Author: News Desk Benkiyabale

ಕೊರಟಗೆರೆ:       ನಮ್ಮದೇಶದ ಶಿಕ್ಷಣ ಕ್ಷೇತ್ರದ ನೀತಿಗಳು ಪ್ರಾಥಮಿಕ ಶಾಲಾ ಶಿಕ್ಷಣವನ್ನು ಅಪಾಯದಅಂಚಿಗೆತಲುಪುವಂತೆ ಮಾಡಿದೆಎಂದು ಮಾಜಿಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ವಿಷಾದ ವ್ಯಕ್ತಪಡಿಸಿದರು.       ಪಟ್ಟಣದ ಮಾರುತಿಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದಡಾ.ಎಸ್.ರಾಧಕೃಷ್ಣನ್‍ರವರ 132ನೇ ಜಯಂತಿಯ ಪ್ರಯುಕ್ತ ಗುರುವಾರ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.       ಸರಕಾರ ಖಾಸಗಿ ಶಾಲೆಗಳಿಗೆ ಅನುಮತಿ ನೀಡಿದ್ದೇ ಸರಕಾರಿ ಶಾಲೆಗಳ ಅವನತಿಗೆ ಮೂಲ ಕಾರಣವಾಗಿದೆ. ಖಾಸಗಿ ಶಾಲೆಗಳ ವಾಹನಗಳು ಮನೆಯ ಬಾಗಿಲಿಗೆ ಬಂದು ಸರಕಾರಿ ಶಾಲೆಗಳು ಮುಚ್ಚುತ್ತೀವೆ. ಸರಕಾರಿ ಶಾಲೆಗಳಲ್ಲಿ ಉತ್ತಮಗುಣಮಟ್ಟದ ಶಿಕ್ಷಣ ಕಲ್ಪಿಸಿದರೇ ಖಾಸಗಿ ಶಾಲೆಗಳ ಅವಶ್ಯಕತೆಯೇ ಬರುವುದಿಲ್ಲ ಎಂದು ತಿಳಿಸಿದರು.       ತಂತ್ರಜ್ಞಾನದಲ್ಲಿಇಡೀ ವಿಶ್ವಕ್ಕೆ ಭಾರತಕೊಡುಗೆಅಪಾರವಾಗಿದೆ. ನಮ್ಮರಾಜಧಾನಿ ಬೆಂಗಳೂರಿನಲ್ಲಿ ದೇಶದ ಶೇ.60ರಷ್ಟು ಸಾಪ್ಟ್‍ವೇರ್ ಕಂಪನಿಗಳೇ ತಂತ್ರಾಂಶತಯಾರು ಮಾಡುತ್ತೀವೆ. ಇದರಿಂದದೇಶ ಮತ್ತುರಾಜ್ಯಕ್ಕೆ ನೂರಾರುಕೋಟಿ ಲಾಭ ಬರುತ್ತೀದೆ. ಶಿಕ್ಷಣ ಎಂಬುದು ಮುಂದಿನ ಪೀಳಿಗೆಯನ್ನು ಮಾಡಲಿದೆ. ಇದರ ಗುರುತ್ತರ ಜವಾಬ್ದಾರಿ ಮತ್ತುಕರ್ತವ್ಯ ಶಿಕ್ಷಕರದಾಗಿದೆ ಎಂದು ಹೇಳಿದರು.…

Read More

ಕೊರಟಗೆರೆ:       ಒಂಟಿ ಮಹಿಳೆ ಮನೆಯಲ್ಲಿ ದರೋಡೆ ಮಾಡಿದ್ಧ ಆರೋಪಿಗಳನ್ನ ಕೊರಟಗೆರೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.       ಕೊರಟಗೆರೆ ತಾಲ್ಲೂಕಿನ ಅರಸಾಪುರ ಗ್ರಾಮದಲ್ಲಿ ಆಗಸ್ಟ್ 12 ರಂದು ಒಂಟಿ ಮನೆಯನ್ನೇ ಟಾರ್ಗೆಟ್ ಮಾಡಿ ಹೊಂಚು ಹಾಕಿ ಮನೆಯಲ್ಲಿದ್ದ ಓರ್ವ ಮಹಿಳೆಯ ಕೈಕಾಲು ಹಗ್ಗದಿಂದ ಕಟ್ಟಿ ಮನೆಯಲ್ಲಿದ್ದ ಚಿನ್ನಾಭರಣ. ಎರಡು ಮೊಬೈಲ್‍ಗಳನ್ನು ದೋಚಿ ಪರಾರಿಯಾಗಿದ್ದರು..ಘಟನಾ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕೊರಟಗೆರೆ ಪೊಲೀಸರು ಬಲೆಬೀಸಿದ್ದರು.       ತುಮಕೂರು ಎಸ್ಪಿ ಡಾ ಕೋನ ವಂಶಿಕೃಶಷ್ಣ ಘಟನಾ ಸ್ಧಳಕ್ಕೆ ಭೇಟಿ ನೀಡಿ ಎಎಸ್ಪಿ ಉದೇಶ್, ಮಧುಗಿರಿ ಡಿವೈಎಸ್ಪಿ ಧರಣೇಶ್ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಏ ಎಫ್.ಕೆ ನದಾಫ್, ಪಿಎಸೈ ಮಂಜುನಾಥ್ ಬಿ.ಸಿ.ಹಾಗೂ ಸಿಬ್ಬಂದಿಗಳಾದ ವೆಂಕಟೇಶ್. ಮೋಹನ್ ದೊಡ್ಡಲಿಂಗಯ್ಯ.ಲೋಹಿತ್, ಶಿವಪ್ರಸಾದ್ ಹಾಗೂ ತಾಂತ್ರಿಕ ಸಿಬ್ಬಂದಿ ರಮೇಶ್ ಸೇರಿದ ತಂಡ ತಮಿಳುನಾಡಿನಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಚಾಪರಪಲ್ಲಿ…

Read More

ತುಮಕೂರು:       60 ವರ್ಷ ತುಂಬಿದ ರೈತರಿಗೆ ಕನಿಷ್ಠ ಪಿಂಚಣಿ, ಕೃಷಿ ಭೂಮಿಯಲ್ಲಿ ಅಂರ್ತಜಲ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ತುಮಕೂರು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.       ರೈತರ ಹಕ್ಕೋತ್ತಾಯ ದಿನದ ಅಂಗವಾಗಿ ಟೌನ್‍ಹಾಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸ ಲಾಯಿತು.       ಈ ವೇಳೆ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಗಿರೀಶ್, ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ತೆಂಗು ಮತ್ತು ಅಡಿಕೆ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದು, ನಷ್ಟಕ್ಕೆ ಒಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು, ರೈತರಿಗೆ ವೈಜ್ಞಾನಿಕವಾಗಿ ಫಸಲ್ ಭೀಮಾ ಯೋಜನೆಯನ್ನು ಜಾರಿ ಮಾಡ ಬೇಕೆಂದು ಒತ್ತಾಯಿಸಿದರು.       ಜಿಲ್ಲೆಯ ನೀರಾವರಿ ಯೋಜನೆಗಳಾದ ಹೇಮಾವತಿ, ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು…

Read More

ತುಮಕೂರು:       ವಿದ್ಯಾರ್ಥಿಗಳಿಗೆ ಅಕ್ಷರದೊಂದಿಗೆ ಬದುಕಿನ ಮೌಲ್ಯಗಳ ಬಗ್ಗೆ ಅರಿವನ್ನು ಮೂಡಿಸುವವರೇ ನಿಜವಾದ ಗುರು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.          ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ(ದಕ್ಷಿಣ)ಯ ಸಹಯೋಗದಲ್ಲಿಂದು ನಗರದ ಅಮಾನಿಕೆರೆಯ ಗಾಜಿನಮನೆಯಲ್ಲಿ ಏರ್ಪಡಿಸಿದ್ದ ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಅವರ 132ನೇ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಶಿಕ್ಷಣಕ್ಕೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಶಕ್ತಿಯಿರುತ್ತದೆ. ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಕ್ಕಳು ಹಿರಿಯರ ಹಾಗೂ ಶಿಕ್ಷಕರ ನಡೆ-ನುಡಿಗಳನ್ನು ಅನುಸರಿಸುವ ಮನೋಭಾವ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಬುದ್ಧಿ ಹೇಳುವ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಮಗು ತನ್ನ ಜಗತ್ತಿನಲ್ಲಿ ಶಿಕ್ಷಕನೇ “ಸೂಪರ್ ಮ್ಯಾನ್”. ಗುರುವಿಗೆ ತಿಳಿಯದಿರುವ ವಿಷಯವೇ ಇಲ್ಲ ಎಂದು ಭಾವಿಸಿಕೊಂಡಿರುತ್ತದೆ. ಪ್ರತಿ ಮಗುವಿನ ಉತ್ತಮ ಭವಿಷ್ಯದ ಜೀವನವನ್ನು ರೂಪಿಸುವ ಶಕ್ತಿ…

Read More

ಮಧುಗಿರಿ :       ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಗುರುವಾರ ಡಿಕೆಶಿ ಅಭಿಮಾನಿ ಬಳಗ ಮತ್ತು ಕನ್ನಡ ಜಾಗೃತಿ ವೇದಿಕೆ ವತಿಯಿಂದ ಕರೆ ನೀಡಿದ್ದ ಮಧುಗಿರಿ ಬಂದ್ ಬಾಗಶಃ ಯಶಸ್ವಿಯಾಗಿದೆ.       ಬೆಳಗ್ಗೆ 8 ಗಂಟೆಯಿಂದಲೇ ಡಿಕೆಶಿ ಅಭಿಮಾನಿಗಳು ಮತ್ತು ಕನ್ನಡ ಜಾಗೃತಿ ವೇದಿಕೆ ಕಾರ್ಯಕರ್ತರು ಪಟ್ಟಣದಾಧ್ಯಂತ ಸಂಚರಿಸಿ ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸಿ ಬಂದ್ ಸಹಕರಿಸುವಂತೆ ಮನವಿ ಸಲ್ಲಿಸಿ ಕೇಂದ್ರ ಸರ್ಕಾರದ ವಿರುದ್ದ ಘೋಷನೆ ಕೂಗಿದರು.       ಸಣ್ಣಪುಟ್ಟ ಕೇರಿಗಳಲ್ಲಿ ಅಂಗಡಿಗಳು ತೆರೆದಿರುವುದು ಹೊರತುಪಡಿಸಿದರೆ ಬಹುತೇಕ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದವು. ವಾಹನ ಸಂಚಾರವೂ ವಿರಳವಾಗಿತ್ತು. ನಂತರ ಪಟ್ಟಣದ ಡೂಂ ಲೈಟ್ ವೃತ್ತದಲ್ಲಿ ಜಮಾಯಿಸಿ ಡಿಕೆಶಿ ಬಂಧನದ ವಿರುದ್ದ ಕಿಡಿ ಕಾರಿದರು.       ದ್ವೇಷದ ರಾಜಕಾರಣ ಮಾಡುತ್ತಿರುವ ಬಿಜೆಪಿ ತನ್ನ ವರ್ತನೆಯನ್ನು ಬದಲಾಯಿಸಿಕೊಳ್ಳಬೇಕು. ಮಾಜಿ ಸಚಿವ ಡಿಕೆ.ಶಿವಕುಮಾರ್‍ರವರನ್ನು ತಕ್ಷಣ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು…

Read More

ಗುಬ್ಬಿ :       ಸರ್ಕಾರಿ ಬಸ್ ಮತ್ತು ದ್ವಿಚಕ್ರವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಸಾವನ್ನಪ್ಪಿದ ಧಾರುಣ ಘಟನೆ ಬುಧವಾರ ಮುಂಜಾನೆ ತಾಲ್ಲೂಕಿನ ಎಚ್.ಎಚ್.ಗೇಟ್ ಪೆಟ್ರೋಲ್ ಬಂಕ್ ಬಳಿಯ ರಾ.ಹೆ.206 ರಲ್ಲಿ ನಡೆದಿದೆ.       ಚಿಕ್ಕನಾಯಕನಹಳ್ಳಿ ತಾಲ್ಲೂಕು ದೊಡ್ಡಎಣ್ಣೆಗೆರೆ ಗ್ರಾಮದ ದಂಪತಿ ಈಶ್ವರಯ್ಯ(35) ಮತ್ತು ಗಾಯತ್ರಿದೇವಿ(30) ಮೃತಪಟ್ಟವರು. ಬೆಂಗಳೂರಿನ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುವ ಈಶ್ವರಯ್ಯ ಕುಟುಂಬ ಸಮೇತ ತಮ್ಮ ಸ್ವಗ್ರಾಮದಿಂದ ಹಬ್ಬ ಮುಗಿಸಿ ಮರಳಿ ಬೆಂಗಳೂರಿನತ್ತ ಬೈಕ್‍ನಲ್ಲಿ ಸಾಗುವ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ. ತುಮಕೂರಿನಿಂದ ಮಡಿಕೇರಿಯತ್ತ ಸಾಗಿದ್ದ ಸರ್ಕಾರಿ ಬಸ್ ನೇರ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಈಶ್ವರಯ್ಯ ಸಾವನ್ನಪ್ಪಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದ ಗಾಯತ್ರಿದೇವಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.       9 ವರ್ಷದ ಕೀರ್ತಿ ಎಂಬ ಪುತ್ರ ಅದೃಷ್ಟವಶಾತ್ ಗಾಯಗಳಿಂದ ಬದುಕುಳಿದಿದ್ದು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪಾವಗಡ :        ತಾಲ್ಲೂಕಿನ ಬೋಡರಹಳ್ಳಿ ಗ್ರಾಮದಲ್ಲಿ ಗಣಪತಿ ಹಬ್ಬವನ್ನು ಮನೆ ಮನೆಗೆ ಒಂದು ಗಿಡ ನೆಡುವ ಮೂಲಕ ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಆಚರಿಸಿದರು.        ಪಾವಗಡ ಪಿಎಸ್ ಐ ರಾಘವೇಂದ್ರ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥ ಬಾಲಾಜಿ, ಗಣೇಶ ಚತುರ್ಥಿ ಮನೆ ಮಂದಿ, ಊರು ಕೇರಿಯವರನ್ನೆಲ್ಲಾ ಒಂದುಗೂಡಿಸುವ ಹಬ್ಬ. ಹಾಗೆಯೇ ಇದೀಗ ಅದು ಪರಿಸರಪ್ರೇಮಿಗಳನ್ನು ಒಂದುಗೂಡಿಸುವ ಹಬ್ಬವೂ ಹೌದು. ಗಣೇಶ ಹಬ್ಬವನ್ನು ಪರಿಸರಸ್ನೇಹಿಯನ್ನಾಗಿಸಲು ನಮ್ಮ ಹಳ್ಳಿಯಲ್ಲಿ ಈ ಬಾರಿ ಹಬ್ಬವನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದೇವೆ. ಕಾರಣ ಇಷ್ಟೆ, ಈ ಬಾರಿನೂ ಮಳೆ ಇಲ್ಲ, ಬೆಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ.       ಕೆರೆಗಳು ಭತ್ತಿ ಹೊಗಿವೆ. ಕೊಳವೇ ಬಾವಿಗಳಲ್ಲಿ ನೀರು ಕಮ್ಮಿಯಾಗಿದೆ ಹಾಗು ಕೆಲವು ನಿಂತು ಹೋಗಿವೆ. 1000-1200 ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಮಳೆಗಾಲದಲ್ಲೇ ಇಂತಹ ಪರಿಸ್ಥಿತಿ ಎಂದರೆ,…

Read More

 ತುಮಕೂರು:       ನಗರದ ತಿಲಕ್‍ಪಾರ್ಕ್ ಪೊಲೀಸ್ ವೃತ್ತ ನಿರೀಕ್ಷಕಿ ಪಾರ್ವತಮ್ಮ ಈಚೆಗೆ ರೌಡಿ ಶೀಟರ್‍ಗಳಿಗೆ ಕೊಟ್ಟ ವಾರ್ನಿಂಗ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು ವಿಡಿಯೋ ವೈರೆಲ್ ಆಗಿದೆ.       ಕರ್ತವ್ಯದಲ್ಲಿದ್ದ ಸಿಪಿಐ ಪಾರ್ವತಮ್ಮ ರೌಡಿ ಶೀಟರ್‍ಗಳಿಗೆ ಪರಿವರ್ತನಾ ಪಾಠ ಹೇಳಲು ಹೋಗಿ ತಾವೇ ಪಾಠ ಕಲಿಯುವಂತಹ ಸ್ಥಿ?ತಿಗೆ ತಾವೇ ತಂದುಕೊಂಡಿದ್ದಾರೆ ಎಂದು ಕೆಲ ಅಧಿಕಾರಿಗಳೇ ಹೇಳುತ್ತಿದ್ದಾರೆ.       ಅಸಂಬದ್ಧ ವಾರ್ನಿಂಗ್, ಒಣ ಪ್ರತಿಷ್ಠೆ ತೋರಿದ ಸಿಪಿಐಗೆ ಗರ್ವಭಂಗವಾಗಿದೆ. ನಾಗರೀಕ ಸಮಾಜದ ಶಾಂತಿ, ಸೌಹಾರ್ದತೆ ಕಾಪಾಡುವುದು ಪೆÇಲೀಸ್ ಇಲಾಖೆ ಕರ್ತವ್ಯ. ಆದರೆ, ತಾವು ಏನು, ಹೇಳ್ತಿದ್ದೇನೆ ಎಂಬ ಅರಿವೂ ಇಲ್ಲದೆ ಏಕಾಏಕಿ ಸಿಂಗಂ ಆಗಲು ಹೊರಟ ಲೇಡಿ ಟೈಗರ್‍ನ ದಬ್ಬಾಳಿಕೆಗೆ ಜನ ಮುಸಿ ಮುಸಿ ನಗುವಂತಾಗಿದೆ.       ಠಾಣೆ ಮುಂದೆ ನಿಂತ ಪಾರ್ವತಮ್ಮ ಗನ್ ಲೋಡ್ ಆಗಿದೆ, ಎನ್‍ಕೌಂಟರ್ ಮಾಡ್ಬಿಡ್ತೀನಿ ಎನ್ನುವ ದಾಟಿಯಲ್ಲಿ ಮಾತಾಡಿದ್ದಾರೆ. ನಿಮ್ಮಲ್ಲಿ ಮದುವೆ ಆಗದವರು…

Read More

ತುಮಕೂರು:       ಹೇಮಾವತಿ ಉಪನಾಲೆ 24ರಲ್ಲಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.       ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ ಜಿಲ್ಲೆಗೆ ಹೇಮಾವತಿ ನೀರನ್ನು ಹರಿಸುವ ಪ್ರಯತ್ನವನ್ನು ಮಾಡದ ರಾಜಕಾರಣಿಗಳು, ಹೇಮಾವತಿ ವಿಚಾರವನ್ನು ಕೇವಲ ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.       ಉಪನಾಲೆ 24ರ ವ್ಯಾಪ್ತಿಯಲ್ಲಿ ಬರುವ ಗುಬ್ಬಿ ತಾಲ್ಲೂಕಿನ ಎಸ್.ಕೊಡಗೀಹಳ್ಳಿ, ಕುನ್ನಾಲ, ಚಂಗಾವಿ, ಹಿಂಡಿಸ್ಕರೆ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸದೆ, ಉಪನಾಲೆ 23, 25ಕ್ಕೆ ಮಾತ್ರ ಹೇಮಾವತಿ ನೀರನ್ನು ಹರಿಸಲಾಗುತ್ತಿದೆ. ಕುಣಿಗಲ್ ಮತ್ತು ಸಿಎಸ್‍ಪುರ ಕೆರೆಗಳಿಗೆ ನೀರು ಹರಿಸುವಾಗ ಮಾತ್ರ ಉಪನಾಲೆ 24ರಲ್ಲಿ ನೀರು ಹರಿಸಲು ಸಾಧ್ಯ, ಆದರೆ ಅಧಿಕಾರಿಗಳು ಉಪನಾಲೆ 24ಕ್ಕೆ ನೀರು ಹರಿಸುತ್ತಿಲ್ಲ ಎಂದು ದೂರಿದರು.       ಹೇಮಾವತಿ ನಾಲೆ ಆಧುನೀಕರಣಗೊಳ್ಳದೆ…

Read More

ತುಮಕೂರು:       ಜಿಲ್ಲೆಯಲ್ಲಿರುವ ಎಲ್ಲ ಆಟೋ ರಿಕ್ಷಾಗಳಿಗೆ ಕಡ್ಡಾಯವಾಗಿ ಸಂಚಾರಿ ಪೊಲೀಸ್ ಠಾಣೆಯಿಂದ ನೀಡಲಾಗುವ ಟಿಟಿಪಿ(ತುಮಕೂರು ಟ್ರಾಫಿಕ್ ಪೊಲೀಸ್) ಸಂಖ್ಯೆಯನ್ನು ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ ಕುಮಾರ್ ಅವರು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.       ತಮ್ಮ ಕಚೇರಿಯಲ್ಲಿಂದು ಜರುಗಿದ ಇ-ಆಟೋ ರಿಕ್ಷಾ ವಿತರಣೆ ಕುರಿತ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಟಿಟಿಪಿ ಸಂಖ್ಯೆ ಅಳವಡಿಸದ ಆಟೋ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದ ಅವರು ಟಿಟಿಪಿ ಸಂಖ್ಯೆಯನ್ನು ಅಳವಡಿಸುವುದರಿಂದ ಜಿಲ್ಲೆಯಲ್ಲಿ ಚಾಲನೆಯಲ್ಲಿರುವ ಆಟೋರಿಕ್ಷಾಗಳ ನಿಖರ ಅಂಕಿ-ಅಂಶ ದೊರೆಯಲಿದೆ ಎಂದು ತಿಳಿಸಿದರು.       ಜಿಲ್ಲೆಯ ಎಲ್ಲ ಆಟೋ ರಿಕ್ಷಾ ಚಾಲಕರ ಚಾಲನಾ ಪರವಾನಗಿಯನ್ನು ಕೂಡಲೇ ಆಧಾರ್‍ಲಿಂಕ್ ಮಾಡಬೇಕೆಂದು ಆರ್‍ಟಿಓಗೆ ಸೂಚಿಸಿದರು. ಪ್ರಾದೇಶಿಕ ಸಾರಿಗೆ ಇಲಾಖೆಗೆ ನಿಗಧಿತ ಶುಲ್ಕ ಪಾವತಿಸಿ ಆಟೋಗಳ ಹಿಂದೆ ವಿವಿಧ ಕಂಪನಿಗಳ ಎಲ್‍ಇಡಿ ಜಾಹೀರಾತು ಫಲಕಗಳನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುವ ಬಗ್ಗೆ ಚಿಂತಿಸಲಾಗಿದೆ. ಜಾಹೀರಾತು ನೀಡಿದ…

Read More