Author: News Desk Benkiyabale

ಹುಳಿಯಾರು: ಹುಳಿಯಾರು ಹೋಬಳಿಯ ಕಂಪನಹಳ್ಳಿ ವ್ಯಾಪ್ತಿಯಲ್ಲಿರುವ ತೋಟದ ಮನೆಗಳಿಗೆ ಕಳೆದ ಹದಿನೈದಿಪ್ಪತ್ತು ದಿನಗಳಿಂದ ಹಗಲುರಾತ್ರಿ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆಯಾಗದೆ ನಿವಾಸಿಗಳಿಗೆ ತೊಂದರೆಯಾಗಿದ್ದು ರಾತ್ರಿ ವೇಳೆಯಾದರೂ ಸಿಂಗಲ್ ಫೇಸ್ ವಿದ್ಯುತ್ ಕೊಡಿ ಎಂದು ಇಲ್ಲಿನ ನಿವಾಸಿಗಳು ಸೋಮವಾರ ಬೆಸ್ಕಾಂ ಎಸ್‌ಒ ರಘುರಾಮ್ ಅವರಿಗೆ ಮನವಿ ಮಾಡಿದರು. ಕಂಪನಹಳ್ಳಿ ಸುತ್ತಮತ್ತಲಿನಲ್ಲಿ ಹದಿನೈದಿಪ್ಪತ್ತು ರೈತರು ಕುಟುಂಬ ಹಾಗೂ ಜಾನುವಾರುಗಳೊಂದಿಗೆ ಜಮೀನು ಗಳಲ್ಲೇ ನಿರ್ಮಿಸಿರುವ ಮನೆಗಳಲ್ಲಿ ವಾಸವಾಗಿದ್ದಾರೆ. ಜಮೀನಿನಲ್ಲಿರುವ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಇದೆ. ಇವುಗಳಿಗೆ ದಿನದಲ್ಲಿ ಹಗಲಿನಲ್ಲಿ ಮಧ್ಯಾಹ್ನ, ರಾತ್ರಿ ವೇಳೆಯಲ್ಲಿ ಮಧ್ಯರಾತ್ರಿ ಮೂರು ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಉಳಿದ ಸಮಯದಲ್ಲಿ ವಿದ್ಯುತ್ ಇರುವುದಿಲ್ಲ ಎಂದರು. ರೈತರ ತೋಟದ ಮನೆಗಳಿಗೆ ಪಂಪ್‌ಸೆಟ್‌ಗಳಿಗೆ ಪೂರೈಕೆಯಾಗುವಾಗ ಮಾತ್ರ ವಿದ್ಯುತ್ ಲಭ್ಯವಿರುತ್ತದೆ. ಉಳಿದ ಸಮಯದಲ್ಲಿ ಇರುವುದಿಲ್ಲ. ಇದರಿಂದ ರಾತ್ರಿ ಸಮಯದಲ್ಲಿ ಗೃಹಿಣಿಯರ ಅಡುಗೆ, ಮಕ್ಕಳ ವಿದ್ಯಾಬ್ಯಾಸಕ್ಕೆ ಭಾರಿ ತೊಂದರೆಯಾಗಿದೆ ಎಂದು ತಿಳಿಸಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಓದುತ್ತಿರುವ ಇಪ್ಪತ್ತಕ್ಕೂ ಹೆಚ್ಚು ಮಕ್ಕಳಿದ್ದಾರೆ. ಈಗ ಪರೀಕ್ಷೆ ಸಮಯವಾಗಿರುವುದರಿಂದ ರಾತ್ರಿ…

Read More

ತುಮಕೂರು: ಕಳೆದ ಎಂಟು ದಿನಗಳಿಂದ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಅಡಳಿತ ಅಧಿಕಾರಿಗಳ ಸಂಘ, ಕೇಂದ್ರ ಸಮಿತಿಯ ನಿರ್ದೇಶಕನದ ಮೇರೆಗೆ ಮುಷ್ಕರ ಕೈಗೊಂಡಿದ್ದರೂ ಸರಕಾರ ಇದುವರೆಗೂ ನಮ್ಮ ಬೇಡಿಕೆಗಳ ಈಡೇರಿಸಲು ಗಮನಹರಿಸಿರುವುದಿಲ್ಲ ಎಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಎಸ್‌ಚಿ.ದೇವರಾಜು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕಳೆದ ಎಂಟು ದಿನಗಳಲ್ಲಿ ಮೂಲಭೂತ ಸೌಕರ್ಯ, ಬಡ್ತಿ, ಅಂತರ ಜಿಲ್ಲಾ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತಿದ್ದೇವೆ. ಆದರೆ ಸರಕಾರದ ಪ್ರತಿನಿಧಿಗಳಿಂದ ಇದುವರೆಗೂ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ.ಹಾಗಾಗಿ ಮುಷ್ಕರವನ್ನು ಮುಂದುವರೆಸುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ನಾವು ಸರಕಾರಕ್ಕೆ ಹೊರೆಯಾಗುವಂತಹ ಯಾವ ಬೇಡಿಕೆಗಳನ್ನು ಮುಂದಿಟ್ಟಿಲ್ಲ.ಬದಲಾಗಿ, ನಮ್ಮ ಮೇಲಿರುವ ಹೊರೆಯನ್ನು ಇಳಿಸಿ ಎಂದು ಕೇಳುತಿದ್ದೇವೆ ಎಂದರು. ಸರಕಾರದ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು, ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಮಿತಿಯ ಸದಸ್ಯರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದರೂ, ಬೇಡಿಕೆಗಳ ಈಡೇರಿಕೆಯ ಬಗ್ಗೆ ಸ್ಪಷ್ಟ…

Read More

ತುಮಕೂರು: ನಗರದ ಟೌನ್ ಹಾಲ್ ವೃತ್ತದ ಬಳಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಶನಿವಾರ ಹೆಲಿಕಾಪ್ಟರ್ ವೇದಿಕೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಜಿಲ್ಲೆಯ ಗುಬ್ಬಿ ತಾಲ್ಲೂಕು ಬಿದರೆಹಳ್ಳದ ಬಳಿ ಹೆಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕದ ಕುರುಹಾಗಿ ಪಾಲಿಕೆ ಕಚೇರಿಯ ಹೊರ ಆವರಣದಲ್ಲಿ 30ಲಕ್ಷ ರೂ. ವೆಚ್ಚದಲ್ಲಿ ಹೆಲಿಕಾಪ್ಟರ್ ಅನ್ನು ಪ್ರದರ್ಶಿಸಲು ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲೆಯ ಹಾಗೂ ಹೊರಗಿನಿಂದ ಬರುವವರಿಗೂ ಜಿಲ್ಲೆಯಲ್ಲಿರುವ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಬಗ್ಗೆ ಮಾಹಿತಿ ತಿಳಿಯಲಿದೆ ಎಂದು ತಿಳಿಸಿದರು. ಹೆಲಿಕಾಪ್ಟರ್ ಘಟಕದ ಕುರುಹಾಗಿ 50 ಲಕ್ಷ ರೂ. ಮೌಲ್ಯದ ಲೈಟ್ ಯುಟಿಲಿಟಿ ಹೆಲಿಕಾಪ್ಟರ್ (ಐighಣ Uಣiಟiಣಥಿ ಊeಟiಛಿoಠಿಣeಡಿ)ಅನ್ನು ಪ್ರದರ್ಶಿಸಲಾಗುವುದು. ಹೆಲಿಕಾಪ್ಟರ್ ಪ್ರದರ್ಶನಕ್ಕಾಗಿ 5 ಅಡಿ ಎತ್ತರ ಹಾಗೂ 50 ಅಡಿ ವ್ಯಾಸದ ಸುತ್ತುವ ವೇದಿಕೆ(ಖoಣಚಿಣioಟಿ Pಟಚಿಣಜಿoಡಿm)ಯನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ನಂತರ ಮಾತನಾಡಿದ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಬಿದರೆಹಳ್ಳದಲ್ಲಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯವರು…

Read More

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶಗೌಡ,ಹಿರಿಯ, ಸಜ್ಜನ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಬಗ್ಗೆ ತೀರಾ ಅವಹೇಳನಕಾರಿಯಾಗಿ ಮಾತನಾಡುವುದು ತರವಲ್ಲ. ಇದನ್ನು ನಾನು ಖಂಡಿಸುತ್ತೇನೆ. ತಮ್ಮ ಹೇಳಿಕೆ ಬಗ್ಗೆ ಕೊರಟಗೆರೆ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದ ಜನತೆಯ ಕ್ಷಮೆಯಾಚಿಸಬೇಕು ಎಂದು ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಸಲಹೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಗೃಹ ಹಾಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಒಬ್ಬರ ಬಗ್ಗೆ ಅಸಮಾಧಾನ ಇದ್ದರೆ ಅದನ್ನು ಬಹಿರಂಗವಾಗಿ ಎಂದು ವ್ತಕ್ತಪಡಿಸುವುದಿಲ್ಲ.ಐದು ಬಾರಿ ಶಾಸಕರಾಗಿ ಮಂತ್ರಿಯಾಗಿ, ಡಿಸಿಎಂ ಆಗಿ ಕೆಲಸ ಮಾಡಿದ ಅಂತಹ ವ್ಯಕ್ತಿಯನ್ನು ಹಿಯಾಳಿಸುವಂತೆ ಮಾತನಾಡುವುದು ಸರಿಯಲ್ಲ. ಟೀಕೆಗಳು ಇರಲಿ ಅದು ವಯುಕ್ತಿಕ ಮಟ್ಟಕ್ಕೆ ಇಳಿಯಬಾರದು. ಈ ನಿಟ್ಟಿನಲ್ಲಿ ಗ್ರಾಮಾಂತರ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರಿಬ್ಬರುವ ವೈಯುಕ್ತಿಕ ಮಟ್ಟದ ಆರೋಪ, ಪ್ರತ್ಯಾರೋಪ ಕೈಬಿಡಬೇಕು. ಟೀಕೆ ಸಂದರ್ಭದಲ್ಲಿ ಪದ ಬಳಕೆ ಇನ್ನೊಬ್ಬರಿಗೆ ನೋವಾಗದಂತೆ ಎಚ್ಚರ ವಹಿಸುವುದು ಸೂಕ್ತ ವೆಂದರು. ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ತನ್ನದೇ ಆದ ಘನತೆ ಗೌರವವಿದೆ.1962 ರಿಂದಲೂ…

Read More

ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಶನಿವಾರ ನಗರದ ಪಿಎನ್‌ಆರ್ ಪಾಳ್ಯದಲ್ಲಿ ಪಾಲಿಕೆ ವತಿಯಿಂದ ಹೊಸದಾಗಿ ನಿರ್ಮಿಸಲಾಗಿರುವ ನೀರಿನ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪಿಎನ್‌ಆರ್ ಪಾಳ್ಯದಲ್ಲಿರುವ 50 ದಶ ಲಕ್ಷ ಮೀಟರ್ ಸಾಮರ್ಥ್ಯದ ಜಲಶುದ್ಧೀಕರಣ ಘಟಕದಲ್ಲಿ 7ಲಕ್ಷ ರೂ. ವೆಚ್ಚದಲ್ಲಿ ಈ ಪ್ರಯೋಗಾಲಯವನ್ನು ನಿರ್ಮಿಸಲಾಗಿದ್ದು, ಪ್ರಯೋಗಾಲಯದಲ್ಲಿ ನಗರದ ನಾಗರಿಕರಿಗೆ ಸರಬರಾಜಾಗುವ ಮುನ್ನವೇ ನೀರನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಈ ಪ್ರಕ್ರಿಯೆಯಿಂದ ನೀರಿನಿಂದ ಹರಡುವ ಅನೇಕ ಜಲಜನ್ಯ ಖಾಯಿಲೆಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು. ಸ್ಥಳದಲ್ಲಿ ಹಾಜರಿದ್ದ ರಾಸಾಯನ ತಜ್ಞ ಬಿ.ಕೆ.ದೇವರಾಜು ಪ್ರಯೋಗಾಲಯದಲ್ಲಿ ನೀರಿನ ತಾಪಮಾನ, ವಾಸನೆ, ಬಣ್ಣ, ರುಚಿ, ಪವರ್ ಆಫ್ ಹೈಡ್ರೋಜನ್(Pಊ), ಟರ್ಬಿಲಿಟಿ, ಟಿಡಿಎಸ್, ಸಾಲಿಡ್, ಟೋಟಲ್ ಡಿಸಾಲ್ವ್ ಸೇರಿದಂತೆ ಭೌತಿಕ, ರಾಸಾಯನಿಕ ಹಾಗೂ ಜೈವಿಕ ನಿಯತಾಂಕ(Pಚಿಡಿಚಿmeಣeಡಿ)ಗಳನ್ನು ಪರೀಕ್ಷಿಸಲಾಗುವುದು ಎಂದು ನೀರಿನ ಗುಣಮಟ್ಟ ಪರೀಕ್ಷೆ ಕುರಿತು ಸಚಿವರಿಗೆ ವಿವರಿಸಿದರು. ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮಾತನಾಡಿ, ಪ್ರಸ್ತುತ ನಗರದಲ್ಲಿ…

Read More

ತುರುವೇಕೆರೆ: ತಾಲೂಕಿನ ಬಾಣಸಂದ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅದ್ಯಕ್ಷರಾಗಿ ದುಂಡದೊರೆರಾಜ್ ಹಾಗೂ ಉಪಾದ್ಯಕ್ಷರಾಗಿ ಕೋಡಿಹಳ್ಳಿ ಸಾವಿತ್ರಮ್ಮ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ದುಂಡ ದೊರೆರಾಜ್ ಅವರಿಗೆ 7 ಸದಸ್ಯರ ಮೂಲಕ ಆಯ್ಕೆಯಾದರು. ಅದರಂತೆ ಉಪಾದ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೋಡಿಹಳ್ಳಿ ಸಾವಿತ್ರಮ್ಮ ಅವರಿಗೂ 7 ಸದಸ್ಯರ ಮೂಲಕ ಆಯ್ಕೆಯಾದ ಹಿನ್ನಲೆ ಅಧ್ಯಕ್ಷ ಸ್ಥಾನಕ್ಕೆ ದುಂಡ ದೊರೆರಾಜ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೋಡಿಹಳ್ಳಿ ಸಾವಿತ್ರಮ್ಮ ಆಯ್ಕೆಯಾಗಿದ್ದಾರೆಂದು ಚುನಾವಣಾದಿಕಾರಿಗಳು ಘೋಷಿಸಿದರು. ಚುನಾವಣಾದಿಕಾರಿಯಾಗಿ ಸಿಡಿಓ ಶ್ರೀನಿವಾಸ್ ಕರ್ತವ್ಯ ನಿರ್ವಹಿಸಿದರು. ನೂತನ ಅದ್ಯಕ್ಷ, ಉಪಾಧ್ಯಕ್ಷ ಬೆಂಬಲಿಗರು ಸಿಹಿ ಹಂಚಿ ಪಠಾಕಿ ಸಿಡಿಸಿ ಸಂಬ್ರಮ ವ್ಯಕ್ತಪಡಿಸಿದರು. ಸಹಕಾರ ಸಂಘದ ನಿರ್ದೇಶಕರುಗಳಾದ ನಾಗರಾಜು, ಜಿ.ಸಿ.ನಿಜಗುಣಮೂರ್ತಿ, ಬೈರಪ್ಪಾಜಿ ಹೆಚ್.ಎಸ್., ಡಿ.ಆರ್.ಶಿವರಾಮಯ್ಯ. ಸಂತೋಷ್ ಕಂಟ್ಲಿ, ಮಾಜಿ ಸದಸ್ಯ ಹನುಮೇಗೌಡ, ಗ್ರಾ.ಪಂ.ಸದಸ್ಯರಾದ ದುಂಡ ನವೀನ್, ಬಾಣಸಂದ್ರ ಪ್ರಕಾಶ್, ಮುಖಂಡರಾದ ರಾಜಣ್ಣ, ಉಮೇಶ್, ಯೋಗೀಶ್, ಉದಯ್ ಕುಮಾರ್, ಶ್ರೀನಿವಾಸ್, ಅಶೋಕ್ ಕುಮಾರ್, ಮೇಲ್ವಿಚಾರಕರಾದ ಹರ್ಷ ಸೇರಿದಂತೆ ಬ್ಯಾಂಕ್ ಸಿಬ್ಬಂದಿ…

Read More

ತುಮಕೂರು: ದಿಯಾ ಸಂಸ್ಥೆಯಿAದ ನಿಸ್ವಾರ್ಥ ಸೇವೆಯನ್ನು ಸಮಾಜಕ್ಕೆ ನೀಡುತ್ತಿದ್ದು ಇವರ ಕಾರ್ಯವೈಖರಿಯಿಂದ ಸಮಾಜದಲ್ಲಿ ಅನೇಕರಿಗೆ ನಿಸ್ವಾರ್ಥ ಸೇವೆ ಸಲ್ಲಿಸಲಿಕ್ಕೆ ಮಾದರಿಯಾಗಿದ್ದಾರೆ ಎಂದು ನಿವೃತ್ತರ ಮಹಾಮನೆ ಅಧ್ಯಕ್ಷರಾದ ಬಾ.ಹ. ರಮಾಕುಮಾರಿರವರು ತಿಳಿಸಿದರು. ನಗರದ ಕೆ. ಆರ್. ಬಡಾವಣೆಯಲ್ಲಿರುವ ದಿಯಾ ಚಾರಿಟಬಲ್ ಟ್ರಸ್ಟ್ ಇಂಡಿಯಾ ಕಚೇರಿ ಮುಂಭಾಗದಲ್ಲಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಕಂಬಳಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ದಿಯಾ ಸಂಸ್ಥೆಯ ನಿಸ್ವಾರ್ಥ ಸೇವೆ ನನಗೆ ಸೇವೆ ಸಲ್ಲಿಸಲಿಕ್ಕೆ ಪ್ರೇರಣೆಯಾಗಿದ್ದು , ಟ್ರಸ್ಟ್ ನ ಸಂಸ್ಥಾಪಕರಾದ ಡಾ.ಇಮ್ಯಾನುಯಾಲ್ ಜಯಕುಮಾರ್ ಅವರ ಕುಟುಂಬ ಸಮೇತರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ನನಗೆ ಖುಷಿ ತಂದಿದೆ ಎಂದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಶಿಲ್ಪ ದೊಡ್ಡಮನೆ ರವರು ಮಾತನಾಡಿ ಸಮಾಜದಲ್ಲಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ದಿಯಾ ಚಾರಿಟಬಲ್ ಟ್ರಸ್ಟ್ ಇಂಡಿಯಾ ಏಕೈಕ ಸಂಸ್ಥೆಯಾಗಿದೆ. ನಮ್ಮ ಇಲಾಖೆಯಿಂದ ಕೆಲವರಿಗೆ ಮಾತ್ರ ಸೇವೆ ಒದಗಿಸಲಿಕ್ಕೆ ಸಾಧ್ಯ, ದಿಯಾ…

Read More

ತುಮಕೂರು: ನಗರದ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ದಂತ ಕಾಲೇಜಿನ ಪ್ರೊಸ್ತೋಡಾಂಟಿಕ್ಸ್ ಮತ್ತು ಕ್ರೌನ್ & ಬ್ರಿಡ್ಜ್ ವಿಭಾಗ ಹಾಗೂ ಭಾರತೀಯ ಪ್ರಾಸ್ತೋಡಾಂಟಿಕ್ ಸೊಸೈಟಿಯ ಸಹಯೋಗದೊಂದಿಗೆ ಪ್ರೊಸ್ತೋಡಾಂಟಿಕ್ಸ್ ದಿನಾಚರಣೆಯ ಅಂಗವಾಗಿ ‘ಕೃತಕ ಹಲ್ಲುಗಳÀ ಜೋಡಣೆ ಮತ್ತು ಮುಖ ಸೌಂದರ್ಯದ ಪುನರ್ ಸ್ಥಾಪನೆ ಕುರಿತ’ ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾಗಾರವನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಾಗಾರವನ್ನು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಅವರು ಉದ್ಘಾಟಿಸಿ, ಮುಖ ಸೌಂದರ್ಯದ ಪುನರ್ ಸ್ಥಾಪನೆ ಮತ್ತು ಹಲ್ಲುಗಳ ಬದಲಿ ಜೋಡಣೆಯಲ್ಲಿ ದಂತ ವೈದ್ಯರ ಪಾತ್ರ ಮುಖ್ಯವಾಗಿರುತ್ತದೆ. ಅವರು ಪರಿಣಿತಿಯಿಂದಾಗಿ ವಿಪತ್ತುಗಳಂದ ಹಾನಿಗೊಳಗಾದ ಹಲ್ಲುಗಳ ಬದಲಿಗೆ ಕೃತಕ ಹಲ್ಲುಗಳನ್ನು ಜೋಡಿಸಿ, ನಿರ್ವಹಿಸಲು ಮತ್ತು ದಂತ ಹದಗೆಡುವುದನ್ನು ತಡೆಯಲು ಆಧುನಿಕ ಚಿಕಿತ್ಸಾ ಕ್ರಮಗಳನ್ನು ಅನುಸರಿಸಿ ಚಿಕಿತ್ಸೆ ನೀಡುತ್ತಾರೆ ಎಂದರು. ಕಾರ್ಯಾಗಾರದಲ್ಲಿ ಪ್ರಾಸ್ತವಿಕ ನುಡಿಗಳನ್ನಾಡಿದ ಶ್ರೀ ಸಿದ್ದಾರ್ಥ ದಂತ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರವೀಣ್ ಕುಡುವಾ, ದಂತ ಸಂರಕ್ಷಣೆಯಿAದ ಮುಖ ಸೌಂದರ್ಯ ಕಾಪಾಡಿಕೊಳ್ಳಲು ಸಾಧ್ಯ. ಒಂದು ವೇಳೆ ದುರಂತ…

Read More

ಚಿಕ್ಕನಾಯಕನಹಳ್ಳಿ: ಪ್ರಧಾನಮಂತ್ರಿ ಸುರಕ್ಷಾಭೀಮ ವಿಮಾ ಯೋಜನೆಯಲ್ಲಿ ಕೇವಲರೂ.20 ತೊಡಗಿಸಿದರೆ ಆಕಸ್ಮಿಕ ಮರಣಕ್ಕೆ ರೂ.2ಲಕ್ಷ ದೊರೆಯಲಿದೆ ಎಂದು ಆರ್ಥಿಕ ಸಾಕ್ಷರಥಾ ಕೇಂದ್ರದ ಸಲಹೆಗಾರ ಆರ್.ಎಂ. ಕುಮಾರಸ್ವಾಮಿ ತಿಳಿಸಿದರು. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ದುಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಚಿಹಳ್ಳಿ ಗ್ರಾಮದಲ್ಲಿ ನಡೆದ ಜನಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಕೇಂದ್ರ ಸರ್ಕಾರ ಸಾಮಾನ್ಯಜನರ ಅನುಕೂಲಕ್ಕಾಗಿ ಸಾಕ್ಷಷ್ಟು ಯೋಜನೆಗಳನ್ನು ನೀಡಿದೆ. ಬ್ಯಾಂಕ್ ಮೂಲಕ ರೈತರಿಗಾಗಿ ಕಿಸಾನ್ ಕ್ರೆಡಿಟ್ ಯೋಜನೆ, ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ಹಾಗೂ ಸುಲಭಕಂತುಗಳ ಹಲವು ವಿಮಾಯೋಜನೆ ಸೌಲಭ್ಯ ನೀಡಿದೆ. ಇದರಲ್ಲಿ ಬ್ಯಾಂಕ್ ಮೂಲಕ ಕೇವಲ ರೂ.20 ಕಂತನ್ನು ಪ್ರಧಾನ ಮಂತ್ರಿ ಸುರಕ್ಷಾಭೀಮಯೋಜನೆಯಲ್ಲಿಆಕಸ್ಮಿಕ ಮರಣಕ್ಕೆ ರೂ. 2 ಲಕ್ಷ ನೀಡಲಾಗುತ್ತೆ ಎಂದರು. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆಯಲ್ಲಿ 436ರೂ. ಕಂತು ಕಟ್ಟಿದರೆ ಸಹಜ ಸಾವುಗಳಿಗೂಸಹ ರೂ.2ಲಕ್ಷ ದೊರೆಯಲಿದೆ ಎಂದರು. ಇದೇ ಸಂದರ್ಭದಲ್ಲಿ ಮಹಾವೀರ್ ಜೈನ್ ಆಸ್ಪತ್ರೆಯ ಸಹಯೋಗದಲ್ಲಿ ಮಂಜುನಾಥ್ ಆರಾದ್ಯರವರ ನೇತೃತ್ವದಲ್ಲಿ ಆರೋಗ್ಯ ಉಚಿತ ತಪಾಸಣೆ ನಡೆಸಲಾಯಿತು. ತಪಾಸಣೆಯಲ್ಲಿ…

Read More

ತುಮಕೂರು: ಕಳಪೆ ಗುಣಮಟ್ಟದ ಔಷಧಿಗಳ ಪೂರೈಕೆಯಿಂದ ಕರ್ನಾಟಕ ವಿವಿಧ ಜಿಲ್ಲಾಸ್ಪತ್ರಗಳಲ್ಲಿ ಬಾಣಂತಿಯರ ಸಾವುಗಳು ಸಂಭವಿಸುತ್ತಿವೆ. ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಾಣಂತಿಯರ ಸಾವು ಪ್ರಕರಣಗಳು ಘಟಿಸುತ್ತಿರುವುದು ಕರ್ನಾಟಕದಲ್ಲಿ, ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಫೆ.3 ರಂದು ಬೀದರ್ ನಿಂದ ಶುರುವಾದ ‘ಆರೋಗ್ಯ ಹಕ್ಕಿನ ಜಾಥಾ’ ಫೆ.14 ರಂದು ಬೆಂಗಳೂರು ತಲುಪಲಿದೆ ಎಂದು ಡ್ರಗ್ ಎಕ್ಷನ್ ಪೋರಂ ನ ಸಂಸ್ಥಾಪಕ ಸದಸ್ಯ ಡಾ.ಗೋಪಾಲ ದಾಬಡೆ ತಿಳಿಸಿದರು. ನಗರದ ವಿಜ್ಞಾನ ಕೇಂದ್ರದಲ್ಲಿ ಟ್ರಗ್ ಎಕ್ಷನ್ ಪೋರಂ ಕರ್ನಾಟಕ ಹಾಗೂ ಸಾರ್ವತ್ರಿಕ ಆರೋಗ್ಯ ಕರ್ನಾಟಕದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತೆಗಲ್ಲಿ 400ಕ್ಕೂ ಹೆಚ್ಚು ಕಳಪೆ ಔಷಧಗಳು ಬಳಕೆಯಾಗುತ್ತಿವೆ. ತಮಿಳುನಾಡು ರಾಜ್ಯದಲ್ಲಿ ಪ್ಯಾರಾಸಿಟಮಲ್ ಅನ್ನು ಕೇವಲ 35 ಪೈಸೆಗೆ ನೀಡುತ್ತಿದ್ದರೆ, ನಮ್ಮ ಕರ್ನಾಟಕದಲ್ಲಿ 2.5 ರೂಗೆ ಮಾರಾಟ ಮಾಡುತ್ತಿರುವುದು ದುರ್ದೈವ ಎಂದು ಹೇಳಿದರು. ರಾಜಾಸ್ಥಾನದಲ್ಲಿರುವ `ಆರೋಗ್ಯ ಹಕ್ಕು ಮಸೂದೆ’ಯು ರಾಜ್ಯದ ಜನರಿಗೆ…

Read More