Author: News Desk Benkiyabale

ತುಮಕೂರು: ಅಂತಾರಾಷ್ಟಿçÃಯ ಮಟ್ಟದಲ್ಲಿ ಖ್ಯಾತಿಗಳಿಸಿರುವಂತಹ ತುಮಕೂರಿನ ಸಾಹೇ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಅಶೋಕ್ ಮೆಹ್ತಾರವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಡಾ.ಕೆ.ಬಿ ಲಿಂಗೇಗೌಡರವರು ಡಾ. ಅಶೋಕ್ ಮೆಹ್ತಾ ರವರಿಗೆ ಹೂಗುಚ್ಚವನ್ನು ನೀಡುವ ಮೂಲಕ ಅಭಿನಂದನೆ ತಿಳಿಸಿದರು. ಈ ಸಂದರ್ಭದಲ್ಲಿ ಸಾಹೇ ವಿಶ್ವವಿದ್ಯಾಲಯದ ಪರೀಕ್ಷಾಂಗ ನಿಯಂತ್ರಕರಾದ ಡಾ.ಗುರುಶಂಕರ್, ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಪ್ರವೀಣ್ ಕೊಡುವ, ಹಾಗೂ ಸಾಹೇ ವಿಶ್ವವಿದ್ಯಾನಿಲಯದ ಆಡಳಿತ ವರ್ಗದವರು ಹಾಜರಿದ್ದರು. ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಶೋಕ್ ಮೆಹ್ತಾ ಅವರು (ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಕಾರ್ಯಕ್ರಮ) ಕಾರ್ಯಕ್ರಮದ ನಿರ್ದೇಶಕರಾಗಿ, ಎಸ್‌ಎಸ್‌ಐಟಿ ಎಂಜಿನಿಯರಿAಗ್ ಕಾಲೇಜಿನ ಪ್ಲೇಸ್‌ಮೆಂಟ್ ಮತ್ತು ತರಬೇತಿಯ ವಿಭಾಗದ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಸಾಹೇ ವಿವಿಯ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬೋಧನೆ ಮತ್ತು ಆಡಳಿತ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ಅವರು ಹಲವಾರು ಅಂತಾರಾಷ್ಟ್ರೀಯ,…

Read More

ತುಮಕೂರು: ನೇರ, ನಿಷ್ಟೂರ ನಡೆಯ ಮನೋಭಾವನೆ ರೂಪಿಸಿಕೊಂಡಿದ್ದ ಸರ್ವಜ್ಞ ಕವಿಯ ಆಶಯ ಸಮಾಜದ ಓರೆ, ಕೋರೆಗಳನ್ನು ತಿದ್ದುವುದೇ ಆಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ.ಗುಬ್ಬಿ ವೀರಣ್ಣ ರಂಗಮAದಿರದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಸಾಹಿತ್ಯ ಪರಿಷತ್ ಹಾಗೂ ತುಮಕೂರು ಜಿಲ್ಲಾ ಕುಂಬಾರರ ಸಂಘ,ಸರ್ವಜ್ಞ ಯುವ ವೇದಿಕೆ, ಶ್ರೀಕುಂಭೇಶ್ವರಿ ಮಹಿಳಾ ಸಂಘ,ಶ್ರೀಕುAಭೇಶ್ವರಿ ಹಿಂದುಳಿದ ವರ್ಗಗಳ ವಿವಿದೋದ್ದೇಶ ಸಹಕಾರ ಸಂಘವತಿಯಿAದ ಆಯೋಜಿಸಿದ್ದ ಸರ್ವಜ್ಞ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ತೆಲುಗಿನಲ್ಲಿ ವೇಮನ, ಕನ್ನಡದಲ್ಲಿ ಸರ್ವಜ್ಞ ತಮ್ಮ ತ್ರಿಪದಿಗಳ ಮೂಲಕ ಸಮಾಜದ ಅಂಕು, ಡೊಂಕುಗಳನ್ನು ತಿದ್ದುವ ಕೆಲಸವನ್ನು ನಿರಂತರವಾಗಿ ಮಾಡಿದ್ದಾರೆ ಎಂದರು. ಮನುಷ್ಯರಲ್ಲಿ ಯಾರು ಮೇಲಲ್ಲ, ಕೀಳಲ್ಲ ಎಂಬುದನ್ನು ಸರ್ವಜ್ಞ ಕವಿ ಹೂವು ಯಾವ ಜಾತಿಯದ್ದಾದರೇನು, ಅದರ ಪರಿಮಳವಷ್ಟೇ ಮುಖ್ಯ ಎಂಬುದನ್ನು ಸಾರಿ ಹೇಳಿದ್ದಾರೆ. ಜಾತಿ ಹೀನನ ಮನೆಯ ಜೋತಿ ತಾ ಹೀನವೇ ?,ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ,…

Read More

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ-ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು. ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ. ಕಾಂಪ್ಲೆಕ್ಸ್ನಲ್ಲಿAದು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಂದೋಲನದಲ್ಲಿ ಇ-ಆಸ್ತಿ ತಂತ್ರಾAಶದಲ್ಲಿ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ಮಾಲೀಕರಿಗೆ ನಿಗಧಿತ ಅರ್ಜಿಯನ್ನು ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸ್ವೀಕರಿಸಲು ವಾರ್ಡ್ವಾರು ಸ್ಥಳಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ಸೀಮಿತ ಕಾಲಾವಧಿಯೊಳಗೆ ಅರ್ಜಿ ಸಲ್ಲಿಸಿ ತಮ್ಮ ಆಸ್ತಿಯನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಬಹುದಾಗಿದೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಹಾನಗರ ಪಾಲಿಕೆ ವ್ಯಾಪ್ತಿಯ 11 ಸ್ಥಳಗಳಲ್ಲಿ ಬಿ-ಖಾತಾ ರಿಜಿಸ್ಟರ್ ದಾಖಲಾತಿ ಆಂದೋಲನ ನಡೆಯಲಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಹಣವನ್ನು ಪಾವತಿಸಬೇಕು. ಇದರಿಂದ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನೆರವಾಗುತ್ತದೆ ಎಂದು ತಿಳಿಸಿದರು. ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬAಧಿಸಿದAತೆ ಬಿ ಅಥವಾ ಎ ಖಾತಾ…

Read More

ತುಮಕೂರು: ಸಿದ್ದಗಂಗೆಯ ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ದೂರದೃಷ್ಟಿಯ ಫಲವಾದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ, ರೈತರಿಗೆ, ಕೈಗಾರಿಕೋದ್ಯಮಿಗಳಿಗೆ ಮಾಹಿತಿ ಒದಗಿಸುವ ಒಂದು ವೇದಿಕೆಯಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ಸಿದ್ದಗಂಗಾ ಮಠದವತಿಯಿಂದ ನಡೆಯುವ ಶ್ರೀಸಿದ್ದಲಿಂಗೇಶ್ವರ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಮಾರು 61 ವರ್ಷಗಳ ಹಿಂದೆ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಶ್ರೀಮಠಕ್ಕೆ ಬರುವ ಭಕ್ತರಿಗೆ ಧಾರ್ಮಿಕ ಉತ್ಸವ, ಆಚರಣೆಗಳ ಜೊತೆಗೆ, ಕೃಷಿ ಮತ್ತು ಕೃಷಿಗೆ ಪೂರಕವಾದ ಅಂಶಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ವಸ್ತುಪ್ರದರ್ಶನವನ್ನು ಆಯೋಜಿಸಿದ್ದು, ಶ್ರೀಸಿದ್ದಲಿಂಗಸ್ವಾಮೀಜಿಗಳು ಅದನ್ನು ಮುಂದುವರೆಸಿಕೊAಡು ಬರುತಿದ್ದಾರೆ ಎಂದರು. ಸಿದ್ದಗAಗಾ ಮಠದ ಭಕ್ತರು, ಇಲ್ಲಿಗೆ ಬರುವ ರೈತರು, ಉದ್ಯಮಿದಾರರಿಗೆ ದೇಶದಲ್ಲಿ ನಡೆಯುವ ಹೊಸ ಅವಿಷ್ಕಾರದ ಬಗ್ಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಆರಂಭಿಸಿದ ವಸ್ತು ಪ್ರದರ್ಶನವನ್ನು ಜಿಲ್ಲಾಡಳಿತದ ಸಹಕಾರದೊಂದಿಗೆ ಯಾವುದೇ ರೀತಿಯ ಲೋಪದೋಷಗಳು ಬರದಂತೆ ಹಲವಾರು ವರ್ಷಗಳಿಂದ ಸುಸೂತ್ರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷ ಹೊಸತನವನ್ನು ಈ ವಸ್ತುಪ್ರದರ್ಶನದಲ್ಲಿ ಕಾಣಬಹುದು. ಇದರಿಂದ ಶ್ರೀಶಿವಕುಮಾರಸ್ವಾಮೀಜಿಗಳ ಆಶಯ…

Read More

ತುಮಕೂರು: ಜಾತಿ,ಧರ್ಮ,ವರ್ಣ, ವರ್ಗ,ಭಾಷೆಯ ಹೆಸರಿನಲ್ಲಿ ಛಿದ್ರವಾಗಿರುವ ಭಾರತವನ್ನು ಒಂದೇ ಸೂರನಡಿ ತರುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ಸಂವಿಧಾನದಲ್ಲಿ ಜಾತ್ಯಾತೀತ ತತ್ವಗಳನ್ನು ಆಳವಡಿಸಿ, ಎಲ್ಲರೂ ಸಮಾನತೆಯಿಂದ ಬದುಕುವಂತಹ ಅವಕಾಶ ಕಲ್ಪಿಸಿದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪರಿಶಿಷ್ಟ ವಿಭಾಗದಿಂದ ಹಮ್ಮಿಕೊಂಡಿದ್ದ ಸಂವಿಧಾನದ ಆಶಯಗಳು ಮತ್ತು ರಾಜಕೀಯ ಜಾಗೃತಿ ಎಂಬ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ,ಕರಪತ್ರ ಬಿಡುಗಡೆ ಮಾಡಿ ಮಾತನಾಡುತಿದ್ದ ಅವರು, ವರ್ಣ,ವರ್ಗ ಬೇಧಗಳಿಂದ ಬಸವಳಿದಿದ್ದ ಭಾರತ,ಇನ್ನೂ ಮುಂದಾದರೂ ಸಮಾನತೆ,ಸಾಮಾಜಿಕ ನ್ಯಾಂiÀi,ಜಾತ್ಯಾತೀತ ತತ್ವಗಳ ಮೇಲೆ ನಡೆದು ಶತಮಾನ ಗಳಿಂದ ದಬ್ಬಾಳಿಕೆ, ದೌರ್ಜನ್ಯಕ್ಕೆ ಒಳಗಾದ ಜನರು, ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂಬ ಕಾರಣಕ್ಕೆ ಹಲವಾರು ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದು,ಇದು ಯಾವುದೇ ಒಂದು ಜಾತಿ,ಧರ್ಮವನ್ನು ಗಮನದಲ್ಲಿಟ್ಟು ಕೊಂಡು ಬರೆದ ಸಂವಿಧಾನವಲ್ಲ. ಇಡೀ ಭಾರತೀಯರ ಸಮಗ್ರ ಆಭಿವೃದ್ದಿಯ ದೃಷ್ಟಿಕೋನದ ಸಂವಿಧಾನ ಎಂದರು. ಪುರುಷ ಪ್ರಧಾನ ಸಮಾಜದಲ್ಲಿ ಎರಡನೇ ಪ್ರಜೆಯಾಗಿದ್ದ ಮಹಿಳೆಯರಿಗೆ ಅಸ್ತಿಯ ಹಕ್ಕು ಸಿಗಬೇಕು, ಗಂಡಿಗೆ…

Read More

ಹುಳಿಯಾರು: ಉತ್ತಮ ಆರೋಗ್ಯವಿದ್ದರೆ ಮಾತ್ರ ಕಲಿಕೆಗೆ ಸಹಕಾರಿಯಾಗುತ್ತದೆ. ಮಕ್ಕಳು ಕಲಿಕೆಯ ಜೊತೆಗೆ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು. ಹುಳಿಯಾರು ಹೋಬಳಿಯ ಚಿಕ್ಕಬಿದರೆ ಶ್ರೀ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಕಲಿಕೆ ಮತ್ತು ಆರೋಗ್ಯ ವಿಷಯದ ಕುರಿತು ಅವರು ಮಾತನಾಡಿದರು. ಉತ್ತಮ ಆರೋಗ್ಯಕ್ಕೆ ನೀರು ಅತ್ಯಗತ್ಯವಾಗಿದೆ. ಹೆಚ್ಚಾಗಿ ನೀರು ಕುಡಿಯಿರಿ, ಮಳೆಗಾಲದಲ್ಲಿ ಮಳೆ ನೀರು ಕುಡಿಯಿರಿ, ನಮ್ಮ ಭಾಗದ ಪ್ರಮುಖ ಹಣ್ಣುಗಳಾದ ಮಾವು, ಹಲಸು, ಸೀಬೆ ಹಣ್ಣನ್ನು ಹೆಚ್ಚಾಗಿ ಬಳಸಿ, ಮನೆಯ ಮುಂದೆ ಪಪ್ಪಾಯಿ, ನುಗ್ಗೆ, ಬಳ್ಳಿತರಕಾರಿಗಳನ್ನು ಬೆಳೆದು ಬಳಸುವುದನ್ನು ವೃಢಿಸಿಕೊಳ್ಳಿ. ಸಿರಿ ಧಾನ್ಯಗಳನ್ನು ಹೆಚ್ಚಾಗಿ ಬಳಸಿ ಆರೋಗ್ಯದಿಂದಿರಿ ಎಂದು ಸಲಹೆ ನೀಡಿದರು. ಶಿಕ್ಷಣ ಎಂದರೆ ಶಿಕ್ಷೆಯಲ್ಲ. ಆದರೂ ಶಿಕ್ಷೆ ಕೊಟ್ಟೆ ಕಲಿಸುವುದು ಅನಿವಾರ್ಯವಾಗಿದೆ. ವಿದ್ಯಾರ್ಥಿ ಜೀವನ ಎಂದರೆ ವಿದ್ಯೆ ಕಲಿಯುವುದಷ್ಟೆ. ಆದರೂ ದಮ್ಮಯ್ಯ ದಪ್ಪಯ್ಯ ಕಲಿರಪ್ಪ ಅನ್ನಬೇಕಿದೆ. ಕಲಿಕೆ ಎಂದರೆ ಸರ್ವಾಂಗೀಣ ಬೆಳವಣಿಗೆ ಪೂರವಾಗಿರಬೇಕು. ಆದರೂ ಆಟ, ಹಾಡು,…

Read More

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ ನಡೆಯಲಿರುವ ಕೃಷಿ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಮೈಸೂರು ಕೇಂದ್ರ ಸಂವಹನ ಇಲಾಖೆ ವತಿಯಿಂದ ಆಯೋಜಿಸಿರುವ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ವಿಕಸಿತ ಬಜೆಟ್ @2047 ಛಾಯಾಚಿತ್ರ ಪ್ರದರ್ಶನವು ಜನರಿಗೆ ಬಹಳ ಉಪಯುಕ್ತ ಮಾಹಿತಿ ನೀಡುತ್ತಿದೆ ಎಂದು ನಗರ ಕ್ಷೇತ್ರದ ಶಾಸಕ ಜ್ಯೋತಿ ಗಣೇಶ್ ತಿಳಿಸಿದರು. ಸೋಮವಾರ ಸಂಜೆ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಸಿದ್ಧಪಡಿಸಿರುವ 2025ರ ನೂತನ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು. ಪ್ರದರ್ಶನದಲ್ಲಿ ವಿಕಸಿತ ಭಾರತ ಬಜೆಟ್ 2025-26, ಪಿಎಂ ಇಂಟರ್ನ್ಶಿಪ್ ಯೋಜನೆ, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಪಿಎಂ ಸೂರ್ಯ ಘರ್, ವಿಕಸಿತ ಭಾರತಕ್ಕೆ ಪ್ರಧಾನ ಮಂತ್ರಿಯವರ ದೂರದೃಷ್ಠಿ 2047 ಹಾಗೂ ಇತರೆ ಯೋಜನೆಗಳ ಛಾಯಾಚಿತ್ರ ಪ್ರದರ್ಶನದ ಜೊತೆಗೆ ಯೋಜನೆಗಳ ಫಲಾನುಭವಿಗಳು ಹಂಚಿಕೊAಡಿರುವ ಅನಿಸಿಕೆ ಮತ್ತು ಇತರೆ…

Read More

ಹುಳಿಯಾರು: ಹುಳಿಯಾರು ಹೋಬಳಿಯ ಕಂಪನಹಳ್ಳಿ ವ್ಯಾಪ್ತಿಯಲ್ಲಿರುವ ತೋಟದ ಮನೆಗಳಿಗೆ ಕಳೆದ ಹದಿನೈದಿಪ್ಪತ್ತು ದಿನಗಳಿಂದ ಹಗಲುರಾತ್ರಿ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆಯಾಗದೆ ನಿವಾಸಿಗಳಿಗೆ ತೊಂದರೆಯಾಗಿದ್ದು ರಾತ್ರಿ ವೇಳೆಯಾದರೂ ಸಿಂಗಲ್ ಫೇಸ್ ವಿದ್ಯುತ್ ಕೊಡಿ ಎಂದು ಇಲ್ಲಿನ ನಿವಾಸಿಗಳು ಸೋಮವಾರ ಬೆಸ್ಕಾಂ ಎಸ್‌ಒ ರಘುರಾಮ್ ಅವರಿಗೆ ಮನವಿ ಮಾಡಿದರು. ಕಂಪನಹಳ್ಳಿ ಸುತ್ತಮತ್ತಲಿನಲ್ಲಿ ಹದಿನೈದಿಪ್ಪತ್ತು ರೈತರು ಕುಟುಂಬ ಹಾಗೂ ಜಾನುವಾರುಗಳೊಂದಿಗೆ ಜಮೀನು ಗಳಲ್ಲೇ ನಿರ್ಮಿಸಿರುವ ಮನೆಗಳಲ್ಲಿ ವಾಸವಾಗಿದ್ದಾರೆ. ಜಮೀನಿನಲ್ಲಿರುವ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಇದೆ. ಇವುಗಳಿಗೆ ದಿನದಲ್ಲಿ ಹಗಲಿನಲ್ಲಿ ಮಧ್ಯಾಹ್ನ, ರಾತ್ರಿ ವೇಳೆಯಲ್ಲಿ ಮಧ್ಯರಾತ್ರಿ ಮೂರು ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಉಳಿದ ಸಮಯದಲ್ಲಿ ವಿದ್ಯುತ್ ಇರುವುದಿಲ್ಲ ಎಂದರು. ರೈತರ ತೋಟದ ಮನೆಗಳಿಗೆ ಪಂಪ್‌ಸೆಟ್‌ಗಳಿಗೆ ಪೂರೈಕೆಯಾಗುವಾಗ ಮಾತ್ರ ವಿದ್ಯುತ್ ಲಭ್ಯವಿರುತ್ತದೆ. ಉಳಿದ ಸಮಯದಲ್ಲಿ ಇರುವುದಿಲ್ಲ. ಇದರಿಂದ ರಾತ್ರಿ ಸಮಯದಲ್ಲಿ ಗೃಹಿಣಿಯರ ಅಡುಗೆ, ಮಕ್ಕಳ ವಿದ್ಯಾಬ್ಯಾಸಕ್ಕೆ ಭಾರಿ ತೊಂದರೆಯಾಗಿದೆ ಎಂದು ತಿಳಿಸಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಓದುತ್ತಿರುವ ಇಪ್ಪತ್ತಕ್ಕೂ ಹೆಚ್ಚು ಮಕ್ಕಳಿದ್ದಾರೆ. ಈಗ ಪರೀಕ್ಷೆ ಸಮಯವಾಗಿರುವುದರಿಂದ ರಾತ್ರಿ…

Read More

ತುಮಕೂರು: ಕಳೆದ ಎಂಟು ದಿನಗಳಿಂದ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಅಡಳಿತ ಅಧಿಕಾರಿಗಳ ಸಂಘ, ಕೇಂದ್ರ ಸಮಿತಿಯ ನಿರ್ದೇಶಕನದ ಮೇರೆಗೆ ಮುಷ್ಕರ ಕೈಗೊಂಡಿದ್ದರೂ ಸರಕಾರ ಇದುವರೆಗೂ ನಮ್ಮ ಬೇಡಿಕೆಗಳ ಈಡೇರಿಸಲು ಗಮನಹರಿಸಿರುವುದಿಲ್ಲ ಎಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಎಸ್‌ಚಿ.ದೇವರಾಜು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕಳೆದ ಎಂಟು ದಿನಗಳಲ್ಲಿ ಮೂಲಭೂತ ಸೌಕರ್ಯ, ಬಡ್ತಿ, ಅಂತರ ಜಿಲ್ಲಾ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತಿದ್ದೇವೆ. ಆದರೆ ಸರಕಾರದ ಪ್ರತಿನಿಧಿಗಳಿಂದ ಇದುವರೆಗೂ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ.ಹಾಗಾಗಿ ಮುಷ್ಕರವನ್ನು ಮುಂದುವರೆಸುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ನಾವು ಸರಕಾರಕ್ಕೆ ಹೊರೆಯಾಗುವಂತಹ ಯಾವ ಬೇಡಿಕೆಗಳನ್ನು ಮುಂದಿಟ್ಟಿಲ್ಲ.ಬದಲಾಗಿ, ನಮ್ಮ ಮೇಲಿರುವ ಹೊರೆಯನ್ನು ಇಳಿಸಿ ಎಂದು ಕೇಳುತಿದ್ದೇವೆ ಎಂದರು. ಸರಕಾರದ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು, ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಮಿತಿಯ ಸದಸ್ಯರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದರೂ, ಬೇಡಿಕೆಗಳ ಈಡೇರಿಕೆಯ ಬಗ್ಗೆ ಸ್ಪಷ್ಟ…

Read More

ತುಮಕೂರು: ನಗರದ ಟೌನ್ ಹಾಲ್ ವೃತ್ತದ ಬಳಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಶನಿವಾರ ಹೆಲಿಕಾಪ್ಟರ್ ವೇದಿಕೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಜಿಲ್ಲೆಯ ಗುಬ್ಬಿ ತಾಲ್ಲೂಕು ಬಿದರೆಹಳ್ಳದ ಬಳಿ ಹೆಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕದ ಕುರುಹಾಗಿ ಪಾಲಿಕೆ ಕಚೇರಿಯ ಹೊರ ಆವರಣದಲ್ಲಿ 30ಲಕ್ಷ ರೂ. ವೆಚ್ಚದಲ್ಲಿ ಹೆಲಿಕಾಪ್ಟರ್ ಅನ್ನು ಪ್ರದರ್ಶಿಸಲು ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲೆಯ ಹಾಗೂ ಹೊರಗಿನಿಂದ ಬರುವವರಿಗೂ ಜಿಲ್ಲೆಯಲ್ಲಿರುವ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಬಗ್ಗೆ ಮಾಹಿತಿ ತಿಳಿಯಲಿದೆ ಎಂದು ತಿಳಿಸಿದರು. ಹೆಲಿಕಾಪ್ಟರ್ ಘಟಕದ ಕುರುಹಾಗಿ 50 ಲಕ್ಷ ರೂ. ಮೌಲ್ಯದ ಲೈಟ್ ಯುಟಿಲಿಟಿ ಹೆಲಿಕಾಪ್ಟರ್ (ಐighಣ Uಣiಟiಣಥಿ ಊeಟiಛಿoಠಿಣeಡಿ)ಅನ್ನು ಪ್ರದರ್ಶಿಸಲಾಗುವುದು. ಹೆಲಿಕಾಪ್ಟರ್ ಪ್ರದರ್ಶನಕ್ಕಾಗಿ 5 ಅಡಿ ಎತ್ತರ ಹಾಗೂ 50 ಅಡಿ ವ್ಯಾಸದ ಸುತ್ತುವ ವೇದಿಕೆ(ಖoಣಚಿಣioಟಿ Pಟಚಿಣಜಿoಡಿm)ಯನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ನಂತರ ಮಾತನಾಡಿದ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಬಿದರೆಹಳ್ಳದಲ್ಲಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯವರು…

Read More