Author: News Desk Benkiyabale

ತುಮಕೂರು: ಆಧುನಿಕ ಜಗತ್ತಿನ ಒತ್ತಡದ ಬದುಕಿಗೆ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ ಒಂದು ಅತ್ಯುತ್ತಮ ದಿವ್ಯೌಷಧಿಯಾಗಿದೆ ಎಂದು ವೈದ್ಯರು, ಲೇಖಕರು ಹಾಗೂ ಡಿಡಿ ಚಂದನದ ಥಟ್ ಅಂತ ಹೇಳಿ ಕಾರ್ಯಕ್ರಮದ ರೂವಾರಿಗಳಾದ ಡಾ. ನಾ. ಸೋಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಡಿವಿಜಿ ಕಗ್ಗಗಳ ವಾಚನ, ವ್ಯಾಖ್ಯಾನಕಾರರು ಹಾಗೂ ವೈದ್ಯರಾದ ಡಾ.ಕೆ.ರಾಜಶೇಖರ್ ತಿಳಿಸಿದರು. ತುಮಕೂರು ವಿವಿಯಲ್ಲಿ ಹಿರಿಯ ನಾಗರೀಕರ ಪರಿಸರ ವೇದಿಕೆ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಕನ್ನಡ ವಿಭಾಗ ಇವರ ಸಹಯೋಗದಲ್ಲಿ ಮಾ.24 ಮಂಗಳವಾರ ಆಯೋಜಿಸಲಾಗಿದ್ದ ಡಿ.ವಿ.ಜಿ ಅವರ ಕಗ್ಗಗಳ ವಾಚನ, ವ್ಯಾಖ್ಯಾನ ಮುಕ್ತಾಯ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೇವಲ ನಾಲ್ಕು ಸಾಲುಗಳಲ್ಲಿ ಇಡೀ ಬದುಕಿನ ಸಾರವನ್ನು ಹಿಡಿದಿಡುವ ಕಗ್ಗ, ಕನ್ನಡಿಗರ ಪಾಲಿನ ‘ಆಧುನಿಕ ಭಗವದ್ಗೀತೆ’. ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ಎಂಬ ಸಾಲುಗಳು ಮನುಷ್ಯನಿಗೆ ಇರಬೇಕಾದ ವಿನಯ ಮತ್ತು ಸಮಾಜಕ್ಕೆ ನೀಡಬೇಕಾದ ಕೊಡುಗೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸುತ್ತವೆ ಎಂದರು. ಇAದಿನ ಸ್ಪರ್ಧಾತ್ಮಕ ಯುಗದಲ್ಲಿ ಸೋಲು-ಗೆಲುವನ್ನು ಸಮಾನ ವಾಗಿ ಸ್ವೀಕರಿಸುವ ಸ್ಥಿತಪ್ರಜ್ಞತೆಯ…

Read More

ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ/ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾ ಯವನ್ನು ಒದಗಿಸಲು ಏಪ್ರಿಲ್ ೪ರಂದು ಬೆಳಿಗ್ಗೆ ೧೧ ಗಂಟೆಗೆ ತುಮಕೂರು ನಗರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ “ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋ ಜಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಗಳನ್ನು ನೀಡಲಾಗಿದೆ. ಅಲ್ಲದೆ, ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರವನ್ನು ನೀಡ ಲಾಗಿದೆ. ಅಂತೆಯೇ, ಏಪ್ರಿಲ್ ೪ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆ ಆವರಣದ ಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಮುಂಭಾಗದಲ್ಲಿ ನಿರ್ಮಿಸಲಾಗುವ…

Read More

ತುಮಕೂರು: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗಾಗಿ ಅಭಿವೃದ್ಧಿ ಕ್ಷೇತ್ರದಲ್ಲಿನ ಸಾಧನೆಯನ್ನ ಗುರುತಿಸಿ ವ್ಯಕ್ತಿ ವಿಭಾಗದಲ್ಲಿ ನೀಡಲಾಗುವ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಜಿಲ್ಲೆಯ ಕೊರಟಗೆರೆ ತಾಲೂಕಿನ ತೀತಾ ಗ್ರಾಮದ ಡಾ. ವಸಂತ ಮುರಳಿ ಅವರಿಗೆ ನೀಡಿ ಗೌರವಿಸಲಾಗಿದೆ. ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಜ್ಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಕೆಪಿಸಿಸಿ ಮಹಿಳಾ ಘಟಕಕಾರ್ಯಕರ್ತೆ, ಅಖಿಲ ಭಾರತ ವಿಶ್ವಕರ್ಮ ರಾಜ್ಯ ಮಹಿಳಾ ಅಧ್ಯಕ್ಷರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ವಿವಿಧ ಸಾಧನೆಗೈದು ಕೊರಟಗೆರೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸುಮಾರು ೧೨೦೦ಕ್ಕೂ ಹೆಚ್ಚು ಮಹಿಳಾ ಸ್ವಸಹಾಯ ಸಂಘಗಳನ್ನ ರಚಿಸಿ ಸರ್ಕಾರದಿಂದ ಸಾಲ ಸೌಲಭ್ಯ ಮತ್ತು ಅನುದಾನಗಳನ್ನ ಕೊಡಿಸಲು ಮುಂದಾದ ವಸಂತ ಮುರುಳಿಯವರ ಅನುಪಮಾ ಸಾಧನೆಯನ್ನ ಗುರುರ್ತಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯಮಟ್ಟದ ಕಿತ್ತೂರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ತುಮಕೂರು ನಗರದ ಗೃಹ ಸಚಿವ ಹಾಗೂ…

Read More

ತುಮಕೂರು: ಕುಟುಂಬದಲ್ಲಿ,ಕೆಲಸಮಾಡುವ ಸ್ಥಳಗಳಲ್ಲಿ ಹೆಣ್ಣಿನ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿರುವುದು ದುರದೃಷ್ಟಕರ,ದೆಹಲಿಯಲ್ಲಿ ನಡೆದ ನಿರ್ಭಯ ಅತ್ಯಾಚಾರ,ಕೊಲೆ ನೋಡಿದರೆ ದೇಶವೇ ನಿಬ್ಬೆರಗಾಗಿತ್ತು,ಹೆಣ್ಣಿಗೆ ಬಲತುಂಬುವ ನಿರ್ಭಯ ಮಹಿಳಾ ಜಾಗೃತಿ ವೇದಿಕೆಯ ಕಾರ್ಯ ಎಲ್ಲರೂ ಮೆಚ್ಚುವಂತಹದ್ದು,ಹೆಣ್ಣಿಗೆ ರಕ್ಷಣೆ ನೀಡಬೇಕು ಜೊತೆಗೆ ಶಾಲಾಹೆಣ್ಣುಮಕ್ಕಳಿಗೆ ಸ್ವಯಂರಕ್ಷಣೆ ತೆಗೆದುಕೊಳ್ಳುವ ಕಾರ್ಯಕ್ರಮವನ್ನು ರೂಪಿಸಿ,ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ದೇಶದಲ್ಲಿರುವ ಹೆಂಗಸರು ಇಂದು ಚಿಕ್ಕಕೆಲಸದಿಂದ ಹಿಡಿದು ಚಂದ್ರಲೋಕದ ತನಕ ಹೋಗಿಬಂದಿದ್ದಾರೆ ಎಂದರೆ ಹೆಣ್ಣಿನ ಸಾಧನೆ ಎಂತಹುದ್ದು ಎಂದು ಊಹಿಸಿ,ಹೆಣ್ಣು ಮಾಡುವ ಎಲ್ಲ ಉತ್ತಮ ಕೆಲಸಗಳಿಗೆ ಎಲ್ಲರೂ ಸಹಕಾರ ನೀಡಿದರೆ ದೇಶದಲ್ಲಿ ಹೆಣ್ಣುಮಕ್ಕಳಿಗೆ ಸಮಸ್ಯೆಯೇ ಬರುವುದಿಲ್ಲ ಎಂದು ತುಮಕೂರು ಮಹಾನಗರ ಪಾಲಿಕೆ(ಆಡಳಿತ) ಉಪ ಆಯುಕ್ತರಾದ ಸುಪ್ರಿಯಬಣಗಾರ್.ಬಿ ರವರು ಹೇಳಿದರು. ನಿರ್ಭಯ ಮಹಿಳಾ ಜಾಗೃತಿ ವೇದಿಕೆ(ರಿ)ಎಸ್.ಎಸ್.ಪುರಂನ ಶಿವಲಾಸ್ಯಸಮುದಾಯ ಭವನದಲ್ಲಿ ಆಯೋಜಿಸಿದ್ದ ವಿಶ್ವಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಹಿಳೆಯರನ್ನು ಕುರಿತು ಮಾತನಾಡಿದರು. ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾv ನಾಡಿದ ಶ್ರೀಮತಿ ಸಿ.ಎಲ್.ಸುನಂದಮ್ಮನವರು ತುಮಕೂರು ಜಿಲ್ಲೆಯಲ್ಲಿ ಮಹಿಳೆಯರು ಸರ್ಕಾರಿ ಹುದ್ದೆಯ ಉತ್ತಮ ಸ್ಥಾನದಲ್ಲಿದ್ದಾರೆ ಜಿಲ್ಲಾಧಿಕಾರಿ,ಉಪವಿಭಾಗಾಧಿಕಾರಿ,ಪಾಲಿಕೆ ಆಯುಕ್ತರು,ಉಪ ಆಯುಕ್ತರು,ಭೂದಾಖಲೆಗಳ…

Read More

ತುಮಕೂರು: ಕಳೆದ ವರ್ಷದ ಕೇಂದ್ರ ಬಜೆಟ್ ಮೂಲಕ ಜಾರಿಗೆ ತರುತ್ತಿರುವ ಕಾಯ್ದೆಯ ಪ್ರಕಾರ ನಿವೃತ್ತ ನೌಕರರಿಗೆ ಕರಾಳ ಶಾಸನವಾಗಿದ್ದು, ಇದರ ವಿರುದ್ಧ ತುಮಕೂರು ಜಿಲ್ಲಾ ನಿವೃತ್ತ ಸರ್ಕಾರಿ ನೌಕರರು ಪ್ರತಿಭಟಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬುಧವಾರ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ನಿವೃತ್ತ ನೌಕರರು ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಊರ್ಜಿತ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಂಘದ ಅಧ್ಯಕ್ಷೆ ಬಾ.ಹ. ರಮಾಕುಮಾರಿ ಅವರು ನಿರ್ಮಲ ಸೀತಾರಾಮನ್ ಅವರು ಕಳೆದ ಬಜೆಟ್‌ನಲ್ಲಿ ಊರ್ಜಿತ ಕಾಯ್ದೆಯನ್ನು ಮಂಡಿಸಿದ್ದರು. ಇದರ ಪ್ರಕಾರ ನಿವೃತ್ತರಿಗೆ ಡಿ.ಎ. ಮತ್ತು ಪಿಂಚಣಿ ಪರಿಷ್ಕರಣೆ ಇಲ್ಲವಾಗುತ್ತದೆ. ಇದನ್ನೇ ನಂಬಿ ಬದುಕುವ ನಿವೃತ್ತರು ಸಂಕಷ್ಟಕ್ಕೆ ಈಡಾಗುತ್ತಾರೆ. ಆದಕಾರಣ ಕೇಂದ್ರ ಸರ್ಕಾರದ ಈ ನಿರ್ಧಾರದ ವಿರುದ್ಧ ರಾಷ್ಟಾçದ್ಯಂತ ಕರಾಳ ದಿನವಾಗಿ ಆಚರಿಸಲಾಗುತ್ತಿದ್ದು, ಇದರನ್ವಯ ತುಮಕೂರಿನಲ್ಲಿ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ಜೀವನದ ಕೊನೆಯ ಘಟ್ಟದಲ್ಲಿ ಬದುಕುವ ನಿವೃತ್ತ ನೌಕರರು ಹೆಚ್ಚು ಅನಾರೋಗ್ಯಕ್ಕೆ…

Read More

ಪಾವಗಡ: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನಯ್ಯ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪಾವಗಡ ಘಟಕದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಶೋಕಸಭೆಯಲ್ಲಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡು ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿದರು. ಸಂತಾಪ ಸೂಚಿಸಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಹೆಚ್.ವಿ. ರವಿಕುಮಾರ್ ರವರು ನಮ್ಮ ತಾಲ್ಲೂಕಿನಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಆಘಾತಕಾರಿ ಮತ್ತು ಕಳವಳದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆಗಳು ಮರುಕಳಿಸಬಾರದು,ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನದ ನೌಕರರನ್ನು ವಿಶ್ವಾಸಕ್ಕೆ ಪಡೆದು ಸೌಹಾರ್ಧಯುತವಾಗಿ ಕೆಲಸ ನಿರ್ವಹಿಸಲು ಸಹಕರಿಸಬೇಕು. ಯಾವುದೇ ನೌಕರರಿಗೆ ಅಥವಾ ಅಧಿಕಾರಿಗಳಿಗೆ ಕೆಲಸದ ಸ್ಥಳದಲ್ಲಿ ಸಮಸ್ಯೆಗಳಾದಲ್ಲಿ ಕೂಡಲೇ ಸಂಘದ ಗಮನಕ್ಕೆ ತನ್ನಿ, ಸಂಘವು ಸದಾ ನಿಮ್ಮ ಹಿತರಕ್ಷಣೆಗೆ ಬದ್ಧವಾಗಿರುತ್ತದೆ ಎಂದು ಭರವಸೆ ನೀಡಿದರು.…

Read More

ತುಮಕೂರು: ಒಳಮೀಸಲಾತಿ ಇಲ್ಲದೆ ರಾಜ್ಯದಲ್ಲಿ ೫೬೪೩೨ ಹುದ್ದೆಗಳ ತುಂಬಲು ಹೊರಡಿಸಿರುವ ಅಧಿಸೂಚನೆಯನ್ನು ಕೂಡಲೇ ಹಿಂಪಡೆಯಬೇಕು, ವಿಶ್ವವಿದ್ಯಾಲಯಗಳನ್ನು ಒಂದು ಘಟಕವಾಗಿ ಪರಿಗಣಿಸಿ ನೇಮಕಾತಿ ಕೈಬಿಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಆರ್.ಪಿ.ಐ ಕರ್ನಾಟಕ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು. ಕರ್ನಾಟಕದಲಿತ ಸಂಘರ್ಷ ಸಮಿತಿ ಡಾ.ಎನ್.ಮೂರ್ತಿ ಬಣದವ ತಿಯಿಂದ ಜಿಲ್ಲಾಧ್ಯಕ್ಷರಾದ ಪಿ.ಎನ್.ರಾಮಯ್ಯ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ, ಸರಕಾರ ಒಳಮೀಸಲಾತಿ ಹೊರತಾಗಿ ಶೇ೧೫ರ ಮೀಸಲಾತಿ ಅಡಿಯಲ್ಲಿ ೫೬೪೩೨ ಹುದ್ದೆಗಳನ್ನು ತುಂಬಲು ಮುಂದಾಗಬಾರದು. ಇದರಿಂದ ಮಾದಿಗ ಸಮುದಾಯಕ್ಕೆ ಬಾರಿಅನ್ಯಾಯ ವಾಗಲಿದೆ. ಸರಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಡಿಎಸ್‌ಎಸ್ ಡಾ.ಎನ್.ಮೂರ್ತಿ ಬಣದ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ, ಕರ್ನಾಟಕ ರಾಜ್ಯ ಸರಕಾರ ಸುಪ್ರೀಕೋರ್ಟಿನ ತೀರ್ಪಿನ ಅನ್ವಯ ನಿ.ನ್ಯಾಯ ಮೂರ್ತಿ ನಾಗ ಮೋಹನ್‌ದಾಸ್ ಆಯೋಗ ರಚಿಸಿ ವರದಿ ಪಡೆದು. ತಾರೀಖು : ೨೫/೦೫/೨೦೨೫ ರಂದು ಸಚಿವ ಸಂಪುಟ…

Read More

ತುಮಕೂರು: ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳಿಗೆ ಹೈಕೋರ್ಟ್ ಆದೇಶದ ಮೇರೆಗೆ ಮರು ಮತ ಎಣಿಗೆ ನಡೆದು ಇಬ್ಬರು ನೂತನ ನಿರ್ದೇಶಕರುಗಳು ಆಯ್ಕೆಯಾಗಿದ್ದಾರೆ. ತುಮಕೂರು ಹಾಲು ಒಕ್ಕೂಟಕ್ಕೆ ೨೦೨೪ರ ನವೆಂಬರ್ ೧೦ ರಂದು ಚುನಾವಣೆ ನಡೆದಿತ್ತು. ಬಳಿಕ ಎರಡು ತಿಂಗಳ ನಂತರ ಮತ ಎಣಿಕೆಯೂ ನಡೆದಿತ್ತು. ಆ ಸಂದರ್ಭದಲ್ಲಿ ಪಾವಗಡ ಕ್ಷೇತ್ರದಿಂದ ಚಂದ್ರಶೇಖರರೆಡ್ಡಿ ಮತ್ತು ಮಧುಗಿರಿ ಕ್ಷೇತ್ರದಿಂದ ಬಿ. ನಾಗೇಶ್ ಬಾಬು ಆಯ್ಕೆಯಾಗಿದ್ದರು. ಇವರುಗಳ ಆಯ್ಕೆಯನ್ನು ಪ್ರಶ್ನಿಸಿ ಮಧುಗಿರಿ ಕ್ಷೇತ್ರದಿಂದ ಪರಾಭವಗೊಂಡಿದ್ದ ಕೊಂಡವಾಡಿ ಚಂದ್ರಶೇ ಖರ್ ಹಾಗೂ ಪಾವಗಡ ಕ್ಷೇತ್ರದಿಂದ ಚನ್ನಮಲ್ಲ ಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ದಾಖ ಲಾಗಿದ್ದ ರಿಟ್ ಅಫೀಲು ಅರ್ಜಿಯ ವಿಚಾರಣೆ ನಡೆದು ತುಮಕೂರು ಹಾಲು ಒಕ್ಕೂಟದ ಆಡಳಿತ ಮಂಡಳಿಯ ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳ ನಿರ್ದೇಶಕರ ಸ್ಥಾನದ ಮರು ಮತ ಎಣಿಕೆ ನಡೆಸುವಂತೆ ಆದೇಶ ನೀಡಿತ್ತು. ತುಮಕೂರು ಹಾಲು ಒಕ್ಕೂಟದ ಚುನಾವಣಾ…

Read More

ತುಮಕೂರು: ಇಂದಿನಿ0ದ ರಾಷ್ಟ್ರಾದ್ಯಂತ ಕ್ಷಯ ಮುಕ್ತ ಭಾರತ ಅಭಿಯಾನದಡಿ ೧೦೦ ದಿನಗಳ ಕಾಲ ಸಕ್ರಿಯವಾಗಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಮಂಗಳವಾರ ಬೆಳಿಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ೬೮೨ ಹೆಚ್ಚಿನ ಕ್ಷಯರೋಗದ ಅಪಾಯದ ಅಂಚಿನಲ್ಲಿರುವ ಹಳ್ಳಿಗಳನ್ನು ಗುರುತಿಸಿದ್ದು, ೯,೭೩,೪೭೧ ಜನಸಂ ಖ್ಯೆಯನ್ನು ಹೊಂದಿದೆ. ಆ ಹಳ್ಳಿಗಳಲ್ಲಿ ಸಂಪೂರ್ಣವಾಗಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು ಮತ್ತು ಜಿಲ್ಲೆಯಾದ್ಯಂತ ಡಯಾಬಿಟಿಸ್, ರಕ್ತದೊ ತ್ತಡ, ಹಳೆಯ ಕ್ಷಯರೋಗಿಗಳು, ದೀರ್ಘಾವದಿ ಖಾಯಿಲೆಯಿಂದ ಬಳಲುತ್ತಿರುವವರಿಗೂ ತಪಾಸಣೆಗೆ ಒಳಪಡಿಸಲಾಗುವುದು ಹಾಗೂ ಜಿಲ್ಲೆ ಯಾದ್ಯಂತ ಕ್ಷಯರೋಗದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ವಿಶ್ವ ಕ್ಷಯರೋಗ ದಿನದ ಅಂಗವಾಗಿ ಇಂದು ತುಮಕೂರಿನ ಸರ್ಕಾರಿ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆಗಳಲ್ಲಿ ಕರಪತ್ರ ಹಂಚುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಎಲ್ಲಾ ತಾಲ್ಲೂಕು, ಪ್ರಾ…

Read More

ತುಮಕೂರು: ಯುವ ಉತ್ಸಾಹಿ ಪಶುವೈದ್ಯ ಡಾ.ಸುಮೀಕ್ಷಾ ರೆಡ್ಡಿ ಅವರು ಸಾವು, ಪಶುವೈದ್ಯರಿಗೆ ಒಂದು ಪಾಠವಾಗಿದ್ದು,ಸರಕಾರ ಮತ್ತು ಅರಣ್ಯ ಇಲಾಖೆ ಇನ್ನೂ ಮುಂದಾದರೂ ವನ್ಯಜೀವಿಗಳ ಚಿಕಿತ್ಸೆಗೆ ನಿಯೋಜನೆಯಾಗುವ ವೈದ್ಯರ ರಕ್ಷಣೆಗೆ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಿ ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ.ಹೆಚ್.ಎಂ.ಶಿವಪ್ರಸಾದ್ ಒತ್ತಾಯಿಸಿದ್ದಾರೆ. ನಗರದ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ತರಬೇತಿ ಸಭಾಂಗಣದಲ್ಲಿ ಇತ್ತೀಚಗೆ ಶಿವಮೊಗ್ಗದ ತಾವರೆಕೊಪ್ಪದ ಲಯನ್ ಸಫಾರಿ ವನ್ಯಧಾಮದಲ್ಲಿ ಚಿಕಿತ್ಸೆ ನೀಡುವ ವೇಳೆ ನೀರಾನೆ(ಹಿಪ್ಪೋಪೊಟೋಮಸ್)ದಾಳಿಗೆ ತುತ್ತಾಗಿ ಜೀವನ್ಮರಣ ಹೋರಾಟ ನಡೆಸಿ, ಸಾವಿಗೀಡಾದ ತರಬೇತಿ ವೈದ್ಯೆ ಡಾ.ಸುಮೀಕ್ಷಾ ರೆಡ್ಡಿ ಅವರ ಶ್ರದ್ದಾಂಜಲಿ ಸಭೆಯಲ್ಲಿ ಪಾಲ್ಗೊಂಡು, ಮೃತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತಿದ್ದ ಅವರು, ಸರಕಾರ ಹಾಗೂ ಅರಣ್ಯ ಇಲಾಖೆಯ ಮೇಲೆ ವನ್ಯ ಜೀವಿ ಚಿಕಿತ್ಸೆಗೆ ನಿಯೋಜನೆಗೊಳ್ಳುವ ಪಶುವೈದ್ಯರ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಡ ತರುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಪಶುವೈದ್ಯರು, ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುವ ಅಗತ್ಯವಿದೆ.ನಿಮ್ಮೊಂದಿಗೆ ನಾವು ಸಹ…

Read More