ಪಾವಗಡ : ಯಾವುದೇ ಸಮಯದಲ್ಲಾದರೂ ವೈದ್ಯಕೀಯ ಸೌಲಭ್ಯಕ್ಕಾಗಿ ಬರುವ ಜನತೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ವೈಯುಕ್ತಿಕ ಪ್ರತಿಷ್ಠೆ ಪ್ರದರ್ಶಿಸಿದರೆ ಮುಲಾಜಿಲ್ಲದೆ ಕ್ರಮ ತಪ್ಪಿದಲ್ಲ ಎಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಗುರುವಾರ ಸಂಜೆ ಧಿಡಿರನೇ ಬೇಟಿ ನೀಡಿದಾಗ ಆಸ್ಪತ್ರೆಯಲ್ಲಿ ಯಾರು ವೈದ್ಯರಿಲ್ಲದನ್ನು ಕಂಡು ಮಾಜಿ ಸಚಿವರು ಕೆಂಡಮಂಡಲರಾದರು. ಆಸ್ಪತ್ರೆಯೋ ಏನೋ ಏಂಬುದು ಕೂಡ ನಮಗೆ ಅರ್ಥವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಒಬ್ಬ ವೈದ್ಯರು ಕೂಡ ಇಲ್ಲವೆಂದರೆ ಹೇಗೆ.. ಗ್ರಾಮೀಣ ಭಾಗದಿಂದ ಬರುವ ಜನತೆಯ ಪಾಡೇನು.. ಅವರ ನೋವಿಗೆ ಯಾರಿಲ್ಲಿ ಸ್ಪಂದಿಸುವವರು.. ನಿಮ್ಮ ವೈಯುಕ್ತಿಕ ಪ್ರತಿಷ್ಠೆ ಬಿಟ್ಟು ಮೊದಲು ಕೆಲಸ ಮಾಡಿ ಇಲ್ಲದೆ ಹೋದಲ್ಲಿ ಮುಂದಾಗುವ ಆನಾಹುತಕ್ಕೆ ನೀವೆ ಬಲಿಯಾಗುತ್ತಿರೆಂದು ಎಚ್ಚರಿಕೆ ನೀಡಿದ ಘಟನೆ ನಡೆಯಿತು. ಮಾಜಿ ಸಚಿವರು ಆಸ್ಪತ್ರೆಗೆ ಬೇಟಿ ನೀಡಿರುವ ವಿಷಯ ತಿಳಿದು ಎಲ್ಲರೂ ಆಸ್ಪತ್ರೆಯಲ್ಲಿ ಪ್ರತ್ಯಕ್ಷವಾಗತೊಡಗಿದಾಗ ಮಾಜಿ ಸಚಿವರು ಇದು ಸರ್ಕಾರಿ ಆಸ್ಪತ್ರೆಯೋ…
Author: News Desk Benkiyabale
ತುಮಕೂರು : ತುಮಕೂರು ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ, ಅಂಗಡಿಗಳಲ್ಲಿ ನಾಮಫಲಕ ಪ್ರದರ್ಶಿಸದಿರುವವರ, ತಂಬಾಕು ಉತ್ಪನ್ನಗಳನ್ನು ಜಾಹಿರಾತು ಮಾಡುವವರ, ಶಾಲಾ ಆವರಣಗಳಲ್ಲಿ ತಂಬಾಕು ಉತ್ಪನ್ನಗಳ ವಹಿವಾಟು ನಡೆಸುತ್ತಿರುವವರ ವಿರುದ್ಧ ಸತತವಾಗಿ ನಡೆಸಿದ 25 ದಿನಗಳ ಕಾರ್ಯಾಚರಣೆಯಲ್ಲಿ ಒಟ್ಟು 1403 ಪ್ರಕರಣ ದಾಖಲಿಸಿ 1,69,800 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ರವಿಪ್ರಕಾಶ ಎಂ.ಆರ್ ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಸಮಾಜ ಕಾರ್ಯಕರ್ತ ಪುಂಡಲೀಕ ಲಕಾಟಿ, ಆರೋಗ್ಯ ಇಲಾಖೆ ಸಿಬ್ಬಂದಿ ನರಸಿಂಹರಾಜು, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ತಾಲೂಕಿನ ಸಹಾಯಕ ಸಿಬ್ಬಂದಿಗಳು ಹಾಜರಿದ್ದರು.
ತುಮಕೂರು : ಜಿಲ್ಲೆಯಲ್ಲಿ ತೀವ್ರ ಬರಗಾಲವಿದ್ದರೂ ಸಹ ತುಮಕೂರು ಸಹಕಾರಿ ಹಾಲು ಒಕ್ಕೂಟದ ಹಾಲು ಶೇಖರಣೆ ದಿನೇ ದಿನೇ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿದ್ದು 2018-19 ನೇ ಸಾಲಿನಲ್ಲಿ ದಿನವಹಿ ಸರಾಸರಿ 6,71,712 ಲೀಟರ್ ಶೇಖರಣೆಯಾಗಿರುತ್ತದೆ. ಜೂನ್ 18 ರಂದು 8,01,313 ಲೀಟರ್ ಹಾಲು ಶೇಖರಿಸಿ ಸರ್ವಕಾಲಿಕ ದಾಖಲೆ ನಿರ್ಮಿಸಿದೆ. ಒಕ್ಕೂಟದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಿಕೊಂಡಿರುವುದರಿಂದ ಮತ್ತು ಮಾರುಕಟ್ಟೆ ವಿಸ್ತರಣೆ ಮಾಡಿಕೊಂಡಿರುವುದರಿಂದ ಅಧಿಕ ಹಾಲು ಶೇಖರಣೆಯಾದರೂ ಸಹ ಡೇರಿಯ ನಿರ್ವಹಣೆಗೆ ಯಾವುದೇ ತೊಂದರೆಯಾಗಿರುವುದಿಲ್ಲ. ಹಾಲು ಉತ್ಪಾದಕರಿಗೆ ಕಾಲಕಾಲಕ್ಕೆ ಬಟವಾಡೆ, ದೊರೆಯಬಹುದಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಹಾಲು ಉತ್ಪಾದಕರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಾವು ಸಹ ಆರ್ಥಿಕವಾಗಿ ಸದೃಢವಾಗುವುದಲ್ಲದೇ ಒಕ್ಕೂಟದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ ಎಂದು ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಮಹಾಲಿಂಗಯ್ಯ ತಿಳಿಸಿದ್ದಾರೆ. ಒಕ್ಕೂಟದ ಮಾರಾಟದದ ಜಾಲವನ್ನು ಸಹ ವಿಸ್ತರಿಸಲಾಗಿದ್ದು, ತುಮಕೂರು ಮತ್ತು ಬೆಂಗಳೂರು ನಗರ ಪ್ರದೇಶದಲ್ಲಿ 2018-19 ನೇ ಸಾಲಿನಲ್ಲಿ ಸರಾಸರಿ…
ತುಮಕೂರು: ಜಿಲ್ಲೆಯಲ್ಲಿರುವ ಕಲೆ, ಸಂಸ್ಕೃತಿ, ಸಾಮಾಜಿಕ ಜೀವನಕ್ಕೆ ಸಂಬಂಧಪಟ್ಟಂತಹ ಪುರಾತನ ಕಾಲದಲ್ಲಿ ಪ್ರಾಚ್ಯವಾಗಿ ಅಳಿದು ಉಳಿದಿರುವ ಕೋಟೆ-ಕೊತ್ತಲಗಳ ಕುರಿತು ಮಕ್ಕಳಿಗೆ ಪ್ರಾಚ್ಯ ಪ್ರಜ್ಞೆ ಮೂಡಿಸುವ ಸಲುವಾಗಿ ಕಿರುಚಿತ್ರ/ಸಾಕ್ಷ್ಯಚಿತ್ರ/ಭಾಷಣದ ರೂಪದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಪ್ರಾಚ್ಯ ಸ್ಥಳಗಳ ಕುರಿತು ಭಾಷಣ, ಚಿತ್ರಕಲೆ ಸ್ಪರ್ಧೆ, ಚರ್ಚಾಸ್ಪರ್ಧೆ ರಸಪ್ರಶ್ನೆ ಕಾರ್ಯಕ್ರಮ ಕೈಗೊಂಡು ಈ ತಿಂಗಳ 15ರೊಳಗೆ ತಾಲ್ಲೂಕು ಮಟ್ಟದ ಸ್ಪರ್ಧೆಗಳನ್ನು ಏರ್ಪಡಿಸಿ, ತಿಂಗಳ ಕೊನೆಯ ವಾರದಲ್ಲಿ ಜಿಲ್ಲಾಮಟ್ಟದ ಸ್ಪರ್ಧೆ ಏರ್ಪಡಿಸಿ ವಿಜೇತ ಮಕ್ಕಳಿಗೆ ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ಪ್ರದಾನ ಮಾಡುವಂತೆ ಸೂಚಿಸಿದರು. ಕರ್ನಾಟಕವು ಪ್ರಾಗೈತಿಕ ಇತಿಹಾಸದ ಪರಂಪರೆ ಹೊಂದಿರುವ ನಾಡು. ಕದಂಬರು, ಗಂಗರು, ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರ ಅರಸರು, ಮೈಸೂರು ಅರಸರು ಹೀಗೆ ಅನೇಕ ರಾಜ ಮನೆತನಗಳು…
ತುಮಕೂರು: ತುಮಕೂರು ತಾಲ್ಲೂಕು ಗೂಳೂರು ಹೋಬಳಿಯ ಕಾಳಿಂಗಯ್ಯನ ಪಾಳ್ಯ ಗ್ರಾಮದ ವಾಸಿಯಾದ ಲಕ್ಷ್ಮೀನರಸಮ್ಮನವರ ಸುಮಾರು 85 ಸಾವಿರ ಬೆಲೆಬಾಳುವ 70ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಪುಟ್ಟೇಗೌಡ ಎಂಬಾತ ಕಿತ್ತುಕೊಂಡು ಹೋಗಿರುವ ಆರೋಪಕ್ಕೆ 2 ವರ್ಷ ಜೈಲುವಾಸ ಮತ್ತು 10,000 ರೂ. ದಂಡ ವಿಧಿಸಿ 4ನೇ ಅಪರ ಸಿ.ಜೆ. ಮತ್ತು 5 ನೇ ಜೆ.ಎಂ.ಎಫ್.ಸಿ ನ್ಯಾಯಾಧೀಶ ವಿನೋದ್ ಬಾಲ್ ನಾಯ್ಕ ಅವರು ತೀರ್ಪು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ: ಆರೋಪಿ ಪುಟ್ಟೇಗೌಡ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಸಹಶಿಕ್ಷಕಿ ಲಕ್ಷ್ಮೀನರಸಮ್ಮ ಅವರನ್ನು ದಾರಿ ಮಧ್ಯೆ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಮಾಂಗಲ್ಯಸರವನ್ನು ಕಿತ್ತುಕೊಂಡು ಹೋಗಿರುವುದು ವಿಚಾರಣೆಯಿಂದ ಸಾಬೀತಾಗಿದೆ. ಆರೋಪಿಗೆ ವಿಧಿಸಿರುವ ದಂಡದ ಮೊತ್ತ ಕೊಡಲು ತಪ್ಪಿದರೆ 6 ತಿಂಗಳ ಸಾದಾ ಸಜೆಯನ್ನು ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಹೆಬ್ಬೂರು ಠಾಣೆಯ ತನಿಖಾಧಿಕಾರಿ ಹಾಗೂ ಕ್ಯಾತ್ಸಂದ್ರ ವೃತ್ತದ ಸಿ.ಪಿ.ಐ ಕೆ.ಆರ್.…
ಮಧುಗಿರಿ: ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲೇ ಸೀಡ್ಬಾಲ್ ತಯಾರಿ ಹಾಗೂ ಬಿತ್ತನೆ ಕಾರ್ಯದ ತರಬೇತಿ ನೀಡುವುದು ಇಂದಿನ ದಿನಗಳಲ್ಲಿ ಮಹತ್ವದ್ದಾಗಿದೆ ಎಂದು ಬಿಇಓ ರಂಗಪ್ಪ ತಿಳಿಸಿದರು. ಮಧುಗಿರಿ ಪಟ್ಟಣದ ಮಾಲೀಮರಿಯಪ್ಪ ರಂಗ ಮಂದಿರದಲ್ಲಿ ಪುರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸೀಡ್ಬಾಲ್ ತಯಾರಿ ಹಾಗೂ ಬಿತ್ತನೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರದಿಂದ ಮನುಷ್ಯನ ಬದುಕು ಸುಂದರವಾಗಿ ಹಾಗೂ ಆರೋಗ್ಯವಾಗಿದೆ. ಇದನ್ನು ಇಂದು ನಾವೆಲ್ಲ ಅವನತಿಯ ಅಂಚಿಗೆ ತಂದು ನಿಲ್ಲಿಸಿದ್ದೇವೆ. ಹೀಗೆ ಮುಂದುವರಿದಲ್ಲಿ ಪರಿಸರದಿಂದ ಮನುಕುಲಕ್ಕೆ ಅಪಾಯವಿದೆ. ಅದಕ್ಕಾಗಿ ಪರಿಸರವನ್ನು ಶುಚಿಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಪುರಸಭೆ ಸಿಬ್ಬಂದಿಗಳು ಮಧುಗಿರಿ ಸುತ್ತಲಿನ ಪ್ರಾಕೃತಿಯ ಬೆಟ್ಟ ಹಾಗೂ ನೆಡುತೋಪಿನಲ್ಲಿ ಈ ಸೀಡ್ಬಾಲ್ಗಳನ್ನು ಬಿತ್ತನೆ ಮಾಡುವುದರಿಂದ ಉತ್ತಮ ಮಳೆಯಾದರೆ ಪ್ರಕೃತಿ ಸುಂದರ ಹಾಗೂ ಆರೋಗ್ಯಕರವಾಗಿರುತ್ತದೆ. ಈ ಕೆಲಸಕ್ಕೆ ಕೈ ಹಾಕಿರುವ ಪುರಸಭೆಯ ಮುಖ್ಯಾಧಿಕಾರಿ ಲೋಹಿತ್ರವರ ಕಾರ್ಯ ಶ್ಲಾಘನೀಯ ಎಂದರು. …
ತುಮಕೂರು: ಸಂಚಾರ ಪೊಲೀಸರು ಮತ್ತು ವಾಹನ ಸವಾರರ ವರ್ತನೆ ಮೇಲೆ ನಿಗಾ, ಪಾರದರ್ಶಕತೆ ಕಾಯ್ದುಕೊಳ್ಳಲು, ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕಲು ಸಮವಸ್ತ್ರದಲ್ಲಿ(ಅಂಗಿ) ಅಳವಡಿಸಬಹುದಾದ 10 ಬಾಡಿ ಕ್ಯಾಮೆರಾಗಳನ್ನು ಸಂಚಾರ ಪೊಲೀಸರಿಗೆ ನೀಡಲಾಗಿದೆ. ನಗರದ ಸಂಚಾರ ಠಾಣೆ ಇಬ್ಬರು ಪಿಎಸ್ಐ ಮತ್ತು 8 ಎಎಸ್ಐಗಳು ಈ ಕ್ಯಾಮೆರಾಗಳನ್ನು ಧರಿಸಿ ಕಾರ್ಯನಿರ್ವಹಿಸಲಿದ್ದಾರೆ. ಇವುಗಳನ್ನು ಧರಿಸುವ ಪೊಲೀಸ್ ಮುಂದೆ ನಡೆಯುವ ಚಟುವಟಿಕೆಗಳು ಕ್ಯಾಮೆರಾದಲ್ಲಿ ಸೆರೆಯಾಗುತ್ತವೆ. ವಾಹನ ಸವಾರರು ಮತ್ತು ಚಾಲಕರು ಸಂಚಾರ ನಿಯಮ ಉಲ್ಲಂಘಿಸಿ ಪೊಲೀಸರಿಗೆ ಯಾಮಾರಿಸಿ ಪರಾರಿಯಾಗುವುದು, ಪೊಲೀಸ್ ಸಿಬ್ಬಂದಿ ಲಂಚ ಪೀಕುವುದು, ಕಿರುಕುಳ ನೀಡುವುದಕ್ಕೆ ಈ ವಿಶಿಷ್ಟ ಕ್ಯಾಮೆರಾ ಕಣ್ಗಾವಲಿನಿಂದ ಕಡಿವಾಣ ಬೀಳಲಿದೆ. ಗಲಾಟೆ, ಪೊಲೀಸರು ಮತ್ತು ಸಾರ್ವಜನಿಕರ ನಡುವಿನ ವಾಗ್ವಾದ ಸಂದರ್ಭಗಳ ಅಸಲಿಯತ್ತು ಪತ್ತೆ ಮಾಡಲು ಈ ಕ್ಯಾಮೆರಾಗಳು ನೆರವಾಗಲಿವೆ. ಈ ಕ್ಯಾಮೆರಾ ಸರಾಸರಿ 300 ಗ್ರಾಂ ತೂಕವಿದೆ. ಅದರಲ್ಲಿ 100 ಮೀಟರ್…
ತುಮಕೂರು: ಅಂಗನವಾಡಿ ಕೇಂದ್ರಗಳಲ್ಲಿ ಕಲ್ಪಿಸಲಾಗುತ್ತಿರುವ ಐ.ಸಿ.ಡಿ.ಎಸ್ ಸೇವೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಿದ್ಧಪಡಿಸಲಾಗಿರುವ ಸ್ನೇಹ ತಂತ್ರಾಂಶ(ಮೊಬೈಲ್ ಆ್ಯಪ್)ವನ್ನು ಪ್ರಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಬಳಸಲು ತುಮಕೂರನ್ನು ಪೈಲೆಟ್ ಜಿಲ್ಲೆಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರಿನ ಸಿ.ಸ್ಟೆಪ್ (ತಂತ್ರಜ್ಞಾನ ಮತ್ತು ನೀತಿ ಸಂಶೋಧನಾ) ಸಂಸ್ಥೆಗಳ ಸಹಯೋಗದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು/ ಅಂಗನವಾಡಿ ಕಾರ್ಯಕರ್ತೆಯರು/ ಮೇಲ್ವಿಚಾರಕರಿಗಾಗಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿಂದು ಆಯೋಜಿಸಿದ್ದ ಎರಡು ದಿನಗಳ ಜಿಲ್ಲಾ ಮಟ್ಟದ ತರಬೇತುದಾರರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಿ.ಸ್ಟೆಪ್ ಸಂಸ್ಥೆಯು ಅಭಿವೃದ್ಧಿಪಡಿಸಿರುವ ಸ್ನೇಹ ಮೊಬೈಲ್ ತಂತ್ರಾಂಶವನ್ನು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಅಳವಡಿಸುವುದರಿಂದ ಏಕರೂಪದ ಮಾಹಿತಿ ಸಂಗ್ರಹಿಸಲು ಅನುವಾಗುತ್ತದೆ ಎಂದು ತಿಳಿಸಿದರು. ಸ್ನೇಹ ತಂತ್ರಾಂಶದ ಪರಿಣಾಮಕಾರಿ ಅಳವಡಿಕೆಗೆ ಜಿಲ್ಲೆಯಲ್ಲಿರುವ 4095…
ತುಮಕೂರು : ತುಮಕೂರು ನಗರದ ರೈಲುನಿಲ್ದಾಣದ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಹಾಗೂ ಮಾಸ್ಟರ್ ಕಿಚನ್ಗೆ ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ಮಂಗಳವಾರ ಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇಲ್ಲಿ ಇಂದಿರಾ ಕ್ಯಾಂಟೀನ್ ಜೊತೆಗೆ ಮಾಸ್ಟರ್ ಕಿಚನ್ ಇದೆ. ನಗರದಲ್ಲಿರುವ ಎಲ್ಲ ನಾಲ್ಕು ಇಂದಿರಾ ಕ್ಯಾಂಟೀನ್ಗಳಿಗೂ ಈ ಮಾಸ್ಟರ್ ಕಿಚನ್ನಿಂದಲೇ ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಊಟ ತಯಾರಾಗಿ ಸರಬರಾಜಾಗುತ್ತದೆ. ಆಯುಕ್ತರು ಇವೆರಡನ್ನೂ ಪರಿವೀಕ್ಷಣೆ ಮಾಡಿದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಂದಿರಾ ಕ್ಯಾಂಟೀನ್ಗೆ ದಿಢೀರನೆ `ಭೂಬಾಲನ್ ಅವರು ಆಗಮಿಸಿದರು. ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗೇಶ್ ಕುಮಾರ್, ಪರಿಸರ ಇಂಜಿನಿಯರ್ಗಳಾದ ಮೃತ್ಯುಂಜಯ ಮತ್ತು ನಿಖಿತಾ, ಹೆಲ್ತ್ಇನ್ಸ್ಪೆಕ್ಟರ್ ರುದ್ರೇಶ್ ಜೊತೆಯಲ್ಲಿದ್ದರು. ಊಟ ಮಾಡಿದ ಆಯುಕ್ತರು: ಆಗಷ್ಟೇ ಕ್ಯಾಂಟೀನ್ ಸಿಬ್ಬಂದಿ ವರ್ಗದವರು ಕ್ಯಾಂಟೀನ್ ಆವರಣವನ್ನು ಶುದ್ಧಗೊಳಿಸಿದ್ದು, ಮಧ್ಯಾಹ್ನ 12-30 ಕ್ಕೆ ಆರಂಭವಾಗಲಿದ್ದ ಊಟದ ವಿತರಣೆಗೆ…
ತುಮಕೂರು: ಡೆಂಗ್ಯು, ಚಿಕುನ್ಗುನ್ಯಾ, ಮಲೇರಿಯಾ, ನಿಫಾ ಮತ್ತಿತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗಲು ನಮ್ಮಲ್ಲಿರುವ ಉದಾಸೀನ ಮನೋಭಾವವೇ ಕಾರಣ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ|| ಸಿದ್ದೇಗೌಡ ಬೇಸರ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನರ್ಸಿಂಗ್ ಕಾಲೇಜ್, ಎನ್ಸಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಮಹಾನಗರ ಪಾಲಿಕೆ ಆವರಣದಲ್ಲಿಂದು ಹಮ್ಮಿಕೊಂಡಿದ್ದ “ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮ”ವನ್ನುದ್ದೇಶಿಸಿ ಅವರು ಮಾತನಾಡಿದರು. ಡೆಂಗ್ಯು ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ರೋಗ ಹರಡದಂತೆ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜನಸಾಮಾನ್ಯರಿಗೆ ತಿಳುವಳಿಕೆ ಇದ್ದರೂ ಸಹ ಉದಾಸೀನ ನಡವಳಿಕೆ ತೋರುತ್ತಿದ್ದಾರೆ. ರೋಗ ತಗುಲಿದಾಗ ವಾಸಿ ಮಾಡುವುದಕ್ಕಿಂತ ರೋಗ ಹರಡದಂತೆ ನಿಯಂತ್ರಿಸುವುದೇ ಬಹುಪಾಲು ಮೇಲು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳು ಹರಡುವುದಿಲ್ಲ. ಆರೋಗ್ಯವಿರದ…