Author: News Desk Benkiyabale

ತುಮಕೂರು:        ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮತ್ತು ಮಾದ್ಯಮದವರಿಗೆ ಮಾಹಿತಿ ಮತ್ತು ಸ್ಪಷ್ಟತೆ ನೀಡಲು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಛೇರಿಯಲ್ಲಿ ಪ್ರಸ್ತುತ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ್ ಎಸ್.ಬಿ ಅವರನ್ನು ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದ್ದು, ಸಹಾಯಕರಾಗಿ ಕಾರ್ಯನಿರ್ವಹಿಸಲು ಪ್ರಥಮ ದರ್ಜೆ ಕಾರ್ಯನಿರ್ವಾಹಕ ಸಹಾಯಕರಾಗಿರುವ ಆರ್.ಮನೋಹರ್ ಗೌಡ ಅವರಿಗೆ ಸೂಚಿಸಲಾಗಿದೆ. ಸ್ಮಾರ್ಟ್ ಸಿಟಿಯ ಯಾವುದೇ ರೀತಿಯ ಮಾಹಿತಿ ಪಡೆಯಲು ಮಂಜುನಾಥ್ ಎಸ್.ಬಿ ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ, ಮೊ:9686375507. ಆರ್.ಮನೋಹರ್ ಗೌಡ, ಕಾರ್ಯನಿರ್ವಾಹಕ ಸಹಾಯಕರು(ಪ್ರಥಮ ದರ್ಜೆ) ಮೊ: 9916920418ಕ್ಕೆ ಸಂಪರ್ಕಿಸಬಹುದಾಗಿದೆ ಪ್ರಕಟಣೆ ತಿಳಿಸಿದೆ.  

Read More

ತುಮಕೂರು:       ಇಡೀ ವಿಶ್ವದಾದ್ಯಂತ ಕೊರೊನಾ ರಣಕಹಳೆ ಮೊಳಗಿದ್ದು ಕೋಟ್ಯಾಂತರ ಜನ ಈ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ಇದಕ್ಕೆ ದೇಶವು ಹೊರತಾಗಿಲ್ಲ. ಪ್ರತಿ ದಿನ ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಹೋಗುತ್ತಿದ್ದು, ದೇಶದ ಜನತೆಯ ಮೇಲೆ ವ್ಯತಿರೀಕ್ತ ಪರಿಣಾಮ ಬೀರುತ್ತಿದೆ. ಇನ್ನು ರಾಜ್ಯಾದ್ಯಂತ ಸೋಂಕಿತರು ಹೆಚ್ಚಾಗುತ್ತಿರುವ ಸಂಗತಿಗಳು ಪ್ರತಿದಿನ ಘಟಿಸುತ್ತಿವೆ. ಈ ನಡುವೆಯು ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆಯ ಉಳಿದಿದ್ದ ಇಂಗ್ಲೀಷ್ ಪರೀಕ್ಷೆಯನ್ನು ಮಾಡಲು ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಕಲ ಸಿದ್ಧತೆಗಳು ಹಾಗೂ ಹೆಚ್ಚೆರಿಕೆಯ ಕ್ರಮಗಳನ್ನು ಕೈಗೊಂಡಿದೆ. ಇನ್ನು ತುಮಕೂರು ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಗೊಳ್ಳುವ ಮೂಲಕ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳು ನಡೆಯಲಿದೆ. ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಗಾಗಿ ಸಕಲ ಸಿದ್ದತೆಗಳು ಪೂರ್ಣಗೊಂಡಿದ್ದು, ಈ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 1306 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.      ಈ ಕಾಲೇಜಿನ 62 ಕೊಠಡಿಗಳಲ್ಲಿ ದ್ವಿತೀಯ ಪಿಯುಸಿ…

Read More

ತುಮಕೂರು:       ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‍ಗೆ 10,300 ರೂ.ನಂತೆ ಉಂಡೆ ಕೊಬ್ಬರಿಯನ್ನು ಖರೀದಿಸಲಿದ್ದು, ಜೂನ್ 18 ರಿಂದ ಜುಲೈ 4ರವರೆಗೆ ರೈತರು ತಮ್ಮ ಹೆಸರನ್ನು ನೋಂದಾಯಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜುಲೈ 6 ರಿಂದ ಜಿಲ್ಲೆಯಲ್ಲಿ ತೆರೆದಿರುವ 9 ಖರೀದಿ ಕೇಂದ್ರಗಳಲ್ಲಿ ನೋಂದಾಯಿತ ರೈತರಿಂದ ಉಂಡೆ ಕೊಬ್ಬರಿಯನ್ನು ಖರೀದಿಸಲಾಗುವುದು ಎಂದರು.       ಚಿಕ್ಕನಾಯಕನಹಳ್ಳಿ, ಹುಳಿಯಾರು, ತಿಪಟೂರು, ಗುಬ್ಬಿ, ತುರುವೇಕೆರೆ, ತುಮಕೂರು, ಕುಣಿಗಲ್, ಶಿರಾ, ಚೇಳೂರಿನ ಎಪಿಎಂಸಿ ಪ್ರಾಂಗಣದಲ್ಲಿ 9 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ತಮ್ಮ ಹೆಸರನ್ನು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎಪಿಎಂಸಿಯಲ್ಲಿರುವ ಖರೀದಿ ಕೇಂದ್ರಗಳಿಗೆ ಮೂಲ ಆಧಾರ್ ಕಾರ್ಡ್ ಹಾಗೂ ರೈತ ಸಂಪರ್ಕ ಕೇಂದ್ರದಲ್ಲಿ ಪಡೆದ  FRUITS  ನವೆಂಬರ್‍ನೊಂದಿಗೆ…

Read More

ತುಮಕೂರು:       ಎತ್ತಿನ ಹೊಳೆಯ ಬೈರಗೊಂಡ್ಲು ಜಲಾಶಯದ ನಿರ್ಮಾಣಕ್ಕೆ ಭೂಸ್ವಾಧೀನಕ್ಕೊಳಪಡುವ ರೈತರ ಜಮೀನಿಗೆ ಸೂಕ್ತ ಪರಿಹಾರ ಧರ ನಿಗಧಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.      ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗಾಗಿ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಬೈರಗೊಂಡ್ಲು ಜಲಾಶಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಜರುಗಿದ ಸಮಾಲೋಚನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.       ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರ ಜಮೀನು ಭೂಸ್ವಾಧೀನವಾಗುತ್ತಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರಿಗೆ ನೀಡುತ್ತಿರುವ ಪ್ರತಿ ಎಕರೆಗೆ 32ಲಕ್ಷ ರೂ.ಗಳ ಪರಿಹಾರ ದರದಂತೆ ಕೊರಟಗೆರೆ ತಾಲ್ಲೂಕಿನ ರೈತರಿಗೂ ದೊರೆಯಬೇಕೆನ್ನುವುದು ನನ್ನ ಆಶಯವಾಗಿದೆ. ಈ ನಿಟ್ಟಿನಲ್ಲಿ ಸಭೆಯಲ್ಲಿ ವ್ಯಕ್ತವಾಗಿರುವ ಬೇಡಿಕೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದ ಮಟ್ಟದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.…

Read More

ಮಧುಗಿರಿ:       ಪರಿಶಿಷ್ಟ ಜಾತಿಯ ವ್ಯಕ್ತಿ ತಮ್ಮ ಜಮೀನಿನಲ್ಲಿ ಬೋರ್‍ವೆಲ್ ಕೊರೆಸಿದಕ್ಕೆ ಖ್ಯಾತೆ ತೆಗೆದ ಪಕ್ಕದ ಜಮೀನಿನ ಸವರ್ಣಿಯನೊಬ್ಬ ಹಲ್ಲೆ ನಡೆಸಿರುವ ಘಟನೆ ಮದುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.       ಪರಿಶಿಷ್ಟ ಜಾತಿಯ ವ್ಯಕ್ತಿ ಹನುಮಂತರಾಯಪ್ಪ ತಮ್ಮ ಜಮೀನಿನಲ್ಲಿ ಬೋರ್ ವೆಲ್ ಕೊರೆಸಿದ್ದಾನೆ. ಬೋರ್‍ವೆಲ್‍ನಲ್ಲಿ ನೀರು ಸಿಕ್ಕುತ್ತಿದ್ದಂತೆ ಪಕ್ಕದ ಜಮೀನಿನ ಮಾಲಿಕ ಸವರ್ಣಿಯ ವ್ಯಕ್ತಿ ಹಾಗೂ ಮಾಜಿ ಗ್ರಾ.ಪಂ.ಸದಸ್ಯ ನರಸಿಂಹಮೂರ್ತಿ ಎಂಬಾತ ತಮ್ಮ ಬೋರ್‍ವೆಲ್‍ನಲ್ಲಿ ನೀರು ಕಡಿಮೆಯಾಗುತ್ತದೆಂದು ಖ್ಯಾತೆ ತೆಗೆದು ಹನುಮಂತರಾಯಪ್ಪ ಮೇಲೆ ಹಲ್ಲೆ ನಡೆಸಿದ್ದಾನೆ. ಕಬ್ಬಿಣದ ರಾಡ್‍ನಿಂದ ಮನಬಂದಂತೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆ ಗೊಳಗಾದ ಹನುಮಂತರಾಯಪ್ಪನ ಕೈ ಹಾಗೂ ತೊಡೆಗೆ ಗಂಭೀರವಾಗಿ ಗಾಯಾ ಗಳಾಗಿದ್ದು ಮಧು ಗಿರಿ ತಾಲ್ಲೂಕು ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.      ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕಳೆದ ತಿಂಗಳಷ್ಟೇ ಇಂತಹ…

Read More

ತುಮಕೂರು  :       ಜಿಲ್ಲೆಯಲ್ಲಿ ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯುಸಿಯ ಇಂಗ್ಲೀಷ್ ವಿಷಯ ಪರೀಕ್ಷೆಗೆ 14078 ವಿದ್ಯಾರ್ಥಿನಿಯರು ಹಾಗೂ 10922 ವಿದ್ಯಾರ್ಥಿಗಳು ಸೇರಿದಂತೆ 25,050 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ ಈ ಪೈಕಿ 23492 ಹೊಸ, 980 ಖಾಸಗಿ ಹಾಗೂ 578 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತಾ ಕುಮಾರಿ ತಿಳಿಸಿದ್ದಾರೆ.        ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪರೀಕ್ಷಾ ಕೇಂದ್ರದ ಕೊಠಡಿಗಳ ಸ್ಯಾನಿಟೈಸೇಷನ್ ಕಾರ್ಯ ಕೈಗೊಳ್ಳಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿರುವುದರಿಂದ ಪ್ರತಿ ಪರೀಕ್ಷಾ ಕೊಠಡಿಗಳಲ್ಲಿ 12 ಹಾಗೂ ದೊಡ್ಡ ಕೊಠಡಿಗಳಾದಲ್ಲಿ 24 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹಂಚಿಕೆ ಮಾಡಲಾಗಿದೆ.        ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ಬೇರೆ ಜಿಲ್ಲೆಯಲ್ಲಿ ವಾಸವಿರುವ 332 ವಿದ್ಯಾರ್ಥಿಗಳು ಆಯಾ ಜಿಲ್ಲೆಯಲ್ಲಿಯೇ ಪರೀಕ್ಷೆ ಬರೆಯಲಿದ್ದಾರೆ. ಅದೇರೀತಿ ಬೇರೆ ಜಿಲ್ಲೆಯಲ್ಲಿ ವ್ಯಾಸಂಗ…

Read More

ಗುಬ್ಬಿ :      ತಾಲ್ಲೂಕಿನ ಸೋಮಲಾಪುರದ ರೈತರು ಭೂಮಿಯನ್ನು ಕಳೆದುಕೊಂಡು ನೀರನ್ನು ಕಾಣದೇ ಹತಾಶರಾಗಿ ವಿಷ ಸೇವಿಸುವ ಹಂತಕ್ಕೆ ತಲುಪಿದ್ದು ವಿಷಾದನೀಯ.       ಹೇಮಾವತಿ ಕಾಲುವೆ 15ಸಿ ಒಂದರಲ್ಲಿ ಉಪಕಾಲುವೆಗಳ ಮುಖಾಂತರ ಸುಮಾರು 10-15 ಹಳ್ಳಿಗಳಿಗೆ ಕುಡಿಯುವ ನೀರಿಗೆ ಸರಬರಾಜು ಮಾಡುವ ಈ ಕಾಲುವೆಯು ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಕಾಲುವೆಯ ಮೇಲ್ಭಾಗದಲ್ಲಿದ್ದ ಮಣ್ಣು ಕಾಲುವೆಗೆ ಬಿದ್ದು ಇಡೀ ಕಾಲುವೆಯು ಮುಚ್ಚಿದ್ದು ಪೈಪ್‍ಲೈನ್ ಮಾಡಿದ್ದು ಯಾವ ಪುರುಷಾರ್ಥಕ್ಕೆ ಎಂದು ಸ್ಥಳಿಯ ಮುಖಂಡರು ದೂರಿದ್ದಾರೆ.       ಪ್ರತಿ ವರ್ಷವೂ 3-4 ಲಕ್ಷ ರೂ. ಖರ್ಚು ಮಾಡಿ ಬಿದ್ದಂತಹ ಮಣ್ಣನ್ನು ಮೇಲಕ್ಕೆ ತೆಗೆದು ಕಾಲುವೆಯನ್ನು ದುರಸ್ತಿ ಮಾಡುತ್ತಿದ್ದೇವೆ ಎಂದು ರೈತರುಗಳು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಲುವೆಯನ್ನು ದುರಸ್ತಿ ಮಾಡದೇ ಹೋದಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ತಿಳಿಸಿದರು.       ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ರಾಜಕೀಯ ಮುಖಂಡರುಗಳನ್ನು ಸಂಪರ್ಕಿಸಿ ಕಾಲುವೆಯನ್ನು ದುರಸ್ತಿ ಮಾಡಲು ಮನವಿ…

Read More

ತುಮಕೂರು:      ಜೂ.25 ರಿಂದ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೆಪಿಸಿಸಿ ವಕ್ತಾರರಾದ ಮುರಳೀಧರ ಹಾಲಪ್ಪ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಮಾಡಿದರು.      ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಸೋಮವಾರ ಕಾಂಗ್ರೆಸ್ ಮುಖಂಡರು ಹಾಗೂ ವಿದ್ಯಾರ್ಥಿಗಳ ಪೋಷಕರೊಂದಿಗೆ ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಿದ ಅವರು, ರಾಜ್ಯದಲ್ಲಿ 2,879 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಕೊರೋನ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಒಂದು ರೀತಿಯ ಭಯದ ವಾತಾವರಣವಿದೆ. ಹೀಗಾಗಿ ಪ್ರತಿ ತಾಲ್ಲೂಕಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.       ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದಾಗ ಕೇಂದ್ರದ ಸ್ವಚ್ಚತೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುವ ವ್ಯವಸ್ಥೆ ಸೇರಿದಂತೆ…

Read More

ಚಿಕ್ಕನಾಯಕನಹಳ್ಳಿ:       ಇಂಜಿನ್‍ಲ್ಲಿ ಶಾರ್ಟ್ ಸಕ್ರ್ಯಟ್ ನಿಂದಾಗಿ ಒಮ್ನಿಕಾರೊಂದು ಮಾರ್ಗಮಧ್ಯದಲ್ಲಿ ಹೊತ್ತಿ ಉರಿದ ಘಟನೆ ಶೆಟ್ಟಿಕೆರೆ ಬಳಿ ನಡೆದಿದೆ.       ಚಿಕ್ಕನಾಯಕನಹಳ್ಳಿ – ತಿಪಟೂರಿನ ಮಾರ್ಗದ ನಡುವೆ ಶೆಟ್ಟಿಕೆರೆ ಬಳಿ ಚಲಿಸುತ್ತಿದ್ದ ಮಾರುತಿ ಒಮ್ನಿಯ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿದ ಪರಿಣಾಮ ಚಲಿಸುತ್ತಿದ್ದಾಗಲೇ ಹೊತ್ತಿ ಉರಿಯಿತು. ಈ ಸಂದರ್ಭದಲ್ಲಿ ವಾಹನದಲ್ಲಿದ್ದವರು ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.       ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ವಾಹನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ವಾಹನ ಭಾಗಶಃ ಸುಟ್ಟುಹೋಗಿದ್ದು ಸುಮಾರು ರೂ.3 ಲಕ್ಷರೂ ನಷ್ಟ ಸಂಭವಿಸಿದೆ. ವಾಹನ ಶೆಟ್ಟಿಕೆರೆಯ ಲೋಕೇಶ್ ಎಂಬುವರದ್ದಾಗಿದ್ದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯಲ್ಲಿ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕದಳದ ಜ್ಞಾನಮೂರ್ತಿ ತಂಡ ಕಾರ್ಯನಿರ್ವಹಸಿದರು.

Read More

ತುಮಕೂರು :        ಸರ್ಕಾರದ ಆದೇಶದಂತೆ ಕೋವಿಡ್-19 ಲಾಕ್‍ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೊಳಗಾಗಿರುವ ಮುಸುಕಿನ ಜೋಳ ಬೆಳೆದ ರೈತರಿಗೆ ಬೆಳೆ ಪರಿಹಾರವಾಗಿ 5ಸಾವಿರ ರೂ.ಗಳ ಆರ್ಥಿಕ ನೆರವು ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕಿ ರಾಜ ಸುಲೋಚನ ತಿಳಿಸಿದ್ದಾರೆ.       ಲಾಕ್‍ಡೌನ್‍ನಿಂದ ಮುಸುಕಿನ ಜೋಳಕ್ಕೆ ಬೇಡಿಕೆ ಇಲ್ಲದಂತಾಗಿ 2019-20ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದು ಸಂಕಷ್ಠಕ್ಕೊಳಗಾಗಿರುವ ರೈತರಿಗೆ ಅಲ್ಪಾವಧಿ ಆರ್ಥಿಕ ನೆರವು ನೀಡಲು ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ 2019-20ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದ ರೈತರಿಗೆ ಬೆಳೆ ಸಮೀಕ್ಷೆಯ ತಂತ್ರಾಂಶದಲ್ಲಿ ಈಗ ದಾಖಲಾಗಿರುವ ಬೆಳೆ ವಿವರಗಳ ಆಧಾರದ ಮೇರೆಗೆ ಬೆಳೆ ಪರಿಹಾರವನ್ನು ಪಾವತಿಸಲಾಗುವುದು.       ಬೆಳೆ ಸಮೀಕ್ಷೆಯಲ್ಲಿರುವಂತೆ ಮುಸುಕಿನ ಜೋಳದ ಬೆಳೆಗಾರರ ಪಟ್ಟಿಯನ್ನು ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಕಛೇರಿಯ ನಾಮಫಲಕಗಳಲ್ಲಿ ಪ್ರದರ್ಶಿಸಲಾಗುವುದು. ಬೆಳೆ ಪರಿಹಾರವನ್ನು DBT Portal ಮುಖಾಂತರ ನೇರವಾಗಿ ಫಲಾನುಭವಿ ಖಾತೆಗೆ ಜಮಾ ಮಾಡಲಾಗುವುದು. ನಷ್ಠಕ್ಕೊಳಗಾದ ಮುಸುಕಿನ…

Read More