಣೆಯ ಮುಖಭಂಗದ ಸೇಡನ್ನು ತೀರಿಸಿಕೊಂಡಿದ್ದಾರೆ. ಇದು ಸಂವಿಧಾನದ ಕಗ್ಗೊಲೆ ಇ.ಡಿ.ವಿಚಾರಣೆಗೆ ಒಂದು ದಿನವೂ ತಪ್ಪಿಸಿಕೊಳ್ಳದೆ ಪ್ರಾಮಾಣಿಕವಾಗಿ ಹಾಜರಾದ ಡಿ.ಕೆ.ಶಿವಕುಮಾರ್ ಭಂದನದ ಹಿಂದೆ ಕೇಂದ್ರದ ಕೈವಾಡವಿದೆ. ಇದು ಕನಾಟಕದಲ್ಲಿ ಒಕ್ಕಲಿಗ ನಾಯಕರನ್ನು ತುಳಿಯುವ ಪ್ರಯತ್ನಕ್ಕೆ ಬಿಜೆಪಿ ಮುಂದಾಗಿದೆ, ಡಿ.ಕೆ.ಶಿವಕುಮಾರ್ ಮಾಡಿರುವ ವ್ಯವಹಾರಗಳೆಲ್ಲವೂ ಕಾನೂನು ಬದ್ದವಾಗಿವೆ. ಆದರೂ ವಿಚಾರಣೆ ನೆಪವೊಡ್ಡಿ ಭಂದಿಸಿರುವುದು…

Read More