Author: News Desk Benkiyabale

ತುಮಕೂರು:       ವಸತಿಹೀನ ಅಲೆಮಾರಿ ಜನಾಂಗದವರನ್ನು ಗುರುತಿಸಿ ಪಟ್ಟಿ ತಯಾರಿಸುವಲ್ಲಿ ಪಿಡಿಓಗಳ ಕಾರ್ಯ ತೃಪ್ತಿ ತಂದಿಲ್ಲ. ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಖುದ್ದು ಸರ್ವೆ ನಡೆಸಿ ಯಾರೊಬ್ಬ ಫಲಾನುಭವಿಗೂ ವಸತಿ ತಪ್ಪದಂತೆ ಕ್ರಮವಹಿಸಲು ಮಾಜಿ ಸಚಿವ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಸೂಚಿಸಿದರು.       ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನ 34 ಗ್ರಾಮ ಪಂಚಾಯಿತಿಯಿಂದ 1390 ಫಲಾನುಭವಿಗಳನ್ನು ಗುರುತಿಸಿರುವುದಾಗಿ ಪಟ್ಟಿ ಸಿದ್ದವಾಗಿದೆ. ಆದರೆ ವಾಸ್ತವದಲ್ಲಿ ಎರಡು ಪಟ್ಟು ಫಲಾನುಭವಿಗಳು ಸಿಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅರ್ಹರನ್ನು ಗುರುತಿಸಿ ಏಳು ದಿನದಲ್ಲಿ ಪಟ್ಟಿ ತಯಾರಿಸಿ ತಾಲ್ಲೂಕು ಪಂಚಾಯಿತಿಗೆ ಒಪ್ಪಿಸಬೇಕು ಎಂದು ತಿಳಿಸಿದರು.      ನಮ್ಮಲ್ಲಿ ಅಲೆಮಾರಿಗಳು, ಬುಡಕಟ್ಟು ಜನಾಂಗದ ಪೈಕಿ ಗೊಲ್ಲ ಸಮಾಜವೇ ಅತಿ ಹೆಚ್ಚು ಕಂಡು ಬರುತ್ತದೆ. ಈಗಾಗಲೇ ಹಲವು ವಸತಿ ಯೋಜನೆಯಲ್ಲಿ ಮನೆ ನೀಡಲಾಗಿದೆ. 7 ಸಾವಿರಕ್ಕೂ ಅಧಿಕ ಮನೆಗಳನ್ನು ಒದಗಿಸಲಾಗಿದೆ. ಆದರೂ…

Read More

ಗುಬ್ಬಿ:       ಹೇಮೆ ಹರಿಸಿಕೊಳ್ಳುವ ವಿಚಾರದಲ್ಲಿ ಕಳೆದ ಬಾರಿ ಹಾಸನದಲ್ಲಿ ದೇವೇಗೌಡರ ಪುತ್ರರ ರಾಜಕಾರಣದಿಂದ 18.5 ಟಿಎಂಸಿ ಮಾತ್ರ ನೀರು ಸಿಕ್ಕಿತ್ತು. ಈ ಬಾರಿ ಜಿಲ್ಲೆಯತ್ತ ಹರಿಸಲಾಗುತ್ತಿರುವ ಹೇಮೆಯನ್ನು ನಮ್ಮ ಪಾಲಿನ ಸಂಪೂರ್ಣ 25 ಟಿಎಂಸಿ ನೀರನ್ನು ಹರಿಸಿಕೊಳ್ಳುತ್ತೇವೆ ಎಂದು ಸಂಸದ ಜಿ.ಎಸ್.ಬಸವರಾಜು ವಿಶ್ವಾಸ ವ್ಯಕ್ತಪಡಿಸಿದರು.       ತಾಲ್ಲೂಕಿನ ಹಾಗಲವಾಡಿ ಹೋಬಳಿ ಬೆಟ್ಟದಹಳ್ಳಿ ಗ್ರಾಮದಲ್ಲಿ ಶನಿವಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಬಾರ್ಡ್‍ನ 22 ಲಕ್ಷ ರೂಗಳ ನೂತನ ಕಟ್ಟಡಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಹೇಮಾವತಿ ಬಳಸಿಕೊಳ್ಳುವ ಎಲ್ಲಾ ಕೆರೆಗಳಿಗೆ ನೀರು ಹರಿಸಲಾಗಿತ್ತು. 18 ಟಿಎಂಸಿ ನೀರಿನಲ್ಲೇ ಬಹುತೇಕ ಕೆರೆಗಳಿಗೆ ನೀರು ನೀಡಲಾಗಿತ್ತು. ಈ ಬಾರಿ ಸಹ ನಿಯಮಾನುಸಾರ ಎಲ್ಲಾ ಕೆರೆಗಳನ್ನೂ ಭರ್ತಿ ಮಾಡುವ ಭರವಸೆ ನೀಡಿದರು.       ಕಡಬ ಕೆರೆಯು ಕಳೆದ ಬಾರಿಯೇ ತುಂಬಿಸಲಾಗುತ್ತಿತ್ತು. ಇಲ್ಲಿನ ಕೆಟ್ಟ ರಾಜಕಾರಣದಿಂದ ಕಡಬ ಕೆರೆಗೆ ನೀರು ಕಡಿಮೆಯಾಯಿತು. ಈಗಾಗಲೇ ಹೇಮಾವತಿ ಡ್ಯಾಂ ನಿಂದ…

Read More

ತುಮಕೂರು:       ತುಮಕೂರು ಮಹಾನಗರ ಪಾಲಿಕೆ ವತಿಯಿಂದ ದಿನಾಂಕ: 18/7/2020 ರಂದು ಕರೆದಿದ್ದ ಅಭಿವೃದ್ಧಿ ಕಾಮಗಾರಿಗಳ ಟೆಂಡರ್‍ನಲ್ಲಿ ಲಂಚಪಡೆದು ಭ್ರಷ್ಟಾಚಾರವೆಸಗಿ ತಮಗೆ ಬೇಕಾದ ಗುತ್ತಿಗೆದಾರರ ಹೆಸರಿಗೆ ಟೆಂಡರ್ ನಿಲ್ಲಿಸಲು ಹೊರಟಿದ್ದ ಕಿರಿಯ ಅಭಿಯಂತರ ಕಿರಣ್.       ತುಮಕೂರು ಮಹಾನಗರ ಪಾಲಿಕೆಯ ವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ದಿನಾಕ: 18-7-2020 ರಂದು ಟೆಂಡರ್ ಕರೆಯಲಾಗಿದ್ದು, ದಿನಾಂಕ:3-8-2020ಕ್ಕೆ ಆನ್‍ಲೈನ್ ಟೆಂಡರ್ ಸಲ್ಲಿಸುವ ಅವಧಿ ಮುಕ್ತಾಯವಾಗಿರುತ್ತದೆ. ಅವುಗಳ ಪೈಕಿ ವಿದ್ಯುತ್ ಮತ್ತು ನೀರು ಸರಬರಾಜು ಕುರಿತು ಟೆಂಡರ್ ಕರೆಯಲಾಗಿದ್ದು, ಟೆಂಡರ್ ಸಮಯದಲ್ಲಿ ಕಿರಿಯ ಅಭಿಯಂತರರಾದ ಕಿರಣ್ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪಿ.ಆರ್.ವಸಂತಕುಮಾರ್‍ರವರುಗಳು ಉದ್ದೇಶಪೂರ್ವಕವಾಗಿ ಸರ್ಕಾರದ ಮಾರ್ಗದರ್ಶಿ, ಸೂಚನೆಗಳನ್ನು ಬದಿಗೆ ಸರಿಸಿ ಅಕ್ರಮ ಟೆಂಡರ್ ಕರೆದಿರುತ್ತಾರೆ. ಸ್ಟ್ಯಾಂಡರ್ಡ್ ಬಿಡ್ ಡಾಕ್ಯುಮೆಂಟ್ (ಏW 1) ಅಧಿನಿಯಮದ ಅಡಿಯಲ್ಲಿ ಟೆಂಡ್ ಕೆರೆಯಲಾಗಿದ್ದು, ಸದರಿ ನಿಯಮಾವಳಿಗಳನ್ನು ಧಿಕ್ಕರಿಸಿ ತಮಗೆ ಬೇಕಾದವರಿಗೆ ಅಕ್ರವಾಗಿ ಟೆಂಡರ್ ನಿಲ್ಲಿಸುವ ದುರುದ್ದೇಶದಿಂದ ಲಂಚದ ಹಣ ಪಡೆದು ಭ್ರಷ್ಟಾಚಾರವೆಸಗಿ ಪಾರದರ್ಶಕ…

Read More

ತುಮಕೂರು:       ಜಿಲ್ಲೆಯಲ್ಲಿ 98 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2509 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 28, ಪಾವಗಡ-09 ಕುಣಿಗಲ್-17 ಮಧುಗಿರಿ-06, ಕೊರಗಟಗೆರೆ-03, ತುರುವೇಕೆರೆ-13, ಶಿರಾ-02, ತಿಪಟೂರು-02, ಗುಬ್ಬಿ-14, ಚಿಕ್ಕನಾಯಕನಹಳ್ಳಿ-04 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 98 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.        ಜಿಲ್ಲಾಸ್ಪತ್ರೆಯಿಂದ 90 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1459 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 976 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 74 ಸಾವನ್ನಪ್ಪಿದ್ದು, ಶನಿವಾರ-04 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ತುಮಕೂರು:       ಆರೋಗ್ಯ ಬಿಸಿಯೂಟ, ಶಿಕ್ಷಣ ಮೊದಲಾದ ಅಗತ್ಯ ಮೂಲಭೂತ ಸೇವೆಗಳ ಖಾಸಗಿಕರಣದ ಪ್ರಸ್ತಾಪಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಉದ್ದಿಮೆಗಳ ಮತ್ತು ಸೇವೆಗಳ ಖಾಸಗಿಕರಣ ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಆಗಸ್ಟ್ 7ರಂದು ಪ್ರತಿಭಟನೆ ನಡೆಸಿದರು.       ಅಂಗನವಾಡಿ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಖಾಯಂ ಮಾಡಿ. ಪ್ರತಿ ತಿಂಗಳಿಗೆ 21000 ರೂ. ಕನಿಷ್ಟ ವೇತನ ನೀಡಬೇಕು. ಮಾಸಿಕ ಪಿಂಚಣಿ 10,000 ರೂ. ಕೊಡಬೇಕು. ಇಎಸ್.ಐ ಮತ್ತು ಪಿಎಫ್ ನೀಡಬೆಕು ಎಂದು ಆಗ್ರಹಿಸಿದರು.        ಕಾರ್ಮಿಕ ಕಾನೂನುಗಳನ್ನು ಮಾಲಿಕರ ಪರವಾಗಿ ಬದಲಾಯಿಸುವುದನ್ನು ನಿಲ್ಲಿಸಬೇಕು. ಕೋವಿಡ್ ಅವಧಿಯ ನೆಪವೊಡ್ಡಿ ಕೆಲಸದ ಅವಧಿ ಹೆಚ್ಚಿಸುವುದನ್ನು ಕೈಬಿಡಬಬೇಕು. ಆದಾಯ ತೆರಿಗೆ ಪಾವತಿಸಲಾಗದ ಎಲ್ಲಾ ಬಡ ಕುಟುಂಬಗಳಿಗೆ 6 ತಿಂಗಳ ಕಾಲ ಪ್ರತಿ ತಿಂಗಳಿಗೆ 7500 ರೂ. ನೀಡಬೇಕು. ಉಚಿತ ರೇಷನ್ ಮತ್ತು ಆಹಾರ…

Read More

ಹುಳಿಯಾರು:       ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವ ಸಲುವಾಗಿ ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಪ್ರಾಯೋಗಿಕವಾಗಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ದೂರವಿದ್ದರೆ ಒಂದು ಐಪಿ ಸೆಟ್‍ಗೆ, ಹತ್ತಿರವಿದ್ದರೆ ಎರಡು ಐಪಿ ಸೆಟ್ಟಿಗೊಂದರಂತೆ ಪ್ರತ್ಯೇಕ ಟ್ರಾನ್ಸ್‍ಫಾರ್ಮರ್ ಅಳವಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.       ಹುಳಿಯಾರು ಹೋಬಳಿಯ ಭಟ್ಟರಹಳ್ಳಿ ಗ್ರಾಮದಲ್ಲಿ ಭದ್ರಾ ನಾಲಾ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.       ಚಿಕ್ಕನಾಯಕನಹಳ್ಳಿ ತಾಲೂಕಿನ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ತಾಲೂಕಿನ ಗಡಿಭಾಗವಾದ ಡಿಂಕನಹಳ್ಳಿಯಲ್ಲಿ 400 ಕೋಟಿ ರೂ. ವೆಚ್ಚದ 400 ಕೆವಿ ಸಾಮಧ್ರ್ಯದ ಸ್ವಿಚ್ ಗೇರ್ ಸ್ಟೇಷನ್ ಮಾಡಲಾಗುವುದು. ಇನ್ನೊಂದು ತಿಂಗಳಲ್ಲಿ ಈ ಕಾಮಗಾರಿಯ ಭೂಮಿ ಪೂಜೆ ಮಾಡಲಾಗುವುದು ಎಂದರಲ್ಲದೆ ದೊಡ್ಡಎಣ್ಣೇಗೆರೆ, ಮತಿಘಟ್ಟ, ಜೆ.ಸಿ.ಪುರ, ಬೆಳಗುಲಿ, ದೊಡ್ಡಅಗ್ರಹಾರದಲ್ಲಿ ಬೆಸ್ಕಾಂ ಎಂವಿಎಸ್‍ಎಸ್ ಮಾಡಲಾಗುವುದು ಎಂದು ಭರವಸೆ ನೀಡಿದರು.       ಕೊಳವೆ ಬಾವಿ…

Read More

 ತುಮಕೂರು :       ಜಿಲ್ಲೆಯಲ್ಲಿಂದು 133 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2411ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-44, ಕುಣಿಗಲ್-13, ಕೊರಟಗೆರೆ-15, ಚಿಕ್ಕನಾಯಕನಹಳ್ಳಿ-4, ಶಿರಾ-5, ಮಧುಗಿರಿ-4, ಗುಬ್ಬಿ-7, ಪಾವಗಡ-5, ತಿಪಟೂರು-25, ತುರುವೇಕೆರೆ-11 ಸೇರಿದಂತೆ ಒಟ್ಟು 133 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಜಿಲ್ಲಾಸ್ಪತ್ರೆಯಿಂದ 104 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1369 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.       ಜಿಲ್ಲೆಯಲ್ಲಿ ಒಟ್ಟು 972 ಸಕ್ರಿಯ ಪ್ರಕರಣಗಳಿದ್ದು, ಇಂದು ಮೂವರು ಮೃತಪಟ್ಟಿದ್ದಾರೆ. ಈವರೆಗೆ 70 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತುಮಕೂರು:       ಅಯೋಧ್ಯೆಯಲ್ಲಿ ಪುಟ್ಟ ಶ್ರೀರಾಮ ಮಂದಿರ ನಿರ್ಮಾಣದ ಶಿಲಾನ್ಯಾಸದ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಪ್ರಭು ಶ್ರೀ ರಾಮಚಂದ್ರನನ್ನು ಪೂಜಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ 1992ರ ಅಯೋದ್ಯೇಯ ಕರ ಸೇವೆಯಲ್ಲಿ ಭಾಗವಹಿಸಿದ ತುಮಕೂರು ನಗರದ ಹೆಚ್.ಕೆ.ಶಿವಣ್ಣ (ಕಾಂಡಿಮೇಂಟ್ಸ್ ಶಿವಣ್ಣ) ಅವರನ್ನು ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಶಿವಣ್ಣನವರು ಅಂದಿನ ಬಾಬ್ರಿ ಮಸೀದಿ ಕೆಡುವ ಹೋರಾಟದಲ್ಲಿ ಆನೇಕ ಜನ ತುಮಕೂರಿನಿಂದ ಭಾಗವಹಿಸಿದ್ದರು. ಸ್ವಯಂ ಪ್ರೇರಿತವಾಗಿ ಆ ಸಮಯದಲ್ಲಿ ರಾಮಭಕ್ತರು ಭಾಗವಹಿಸಿದ್ದರು. ಆ ಕ್ಷಣಗಳನ್ನು ನೆನಪಿಸಿಕೊಂಡರೆ ಇಂದಿಗೂ ರೋಮಾಂಚನಗಾಗುತ್ತದೆ. ಬಾಬ್ರಿ ಮಸೀದಿ ಕೆಡವಿನ ಗುರುತಿಗಾಗಿ 4 ಇಟ್ಟಿಗೆಗಳನ್ನು ಅಲ್ಲಿಂದ ತಂದಿರುವೆ ಇಂದಿಗೂ ಅದನ್ನು ಇಟ್ಟಿರುವೆ. ಇವತ್ತು ಅದರ ಭೂಮಿ ಪೂಜೆ ಆಗುತ್ತಿರುವುದು ತುಂಬಾ ಸಂತೋಷವಾಗಿದೆ ಎಂದರು.       ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ ಇವತ್ತಿನ ಭೂಮಿ ಪೂಜೆಯ ಕಾರ್ಯ ಇಡೀ ದೇಶಕ್ಕೆ ಅಲ್ಲ ವಿಶ್ವವೇ ಇದರ ಸಂಭ್ರಮದಲ್ಲಿ ಭಾಗಿಯಾಗಿದೆ. ಅಮೇರಿಕಾದ ನ್ಯೂಯರ್ಕ್‍ನ…

Read More

ಮಧುಗಿರಿ:       ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಪ್ರತಿಯೊಂದು ಇಟ್ಟಿಗೆಯೂ ಭವ್ಯ ಭಾರತದ ಬುನಾದಿಯಾಗಿರಲೆಂದು ಪಾವಗಡ ಶ್ರೀರಾಮಕೃಷ್ಣ ಆಶ್ರಮದ ಸ್ವಾಮಿ ಜಪಾನಂದ ಮಹಾರಾಜ್ ತಿಳಿಸಿದರು.       ಗುರುವಾರದಂದು ಪಟ್ಟಣದಲ್ಲಿರುವ ಕುಂಚಿಟಿಗ ಒಕ್ಕಲಿಗರ ಸಮುದಾಯ ಭವನದ ಅವರಣದಲ್ಲಿ ಶ್ರೀರಾಮಕೃಷ್ಣ ಸೇವಾಶ್ರಮ ಹಾಗೂ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಇನ್ಫೋಸಿಸ್ ಫೌಂಡೇಷನ್ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಇವರ ಸಹಕಾರದೊಂದಿಗೆ ಮಧುಗಿರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ವಿಭಾಗದ ಸುಮಾರು 712 ಅಡುಗೆ ಸಿಬ್ಬಂದಿಯವರಿಗೆ ದವಸ ಧಾನ್ಯ ಹಾಗೂ ಅಡುಗೆ ಎಣ್ಣೆಯ ಕಿಟ್‍ನ್ನು ವಿತರಣಾ ಸಮರಂಭದ ದಿವ್ಯ ಸಾನಿದ್ಯವಹಿಸಿ ಮಾತನಾಡಿದರು.       ಕೊರೊನಾದಿಂದಾಗಿ ಇಡೀ ದೇಶವೇ ಒಗ್ಗೂಡಿದ್ದು, ಅದೇ ರೀತಿಯಲ್ಲಿ ಶ್ರೀ ರಾಮಮಂದಿರ ನಿರ್ಮಾಣದಿಂದ ಭಾವೈಕ್ಯತೆ ಮೂಡಲು ನಾಂದಿ ಹಾಡಿದೆ ಎಂದರು. ಪ್ರತಿಯೊಬ್ಬ ನಾಗರಿಕನು ಸರ್ಕಾರ ಮತ್ತು ಸರ್ಕಾರಿ ನೌಕರರನ್ನು ದೂಷಿಸುವುದು ತರವಲ್ಲ, ಪ್ರಸ್ತುತ…

Read More

ತುಮಕೂರು:       ಜಿಲ್ಲೆಯಲ್ಲಿಂದು 69 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2278ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ಇಂದು ತುಮಕೂರು-39, ಕುಣಿಗಲ್-8, ಕೊರಟಗೆರೆ-8, ಚಿಕ್ಕನಾಯಕನಹಳ್ಳಿ-5, ಶಿರಾ-4, ಮಧುಗಿರಿ-2, ಗುಬ್ಬಿ-1, ಪಾವಗಡ-1, ತಿಪಟೂರು-1 ಸೇರಿದಂತೆ ಒಟ್ಟು 69 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.       ಇಂದು ಜಿಲ್ಲಾಸ್ಪತ್ರೆಯಿಂದ 65 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1265 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 946 ಸಕ್ರಿಯ ಪ್ರಕರಣಗಳಿದ್ದು, ಇಂದು ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ 67 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More