ಚಿಕ್ಕನಾಯಕನಹಳ್ಳಿ: 8 ವರ್ಷದ ಬಾಲಕೊನೊಬ್ಬನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ತಾಲ್ಲೂಕಿನಲ್ಲಿ ಈವರೆಗೆ ಸೋಕಿತರ ಪ್ರಮಾಣ 10ಕ್ಕೇರಿದಂತಾಗಿದೆ. ಕಳೆದ ವಾರ ಪಟ್ಟಣದ ಸಮೀಲದ ಕಾಡೇನಹಳ್ಳಿಯ 22ವರ್ಷದ ಯುವಕನೋರ್ವನಿಗೆ ಸೋಂಕು ದೃಢಪಟ್ಟಿದ್ದು ಸದರಿ ಯವಕನ ಸಮೀಪದ ಮನೆಯಲ್ಲಿನ 8 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ. ಕಳೆದೆರಡು ದಿನದ ಹಿಂದೆ ಬಾಲಕನಿಗೆ ಜ್ವರಬಂದ ಹಿನ್ನಲೆಯಲ್ಲಿ ಗಂಟಲ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ಅದು ದೃಢಪಟ್ಟಿದೆ. ಬಾಲಕನ ಮನೆಯಲ್ಲಿ ತಂದೆ, ತಾಯಿ, ಅಜ್ಜ, ಅಜ್ಜಿ ವಾಸವಿದ್ದಾರೆ. ಈಗಾಗಲೇ ಈ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿತ್ತು. ಬಾಲಕನ್ನು ಪಟ್ಟಣದ ಆಸ್ಪತ್ರೆಯಲ್ಲಿ ಐಸೋಲೇಸನ್ ವಾರ್ಡ್ಗೆ ಸೇರಿಸಲಾಗಿದೆ. ಕುಟುಂಬದವರನ್ನು ಕ್ವಾರಂಟೈನ್ಗೊಳಪಡಿಸಲಾಗಿದೆ. ಹೊರಗಿನಿಂದ ಬಂದವರ ಆತಂಕ: ರಾಜ್ಯದ ಬಹುತೇಕ ನಗರಗಳನ್ನು ಕೊರೊನಾ ಸೋಂಕಿತರ ಪ್ರಮಾಣ ವಿಪರೀತವಾಗಿ ಏರುತ್ತಿರುವುದರಿಂದ ನಗÀರಗಳಿಂದ ಗ್ರಾಮಗಳಿಗೆ ತಂಡೋಪತಂಡವಾಗಿ ಬರುತ್ತಿರುವುದು ಗಾಬರಿ ಹುಟ್ಟಿಸಿದೆ. ಇವರಲ್ಲಿ ಸೋಂಕಿತರನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆಯಾಗದಿರುವುದು ದೊಡ್ಡ ತಲೆನೋವಾಗಿದೆ. ಜೊತೆಗೆ ಹೊರಗಡೆಯಿಂದ ಬಂದವರ…
Author: News Desk Benkiyabale
ತುಮಕೂರು : ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ 13 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 221 ಕ್ಕೆ ಏರಿಕೆ ಆದಂತಾಗಿದೆ. ತಾಲ್ಲೂಕುವಾರು ಸೋಂಕಿತರ ವಿವರ : ತುಮಕೂರು -6 ಪಾವಗಡ – 3 ಮಧುಗಿರಿ-2, ಕುಣಿಗಲ್-2 ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ, ಕೊರಟಗೆರೆ, ಕುಣಿಗಲ್ ತಾಲ್ಲೂಕುಗಳಲ್ಲಿ ಕೊರೊನಾ ರುದ್ರ ನರ್ತನ ಮಾಡುತ್ತಿದೆ. ಲಾಕ್ಡೌನ್ ಸಡಿಲಿಕೆಯ ನಂತರ ಎಲ್ಲರೂ ಎಲ್ಲೆಂದರಲ್ಲಿ ಸುತ್ತಾಡುತ್ತಿದ್ದು, ಯಾರಿಗೆ ಯಾರಿಂದ ಸೋಂಕು ಹರಡುತ್ತಿದೆ ಎಂಬ ಅರಿವಿಲ್ಲ. ಗ್ರಾಮೀಣ ಪ್ರದೇಶದ ಜನತೆಯನ್ನ ಬಿಟ್ಟು ಬಿಡದಂತೆ ಕಾಡುತ್ತಿರುವ ಕೊರೊನಾ ಸೋಂಕು ಯಾವುದೇ ರೀತಿಯಲ್ಲಿ ಯಾರಿಂದ ಯಾರಿಗೆ ಸುಳಿವು ನೀಡದೇ ಎಲ್ಲರಲ್ಲೂ ಆವರಿಸುತ್ತಿದೆ.
ತುಮಕೂರು: ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ಜಿಲ್ಲಾ ಆಸ್ಪತ್ರೆಗೆ ನೂತನ ಎ.ಎಲ್.ಎಸ್ ಆಂಬುಲೆನ್ಸ್ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಟಿ ರಂಗಸ್ವಾಮಿ ತಿಳಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಸೋಂಕಿತರನ್ನು ಕರೆತರಲು ಜಿಲ್ಲಾಸ್ಪತ್ರೆಗೆ 54 ಲಕ್ಷ ರೂ. ಮೊತ್ತದ ಒಂದು ಜೀವರಕ್ಷಕ ಎ.ಎಲ್.ಎಸ್ ಆಂಬುಲೆನ್ಸ್ ಅನ್ನು ಒದಗಿಸಲಾಗಿದೆ. ಜಿಲ್ಲಾಸ್ಪತ್ರೆ ಮನವಿ ಮೇರೆಗೆ ಈ ಅತ್ಯಾಧುನಿಕ ಆಂಬುಲೆನ್ಸ್ ಅನ್ನು ಒದಗಿಸಲಾಗಿದ್ದು, ಆಂಬುಲೆನ್ಸ್ನಲ್ಲಿ ಒಂದು Portable ventilator, Syringe infusion pump, Wheel chair cum Evacuation chair, Intubation kit, Advanced portable suction unit ಮತ್ತಿತರೆ ಪರಿಕರಗಳನ್ನೊಳಗೊಂಡಿದೆ. ಜಿಲ್ಲಾಸ್ಪತ್ರೆಯ ಟ್ರಾಮಾ ಕೇರ್ ವಿಭಾಗದಿಂದ ರೋಗಿಗಳನ್ನು ಉನ್ನತ ಮಟ್ಟದ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲು ಹಾಗೂ ಅಪಘಾತ ಸ್ಥಳದಿಂದ ಗಾಯಾಳುಗಳನ್ನು ಟ್ರಾಮಾ ಕೇರ್ ಸೆಂಟರ್ಗೆ ಕರೆತರಲು ಸಹ ಈ ಆಂಬುಲೆನ್ಸ್ ಅನ್ನು ಬಳಸಿಕೊಳ್ಳಲಾಗುವುದು…
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ 2020-21ನೇ ಸಾಲಿನ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಗೌರವ ತೋರಿ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಆರ್.ರಾಮಚಂದ್ರಯ್ಯ, ಜಿಪಂ ಸದಸ್ಯರಾದ ಕಲ್ಲೇಶ್ ಮತ್ತು ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪತ್ರಿಕಾ ಭವನದಲ್ಲಿ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶನಿವಾರ ತಾಪಂ ಕೆಡಿಪಿ ಸಭೆ ಇದೆ ಎಂದು ಶುಕ್ರವಾರ ಸಂಜೆ ನಮಗೆ ಮಾಹಿತಿ ನೀಡಿದ್ದಾರೆ. ಒಂದು ದಿನದಲ್ಲಿ ನಾವು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡುವುದಾದರೂ ಹೇಗೆ? ವರದಿಯಲ್ಲಿರುವ ಮಾಹಿತಿ ತಿಳಿದುಕೊಳ್ಳಲು ನಮಗೆ ಸಮಯ ಬೇಡವೇ ಎಂದು ಪ್ರಶ್ನಿಸಿದರು. ಸಭೆಯಲ್ಲಿ ಈ ಬಗ್ಗೆ ಸಚಿವರಾದ ಮಧುಸ್ವಾಮಿಯವರನ್ನು ಪ್ರಶ್ನೆ ಮಾಡಿದರೆ ಮೌನವಹಿಸುತ್ತಾರೆ. ನಮಗೆ ಅಗೌರವ ತೋರಿರುವ ಸಭೆಯಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಸಭೆಯಿಂದ…
ತುಮಕೂರು: ಮಹಾನಗರ ಪಾಲಿಕೆ ಆಯುಕ್ತರಾಗಿ ರೇಣುಕಾ ಶನಿವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ಮು ಖ್ಯ ಯೋಜನಾಧಿಕಾರಿಯಾಗಿದ್ದ ಇವರು ಸರ್ಕಾರದ ಆದೇಶದಂತೆ ಆಯುಕ್ತ ಟಿ. ಭೂಬಾಲನ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಹುದ್ದೆಗೆ ನೇಮಕಗೊಂಡು ಶನಿವಾರ ಅಧಿಕಾರವಹಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅಧೀಕ್ಷರ ಇಂಜಿನಿಯರ್ ಮಹೇಶ್, ಮುಖ್ಯ ಲೆಕ್ಕಾಧಿಕಾರಿ ಗುರುಬಸವೇಗೌಡ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಗುಬ್ಬಿ: ನಾನು ಕಷ್ಟಪಟ್ಟು ದುಡಿದವ, ನನ್ನ ಶ್ರಮ ನನ್ನ ಜೊತೆ ಇದೆ. ಶ್ರಮಪಟ್ಟು ನಡೆಸಿದ ಉದ್ದಿಮೆಯೇ ಇಂದು ನನ್ನ ಜೀವನ ರೂಪಿಸಿದೆ. ಆಗಾಗಿ ನನಗೆ ಒಂದು ವೃತ್ತಿ ಎಂಬುದು ಇದೆ. ಆದರೆ, ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿ ಅಲ್ಲಿಯೇ ಪೆಟ್ರೋಲ್ ಕದ್ದ ಮಾಜಿ ಶಾಸಕ ಕೃಷ್ಣಪ್ಪರ ವೃತ್ತಿ ಜೀವನ ಎಂತಹದು ಎಂದು ಜನಕ್ಕೆ ತಿಳಿದಿದೆ ಎಂದು ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಲೇವಡಿ ಮಾಡಿದರು. ತಾಲ್ಲೂಕಿನ ಸಿ.ಎಸ್.ಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, 15 ವರ್ಷಗಳಿಂದ ಜನಪರ ಕೆಲಸ ಮಾಡದೇ ಈಚೆಗೆ ನಾನು ಮಾಡಿದ ಅಭಿವೃದ್ಧಿ ಕೆಲಸವನ್ನು ನನ್ನದು ಎಂದು ಬಿಂಬಿಸಿಕೊಳ್ಳಲು ಮುಂದಾದ ಮಾಜಿ ಶಾಸಕ ಕೃಷ್ಣಪ್ಪ ದಲ್ಲಾಳಿ ಕೆಲಸವನ್ನು ಮಾಡಿ ಗುತ್ತಿಗೆದಾರರನ್ನು ಸುಲಿಗೆ ಮಾಡಿದ್ದು ಒಪನ್ ಸೀಕ್ರೇಟ್. ನನ್ನ ಬಗ್ಗೆ ಮಾತನಾಡುವ ಮುನ್ನ ಜವಾಬ್ದಾರಿ ಸ್ಥಾನದಲ್ಲಿದ್ದು ಹರಿದ ಬಾಯಿಗೆ ಮೊದಲು ಹೊಲಿಗೆ ಹಾಕಿಕೊಳ್ಳಲಿ ಎಂದು ಕಿಡಿಕಾರಿದರು. ಗ್ರಾಮ ಪಂಚಾಯಿತಿ…
ಮಧುಗಿರಿ: ತಾಲ್ಲೂಕಿನಲ್ಲಿ ಒಂದೊಂದೇ ಕಂಟಕಗಳು ಜನತೆಗೆ ಸಂಕಟವನ್ನು ತಂದಿಟ್ಟಿದ್ದು, ಗುರುವಾರ ಒಂದು ಪ್ರಕರಣ ಧೃಢವಾಗಿದೆ. ಇತ್ತೀಚಿಗೆ ತುಮಕೂರಿನಲ್ಲಿ ಕರೊನಾ ಸೋಂಕಿನಿಂದ ಮಧುಗಿರಿ ಮೂಲದ ಟೈಲರ್ ಒಬ್ಬರು ಮೃತಪಟ್ಟಿದ್ದರು . ಅವರ ಸಂಪರ್ಕದ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಪಟ್ಟಣದ ಕೆ.ಹೆಚ್ ರಸ್ತೆಯಲ್ಲಿರುವ ಮೆಡಿಕಲ್ ಸ್ಟೋರ್ ನ 56ವರ್ಷದ ವ್ಯಕ್ತಿಗೆ ಕರೊನಾ ಸೋಂಕು ತಗುಲಿದೆ. ಈ ವ್ಯಕ್ತಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಇದನ್ನು ಸರಿಯಾಗಿ ಪಾಲಿಸಿರಲಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಆತ ವಾಸವಿದ್ದ ಜಾಮಿಯಾ ಮಸೀದಿ ಮುಂಭಾಗದ ರಸ್ತೆ ಏರಿಯಾವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ವಿಶ್ವನಾಥ್, ತಾಲೂಕು ಆರೋಗ್ಯಾಧಿಕಾರಿ ರಮೇಶ್ ಬಾಬು, ಪಿಎಸ್ಸೈ ಕಾಂತರಾಜು ಭೇಟಿ ನೀಡಿದ್ದರು. ಬುಧವಾರ 4 ಪ್ರಕರಣ : ತಾಲ್ಲೂಕಿನಲ್ಲಿ ಇಂದು ನಾಲ್ಕು ಪ್ರಕರಣಗಳು ಕೂವೀಡ್ ಸೋಂಕೀತ ಪ್ರಕರಣಗಳು ದಾಖಲಾಗಿದ್ದು…
ತುಮಕೂರು: ಪ್ರಯೋಗಾಲಯಕ್ಕೆ ಕಳುಹಿಸಿದ್ದ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆಯ ಗೊಲ್ಲರಹಟ್ಟಿಯ ಮೇಕೆಗಳ ವರದಿಗಳು ನೆಗೆಟಿವ್ ಬಂದಿದ್ದು, ಕುರಿಗಾಹಿಗಳು ಹಾಗೂ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲವೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ: ಕೆ.ಜಿ. ನಂದೀಶ್ ಅವರು ತಿಳಿಸಿದ್ದಾರೆ. ಕುರಿಗಾಹಿಯೊಬ್ಬನಿಗೆ ಕೊರೋನಾ ಸೋಂಕು ಧೃಡಪಟ್ಟಿರುವುದರಿಂದ ಅಕ್ಕ-ಪಕ್ಕದ ಗ್ರಾಮಸ್ಥರಲ್ಲಿ ಆತಂಕವಾಗಿದ್ದು, ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಕುರಿಗಾಹಿಗೆ ಸೇರಿದ್ದ 40 ರಿಂದ 45 ಮೇಕೆಗಳಲ್ಲಿ ಹಾಗೂ ಪಕ್ಕದ ರೈತರ ಮೇಕೆಗಳ ಪೈಕಿ 10 ಹೆಚ್ಚು ಮೇಕೆಗಳ ಗಂಟಲು ದ್ರವವನ್ನು ಸಂಗ್ರಹಿಸಿ, ಬೆಂಗಳೂರಿನ I H B ಗೆ 5 ಮಾದರಿ ಹಾಗೂ ಭೂಪಾಲ್ ಲ್ಯಾಬ್ಗೆ 5 ಮಾದರಿ ಕಳುಹಿಸಿಕೊಡಲಾಗಿತ್ತು. ಬೆಂಗಳೂರಿನ ಲ್ಯಾಬ್ನಿಂದ ವರದಿ ನೆಗೆಟಿವ್ ಎಂದು ಬಂದಿದೆ. ಪ್ರಪಂಚದಲ್ಲಿ ಇಲ್ಲಿಯವರೆಗೂ ಕೂಡ ಕುರಿ ಮತ್ತು ಮೇಕೆಗಳಿಗೆ ಕೋವಿಡ್-19 ರೋಗ ಕಂಡು ಬಂದಿರುವುದಿಲ್ಲ. ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಯಾವುದೇ…
ಪಾವಗಡ: ಪಾವಗಡ ತಾಲ್ಲೂಕು ಕಸಬಾ ಹೋಬಳಿ ಬ್ಯಾಡನೂರು ಗ್ರಾಮದ ಶ್ರೀ ಶಂಕರಲಿಂಗಕೆರೆಯನ್ನು ಬಹಿರಂಗ ಹರಾಜು ಹಾಕದೇ ಮೀನುಗಾರಿಕಾ ಇಲಾಖೆ ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಅವ್ಯವಹಾರ ಎಸಗಿದ್ದಾರೆ ಎಂದು ಅರೋಪಿಸಿ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಸಂಘದ ವತಿಯಿಂದ ಶುಕ್ರವಾರ ಪಟ್ಟಣದ ಮೀನುಗಾರಿಕಾ ಇಲಾಖೆಗೆ ಮುತ್ತಿಗೆ ಹಾಕಿ ಅಕ್ರೋಶ ವ್ಯಕ್ತಪಡಿಸಿದ ಘಟನೆ ಜರುಗಿದೆ. ಮುತ್ತಿಗೆಯ ನೇತೃತ್ವವನ್ನು ವಹಿಸಿದ್ದ ತಾಲ್ಲೂಕು ರೈತ ಮತ್ತು ಹಸಿರುಸೇನೆ ಸಂಘದ ಅಧ್ಯಕ್ಷ ಪೂಜಾರಪ್ಪ ಮಾತನಾಡಿ, ಬ್ಯಾಡನೂರು ಗ್ರಾಮದ ಶ್ರೀಶಂಕರಲಿಂಗನ ಕೆರೆಯನ್ನು 2014-15 ನೇ ಸಾಲಿನಲ್ಲಿ ಸಂಚಪ್ಪ ಎನ್ನುವರಿಗೆ ಮೀನು ಸಾಕಿ ಮಾರಾಟ ಮಾಡಲು ಟೆಂಡರ್ ನೀಡಿ ಇಲ್ಲಿಗೆ ಐದು ವರ್ಷವಾಗಿತ್ತು, 2019- ರಿಂದ 2020 ರವರೆಗೂ ಪುನಃ ಅವರಿಗೆ ರೀನಿವಲ್ ನೀಡಲಾಗಿತ್ತು. ಅದರೆ ಹೀಗ 2020-21 ನೇ ಸಾಲಿಗೆ ಮತ್ತೆ ಸಂಚಪ್ಪನಿಗೆ ರಿನೆವಲ್ ಮಾಡಲಾಗಿದೆ. ಕರೋನಾ ಲಾಕ್ ಡೌನ್ ಹಿನ್ನಲೆಯಲ್ಲೂ ಸಂಚಪ್ಪ ಕೆ.ಜಿ ಮೀನು 300 ರೂಗಳಿಗೆ ಮಾರಾಟ ಮಾಡಿದ್ದಾರೆ ತಕ್ಷಣ…
ತುಮಕೂರು: ತುಮಕೂರು ಜಿಲ್ಲೆಯಲ್ಲಿ 3.7.2020ರ ಸಂಜೆಯ ವರದಿಯ ಪ್ರಕಾರ ಶುಕ್ರವಾರ ಒಂದೇ ದಿನ 25 ಪ್ರಕರಣಗಳು ಕೋವಿಡ್ – 19 ಸೋಂಕಿನಿಂದ ದೃಢಪಟ್ಟಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದು, ಕೋವಿಡ್-19 ಸೋಂಕು ಆರಂಭವಾದ ದಿನದಿಂದ ಇಂದಿನವರೆಗೆ 208 ಪ್ರಕರಣಗಳು ಪತ್ತೆಯಾಗಿದ್ದು, ಅವುಗಳ ಪೈಕಿ ಐಸಿಯುನಲ್ಲಿ 4 ಪ್ರಕರಣಗಳು ದಾಖಲಾಗಿದ್ದು, 141 ಪ್ರಕರಣಗಳು ಸಕ್ರಿಯ ಪ್ರಕರಣಗಳಾಗಿ ಚಿಕಿತ್ಸಾ ಹಂತದಲ್ಲಿವೆ. ಆಸ್ಪತ್ರೆಯಿಂದ 60 ಪ್ರಕರಣಗಳು ಬಿಡುಗಡೆ ಹೊಂದಿದು ಶುಕ್ರವಾರದಂದು 11 ಪ್ರಕರಣಗಳು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. ಇದುವರೆವಿಗೂ 7 ಜನ ಕೋವಿಡ್ ಸೋಂಕಿತ ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು 19540 ಕಫದ ಮಾದರಿಯನ್ನು ಪರೀಕ್ಷಿಸಿದ್ದು, 15756 ಮಾದರಿಗಳು ನೆಗಿಟೀವ್ ಬಂದಿರುತ್ತವೆ. 1395 ಜನರನ್ನು ನಿಗಾವಣೆಯಲ್ಲಿ ಇರಿಸಲಾಗಿದೆ. 208 ಪ್ರಕರಣಗಳು ಕೋವಿಡ್-19 ಸೋಂಕಿ ತರೆಂದು ವರದಿ ದೃಢಪಟ್ಟಿದೆ. ಶುಕ್ರವಾರ ಪಾಸಿಟೀವ್ ವರದಿ ಬಂದಿದೆ ಎಂದು ಅಧಿಕೃತವಾಗಿ ದೃಢಪಡಿಸಿರುವ ಆರೋಗ್ಯ ಇಲಾಖೆಯ ಪಟ್ಟಿಯಲ್ಲಿ ಕೊರಟಗೆರೆ-3,…










