Author: News Desk Benkiyabale

ತುಮಕೂರು: ಪ್ರಾಥಮಿಕ ಶಾಲಾ ಸೇವಾ ನಿರತ ಪದವಿಧರ ಶಿಕ್ಷಕರಿಗೆ ಸಂಬ0ಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ)ದ ತುಮಕೂರು ಜಿಲ್ಲಾ ಶಾಖೆವತಿಯಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓ, ಡಿಡಿಪಿಐ ಅವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆರ್.ಪರಶಿವಮೂರ್ತಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಆರ್.ಜಯರಾಂ ಅವರ ನೇತೃತ್ವದಲ್ಲಿ ಸಂಘದ ಜಿಲ್ಲಾ ಪದಾಧಿಕಾರಿಗಳು, ವಿವಿಧ ತಾಲೂಕುಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಡಿಡಿಪಿಐ ಅವರುಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆರ್.ಪರಶಿವಮೂರ್ತಿ, ಸರಕಾರ ೨೦೧೭ ರ ನಂತರ ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತಂದಿರುವ ಹೊಸ ವೃಂದ ಮತ್ತು ನೇಮಕಾತಿ ನಿಯಮವನ್ನು ೨೦೧೬ ರ ಹಿಂದೆ ನೇಮಕವಾದ ಪದವಿಧರ ಶಿಕ್ಷಕರಿಗೂ ಅನ್ವಯಿಸಲು ಮುಂದಾಗಿದೆ. ಇದರಿಂದ ಪದವಿಧರ…

Read More

ತುಮಕೂರು: ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಯ ಮುಂದಿನ ೫ ವರ್ಷದ ಅವಧಿಗೆ ನಡೆಯಲಿರುವ ನಿರ್ದೇಶಕರ ಸ್ಥಾನದ ಚುನಾವಣೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ನಾಮಪತ್ರ ಸಲ್ಲಿಸಿದರು. ನಗರದ ಡಿಸಿಸಿ ಬ್ಯಾಂಕ್‌ನಲ್ಲಿ ಚುನಾವಣಾಧಿಕಾರಿಗಳಾಗಿರುವ ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್ ಅವರಿಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎನ್. ರಾಜಣ್ಣ ಅವರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಮುಂದಿನ ೫ ವರ್ಷದ ಅವಧಿಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಉತ್ಸಾಹದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ ಎಂದರು. ನಮ್ಮ ಜಿಲ್ಲೆಯ ಆಡಳಿತ ಮಂಡಳಿಯಲ್ಲಿ ಎಲ್ಲ ಪಕ್ಷದವರು, ಎಲ್ಲ ಜಾತಿಯವರು ಇದ್ದಾರೆ. ಸಹಕಾರಿಗಳದ್ದೇ ಒಂದು ಪಕ್ಷವಾಗಿದೆ. ಎಲ್ಲರೂ ಕೂಡ ಒಮ್ಮv ವಾಗಿ ಕಳೆದ ೨೦-೨೫ ವರ್ಷಗಳಿಂದ ನಡೆದುಕೊಂಡು ಬಂದಿದ್ದೇವೆ ಎಂದು ಅವರು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣದಲ್ಲಿ ಏನು ಆಗುತ್ತದೆ, ಏನು ಆಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಅಂತಹ ವಿಚಾರಗಳಿಗೆ ವಿಶೇಷವಾದ ಒತ್ತು…

Read More

ತುಮಕೂರು: ಜಿಲ್ಲೆಯ ಬೆಳ್ಳಾವಿ ಗ್ರಾಮದ ೪೨ ರ‍್ಷದ ಲಕ್ಷ್ಮೀದೇವಿ ಕಾಣೆಯಾದ ಪ್ರಕರಣ ಕೊಲೆ ಪ್ರಕರಣವಾಗಿ ಬದಲಾದಿದ್ದು, ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಸಮೀಪ ೧೯ ಸ್ಥಳಗಳಲ್ಲಿ ಮೃತಳ ದೇಹದ ತುಂಡುಗಳು ಪತ್ತೆಯಾಗಿವೆ. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪೊಲೀಸರ ವಿಶೇಷ ಪತ್ತೆ ತಂಡ ಈ ಕುರಿತು ಮಾಹಿತಿ ನೀಡಿತು. ಘಟನೆಯ ವಿವರ ಆಗಸ್ಟ್ ೩ ರಂದು ಮಧ್ಯಾಹ್ನ ೩ ಗಂಟೆಗೆ “ಮಗಳಾದ ತೇಜಸ್ವಿಯನ್ನು ನೋಡಿಕೊಂಡು ಬರುತ್ತೇನೆ” ಎಂದು ಹೇಳಿ ಮನೆಬಿಟ್ಟ ಲಕ್ಷ್ಮೀದೇವಿ, ರಾತ್ರಿ ವಾಪಾಸಾಗದೆ ಕಾಣೆಯಾಗಿದ್ದಳು. ಪತಿ ಬಸವರಾಜು ಬೆಳ್ಳಾವಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದು, ಮೊ.ನಂ ೭೩/೨೦೨೫ರಲ್ಲಿ “ಹೆಂಗಸು ಕಾಣೆ” ಪ್ರಕರಣ ದಾಖಲಾಗಿತ್ತು. ಆಗಸ್ಟ್ ೭ ರಂದು ಚಿಂಪುಗಾನಹಳ್ಳಿ ಸಮೀಪ ರಸ್ತೆ ಬದಿಯಲ್ಲಿ ಮತ್ತು ಮುತ್ಯಾಲಮ್ಮ ದೇವಸ್ಥಾನದ ಬಳಿ ಮಾನವ ದೇಹದ ಭಾಗಗಳು ಪತ್ತೆಯಾದ ಬಗ್ಗೆ ಸ್ಥಳೀಯ ಜಗದೀಶ್ ಕೊರಟಗೆರೆ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದು, ಮೊ.ನಂ ೧೬೬/೨೦೨೫ರಲ್ಲಿ ಪ್ರಕರಣ…

Read More

ತುಮಕೂರು: ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ರವಾಸ ಪ್ಯಾಕೇಜ್ ಸಾರಿಗೆ ಬಸ್ ಸಂಚಾರಕ್ಕೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಗರದ ಡಿ. ದೇವರಾಜು ಅರಸು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಈ ವಿಶೇಷ ಪ್ರವಾಸ ಪ್ಯಾಕೇಜ್ ಸಾರಿಗೆ ಬಸ್ ಸಂಚಾರಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ವಿಶ್ವ ವಿಖ್ಯಾತ ಜೋಗ್‌ಪಾಲ್ಸ್ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ತೆರಳುತ್ತಿದ್ದು, ಇವರ ಅನುಕೂಲಕ್ಕಾಗಿ ತುಮಕೂರಿನಿಂದ ಈ ವಿಶೇಷ ಪ್ರವಾಸ ಪ್ಯಾಕೇಜ್ ಸಾರಿಗೆ ಸಂಚಾರವನ್ನು ಆರಂಭಿಸಲಾಗಿದೆ ಎಂದರು. ಈ ವಿಶೇಷ ಪ್ಯಾಕೇಜ್ ಪ್ರವಾಸ ಸಾರಿಗೆ ಬಸ್‌ನಲ್ಲಿ ವಯಸ್ಕರಿಗೆ ೮೦೦ ರೂ. ಮತ್ತು ಮಕ್ಕಳಿಗೆ ೫೦೦ ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ. ಅಶ್ವಮೇಧ ಬಸ್‌ಗಳಲ್ಲಿ ಈ ಸೌಲಭ್ಯವನ್ನು ತುಮಕೂರು ಕೆಎಸ್ಸಾರ್ಟಿಸಿ ವಿಭಾಗದ ವತಿಯಿಂದ ಕಲ್ಪಿಸಲಾಗಿದೆ ಎಂದರು. ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆಯನ್ನು ೨೦೧೬ ರಲ್ಲಿ ಮಾಡಲಾಗಿತ್ತು. ಬಳಿಕ ೨೦೨೦ ರಲ್ಲಿ ವೇತನ…

Read More

ತುಮಕೂರು: ಬ್ರಿಟಿಷರ ವಿರುದ್ಧ ರಾಷ್ಟçಪಿತ ಮಹಾತ್ಮಗಾಂಧಿ ೧೯೪೨ರ ಆಗಸ್ಟ್ ೦೯ ರಂದು ಕರೆ ನೀಡಿದ ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಸರಕಾರಿ ಜೂನಿಯರ್ ಕಾಲೇಜು ಮೈಧಾನದ ಗಾಂಧಿ ಸ್ಮಾರಕ ಭವನದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕ್ವಿಟ್ ಇಂಡಿಯಾ ನೆನಪಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಕ್ವಿಟ್ ಇಂಡಿಯಾ ಚಳವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟಗಾರರ ಪಾಲಿಗೆ ಮಾಡು ಇಲ್ಲವೇ ಮಡಿ ಹೋರಾಟವಾಗಿತ್ತು ಎಂದರು ೧೯೪೨ ರ ಆಗಸ್ಟ್ ೦೯ ರ ಕ್ವಿಟ್ ಇಂಡಿಯಾ ಭಾರತೀಯ ಕಾಂಗ್ರೆಸ್ ಪಾಲಿಗೆ ಅವಿಸ್ಮರಣೀಯ ದಿನ. ಸುಮಾರು ೨೦೦ ವರ್ಷಗಳ ಕಾಲ ಭಾರತವನ್ನು ತಮ್ಮ ವಸಾಹತುವನ್ನಾಗಿ ಮಾಡಿಕೊಂಡು ಆಡಳಿತ ನಡೆಸಿದ ಬ್ರಿಟಿಷ್ ಅಧಿಕಾರಿಗಳಿಗೆ ಭಾರತ ಬಿಟ್ಟು ತೊಲಗಿ ಎಂದು ಅಂತಿಮ ಎಚ್ಚರಿಕೆ ನೀಡಿದ ದಿನ .ಕಾಂಗ್ರೆಸ್ ಪಕ್ಷವನ್ನು ಹೊರತು ಪಡಿಸಿ ಉಳಿದ ಪಕ್ಷಗಳಿಗೆ ನಾವು…

Read More

ತುಮಕೂರು: ನಗರದ ಏಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ರ‍್ಯಾಂಕ್ ನಜೀರ್ ಅಹಮದ್ ಅವರ ಪ್ಯೂಚರ್‌ಜೆನ್ ಸ್ಕಾರ‍್ಸ್ ಕ್ಯಾಲಿಪೋರ್ನಿಯ. ಅಮೇರಿಕ ಸಂಸ್ಥೆ ವತಿಯಿಂದ ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಪ್ಯೂಚರ್‌ಜೆನ್ ಸ್ಕಾರ‍್ಸ್ನ ನಿರ್ದೇಶಕಿ ನೈಲಾ ಅಹಮದ್ ಮಾತನಾಡಿ,ಇಂದು ನಿಮ್ಮೊಂದಿಗೆ ಇರುವುದು ನನಗೆ ಮನೆಗೆ ಬಂದAತೆ ಭಾಸವಾಗುತ್ತಿದೆ.ಈ ನಗರ ನನಗೆ ಅಪರಿಚಿತವಲ್ಲ,ಅಥವಾ ಭಾರತ ವಿದೇಶಿ ಭೂಮಿಯೂಅಲ್ಲ. ಇದು ನನ್ನ ಬೇರುಗಳ ನಾಡು, ನನ್ನ ಪೂರ್ವಜರ ನಾಡು.ಅದಕ್ಕಾಗಿಯೇ ನಾನು ಇಂದು ಹೆಮ್ಮೆ ಮತ್ತು ನಮ್ರತೆಯಿಂದ ಹೇಳುತ್ತೇನೆ, ನಾನು ನಿಮ್ಮಲ್ಲಿ ಅಪರಿಚಿತನಲ್ಲ, ನಾನು ತುಮಕೂರು ಮತ್ತು ಕರ್ನಾಟಕದ ಮಗಳು ಎಂದರು. ನಾವು ಇತಿಹಾಸದಲ್ಲಿ ಅಸಾಧಾರಣ ಸಮಯವನ್ನು ಎದುರಿಸುತ್ತಿದ್ದೇವೆ. ಶಿಕ್ಷಣ ಮತ್ತು ಕೆಲಸದ ಸ್ಥಳದ ಭವಿಷ್ಯವು ನಮ್ಮ ಪೋಷಕರು ತಿಳಿದಿದ್ದಕ್ಕಿಂತ ಬಹಳ ಭಿನ್ನವಾಗಿಕಾಣುತ್ತದೆ. ಒಂದು ಕಾಲದಲ್ಲಿ ಯಶಸ್ಸನ್ನು ಖಾತರಿಪಡಿಸಿದ ಕೌಶಲ್ಯಗಳು ಇನ್ನು ಮುಂದೆ ಸಾಕಾಗುವುದಿಲ್ಲ. ಈ ಹೊಸ ಪ್ರಪಂಚವು ಹೊಸ ಜ್ಞಾನ ಮತ್ತು ತ್ವರಿತವಾಗಿ ಹೊಂದಿಕೊಳ್ಳುವ ಸಾಮರ್ಥ್ಯವನ್ನು…

Read More

ತುಮಕೂರು: ಕಳೆದ ಜುಲೈ ಮಾಹೆಯಲ್ಲಿ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ ೧೦೭೯೨೬ ಪ್ರಕರಣಗಳ ಪೈಕಿ ೧೬೩೭೭ ಪ್ರಕರಣ ಹಾಗೂ ೨೫೨೩೨೪ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು ೨೬೮೭೦೧ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ಹೇಳಿದರು. ರಾಷ್ಟಿçÃಯ ಲೋಕ್ ಅದಾಲತ್ ಕಾರ್ಯಕ್ರಮ ಕುರಿತು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊ0ಡು ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಒದಗಿಸುವ ಸಲುವಾಗಿ ಸೆಪ್ಟೆಂಬರ್ ೧೩ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಜನತಾ ನ್ಯಾಯಾಲಯ(ಲೋಕ್ ಅದಾಲತ್)ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಈ ಅದಾಲತ್ತಿನ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಡೆಸಲಾಗುವ ಲೋಕ್ ಆದಾಲತ್ ಅಥವಾ ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ…

Read More

ತುಮಕೂರು: ಯಂಗ್ ಚಾಲೆಂಜರ್ಸ್ ಸಂಸ್ಥೆ ಭಾನುವಾರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಿರಿಯ ಕ್ರೀಡಾಪಟು ದಿ.ಕೆ.ಎಸ್.ಶಂಕರ್ ಸ್ಮರಣಾರ್ಥ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿ ಏರ್ಪಡಿಸಿತ್ತು. ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಬಾಲಕರ ೧೨ ಹಾಗೂ ಬಾಲಕಿಯರ ೯ ತಂಡಗಳು ಟೂರ್ನಿಯಲ್ಲಿ ಭಾಗವಹಿಸಿದ್ದವು. ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್, ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಕ್ರೀಡೆ ಪ್ರೋತ್ಸಾಹಿಸಲು ಸರ್ಕಾರದ ಉದ್ಯೋಗ ನೇಮಕಾತಿಗಳಲ್ಲಿ ಕ್ರೀಡಾ ಕೋಟಾದ ಪ್ರಮಾಣ ಹೆಚ್ಚು ಮಾಡಬೇಕು. ಶಿಕ್ಷಣದ ಪ್ರಮುಖ ಭಾಗವಾಗಿ ಕ್ರೀಡೆಯನ್ನು ಶಾಲೆ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದರು. ಹಿಂದೆ ತುಮಕೂರು ನಗರ ಕ್ರೀಡೆಗಳಿಗೆ ಹೆಸರುವಾಸಿಯಾಗಿತ್ತು. ಇಲ್ಲಿನ ಕ್ರೀಡಾ ಸಂಸ್ಥೆಗಳಲ್ಲಿ ತರಬೇತಿ ಪಡೆದ ಹಲವಾರು ಕ್ರೀಡಾಪಟುಗಳು ರಾಜ್ಯ, ರಾಷ್ಟçಮಟ್ಟದಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ಈಗ ಎಲ್ಲಾ ಅನುಕೂಲಗಳಿದ್ದರೂ ಇಂದಿನವರಲ್ಲಿ ಕ್ರೀಡಾಸಕ್ತಿ ಕಡಿಮೆಯಾಗುತ್ತಿದೆ. ಶಾಲಾ ಹಂತದಿAದಲೇ ಕ್ರೀಡಾಪಟುಗಳು ತಯಾರಾಗಬೇಕು ಎಂದು ಹೇಳಿದರು. ಸ್ಮಾರ್ಟ್ ಸಿಟಿ ಲಿಮಿಟೆಡ್‌ನಿಂದ ಈ ಮೈದಾನದಲ್ಲಿ ಸುಮಾರು ೧೫ ಕ್ರೀಡೆಗಳ ಅಭ್ಯಾಸ,…

Read More

ತುಮಕೂರು: ಜಗತ್ತಿಗೆ ಮಾದರಿಯಾಗಿರುವ ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ, ಆಚಾರವಿಚಾರಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಬೇಕು. ದೇಶಪ್ರೇಮ, ಸಹಬಾಳ್ವೆ, ಭಾವೈಕ್ಯತೆಯ ಗುಣಗಳನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಬಿಜೆಪಿ ಮುಖಂಡರೂ ಆದ ಎಸ್.ಪಿ. ಡೆವಲಪರ್ಸ್ ಮಾಲೀಕ ಎಸ್.ಪಿ.ಚಿದಾನಂದ್ ಹೇಳಿದರು. ನಗರದ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ೩೯ನೇ ಕೃಷ್ಣ ಜನ್ಮಾಷ್ಟಮಿ ಆಚರಣೆ ಅಂಗವಾಗಿ ಭಾನುವಾರ ಕೆ.ಆರ್.ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯವರು ಶ್ರೀ ಕೃಷ್ಣ, ಮಹಾಭಾರತ, ಭಗವದ್ಗೀತೆಯ ತತ್ವಾದರ್ಶಗಳನ್ನು ಹೊಸತಲೆಮಾರಿನವರಿಗೆ ಪರಿಚಯಿಸುವ, ನಮ್ಮ ಸಂಸ್ಕೃತಿ, ಪರಂಪರೆಯ ಮಹತ್ವ ಸಾರುವ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಇದರ ಜೊತೆಗೆ, ಕಣ್ಮರೆಯಾಗುತ್ತಿರುವ ನಮ್ಮ ಸಾಂಪ್ರದಾಯಕ ಕ್ರೀಡೆಗಳು, ಗೀತಗಾಯನ, ಕಂಠಪಾಠ, ಪ್ರಬಂಧ ರಚನೆ, ನೆನಪಿನ ಶಕ್ತಿ ಹೆಚ್ಚಿಸುವ ಸ್ಪರ್ಧೆಗಳನ್ನು ಏರ್ಪಡಿಸಿ ಮಕ್ಕಳು ಹಾಗೂ ಹಿರಿಯರು ಸಂಭ್ರಮಿಸುವ ವೇದಿಕೆ ಕಲ್ಪಿಸಿದ್ದಾರೆ. ಮಕ್ಕಳಲ್ಲಿ ಧೈರ್ಯ, ಸಾಹಸ, ಧಾರ್ಮಿಕ ಭಾವನೆ ಮೂಡಿಸುವ, ಸಂಸ್ಕಾರ ಬೆಳೆಸುವ ಕಾರ್ಯಕ್ರಮಗಳ ಮೂಲಕ ಆಚರಣಾ…

Read More

ತುಮಕೂರು: ನಗರದ ಐತಿಹಾಸಿಕ ಹಾಗೂ ಪ್ರಕೃತಿ ಸೌಂದರ್ಯವನ್ನು ಹೊಂದಿರುವ ಅಮಾನಿಕೆರೆಯಲ್ಲಿ ಕೆಲವೊಂದು ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಬೋಟಿಂಗ್ ಸೇವೆಯನ್ನು ಪುನಃ ಆರಂಭಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬAಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಅಮಾನಿಕೆರೆಗೆ ಶನಿವಾರ ಭೇಟಿ ನೀಡಿ ಮಾತನಾಡಿದ ಅವರು, ಅಮಾನಿಕೆರೆಯ ಸುತ್ತ ವಾಕಿಂಗ್ ಪಾತ್, ಸಂಗೀತ ಕಾರಂಜಿ, ಗಾಜಿನ ಮನೆ, ಪುಟಾಣಿ ಮಕ್ಕಳ ಆಟದ ಜಾಗ, ಕಲ್ಯಾಣಿ ಮುಂತಾದ ಸೌಲಭ್ಯಗಳ ನಿರ್ವಹಣೆಯ ಮೇಲೂ ಹೆಚ್ಚಿನ ಗಮನ ಹರಿಸಿ ಸೂಕ್ತ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು. ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮಾತನಾಡಿ, ಅಮಾನಿಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಪುನರಾರಂಭಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಕಾರ್ಯಾದೇಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಬೋಟಿಂಗ್‌ಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಧಿಕೃತವಾಗಿ ಚಾಲನೆ ನೀಡಲು ವ್ಯವಸ್ಥೆ ಮಾಡಲಾಗುವುದು. ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ‘ಅರ್ಬನ್ ಹಾತ್’ ಯೋಜನೆಯಡಿ ನಗರದ ಅಮಾನಿಕೆರೆ ಉದ್ಯಾನದ ಬಳಿ ೧೬ ಮಳಿಗೆಗಳನ್ನು ಪ್ರಾರಂಭಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ದಶಕಗಳ ಹಿಂದೆ…

Read More