ತುಮಕೂರು : ನಗರದಲ್ಲಿ ಇಂದು ಒಂದೇ ದಿನ 16 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 268 ಏರಿಕೆಯಾಗಿದೆ. ತಾಲ್ಲೂಕುವಾರು ಸೋಂಕಿತರ ವಿವರ : ತುಮಕೂರು -6 ಕೊರಟಗೆರೆ-4 ಪಾವಗಡ – 2 ಮಧುಗಿರಿ-2 ಚಿಕ್ಕನಾಯಕನಹಳ್ಳಿ-1 ಕುಣಿಗಲ್-1 ಇದರಲ್ಲಿ 65 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 194 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಕೊರೊನಾ ಸೋಂಕಿತರೊಬ್ಬರು ಇಂದು ಸಾವನ್ನಪ್ಪ್ಪಿದ್ದಾರೆ ಎಂದು ಡಿಹೆಚ್ಒ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.
Author: News Desk Benkiyabale
ಕೊರಟಗೆರೆ: ಕೊರೊನಾ ಸೋಂಕಿತ ರೋಗಿಗಳಿಗೆ ಪೌಷ್ಟಿಕಾಂಶದ ಆಹಾರ, ಮೂಲಸೌಕರ್ಯ ಮತ್ತು ಸಮರ್ಪಕ ವೈದ್ಯಕೀಯ ಔಷಧಿ ಪೂರೈಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಹಗಲುರಾತ್ರಿ ಜಾಗೃತೆ ವಹಿಸಬೇಕಾಗಿದೆ ಕೊರಟಗೆರೆ ತಹಶೀಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿಗೆ ತುಮಕೂರು ಜಿಲ್ಲಾಧಿಕಾರಿ ಡಾ.ರಾಕೇಶ್ಕುಮಾರ್ ಸೂಚನೆ ನೀಡಿದರು. ಕೊರಟಗೆರೆ ಪಟ್ಟಣದ ಕಂದಾಯ ಇಲಾಖೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಪ್ರತ್ಯೇಕ ಕೊವಿದ್ ತುರ್ತು ಚಿಕಿತ್ಸೆ ಕೇಂದ್ರ ಮತ್ತು ಕೊರೊನಾ ಸೊಂಕಿತ ರೋಗಿಗಳಿಗೆ ಮೂಲ ಸೌಲಭ್ಯದ ತುರ್ತುಸಭೆಯಲ್ಲಿ ಸರಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಆಡಳಿತ ವೈದ್ಯಾಧಿಕಾರಿ ಮತ್ತು ತಾಲೂಕು ವೈದ್ಯಾಧಿಕಾರಿ ಸಮನ್ವಯತೆ ಕಾಪಾಡಿಕೊಂಡು ಕೊರೊನಾ ರೋಗದ ವಿರುದ್ದ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ. ಕೊರೊನಾ ರೋಗದ ವಿರುದ್ದ ಪ್ರತಿಯೊಂದು ಇಲಾಖೆಯ ಸಹಕಾರ ಅಗತ್ಯವಾಗಿ ಬೇಕಾಗಿದೆ. ತುರ್ತು ಪರಿಸ್ಥಿತಿಯಲ್ಲಿ ನಾವೇಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಣೆ ಮಾಡಬೇಕಾಗಿದೆ ಎಂದು ತಿಳಿಸಿದರು. ಕೊರಟಗೆರೆ ತಾಲೂಕಿನಲ್ಲಿ 19ಕೊರೊನಾ ಪ್ರಕರಣ ದೃಢಪಟ್ಟಿದೆ. ತುರ್ತು ಚಿಕಿತ್ಸೆಗಾಗಿ…
ತುಮಕೂರು: ಜಿಲ್ಲಾಡಳಿತದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದ್ದರೂ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಆತಂಕ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಈವರೆಗೆ ಒಟ್ಟು 252 ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಭಾನುವಾರ ಒಂದೇ ದಿನದಲ್ಲಿ 31 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದುವರೆಗೆ ವರದಿಯಾದ 252 ಸೋಂಕಿತರ ಪೈಕಿ 61 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಉಳಿದಂತೆ 183 ಸಕ್ರಿಯ ಪ್ರಕರಣಗಳಿದ್ದು, 8 ಮಂದಿ ಮರಣ ಹೊಂದಿದ್ದಾರೆ. ಈವರೆಗೆ 20512 ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, 1395 ಜನರನ್ನು ನಿಗಾವಣೆಯಲ್ಲಿಡಲಾಗಿದೆ. ಈ ಪೈಕಿ 16879 ಮಾದರಿಗಳು ನೆಗೆಟಿವ್ ಪ್ರಕರಣವೆಂದು ವರದಿಯಾಗಿದೆ. ಪ್ರಸ್ತುತ 566 ಪ್ರಾಥಮಿಕ ಹಾಗೂ 829 ದ್ವಿತೀಯ ಸಂಪರ್ಕಿತರಿದ್ದಾರೆ ಎಂದು ಮಾಹಿತಿ ನೀಡುತ್ತಾ ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು…
ಚಿಕ್ಕನಾಯಕನಹಳ್ಳಿ: 8 ವರ್ಷದ ಬಾಲಕೊನೊಬ್ಬನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ತಾಲ್ಲೂಕಿನಲ್ಲಿ ಈವರೆಗೆ ಸೋಕಿತರ ಪ್ರಮಾಣ 10ಕ್ಕೇರಿದಂತಾಗಿದೆ. ಕಳೆದ ವಾರ ಪಟ್ಟಣದ ಸಮೀಲದ ಕಾಡೇನಹಳ್ಳಿಯ 22ವರ್ಷದ ಯುವಕನೋರ್ವನಿಗೆ ಸೋಂಕು ದೃಢಪಟ್ಟಿದ್ದು ಸದರಿ ಯವಕನ ಸಮೀಪದ ಮನೆಯಲ್ಲಿನ 8 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ. ಕಳೆದೆರಡು ದಿನದ ಹಿಂದೆ ಬಾಲಕನಿಗೆ ಜ್ವರಬಂದ ಹಿನ್ನಲೆಯಲ್ಲಿ ಗಂಟಲ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ಅದು ದೃಢಪಟ್ಟಿದೆ. ಬಾಲಕನ ಮನೆಯಲ್ಲಿ ತಂದೆ, ತಾಯಿ, ಅಜ್ಜ, ಅಜ್ಜಿ ವಾಸವಿದ್ದಾರೆ. ಈಗಾಗಲೇ ಈ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿತ್ತು. ಬಾಲಕನ್ನು ಪಟ್ಟಣದ ಆಸ್ಪತ್ರೆಯಲ್ಲಿ ಐಸೋಲೇಸನ್ ವಾರ್ಡ್ಗೆ ಸೇರಿಸಲಾಗಿದೆ. ಕುಟುಂಬದವರನ್ನು ಕ್ವಾರಂಟೈನ್ಗೊಳಪಡಿಸಲಾಗಿದೆ. ಹೊರಗಿನಿಂದ ಬಂದವರ ಆತಂಕ: ರಾಜ್ಯದ ಬಹುತೇಕ ನಗರಗಳನ್ನು ಕೊರೊನಾ ಸೋಂಕಿತರ ಪ್ರಮಾಣ ವಿಪರೀತವಾಗಿ ಏರುತ್ತಿರುವುದರಿಂದ ನಗÀರಗಳಿಂದ ಗ್ರಾಮಗಳಿಗೆ ತಂಡೋಪತಂಡವಾಗಿ ಬರುತ್ತಿರುವುದು ಗಾಬರಿ ಹುಟ್ಟಿಸಿದೆ. ಇವರಲ್ಲಿ ಸೋಂಕಿತರನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆಯಾಗದಿರುವುದು ದೊಡ್ಡ ತಲೆನೋವಾಗಿದೆ. ಜೊತೆಗೆ ಹೊರಗಡೆಯಿಂದ ಬಂದವರ…
ತುಮಕೂರು : ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ 13 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 221 ಕ್ಕೆ ಏರಿಕೆ ಆದಂತಾಗಿದೆ. ತಾಲ್ಲೂಕುವಾರು ಸೋಂಕಿತರ ವಿವರ : ತುಮಕೂರು -6 ಪಾವಗಡ – 3 ಮಧುಗಿರಿ-2, ಕುಣಿಗಲ್-2 ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ, ಕೊರಟಗೆರೆ, ಕುಣಿಗಲ್ ತಾಲ್ಲೂಕುಗಳಲ್ಲಿ ಕೊರೊನಾ ರುದ್ರ ನರ್ತನ ಮಾಡುತ್ತಿದೆ. ಲಾಕ್ಡೌನ್ ಸಡಿಲಿಕೆಯ ನಂತರ ಎಲ್ಲರೂ ಎಲ್ಲೆಂದರಲ್ಲಿ ಸುತ್ತಾಡುತ್ತಿದ್ದು, ಯಾರಿಗೆ ಯಾರಿಂದ ಸೋಂಕು ಹರಡುತ್ತಿದೆ ಎಂಬ ಅರಿವಿಲ್ಲ. ಗ್ರಾಮೀಣ ಪ್ರದೇಶದ ಜನತೆಯನ್ನ ಬಿಟ್ಟು ಬಿಡದಂತೆ ಕಾಡುತ್ತಿರುವ ಕೊರೊನಾ ಸೋಂಕು ಯಾವುದೇ ರೀತಿಯಲ್ಲಿ ಯಾರಿಂದ ಯಾರಿಗೆ ಸುಳಿವು ನೀಡದೇ ಎಲ್ಲರಲ್ಲೂ ಆವರಿಸುತ್ತಿದೆ.
ತುಮಕೂರು: ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ಜಿಲ್ಲಾ ಆಸ್ಪತ್ರೆಗೆ ನೂತನ ಎ.ಎಲ್.ಎಸ್ ಆಂಬುಲೆನ್ಸ್ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಟಿ ರಂಗಸ್ವಾಮಿ ತಿಳಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಕರೆತರಲು ಜಿಲ್ಲಾಸ್ಪತ್ರೆಗೆ 54 ಲಕ್ಷ ರೂ. ಮೊತ್ತದ ಒಂದು ಜೀವರಕ್ಷಕ ಎ.ಎಲ್.ಎಸ್ ಆಂಬುಲೆನ್ಸ್ ಅನ್ನು ಒದಗಿಸಲಾಗಿದೆ. ಜಿಲ್ಲಾಸ್ಪತ್ರೆ ಮನವಿ ಮೇರೆಗೆ ಈ ಅತ್ಯಾಧುನಿಕ ಆಂಬುಲೆನ್ಸ್ ಅನ್ನು ಒದಗಿಸಲಾಗಿದ್ದು, ಆಂಬುಲೆನ್ಸ್ನಲ್ಲಿ ಒಂದು Portable ventilator, Syringe infusion pump, Wheel chair cum Evacuation chair, Intubation kit, Advanced portable suction unit ಮತ್ತಿತರೆ ಪರಿಕರಗಳನ್ನೊಳಗೊಂಡಿದೆ. ಜಿಲ್ಲಾಸ್ಪತ್ರೆಯ ಟ್ರಾಮಾ ಕೇರ್ ವಿಭಾಗದಿಂದ ರೋಗಿಗಳನ್ನು ಉನ್ನತ ಮಟ್ಟದ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲು ಹಾಗೂ ಅಪಘಾತ ಸ್ಥಳದಿಂದ ಗಾಯಾಳುಗಳನ್ನು ಟ್ರಾಮಾ ಕೇರ್ ಸೆಂಟರ್ಗೆ ಕರೆತರಲು ಸಹ ಈ ಆಂಬುಲೆನ್ಸ್ ಅನ್ನು ಬಳಸಿಕೊಳ್ಳಲಾಗುವುದು…
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ 2020-21ನೇ ಸಾಲಿನ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಗೌರವ ತೋರಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಆರ್.ರಾಮಚಂದ್ರಯ್ಯ, ಜಿಪಂ ಸದಸ್ಯರಾದ ಕಲ್ಲೇಶ್ ಮತ್ತು ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪತ್ರಿಕಾ ಭವನದಲ್ಲಿ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶನಿವಾರ ತಾಪಂ ಕೆಡಿಪಿ ಸಭೆ ಇದೆ ಎಂದು ಶುಕ್ರವಾರ ಸಂಜೆ ನಮಗೆ ಮಾಹಿತಿ ನೀಡಿದ್ದಾರೆ. ಒಂದು ದಿನದಲ್ಲಿ ನಾವು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡುವುದಾದರೂ ಹೇಗೆ? ವರದಿಯಲ್ಲಿರುವ ಮಾಹಿತಿ ತಿಳಿದುಕೊಳ್ಳಲು ನಮಗೆ ಸಮಯ ಬೇಡವೇ ಎಂದು ಪ್ರಶ್ನಿಸಿದರು. ಸಭೆಯಲ್ಲಿ ಈ ಬಗ್ಗೆ ಸಚಿವರಾದ ಮಧುಸ್ವಾಮಿಯವರನ್ನು ಪ್ರಶ್ನೆ ಮಾಡಿದರೆ ಮೌನವಹಿಸುತ್ತಾರೆ. ನಮಗೆ ಅಗೌರವ ತೋರಿರುವ ಸಭೆಯಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಸಭೆಯಿಂದ…
ತುಮಕೂರು: ಮಹಾನಗರ ಪಾಲಿಕೆ ಆಯುಕ್ತರಾಗಿ ರೇಣುಕಾ ಶನಿವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ಮು ಖ್ಯ ಯೋಜನಾಧಿಕಾರಿಯಾಗಿದ್ದ ಇವರು ಸರ್ಕಾರದ ಆದೇಶದಂತೆ ಆಯುಕ್ತ ಟಿ. ಭೂಬಾಲನ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಹುದ್ದೆಗೆ ನೇಮಕಗೊಂಡು ಶನಿವಾರ ಅಧಿಕಾರವಹಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅಧೀಕ್ಷರ ಇಂಜಿನಿಯರ್ ಮಹೇಶ್, ಮುಖ್ಯ ಲೆಕ್ಕಾಧಿಕಾರಿ ಗುರುಬಸವೇಗೌಡ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಗುಬ್ಬಿ: ನಾನು ಕಷ್ಟಪಟ್ಟು ದುಡಿದವ, ನನ್ನ ಶ್ರಮ ನನ್ನ ಜೊತೆ ಇದೆ. ಶ್ರಮಪಟ್ಟು ನಡೆಸಿದ ಉದ್ದಿಮೆಯೇ ಇಂದು ನನ್ನ ಜೀವನ ರೂಪಿಸಿದೆ. ಆಗಾಗಿ ನನಗೆ ಒಂದು ವೃತ್ತಿ ಎಂಬುದು ಇದೆ. ಆದರೆ, ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿ ಅಲ್ಲಿಯೇ ಪೆಟ್ರೋಲ್ ಕದ್ದ ಮಾಜಿ ಶಾಸಕ ಕೃಷ್ಣಪ್ಪರ ವೃತ್ತಿ ಜೀವನ ಎಂತಹದು ಎಂದು ಜನಕ್ಕೆ ತಿಳಿದಿದೆ ಎಂದು ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಲೇವಡಿ ಮಾಡಿದರು. ತಾಲ್ಲೂಕಿನ ಸಿ.ಎಸ್.ಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, 15 ವರ್ಷಗಳಿಂದ ಜನಪರ ಕೆಲಸ ಮಾಡದೇ ಈಚೆಗೆ ನಾನು ಮಾಡಿದ ಅಭಿವೃದ್ಧಿ ಕೆಲಸವನ್ನು ನನ್ನದು ಎಂದು ಬಿಂಬಿಸಿಕೊಳ್ಳಲು ಮುಂದಾದ ಮಾಜಿ ಶಾಸಕ ಕೃಷ್ಣಪ್ಪ ದಲ್ಲಾಳಿ ಕೆಲಸವನ್ನು ಮಾಡಿ ಗುತ್ತಿಗೆದಾರರನ್ನು ಸುಲಿಗೆ ಮಾಡಿದ್ದು ಒಪನ್ ಸೀಕ್ರೇಟ್. ನನ್ನ ಬಗ್ಗೆ ಮಾತನಾಡುವ ಮುನ್ನ ಜವಾಬ್ದಾರಿ ಸ್ಥಾನದಲ್ಲಿದ್ದು ಹರಿದ ಬಾಯಿಗೆ ಮೊದಲು ಹೊಲಿಗೆ ಹಾಕಿಕೊಳ್ಳಲಿ ಎಂದು ಕಿಡಿಕಾರಿದರು. ಗ್ರಾಮ ಪಂಚಾಯಿತಿ…
ಮಧುಗಿರಿ: ತಾಲ್ಲೂಕಿನಲ್ಲಿ ಒಂದೊಂದೇ ಕಂಟಕಗಳು ಜನತೆಗೆ ಸಂಕಟವನ್ನು ತಂದಿಟ್ಟಿದ್ದು, ಗುರುವಾರ ಒಂದು ಪ್ರಕರಣ ಧೃಢವಾಗಿದೆ. ಇತ್ತೀಚಿಗೆ ತುಮಕೂರಿನಲ್ಲಿ ಕರೊನಾ ಸೋಂಕಿನಿಂದ ಮಧುಗಿರಿ ಮೂಲದ ಟೈಲರ್ ಒಬ್ಬರು ಮೃತಪಟ್ಟಿದ್ದರು . ಅವರ ಸಂಪರ್ಕದ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಪಟ್ಟಣದ ಕೆ.ಹೆಚ್ ರಸ್ತೆಯಲ್ಲಿರುವ ಮೆಡಿಕಲ್ ಸ್ಟೋರ್ ನ 56ವರ್ಷದ ವ್ಯಕ್ತಿಗೆ ಕರೊನಾ ಸೋಂಕು ತಗುಲಿದೆ. ಈ ವ್ಯಕ್ತಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಇದನ್ನು ಸರಿಯಾಗಿ ಪಾಲಿಸಿರಲಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಆತ ವಾಸವಿದ್ದ ಜಾಮಿಯಾ ಮಸೀದಿ ಮುಂಭಾಗದ ರಸ್ತೆ ಏರಿಯಾವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ವಿಶ್ವನಾಥ್, ತಾಲೂಕು ಆರೋಗ್ಯಾಧಿಕಾರಿ ರಮೇಶ್ ಬಾಬು, ಪಿಎಸ್ಸೈ ಕಾಂತರಾಜು ಭೇಟಿ ನೀಡಿದ್ದರು. ಬುಧವಾರ 4 ಪ್ರಕರಣ : ತಾಲ್ಲೂಕಿನಲ್ಲಿ ಇಂದು ನಾಲ್ಕು ಪ್ರಕರಣಗಳು ಕೂವೀಡ್ ಸೋಂಕೀತ ಪ್ರಕರಣಗಳು ದಾಖಲಾಗಿದ್ದು…










