ತುಮಕೂರು : ಪೂರ್ವ ಮುಂಗಾರು ಆರಂಭವಾಗಿರುವ ಹಿನ್ನಲೆಯಲ್ಲಿ ರೈತರಿಗೆ ಬಿತ್ತನೆ ಕಾರ್ಯಕ್ಕೆ ಬೇಕಾಗುವ ಕೃಷಿ ಸಲಕರಣೆಗಳನ್ನು ಎಲ್ಲಾ ಹೋಬಳಿ ಕೇಂದ್ರಗಳಲ್ಲಿರುವ ಕೃಷಿಯಂತ್ರಧಾರೆ ಮೂಲಕ ಬಾಡಿಗೆ ಆಧಾರದಲ್ಲಿ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಂಗಾಂಜನೇಯ ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು ಬಿತ್ತನೆ ಕಾರ್ಯಕ್ಕೆ ತೊಂದರೆಯಾಗದಂತೆ ರಿಯಾಯಿತಿ ಧರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಉಪಕರಣಗಳನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರು. ಸಹಾಯಕ ಕೃಷಿ ನಿರ್ದೇಶಕ ಎನ್.ಕೆಂಗೇಗೌಡ ಸಭೆಗೆ ಮಾಹಿತಿ ನೀಡಿ, ಮೇ.ಅಂತ್ಯಕ್ಕೆ 142 ಮಿ.ಮೀ ಮಳೆಯಾಗಬೇಕಿತ್ತು, ಪ್ರಸ್ತುತ 119 ಮಿ.ಮೀ. ಮಳೆಯಾಗಿದ್ದು, ಪೂರ್ವ ಮುಂಗಾರಿನಲ್ಲಿ ಕೃಷಿ ಚಟುವಟಿಕೆಗಳಿಗೆ ಈಗ ಆಗಿರುವ ಮಳೆ ಉತ್ತಮವಾಗಿದೆ. ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬಹುದು ಎಂದರು. 27660 ಹೆಕ್ಟೇರ್ ಪ್ರದೇಶದಲ್ಲಿ…
Author: News Desk Benkiyabale
ಚಿಕ್ಕನಾಯಕನಹಳ್ಳಿ: ಕಳೆದೆರಡು ದಿನಗಳಿಂದ ತಾಲ್ಲೂಕಿನ ಹಲವೆಡೆ ಸುರಿದ ಮಳೆಗಾಳಿಗೆ ಮರಗಿಡ ಹಾಗೂ ಮನೆಗಳ ಹೆಂಚು ಹಾಗೂ ಶೀಟುಗಳು ಹಾರಿಹೋಗಿ ಅಪಾರಪ್ರಮಾಣದ ನಷ್ಟವುಂಟಾಗಿದೆ ಕಳೆದೆರಡು ದಿನಗಳಿಂದ ಸಂಜೆ ಮಳೆ ಹಾಗೂ ಗಾಳಿಯರಭಸ ಜೋರಾಗಿದ್ದು ಗಾಳಯ ಹೊಡೆತಕ್ಕೆ ಹಲವು ಮರಗಳು ಉರುಳಿಬಿದ್ದಿವೆ. ತಾಲ್ಲೂಕಿನ ಶೆಟ್ಟಿಕೆರೆ ಹಾಗೂ ಹಂದನಕೆರೆ ಹೋಬಳಿಗಳಲ್ಲಿ ಸಾಕಷ್ಟು ಹಾನಿ ಮಾಡಿದ್ದು ಈ ಭಾಗದ ಹಲವು ತೋಟದಲ್ಲಿ ತೆಂಗು, ಅಡಿಕೆ, ಮಾವು, ಹಲಸುಮರಗಳು ನೆಲಕ್ಕೊರಗಿವೆ. ರಸ್ತೆಬದಿಯ ಮರಗಳುಸಹ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಹಲವೆಡೆ ವಾಹನ ಸಂಚಾರಕ್ಕೆ ತೊಡಕಾಯಿತು. ತಾಲ್ಲೂಕಿನ ಮೇಲನಹಳ್ಳಿ, ಶ್ಯಾವಿಗೆಹಳ್ಳಿ, ಹಾಲುದೇವರಹಟ್ಟಿ, ಸಾವಸೆಟ್ಟಿಹಳ್ಳಿಗಳಲ್ಲಿ ಹಲವು ಮನೆಗಳ ಹೆಂಚು ಮತ್ತು ಸಿಮೆಂಟ್ ಶೀಷ್ಗಳು ಮಳೆ ಗಾಳಿಯ ಹೊಡೆತಕ್ಕೆ ಹಾರಿಹೋಗಿದ್ದು ಅಪಾರ ನಷ್ಟ ಸಂಭವಿಸಿದೆ. ಈಗಾಗಲೇ ಕಂದಾಯ ಇಲಾಖೆಯಿಂದ ಮಳೆ ಹಾಗೂ ಗಾಳಿಯಿಂದ ತಾಲ್ಲೂಕಿನಲ್ಲಿ ಆಗಿರುವ ಹಾನಿಯ ಬಗ್ಗೆ ಮಹಜರ್ ನಡೆಸಲಾಗುತ್ತಿದೆ ಎಂದು ತಹಸೀಲ್ದಾರ್ ತಿಳಿಸಿದರು.
ತುಮಕೂರು: ಭೂಮಿಯ ಮೇಲೆ ಮಾನವನ ಅತಿಕ್ರಮಣದಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿದ್ದು, ಮಳೆಯ ನೀರು ಹರಿದು ಹೋಗುವುದನ್ನು ನಿಲ್ಲಿಸಿ ಭೂಮಿಯಲ್ಲಿ ಹಿಂಗಿಸುವ ಮೂಲಕ ಸಮತೋಲನ ಕಾಯ್ದುಕೊಳ್ಳುವ ಕೆಲಸ ಆಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಅವರು ಜಿಲ್ಲಾ ಪಂಚಾಯತ್ ಆವರಣದ ಕುಂಚಿಟಿಗರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಅಂತರ್ಜಲ ಚೇತನ ಕಾರ್ಯಕ್ರಮವನ್ನು ಉದ್ಥಾಟಿಸಿ ಅವರು ಮಾತನಾಡಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಿಸುವ ಮೂಲಕ 30 ವರ್ಷಗಳ ಹಿಂದಿನ ಪರಿಸರ ಮತ್ತು ಪ್ರಕೃತಿಯನ್ನು ಉಳಿಸಿ ಮತ್ತು ಬೆಳೆಸುವ ಕಾರ್ಯವನ್ನು ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಸಹಯೋಗದಲ್ಲಿ ಮನ್ರೆಗಾ ಯೋಜನೆಯಡಿಯಲ್ಲಿ ಕಾರ್ಯ ಪ್ರವೃತ್ತರಾಗಿ ಅಂತರ್ಜಲವನ್ನು ಹೆಚ್ಚಿಸುವ ಕಾರ್ಯ ಮಾಡಬೇಕಾಗಿದೆ. ಅದಕ್ಕಾಗಿ ಪ್ರಧಾನ ಮಂತ್ರಿ ನರೇಗಾ ಯೋಜನೆಯಡಿ 1861 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೆ 249 ರೂ.ಇದ್ದ ಕೂಲಿ ಹಣವನ್ನು 275…
ತುಮಕೂರು: ಜಿಲ್ಲೆಯಲ್ಲಿ ಇಂದು 2 ಹೊಸ ಕರೋನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ನಾಗೇಂದ್ರಪ್ಪ ನವರು ತಿಳಿಸಿದ್ದಾರೆ. 30 ವರ್ಷದ ಓರ್ವ ವ್ಯಕ್ತಿ P-2771 ದೆಹಲಿಯಿಂದ ಪಾವಗಡಕ್ಕೆ ಬಂದಿದ್ದು ಅಲ್ಲಿಯೇ ಕ್ವಾರಂಟೈನ್ ಮಾಡಲಾಗಿತ್ತು. 22 ವರ್ಷದ ವ್ಯಕ್ತಿ P-2771 ಕುಣಿಗಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇಬ್ಬರ ಗಂಟಲು ದ್ರವದ ಸ್ಯಾಂಪಲ್ ಪಡೆದು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಇಂದು ವರದಿ ಬಂದಿದ್ದು, ಇಬ್ಬರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಪ್ರಸ್ತುತ ಸೋಂಕಿತರನ್ನು ತುಮಕೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ನಾಗೇಂದ್ರಪ್ಪ ನವರು ತಿಳಿಸಿದ್ದಾರೆ.
ತುಮಕೂರು: ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮಾಡುವ ಹೇಮಾವತಿ ನೀರು ಗೊರೂರು ಜಲಾಶಯದಿಂದ ಗೊರೂರು 2.50 ಮೀಟರ್ ಹರಿದು ಬರುತ್ತಿರುವುದನ್ನು ವೀಕ್ಷಿಸಿದ ಸಾರ್ವಜನಿಕ ಸುರಕ್ಷಾ ಸಮಿತಿ ಸದಸ್ಯರು ಹರ್ಷ ವ್ಯಕ್ತಪಡಿಸಿ ಘನ ಸರ್ಕಾರಕ್ಕೆ ಅಭಿನಂದಿಸಿದ್ದಾರೆ. ಬುಗುಡನಹಳ್ಳಿಯಲ್ಲಿ ಹೇಮಾವತಿ ನೀರಿನ ಸಂಗ್ರಹಣೆ ದಿನೇ ದಿನೇ ಕಮ್ಮಿಯಾಗಿ ತುಮಕೂರು ನಗರ ನಾಗರೀಕರಿಗೆ ನೀರಿನ ಪೂರೈಕೆ ವ್ಯತ್ಯಯವಾಗಬಹುದೆಂಬ ಆತಂಕ ಎದುರಾಗಿತ್ತು. ಈ ಸಂಬಂಧ ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಕಳೆದ ವಾರ ಭೇಟಿ ನೀಡಿ ನೀರಿನ ಲಭ್ಯತೆ ವೀಕ್ಷಿಸಿ ಘನ ಸರ್ಕಾರ, ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆ ಆಡಳಿತಕ್ಕೆ ಸುರಕ್ಷಾ ಸಮಿತಿ ಜಿಲ್ಲಾಧ್ಯಕ್ಷ ಕೆ.ಪಿ. ಮಹೇಶ ನೇತೃತ್ವದಲ್ಲಿ ಸಾಂಕೇತಿಕ ಪ್ರತಿಭಟನೆ ಮಾಡಿ ಮನವಿ ಮೂಲಕ ಗಮನ ಸೆಳೆದಿದ್ದನ್ನು ಗಮನಿಸಬಹುದಾಗಿದೆ. ಬುಗುಡನಹಳ್ಳಿ ಜಲ ಸಂಗ್ರಹಾಗಾರದ ಒಟ್ಟು ಸಂಗ್ರಹಣಾ ಸಾಮಥ್ಯ 282 MCFT ಆಗಿದ್ದು ಇದರ ಜೊತೆಗೆ ಹೆಬ್ಬಾಕದ ಕೆರೆಯಲ್ಲೂ 152 ಒಅಈಖಿ ಹೇಮಾವತಿ ನೀರು ಸಂಗ್ರಹಣೆ ಮಾಡುವ ಸಾಮಥ್ಯವಿದೆ.…
ಗುಬ್ಬಿ: ಕೃಷಿ ಚಟುವಟಿಕೆಗೆ ಲಾಕ್ಡೌನ್ ಆದೇಶ ಅಡ್ಡಿಯಾದ ಪರಿಣಾಮ ಭತ್ತದ ಕೊಯ್ಲು ತಡವಾದ ಹಿನ್ನಲೆಯಲ್ಲಿ ಭತ್ತದ ತೆನೆ ಗಾಳಿ ಮಳೆಗೆ ಮಣ್ಣುಪಾಲಾದ ಘಟನೆ ಎಂ.ಎಚ್.ಪಟ್ಟಣ ಕೆರೆ ಗದ್ದೆಬಯಲಿನಲ್ಲಿ ನಡೆದಿದೆ. ಹೇಮಾವತಿ ನೀರು ಹರಿದು ತುಂಬಿದ ಎಂ.ಎಚ್.ಪಟ್ಟಣ ಮತ್ತು ಗುಬ್ಬಿ ಅಮಾನಿಕೆರೆ ಗದ್ದೆ ಬಯಲು ಹಲವು ವರ್ಷಗಳ ನಂತರ ಭತ್ತದ ಪೈರು ನಳನಳಿಸಿತು. ಹಸಿರು ಬಣ್ಣದ ಪೈರು ರೈತನ ಮುಖದಲ್ಲಿ ಸಂತಸ ತುಂಬಿದ ನಂತರದಲ್ಲಿ ಲಾಕ್ಡೌನ್ ಆದೇಶದ ಮಧ್ಯೆ ಬಂಗಾರ ಬಣ್ಣಕ್ಕೆ ತಿರುಗಿದ ಗದ್ದೆಯಲ್ಲಿ ಭತ್ತದ ಕೊಯ್ಲು ಮಾಡುವುದು ಕಷ್ಟವಾಯಿತು. ಕೂಲಿ ಆಳುಗಳ ದೊರೆಯದೇ ಪರದಾಡುವ ಈ ಸಂದರ್ಭದಲ್ಲಿ ಮುಯ್ಯಾಳು ಪದ್ದತಿ ಕೂಡಾ ಅನುಸರಿಸುವಂತಿಲ್ಲ. ಸಾಮಾಜಿಕ ಅಂತರದ ಭೀತಿಯ ನಡುವೆ ಭತ್ತದ ತೆನೆ ಕೊಯ್ಲು ಯಂತ್ರ ಕರೆಸಿದರೆ ಈ ಲಾಕ್ಡೌನ್ ಆದೇಶದ ನಿಯಮಗಳು ರೈತರನ್ನು ಕಂಗೆಡಿಸಿತು. ತಮಿಳುನಾಡು ಮೂಲದ ಯಂತ್ರಗಳು ತೆನೆ ಕೊಯ್ಯಲು ಬಂದು ರೈತರ ಗದ್ದೆಗೆ ಇಳಿಯುವ ಮುನ್ನ…
ತುರುವೇಕೆರೆ: ಬಡವರ ಪರವಾಗಿ ಸದಾ ಚಿಂತಿಸುವ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬಡವರ ಬಂದು ಯೋಜನೆಯ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಯತ್ತ ಬ್ಯಾಂಕ್ ಸಾಲ ಸವಲತ್ತುಗಳನ್ನು ಕೊಂಡೊಯ್ಯುವ ಕೆಲಸ ಮಾಡಿದ್ದಾರೆ ಎಂದು ಶಾಸಕ ಮಸಾಲಜಯರಾಮ್ ತಿಳಿಸಿದರು. ಪಟ್ಟಣದ ಡಿ.ಸಿ.ಸಿ. ಬ್ಯಾಂಕ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಬಡವರ ಬಂದು ಯೋಜನಯಡಿ ಬೀದಿ ಬದಿ ವ್ಯಾಪಾರಿಗಳಿಗೆ 10.000 ಸಾವಿರ ರೂಪಾಯಿಗಳ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು ಡಿ.ಸಿ.ಸಿ. ಬ್ಯಾಂಕ್ ಒಂದು ಸಹಕಾರಿ ಬ್ಯಾಂಕ್ಆಗಿ ಕೋಟ್ಯಾಂತರ ರೂಪಾಯಿಗಳ ವ್ಯವಹಾರ ನಡೆಸುತತಿದ್ದು, ರೈತರಿಗೂ ಸಾಲ ನೀಡುವ ಜೊತೆಗೆ ಬಡ ಜನರಿಗೆ ಯಾವುದೇ ಗ್ಯಾರಂಟಿಯಿಲ್ಲದೆ ಸಾಲ ನೀಡುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದೆ, ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೂಡ ರೈತರುಗಳಿಗೆ ವರ್ಷಕ್ಕೆ 10.000ಸಾವಿರ ನೀಡುತ್ತಾ ರೈತರ ಪರವಾಗಿ ಕೆಲಸ ನಿರ್ವಹಿಸುತ್ತಿದೆ ಸಹಕಾರಿ ಕ್ಷೇತ್ರದಲ್ಲಿ ರೈತರಿಗೆ ಬಡ್ಡಿ ರಹಿತ ಸಾಲ ನೀಡುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ನಾನು ಚರ್ಚಿಸುತ್ತೇನೆ, ರೈತರ ಮಗನಾಗಿ…
ತುಮಕೂರು: ಕೊರೋನಾ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿಯನ್ನು ನೀಡಿ ಸರ್ಕಾರ ಆದೇಶ ನೀಡಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಮೇಯರ್ ಫರೀದಾಬೇಗಂ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ತಿ ತೆರಿಗೆ ಪಾವತಿಗೆ ಮೇ ಅಂತ್ಯದವರೆಗೆ ಅವಕಾಶ ನೀಡಲಾಗಿತ್ತು, ಈಗ ಅದನ್ನು ಜುಲೈ ಅಂತ್ಯದವರೆಗೆ ತೆರಿಗೆ ಪಾವತಿಗೆ ಅವಕಾಶ ನೀಡಿದ್ದು, ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡಿಸಿಕೊ ಳ್ಳಬೇಕು ಎಂದು ಅವರು ಹೇಳಿದರು. ಪ್ರತಿ ಮೂರು ವರ್ಷಕ್ಕೆ ಆಸ್ತಿ ತೆರಿಗೆ ಹೆಚ್ಚಳವಾಗಬೇಕಿದ್ದು ಅದರಂತೆ ಸ್ಥಾಯಿ ಸಮಿತಿ ಅಧ್ಯಕ್ಷರೊಂದಿಗೆ ಚರ್ಚಿಸಿ ಒಪ್ಪಿಕೊಂಡಿ ದ್ದೇವೆ, ವಿಡಿಯೋ ಕಾನ್ಫೆರೆನ್ಸ್ನಲ್ಲಿ ಸದಸ್ಯರು ಒತ್ತಾಯ ಮಾಡಿದ್ದರು, ಶಾಸಕರು, ಸಂಸದರು ಈ ಬಗ್ಗೆ ಮಾತನಾಡುವ ಭರವಸೆ ನೀಡಿದ್ದರು, ಶೇ.15ರಷ್ಟು ತೆರಿಗೆ ಹೆಚ್ಚಳವನ್ನು ಮುಂದೂಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ಸರ್ಕಾರದ ನಿರ್ಧಾರದ ಮೇಲೆ ಆದೇಶ ಪಾಲನೆ ಮಾಡಲಾಗುವುದು ಎಂದು ಹೇಳಿದರು. ತುಮಕೂರಿಗರು ನಮ್ಮ ಜವಾಬ್ದಾರಿಯನ್ನು ಅರಿಯಬೇಕು, ಹೊರರಾಜ್ಯಗಳಿಂದ…
ಮಧುಗಿರಿ: ಮಧುಗಿರಿ ತಾ ಪುರವರ ಹೋ ಬ್ಯಾಲ್ಯ ಗ್ರಾಮದ ನಿವೇಶನ ರಹಿತರು ಇದೇ ಗ್ರಾಮದ ಸ್ಮಶಾನ ಪಕ್ಕದಲ್ಲಿ ಸುಮಾರು 10 ತಿಂಗಳಿಂದ ಗುಡಿಸಲು ನಿರ್ಮಿಸಿಕೊಂಡು ವಾಸವಿದ್ದು, ಈ ಬಡ ನಿರ್ಗತಿಕರು ಭೂಮಿ & ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಹಕಾರದೊಂದಿಗೆ ಕಳೆದ 2019 ನವೆಂಬರ್ ತಿಂಗಳಿಂದ ತುಮಕೂರು ಜಿಲ್ಲಾದಿಕಾರಿಗಳ ಕಛೇರಿ ಮುಂಭಾಗ 14 ದಿನಗಳ ಕಾಲ ಅಹೋರಾತ್ರಿ ದರಣಿ ಹಮ್ಮಿಕೊಂಡ ಸಮಯದಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ರವರು ಇದೇ ಬ್ಯಾಲ್ಯ ಗ್ರಾಮದ ಚೌಡಮ್ಮ ದೇವಸ್ಥಾನದ ಪಕ್ಕ ಗ್ರಾಮಠಾಣ ಜಾಗದಲ್ಲಿ ನಿವೇಶನ ವಿಂಗಡಿಸಿ ನಿಯಮಾನುಸಾರ ನಿವೇಶನ ರಹಿತರಿಗೆ ಹಂಚಿಕೆ ಮಾಡಲು ಮಧುಗಿರಿ EO, ಬ್ಯಾಲ್ಯ ಗ್ರಾಮದ PDO ರವರಿಗೆ ನಿರ್ದೇಶನ ನೀಡಿದ್ದರು. EO, ಮತ್ತು PDO ರವರ ಕಾಲ ವಿಳಂಬ,ನಿರ್ಲಕ್ಷ್ಯದಿಂದ ಈ ಜಾಗವನ್ನು ಒತ್ತುವರಿ ಮಾಡಿ ತಿಪ್ಪೆ ,ಬಣವೆ ಹಾಕಿಕೊಂಡಿದ್ದ ಕೆಲವರು ನ್ಯಾಯಲಯದಲ್ಲಿ ತಡೆಯಾಜ್ಞೆ ತಂದಿರುತ್ತಾರೆ. ಈ ಮದ್ಯೆ ಕೋವಿಡ್-19…
ಮಧುಗಿರಿ: ಪಟ್ಟಣಕ್ಕೆ ಕುಡಿಯುವ ನೀರೊದಗಿಸುವ ಸಿದ್ದಾಪುರ ಕೆರೆಗೆ ಹೇಮಾವತಿ ನಾಲೆಯಿಂದ 30 ದಿನಗಳು ನೀರು ಹರಿಯಲಿದ್ದು, ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಪಟ್ಟಣಕ್ಕೆ ಕುಡಿಯುವ ನೀರೊದಗಿಸುವ ಸಿದ್ದಾಪುರ ಕೆರೆಗೆ 50 ಲಕ್ಷ ವೆಚ್ಚದಲ್ಲಿ ಹಮ್ಮಿಕೊಂಡಿರುವ ಕೆರೆ ಹೂಳೆತ್ತುವ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು ಕೆರೆಯಲ್ಲಿ ಹೆಚ್ಚಿನ ನೀರು ಸಂಗ್ರಹವಾಗುವ ಉದ್ದೇಶದಿಂದ ಹೂಳೆತ್ತುವ ಹಾಗೂ ಏರಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ. ಈಗ ಹೇಮಾವತಿ ನೀರು ಹರಿಯುತ್ತಿದ್ದು, ಮಳೆಗಾಲ ಆರಂಭವಾದರೆ ಮಳೆ ನೀರು ಹೆಚ್ಚಾದರೆ ಕೆಲಸ ಮಾಡಲು ಸಾಧ್ಯವಿಲ್ಲ. ಅಷ್ಟರಲ್ಲಿ ಕೆಲಸ ಮುಗಿಸಿದರೆ ಹೆಚ್ಚಿನ ನೀರು ಸಂಗ್ರಹ ಮಾಡಬಹುದು. ಆದಷ್ಟೂ ಬೇಗ ಕಾಮಗಾರಿಯನ್ನು ಗುಣಮಟ್ಟದಲ್ಲಿ ಮುಗಿಸುವಂತೆ ಸೂಚಿಸಿದರು. ಸೋಮವಾರ ಸಂಜೆಯಿಂದ ಪಟ್ಟಣದ ಸಿದ್ದಾಪುರ ಕೆರೆಗೆ ಹೇಮಾವತಿ ನೀರು ಹರಿಯುತ್ತಿದ್ದು, ಪಟ್ಟಣದ ನೀರಿನ ಸಮಸ್ಯೆ ಬಗೆಹರಿಯಲಿದೆ. ಮುಂದಿನ ಮಳೆಗಾಲದವರೆಗೂ ನೀರಿನ ಲಭ್ಯತೆ ಇರುವಂತೆ ಪುರಸಭೆ ನಿಗದಿತ ಸಮಯದಲ್ಲೇ…











