ತುಮಕೂರು : ಕೊರೊನಾ ಭೀತಿಯ ನಡುವೆಯೂ ರಾಜ್ಯದಲ್ಲಿ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಆರಂಭವಾಗಿದ್ದು, ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ. ಅತ್ತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಹೋಗಿದ್ದರೆ, ಇತ್ತ ಪೋಷಕರು ಗಾಬರಿಯಿಂದ ಹೊರಗಡೆಯೇ ನಿಂತು ಕಾಯುತ್ತಿರುವ ದೃಶ್ಯ ಜಿಲ್ಲೆಯಲ್ಲಿ ಕಂಡು ಬಂದಿತು. ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯಲಿದ್ದಾರೆ, ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ, ಪೋಷಕರು ಗಾಬರಿಯಾಗಬೇಡಿ ಎಂದು ಧ್ವನಿವರ್ಧಕದ ಮೂಲಕ ಪೊಲೀಸ್ ಸಿಬ್ಬಂದಿ ಹಾಗೂ ಸ್ವಯಂ ಸೇವಕರು ಹೇಳುತ್ತಿದ್ದರು.
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಕೊರೊನಾ ಲಕ್ಷಣಗಳಾದ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆಯಿದ್ದರೆ ನಿರ್ಲಕ್ಷ್ಯಿಸದೇ ಪರೀಕ್ಷೆಗೊಳಪಡುವಂತೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸ್ತುತ 57 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಚಿಕ್ಕನಾಯಕನಹಳ್ಳಿ-2, ಗುಬ್ಬಿ-3, ಕೊರಟಗೆರೆ-1, ಕುಣಿಗಲ್-1, ಮಧುಗಿರಿ-4, ಪಾವಗಡ-5, ಶಿರಾ-15, ತಿಪಟೂರು-3, ತುಮಕೂರು-19, ತುರುವೇಕೆರೆ-4 ಇದರಲ್ಲಿ ಹೊರ ರಾಜ್ಯ/ಜಿಲ್ಲೆಗಳಿಂದ ಬಂದವರಿಂದಲೇ ಪ್ರಕರಣಗಳು ಹೆಚ್ಚಾಗಿವೆ ಎಂದರಲ್ಲದೇ ಈವರೆಗೂ 15440 ಪ್ರಕರಣಗಳನ್ನು ಪರೀಕ್ಷೆಗೊಳಪಡಿಸಿದ್ದು, 14232 ಪ್ರಕರಣಗಳು ನೆಗೆಟಿವ್ ಬಂದಿವೆ. ಈ ಪೈಕಿ 963 ಜನರ ಗಂಟಲು ದ್ರವ ಮಾದರಿ ಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದರು. ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಕೋವಿಡ್-19 ಲ್ಯಾಬ್ ಅನ್ನು ಆರಂಭಿಸಲಾಗಿದ್ದು, ಇದರಲ್ಲಿಯೇ ಪರೀಕ್ಷೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರಕರಣಗಳ…
ತುಮಕೂರು: ಸಿಎಸ್ಐ ಬಡಾವಣೆ, ವಿದ್ಯಾನಿಕೇತನ ಶಾಲೆ, ಪದವಿ ಕಾಲೇಜು, ಹಾಸ್ಟೆಲ್ಗಳಿರುವ ಬಿಎಚ್ ರಸ್ತೆಗೆ ಪರ್ಯಾಯವಾಗಿರುವ ರೈಲ್ವೆ ಸ್ಟೇಷನ್ ರಸ್ತೆಯನ್ನು ಸ್ಮಾರ್ಟ್ಸಿಟಿ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ನಗರ ಶಾಸಕ ಜ್ಯೋತಿಗಣೇಶ್ ತಿಳಿಸಿದರು. ನಗರದ ರೈಲ್ವೆಸ್ಟೇಷನ್ ರಸ್ತೆಯ ಸಮೀಪ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಬಿ.ಎಚ್.ರಸ್ತೆಯ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಕಿಷ್ಕಿಂದೆಯಾಗಿದ್ದ ಈ ರಸ್ತೆಯನ್ನು ಅಗಲೀಕರಣ ಮಾಡಲು ಇಲ್ಲಿನ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಅಗಲೀಕರಣಕ್ಕೆ ಸಹಕಾರ ನೀಡಿದ್ದಾರೆ, ಅದಕ್ಕೆ ಇಲ್ಲಿನ ನಿವಾಸಿಗಳಿಗೆ ಧನ್ಯವಾದಗಳನ್ನು ತಿಳಿಸಿದರು. ರೈಲ್ವೆ ಸ್ಟೇಷನ್ನಿಂದ ವಿದ್ಯಾನಿಕೇತನ ಶಾಲೆವರೆಗೆ ದ್ವಿಪಥ ರಸ್ತೆ ನಂತರ ಚರ್ತುಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಿಂದ ಬಿ.ಎಚ್.ರಸ್ತೆಯ ಮೇಲಿನ ಒತ್ತಡ ಶೇ.40ರಷ್ಟು ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸ್ಮಾರ್ಟ್ಸಿಟಿ ಮೂಲಕ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ…
ತುಮಕೂರು: ಜಿಲ್ಲಾ ಬಿಜೆಪಿಯ ನೂತನ ಸಾರಥಿ ಮಾಜಿ ಶಾಸಕ ಬಿ.ಸುರೇಶ್ ಗೌಡರವರು ಸಿದ್ಧಗಂಗ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದರು. ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊಟ್ಟ ಮೊದಲ ಬಾರಿಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಜಿಲ್ಲಾಧ್ಯಕ್ಷರಾಗಿ ಶ್ರೀಗಳ ಆಶೀರ್ವಾದ ಪಡೆದದ್ದು ವಿಶೇಷ. ಜಿಲ್ಲಾಧ್ಯಕ್ಷ ಬಿ.ಸುರೇಶ್ಗೌಡರನ್ನು ಆಶೀರ್ವ ದಿಸಿದ ಶ್ರೀಗಳು ಜಿಲ್ಲೆಯ ಸಂಘಟ ನೆಯಲ್ಲಿ ಯಶಸ್ವಿ ನಾಯಕನಾಗುವಂತೆ ಅರಸಿ ಆಶೀರ್ವದಿಸಿದರು. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರೊಟ್ಟಿಗೆ ಮಾಜಿ ಸಚಿವ ಸೊಗಡು ಶಿವಣ್ಣ, ನಿಕಟಪೂರ್ವ ಅಧ್ಯಕ್ಷ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಹಾಲಿ ಸದಸ್ಯ ಸದಸ್ಯ ವೈ.ಹೆಚ್.ಹುಚ್ಚಯ್ಯ. ಹಾಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಗೂಳೂರು ಶಿವಕುಮಾರ್, ಸಿದ್ದೇಗೌಡರು, ಮಾಜಿ ತಾ.ಪಂ ಅಧಕ್ಷರು ನರಸಿಂಹಮೂರ್ತಿ ಸೇರಿದಂತೆ ಗ್ರಾಮಾಂತರ ಕ್ಷೇತ್ರದ ಜನಪ್ರತಿನಿಧಿಗಳು, ಸುರೇಶ್ಗೌಡರ ಅಭಿಮಾನಿಗಳ ಬಳಗ ಹಾಗೂ ನಗರದ ಕೆಲ ಬಿಜೆಪಿ…
ತುಮಕೂರು: ಜೂನ್ 25ರಿಂದ ಆರಂಭವಾಗುತ್ತಿರುವ ಹತ್ತನೇ ತರಗತಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ:ಕೆ.ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಒಂದು ವೇಳೆ ಪಾಸಿಟಿವ್ ಪ್ರಕರಣ ಕಂಡು ಬಂದರೆ ಪಾಸಿಟಿವ್ ಅಥವಾ ಪ್ರಾಥಮಿಕ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಪ್ರೆಶರ್ಸ್ ಎಂದು ಪರಿಗಣಿಸಿ ಪರೀಕ್ಷೆ ಬರೆಸುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ ಎಂದರು. ತುಮಕೂರು(ದ) ಶೈಕ್ಷಣಿಕ ಜಿಲ್ಲೆಯಲ್ಲಿ 85(8 ಬ್ಲಾಕ್ ಪರೀಕ್ಷಾ ಕೇಂದ್ರ) ಪರೀಕ್ಷಾ ಕೇಂದ್ರಗಳಿದ್ದು, 23783 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 59(9 ಬ್ಲಾಕ್ ಪರೀಕ್ಷಾ ಕೇಂದ್ರ) ಪರೀಕ್ಷಾ ಕೇಂದ್ರಗಳಿದ್ದು, 13534 ಮಕ್ಕಳು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ…
ತುಮಕೂರು: ನಗರದ ಜಿಲ್ಲಾಸ್ಪತ್ರೆಯಲ್ಲಿ ಇಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಕೊರೊನಾ ಶಂಕೆ ವ್ಯಕ್ತವಾಗಿದೆ. ವಿನೋಬಾ ನಗರದ 5 ನೇ ಕ್ರಾಸ್ ನಲ್ಲಿ ವಾಸವಿದ್ದ 56 ವರ್ಷದ ವ್ಯಕ್ತಿ ಟೈಲರ್ ವೃತ್ತಿ ಮಾಡಿಕೊಂಡಿದ್ದರು ಇವರಿಗೆ ಸಕ್ಕರೆ ಖಾಯಿಲೆ, ರಕ್ತದೊತ್ತಡ ಇತ್ತು ಎನ್ನಲಾಗಿದೆ. ಜ್ವರದಿಂದ ಬಳಲುತ್ತಿದ್ದ ಇವರು ಭಾನುವಾರ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಜ್ವರ ವಿದ್ದ ಕಾರಣ ಸಿದ್ದಗಂಗಾ ಆಸ್ಪತ್ರೆ ವೈಧ್ಯರು ಇವರನ್ನ ಕೋವಿಡ್ ಪರೀಕ್ಷೆ ಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಸೋಮವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಇವರನ್ನ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದ್ದು ಗಂಟಲು ದ್ರವ ಪಡೆದು ಆರ್ ಟಿಪಿಸಿಆರ್ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಿದ್ದರು. ಬಳಿಕ ಇವರನ್ನ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ಮುಂದುವರಿಸಿದ್ದು ಕಳೆದ ರಾತ್ರಿ 10.30 ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಮಂಗಳವಾರ ಮದ್ಯಾಹ್ನ 2.30…
ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಕೊರೊನಾ ಪ್ರಕರಣವೊಂದು ವರದಿಯಾದ ಐದು ದಿನದಲ್ಲಿಯೇ ತಾಲ್ಲೂಕಿನ ಗೋಡೆಕೆರೆ ಬಳಿ ಮತ್ತೊಂದು ಕೊರೊನಾ ಸೋಂಕಿನ ಪ್ರಕರಣ ಧೃಡಪಟ್ಟಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ತಾಲ್ಲೂಕಿನ ಗೋಡೆಕರೆಯ ಗೊಲ್ಲರಹಟ್ಟಿ ಯಲ್ಲಿನ 21ವರ್ಷ ಯುವಕನಿಗೆ ಕೊರೊನಾ ಧೃಡಪಟ್ಟಿದೆ. ಈತನು ನೆಲಮಂಗಲದ ಬಳಿಯಿರುವ ಎವಿವಿ ಎಲೆಕ್ಟ್ರಿಕಲ್ ಕಂಪನಿಯಲ್ಲಿ ಎಂಸಿಬಿ ಬಿಡಿಭಾಗದ ಫ್ಯಾಕ್ಟರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಜೂನ್ 18 ರಂದು ಅನಾರೋಗ್ಯದ ನಿಮಿತ್ತ ತನ್ನ ಸ್ನೇಹಿತನೊಂದಿಗೆ ಊರಿಗೆ ಬಂದಿದ್ದಾನೆ. ಜ್ವರ ಹೆಚ್ಚಾದಾಗ ಜೂನ್ 19 ರಂದು ಸಮೀಪದ ಗೋಡೆಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋದಾಗ ಅಲ್ಲಿನ ವೈದ್ಯರು ಗಂಟಲು ದ್ರವತೆಗೆಸಿಕೊಳ್ಳಲು ಸೂಚಿಸಿದ್ದಾರೆ, ಅದರಂತೆ ಆತನು 20 ರಂದು ಚಿ.ನಾ.ಹಳ್ಳಿಯ ಆರೋಗ್ಯಕೇಂದ್ರದಲ್ಲಿ ಗಂಟಲುದ್ರವ ನೀಡಿ ಬಂದಿದ್ದಾನೆ. ಇದೇ 23 ರಂದು ಬೆಳಿಗ್ಗೆ ಈತನಿಗೆ ಕೊರೊನಾ ಧೃಡಪಟ್ಟಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಯವರು ಗೋಡೆಕೆರೆಯ ಗೊಲ್ಲರ ಹಟ್ಟಿಯಲ್ಲಿರುವ ಈತನ ನಿವಾಸದಿಂದ ತುಮಕೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.…
ಮಧುಗಿರಿ: ತಾಲೂಕಿನ ಕೆ.ಸಿ.ರೊಪ್ಪ ಗ್ರಾಮದಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಧೃಢವಾಗಿತ್ತು. ಈ ವ್ಯಕ್ತಿಗೆ ತುಮಕೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಪರಿಣಾಮ ಗುಣಮುಖನಾಗಿ ಸ್ವಗ್ರಾಮಕ್ಕೆ ಮರಳಿದಾಗ ತಹಶೀಲ್ದಾರ್ ಡಾ:ಜಿ.ವಿಶ್ವನಾಥ್ ನೇತೃತ್ವದ ತಂಡ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ಈ ಗ್ರಾಮವನ್ನು ಸೀಲ್ಡೌನ್ ಮಾಡಲಾಗಿತ್ತು . ಗ್ರಾಮಸ್ಥರಲ್ಲಿ ಕರೋನಾ ಆತಂಕ ಮನೆಮಾಡಿತ್ತು. ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಗುಣಮುಖನಾಗಿ ಬಿಡುಗಡೆಗೊಂಡ ಕಾರಣ ಗ್ರಾಮದಲ್ಲಿ ಸಂತಸದ ವಾತಾವರಣ ಕಂಡುಬಂದಿದೆ. ಇಡೀ ತಾಲೂಕು ಆಡಳಿತ ಗ್ರಾಮದಲ್ಲಿ ಸೋಂಕು ಮತ್ತೊಬ್ಬರಿಗೆ ಹರಡದಂತೆ ಸೋಂಕಿತ ವ್ಯಕ್ತಿಯ ಕುಟುಂಬ ವರ್ಗ ಮತ್ತು ಆತನ ಸಂಪರ್ಕದಲ್ಲಿದ್ದ ಎಲ್ಲರನ್ನೂ ಹೌಸ್ ಕ್ವಾರಂಟೈನ್ ಮಾಡಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಗ್ರಾಮಕ್ಕೆ ಶಾಸಕ ಎಂ.ವಿ.ವೀರಭಧ್ರಯ್ಯ, ಜಿ.ಪಂ ಸಿ.ಇ.ಒ ಶುಭಾ ಕಲ್ಯಾಣ್, ತಾ.ಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ಉಪವಿಭಾಗಾಧಿಕಾರಿ ಡಾ:ಕೆ.ನಂದಿನಿದೇವಿ, ತಾಲೂಕು ವೈದ್ಯಾಧಿಕಾರಿ ರಮೇಶ್…
ಕೊರಟಗೆರೆ: ಮದುವೆಯಾಗಿ ಕೇವಲ 21ದಿನಕ್ಕೆ ಆಷಾಡ ಮಾಸದ ಪ್ರಯುಕ್ತ ತವರು ಮನೆಗೆ ಆಗಮಿಸಿದ್ದ ಪೂಜಾ ಎಂಬಾಕೆ ತಂದೆ ಮನೆಯಲ್ಲಿನ ತೀರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ತಾಲೂಕಿನ ಹೊಳವನಹಳ್ಳಿ ಹೋಬಳಿ ದುಗ್ಗೇನಹಳ್ಳಿ ಗ್ರಾಮದ ವೀರೆಗೌಡನ ಮಗಳಾದ ಪೂಜಾ(19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮದುವೆಯಾದ ನಂತರ ಮೊದಲ ಸಲ ತವರು ಮನೆಗೆ ಆಗಮಿಸಿದ್ದ ಪೂಜಾ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೋಳಾಲ ಹೋಬಳಿ ವ್ಯಾಪ್ತಿಯ ಲಕ್ಕಮುತ್ತನಹಳ್ಳಿ ಗ್ರಾಮದ ಹನುಮಂತರಾಯಪ್ಪನ ಮಗ ಪ್ರದೀಪ್ ಎಂಬಾತನ ಜೊತೆ ಕಳೆದ 21ದಿನದ ಹಿಂದಷ್ಟೆ ಮದುವೆಯಾಗಿದ್ದಾಳೆ. ಆಷಾಡ ಮಾಸದ ಪ್ರಯುಕ್ತ ತವರು ಮನೆಗೆ ಆಗಮಿಸಿದ ವೇಳೆ ದುರ್ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ಪೂಜಾಳನ್ನು ಕೊರಟಗೆರೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಗೋವಿಂದರಾಜು, ಸಿಪಿಐ ನದಾಫ್, ಪಿಎಸೈ ಮುತ್ತುರಾಜು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ಗುಬ್ಬಿ: ತಾಲ್ಲೂಕಿನ ಚೇಳೂರು ಸಮೀಪದ ಅಂತಾಪುರ ಕೋಡಿ ಎಂಬ ಗ್ರಾಮದಲ್ಲಿ ಕಾಣಿಸಿಕೊಂಡ ಮೂರನೇ ಕೊರೋನಾ ಸೋಂಕಿತ ಪ್ರಕರಣ ಇಡೀ ತಾಲ್ಲೂಕಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಚೇಳೂರು ಕಲ್ಯಾಣ ಮಂಟಪದಲ್ಲಿ ಕ್ವಾರೆಂಟೈನ್ನಲ್ಲಿದ್ದ ದೆಹಲಿ ಮೂಲದ ಕ್ರೇನ್ ಆಟರೇಟರ್ ಎತ್ತಿನಹೊಳೆ ಯೋಜನೆ ಕೆಲಸಕ್ಕೆ ಬರುವಾಗ್ಗೆ ಕೊರೋನಾ ವೈರಸ್ ಅಂಟಿಸಿಕೊಂಡು ಬಂದಿದ್ದು ತಾಲ್ಲೂಕಿಗೆ ಪಾದಾರ್ಪಣೆ ಎಂದೆನಿಸಿತು. ಈತನ ಸಂಪರ್ಕಕ್ಕೆ ಬಂದವರ ಸಂಖ್ಯೆ ಕಡಿಮೆ ಎನಿಸಿದ ಹಿನ್ನಲೆ ಜನರಲ್ಲಿ ಈ ಪ್ರಕರಣ ಬಗ್ಗೆ ಹೆಚ್ಚಿನ ಗಮನ ಸಿಗಿಲಿಲ್ಲ. ನಂತರ ಗುಬ್ಬಿ ಸಮೀಪದ ಕಿಟ್ಟದಕುಪ್ಪೆ ಗ್ರಾಮದಲ್ಲಿ ಕಾಣಿಸಿಕೊಂಡ ಅಡುಗೆ ತಯಾರಕನಲ್ಲಿನ ವೈರಸ್ ಪಾಸಿಟೀವ್ ಇಡೀ ತಾಲ್ಲೂಕಿಗೆ ಬೆಚ್ಚಿಬೀಳಿಸಿತ್ತು. ಮೂರು ದಿನದಲ್ಲೇ ಮೂರನೇ ಪ್ರಕರಣ ಅಂತಾಪುರ ಕೋಡಿ ಎಂಬ ಸಣ್ಣ ಹಳ್ಳಿಯಲ್ಲಿ ಕಾಣಿಸಿರುವುದು ಸಮುದಾಯ ಹರಡುವಿಕೆಗೆ ಸಾಕ್ಷಿಯಾಗುತ್ತಿದೆ ಎಂಬ ಆತಂಕ ಮೂಡಿಸಿದೆ. ಚೇಳೂರಿನಿಂದ ಶಿರಾ ಮಾರ್ಗ ಮಧ್ಯೆ ಸಿಗುವ 40 ಮನೆಯ ಅಂತಾಪುರ ಸಣ್ಣ ಗ್ರಾಮದಲ್ಲಿ…











