ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ 44 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 183ಕ್ಕೆ ಏರಿಕೆ ಆದಂತಾಗಿದೆ. ತಾಲ್ಲೂಕುವಾರು ಸೋಂಕಿತರ ವಿವರ : ತಿಪಟೂರು-5 ಚಿಕ್ಕನಾಯಕನಹಳ್ಳಿ-5 ತುರುವೇಕೆರೆ-1 ಗುಬ್ಬಿ-13 ಕೊರಟಗೆರೆ-17 ಕುಣಿಗಲ್-3 ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಇಂದು ಒಂದೇ ದಿನ 44 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ, ಕೊರಟಗೆರೆ, ಕುಣಿಗಲ್ ತಾಲ್ಲೂಕುಗಳಲ್ಲಿ ಕೊರೊನಾ ರುದ್ರ ನರ್ತನ ಮಾಡುತ್ತಿದೆ. ಲಾಕ್ಡೌನ್ ಸಡಿಲಿಕೆಯ ನಂತರ ಎಲ್ಲರೂ ಎಲ್ಲೆಂದರಲ್ಲಿ ಸುತ್ತಾಡುತ್ತಿದ್ದು, ಯಾರಿಗೆ ಯಾರಿಂದ ಸೋಂಕು ಹರಡುತ್ತಿದೆ ಎಂಬ ಅರಿವಿಲ್ಲ. ಗ್ರಾಮೀಣ ಪ್ರದೇಶದ ಜನತೆಯನ್ನ ಬಿಟ್ಟು ಬಿಡದಂತೆ ಕಾಡುತ್ತಿರುವ ಕೊರೊನಾ ಸೋಂಕು ಯಾವುದೇ ರೀತಿಯಲ್ಲಿ ಯಾರಿಂದ ಯಾರಿಗೆ ಸುಳಿವು ನೀಡದೇ ಎಲ್ಲರಲ್ಲೂ ಆವರಿಸುತ್ತಿದೆ.
Author: News Desk Benkiyabale
ತುಮಕೂರು : ರಾಜ್ಯದಲ್ಲಿ ಕೋವಿಡ್-19 ಸಂಕಷ್ಟದಲ್ಲಿಯೂ ಕೂಡ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಈ ಬಾರಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ಕುಮಾರ್ ಅವರು ತಿಳಿಸಿದರು. ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ವಿವಿಧ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಎಸ್ಎಲ್ಸಿ ಪರೀಕ್ಷೆಯ 5ನೇ ದಿನವಾದ ಇಂದು ಕನ್ನಡ ಭಾಷಾ ವಿಷಯವಿದ್ದು, ರಾಜ್ಯದಲ್ಲಿ ಈವರೆಗೆ ಶೇ.98ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇದೆ. ಪರೀಕ್ಷೆ ಆರಂಭವಾದ ದಿನದಿಂದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರಕ್ಕೆ ಭೇಟಿ ನೀಡಿದ್ದೇನೆ. ಇಂದು ತುಮಕೂರು ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ ಎಂದು ಅವರು ತಿಳಿಸಿದರು. ಶಿಕ್ಷಣ ಇಲಾಖೆಯು ಯಾವುದೇ ಪರೀಕ್ಷಾ ಕೇಂದ್ರ, ಕೇವಲ ಪರೀಕ್ಷಾ ಕೇಂದ್ರವಾಗಿರಬಾರದು ಅದು ಮಕ್ಕಳ ಸುರಕ್ಷತಾ ಕೇಂದ್ರವಾಗಿರಬೇಕು.…
ಮಧುಗಿರಿ : ತಾಲ್ಲೂಕಿನಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು ಕೂಡ ನಾಲ್ಕು ಕೋವಿಡ್ ಸೋಂಕಿತ ಪ್ರಕರಣಗಳು ದಾಖಲಾಗಿದ್ದು ನಾಲ್ಕು ತಿಂಗಳ ಮಗುವಿಗೂ ಕೂಡ ಕರೋನಾ ವೈರಸ್ ಸೋಂಕು ತಗಲಿದೆ. ತಾಲ್ಲೂಕಿನ ಇಂದಿರಾ ಗ್ರಾಮದಲ್ಲಿದ್ದ ತಮಿಳುನಾಡಿನಿಂದ ಆಗಮಿಸಿದ್ದ ಕುಟುಂಬವನ್ನು ಕ್ವಾರಂಟೈನ್ ಮಾಡಲಾಗಿತ್ತು .ಈ ಕುಟುಂಬದ ನಾಲ್ಕು ತಿಂಗಳ ಮಗುವಿಗೆ ಸೋಂಕು ದೃಢಪಟ್ಟಿದೆ. ಕೆರೆಗಳಪಾಳ್ಯದ ಮೂವತ್ತಾರು ವರ್ಷ ವಯಸ್ಸಿನ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ .ಕಡಗತ್ತೂರು ಗ್ರಾಮದಲ್ಲಿ ಸೌದಿ ಅರೇಬಿಯದಿಂದ ಆಗಮಿಸಿದಂತ ವ್ಯಕ್ತಿಗೆ ಸೋಂಕು ಧೃಢವಾಗಿದ್ದು. ಐ.ಡಿ.ಹಳ್ಳಿ ಹೋಬಳಿಯ ಗೂಲಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕರೋನಾ ಸೋಂಕು ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.ಇದರಲ್ಲಿ ಕೆರೆಗಳ ಪಾಳ್ಯ ವ್ಯಕ್ತಿಯ ಪ್ರವಾಸ ಮಾಹಿತಿ ತಿಳಿದುಬಂದಿರುವುದಿಲ್ಲ. ಉಳಿದ ಮೂರು ಪ್ರಕರಣಗಳ ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿತ್ತು.
ಮಧುಗಿರಿ : ಗ್ರಾ. ಪಂ ಕಚೇರಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲು ಲಗೇಜ್ ಆಟೋದಲ್ಲಿ ಪೀಟೋಪಕರಣಗಳು ಮತ್ತು ಕಡತಗಳನ್ನು ತುಂಬಿಕೊಂಡು ಹೊರಡುವ ವೇಳೆ ಗ್ರಾಮಸ್ಥರು ತಡೆಯೊಡ್ಡಿದ ಪರಿಣಾಮ ಗ್ರಾಮದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿ ದಿನ ಪೂರ್ತಿ ಮಹಿಳೆಯರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿರುವ ಗ್ರಾ.ಪಂ ಕಚೇರಿಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಗ್ರಾಮದಲ್ಲೇ ಉಳಿಯಲಿ ಎಂದು ಪ್ರತಿಭಟನಾಕಾರರು ಶಾಸಕ ಎಂ.ವಿ.ವಿರಭದ್ರಯ್ಯನವರಿಗೆ ಮನವಿ ಮಾಡಿದರು. ಆಗ ಶಾಸಕರು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರನ್ನು ಸಾರ್ವಜನಿಕ ಅಭಿಪ್ರಾಯಕ್ಕೆ ವಿರೋಧವಾಗಿ ಸ್ಥಳಾಂತರ ಮಾಡುವುದು ಬೇಡ ಎಂದು ಕಚೇರಿಯ ಮುಂಭಾಗ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಒಪ್ಪದ ಆಡಳಿತ ಮಂಡಳಿ ಸದಸ್ಯರು ಜುಲೈ 1 ಕ್ಕೆ ನಮ್ಮ ಅಧಿಕಾರವಧಿ ಕೊನೆಗೊಳ್ಳಲಿದ್ದು, ಕಚೇರಿ ಸ್ಥಳಾಂತರಿಸಿ ಇಲ್ಲಿ ಸಭೆ ನಡೆಸಬೇಕೆಂದು ಪಟ್ಟು ಹಿಡಿದಾಗ ಶಾಸಕರು ಕಚೇರಿಯ ಉದ್ಘಾಟನೆಯಾಗಿದ್ದು, ಸೂಕ್ತ ಸಮಯದಲ್ಲಿ ಕಚೇರಿ ಸ್ಥಳಾಂತರವಾಗುತ್ತದೆ ಎಂದು ಹೇಳಿದರೂ ಸಹ ಆಡಳಿತ ಮಂಡಳಿಯವರು…
ತುಮಕೂರು: ತುಮಕೂರು(ದ) ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಇಂದು ನಡೆದ ಎಸ್ಎಸ್ಎಲ್ಸಿ ವಿಜ್ಞಾನ ವಿಷಯ ಪರೀಕ್ಷೆಗೆ ನೋಂದಣಿಯಾಗಿರುವ 33781 ವಿದ್ಯಾರ್ಥಿಗಳ ಪೈಕಿ 33130 ವಿದ್ಯಾರ್ಥಿಗಳು ಹಾಜರಾಗಿದ್ದು, 651 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ತುಮಕೂರು(ದ): ವಿಜ್ಞಾನ ವಿಷಯ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಣಿಯಾಗಿರುವ 20976 ವಿದ್ಯಾರ್ಥಿಗಳ ಪೈಕಿ 20792 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 184 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮಧುಗಿರಿ: ವಿಜ್ಞಾನ ವಿಷಯ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಣಿಯಾಗಿರುವ 12805 ವಿದ್ಯಾರ್ಥಿಗಳ ಪೈಕಿ 12338 ವಿದ್ಯಾರ್ಥಿಗಳು ಹಾಜರಾಗಿದ್ದು, 467 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 8 ವಿದ್ಯಾರ್ಥಿಗಳು ನೆರೆ ರಾಜ್ಯಗಳಿಂದ, 21 ವಿದ್ಯಾರ್ಥಿಗಳು ಕಂಟೈನ್ಮೆಂಟ್ ಪ್ರದೇಶಗಳಿಂದ, ಅನಾರೋಗ್ಯದಿಂದ ವಿಶೇಷ ಕೊಠಡಿಯಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾರೆ. ಮೊದಲ ಬಾರಿಗೆ 12280 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾದ…
ಗುಬ್ಬಿ: ತಾಲ್ಲೂಕಿನ ಕಸಬ ಹೋಬಳಿ ಜವರೇಗೌಡನಪಾಳ್ಯ ಗ್ರಾಮದಲ್ಲಿನ ಕಚ್ಚಾ ರಸ್ತೆ ಮಳೆ ಬಂದು ಸಂಪೂರ್ಣ ಓಡಾಟಕ್ಕೂ ಯೋಗ್ಯವಲ್ಲದಂತಾಗಿ ಗ್ರಾಮವೇ ಸೀಲ್ಡೌನ್ ಆಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಇಡೀ ಗ್ರಾಮದಲ್ಲಿ ಎಲ್ಲರ ಮನೆಯ ಸಂಪರ್ಕಿಸುವ 600 ಮೀಟರ್ ಮುಖ್ಯರಸ್ತೆ ಸೇರಿದಂತೆ ನಾಲ್ಕು ಗಲ್ಲಿ ರಸ್ತೆಗಳು ಸಂಪೂರ್ಣ ಕಚ್ಚಾ ರಸ್ತೆಯಾಗಿದೆ. 12 ಅಡಿಗಳ ಈ ರಸ್ತೆ ಮಣ್ಣಿನಿಂದ ಕೂಡಿ ಚರಂಡಿ ವ್ಯವಸ್ಥೆ ಇಲ್ಲವಾಗಿದೆ. ಮಳೆ ಬಂದರೆ ಯಾರೊಬ್ಬರು ಓಡಾಡಲು ಆಗದ ದುಸ್ಥಿತಿಯಲ್ಲಿದೆ. ಕಳೆದ 20 ವರ್ಷದಿಂದ ಇದೇ ಅವ್ಯವಸ್ಥೆ ಅನುಭವಿಸಿರುವ ಗ್ರಾಮಸ್ಥರು ಈಗಾಗಲೇ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ನರಸಿಂಹಮೂರ್ತಿ ಆರೋಪಿಸಿದ್ದಾರೆ. ರೈತರು ಸಾಕಿರುವ ರಾಸುಗಳು ಸಹ ಈ ರಸ್ತೆಗೆ ಹೆಜ್ಜೆ ಇಡಲು ಹಿಂಜರಿಯುತ್ತಿವೆ. ಗುಂಡಿ ಬಿದ್ದ ಸಂದರ್ಭದಲ್ಲಿ ಸ್ಥಳೀಯರೇ ಮಣ್ಣು ತುಂಬಿಸಿಕೊಂಡು ರಸ್ತೆ ಸರಿಪಡಿಸಿಕೊಳ್ಳುತ್ತಿದ್ದಾರೆ. ಮಣ್ಣಿನಿಂದ ಕೂಡಿದ ರಸ್ತೆ ಮಳೆಗಾಲದಲ್ಲಿ ಯಾವ ಗದ್ದೆ ಬಯಲಿಗೂ ಸಮವಿಲ್ಲ…
ತುಮಕೂರು : ಕೋವಿಡ್-19ರ ಸೋಂಕು ನಿಯಂತ್ರಣ ಸಂಬಂಧ ಚಾಲ್ತಿಯಲ್ಲಿರುವ ಮುಂಜಾಗ್ರತಾ ಕ್ರಮಗಳ ಜೊತೆಗೆ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜುಲೈ 5 ರಿಂದ ಆಗಸ್ಟ್ 2ರವೆರೆಗಿನ ಎಲ್ಲಾ ಭಾನುವಾರದಂದು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ನಿಷೇಧಾವಧಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯದಂಗಡಿಗಳನ್ನು ಮುಚ್ಚಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಹಾಲಿ ಇರುವ ಮದ್ಯದಂಗಡಿಗಳ ಮುಚ್ಚುವ ವೇಳೆಯನ್ನು ರಾತ್ರಿ 9 ಗಂಟೆಗೆ ಬದಲಾಗಿ ರಾತ್ರಿ 8 ಗಂಟೆಗೆ ನಿಗಧಿಪಡಿಸಿ ಅವರು ಆದೇಶಿಸಿದ್ದಾರೆ.
ತುಮಕೂರು : ಗ್ರಾಹಕರಿಗೆ ಅಗತ್ಯ ಸಾಮಗ್ರಿಗಳ ವಿತರಣೆ ಮಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡದ ಅಂಗಡಿ ಮುಂಗಟ್ಟುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್ ಕುಮಾರ್ ತಿಳಿಸಿದರು. ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ದಿಶಾ ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದೇ ಓಡಾಡುವವರಿಗೆ ಪೊಲೀಸ್ ಹಾಗೂ ಪಂಚಾಯಿತಿಗಳ ಮುಖಾಂತರ ದಂಡ ವಿಧಿಸಲು ಈಗಾಗಲೇ ಸಂಬಂಧಿಸಿದವರಿಗೆ ನಿರ್ದೇಶನ ನೀಡಲಾಗಿದೆ. ಈ ಹಿಂದೆ ಲಾಕ್ ಡೌನ್ ಆದ ಸಂದರ್ಭದಲ್ಲಿ ಅನುಸರಿಸುತ್ತಿದ್ದ ಮಾರ್ಗಸೂಚಿಯನ್ನೇ ಈಗಲೂ ಅನುಸರಿಸಿ ಸಾರ್ವಜನಿಕರು ತಮ್ಮ ವ್ಯವಹಾರಗಳನ್ನು ನಡೆಸಬಹುದಾಗಿದೆ. ಮಾರ್ಗಸೂಚಿಯನ್ನು ನಿರ್ಲಕ್ಷ್ಯ ಮಾಡುವ ಅಂಗಡಿ-ಮುಂಗಟ್ಟುಗಳ ವಿರುದ್ಧ ಕ್ರಮ ಕೈಗೊಳ್ಳಲು ಆಯಾ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ 5 ಪ್ರಕರಣಗಳಲ್ಲಿ ಸಾವು ಸಂಭವಿಸಿದ್ದು, ರೋಗವನ್ನು ನಿರ್ಲಕ್ಷ್ಯ ಮಾಡಿ, ಕೊನೆಯ…
ಮಧುಗಿರಿ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಮಧುಗಿರಿ ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಎನ್. ರಾಜಣ್ಣ ಸ್ಪರ್ಧಿಸುವುದು ಖಚಿತ. ಜನರ ಆಶೀರ್ವಾದದೊಂದಿಗೆ ಶಾಸಕರಾಗಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿ ಸಚಿವರಾಗುವುದು ನಿಶ್ಚಿತ ಎಂದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರ್.ರಾಜೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ತಾಲ್ಲೂಕಿನ ಮರುವೇಕೆರೆ ಗ್ರಾಮದಲ್ಲಿರುವ ಶ್ರೀ ಮಲೆ ರಂಗನಾಥ ಸ್ವಾಮಿ ದೇಗುಲದ ಆವರಣದಲ್ಲಿ ತಾಲ್ಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಮರುವೇಕೆರೆ- ಗಂಜಲಗುಂಟೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಹಾಗೂ ಪ್ರತಿಜ್ಞಾವಿಧಿಯ ನೇರ ಪ್ರಸಾರ ಕಾರ್ಯಕ್ರಮ ಕುರಿತು ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಧುಗಿರಿ ಕ್ಷೇತ್ರಕ್ಕೆ ಹೊರಗಿನವರು ಪಕ್ಷದ ಹೆಸರಿನಲ್ಲಿ ಯಾರೇ ಬಂದರೂ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರೇ ಆಗಿರುತ್ತಾರೆ. ಕಳೆದ ಚುನಾವಣೆಯಲ್ಲಿ ಸೋತರು ಕೂಡ ಸದಾ ಜನ ಸಂಪರ್ಕದಲ್ಲಿರುವ ಕೆ.ಎನ್. ರಾಜಣ್ಣನವರು ಡಿಸಿಸಿ…
ಮಧುಗಿರಿ: ಎಟಿಎಂ ಕಾರ್ಡ್ ಅನ್ನು ಅದಲು- ಬದಲು ಮಾಡಿ ಗಾರ್ಮೆಂಟ್ಸ್ ಮಹಿಳೆಯ ಖಾತೆಯಲ್ಲಿದ್ದ 22ಸಾವಿರ ರೂ ಗಳನ್ನು ಅನ್ ಲ್ಯೆನ್ ಮೂಲಕ ಲಪಟಾಯಿಸಿರುವ ಘಟನೆ ಪಟ್ಟಣದ ಹೈಸ್ಕೂಲ್ ರಸ್ತೆಯಲ್ಲಿರುವ ಎಟಿಎಂ ಕೇಂದ್ರ ದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಆಚೇನಹಳ್ಳಿ ಗ್ರಾಮದ ಗಾರ್ಮೆಂಟ್ಸ್ ಉದ್ಯೋಗಿಯಾಗಿರುವ ರೂಪ ರವರಿಗೆ ಸೇರಿರುವ ಎಸ್ ಬಿಐ ಬ್ಯಾಂಕಿನ ಎಟಿಎಂ ಕಾರ್ಡ್ನಲ್ಲಿದ್ದ ಹಣವನ್ನು ಡ್ರಾ ಮಾಡಿಕೊಂಡು ಬರುವಂತೆ ಅವರ ತಂದೆಯವರಿಗೆ ಕೊಟ್ಟು ಕಳುಹಿಸಿದ್ದಾರೆ. ಎಟಿಎಂನಲ್ಲಿ ಹಣ ಡ್ರಾ ಮಾಡಲು ಬಾರದ ತಂದೆ ಬೇರೊಬ್ಬರ ಸಹಾಯವನ್ನು ಕೇಳಿದ್ದಾರೆ. ಕರ್ನಾಟಕ ಬ್ಯಾಂಕಿನ ಎಟಿಎಂನಲ್ಲಿ ಡ್ರಾ ಮಾಡಲು ಮುಂದಾಗಿ ಪಿನ್ ನಂಬರ್ ತಿಳಿದುಕೊಂಡ `ಆಸಾಮಿ’ ಆ ಸಮಯದಲ್ಲಿ ತಪ್ಪು ಪಿನ್ನನ್ನು ಒಡೆದು ನಂತರ ಈ ಎಟಿಎಂನಲ್ಲಿ ಹಣ ಬರುವುದಿಲ್ಲ ಎಸ್.ಬಿ.ಐ ಬ್ಯಾಂಕಿನ ಎಟಿಎಂ ಕರೆದೊಯ್ಯುವ ವೇಳೆ ಕಾರ್ಡನ್ನು ಬದಲಾಯಿಸಿದ್ದಾನೆ. ಎಸ್ಬಿಐ ಎಟಿಎಂನಲ್ಲಿ ಆಸಾಮಿ ನೀಡಿದ ಕಾರ್ಡನ್ನು…











