ಇತ್ತೀಚೆಗೆ ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿಯೋಜನೆಯಿಂದ ಬಹಳಷ್ಟು ಜನರಿಗೆ ಉಪಯೋಗವಾದರೂ, ಅದರಲ್ಲೂ ಕೆಲ ಲೋಪಗಳಿಂದ ಸಾಕಷ್ಟು ಜನರಿಗೆ ಬಸ್ ದೊರೆಯದೇ ಪ್ರಯಾಣಕ್ಕಾಗಿ ಇನ್ನೊಂದು ಮತ್ತೊಂದು ಪರ್ಯಾಯ ವ್ಯವಸ್ಥೆಗೆ ಮೊರೆಹೋಗುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಮದ್ಯಮ ಹಾಗೂ ಬಡಜನತೆ ದೂರದ ಪ್ರಯಾಣಕ್ಕೆ ರೈಲ್ವೇ ಉತ್ತಮವೆಂದು, ಹಾಗೂ ಕಡಿಮೆ ವೆಚ್ಚದ ಪರಿಣಾಮ ಅತಿ ಹೆಚ್ಚು ಜನರು ಪ್ರಯಾಣ ಬೆಳೆಸುತ್ತಿದ್ದಾರೆ. ಶ್ರೀಮಂತರು ಹೇಗೋ ಎಸಿ, ಟಯಾರ್೧,೨೩ ಹೀಗೆ ರಿಸರ್ವೇಷನ್ ಮಾಡಿಸಿ ಆರಾಮದಾಯಕವಾಗಿ ಪ್ರಯಾಣಿಸುತ್ತಿದ್ದಾರೆ. ಆದರೆ ಮದ್ಯಮ ವರ್ಗದವರು ಹಾಗೂ ಬಡವರಿಗೆ ಮೀಸಲಾದ ಜೆನರಲ್ ಭೋಗಿಗಳಂತೂ ಕುರಿ ತುಂಬಿದ ಹಾಗೇ ತುಂಬಿಸಿ, ಸತ್ರೂ ಕ್ಯಾರೆ ಎನ್ನದ ರೀತಿ ಪ್ರಯಾಣಿಸುತ್ತಿರುವುದು ನೋಡಿ ದಂಗಾದ ಪರಿಸ್ಥಿತಿಯುಂಟು. ಅದರಲ್ಲೂ ನಮ್ಮ ಹಿಂದುಳಿದ ಭಾಗಗಳೆಂದೇ ಗುರುತಿಸಿರುವ ಯಾದಗಿರಿ ರಾಯಚೂರು ಜಿಲ್ಲೆಯ ಜನತೆ ಬೆಂಗಳೂರು ಮೈಸೂರಿಗೆ ಪ್ರಯಾಣಿಸಬೇಂಕೆAದರೇ ಅದರಲ್ಲೂ ಜೆನರಲ್ ಭೋಗಿಗಳಲ್ಲಿ ನರಕಯಾತನೆ ಉಂಟಾಗುವುದ ಸಾಮಾನ್ಯ., ಜಿಲ್ಲೆಗೆ ಅಷ್ಟು ರೈಲುಗಳನ್ನು ತಂದೆ, ಇಷ್ಟು ರೈಲುಗಳನ್ನು ತಂದೆ ಎಂದು ಬೀಗುತ್ತಿರುವವರು ಒಮ್ಮೆಯಾದರು ರಾಯಚೂರು ಮಾರ್ಗವಾಗಿ ತೆರಳುವ…
Author: News Desk Benkiyabale
ತುರುವೇಕೆರೆ: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನೆಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ. ತುಮಕೂರು ಘಟಕದ ಸಂಘಟನಾ ಸಂಚಾಲಕ ನರಸಿಂಹಣ್ಣ ಮಾತನಾಡಿ ಉತ್ತಮವಾಗಿ ಕಾರ್ಯನಿರ್ವಾಹಿಸುತ್ತಿರುವ ವಿದ್ಯುತ್ ಇಲಾಖೆಯ ನ್ನು ಖಾಸಗಿಕರಣ ಮಾಡಲು ಅದಿಸೂಚನೆ ಹೊರಡಿಸಿದ್ದು ಅಕ್ಷೇಪಣೆ ಸಲ್ಲಿಸಲು ಇದೇ ತಿಂಗಳ ೨೩ ರಂದು ಕೊನೆಯ ದಿನವಾಗಿದೆ ಅದ್ದರಿಂದ ಕೆಇಆರ್.ಸಿಗೆ ಸಾರ್ವಜನಿಕರು, ರೈತರು ಅಕ್ಷೇಪಣೆ ಸಲ್ಲಿಸುವಂತೆ ಮನವಿ ಮಾಡಿದರು. ನಾವು ಜನರ ಸೇವೆ ಹಿತ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ. ಖಾಸಗಿ ಕಂಪನಿಯಾದರೆ ಕೇವಲ ಲಾಭದ ಉದ್ದೇಶದಿಂದ ಕೆಲಸ ಮಾಡುತ್ತವೆ, ಇದರಿಂದ ಸಾಮಾನ್ಯ ಜನರಿಗೆ ಮತ್ತು ಬಡ ವರ್ಗದವರಿಗೆ ವಿದ್ಯುತ್ ದರ ಹೆಚ್ಚಾಗುತ್ತದೆ. ಹೊಸ ನೇಮಕಾತಿಯೂ ಮಾಡುವುದಿಲ್ಲ.ಖಾಸಗಿ ಕಂಪನಿಗಳಿಗೆ ಬಡ, ಮಧ್ಯಮ ದೀನ ದಲಿತರಿಗೆ ಮೀಸಲಾತಿ ಸಿಗದಂತಾಗುತ್ತದೆ. ಸಣ್ಣ ಮತ್ತು ಮಧ್ಯಮ ಗುಡಿ ಕೈಗಾರಿಕೆಗಳಿಗೆ ವಿದ್ಯುತ್ ದರ ಹೆಚ್ಚಳವಾದರೆ ಕೈಗಾರಿಕೆ ಬೆಳವಣಿಗೆ ಕುಂಠಿತಾಗುತ್ತದೆ. ಸರ್ಕಾರವು ಹಲವು ವರ್ಷಗಳ ಕಾಲ ಸಾರ್ವಜನಿಕರ…
ಹುಳಿಯಾರು: “ದೇಶಕ್ಕೆ ಇಂದು ಮತ್ತೊಂದು ಹಿಂದೂ-ಮುಸ್ಲಿA ವಿವಾದದ ಅಗತ್ಯವಿಲ್ಲ. ನಮಗೆ ಬೇಕಾಗಿರುವುದು ಶಿಕ್ಷಣ, ಅಭಿವೃದ್ಧಿ ಮತ್ತು ಸಾಮಾಜಿಕ ಶಾಂತಿ,” ಎಂದು ಹುಳಿಯಾರಿನ ಜಾಮೀಯ ಮಸೀದಿ ಕಾರ್ಯದರ್ಶಿ ನದೀಮ್ ಅವರು ಕರೆ ನೀಡಿದರು. ಹುಳಿಯಾರಿನ ಜಾಮೀಯ ಮಸೀದಿ ಹಾಗೂ ಸುತ್ತಮುತ್ತಲಿನ ವಿವಿಧ ಮಸೀದಿ ಸಮಿತಿಗಳ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಯಾವುದೇ ರಾಜಕೀಯ ಪಕ್ಷದ ಪರವಾಗಿ ಅಲ್ಲದೆ, ಸಾಮಾನ್ಯ ಭಾರತೀಯನಾಗಿ ಮತ್ತು ಮುಸ್ಲಿಂ ಸಮುದಾಯದ ಪ್ರತಿನಿಧಿಯಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದರು. ಗೋವು ರಾಜಕೀಯ ವಸ್ತುವಾಗದಿರಲಿ: ಭಾರತೀಯ ಸಂಸ್ಕöÈತಿ, ಗ್ರಾಮೀಣ ಪ್ರದೇಶ ಮತ್ತು ರೈತರ ಬದುಕಿನಲ್ಲಿ ಗೋವು ಅತ್ಯಂತ ಪ್ರಮುಖ ಪ್ರಾಣಿಯಾಗಿದೆ. ಗೋವಿನ ಕುರಿತು ಪರಸ್ಪರ ಗೌರವದಿಂದ ಚರ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಗೋವು ರಾಜಕೀಯ ವಸ್ತುವಾಗಬಾರದು, ಅದು ಸಮಾಜದಲ್ಲಿ ಪರಸ್ಪರ ಗೌರವದ ವಿಷಯವಾಗಬೇಕು. ಸಮಾಜ ಒಗ್ಗಟ್ಟಾಗಬೇಕಾದರೆ ಪರಸ್ಪರ ಗೌರವ ಅಗತ್ಯ. ಆಗ ಮಾತ್ರ ದೇಶ ಪ್ರಬಲವಾಗಲು ಸಾಧ್ಯ ಎಂದು ಅವರು ಪ್ರತಿಪಾದಿಸಿದರು. ಏಕತೆಗೆ ನಮ್ಮ…
ತುಮಕೂರು: ಸಂಘಜೀವಿ ಮನುಷ್ಯ ಸಹಕಾರ ಜೀವಿಯಾಗಿ ಪರಸ್ಪರ ಬೆಳವಣಿಗೆಯಾಗಲು ಸಹಕಾರ ಕ್ಷೇತ್ರ ಸಹಕಾರಿಯಾಗಿದೆ. ಸಹಕಾರ ಸಂಸ್ಥೆಗಳಿAದ ಸಾಲಸೌಲಭ್ಯ ಪಡೆದು ತಾನೂ ಬೆಳೆದು ಸಂಸ್ಥೆಯ ಬೆಳವಣಿಗೆಗೂ ನೆರವಾಗುವ ಈ ಕ್ಷೇತ್ರವು ಮತ್ತಷ್ಟು ವಿಸ್ತಾರವಾಗಿ ಬೆಳೆದು ಹೆಚ್ಚು ಜನರಿಗೆ ಸಹಾಯವಾಗಲಿ ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಆಶಿಸಿದರು. ಶನಿವಾರ ನಗರದಲ್ಲಿ ತುಮಕೂರು ಸಿಟಿ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ೧೪ನೇ ವರ್ಷದ ಸರ್ವಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ತುಮಕೂರು ಜಿಲ್ಲೆಯು ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಠತೆ ಹೊಂದಿದೆ. ಜಿಲ್ಲೆಯ ಸಹಕಾರಿ ಪಿತಾಮಹರಾಗಿರುವ ಕೆ.ಎನ್. ರಾಜಣ್ಣನವರ ಕಾಳಜಿ, ಪ್ರೋತ್ಸಾಹದಿಂದಾಗಿ ಜಿಲ್ಲೆಯಲ್ಲಿ ೩ ಸಾವಿರಕ್ಕೂ ಹೆಚ್ಚು ಸಹಕಾರಿ ಸಂಸ್ಥೆಗಳು ಸ್ಥಾಪನೆಯಾಗಿ ಲಕ್ಷಾಂತರ ಜನರಿಗೆ ಸಹಕಾರಿಯಾಗಿವೆ ಎಂದರು. ನೀವು ಚೆನ್ನಾಗಿದ್ದರೆ ನಾವೂ ಚೆನ್ನಾಗಿರುತ್ತೇವೆ ಎಂಬುದು ಸಹಕಾರಿಯ ಉದ್ದೇಶ. ಸರ್ವಜನರೂ ಸುಖವಾಗಿರಬೇಕು ಎಂಬ ಬಹುಜನರ ಹಿತ ಬಯಸುವ ಸಹಕಾರಿ ಕ್ಷೇತ್ರ ಪರಸ್ಪರ ಬೆಳವಣಿಗೆಗೆ ಪೂರಕವಾಗಿದೆ. ಸಹಾಯಾಸ್ತವು ಈಗ ಸಹಕಾರಿ ಹಸ್ತವಾಗಿದೆ. ಸಹಕಾರಿ ಸಂಸ್ಥೆಗಳನ್ನು ಬಳಸಿಕೊಂಡು…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ನಿಟ್ಟೂರು ಪಟ್ಟಣದ ವಿನಾಯಕ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಮಿಷನ್ ಸಂಯೋಜಕ ಶಶಿಧರ ಹೆಚ್.ಜಿ., ಮಾತನಾಡಿ, ಮಹಿಳಾ ಮತ್ತು ಮಕ್ಕಳ ಸಂಬAಧಿ ಯೋಜನೆಗಳಾದ ಬೇಟಿ ಬಚಾವೋ ಬೇಟಿ ಪಡಾವೋ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಐ.ಸಿ.ಡಿ.ಎಸ್ ಯೋಜನೆ, ಪೌಷ್ಠಿಕ ಪುರ್ನವಸತಿಕೇಂದ್ರ, ನರೇಗಾ ಯೋಜನೆ, ವರ-ದಕ್ಷಿಣೆ, ವಧು-ದಕ್ಷಿಣೆ ಮಿಷನ್ ಶಕ್ತಿ ಯೋಜನೆಯ ಮಹಿಳಾ ಸಬಲೀಕರಣ ಘಟಕದ ಬಗ್ಗೆ ಮಹಿಳಾ ಸಬಲೀಕರಣ ಘಟಕವು ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಪ್ರಾರಂಭಿಸಲಾದ ಒಂದು ಮಿಷನ್ ಮೋಡ್ ಯೋಜನೆಯಾಗಿದೆ ಹಾಗೂ ಮಹಿಳಾ ಸಬಲೀಕರಣ ಮಹತ್ವ ಮತ್ತು ಹೆಣ್ಣು ಮಕ್ಕಳ ಶಿಕ್ಷಣದ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಿದರು. ವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಆರ್. ರಾಮ್ದಾಸ್…
ಪಾವಗಡ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಸೇರಿದಂತೆ ಯಾವುದೇ ತುರ್ತು ಚಿಕಿತ್ಸೆಯ ಔಷಧಿಗಳ ಕೊರತೆಯಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳು ಸಂಪೂರ್ಣ ಸತ್ಯಕ್ಕೆ ದೂರವಾಗಿವೆ ಎಂದು ಆಡಳಿತ ವೈದ್ಯಾಧಿಕಾರಿ ಡಾ. ಗಣೇಶ್ ಬಾಬು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಔಷಧಿ ಕೊರತೆ ಇರಲಿಲ್ಲ ಎಂಬುದಕ್ಕೆ ದಾಖಲೆಗಳೇ ಸಾಕ್ಷಿ. ಸಾರ್ವಜನಿಕರು ರಾಜಕೀಯ ಅಥವಾ ವೈಯಕ್ತಿಕ ಲಾಭದ ಅಪಪ್ರಚಾರಕ್ಕೆ ಕಿವಿಗೊಡಬಾರದು. ಹಾವು ಕಡಿತದಿಂದ ಯುವಕ ಮೃತಪಟ್ಟ ಘಟನೆ ಮುಂದಿಟ್ಟುಕೊAಡು ಸಕಾಲಕ್ಕೆ ಔಷಧಿ ಸಿಗದೆ ಮೃತಪಟ್ಟಿದ್ದಾನೆ ಎಂದು ಮಾಡುತ್ತಿರುವ ಅಪಪ್ರಚಾರದಲ್ಲಿ ಸತ್ಯಾಂಶವಿಲ್ಲ ಎಂದು ಖಂಡಿಸಿದರು. ರಾತ್ರಿ ಪಾಳಿಯಲ್ಲಿ ವೈದ್ಯರು ಇರುವುದಿಲ್ಲ ಎಂಬುದು ಸುಳ್ಳು. ತುರ್ತು ಸೇವೆಗೆ ೨೪ ಗಂಟೆಯೂ ವೈದ್ಯರು ಹಾಗೂ ಸಿಬ್ಬಂದಿ ಲಭ್ಯರಿದ್ದಾರೆ. ಕರ್ತವ್ಯದಲ್ಲಿ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮವಿದೆ. ಸರ್ಕಾರಿ ಆಸ್ಪತ್ರೆಗಳು ಬಡ-ಮಧ್ಯಮ ವರ್ಗದ ಆಶಾಕಿರಣ. ಸತ್ಯಾಸತ್ಯತೆ ಅರಿಯದೆ ಅಪಪ್ರಚಾರ ಮಾಡುವುದು ಸಿಬ್ಬಂದಿಯ ನೈತಿಕ ಸ್ಥೆöÊರ್ಯ ಕುಗ್ಗಿಸುತ್ತದೆ ಎಂದರು. ಲೋಪ ಕಂಡುಬAದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ, ಸರಿಪಡಿಸಲು ಸಿದ್ಧ.…
ಚಿಕ್ಕನಾಯಕನಹಳ್ಳಿ: ತಾಲೂಕಿನ ಹುಳಿಯಾರು ಟಾಟಾ ಪವರ್ ಕಂಪನಿ ಲಿಮಿಟೆಡ್ ಸೇರಿದಂತೆ ಖಾಸಗಿ ಕಂಪನಿಗಳಿಗೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗೆ ಪರವಾನಿಗೆ ನೀಡಬಾರದು ಎಂದು ಆಗ್ರಹಿಸಿ ಹಾಗೂ ವಿದ್ಯುತ್ ಕಾಯ್ದೆ ೨೦೦೩ರ ಕಲಂ ೧೪ ಮತ್ತು ೧೫ರ ಅಡಿಯಲ್ಲಿ ಖಾಸಗಿ ಕಂಪನಿಗಳು ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿ ಕ.ವಿ.ಪ್ರ.ನಿ. ನೌಕರರ ಸಂಘದಿAದ ಹುಳಿಯಾರಿನಲ್ಲಿ ಮಂಗಳವಾರ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಇತ್ತೀಚೆಗೆ ‘ಟಾಟಾ ಪವರ್ ಕಂಪನಿ ಲಿಮಿಟೆಡ್’ ಸಂಸ್ಥೆಯು ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡಲು ಅನುಮತಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಏಇಖಅ) ಅರ್ಜಿ ಸಲ್ಲಿಸಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು, ವಿದ್ಯುತ್ ಕಾಯ್ದೆ ೨೦೦೩ರ ಕಲಂ ೧೪ ಮತ್ತು ೧೫ರ ಅಡಿಯಲ್ಲಿ ಸಲ್ಲಿಸಲಾಗಿರುವ ಈ ಅರ್ಜಿಯನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿ ಸಾರ್ವಜನಿಕರು ಹಾಗೂ ರೈತರ ಸಹಿಗಳಿರುವ ಬೃಹತ್ ಆಕ್ಷೇಪಣಾ ಪತ್ರವನ್ನು ಏಇಖಅ ಗೆ ರವಾನಿಸಿದರು. ಲಾಭದ ಆಸೆಗೆ ಬಡವರ ಬದುಕು ಬಲಿ: ಪ್ರತಿಭಟನಾಕಾರರ ಆತಂಕ ಪ್ರತಿಭಟನಾ ಸಭೆಯಲ್ಲಿ ಖಾಸಗೀಕರಣದಿಂದ ಸಾರ್ವಜನಿಕರಿಗೆ ಹಾಗೂ ಇಲಾಖೆಗೆ ಎದುರಾಗಲಿರುವ ಮಾರಕ…
ಹುಳಿಯಾರು: ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಅಡಚಣೆಯಿಲ್ಲದೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಬೆಸ್ಕಾಂ ವತಿಯಿಂದ ಹುಳಿಯಾರು ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ೧೧ ಕೆ.ವಿ ಮಾರ್ಗಗಳ ಸಮಗ್ರ ತುರ್ತು ನಿರ್ವಹಣಾ ಅಭಿಯಾನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆಯಿಂದಲೇ ಆರಂಭವಾದ ಈ ವಿಶೇಷ ಅಭಿಯಾನದಲ್ಲಿ ಇಡೀ ಸಿಬ್ಬಂದಿ ವರ್ಗವು ವಿವಿಧ ತಂಡಗಳಾಗಿ ಹಂಚಿಹೋಗಿ ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಿತು. ಮುಖ್ಯವಾಗಿ ವಿದ್ಯುತ್ ತಂತಿಗಳಿಗೆ ತಾಗುತ್ತಿದ್ದ ಹಾಗೂ ಗಾಳಿ-ಮಳೆಗೆ ಮುರಿದು ಬೀಳುವ ಸ್ಥಿತಿಯಲ್ಲಿದ್ದ ಮರದ ಕೊಂಬೆಗಳನ್ನು ಮತ್ತು ಲೈನ್ಗಳಿಗೆ ಅಡ್ಡಲಾಗಿದ್ದ ಬೇಲಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಯಿತು. ಮಾರ್ಗ ಮಧ್ಯೆ ಸಡಿಲಗೊಂಡಿದ್ದ ವಿದ್ಯುತ್ ತಂತಿಗಳ ಬಿಗಿಗೊಳಿಸುವಿಕೆ ಹಾಗೂ ಇನ್ಸುಲೇಟರ್ಗಳ ತಪಾಸಣೆ ನಡೆಸಲಾಯಿತು. ಭವಿಷ್ಯದಲ್ಲಿ ಉಂಟಾಗಬಹುದಾದ ದೊಡ್ಡ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ, ವಿವಿಧೆಡೆ ಬಾಗಿದ್ದ ವಿದ್ಯುತ್ ಕಂಬಗಳನ್ನು ಜೆಸಿಬಿ ಹಾಗೂ ಸಿಬ್ಬಂದಿಗಳ ಸಹಾಯದಿಂದ ಯಶಸ್ವಿಯಾಗಿ ನೇರಗೊಳಿಸಲಾಯಿತು. ಈ ಇಡೀ ಕಾರ್ಯಾಚರಣೆಯ ನೇತೃತ್ವವನ್ನು ಹುಳಿಯಾರು ಬೆಸ್ಕಾಂ ಶಾಖಾಧಿಕಾರಿಗಳಾದ ರಘುರಾಮ್ ಮತ್ತು ಹನುಮಂತರಾಯಪ್ಪ ಅವರು ವಹಿಸಿಕೊಂಡಿದ್ದರು. ಸ್ಥಳದಲ್ಲೇ ಮೊಕ್ಕಾಂ…
ಚಿಕ್ಕನಾಯಕನಹಳ್ಳಿ: ಅಧಿಕಾರಿಗಳ ಹಾಗೂ ಜನರ ನಡುವೆ ಮದ್ಯವರ್ತಿಗಳ ಹಾವಳಿ ಹಾಗೂ ಲಂಚದ ಆಮೀಷವನ್ನು ತಪ್ಪಿಸುವ ಉದ್ದೇಶದಿಂದ ಮತ್ತು ಗ್ರಾಮಗಳ ವಾಸ್ತವ ಸ್ಥಿತಿ ತಿಳಿದು ಅಲ್ಲಿನ ಸಮಸ್ಯೆಗಳನ್ನು ಸಾದ್ಯವಾದಷ್ಟು ಸ್ಥಳದಲ್ಳೇ ಪರಿಹರಿಸಲು ಮನೆಮಗ ಮನೆಬಾಗಿಲಿಗೆ ಕಾರ್ಯಕ್ರಮ ರೂಪಿಸಲಾಗಿದ್ದು ಇದು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನಮ್ಮ ಕ್ಷೇತ್ರದ ಎಲ್ಲಾ ಜನರಿಗೋಸ್ಕರವೇ ರೂಪಿಸಿದ ಕಾರ್ಯಕ್ರಮ ಎಂದು ಶಾಸಕ ಸಿ.ಬಿ.ಸುರಶ್ಬಾಬು ತಿಳಿಸಿದರು. ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಮಗ ಮನೆಬಾಗಿಲಿಗೆ ಶಿರ್ಷಿಕೆಯಡಿಯಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿಕಾರಿಗಳನ್ನು ಹಾಗೂ ಶಾಸಕರನ್ನು ಹುಡುಕಿಕೊಂಡು ಅಲೆದಾಡಬಾರದು ಎಂದು ಈಡೀ ಈ ಕ್ಷೇತ್ರದ ಒಟ್ಟು ೩೪ ಗ್ರಾಮಪಂಚಾಯಿತಿ ವ್ಯಾಪ್ತಿ ಹಾಗೂ ಪುರಸಭೆ ಮತ್ತು ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ವನ್ನು ರೂಪಿಸಿದ್ದು ಇದರಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಪರಿಹಾರವನ್ನು ಕಂಡುಕೊಳ್ಳಿ ಎಂದ ಅವರು ಈಗಾಗಲೇ ಮುದ್ದೇನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದ್ದು ಬೈಯಲಪ್ಪನ ಮಠಕ್ಕೊಂದು ೫೦ಲಕ್ಷವೆಚ್ಚದಲ್ಲಿ ಸಮುದಾಯ ಭವನವನ್ನು ಮಂಜೂರು ಮಾಡಲಾಗುವುದು…
ತುಮಕೂರು: ಬೊಳುವಾರು ಮಹಮ್ಮದ್ ಅವರ ಕಾದಂಬರಿ ಆಧಾರಿತ ಸ್ವಾತಂತ್ರ್ಯದ ಓಟ ನಾಟಕವನ್ನು ಪ್ರದರ್ಶಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ೧ ಕೋಟಿ ರುಪಾಯಿ ಹಣ ನೀಡಿದ್ದರು ಎಂದು ರಂಗಾಯಣ ಶಿವಮೊಗ್ಗದ ನಿರ್ದೇಶಕ ಪ್ರಸನ್ನ ಡಿ. ಸಾಗರ ತಿಳಿಸಿದರು. ಅವರು ತುಮಕೂರಿನ ಝೆನ್ ಟೀಮ್ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಂಗಾಯಣ ಶಿವಮೊಗ್ಗ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯದ ಓಟ ನಾಟಕ ಪ್ರದರ್ಶನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಕೃತಿಯನ್ನು ಪ್ರೇಕ್ಷಕರೆದುರು ತರಬೇಕೆಂದು ಯೋಚಿಸಿ ಬೊಳುವಾರು ಅವರಲ್ಲಿ ಪ್ರಸ್ತಾಪವಿಟ್ಟಾಗ ಅವರು ಹೇಗೆ ಮಾಡುತ್ತೀರಿ ಅಂತ ಅನುಮಾನದಿಂದಲೇ ಒಪ್ಪಿಗೆ ಕೊಟ್ಟರು. ಮುಂದೆ ರಂಗಾಯಣ, ಶಿವಮೊಗ್ಗದಿಂದ ಆಯವ್ಯಯದ ಸಂದರ್ಭದಲ್ಲಿ ಸರ್ಕಾರಕ್ಕೆ ಈ ಪ್ರಸ್ತಾಪವನೆಯನ್ನು ಸಲ್ಲಿಸಿದೆವು. ಈ ಪ್ರಸ್ತಾವನೆಯನ್ನು ಅಂಗೀಕರಿಸಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯದಲ್ಲಿ ಆರ್ಥಿಕ ಅನುದಾನ ಘೋಷಿಸಿ ರಂಗರೂಪ ಮಾಡುವ ಕಾರ್ಯಕ್ಕೆ ಸಹಕರಿಸಿದರು ಎಂದರು. ಸಿದ್ದರಾಮಯ್ಯನವರಿಗೂ, ಅಂದಿನ ಉಪಮುಖ್ಯಮಂತ್ರಿ ಹಾಗೂ ಈಗ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಹಾಗೂ ಮಾಜಿ…

