Author: News Desk Benkiyabale

ತುಮಕೂರು :       ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ನೂತನ ಪೊಲೀಸ್ ಉಪಾಧೀಕ್ಷಕರಾಗಿ ಬಿ.ಉಮಾಶಂಕರ್ ರವರು ಇಂದು (ಆ.31 ಮಂಗಳವಾರ) ಅಧಿಕಾರ ಸ್ವೀಕರಿಸಿದ್ದಾರೆ.       ಇವರು ತುಮಕೂರು ಜಿಲ್ಲೆಯ ಹಲವೆಡೆಗಳಲ್ಲಿ ತುಮಕೂರು ನಗರ ಸಂಚಾರಿ ಪಿಎಸ್‍ಐ, ಶಿರಾ ತಾವರೆಕೆರೆ ಪಿಎಸ್‍ಐ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ್ದರು.       ತುಮಕೂರು ಜಿಲ್ಲೆಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿದ್ದ ಸಮಯದಲ್ಲಿ ಭ್ರಷ್ಟರ ಪಾಲಿಗೆ ಸಿಂಹ ಸ್ವಪ್ನವಾಗಿದ್ದರು. ಆ ಸಮಯದಲ್ಲಿ ಬಹಳಷ್ಟು ಟ್ರ್ಯಾಪ್ ಮತ್ತು ರೈಡ್ ಮಾಡಿ ಉತ್ತಮ ಹೆಸರು ಗಳಿಸಿದ್ದರು. ವರ್ಗಾವಣೆಯಾಗಿ ಬೆಸ್ಕಾಂ ಜಾಗೃತದಳದ ಇನ್ಸ್ಪೆಕ್ಟರ್ ಆಗಿ ತುಮಕೂರಿನ ಜಾಗೃತ ದಳದಲ್ಲಿ ಸೇವೆ ಸಲ್ಲಿಸಿದ್ದ ಇವರು ಬೆಂಗಳೂರು ಸಿಸಿಬಿ ಹಾಗೂ ಡಿಸಿಬಿ ಇನ್ಸ್ಪೆಕ್ಟರ್ ಆಗಿ ಸೇವೆಸಲ್ಲಿಸಿದ್ದ ಇವರು ಬಡ್ತಿ ಹೊಂದಿ ಭ್ರಷ್ಟಾಚಾರ ನಿಗ್ರಹದಳದ ಉಪಾಧೀಕ್ಷಕರಾಗಿ ತುಮಕೂರಿನಲ್ಲಿ ಮತ್ತೆ ತನ್ನ ಸೇವೆ ಆರಂಭಿಸಿದ್ದಾರೆ. ತುಮಕೂರಿನ ಜಿಲ್ಲೆಯ ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸುವುದು ಗ್ಯಾರಂಟಿ.

Read More

ಪಾವಗಡ :       ವಾಲ್ಮೀಕಿ ನಾಯಕ ಸಮುದಾಯದ ಶ್ರೀರಾಮುಲು ಅಥವಾ ರಮೇಶ್ ಜಾರಕಿಹೊಳಿರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಓತ್ತಾಯಿಸಿ ವಾಲ್ಮೀಕಿ ನಾಯಕ ಜನಾಂಗದ ಸಂಸ್ಥೆಗಳು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಪತ್ರ ಸಲ್ಲಿಸಿದರು.       ಇದೇ ವೇಳೆ ಮನವಿ ಪತ್ರ ಸಲ್ಲಿಸಿ ವಾಲ್ಮೀಕಿ ಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರಾದ ಲೋಕೇಶ್ ಪಾಳ್ಳೆಗಾರ್ ಮಾತನಾಡಿ, ಯಡಿಯೂರಪ್ಪನವರು ಲಿಂಗಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಯಕ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಮತ್ತು 3 ಶಾಸಕರಿಗೆ ಸಚಿವ ಸ್ಥಾನ ನೀಡುವುದಾಗಿ ತಿಳಿಸಿದ್ದು, ಇಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ನಾಯಕ ಸಮುದಾಯಕ್ಕೆ ಸೂಕ್ತ ಸ್ಥಾನ-ಮಾನ ನೀಡದೇ ಉಪ ಮುಖ್ಯಮಂತ್ರಿ ಸ್ಥಾನವೂ ನೀಡದೇ ಕಡೆಗಣಿಸಲಾಗಿದೆ ಎಂದರು.       ಕರ್ನಾಟಕ ರಾಜ್ಯಾದಾದ್ಯಂತ ನಾಯಕ ಮತ್ತು ಹಿಂದುಳಿದ ಸಮುದಾಯಗಳು ಕೂಡ ಒತ್ತಾಯಿಸಿ ಬೆಂಬಲ ಸೂಚಿಸುತ್ತಿದ್ದು, ರಾಜ್ಯದಲ್ಲಿ 70 ಲಕ್ಷ ನಾಯಕ ಸಮುದಾಯದ ಜನಾಂಗವಿದ್ದು, ರಾಜ್ಯದ ಮುಖ್ಯಮಂತ್ರಿಗಳು ಸಮುದಾಯದ ಮನವಿಯನ್ನು ಸ್ವೀಕರಿಸಿ ಮನ್ನಣೆ ನೀಡಿ ಜನಾಂಗಕ್ಕೆ…

Read More

ತುಮಕೂರು:       ಜಿಲ್ಲೆಯ ಜನರಿಗೆ ಮೊದಲು ಕುಡಿಯುವ ನೀರು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ತಿಳಿಸಿದರು.       ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಹೇಮಾವತಿ ನಾಲೆಯಿಂದ ನೀರು ಹರಿಸುವ ಕುರಿತು ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸೆಪ್ಟಂಬರ್ 1ರಿಂದ ಡಿಸೆಂಬರ್ 15ರವರೆಗೆ ಜಿಲ್ಲೆಯ ಕುಡಿಯುವ ನೀರಿನ ಕೆರೆಗಳಿಗೆ ನೀರು ಹರಿಸಲಾಗುವುದು. ಸೆಪ್ಟೆಂಬರ್ 1 ರಿಂದ ಸಿ.ಎಸ್.ಪುರ ಕೆರೆಗೆ ನೀರು ಹರಿಸುವ ಮೂಲಕ ಆರಂಭಿಸಲಾಗುವುದು. ಗುಬ್ಬಿ ತಾಲೂಕಿನ ಸಿ.ಎಸ್ ಪುರ ಹಾಗೂ ಇಡಗೂರು ವ್ಯಾಲಿಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಸುವಂತೆ ಹೇಮಾವತಿ ನಾಲಾ ಇಂಜಿನಿಯರ್ ಬಾಲಕೃಷ್ಣ ಅವರಿಗೆ ಸಚಿವರು ಸೂಚಿಸಿದರು.       ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ ಗೂಳೂರು ಕೆರೆಗೆ ನೀರು ಹರಿಸಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು…

Read More

ತುಮಕೂರು:       ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅವರು ಇಂದು ಪಾವಗಡ ತಾಲ್ಲೂಕಿನ ಕಣಿವೆಹಳ್ಳಿ ಗೇಟ್‍ನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ವಿದ್ಯಾರ್ಥಿ ನಿಲಯದ ಕೊಠಡಿಗಳು, ಭೋಜನಾ ಮಂದಿರ, ಅಡಿಗೆ ಮನೆ ಸ್ವಚ್ಛತೆ ಹಾಗೂ ಮಕ್ಕಳಿಗೆ ವಿತರಿಸಲು ತಯಾರಿಸಲಾಗುತ್ತಿದ್ದ ಆಹಾರದ ಪದಾರ್ಥಗಳ ಶುಚಿ-ರುಚಿಯನ್ನು ಪರಿಶೀಲನೆ ನಡೆಸಿದರು.       ವಸತಿ ಶಾಲೆಯಲ್ಲಿ ಅಡಿಗೆ ಮನೆ ಹಾಗೂ ಶೌಚಾಲಯಗಳ ಸ್ವಚ್ಛತೆ, ಮಕ್ಕಳಿಗೆ ವಿತರಿಸಲಾಗಿರುವ ಕೊಠಡಿಗಳನ್ನು ಸುಸ್ಥಿತಿಯಲ್ಲಿಟ್ಟಿಲ್ಲದಿರುವ ಬಗ್ಗೆ ಪರಿಶೀಲಿಸಿ ಕೂಡಲೇ ಸ್ವಚ್ಛಗೊಳಿಸಲು ಮತ್ತು ಪ್ರತಿದಿನ ಸ್ವಚ್ಛವಾಗಿಡಲು ಮುಖ್ಯೋಪಾಧ್ಯಾಯರಿಗೆ ನಿರ್ದೇಶನ ನೀಡಿದರು. ಮಕ್ಕಳಿಗೆ ಕುಡಿಯಲುಶುದ್ಧ ನೀರನ್ನೇ ಪೂರೈಸಬೇಕಲ್ಲದೆ ಅಡಿಗೆಗೂ ಶುದ್ಧ ನೀರನ್ನೇ ಬಳಸಲು ಸೂಚಿಸಲಾಯಿತು. ನಂತರ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕೂಡಲೇ ನಿಲಯದಲ್ಲಿರುವ ಅವ್ಯವಸ್ಥೆಯನ್ನು ಸರಿಪಡಿಸಲು ಸೂಚಿಸಿದರು.       ವಸತಿ ಶಾಲೆಯ ಮುಖ್ಯೋಫಾಧ್ಯಾಯರು ಮತ್ತು ಎಲ್ಲಾ ಉಪಾಧ್ಯಾಯರೊಂದಿಗೆ ಚರ್ಚಿಸಿ ಮಕ್ಕಳ…

Read More

ತುಮಕೂರು :       ಜ್ಞಾನ ಮತ್ತು ಅನುಭವಗಳ ವಿನಿಮಯದೊಂದಿಗೆ ಅಭಿವೃದ್ಧಿ ಸಾಧಿಸುವ ಯೋಜನೆಗೆ ಸಂಬಂಧಿಸಿದಂತೆ ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ಹಾಗೂ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ರಾಜತಾಂತ್ರಿಕ ಕಚೇರಿ ಅಧಿಕಾರಿಗಳ ನಡುವೆ ಬುಧವಾರ ಪರಸ್ಪರ ಒಪ್ಪಂದ ಮಾಡಿಕೊಳ್ಳಲಾಯಿತು. ಬೆಂಗಳೂರಿನಲ್ಲಿ ಬುಧವಾರ ಕಾನ್ಸುಲೇಟ್ ಜನರಲ್ ಆಫ್ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಡೆಪ್ಯುಟಿ ಕನ್ಸಲ್ ಜನರಲ್ Philipp Ehlerding ಇವರ ನೇತೃತ್ವದ ತಂಡ, ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ಅಧ್ಯಕ್ಷೆ ಡಾ.ಶಾಲಿನಿ ರಜನೀಶ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ಅವರೊಂದಿಗೆ ಚರ್ಚೆ ನಡೆಸಲಾಯಿತು.       ಈ ಸಂದರ್ಭದಲ್ಲಿ ಮಾತನಾಡಿದ ಡಾ.ಶಾಲಿನಿ ರಜನೀಶ್ ತುಮಕೂರು ಸ್ಮಾರ್ಟ್‍ಸಿಟಿಗಳ ಪರಿಕಲ್ಪನೆ ಮತ್ತು ಉದ್ದೇಶಗಳನ್ನು ವಿವರಿಸಿ ತುಮಕೂರು ನಗರ ಮೂಲಸೌಕರ್ಯ ಅಭಿವೃದ್ಧಿಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರಲ್ಲದೇ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಹಯೋಗದೊಂದಿಗೆ ತುಮಕೂರು ನಗರದ ಸಂಪೂರ್ಣ ಅಭಿವೃದ್ಧಿಯನ್ನು ಎಲ್ಲರ ಸಹಕಾರ ಮತ್ತು ಸಹಯೋಗದೊಂದಿಗೆ (Inclusive growth) ಕೈಗೊಳ್ಳುವುದೇ ತುಮಕೂರು ಸ್ಮಾರ್ಟ್‍ಸಿಟಿಯ ಮೂಲ ಉದ್ದೇಶವಾಗಿದೆ ಎಂದು…

Read More

ತುಮಕೂರು:     ಇತಿಚೀನ ದಿನಗಳಲ್ಲಿ ಕೇಬಲ್, ನೀರಿನ ಪೈಪ್, ಗ್ಯಾಸ್ ಸಂಪರ್ಕ, ಮತ್ತಿತರ ತಾಂತ್ರಿಕ ಕಾರಣಗಳಿಂದಾಗಿ ಕೋಟ್ಯಂತರ ರೂ.ಗಳನ್ನು ಖರ್ಚು ಮಾಡಿ ನಿರ್ಮಿಸಿದ ರಸ್ತೆಯನ್ನು ಕೆಲವೇ ದಿನಗಳಲ್ಲಿ ಅಗೆಯುವುದು, ಮತ್ತೆ ತೇಪೆ ಹಾಕುವುದು ಸಾಮಾನ್ಯವಾಗಿದೆ. ಮತ್ತೆ ಮತ್ತೆ ರಸ್ತೆಗಳನ್ನು ಅಗೆದು ವಿರೂಪಗೊಳಿಸುವ ಬದಲು ರಸ್ತೆ ಕಾಮಗಾರಿ ನಡೆಯುವಾಗಲೇ ಭವಿಷ್ಯದ ಬಗ್ಗೆ ಯೋಚಿಸಿ ಪೂರಕ ವ್ಯವಸ್ಥೆಗಳನ್ನು ಒದಗಿಸಿದರೆ ವ್ಯವಸ್ಥಿತ ರಸ್ತೆಯಾಗಿ ರೂಪುಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳನ್ನು ಅಗೆಯದಂತೆ ಸ್ಮಾರ್ಟ್ ಸಿಟಿ ಲಿಮಿಟೆಡ್‍ನಿಂದ ನಗರದಲ್ಲಿ ಕೈಗೊಂಡಿರುವ ಸ್ಮಾರ್ಟ್ ರಸ್ತೆಗಳಿಗೆ “ಟೆಂಡರ್ ಶ್ಯೂರ್” ಟಚ್ ನೀಡುವ ಹೊಸ ಯೋಜನೆಯೊಂದನ್ನು ವಿನ್ಯಾಸಗೊಳಿಸಲಾಗಿದೆ.   ಏನಿದು ಟೆಂಡರ್ ಶ್ಯೂರ್?       ಯಾವುದೇ ಕಾರಣಕ್ಕೂ ರಸ್ತೆಗಳನ್ನು ಮತ್ತೆ ಅಗೆಯಲು ಅವಕಾಶ ಇಲ್ಲದಂತೆ ಅಂತರರಾಷ್ಟ್ರೀಯ ಗುಣಮಟ್ಟದಲ್ಲಿ ವಿನ್ಯಾಸಗೊಳಿಸುವ ಯೋಜನೆಯೇ ಟೆಂಡರ್ ಶ್ಯೂರ್. ಜಗತ್ತಿನ ಬಹುತೇಕ ಪ್ರಮುಖ ನಗರಗಳ ರಸ್ತೆಗಳು ಈ ಟೆಂಡರ್ ಶ್ಯೂರ್ ವಿನ್ಯಾಸವನ್ನು ಹೊಂದಿವೆ.      ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ…

Read More

ತುಮಕೂರು:       ಹಸಿ ಕಸ-ಒಣ ಕಸವನ್ನು ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬಗ್ಗೆ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ಚರ್ಚಾ/ಪ್ರಬಂಧ ಸ್ಪರ್ಧೆ, ಮಕ್ಕಳಿಂದ ಜಾಗೃತಿ ಜಾಥಾ, ವಿದ್ಯಾರ್ಥಿಗಳಿಗಾಗಿ ಸಾಂಸ್ಕøತಿಕ ಕಾರ್ಯಕ್ರಮ, ಪ್ರತೀ ವಾರ್ಡಿನಲ್ಲಿ ಬೀದಿ ನಾಟಕ, ಸ್ಥಳೀಯ ಮಖಂಡರು ಹಾಗೂ ಸ್ವಸಹಾಯ ಗುಂಪಿನ ಸದಸ್ಯರೊಂದಿಗೆ ಗುಂಪು ಚರ್ಚೆ ನಡೆಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ತಿಳಿಸಿದರು.        ಸ್ಮಾರ್ಟ್ ಸಿಟಿ ಕಚೇರಿಯಲ್ಲಿಂದು ಪತ್ರಿಕಾ ಹೇಳಿಕೆ ನೀಡಿದ ಅವರು ಸ್ವಚ್ಛ, ಸುಂದರ ಹಸಿರು ತುಮಕೂರನ್ನಾಗಿಸಲು ಸ್ಮಾರ್ಟ್ ಸಿಟಿ ಲಿಮಿಟೆಡ್, ಮಹಾನಗರ ಪಾಲಿಕೆ ಹಾಗೂ ಭಗೀರಥ ಸಂಸ್ಥೆಯ ಸಹಕಾರದಲ್ಲಿ ಈ ಸಾರ್ವಜನಿಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರಲ್ಲದೆ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ನಗರದ ಎಲ್ಲ ಮನೆ-ಮನೆಗೆ ಭೇಟಿ ನೀಡಿ ಕರಪತ್ರ, ಫ್ಲೈಯರ್, ಬ್ಯಾನರ್, ಸ್ಟಿಕರ್, ಪೋಸ್ಟರ್‍ಗಳನ್ನು ವಿತರಣೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಘನ…

Read More

ಪಾವಗಡ :       ತಾಲೂಕಿನ ಅಭಿವೃದ್ದಿಗೆ ಯಾರೇ ಆಗಲಿ ರಾಜಕೀಯ ಹೊರತುಪಡಿಸಿ ಸಾಗಬೇಕಿದೆ ಎಂದು ಚಿತ್ರದುರ್ಗ ಸಂಸದರಾದ ಎ.ನಾರಾಯಣ ಸ್ವಾಮಿ ತಿಳಿಸಿದರು.       ಶುಕ್ರವಾರ ತಾಪಂ ಸಭಾಂಗಣದಲ್ಲಿ ದಿಢೀರನೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಮಾತನಾಡಿದ ಅವರು, ಸಮಗ್ರ ಅಭಿವೃದ್ಧಿಗೆ ಯಾವುದೇ ರಾಜಕೀಯ ಬೇಡ. ನಮ್ಮದೇ ಸರ್ಕಾರವಿದೆ. ಅನುದಾನ ತಂದು ಸರ್ವತೋಮುಖ ಅಭಿವೃದ್ದಿಪಡಿಸೋಣ. ಅದನ್ನು ವಿನಾಕಾರಣ ರಾಜಕೀಯ ಮಾಡಿದರೆ ನಾನಂತು ಸುಮ್ಮನೆ ಕೂರುವ ವ್ಯೆಕ್ತಿಯಲ್ಲ ಎಂದು ಎಲ್ಲಾ ಆದಿಕಾರಿಗಳಿಗೆ ಸಂಸದರು ಖಡಕ್ ಎಚ್ಚರಿಕೆ ನೀಡಿದರು.       ತಾಲೂಕು ಪಂಚಾಯ್ತಿ ವೆಬ್‍ಸೈಟ್‍ನ್ನು ಮೋದಲು ಸಿದ್ದಪಡಿಸಬೇಕು.ಎಲ್ಲಾ ಕಾರ್ಯಕ್ರಮಗಳು ವೆಬ್‍ನಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಪ್ರತಿ ಇಲಾಖೆವಾರು ಕಾರ್ಯಕ್ರಮಗಳು, ಸಮಸ್ಯೆಗಳ ಸ್ಪಷ್ಟಚಿತ್ರಣವನ್ನು ತಾಪಂ ವೆಬ್‍ನಲ್ಲಿ ಸಿಗುವಂತೆ ಮಾಡಬೇಕೆಂದು ಇಒ ನರಸಿಂಹಮೂರ್ತಿರವರಿಗೆ ತಿಳಿಸಿದರು.       ಇದೇ ತಿಂಗಳ 26ರೊಳಗೆ ತಾಲೂಕಿನ ಶಿಥಿಲ ಶಾಲಾ ಕಟ್ಟಡಗಳ ಪೋಟೋ ಸಹಿತ ಮಾಹಿತಿ ನೀಡುವಂತೆ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ…

Read More

ತುಮಕೂರು:       ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ನೀರಿನ ಮಟ್ಟ ಹೆಚ್ಚಾಗಿದೆ. ಹೇಮಾವತಿ ನೀರನ್ನು ಈಗಾಗಲೇ ತುಮಕೂರು ನಾಲೆಗೆ ಆಗಸ್ಟ್ 9 ರಿಂದ ಹರಿಸಿದ್ದು, ನಗರ ಪ್ರದೇಶಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಗೊರೂರು ಹೇಮಾವತಿ ಜಲಾಶಯದಿಂದ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಕೆರೆಕಟ್ಟೆಗಳಿಗೆ ಸಮರ್ಪಕವಾಗಿ ನೀರು ಹರಿಸಲಾಗುತ್ತಿರುವ ಬಗ್ಗೆ ನಡೆದ ವಿಶೇಷ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯ ರೈತರಿಗೆ ಹಾಗೂ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಜಲಾಶಯದಿಂದ ಆಗಸ್ಟ್ 30ರವರೆಗೂ ನೀರು ಹರಿಸಲಾಗುವುದು. ನಂತರ ತಾಲೂಕುವಾರು ನೀರು ಹಂಚಿಕೆ ಮಾಡುವುದರ ಬಗ್ಗೆ ಶಾಸಕರ ಸಭೆ ನಡೆಸಿ ನೀರು ಹರಿಸುವುದರ ಬಗ್ಗೆ ತೀರ್ಮಾನಿಸಲಾಗುವುದು ಎಂದರು.       ಕುಣಿಗಲ್ ತಾಲೂಕಿಗೆ ಪ್ರತ್ಯೇಕ ನಾಲೆ(ಎಕ್ಸ್‍ಪ್ರೆಸ್ ಕೆನಾಲ್) ನಿರ್ಮಾಣದ ಅಗತ್ಯವಿಲ್ಲ. ಜಿಲ್ಲೆಯ ಬಹುತೇಕ ಶಾಸಕರು ಈ ಯೋಜನೆಯನ್ನು ವಿರೋಧಿಸಿದ್ದು, ಸಚಿವ…

Read More

ತುಮಕೂರು :        ಹಾಲಿ ಶಾಸಕ ಗೌರಿಶಂಕರ್ ಧೋರಣೆಯ ವಿರುದ್ದ ಮತ್ತು ಜಿಲ್ಲಾಧಿಕಾರಿ ಹಾಗೂ ಹೇಮಾವತಿ ಇಲಾಖೆಯ ಅಧಿಕಾರಿಗಳ ವಿರುದ್ದ ಮಾಜಿ ಶಾಸಕ ಸುರೇಶ್ ಗೌಡರು ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದಿದ್ದಾರೆ.       ಗ್ರಾಮಾಂತರ ಶಾಸಕರಾದ ಡಿ.ಸಿ.ಗೌರಿಶಂಕರ್ ರವರು ತಮ್ಮ ಸ್ವಪ್ರತಿಷ್ಟೆಗಾಗಿ ಗೂಳೂರು, ಹೆಬ್ಬೂರು, ಏತನೀರಾವರಿ ಯನ್ನು ಚಾಲನೆ ಮಾಡದಂತೆ ಆದೇಶಿಸಿರುವುದರಿಂದ ಹೆದರಿದ ಅಧಿಕಾರಿಗಳು ಹೇಮಾವತಿ ನಾಲೆಯಿಂದ ಕೆರೆಗಳಿಗೆ ನೀರು ಹರಿಸದೇ ಮೋಟಾರ್ ಸ್ಥಗಿತಗೊಳಿಸಿದ್ದಾರೆ. ಆ ಭಾಗದ ಕೆರೆಗಳು ಬರಿದಾಗಿದ್ದು ಜನರಿಗೆ ಮತ್ತು ಜಾನುವಾರುಗಳಿಗೆ ನೀರಿನ ಹಾಹಾಕಾರ ಎದುರಾಗಿದೆ. ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಮಳೆಯಿಲ್ಲದೆ ತೀವ್ರತರವಾದ ಬರಗಾಲದಿಂದ ಬೇಸತ್ತು ಬಸವಳಿದ ರೈತಾಪಿವರ್ಗಕ್ಕೆ ಹರಿಯಬೇಕಿದ್ದ ನೀರು ಸ್ಥಗಿತಗೊಳಿಸಿ ವಿದೇಶದಲ್ಲಿ ಮೋಜು ಮಸ್ತಿ ಮಾಡಲು ಹೋಗಿದ್ದಾರೆ. ಆ ಭಾಗದ ಜನಪ್ರತಿನಿಧಿಯಾಗಿ ತನಗೆ ಮತನೀಡಿದ ಮಾತದಾರರಾದ ರೈತರುಗಳ ಸಂಕಷ್ಟಕ್ಕೆ ನೆರವಾಗುವುದನ್ನ ಬಿಟ್ಟು ಹರಿಯುತ್ತಿದ್ದ ನೀರನ್ನೇ ಸ್ಥಗಿತಗೊಳಿಸಿರುವುದು ದುರದೃಷ್ಟಕರ ಸಂಗತಿಯಾಗಿದೆ, ಈ ಹಿಂದೆ ಮಾಜಿ ಶಾಸಕ ಬಿ.ಸುರೇಶ್ ಗೌಡರು 19- 8-2019 ರ ಸೋಮವಾರ…

Read More