Author: News Desk Benkiyabale

 ಚಿಕ್ಕನಾಯಕನಹಳ್ಳಿ:       ಮದ್ಯವನ್ನು ಕಳ್ಳಹಾದಿಯಲ್ಲಿ ಗ್ರಾಮಕ್ಕೆ ತಂದು ಅಕ್ರಮವಾಗಿ ಮಾರುತ್ತಿದ್ದ ಕೃತ್ಯವನ್ನು ಮಾಲು ಸಮೇತ ಬಯಲಿಗೆಳೆದು ಕಾನೂನುಕ್ರಮ ಕೈಗೊಳ್ಳುವಂತೆ ತಾಲ್ಲೂಕಿನ ಜಾಣೇಹಾರ್ ಗ್ರಾಮದ ಮಹಿಳೆಯರು ದೂರು ಸಲ್ಲಿಸಿದ್ದಾರೆ.       ತಾಲ್ಲೂಕಿನ ಕಂದಿಕೆರೆ ಹೋಬಳಿ ಜಾಣೆಹಾರ್ ಗ್ರಾಮ ಹಿಂದುಳಿದ ಪ್ರದೇಶವಾಗಿದ್ದು, ಈ ಗ್ರಾಮದಲ್ಲಿ ಈಹಿಂದೆ ಧರ್ಮಲಿಂಗಯ್ಯ ಎಂಬುವನು ಅಕ್ರಮವಾಗಿ ಮದ್ಯಮಾರಾಟ ಮಾಡಿ ಗ್ರಾಮದ ಸ್ವಾಸ್ಥ್ಯಕ್ಕೆ ಧಕ್ಕೆಯನ್ನು ತಂದಿದ್ದನು. ಇದನ್ನು ಮನಗಂಡು ಗ್ರಾಮದ ಸ್ವಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮದ ಮಹಿಳೆಯರು ಪ್ರತಿಭಟನೆ ಮಾಡಿ ದೂರುನೀಡಿ ಮದ್ಯಮಾರಾಟವನ್ನು ತಡೆಹಿಡಿದಿದ್ದರು.       ಆದರೆ ಆದೇ ವ್ಯಕ್ತಿ ಮತ್ತೆ ಈಚೆಗೆ ಸರಿರಾತ್ರಿಯಲ್ಲಿ ಗ್ರಾಮದ ಬೇಲಿಗಳಲ್ಲಿ ಮದ್ಯದ ದಾಸ್ತಾನನ್ನು ಬಚ್ಚಿಟ್ಟು, ನಂತರ ಗುಟ್ಟಾಗೆ ಬೀದಿಬದಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ಮತ್ತೆ ಆರಂಭಿಸಿದ್ದನು. ಈ ವಿದ್ಯಮಾನವನ್ನರಿತ ಗ್ರಾಮದ ಮಹಿಳೆಯರು ಕಳೆದ ಸೋಮವಾರ ರಾತ್ರಿ 11 ಗಂಟೆಗೆ ಹೊಂಚುಹಾಕಿ ಮಾಲುಸಮೇತ ಬರುತ್ತಿದ್ದವನ ಮೇಲೆ ಆಕ್ರಮಣ ಮಾಡಿದರು. ಇದರಿಂದ ಗಾಬರಿಗೊಂಡ ಧರ್ಮಲಿಂಗಯ್ಯನು ಮದ್ಯದ ಪೆಟ್ಟಿಗೆ…

Read More

ಚಿಕ್ಕನಾಯಕನಹಳ್ಳಿ:       ಸೀಲ್‍ಡೌನ್‍ಗೆ ಪ್ರತಿರೋಧ ಒಡ್ಡಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಕೋವಿಡ್ ನಿಯಂತ್ರಣದ ಹೋರಾಟಕ್ಕೆ ಸಹಕರಿಸಿದ್ದವರ ಮೇಲೆ ಕಾನೂನುಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.       ತಾಲ್ಲೂಕಿನ ಗೋಡೆಕೆರೆಹಟ್ಟಿಯಲ್ಲಿ ಈವರೆಗೆ 15 ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಸೋಂಕಿತರನ್ನು ಕ್ವಾರಂಟೈನ್‍ಗೆ ಒಳಪಡಿಸಲು ಮುಂದಾದ ತಾಲ್ಲೂಕು ಆಡಳಿತಕ್ಕೆ ಸ್ಥಳೀಯರು ಪ್ರತಿರೋಧ ಒಡ್ಡಿ ತಹಸೀಲ್ದಾರ್ ರರನ್ನು ಸೇರಿದಂತೆ ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಅವಾಚ್ಯಶಬ್ದಗಳಿಂದ ನಿಂದಿಸಿದ್ದರು ಹಾಗೂ ಸೀಲ್‍ಡೌನ್ ಮಾಡಲಾಗಿದ್ದ ವ್ಯವಸ್ಥೆಯನ್ನು ಕಿತ್ತುಹಾಕಿದ್ದರು.       ಈಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್‍ಕುಮಾರ್ ಗೋಡೆಕೆರೆಹಟ್ಟಿಗೆ ಭೇಟಿ ನೀಡಿ ಸ್ಥಳೀಯರಿಗೆ ಪರಿಸ್ಥಿತಿಯ ಮನವರಿಕೆ ಮಾಡಿದರು.       ಹಾಗೂ ಕೊರೊನಾ ಹೋರಾಟದಲ್ಲಿ ಶ್ರಮಿಸುತ್ತಿರುವ ಸರ್ಕಾರಿ ಇಲಾಖೆಗಲ ಸಿಬ್ಬಂದಿಯ ರಕ್ಷಣೆ ನನ್ನ ಹೊಣೆಗಾರಿಕೆಯಾಗಿದ್ದು, ಈ ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಮೇಲೆ ನಿಧ್ರ್ಯಾಕ್ಷಣ್ಯಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು. ಕೋರೊನಾ ಸೋಂಕಿತ ನಿಯಂತ್ರಣದ ಹೋರಾಟದಲ್ಲಿ ಎಲ್ಲರೂ ಶಾಂತಿಯಿಂದ ಸಹಕರಿಸಬೇಕೆಂದು ತಿಳಿಸಿದರು.  …

Read More

ಮಧುಗಿರಿ:       ಮುಂಗಾರು ಹಂಗಾಮಿನಲ್ಲಿ ಮೂಬೈಲ್ ಆಫ್ ಮೂಲಕ ಜಿಐಎಸ್ ಮತ್ತು ಜಿಪಿಎಸ್ ಬಳಸಿ ಮುಂಗಾರು ಬೆಳೆ ಸಮೀಕ್ಷೆ ಮಾಡಿದ ಕೆಲ ಪಿಆರ್‍ಗಳಿಗೆ ಹಣ ನೀಡಿಲ್ಲಾ ಎಂದು ಬೆಳೆ ಸಮೀಕ್ಷೆ ಮಾಡಿದ ಪಿಆರ್‍ಗಳು ಆರೋಪಿಸಿದ್ದಾರೆ.       ಮಧುಗಿರಿಯ ವ್ಯಾಪ್ತಿಯಲ್ಲಿ ಕಳೆದ ವರ್ಷ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆಯ ನೇತೃತ್ವದಲ್ಲಿ ಖಾಸಗಿ ವ್ಯಕ್ತಿಗಳಿಂದ ಮೊಬೈಲ್ ಆಪ್ ಮೂಲಕ ಮುಂಗಾರು ಹಾಗು ಹಿಂಗಾರು ಬೆಳೆ ಸಮೀಕ್ಷೆ ಕೈಗೊಳ್ಳಲಾಗಿತ್ತು.       ಖಾಸಗಿ ಪಿಆರ್‍ಗಳು ಇಲಾಖೆಯಲ್ಲಿ ನೊಂದಣಿ ಮಾಡಿಸಿಕೊಂಡು ಪ್ರತಿ ಸರ್ವೆ ನಂಬರ್‍ನ ಎಲ್ಲಾ ಫ್ಲಾಟ್‍ಗಳ ತೆರಳಿ ಬೆಳೆ ಇದ್ದರೆ ಬೆಳೆಯ ಮಾಹಿತಿಯನ್ನು ಫೋಟೋ ಸಹಿತ ಅಪ್ಲೋಡ್ ಮಾಡಿದ್ದಾರೆ, ಇದರಿಂದ ಎಲ್ಲಿ ಮತ್ತು ಯಾವ ಬೆಳೆ ಬೆಳೆಯಲಾಗಿದೆ ಎಂಬ ಮಾಹಿತಿಯೊಂದಿಗೆ ಸಮೀಕ್ಷೆಯಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿಯ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.       ಪ್ರತಿ ಸರ್ವೆ ನಂಬರ್‍ಗೆ ಇಂತಿಷ್ಟು…

Read More

ಗುಬ್ಬಿ:      ಸೀಲ್‍ಡೌನ್ ಪ್ರದೇಶದಲ್ಲಿನ ಜನರ ಸಂಕಷ್ಟಕ್ಕೆ ಸ್ಪಂದಿಸುವ ಜತೆಗೆ ಕೊರೋನಾ ವಾರಿಯರ್ಸ್‍ಗಳಾದ ಆಶಾ ಕಾರ್ಯಕರ್ತೆಯರ ಬವಣೆ ಆಲಿಸುವ ಕೆಲಸ ಸೇವೆಗೆ ಅರ್ಥ ನೀಡಿದೆ ಎಂದು ತಹಸೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ ತಿಳಿಸಿದರು.       ತಾಲ್ಲೂಕಿನ ನಿಟ್ಟೂರು ಹೋಬಳಿ ದೊಡ್ಡಗುಣಿ ವಿಎಸ್‍ಎಸ್‍ಎನ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ವಿತರಿಸಲಾದ ದಿನಸಿ ಪದಾರ್ಥಗಳ ಕಿಟ್ ನೀಡಿ ಮಾತನಾಡಿದ ಅವರು ದೊಡ್ಡಗುಣಿ ಭಾಗದಲ್ಲಿ ಎರಡು ಕೊರೋನಾ ಪಾಸಿಟೀವ್ ಪ್ರಕರಣ ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಈ ವಾರಿಯರ್ಸ್‍ಗಳ ಸೇವೆ ಸ್ಮರಣೀಯ. ಅವರ ಶ್ರಮದ ಫಲ ಮತ್ತೇ ಯಾವುದೇ ಪ್ರಕರಣ ಈ ಭಾಗದಲ್ಲಿ ಕಂಡಿಲ್ಲ ಎಂದು ಶ್ಲಾಘಿಸಿದರು.       ಕೊರೋನಾ ವೈರಸ್ ಗ್ರಾಮೀಣ ಭಾಗದಲ್ಲಿ ಕಾಡುತ್ತಿದೆ. ಮುಗ್ದ ಜನರ ಬದುಕಿನಲ್ಲಿ ಆವಾಂತರ ಹುಟ್ಟಿಸುವ ಈ ವೈರಾಣು ತಡೆಗೆ ಅಗತ್ಯ ಜಾಗೃತಿ ಕ್ರಮವನ್ನು ಸ್ವಯಂಪ್ರೇರಿತರಾಗಿ ಜನರು ಅನುಸರಿಸಬೇಕಿದೆ. ಈ ಸಂದರ್ಭದಲ್ಲಿ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ. ಆದರೆ ಆಶಾ…

Read More

ಮಧುಗಿರಿ:       ಪರಿಶಿಷ್ಟ ಜಾತಿಯವರು ಉಳುಮೆ ಮಾಡುತ್ತಿದ್ದ ಸಾಗುವಳಿ ಜಮೀನಿನಲ್ಲಿ ಪಣ್ಣೇನಹಳ್ಳಿ ಗ್ರಾಮದ ಅನ್ಯಕೋಮಿನ ಕೆಲವರು ದೌರ್ಜನ್ಯ ನಡೆಸಿದ್ದಾರೆಂದು ದಲಿತ ಮುಖಂಡರು ಆರೋಪಿಸಿ ಮಧುಗಿರಿ ಉಪವಿಭಾಗಧಿಕಾರಿ ಡಾ.ಕೆ.ನಂದಿನಿದೇವಿರವರಿಗೆ ಮನವಿ ಸಲ್ಲಿಸಿದರು.       ಪಟ್ಟಣದ ಉಪವಿಭಾಗಧಿಕಾರಿಗಳ ಕಛೇರಿ ಮುಂದೆ ಆಗಮಿಸಿದ ಕೊರಟಗೆರೆ ತಾಲೂಕಿನ ದಲಿತ ಮುಖಂಡರು ನಮ್ಮ ಬಡ ರೈತರಿಗೆ ಆನ್ಯಾಯವೆಸಗಿದ್ದು ತೊಗರಿಘಟ್ಟ ಗ್ರಾಮದ ನಮ್ಮ ಪರಿಶಿಷ್ಟ ಜಾತಿಯವರು ಇಲ್ಲಿಗೆ ಸುಮಾರು 30-40 ವರ್ಷಗಳಿಂದ ಸರ್ವೆ ನಂಬರ್ 24 ರಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದು ಸರ್ಕಾರಿ ನಿಯಮಾವಳಿಯಂತೆ 2017-18 ನೇ ಸಾಲಿನಲ್ಲಿ ಬಗರ್ ಹುಕ್ಕುಂ ಸಮಿತಿಯಿಂದ ಸುಮಾರು 15 ಕುಟುಂಬಗಳಿಗೆ ಸಾಗುವಳಿ ಪತ್ರಗಳನ್ನು ಕೊರಟಗೆರೆ ತಹಶಿಲ್ದಾರ್ ರವರು ನೀಡಿರುತ್ತಾರೆ.       ಇದರನ್ವವಾಗಿ ನಮ್ಮ ಬಡ ಕುಟುಂಬಗಳು ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ದಲಿತರ ಜಮೀನುಗಳ ಮೇಲೆ ಕಣ್ಣು ಹಾಕಿರುವ ಕೆಲವರು ಉದ್ದೇಶವಾಗಿ ಜುಲೈ 15 ತಾರೀಖು ಪಣ್ಣೇನಹಳ್ಳಿಯ ಅನ್ಯ…

Read More

 ತುಮಕೂರು :       ಜಿಲ್ಲೆಯಲ್ಲಿಂದು 15 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 612ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು ತಾಲ್ಲೂಕಿನಲ್ಲಿ 12 ಮಂದಿ ಹಾಗೂ ತಿಪಟೂರು, ಶಿರಾ, ಗುಬ್ಬಿ ತಲಾ ಒಬ್ಬರು ಸೇರಿದಂತೆ ಒಟ್ಟು 15 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಅಲ್ಲದೆ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.       ಇಂದು ಜಿಲ್ಲಾಸ್ಪತ್ರೆಯಿಂದ 5 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 222 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 372 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 18 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು:       ಹೊರದೇಶಗಳಿಂದ ಕೇಂದ್ರ ಸರ್ಕಾರ ಹಾಲು ಉತ್ಪನ್ನಗಳ ತರಿಸಿಕೊಳ್ಳುವುದರಿಂದ ದೇಶೀಯ ಹಾಲು ಉತ್ಪಾದಕರಿಗೆ ತೊಂದರೆಯಾಗಲಿದೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.       ತುಮಕೂರು ಹಾಲು ಒಕ್ಕೂಟಕ್ಕೆ ಭೇಟಿ ನೀಡಿದ ಸಚಿವರು, ಹಾಲು ಸಂಸ್ಕರಣಾ ಘಟಕದ ಪರಿಶೀಲನೆ ನಡೆಸಿ ಅವರು ಮಾತನಾಡಿದರು.       ಕೋವಿಡ್-19 ಸಾಂಕ್ರಾಮಿಕ ರೋಗದಿಂದ ನಂದಿನಿ ಹಾಲಿನ ಮಾರಾಟ ಗಣನೀಯವಾಗಿ ಕಡಿಮೆಯಾಗಿ ನಷ್ಟ ಉಂಟಾಗಿದೆ. ಮೈಸೂರು ಹಾಗೂ ತುಮಕೂರು ಹಾಲಿನ ಡೈರಿಗಳಿಗೆ ಭೇಟಿ ನೀಡಿದಾಗ ಇದೇ ಸಮಸ್ಯೆ ತಲೆದೋರಿದೆ. ಡೈರಿಯಲ್ಲಿ ತುಪ್ಪ ಹಾಗೂ ಹಾಲಿನ ಪುಡಿಯು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಿದ್ದು, ಹಾಗೆ ಉಳಿದಿದ್ದು ಮಾರಾಟವಾಗುತ್ತಿಲ್ಲ. ಈ ಕುರಿತು ಕೆಎಂಎಫ್ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು ಎಂದರು.       ತುಮಕೂರು ಹಾಲು ಒಕ್ಕೂಟದಲ್ಲಿ 154 ಕೋಟಿ ರೂ.ಗಳ ಮೆಗಾ ಡೈರಿ ನಿರ್ಮಾಣಕ್ಕೆ ಮನವಿ ಮಾಡಿದ್ದು, ಕೋವಿಡ್-19 ನಿಯಂತ್ರಣಕ್ಕೆ ಬಂದ…

Read More

ತುಮಕೂರು :      ಜಿಲ್ಲೆಯಲ್ಲಿಂದು 32 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 597 ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.      ಇಂದು ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 17, ಚಿಕ್ಕನಾಯಕನಹಳ್ಳಿ -6, ಮಧುಗಿರಿ-8, ಕೊರಟಗೆರೆ -1 ಸೇರಿ ಒಟ್ಟು 32 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.      ಈವರೆಗೆ 213 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 367 ಸಕ್ರಿಯ ಪ್ರಕರಣಗಳಿದ್ದು, ಇಂದು 58 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.      ಈವರೆಗೆ 17 ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಧುಗಿರಿ:       ಹೋಂ ಕ್ವಾರಂಟೈನ್‍ನಲ್ಲಿರುವವರು ಸಮುದಾಯದಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದರೆ, ಅಂತಹವರನ್ನು ತಹಸೀಲ್ದಾರ್ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಪತ್ತೆ ಹಚ್ಚಿ ಅವರುಗಳ ವಿರುದ್ಧ ಎಫ್.ಐ.ಆರ್ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.       ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಧುಗಿರಿ ತಾಲೂಕಿನ ಕೋವಿಡ್ 19 ನಿಯಂತ್ರಣದ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವುದೇ ಸೋಕಿತ ವ್ಯಕ್ತಿಯ ಕೋವಿಡ್ ವರದಿ ಬಂದ ನಂತರವಷ್ಟೇ ಮನೆಯಿಂದ ಹೊರ ಬರಬೇಕು, ಅಂತಹವರನ್ನು ಸ್ಥಲೀಯ ಆಡಳಿತದವರು ನಿಗಾವಹಿಸಬೇಕು ಇಲ್ಲವಾದರೆ ಸಮುದಾಯಕ್ಕೆ ಹರಡುವುದನ್ನು ತಡೆಗಟ್ಟುವುದು ಕಷ್ಟಕರವಾಗುತ್ತದೆ. ಕಂಟೈನ್ಮೆಂಟ್ ವಲಯದಲ್ಲಿನ ಎಲ್ಲರ ಪರೀಕ್ಷಾ ವರದಿ ಬಂದ ನಂತರವಷ್ಟೆ ತೆರವುಗೊಳಿಸಬೇಕು.       ಕೋವಿಡ್-19 ಗೆ ಸಂಬಂದಿಸಿದಂತೆ ಜಿಲ್ಲೆಗೆ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ತುರ್ತಾಗಿ ಆಂಟಿ ರ್ಯಾಪಿಡ್ ಕಿಟ್‍ಗಳು ಮಂಜೂರಾಗಿದ್ದು, ಇನ್ನೂ ಹೆಚ್ಚಿನ ಕಿಟ್‍ಗಳಿಗಾಗಿ ಸಿಎಂಗೆ ಮನವಿ ಮಾಡಲಾಗಿದೆ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಕರೋನಾ ಸೋಂಕು ಪತ್ತೆಯ ಫಲಿತಾಂಶ ಬರುವುದು…

Read More

ಮಧುಗಿರಿ:       ಕೋಲಾರ ಜಿಲ್ಲೆ ಬಂಗಾರ ಪೇಟೆ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ಕೆ.ಚಂದ್ರಮೌಳೇಶ್ವರ ರವರ ಹತ್ಯೆಯ ಬಗ್ಗೆ ಸೂಕ್ತ ಸಿ.ಬಿ.ಐ ತನಿಖೆ ನಡೆಸುವ ಅಗತ್ಯ ಇದೆ ಎಂದು ಮಧುಗಿರಿ ತಾಲ್ಲೂಕು ಯಾದವ ನೌಕರರ ಸಂಘ ಹಾಗೂ ಮಧುಗಿರಿ ತಾಲ್ಲೂಕು ಯಾದವ ಸಂಘ ಒತ್ತಾಯಿಸಿವೆ.       ಬಿ.ಕೆ.ಚಂದ್ರಮೌಳೇಶ್ವರವರ ತಾಯಿಯವರ ತವರೂರು ಮಧುಗಿರಿ ತಾಲ್ಲೂಕು ಕಸಬಾ ಮರುವೇಕೆರೆ ಆಗಿದ್ದು ಹಾಗೂ ಮಧುಗಿರಿ ಗಾಂಧಿ ಎಂ.ಪುಟ್ಟತಿಮ್ಮಯ್ಯ ರವರ ಸೋದರಳಿಯನವರಾಗಿದ್ದು ಸರಳ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಇವರ ಪ್ರಾಮಾಣಿಕತೆಯನ್ನು ಕೋಲಾರ ಜನತೆ ಕೊಂಡಾಡಿದ್ದು ಇವರು ಜಮೀನಿನ ವಿವಾದ ಬಗ್ಗೆ ಖುದ್ದು ಹಾಜರಾಗಿ ಪರಿಶೀಲಿಸುವಾಗ ಪೊಲೀಸರ ಸಮ್ಮುಖದಲ್ಲಿ ವೆಂಕಟಾಚಲ ಎನ್ನುವ ವ್ಯಕ್ತಿ ಯಾವುದೇ ಕಾರಣವಿಲ್ಲದೇ ಚೂರಿಯಿಂದ ತಹಸೀಲ್ದಾರ್‍ರಿಗೆ ಇರಿದಿರುತ್ತಾರೆ. ಈ ಕೊಲೆ ಕೆಲವು ಅನುಮಾನಗಳಿಗೆ ಆಸ್ಪದವಾಗಿರುತ್ತದೆ. ಆದುದರಿಂದ ಜರೂರಾಗಿ ಸಿ.ಬಿ.ಐ ತನಿಖೆಗೆ ಒಳವಡಿಸುವುದರ ಮೂಲಕ ಅನುಕೂಲಕಲ್ಪಿಸಿಕೊಟ್ಟು ಮೃತರ ಕುಟುಂಬಕ್ಕೆ ನ್ಯಾಯದೊರಕಿಸಿಕೊಡಲು ಮಧುಗಿರಿ ತಾಲ್ಲೂಕು ಯಾದವ ನೌಕರರ ಸಂಘದ ಅಧ್ಯಕ್ಷರಾದ ಸಿ.ಕೃಷ್ಣಪ್ಪ ರವರು…

Read More