Author: News Desk Benkiyabale

ತುಮಕೂರು:       ತುಮಕೂರು ನಗರದ ಜನಸಂಖ್ಯೆಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಅವಶ್ಯಕವಾದ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ರವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿರವರ ಸಹಯೋಗದೊಂದಿಗೆ ಬುಗುಡನಹಳ್ಳಿ ಕೆರೆಯಿಂದ ಅಮಾನಿಕೆರೆಗೆ ನೀರನ್ನು ತುಂಬಿಸಿ, ನಂತರ ತುಂಬಿದ ನೀರನ್ನು ಪಿ.ಎನ್.ಪಾಳ್ಯದಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ (WಖಿP) ಹಾಯಿಸಿ ಶುದ್ಧೀಕರಣ ನಂತರ ಕುಡಿಯುವ ನೀರಿಗೆ ನೀರು ಸರಬರಾಜು ಮಾಡಲು ಯೋಜನೆಯನ್ನು ತಯಾರಿಸಲಾಗಿದೆ. ಈ ಯೋಜನೆಯನ್ನು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅನುದಾನದಲ್ಲಿ ಎರಡು ಹಂತದಲ್ಲಿ ರೂ.32 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಯೋಜನೆಗಳು ಅನುಷ್ಟಾನ ಹಂತದಲ್ಲಿದೆ.       ಈ ಯೋಜನೆಯ ಮೊದಲ ಹಂತವಾದ ಬುಗುಡನಹಳ್ಳಿ ಕೆರೆಯಿಂದ ತುಮಕೂರು ಅಮಾನಿಕೆರೆಗೆ ನೀರು ತುಂಬುವ ಕಾಮಗಾರಿಯು ಮುಕ್ತಾಯಗೊಂಡಿದ್ದು, ದಿ:11.07.2020 ರಂದು ಪ್ರಾಯೋಗಿಕವಾಗಿ ನೀರನ್ನು ತುಂಬಿಸುವ ಪ್ರಕ್ರಿಯೆಯನ್ನು ಪರೀಕ್ಷಿಸಲಾಯಿತು. ಈ ಸುಸಂದರ್ಭದಲ್ಲಿ ಮಾನ್ಯ ಸಂಸದರಾದ ಶ್ರೀ ಜಿ.ಎಸ್.ಬಸವರಾಜು, ಮಾನ್ಯ ಶಾಸಕರಾದ ಶ್ರೀ ಜ್ಯೋತಿ ಗಣೇಶ್,…

Read More

ತುಮಕೂರು: ‘       ತುಮಕೂರು ಜಿಲ್ಲೆಯ ಪೊಲೀಸ್ ಇಲಾಖೆಗೆ ಕೊರೊನಾ ಮಹಾಮಾರಿ ಬೆಂಬಿಡದೆ ಕಾಡುತ್ತಿದ್ದು, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕೊರೊನಾ ಮಹಾಮಾರಿಯ ಅಬ್ಬರಕ್ಕೆ ತತ್ತರಿಸಿ ಹೋಗಿದ್ದಾರೆ.       ಜನಸಾಮಾನ್ಯರನ್ನ ಭಯಬೀತಗೊಳಿಸಿ ಜನರನ್ನು ದುರ್ಬಲ ಮಾಡುತ್ತಿದ್ದ ಕೊರೊನಾ ಸೋಂಕು ಹಲವರ ಪ್ರಾಣವನ್ನ ಆಹುತಿ ತೆಗೆದುಕೊಳ್ಳಲು ಆತುವರಿಯುತ್ತಿತ್ತು. ದುರ್ಬಲ ಮನಸ್ಸುಗಳು ಮಹಾಮಾರಿಯ ಆರ್ಭಟಕ್ಕೆ ಹೆದರಿ ಪ್ರಾಣ ತೆಜಿಸುವ ನಿರ್ಧಾರಕ್ಕೂ ಮುಂದಾಗುತ್ತಿದ್ದಂತ ದುರ್ಘಟನೆಗಳು ನಡೆಯುತ್ತಿತ್ತು.       ಕೊರೊನಾ ಸೋಂಕು ದೇಹದೊಳಗೆ ನುಸುಳುತ್ತಿದ್ದಂತೆ ಆತಂಕಗೊಂಡ ಜನತೆ ಮಾನಸಿಕ ದುರ್ಬಲಕ್ಕೊಳಗಾಗಿ ಚಿಕಿತ್ಸೆಗೆ ಸ್ಪಂಧಿಸದೆ ತಮ್ಮ ಆರೋಗ್ಯವನ್ನು ತಾವೇ ಬಲಿ ತೆಗೆದುಕೊಳ್ಳುವಂತಹ ಪ್ರಸಂಗಗಳು ಕೇಳಿಬರುತ್ತಿವೆ. ಆದರೆ, ಇಂತಹ ಪರಿಸ್ಥಿತಿ ಕೇವಲ ಸಾರ್ವಜನಿಕರಿಗಿದೆ ಎಂದು ಭಾವಿಸುವುದು ಬೇಡ. ಇಡೀ ವಿಶ್ವವನ್ನೇ ಆಹುತಿ ತೆಗೆದುಕೊಳ್ಳಲು ರಣಖೇಕೆ ಹಾಕುತ್ತಿದ್ದ ಕೊರೊನಾ ಸೋಂಕು, ಕೊರೊನಾ ವಾರಿಯರ್ಸ್‍ಗಳನ್ನು ಬಿಡುತ್ತಿಲ್ಲ.       ರಾಜ್ಯದ ಸುದ್ದಿಯನ್ನ ಬದಿಗಿರಿಸಿ ತುಮಕೂರು ಜಿಲ್ಲೆಯನ್ನ ಒಮ್ಮೆ ಅವಲೋಕಿಸಿ ನೋಡಿದರೆ ತುಮಕೂರು…

Read More

ತುಮಕೂರು:       ತುಮಕೂರು ತಾಲ್ಲೂಕು ಪಂಚಾಯಿತಿ ಮಹಿಳಾ ಸಿಬ್ಬಂದಿ ಮಂಜುಳಾ ಕರೋನಾ ಪಾಸಿಟಿವ್ ಧೃಡ ಪಟ್ಟಿದೆ. ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಮತ್ತು ಕಚೇರಿಗೆ ಹಾಜರಾಗಿರುವುದಿಲ್ಲ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ವಾಸವಿರುವ ಸೋಂಕಿತ ಮಂಜುಳಾರವರು ಪ್ರತಿನಿತ್ಯ ಕೆಸ್ತೂರು ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ ರಮೇಶ್ ಮತ್ತು ಸ್ವಾಂದೇನಹಳ್ಳಿ ಪಿಡಿಓ ಕೃಷ್ಣಮೂರ್ತಿ ರವರ ಜೊತೆಯಲ್ಲಿ ಬೆಂಗಳೂರಿನಿಂದ ಕೃಷ್ಣಮೂರ್ತಿ ಅವರ ಕಾರಿನಲ್ಲಿ ಬಂದು ಹೋಗುತ್ತಿರುತ್ತಾರೆ. ಸ್ವಾಂದೇನಹಳ್ಳಿ ಪಿಡಿಒ ಕೃಷ್ಣಮೂರ್ತಿ ಮಾಹಿತಿ ತಿಳಿದ ಮೇಲೆ ಕಚೇರಿ ಹಾಜರಾಗದೆ ರಜೆ ಪಡೆದಿರುವ ವಿಚಾರ ಕೇಳಿ ಬಂದಿರುತ್ತದೆ.       ಕೃಷ್ಣಮೂರ್ತಿ ರಮೇಶ್ ಮಂಜುಳಾ ರವರು ಪ್ರತಿನಿತ್ಯ ಕೃಷ್ಣಮೂರ್ತಿ ಕಾರಿನಲ್ಲಿ ಬೆಂಗಳೂರು ನಿಂದ ಬರುತ್ತಿದ್ದು ಕೆಸ್ತೂರು ಮತ್ತು ಸ್ವಾಂದೇನಹಳ್ಳಿ ಪಂಚಾಯತ್ ಸಿಬ್ಬಂದಿಗಳು ಕೂಡ ಆತಂಕದಲ್ಲಿದ್ದಾರೆ. ಅದೇ ಮಂಜುಳಾ ರವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿರುವ ವಿಚಾರ ತಾಲೂಕು ಪಂಚಾಯತ್ ಇವೋ ಜೈಪಾಲ್ ಮತ್ತು ಏಡಿ ಶಶಿಧರ್ ರವರಿಗೆ ಮಾಹಿತಿ ಇರುತ್ತದೆ.  …

Read More

ಮಧುಗಿರಿ:       ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಲಯದ ವಾರೆಂಟ್‍ನಿಂದ ಬಂಧಿತನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಿಚಾರಣೆಗೆಂದು ಕರೆತಂದ ಕಾರಣ ಕೊಡಗೇನಹಳ್ಳಿ ಪೊಲೀಸ್ ಠಾಣೆ ಮತ್ತು ಮಧುಗಿರಿಯಲ್ಲಿರುವ ಡಿಎಸ್ಪಿ ಕಚೇರಿಯನ್ನು ಶುಕ್ರವಾರ ಸಿಲ್ ಡೌನ್ ಮಾಡಲಾಗಿದೆ.       ಮಧುಗಿರಿ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ರಾಜ್ ಗೋಪಾಲ್ ಫೆಬ್ರವರಿ- ಇಪ್ಪತ್ತು ರಂದು ಪುರವರ ಹೋಬಳಿಯ ಪೂಜಾರಹಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಎಸ್ಡಿಪಿ ಯೋಜನೆಯಡಿ ನಿರ್ಮಾಣವಾಗುತ್ತಿದ್ದ ಸಿಸಿ ರಸ್ತೆ ಕಾಮಗಾರಿ ವೀಕ್ಷಣೆಗೆ ಬಂದಿದ್ದಾಗ ಅದೇ ಹೋಬಳಿ ಹುಣಸವಾಡಿ ಗ್ರಾಮದ ವಿಎಸ್ಸೆಸ್ಸೆನ್ ನಿರ್ದೇಶಕ ಅಶ್ವತ್ಥಪ್ಪ ಮತ್ತು ಅವರ ಹಿಂಬದಿ ಸವಾರ ಕೃಷ್ಣಮೂರ್ತಿ ದ್ವಿಚಕ್ರ ವಾಹನದಲ್ಲಿ ಬಂದು ಜಾತಿ ನಿಂದನೆ ಮಾಡುವುದರ ಜೊತೆಗೆ ಹಲ್ಲೆ ಮಾಡಿದ್ದರೆಂದು ಆರೋಪಿಸಿ ಎಂಜಿನಿಯರ್ ರಾಜ್ ಗೋಪಾಲ್ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು .       ಈ ಪ್ರಕರಣದಲ್ಲಿ ನ್ಯಾಯಾಲಯ ಬಂಧನ ವಾರಂಟ್ ನೀಡಿದ್ದರಿಂದ ಶನಿವಾರ ಜುಲೈ ನಾಲ್ಕರಂದು ಆರೋಪಿಯನ್ನು ಕೊಡಗಿನಲ್ಲಿ…

Read More

ತುಮಕೂರು:      ತುಮಕೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಉಲ್ಬಣವಾಗುತ್ತಿದ್ದು, ನಿರೀಕ್ಷೆಗೂ ಮೀರಿದ ಸೋಂಕಿತರ ಸಂಖ್ಯೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಆತಂಕದಿಂದ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ.       ತುಮಕೂರು ನಗರವೊಂದರಲ್ಲೇ 69 ಪ್ರಕರಣಗಳು, ಶಿರಾ ತಾಲೂಕಿನಲ್ಲಿ 17 ಪ್ರಕರಣಗಳು, ಪಾವಗಡ -4 ಪ್ರಕರಣ, ಕೊರಟಗೆರೆ-3, ಮಧುಗಿರಿ 2 ಪ್ರಕರಣಗಳು ಸೇರಿದಂತೆ ಒಟ್ಟು 95 ಪ್ರಕರಣಗಳು ಒಂದೇ ದಿನ ವರದಿಯಾಗಿದೆ. ತುಮಕೂರು ನಗರದಲ್ಲಿ ಬಂದಿರುವ 69 ಪಾಸಿಟೀವ್ ಪ್ರಕರಣಗಳ ಪೈಕಿ 29 ಪ್ರಕರಣಗಳು ಪೊಲೀಸ್ ಇಲಾಖೆಯವೇ ಎಂದು ವರದಿಯಾಗಿರುವುದು ಮತ್ತೊಂದು ವಿಶೇಷ.       29 ಜನ ಪೊಲೀಸ್ ಇಲಾಖೆಯವರ ಪೈಕಿ ಕೆಎಸ್‍ಆರ್‍ಪಿಯ 12ನೇ ಬೆಟಾಲಿಯನ್‍ನ -14 ಮಂದಿ, ಕುಣಿಗಲ್, ತಿಪಟೂರು, ತುಮಕೂರು ಟೌನ್ ತಲಾ ಒಂದೊಂದು ಪ್ರಕರಣ, ಕಳ್ಳಂಬೆಳ್ಳ-2ದಲ್ಲಿ ಕೊರೊನಾ ಸೋಂಕು ವರದಿ ದೃಢವಾಗಿದೆ.       ಪೊಲೀಸ್ ಇಲಾಖೆಯನ್ನು ಬೆಂಬಿಡದೆ ಕಾಡುತ್ತಿರುವ ಕೊರೊನಾ ಪ್ರಕರಣವನ್ನು…

Read More

ಗುಬ್ಬಿ:       ಸರ್ಕಾರಿ ನೌಕರರ ಮೇಲೆ ದಬ್ಬಾಳಿಕೆ ಮತ್ತು ದೌರ್ಜನ್ಯ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತಹ ವ್ಯಕ್ತಿಗಳನ್ನು ಯಾವುದೇ ಮೂಲಾಜಿಲ್ಲದೇ ಕಾನೂನಿನ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಕಾನೂನು ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾದುಸ್ವಾಮಿ ಎಚ್ಚೆರಿಸಿದರು.       ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಕದರೇಗೌಡನಪಾಳ್ಯದಲ್ಲಿ ಬಂಗಾರ ಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರ್ಕಾರಿ ನೌಕರರು ಅವರದ್ದೇ ಆದ ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು. ಇದರಿಂದ ಕೆಲವು ಜನಗಳಿಗೆ ವ್ಯತ್ಯಸವಾಗುತ್ತಿದ್ದು ಇದನ್ನೇ ವ್ಯಕ್ತಿಗತವಾಗಿ ತಗೆದುಕೊಂಡು ಚಾಕುವಿನಿಂದ ಹಿರುಯುವಂತಹ ಕೆಲಸವನ್ನು ಮಾಡಿರುವಂತಹ ವ್ಯಕ್ತಿಗೆ ಯಾವುದೇ ಸಹಾನುಭೂತಿ ತೋರಿಸದೇ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ತಿಳಿಸಿದ ಅವರು ಮೃತ ಕುಟುಂಬದವರಿಗೆ ಸಹಕಾರದಿಂದ ನೀಡುವ ಎಲ್ಲಾ ಸೌಕರ್ಯಗಳನ್ನು ನೀಡಲಾಗುತ್ತದೆ ಇನ್ನು ಮುಂದೆ ಯಾವುದೇ ಅಧಿಕಾರಿಗಳು ಹಿಂಜೆರಿಯುವಂತಹ ವಾತವರಣವನ್ನು ಸೃಷ್ಠಿ ಮಾಡುವುದಿಲ್ಲ ಎಂದು ತಿಳಿಸಿದರು.       ಅಬಕಾರಿ ಸಚಿವ ಹೆಚ್.ನಾಗೇಶ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಸಂದರ್ಭದಲ್ಲಿ…

Read More

ಗುಬ್ಬಿ:      ಕೋವಿಡ್-19 ವೈರಸ್ ಸೋಂಕಿತರ ಚಿಕಿತ್ಸೆಗೆ ತಾಲ್ಲೂಕಿನ ಕಳ್ಳಿಪಾಳ್ಯದ ಬಳಿಯ ಓಂ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಸಿದ್ದಪಡಿಸಲಾದ ಐಸ್ಯೂಲೇಷನ್ ಹಾಸಿಗೆಗಳ ಕೋವಿಡ್-19 ಕೇರ್ ಸೆಂಟರ್‍ಗೆ ಗುರುವಾರ ಜಿಲ್ಲಾಧಿಕಾರಿ ಡಾ.ರಾಕೇಶ್‍ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.       ತಾಲ್ಲೂಕಿನ ಗಡಿಭಾಗ ಕಳ್ಳಿಪಾಳ್ಯ ಸಮೀಪ ಹೆದ್ದಾರಿ ಬದಿಯಲ್ಲಿರುವ ಓಂ ಪ್ಯಾಲೇಸ್‍ನಲ್ಲಿನ ಎಲ್ಲಾ ವ್ಯವಸ್ಥೆಯನ್ನು ಅವಲೋಕಿಸಿದ ಜಿಲ್ಲಾಧಿಕಾರಿಗಳು ಕಾಂಪೌಂಡ್‍ನಲ್ಲಿ ಮೂರು ಶೆಡ್ ನಿರ್ಮಿಸಿ ಆರೋಗ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳನ್ನು ಉಳಿಸಿಕೊಳ್ಳಲು ವ್ಯವಸ್ಥೆ ಮಾಡಿರುವ ಬಗ್ಗೆ ಪರಿಶೀಲಿಸಿದರು. ಚಿಕಿತ್ಸೆಗೆ ಬರುವ ರೋಗಿಗಳಿಗೆ ಪೌಷ್ಠಿಕ ಆಹಾರ ನೀಡಲು ಸೂಚಿಸಲಾಗಿದೆ. ಊಟ ಮತ್ತು ತಿಂಡಿಗಳ ತಯಾರಿಕೆಗೆ ಗುಣಮಟ್ಟದ ಪದಾರ್ಥ ಬಳಕೆ ಮತ್ತು ಪೌಷ್ಠಿಕಾಂಶದ ತರಕಾರಿ ಬಳಕೆಗೆ ಸೂಚಿಸಿ ಇಡೀ ಕಲ್ಯಾಣ ಮಂಟಪವನ್ನು ಸ್ಯಾನಿಟೈಜರ್ ಮಾಡಲು ಆದೇಶಿಸಿದರು.        ಈ ಕಲ್ಯಾಣ ಮಂಟಪವನ್ನು ಕೇರ್ ಸೆಂಟರ್ ಬಳಕೆಗೆ ತಾಲ್ಲೂಕು ಆಡಳಿತ ಆಯ್ಕೆ ಮಾಡಿ 67 ಹಾಸಿಗೆಗಳನ್ನು ವ್ಯವಸ್ಥಿತವಾಗಿ ಅಳವಡಿಸಿದೆ. ಜಿಲ್ಲೆಯಲ್ಲಿ ಸೋಂಕಿತರ…

Read More

ತುಮಕೂರು:          ಜಿಲ್ಲೆಯಲ್ಲಿ ಗುರುವಾರ 14 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.       ಜಿಲ್ಲೆಯಲ್ಲಿ ನಿನ್ನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ 1, ತುರುವೇಕೆರೆ-1 ತಿಪಟೂರು-3, ಹಾಗೂ ತುಮಕೂರು-9 ಸೇರಿ ಒಟ್ಟು 14 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ತಾಲ್ಲೂಕುವಾರು ಸೋಂಕಿತರ ವಿವರ : ತುಮಕೂರು – 9       ಮಹಾಲಕ್ಷ್ಮಿ ನಗರದ 30 ವರ್ಷದ ಗಂಡು, 28 ವರ್ಷದ ಹೆಣ್ಣು, ಬಿ ಜಿ ಪಾಳ್ಯ ಪ್ರಸನ್ನಕುಮಾರ ಬಡಾವಣೆಯ 47 ವರ್ಷದ ಗಂಡು, ಶೆಟ್ಟಿಹಳ್ಳಿ ಗೇಟ್ ಬಳಿಯ 46 ವರ್ಷದ ಗಂಡು, ದೇವನೂರು ಚರ್ಚ್ ಬಳಿಯ 64 ವರ್ಷದ ಗಂಡು, ಸಪ್ತಗಿರಿ ಬಡಾವಣೆಯ 47 ವರ್ಷದ ಗಂಡು, 40 ವರ್ಷದ ಗಂಡು, ಎಸ್ಐಟಿ 13ನೇ ಕ್ರಾಸ್ 64 ವರ್ಷದ ಗಂಡು, ಸದಾಶಿವನಗರದ 35 ವರ್ಷದ ಗಂಡು ಸೋಂಕು ದೃಡಪಟ್ಟಿದೆ.…

Read More

ತುಮಕೂರು:      ತುಮಕೂರು ತಾಲೂಕು ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕವಿತಾ ರಮೇಶ್ ಅಧ್ಯಕ್ಷರಾಗಿ ಚುನಾವಣೆಯಲ್ಲಿ ಜಯಗಳಿಸಿರುತ್ತಾರೆ.       ಬಿಜೆಪಿ ಪಕ್ಷದಿಂದ 17 ಸದಸ್ಯ ಬಲವಿದ್ದು, ಜೆಡಿಎಸ್ 12 ಸದಸ್ಯರ ಬಲ, ಕಾಂಗ್ರೆಸ್ 1, ಇರುತ್ತಾರೆ. ಸ್ಪಷ್ಟ ಬಹುಮತವಿದ್ದ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಅನಾಯಾಸವಾಗಿ ಅಧ್ಯಕ್ಷಗಾದಿ ಏರಬಹುದೆಂಬ ಸಂತಸದಲ್ಲಿದ್ದರು, ಆದರೆ 12 ಸದಸ್ಯ ಬಲವಿದ್ದ ಜೆಡಿಎಸ್ ಕಾಂಗ್ರೆಸ್ ಒಬ್ಬರು ಸದಸ್ಯರ ವಿಶ್ವಾಸದೊಂದಿಗೆ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿ ಅಧ್ಯಕ್ಷಗಾದಿಗೇರಲು ಕಸರತ್ತು ನಡೆಸಿತ್ತು. ತಮ್ಮ ಬಲಿಯಿದ್ದ 13 ಸದಸ್ಯ ಬಲದ ಜೊತೆಗೆ ಬಿಜೆಪಿಯ ಇಬ್ಬರು ಸದಸ್ಯರನ್ನು ತಮ್ಮ ಕಡೆ ಸೆಳೆದುಕೊಂಡು ಮತ್ತೊಬ್ಬ ಬಿಜೆಪಿ ಸದಸ್ಯರನ್ನ ಗೈರು ಹಾಜರಿಪಡಿಸಿ ಅಧ್ಯಕ್ಷ ಸ್ಥಾನವನ್ನು ತಾನು ಪಡೆಯಬೇಕೆಂದು ಜೆಡಿಎಸ್‍ನ ಹಾಲಿ ಶಾಸಕ ಡಿ.ಸಿ.ಗೌರಿಶಂಖರ್ ಕಸರತ್ತು ನಡೆಸಿದ್ದರು. ಇಬ್ಬರು ಬಿಜೆಪಿ ಸದಸ್ಯರಾದ ಕೋರಾ ಎಸ್‍ಟಿ ಮೀಸಲು ಕ್ಷೇತ್ರದ ಕವಿತಾ ರಮೇಶ್ ಮತ್ತು ಕುರುವೇಲು ಎಸ್‍ಸಿ ಮೀಸಲು ಕ್ಷೇತ್ರದ ಸುಧಾರವರುಗಳನ್ನ…

Read More

ತುಮಕೂರು :      ತುಮಕೂರು ತಾಲ್ಲೂಕು ‌ಪಂಚಾಯ್ತಿಯ ಅಧ್ಯಕ್ಷರನ್ನಾಗಿ ಕವಿತ ರಮೇಶ್‌ ರವರನ್ನು ಆಯ್ಕೆ ಮಾಡಿ ವಿಪ್ ಜಾರಿ ಮಾಡಲಾಗಿದೆ.       ತುಮಕೂರು ತಾಲ್ಲೂಕು ‌ಪಂಚಾಯ್ತಿಯ ಅಧ್ಯಕ್ಷರರ ಚುನಾವಣೆಯ ಕುರಿತು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಯ‌ ಮಾಜಿ ಶಾಸಕ ಹಾಲಿ‌ ಬಿಜೆಪಿ ಜಿಲ್ಲಾ ಅಧ್ಯಕ್ಷ ಬಿ ಸುರೇಶ್ ಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.       ಸಭೆಯಲ್ಲಿ ಅರಕೆರೆ‌ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ‌ಕವಿತ ರಮೇಶ್‌ ರವರನ್ನು ಅಧ್ಯಕ್ಷ ಸ್ಥಾನದ ಅಭ್ಯರ್ಥಿಯನ್ನಾಗಿ ಆಯ್ಕೆಮಾಡಲು ಎಲ್ಲಾ ತಾಲ್ಲೂಕು ಪಂಚಾಯತ್ ಸದಸ್ಯರು ಸರ್ವಾನುಮತದಿಂದ ನಿರ್ಧಾರ ಕೈಗೊಂಡರು.  ಕವಿತ ರಮೇಶ್ ರವರು ಬಿಜೆಪಿ ಪಕ್ಷದ ಅಧಿಕೃತ ‌ ಅಭ್ಯರ್ಥಿ ಎಂದು ಘೋಷಿಸಿದರು.        ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ‌ಕಟೀಲ್ ರವರ ಆದೇಶದಂತೆ ಪಕ್ಷದ ಎಲ್ಲಾ 17 ಸದಸ್ಯರು ಆಯ್ಕೆಯಾಗಿರುವ ಪಕ್ಷದ ಅಧಿಕೃತ ಅಭ್ಯರ್ಥಿ ಕವಿತ ರಮೇಶ್ ರವರಿಗೆ ಮತ…

Read More