ತುಮಕೂರು: ಜಿಲ್ಲೆಯ ೧೦ ತಾಲೂಕುಗಳಲ್ಲಿ ೪೦ ನೀರಿನ ಮೂಲಗಳ ಮಾದರಿಗಳನ್ನು ಜೈವಿಕ ಪರೀಕ್ಷೆಗೊಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ೧೯ ಮಾದರಿಗಳು ಕುಡಿಯಲು ಯೋಗ್ಯವಲ್ಲವೆಂದು ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣಾ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ೯, ಸಿರಾ-೬, ತುಮಕೂರು-೩ ಮತ್ತು ಗುಬ್ಬಿ-೧ ನೀರಿನ ಮೂಲಗಳು ಕುಡಿಯಲು ಯೋಗ್ಯವಿಲ್ಲವೆಂದು ವರದಿ ಬಂದಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳಿಂದ ಸರಬರಾಜು ಮಾಡಬಾರದು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಮೃತ್ ಮತ್ತು ಜಲ್ ಜೀವನ್ ಮಿಷನ್ ಯೋಜನೆಗಳಡಿ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರಲ್ಲದೆ, ಸಾರ್ವಜನಿಕರಿಗೆ ನೀರು ಸರಬರಾಜು ಮಾಡುವ ಎಲ್ಲ ಕೊಳವೆಬಾವಿಗಳಲ್ಲಿ ಕಡ್ಡಾಯವಾಗಿ ಕ್ಲೋರಿನೇಷನ್ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಸೂಚಿಸಿದರು. ನಗರದಲ್ಲಿನ ಎಲ್ಲಾ…
Author: News Desk Benkiyabale
ಹುಳಿಯಾರು: ಹುಳಿಯಾರು-ತಿಪಟೂರು ಮಾರ್ಗವಾಗಿ ಹುಳಿಯಾರು ಸೇರಿದಂತೆ ಹಂದನಕೆರೆ, ಮತಿಘಟ್ಟ ಒಳಗೊಂಡ0ತೆ ಸುಮಾರು ೨ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್ ಪಾಸ್ ಮಾಡಿಸಿಕೊಂಡು, ಸಾವಿರಾರು ವಿದ್ಯಾರ್ಥಿಗಳು ಶಕ್ತಿ ಯೋಜನೆಯಲ್ಲಿ ನಿತ್ಯ ತಿಪಟೂರಿನ ಶಾಲಾ ಕಾಲೇಜುಗಳಿಗೆ ಮುಂಜಾನೆ ಸಂಚರಿಸುತ್ತಾರೆ. ಸುಮಾರು ಒಂದು ಬಸ್ಸಿಗೆ ೭೦ ರಿಂದ ೮೦ ವಿದ್ಯಾರ್ಥಿಗಳು ಸಂಚರಿಸಿದರು ೩೦ ರಿಂದ ೪೦ ವಾಹನಗಳ ಅವಶ್ಯಕತೆ ಇರುತ್ತದೆ. ಆದರೆ ಮುಂಜಾನೆ ಓಡಾಡುವ ಐದಾರು ಬಸ್ಗಳಲ್ಲೇ ನೂಕುನುಗ್ಗಲಿನಲ್ಲಿ ವಿದ್ಯಾರ್ಥಿಗಳು ಓಡಾಡುತ್ತಿದ್ದಾರೆ. ಹುಳಿಯಾರಿನಲ್ಲಿ ಪ್ರತಿದಿನ ಬೆಳಿಗ್ಗೆ ೫:೩೦ ರಿಂದ ೯:೩೦ ರವರೆಗೆ ಬರುವಂತ ಎಲ್ಲಾ ಬಸ್ಸುಗಳು ಹುಳಿಯಾರು ನಿಲ್ದಾಣದಲ್ಲಿಯೇ ತುಂಬಿರುತ್ತವೆ. ಮುಂದಿನ ನಿಲ್ದಾಣಗಳಲ್ಲಿ ವಿದ್ಯಾರ್ಥಿಗಳು ನೂಕುನುಗ್ಗಲಿನಲ್ಲಿ ನಿಂತು ಪ್ರಯಾಣ ಮಾಡುತ್ತಾರೆ. ಇರುವ ಕಡಿಮೆ ವಾಹನದಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ಪ್ರಯಾಣಿಸುತ್ತಿದ್ದು ಇದರಿಂದ ಅವರಿಗೆ ಪ್ರತಿದಿನ ಮಾನಸಿಕ ಒತ್ತಡ ಉಂಟಾಗುತ್ತಿದೆ. ಇನ್ನು ಹೆಚ್ಚಿನ ವಾಹನಗಳು ಅವಶ್ಯವಿದ್ದರೂ ಸಹ ಇತ್ತೀಚಿನ ಒಂದು ತಿಂಗಳಿ0ದ ತಿಪಟೂರಿನ ಮಾರ್ಗ ಸಂಖ್ಯೆ ೬೩ ವಾಹನ ಸಂಖ್ಯೆ ಞಚಿ೦೬ ಜಿ ೧೨೮೮ ವಾಹನವನ್ನು ಕಾರಣವಿಲ್ಲದೆ ಏಕಾಏಕಿ…
ತುಮಕೂರು: ತಾಲ್ಲೂಕು ವ್ಯಾಪ್ತಿ ನಂದಿಹಳ್ಳಿಯಿ0ದ ವಸಂತನರಸಾಪುರದವರೆಗೆ ನಿರ್ಮಾಣಗೊಳ್ಳುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಹಂತ-೨ ಭೂಸ್ವಾಧೀನ ಪ್ರಕ್ರಿಯೆ ಹಿನ್ನೆಲೆಯಲ್ಲಿ ಪೆರಮನಹಳ್ಳಿ ಹಾಗೂ ದೊಡ್ಡನಾರವಂಗಲ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ರೈತರ ಆತಂಕ, ಸಮಸ್ಯೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಎದುರಾಗುತ್ತಿರುವ ಅಡಚಣೆಗಳನ್ನು ಜಿಲ್ಲಾಧಿಕಾರಿಗಳು ಮನಗಂಡು ರೈತರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನ್ಯಾಯಸಮ್ಮತ ಹಾಗೂ ಕಾನೂನುಬದ್ಧ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದುರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಅಧಿಕಾರಿ ಎಸ್. ಧರ್ಮಪಾಲ್ ಹಾಗೂ ರಾಜಸ್ವ ನಿರೀಕ್ಷಕರಾದ ಗುರು ಸಿದ್ದರಾಮಣ್ಣ ಮತ್ತು ಮ್ಯಾನೇ ಜರ್ ಅಭಯ್ ಅವರಿಗೆ ಸೂಚಿಸಿದರು. ರೈತರ ಭೂಮಿ ಸರ್ಕಾರದ ಯೋಜನೆಗಳಿಗೆ ಅಗತ್ಯವಾದರೂ, ಅವರಿಗೆ ನ್ಯಾಯಯುತ ಪರಿ ಹಾರ ದೊರಕಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದ0ತೆ ಭೂಸ್ವಾಧೀನ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಸಂಬAಧಿಸಿದ0ತೆ ಬಾಣಾವರ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಗ್ರಾಮಸ್ಥರೊಂದಿಗೆ ಸಂವಾದಿಸಿ, ಸಮೀಕ್ಷೆಯ ಪ್ರಗತಿ ಹಾಗೂ ಜನರ…
ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಗರದ ಸ್ಲಂ ಜನರ ವಿವಿಧ ಹಕ್ಕೋತ್ತಾಯಗಳಿಗೆ ಒತ್ತಾಯಿಸಿ ಶಿರಾಗೇಟ್ನಲ್ಲಿರುವ ಸ್ಲಂ ಬೋರ್ಡ್ ಕಛೇರಿ ಮುಂದೆ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಈಗಾಗಲೇ ಕಳೆದ ಒಂದು ವರ್ಷಗಳಿಂದ ಜಿಲ್ಲಾಡಳಿತಕ್ಕೆ ಸ್ಲಂ ಜನರ ಕುಂದು ಕೊರತೆ ಬಗ್ಗೆ ಗಮನಕ್ಕೆ ತರಲಾಗಿದೆ, ಜಿಲ್ಲಾಧಿಕಾರಿಗಳು ಸೇರಿದಂತೆ ಸ್ಲಂ ಬೋರ್ಡ್ ಆಯುಕ್ತರು, ನಗರಪಾಲಿಕೆ ಆಯುಕ್ತರು ಹಾಗೂ ಸ್ಲಂ ಬೋರ್ಡ್ ಇಂಜಿನಿರ್ಸ್ಗಳು ಸಭೆ ನಡೆಸಿಸಮಸ್ಯೆಗಳನ್ನು ಕೇಳಿ ಪರಿಹರಿಸುತ್ತೇವೆ ಎಂದು ಸಮಯಗಳನ್ನು ತೆಗದುಕೊಂಡು ಕ್ರಮವಹಿಸಿಲ್ಲ, ಇಲಾಖೆಗಳ ಸಮನ್ವಯತೆ ಮತ್ತು ಅಧಿಕಾರಿಗಳ ನಿರ್ಲ ಕ್ಷö್ಯತೆಯಿಂದ ಸ್ಲಂ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲವಾಗಿದ್ದು, ಈ ಕಾರಣಕ್ಕಾಗಿ ಇಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಮುತ್ತಿಗೆ ಹಾಕಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ೫೦೩ ಮನೆಗಳ ಕಾಮಗಾರಿ ಅರ್ಧಂಬರ್ಧಕ್ಕೆ ನಿಲ್ಲಿಸಲಾಗಿದೆ ಅವುಗಳನ್ನು ೬೦ ದಿನಗಳಲ್ಲಿ…
ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ಹಿತರಕ್ಷಣಾ ಸಮಿತಿಯಿಂದ ಕರ್ನಾಟಕ ರಾಜ್ಯ ಸರ್ಕಾರದಿಂದ ತುಮಕೂರು ಜಿಲ್ಲೆಯಲ್ಲಿ ಸಾಮಾಜಿ, ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಮತ್ತು ಪ್ರಮಾಣಿಕವಾಗಿ ನಡೆಸಲು ಒತ್ತಾಯಿಸಿ ಜಿಲ್ಲಾ ಧಿಕಾರಿಗಳಿಗೆ ಮನವಿ ನೀಡಲಾಯಿತು. ತುಮಕೂರು ಜಿಲ್ಲೆಯಲ್ಲಿ ಶೇಕಡ ೯೦% ಸಮೀಕ್ಷೆ ಆಗಿರುವುದು ಪ್ರಸಂಶನೀಯ ಇದಕ್ಕೆ ಕಾರಣರಾದ ಜಿಲ್ಲಾಡಳಿತದ ಅಧಿಕಾರಿಗಳು, ಶಿಕ್ಷಕರು ಮತ್ತು ಸ್ಥಳೀಯ ಸಂಸ್ಥೆಗಳ ಗಣತಿದಾರರನ್ನು ಅಭಿನಂದಿಸುತ್ತೇವೆ ಉಳಿದ ೧೦% ಸಮೀಕ್ಷೆಯನ್ನು ಪೂರ್ಣಗೊಳಿಸಿ ಶೇ ,೧೦೦%ರಷ್ಟು ತಲುಪಬೇಕೆಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿಲಾಯಿತು. ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಪ್ರತಿಕ್ರಿಯಿಸಿ ನಿಗಧಿತ ಕಾಲಮಿತಿಯಲ್ಲಿ ಶೇ.೧೦೦% ರಷ್ಟು ಸಮೀಕ್ಷೆ ಯನ್ನು ಸಂಪೂರ್ಣಗೊಳಿಸುವುದಾಗಿ ಹೇಳಿದರು. ಎ.ನರಸಿಂಹಮೂರ್ತಿ ಮಾತನಾಡಿ, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿರುವುದು ಸಂವಿಧಾನದ ಆಶಯವಾಗಿದೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ೧೯೯೫ ಕಾಯ್ದೆಯನ್ವಯ ಪ್ರತಿ ೧೦ ವರ್ಷ ಗಳಿಗೊಮ್ಮೆ ಕಡ್ಡಾಯವಾಗಿ ರಾಜ್ಯದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷ ಣಿಕ…
ತುಮಕೂರು: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್(ಜೆಜೆಎಂ) ಯೋಜನೆಗೆ ಸಂಬ0ಧಿಸಿದ0ತೆ ಬಾಕಿಯಿರುವ ಕಾರ್ಯಾದೇಶಗಳನ್ನು ಶೀಘ್ರವೇ ನೀಡಬೇಕೆಂದು ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ಕಾರ್ಯನಿರ್ವಾಹಕ ಇಂಜಿನಿಯರ್ ಕುಮಾರಸ್ವಾಮಿ ಅವರಿಗೆ ಸೂಚಿಸಿದರು. ಮಂಗಳವಾರ ಜಿಲ್ಲಾ ಪಂಚಾಯಿತಿ ವಿಡಿಯೋ ಸಂವಾದ ಸಭಾಂಗಣದಲ್ಲಿ ಬರಪೀಡಿತ ತಾಲೂಕುಗಳ ತುರ್ತು ಕುಡಿಯುವ ನೀರಿನ ಪೂರೈಕೆ ಕುರಿತು ನೀರು ಮತ್ತು ನೈರ್ಮಲ್ಯ ಸಭೆ ನಡೆಸಿ ಮಾತನಾಡಿದ ಅವರು, ಜಲ್ ಜೀವನ್ ಮಿಷನ್ ಯೋಜನೆಯಡಿ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶವನ್ನು ಹೊಂದಲಾಗಿದ್ದು, ಜೆಜೆಎಂ ಕಾಮಗಾರಿಗೆ ಸಂಬAಧಿಸಿದ0ತೆ ಇನ್ನೂ ೨೦೦ ಕಾರ್ಯಾದೇಶವನ್ನು ನೀಡಿರು ವುದಿಲ್ಲ. ಕೂಡಲೇ ಕಾರ್ಯಾದೇಶ ನೀಡಿ ಕಾಮಗಾರಿಗಳನ್ನು ಪ್ರಾರಂಭಿಸಿ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು. ಜಲ್ ಜೀವನ್ ಮಿಷನ್ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟವನ್ನು ಕಾಪಾಡಬೇಕು. ಜೆಜೆಎಂ ಅನುಷ್ಠಾನದಲ್ಲಿ ಯಾವುದೇ ರೀತಿಯ ಅಸಡ್ಡೆ ಅಥವಾ ಅಸಮರ್ಪಕ ಕಾರ್ಯ ನಿರ್ವಹಣೆಯನ್ನು ಸಹಿಸಲಾಗುವುದಿಲ್ಲ. ಪ್ರತಿಯೊಂದು ಕಾಮಗಾರಿ ಸ್ಥಳದಲ್ಲೂ ತಾಂತ್ರಿಕ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬಳಕೆಯಾಗುವ ಸಾಮಗ್ರಿಗಳು ಗುಣಮಟ್ಟದ್ದಾಗಿರಬೇಕು…
ಹುಳಿಯಾರು: ಹುಳಿಯಾರಿನ ಪಶು ಆಸ್ಪತ್ರೆ ಮುಂಭಾಗ ನಡೆಯುತ್ತಿರುವ ವಾರದ ಸಂತೆ ಸ್ಥಳಾಂತರ ಸೇರಿದಂತೆ ನೀರು, ಶೌಚಾಲಯ, ನೆರಳು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಮಂಗಳವಾರಕ್ಕೆ ೬ ದಿನಕ್ಕೆ ಕಾಲಿಟ್ಟಿದೆ. ರೈತ ಮುಖಂಡ ಸೋಮಜ್ಜನಪಾಳ್ಯದ ಬೀರಲಿಂಗಯ್ಯ ಮಾತನಾಡಿ ರೈತ ಈ ದೇಶದ ಆಸ್ತಿ ಅನ್ನುತ್ತಾರೆ. ಆದರೆ ದೇಶಕ್ಕೆ ಅನ್ನಕೊಡುವ ರೈತ ೬ ದಿನಗಳಿಂದ ಬೀದಿಯಲ್ಲಿ ಕುಳಿತು ಧರಣಿ ಮಾಡುತ್ತಿದ್ದರೂ ಸ್ಪಂಧಿಸುವ ಸೌಜನ್ಯ ಅಧಿಕಾರಿಗಳಿಗೆ ಇಲ್ಲದಂತಾಗಿದೆ. ರೈತನ ಕೂಗು ಅಧಿಕಾರಿಗಳಿಗೆ ಕೇಳದಂತಾಗಿದೆ. ರೈತ ನಿಮ್ಮ ಹಣ, ಆಸ್ತಿ, ಅಧಿಕಾರ ಕೇಳುತ್ತಿಲ್ಲ. ಕಷ್ಟಪಟ್ಟು ಬೆಳೆದ ಉತ್ಪನ್ನಗಳನ್ನು ನೆಮ್ಮದಿಯಾಗಿ ಮಾರುವ ವಾತವರಣ ನಿರ್ಮಾಣ ಮಾಡಿ ಎನ್ನುತ್ತಿದ್ದಾರೆ. ಅದೂ ಇಷ್ಟು ವರ್ಷ ನಾವು ಕಟ್ಟಿರುವ ತೆರಿಗೆ ಹಣದಲ್ಲಿ ಮಾಡಿ ಎಂದು ಕೇಳುತ್ತಿದ್ದಾನೆ ಅಷ್ಟೆ ಎಂದರು. ಈಗಿರುವ ಸಂತೆ ರಸ್ತೆಯ ಇಕ್ಕೆಲದಲ್ಲಿದೆ. ಮಳೆಗಾಳಿ ಬಂದರ0ತೂ ರೈತ ಕಷ್ಟಪಟ್ಟು ಬೆಳೆದು ತಂದಿದ್ದ ಹೂವು, ಸೊಪ್ಪು, ತರಕಾರಿ, ಹಣ್ಣು ಮಣ್ಣುಪಾಲಾಗುತ್ತದೆ. ಬೇಸಿಗೆ ಕಾಲದಲ್ಲಂತೂ…
ಪಾವಗಡ : ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತದಾರರ ಪಟ್ಟಿ ತಯಾರಿ ಪ್ರಕ್ರಿಯೆ ಆರಂಭವಾಗಿದ್ದು, ಪದವೀಧರರ ತಮ್ಮ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ರ್ನಾಟಕ ಬಿಜೆಪಿ ಕಾನೂನು ಪ್ರಕೋಷ್ಟ ಸಂಚಾಲಕರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ನಿಕಟಪರ್ವ ಸಿಂಡಿಕೇಟ್ ಸದಸ್ಯರಾದ ವಸಂತಕುಮಾರ್ ರವರು ತಿಳಿಸಿದರು ಪಾವಗಡ ಪಟ್ಟಣಕ್ಕೆ ಭೇಟಿ ನೀಡಿ ಶನಿಮಹಾತ್ಮ ದೇವರ ಆಶರ್ವಾದ ಪಡೆದ ಅವರು ಪಕ್ಷದ ಕರ್ಯರ್ತರು ಮತ್ತು ಪದವೀಧರರನ್ನು ಬೇಟೆ ಮಾಡಿ ರ್ಚಿಸಿ ನಂತರ ಮಾತನಾಡಿದ ಅವರು ಮುಂದಿನ ರ್ಷ ಚುನಾವಣೆ ನಡೆಯಲಿದ್ದು, ಹೆಸರು ನೋಂದಣಿ ಕರ್ಯ ಚುನಾವಣಾ ಆಯೋಗ ಪ್ರಾರಂಭಿಸಿದೆ, ಎಲ್ಲರೂ ರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ನಾನು ಈ ಹಿಂದೆಯೂ ಪಾವಗಡಕ್ಕೆ ಬೇಟಿ ನೀಡಿ ನೋಂದಣಿ ಮಾಡಿಸಿ ಪಕ್ಷದ ಪರ ಕೆಲಸ ಮಾಡಿ ಅಂದಿನ ಅಭ್ರ್ಥಿಯಾದ ಚಿದಾನಂದಗೌಡ ರವರನ್ನು ಗೆಲ್ಲಿಸಲು ಎಲ್ಲರೂ ಸಹಕರಿಸಿದ್ದೀರಿ ಎಲ್ಲರಿಗೂ ಧನ್ಯವಾದಗಳು, ನಾನು ಆಗ್ನೇಯ ಪದವೀಧರ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು ಈಗಾಗಲೇ ಹಲವಾರು ಸಮಾಜ ಸೇವೆ ಕರ್ಯಗಳನ್ನು ಮಾಡಿಕೊಂಡು ಬಂದಿದ್ದೇನೆ…
ತುರುವೇಕೆರೆ:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ೧೦೦ನೇ ವಾರ್ಷಿಕೋತ್ಸವದ ಅಂಗವಾಗಿ ತುರುವೇಕೆರೆ ಪಟ್ಟಣದಲ್ಲಿ ಅ.೧೯ ರಂದು ಭಾನುವಾರ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ತಿಳಿಸಿದ್ದಾರೆ. ಪಟ್ಟಣ ಸಮೀಪದ ಜೆ.ಎಸ್. ಫಾರ್ಮ್ ಹೌಸ್ ನಲ್ಲಿ ಅ.೧೯ ರಂದು ನಡೆಯಲಿರುವ ಗಣವೇಷಧಾರಿ ಪಥಸಂಚಲನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ೧೦೦ ವಸಂತಗಳು ತುಂಬಿದ ಹಿನ್ನಲೆಯಲ್ಲಿ ತುರುವೇಕೆರೆ ತಾಲ್ಲೂಕಿನ ಸಮಸ್ತ ಆರ್.ಎಸ್.ಎಸ್. ನ ಶತಾಬ್ದಿ ವರ್ಷದ ನಿಮಿತ್ತ ಭಾನುವಾರ ಗಣ ವೇಷಧಾರಿ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಜೆಲ್ಲೆಯ ಹಲವೆಡೆ ಕಾರ್ಯಕ್ರಮ ಯಶಸ್ವಿಗೊಂಡಿದ್ದು ನಮ್ಮ ತಾಲ್ಲೂಕಿನಲ್ಲಿಯೂ ಸಹಾ ಅ.೧೯ರಂದು ಭಾನುವಾರ ಬೆಳಿಗ್ಗೆ ೯:೩೦ಕ್ಕೆ ಉಡುಸಲಮ್ಮ ದೇವಾಲಯದಿಂದ ಸಾವಿರಾರು ಗಣವೇಷಧಾರಿಗಳೊಂದಿಗೆ ಹೊರಟು ಪಟ್ಟಣದ ರಸ್ತೆಗಳಲ್ಲಿ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ. ಮಹಿಳೆಯರು ಹಾಗೂ ನಾಗರೀಕರು ತಮ್ಮ ತಮ್ಮ ರಸ್ತೆಗಳಲ್ಲಿ ಗಣವೇಷಧಾರಿಗಳು ಪಥ ಸಂಚಲನ ನಡೆಸುವ ಸಂಧರ್ಭದಲ್ಲಿ ರಸ್ತೆ ಶೃಂಗರಿಸುವ ಒತೆಗೆ ಪುಷ್ಪವೃಷ್ಟಿ ಸುರಿಸುವ ಮೂಲಕ ದೇಶಾಭಿಮಾನ ತೋರಿಸಿ, ನೂರಾರು…
ತುಮಕೂರು: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ: ಶರಣಪ್ರಕಾಶ ಆರ್. ಪಾಟೀಲ ಅವರು ಮಂಗಳವಾರ ಸಂಜೆ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆ(ಫೆರಿಫೆರಲ್ ಕ್ಯಾನ್ಸರ್ ಸೆಂಟರ್(ಆ0ಕಾಲಜಿ ವಿಂಗ್)) ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು ೬೯.೯೬ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಿರುವ ೧೦೦ ಹಾಸಿಗೆಗಳುಳ್ಳ ಈ ನೂತನ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ ೭ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ತಿಳಿಸಿದರು. ಕ್ಯಾನ್ಸರ್ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು ೪೧ ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು. ಉಪಕರಣಗಳ ಅಳವಡಿಕೆಗೆ 4-5 ತಿಂಗಳು ಸಮಯ ಬೇಕಾಗಬಹುದು ಎಂದರಲ್ಲದೆ, ಉಪಕರಣ ಖರೀದಿಗಾಗಿ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತೀ ದಿನ ಸುಮಾರು ೨೦ ರಿಂದ ೩೦ ಕ್ಯಾನ್ಸರ್ ರೋಗಿಗಳು ಜಿಲ್ಲಾಸ್ಪತ್ರೆಗೆ…











