ಹುಳಿಯಾರು: ಪಟ್ಟಣದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದ ನೂತನ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ೧ ವಾರದಿಂದ ಬೀಗ ಜಡಿಯಲಾಗಿದ್ದು, ಪ್ರಯಾಣಿಕರು ಮತ್ತು ವ್ಯಾಪಾರಿಗಳು ಶೌಚಕ್ಕಾಗಿ ಅಲೆದಾಡುವಂತಾಗಿದೆ. ಆದರೂ ಪಟ್ಟಣ ಪಂಚಾಯಿತಿ ಗಮನ ಹರಿಸದೆ ನಿರ್ಲಕ್ಷಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಬಯಲು ಶೌಚಾಲಯವಾದ ಬಸ್ ನಿಲ್ದಾಣ!: ಶೌಚಾಲಯಕ್ಕೆ ಬೀಗ ಬಿದ್ದಿರುವ ಪರಿಣಾಮವಾಗಿ ಬಸ್ ನಿಲ್ದಾಣದ ಆವರಣದಲ್ಲಿ ಮತ್ತೆ ಬಯಲು ಶೌಚದ ಪಿಡುಗು ಆರಂಭವಾಗಿದೆ. ಹೊರ ಊರುಗಳಿಂದ ಬರುವ ಪ್ರಯಾಣಿಕರು, ಅದರಲ್ಲೂ ವಿಶೇಷವಾಗಿ ಮಹಿಳೆಯರು ಶೌಚಾಲಯವಿಲ್ಲದೆ ತೀವ್ರ ಮುಜುಗರ ಮತ್ತು ತೊಂದರೆ ಅನುಭವಿಸುತ್ತಿದ್ದಾರೆ. ಬಸ್ ನಿಲ್ದಾಣದ ಸುತ್ತಮುತ್ತಲಿರುವ ನೂರಾರು ಫುಟ್ಬಾತ್ ಅಂಗಡಿಯವರು ಹಾಗೂ ಪಟ್ಟಣ ಪಂಚಾಯಿತಿಯ ವಾಣಿಜ್ಯ ಮಳಿಗೆಗಳ ಬಾಡಿಗೆದಾರರು ಶೌಚಕ್ಕಾಗಿ ಪರ್ಯಾಯ ವ್ಯವಸ್ಥೆ ಇಲ್ಲದೆ ಕಂಗಾಲಾಗಿದ್ದಾರೆ. ಮಹಿಳೆಯರ ಪಾಡು ಹೇಳತೀರದು: ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿರುವುದು ಮಹಿಳಾ ಪ್ರಯಾಣಿಕರಿಗೆ, ಮಹಿಳಾ ಕಂಡಕ್ಟರ್ಗಳಿಗೆ ಶಾಪವಾಗಿ ಪರಿಣಮಿಸಿದೆ. ತುರ್ತು ಸಂದರ್ಭಗಳಲ್ಲಿ ಶೌಚಾಲಯ ಸಿಗದೆ ಮಹಿಳೆಯರು ಪಡುತ್ತಿರುವ ಸಂಕಷ್ಟ ನೋಡುವವರೂ ಇಲ್ಲದಂತಾಗಿದೆ. ಕೆರೆ…
Author: News Desk Benkiyabale
ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆ ಮೀಸಲಾತಿ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು ಜಿಲ್ಲೆಯ ಎಲ್ಲಾ ಹತ್ತು ತಾಲೂಕುಗಳಲ್ಲಿ ಗ್ರಾಪಂ ರಾಜಕಾರಣ ಗರಿಗೆದರಿದೆ. ಸದಸ್ಯ ಸ್ಥಾನದ ಮೀಸಲಾತಿ ನಿಗದಿಯಲ್ಲಿ ಪ್ರಭಾವಿಗಳ ಹಸ್ತಕ್ಷೇಪದ ದೂರುಗಳು ಕೇಳಿಬಂದಿವೆ. ಮೀಸಲಾತಿ ಪಟ್ಟಿ ರಾಜ್ಯ ಗೆಜೆಟ್?ನಲ್ಲಿ ಪ್ರಕಟವಾದ ಕೂಡಲೇ ವ್ಯಾಟ್ಸಪ್?ಗಳಲ್ಲಿ ಹರಿದಾಡಲಾರಂಭಿಸಿದೆ. ತುಮಕೂರು ಜಿಲ್ಲೆಯ ೩೩೦ ಗ್ರಾಪಂ ಸದಸ್ಯ ಸ್ಥಾನಕ್ಕೆ ಮೀಸಲಾತಿ ಹಂಚಿಕೆ ಪ್ರಕ್ರಿಯೆ ಮುಗಿದಿದ್ದು ಆಕ್ಷೇಪಣೆಗೆ ಅವಕಾಶವಿಲ್ಲದಂತೆ ಅಂತಿಮ ಅಧಿಸೂಚನೆ ಕೂಡ ಪ್ರಕಟಿಸುವುದರಿಂದ ಯಾರಾದರೂ ಮೀಸಲಾತಿ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯನ್ನು ಕಡಿಮೆ ಮಾಡಿದೆ. ಆಯಾ ಗ್ರಾಪಂ ವ್ಯಾಪ್ತಿಯಲ್ಲಿರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಹಂಚಲಾಗಿದೆ. ಎAಎಲ್ಎ, ಮಾಜಿಗಳ ಪ್ರಭಾವ!: ಇತ್ತೀಚೆಗಷ್ಟೇ ಕಂದಾಯ ಗ್ರಾಮಗಳಾಗಿ ಘೋಷಣೆಯಾದ ನವಗ್ರಾಮಗಳನ್ನು ಬಿಟ್ಟು ಜಿಲ್ಲೆಯಲ್ಲಿ ೨೫೭೪ ಗ್ರಾಮಗಳಿದ್ದು ೩೩೦ ಗ್ರಾಪಂಗಳಿವೆ. ಅವಧಿ ಪೂರ್ಣಗೊಳಿಸದ ಗುಬ್ಬಿ ತಾಲೂಕು ಅಂಕಸAದ್ರ, ಮಂಚಲದೊರೆ ಹೊರತಾಗಿ ಬಹುತೇಕ ಗ್ರಾಪಂಗಳ ಆಡಳಿತಾವಧಿ ಪೂರ್ಣಗೊಂಡಿದ್ದು ಸದ್ಯ ಎಲ್ಲೆಡೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಕಳೆದೊಂದು ವಾರದಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಪಂ ಸದಸ್ಯ ಸ್ಥಾನಗಳಿಗೆ ಮೀಸಲಾತಿ…
ತುಮಕೂರು: ಐತಿಹಾಸಿಕ ಮತ್ತು ಚಾರಿತ್ರಿಕ ವಿಷಯಗಳ ಬಗ್ಗೆ ಸಂಶೋಧನೆಗಳು ಕಡಿಮೆ. ಸಾವಿರಾರು ವರ್ಷಗಳ ಹಿಂದೆ ನಡೆದಿರುವ ಕೌತುಕಗಳ ಬಗ್ಗೆ ಮಾಹಿತಿ ಪಡೆಯಲು ಇಂದಿನ ಜನರು ಉತ್ಸುಕರಾಗಿದ್ದಾರೆ. ಆ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಕೆಲಸ ಮಾಡಬೇಕಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ನಗರದ ಶ್ರೀದೇವಿ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಗಳಗನಾಥ ಮತ್ತು ನಾ.ಶ್ರೀರಾಜ ಪುರೋಹಿತ ಪ್ರತಿಷ್ಠಾನವತಿಯಿಂದ ೨೦೨೪ನೇ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡು, ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡುತಿದ್ದ ಅವರು,ನಾಗಾವಿಯಲ್ಲಿ ಮೊದಲ ಕನ್ನಡ ವಿವಿ ಇತ್ತು. ಇಂದಿಗೂ ಘಟಿಕೋತ್ಸವ ಭವನ ಅಲ್ಲಿದೆ, ನೋಡಬಹುದು. ಇದರ ಬಗ್ಗೆ ಅನೇಕರಿಗೆ ಗೊತ್ತಿಲ್ಲ. ಇಂತಹ ಮಹತ್ವದ ವಿಚಾರಗಳು ಸಂಶೋಧನೆಗಳ ಮೂಲಕ ಜನರ ಗಮನಕ್ಕೆ ಬರಬೇಕಿದೆ. ನಾನು ಪ್ರವಾಸೋದ್ಯಮ ಮತ್ತು ಪುರಾತತ್ವ ಮಂತ್ರಿ ಇದ್ದಾಗ,ಹಸ್ತಪ್ರತಿ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದೆ.ಯಾರ ಮನೆಯಲ್ಲಿಯೇ ಯಾವುದೇ ವಿಚಾರಕ್ಕೆ ಸಂಬAಧಿಸಿದ ಹಸ್ತ ಪ್ರತಿಗಳಿದ್ದರು ಅವುಗಳನ್ನು ಸಂಗ್ರಹಿಸಿ,ಅದರಲ್ಲಿನ ಸಾರಾಂಶಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಕೆಲಸ ಆಗಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀದೇವಿ…
ತುಮಕೂರು: ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಕೌಶಲ್ಯವಿಕಾಸ ಕಾರ್ಯಕ್ರಮದ ಭಾಗವಾಗಿ ತಾಂತ್ರಿಕ ಶಿಕ್ಷಣ ಪಡೆದ ಮಕ್ಕಳಿಗೆ ಕೈಗಾರಿಕೆಗಳಲ್ಲಿ ಕೆಲಸ ಮಾಡಲು ಅಗತ್ಯವಿರುವ ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಸ್ಕಿಲ್ ಇಂಡಿಯಾ ಕೆಲಸ ಮಾಡುತ್ತಿದೆ ಎಂದು ಸ್ಕಿಲ್ ಇಂಡಿಯಾದ ಪಿಎಂಕೆವಿವೈನ ಸಂಚಾಲಕರಾದ ಧಾರವಾಡ ಐಐಟಿ ಪ್ರಾದ್ಯಾಪಕ ಅಬ್ದುಲ್ ತಿಳಿಸಿದ್ದಾರೆ. ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿರುವ ಹೆಚ್.ಎಂ.ಎಸ್. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಭಾರತ ಸರಕಾರದ ಸ್ಕಿಲ್ ಇಂಡಿಯದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯ ತರಬೇತಿ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರೇರೆಯುವ ಮೂಲಕ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು, ಧಾರವಾಡ ಐಐಟಿಯ ಮೇಲುಸ್ತುವಾರಿ ಯಲ್ಲಿ ನುರಿತ ತಜ್ಞರು ತರಬೇತಿಗೆ ಆಯ್ಕೆಯಾದ ಮಕ್ಕಳಿಗೆ ಕಂಪ್ಯೂಟರ್ ಸೈನ್ಸ್, ಮೇಕಾನಿಕಲ್, ಎಲೆಕ್ಟಾçನಿಕ್ ಅಂಡ್ ಕಮ್ಯುನಿಕೇಷನ್ ಹಾಗೂ ಎಐ(ಕೃತಕ ಬುದ್ದಿಮತ್ತೆ) ಈ ವಿಷಯಗಳಲ್ಲಿ ತರಬೇತಿ ನೀಡುವ ಮೂಲಕ ಅವರನ್ಬು ಕೌಶಲ್ಯಯುಕ್ತರನ್ನಾಗಿ ಪರಿರ್ವತಿಸಿ, ಉದ್ಯೋಗ ಒದಗಿಸುವ ಕೆಲಸ ಮಾಡುತ್ತಿದೆ. ಈ ವರ್ಷದಿಂದ ಪಿಎಂಕೆಇವಿವೈನ ಅಲ್ಪಸಂಖ್ಯಾತರ ಮಕ್ಕಳಿಗೆ ತರಬೇತಿ ನೀಡಲು ಹೆಚ್.ಎಂ.ಎಸ್.…
ತುಮಕೂರು: ನಗರದ ಮಧ್ಯಭಾಗದಲ್ಲಿರುವ ಶತಮಾನವನ್ನು ಕಂಡಿರುವ ಎಂಪ್ರೆಸ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಸಾಂಸ್ಕöÈತಿಕ, ಕ್ರೀಡೆ ಹಾಗೂ ಇತರ ಯೋಜನೆಗಳ ಉದ್ಘಾಟನಾ ಸಮಾರಂಭದ ಜೊತೆಯಲ್ಲಿ ವಿದ್ಯಾರ್ಥಿನಿಯರಿಗೆ ಮಧ್ಯಾನ್ಹದ ಭೋಜನ ವ್ಯವಸ್ಥೆಯ ಪ್ರಾರಂಭೋತ್ಸವವೂ ಸಹ ನೆರವೇರಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀ ಸ್ವಾಮಿ ಜಪಾನಂದಜೀ ಮಹಾರಾಜ್ ರವರು ವಹಿಸಿದ್ದರು. ಸದರಿ ಕಾಲೇಜಿನ ಮಧ್ಯಾನ್ಹದ ಭೋಜನ ಯೋಜನೆಯ ಕಲ್ಪಾಮೃತ ಫೌಂಡೇಷನ್ ಸದಸ್ಯರುಗಳಾದ ಶ್ರೀ ಟಿ.ಎನ್.ಮಧುಕರ್, ಅಧ್ಯಕ್ಷರು, ಶ್ರೀ ಬಿ.ಆರ್.ಉಮೇಶ್, ಕಾರ್ಯದರ್ಶಿಗಳು, ಶ್ರೀ ಎಸ್.ಪಿ.ಚಿದಾನಂದ, ಖಜಾಂಚಿ ಹಾಗೂ ಶ್ರೀಮತಿ ಅನ್ನಪೂರ್ಣ ಡಿ.ಬಿ., ಪ್ರಾಂಶುಪಾಲರು, ಶ್ರೀಮತಿ ರಾಧಾ ಎಂ.ಎಸ್., ಉಪನಿರ್ದೇಶಕರು, ಶಿಕ್ಷಣ ಇಲಾಖೆ, ಪದವಿ ಪೂರ್ವ ರವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸರಿಸುಮಾರು ೧೨೦೦ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಸಂಸ್ಥೆಯ ಎಲ್ಲ ಪ್ರಾಧ್ಯಾಪಕರು, ಹಿರಿಯ ಉಪನ್ಯಾಸಕರುಗಳು ಭಾಗವಹಿಸಿದ ಕಾರ್ಯಕ್ರಮವಾಗಿತ್ತು. ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಪೂಜ್ಯ ಜಪಾನಂದಜೀ ರವರು ವಿದ್ಯಾರ್ಥಿನಿಯರು ಕೇವಲ ಅಂಕಕ್ಕಾಗಿ ಶಿಕ್ಷಣವನ್ನು ಪಡೆಯುವುದಲ್ಲ, ಬದಲಾಗಿ ಜೀವನದಲ್ಲಿ ಮಹತ್ಕಾರ್ಯವನ್ನು ಕೈಗೊಂಡು ಒಂದು…
ತುಮಕೂರು: ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದು, ಭಾರತೀಯ ಸಂವಿಧಾನದಲ್ಲಿ ಇಂತಹ ಪ್ರಕರಣಗಳನ್ನು ನಿಷೇಧಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ ಧನಪಾಲ ಹವಲೆ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಂತ ಜೀವ ಜ್ಯೋತಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಗುರುವಾರ ಜರುಗಿದ “ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಹಾಗೂ ಕಾರ್ಯಗಾರ”ವನ್ನು ಉದ್ಘಾಟಿಸಿ ಮಾತನಾಡಿದ ಅವರು ಅನಕ್ಷರತೆ, ಬಡತನವು ಮಾನವ ಕಳ್ಳಸಾಗಾಣಿಕೆಯ ಜಾಲದಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತದೆ. ಈ ಜಾಲದಲ್ಲಿ ಒಮ್ಮೆ ಸಿಲುಕಿಕೊಂಡರೆ ಹೊರ ಬರುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯವೆಂದು ತಿಳಿಸಿದರು. ಮಾನವ ಕಳ್ಳ ಸಾಗಾಣಿಕೆಯಂತಹ ಅಪರಾಧ ಪ್ರಕರಣಗಳು ಘಟಿಸಿದ ನಂತರ ಕಾನೂನು ಕ್ರಮ ತೆಗೆದುಕೊಳ್ಳುವ ಬದಲು ಘಟಿಸುವ ಮುನ್ನವೇ ಪ್ರಕರಣಗಳು ಜರುಗದಂತೆ…
ಹುಳಿಯಾರು: ಹುಳಿಯಾರು ಸಮೀಪದ ದಸೂಡಿ ಗ್ರಾಮದಲ್ಲಿ ಕಳೆದೊಂದು ತಿಂಗಳಿAದ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗಿದ್ದು, ಗ್ರಾಮಸ್ಥರು ಜಲಕ್ಷಾಮದಿಂದ ಕಂಗೆಟ್ಟಿದ್ದಾರೆ. ಸುಮಾರು ೮೫೦ ಕ್ಕೂ ಹೆಚ್ಚು ಮನೆಗಳು ಹಾಗೂ ೫,೦೦೦ ಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಈ ದೊಡ್ಡ ಗ್ರಾಮದಲ್ಲಿ ಈಗ ನೀರಿಗಾಗಿ ಅಹಾಕಾರ ಮುಗಿಲು ಮುಟ್ಟಿದೆ. ಗ್ರಾಮದ ಬನಶಂಕರಿ ದೇವಸ್ಥಾನದ ಬಳಿ, ರಂಗನಾಥಪ್ಪ ಅವರ ಮನೆಯ ಹತ್ತಿರ, ಬಾಳೆಗೊಂದಿ ಹಳ್ಳ, ಆಸ್ಪತ್ರೆಯ ಮುಂಭಾಗ, ಕೆ.ಕೆ.ಕುಮಾರಣ್ಣ ಅವರ ಮನೆಯ ಹತ್ತಿರ ಹಾಗೂ ಅರಳಿಮರದ ಬಳಿ ಹೀಗೆ ಒಟ್ಟು ಆರು ಸಾರ್ವಜನಿಕ ಕೊಳವೆಬಾವಿಗಳಿದ್ದವು. ಇವುಗಳ ಮೂಲಕವೇ ಇಡೀ ಗ್ರಾಮಕ್ಕೆ ಇಷ್ಟೂ ದಿನ ನೀರು ಪೂರೈಸಲಾಗುತ್ತಿತ್ತು. ಆದರೆ, ಪ್ರಕೃತಿಯ ಮುನಿಸೋ ಅಥವಾ ಅಂತರ್ಜಲದ ಅತಿಯಾದ ಬಳಕೆಯೋ, ನಾಲ್ಕು ಕೊಳವೆಬಾವಿಗಳಲ್ಲಿ ನೀರು ಸಂಪೂರ್ಣವಾಗಿ ಬರಿದಾಗಿದ್ದು, ಉಳಿದ ಎರಡು ಕೊಳವೆ ಬಾವಿಗಳ ಲ್ಲಿಯೂ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದೆ. ೧೫ ದಿನಗಳಿಂದ ಟ್ಯಾಂಕರ್ ಆಸರೆ: ಪಂಚಾಯಿತಿಯವರು ತಕ್ಕಮಟ್ಟಿಗೆ ನೀರಿರುವ ಕೊಳವೆಬಾವಿಯಿಂದ ಓವರ್ಹೆಡ್ ಟ್ಯಾಂಕ್ಗೆ ನೀರು ತುಂಬಿಸಿ,…
ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಪ್ರಕ್ರಿಯೆ ಪೂರ್ಣಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಕೊನೆಯ ಕ್ಷಣದವರೆಗೂ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಜಿಲ್ಲಾಡಳಿತ ಕ್ರಮವಹಿಸಿದ್ದು, ಮತದಾರರು ತಮ್ಮ ಯಾವುದೇ ಸಮಸ್ಯೆ, ಗೊಂದಲಗಳನ್ನು ಸಹಾಯವಾಣಿಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನೋಂದಾಯಿತ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ ನಡೆಸಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜಿಲ್ಲೆಯಲ್ಲಿ ಸಮರ್ಪಕವಾಗಿ ನಡೆಯುತ್ತಿದ್ದು, ಮತಗಟ್ಟೆ ಅಧಿಕಾರಿಗಳು ಈಗಾಗಲೇ ಜಿಲ್ಲೆಯಲ್ಲಿ ಒಟ್ಟು ೨೨,೯೮,೮೭೯ ಗಣತಿ ನಮೂನೆಗಳನ್ನು ವಿತರಣೆ ಮಾಡಿದ್ದು, ಈ ಪೈಕಿ ಶೇ.೮೭.೬೫ರಷ್ಟು ಗಣತಿ ನಮೂನೆಗಳನ್ನು ಹಿಂಪಡೆದು ಗಣಕೀಕರಣಗೊಳಿಸಿದ್ದಾರೆ. ಬಾಕಿ ಗಣತಿ ನಮೂನೆಗಳನ್ನು ನಿಯಮಾನುಸಾರ ಕೊನೆಯ ದಿನವಾದ ಆಗಸ್ಟ್ ೮ರೊಳಗೆ ಹಿಂಪಡೆದು ಗಣಕೀಕರಣಗೊಳಿಸಬೇಕಿರುವುದರಿಂದ ಮುಂದಿನ ೨ ದಿನದೊಳಗಾಗಿ ಮತದಾರರು ತಮ್ಮ ಭರ್ತಿ ಮಾಡಿದ ಗಣತಿ ನಮೂನೆಯನ್ನು ಮತಗಟ್ಟೆ ಅಧಿಕಾರಿಗಳಿಗೆ ಹಿಂತಿರುಗಿಸುವ ಮೂಲಕ ಪ್ರಕ್ರಿಯೆ ಸರಾಗವಾಗಿ ನಡೆಯಲು ಸಹಕರಿಸಬೇಕಾಗಿ ಜಿಲ್ಲಾಧಿಕಾರಿ ತಿಳಿಸಿದರು. ಮತದಾರರು ಪ್ರಕ್ರಿಯೆಯಲ್ಲಿ…
ತುಮಕೂರು: ರಾಜಕಾರಣದಷ್ಟೇ ಇಂದು ದೇಶದ ಶಿಕ್ಷಣ ವ್ಯವಸ್ಥೆಯೂ ಕಲುಷಿತಗೊಳ್ಳುತ್ತಿದ್ದು, ಗುಣಾತ್ಮಕ ಶಿಕ್ಷಣ ನೀಡುವುದು ಪ್ರಸ್ತುತ ದಿನಗಳಲ್ಲಿ ದೊಡ್ಡ ಸವಾಲಾಗಿದೆ ಎಂದು ಮಾಜಿ ವಿಧಾನ ಪರಿಷತ್ತು ಸದಸ್ಯ ಡಾ. ವೈ. ಎ. ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದರು. ನಗರದ ಸೆಂಟ್ರಲ್ ಲೈಬ್ರರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಗೆಳೆಯರ ಗೆಳೆಯ ಕೆಸಿಬಿ’ ಕೃತಿ ಲೋಕಾರ್ಪಣೆ ಹಾಗೂ ಡಾ. ಕೆ.ಸಿ. ಬಸವರಾಜ್ ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೆಸಿಬಿ ಅಪರೂಪದ ವ್ಯಕ್ತಿತ್ವ: ಡಾ. ಕೆ.ಸಿ. ಬಸವರಾಜ್ (ಕೆಸಿಬಿ) ಅವರ ಸಾಧನೆಯನ್ನು ಸ್ಮರಿಸಿದ ನಾರಾಯಣಸ್ವಾಮಿ, “ಶೋಷಿತ ಹಾಗೂ ದಮನಿತ ಸಮುದಾಯದಿಂದ ಬಂದು, ಎಲ್ಲಾ ಸವಾಲುಗಳನ್ನು ಎದುರಿಸಿ ಉನ್ನತ ಹುದ್ದೆಗೆ ಏರಿದ ಕೆಸಿಬಿ ಅವರ ಸಾಧನೆ ಸಾಮಾನ್ಯವಾದದ್ದಲ್ಲ. ಡಿವಿಜಿ ಅವರ ‘ಮಂಕುತಿಮ್ಮನ ಕಗ್ಗ’ದಂತೆ ದೀನದುರ್ಬಲರ ಪಾಲಿಗೆ ಬೆಲ್ಲ-ಸಕ್ಕರೆಯಾಗಿ, ಸಮಾಜಕ್ಕೆ ಬೆಳಕಾಗಿದ್ದಾರೆ. ಎಂದು ಬಣ್ಣಿಸಿದರು. ಸರ್ಕಾರಿ ಸೇವೆಯಿಂದ ನಿವೃತ್ತರಾದ ಮಾತ್ರಕ್ಕೆ ಮನೆಯಲ್ಲಿ ಕೂರದೆ, ಕೆಸಿಬಿ ಅವರು ತಮ್ಮಲ್ಲರುವ ಜ್ಞಾನ, ವಿದ್ವತ್ತು ಹಾಗೂ ಅನುಭವವನ್ನು ಸಮಾಜದ ಏಳಿಗೆಗಾಗಿ ಹಾಗೂ ಯುವಜನರ ಹಿತಕ್ಕಾಗಿ…
ತುಮಕೂರು: ನಗರದ ಹನುಮಂತಪುರದಲ್ಲಿ ಪೇಟೆ ಮಾತೆ ಕೊಲ್ಲಾಪುರದಮ್ಮ ಹಾಗೂ ಕರುಗಲ್ಲಮ್ಮ ದೇವರ ಐದು ದಿನಗಳ ಜಾತ್ರಾ ಮಹೋತ್ಸವ ಏರ್ಪಾಟಾಗಿದೆ. ಆಗಸ್ಟ್ ೩ರಂದು ಬೆಳಿಗ್ಗೆ ೧೦.೩೦ಕ್ಕೆ ಶ್ರೀರಾಮ ನಗರದ ಆದಿಸ್ಥಾನ ಮುದ್ರೆ ಗೋಣಿ ಮರದ ಪೂಜೆ, ಮಧ್ಯಾಹ್ನ ೩ ಗಂಟೆಗೆ ಕೋಟೆ ಕೊಲ್ಲಾಪುರದಮ್ಮ ಹಾಗೂ ಕರುಗಲ್ಲಮ್ಮ ದೇವಸ್ಥಾನದಿಂದ ದೇವರುಗಳನ್ನು ಮಂಗಳವಾದ್ಯ, ಜಾನಪದ ಕಲಾ ತಂಡಗಳ ಪ್ರದರ್ಶನದೊಂದಿಗೆ ಹನುಮಂತಪುರ ದೇವಸ್ಥಾನಕ್ಕೆ ಕರೆತರಲಾಗುವುದು. ನಂತರ ನಡೆಯುವ ಸಮಾರಂಭದಲ್ಲಿ ತಿಪಟೂರು ತಾಲ್ಲೂಕು ಆಲುಬೂರು ಕ್ಷೇತ್ರದ ಸೋಮಶೇಖರ ಸ್ವಾಮೀಜಿ ಸಾನಿಧ್ಯ ವಹಿಸುವರು. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿದರೆ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಎಸ್.ಆರ್.ಶ್ರೀನಿವಾಸ್, ಪ್ರಜಾಪ್ರಗತಿ ಸಂಪಾದಕ ಡಾ.ಎಸ್. ನಾಗಣ್ಣ ಅತಿಥಿಗಳಾಗಿ ಭಾಗವಹಿಸುವರು. ಆಗಸ್ಟ್ ೪ರಂದು ಸಂಜೆ ೫ ಗಂಟೆಗೆ ಆರತಿ ಅಗ್ನಿಕೊಂಡವನ್ನು ಕೇಂದ್ರ ಸಚಿವ ವಿ.ಸೋಮಣ್ಣ ಉದ್ಘಾಟಿಸುವರು. ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಸುರೇಶ್ ಗೌಡ, ಮಾಜಿ ಶಾಸಕ ಹೆಚ್.ನಿಂಗಪ್ಪ ಭಾಗವಹಿಸುವರು. ಇದೇ ದಿನ ಸಂಜೆ ೬ ಗಂಟೆಗೆ ಕಂಬದ ರಂಗಯ್ಯ ಮತ್ತು ತಂಡದವರಿAದ ಸಂಗೀತ…











