Author: News Desk Benkiyabale

ಮಧುಗಿರಿ:       ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಿರಂತರ ಪ್ರಕೃತಿ ವಿಕೋಪಗಳು ಕಾಡುತ್ತಿದ್ದು, ಸಾರ್ವಜನಿಕ ಆಸ್ತಿ ಸೇರಿದಂತೆ ಸುಮಾರು 35 ಸಾವಿರ ಕೋಟಿ ನಷ್ಟವಾಗಿದ್ದು, ಇದರ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.        ಶುಕ್ರವಾರ ಪಾವಗಡಕ್ಕೆ ಹೋಗುವ ಮಾರ್ಗ ಮಧ್ಯೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೆರೆ ಹಾವಳಿಯಿಂದಾಗಿ ರಾಜ್ಯಕ್ಕೆ ಬಹಳಷ್ಟು ತೊಂದರೆಯುಂಟಾಗಿದ್ದು 2020-21 ನೇ ಸಾಲಿನಲ್ಲಿ ಬಜೆಟ್‍ನಲ್ಲಿ ಇವುಗಳ ದುರಸ್ತಿ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಿ ತುರ್ತು ದುರಸ್ಥಿಗಾಗಿ 750 ಕೋಟಿ ಬಿಡುಗಡೆ ಮಾಡಿ ಕೆಲಸ ಕೈಗೆತ್ತಿಕೊಂಡಿದ್ದು, ಬಜೆಟ್ ಅನುಮೋದನೆಗೆ ಹೋಗುವ ಸಮಯದಲ್ಲಿ ಮಾರ್ಚ್‍ನಲ್ಲಿ ಕರೊನಾ ಹಾವಳಿಯಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಸಮಸ್ಯೆಗೆ ಸಿಲುಕಿದ್ದರಿಂದ ಕಾಮಗಾರಿಗಳ ಪ್ರಗತಿಗೆ ಹಿನ್ನಡೆಯಾಗಿದೆ. ಲಾಕ್‍ಡೌನ್ ವೇಳೆಯಲ್ಲಿ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ಮರಳಿರುವುದರಿಂದ ಹೊರ ರಾಜ್ಯದ ಕಾರ್ಮಿಕರ ಕೊರತೆಯೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ. ಕಾರ್ಮಿಕರ ಲಭ್ಯತೆಯ ನಂತರ ಕಾಮಗಾರಿಗಳನ್ನು…

Read More

ಪಾವಗಡ:       ಸಮಾಜಕಲ್ಯಾಣ ಇಲಾಖೆಯಿಂದ ಒಟ್ಟು 88 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಅಂಬೇಡ್ಕರ್ ಭವನ, ಸರ್ಕಾರಿ ಬಾಲಕರ ವಸತಿ ನಿಲಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖಾ ಸಚಿವ ಗೋವಿಂದ ಕಾರಜೋಳ ಹೇಳಿದರು.       ಶುಕ್ರವಾರ ಪಾವಗಡದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯವನ್ನು ನೆರವೇರಿಸಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖಾ ಸಚಿವರೂ ಅದ ಗೋವಿಂದ ಕಾರಜೋಳ ನಮ್ಮ ಬಿ.ಜೆ.ಪಿ. ಸರ್ಕಾರದ ಉದ್ದೇಶ ಮಕ್ಕಳಿಗೆ ಶಿಕ್ಷಣ ಕೊಡುವುದಾಗಿದೆ, ತಾಲ್ಲೂಕಿನಲ್ಲಿ ವಸತಿನಿಲಯಗಳು ಪ್ರಾರಂಭವಾಗಿದ್ದರಿಂದ 1600 ಮಕ್ಕಳಿಗೆ ಅನುಕೂಲವಾಗುತ್ತಿದೆ. ಸರ್ಕಾರದ ಮುಖ್ಯ ಆಧ್ಯತೆ ಶಿಕ್ಷಣ. ಬಜೆಟ್‍ನಲ್ಲಿ ಬಡವರ ಪರ ಯೋಜನೆಗಳನ್ನು ಘೋಷಣೆ ಮಾಡಲಾಗುತ್ತಿದೆ. 559 ಕೋಟಿ ಅನುದಾನವನ್ನು ಎಸ್.ಸಿ/ಎಸ್.ಟಿ. ಜನಾಂಗದ ಅಭಿವೃದ್ಧಿಗಾಗಿ ಹಾಗೂ 25.388 ಕೋಟಿ ಖರ್ಚು ಮಾಡಲಾಗಿದೆ.       2019-20 ಸಾಲಿನಲ್ಲಿ ಕೊರೊನಾ ಲಾಕ್‍ಡೌನ್‍ನಿಂದ ಪ್ರಗತಿ ಕುಂಟಿತವಾಗಿದೆ. ಆದರೂ ಸಹ ನಮ್ಮ…

Read More

ಚಿಕ್ಕನಾಯಕನಹಳ್ಳಿ:       ಮಾಲಿನ್ಯ ನಿಯಂತ್ರಿಸಿ ಜೀವ ವೈವಿಧ್ಯ ಉಳಿಸಿ ಆಂದೋಲನಕ್ಕೆ ಸಚಿವ ಜೆ.ಸಿ. ಮಾಧುಸ್ವಾಮಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.       ತಾಲ್ಲೂಕಿನ ಜೆ.ಸಿ.ಪುರ ಗ್ರಾಮದಲ್ಲಿ ವಿಸ್ವ ಪರಿಸರ ದಿನದ ಅಂಗವಾಗಿ ಅರಣ್ಯ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಪ್ರಕೃತಿ ಉದಯದ ಸಾವಿರಾರು ವರ್ಷದ ನಂತರ ಸೃಷ್ಠಿಯಾದ ಮಾನವನ ದುರಾಸೆಗೆ ಇಂದು ಇಡೀ ಪರಿಸರ ಕಲುಷಿತಗೊಂಡಿದೆ. ಶುದ್ದ ಜಲ,ಗಾಳಿ ಹಾಗೂ ಆಹಾರಕ್ಕಾಗಿ ನಾವು ಪರಿಸರವನ್ನೆ ಅವಲಂಭಿಸುವುದು ಅನಿವಾರ್ಯವೆನಿಸಿದೆ.       ಈ ನಿಟ್ಟಿನಲ್ಲಿ ಪರಿಸರದ ಸಮತೋಲನಕ್ಕೆ ಅರಣ್ಯೀಕರಣವಾಗಲೇ ಬೇಕಿದೆ. ಇದರ ಅಂಗವಾಗಿ ಮಾಲಿನ್ಯ ನಿಯಂತ್ರಿಸಿ ಜೀವ ವೈವಿಧ್ಯ ಉಳಿಸಿ ಆಂದೋಲನ ರಾಜ್ಯವ್ಯಾಪಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.       ವಲಯ ಅರಣ್ಯಾಧಿಕಾರಿ ಸುನೀಲ್ ಮಾತನಾಡಿ ಅರಣ್ಯ ಸಸಿಗಳನ್ನು ತಮ್ಮ ಜಮೀನುಗಳಲ್ಲಿ ಬೆಳೆಸುವ ಸಲುವಾಗಿ ಉಚಿತ ಸಸಿಗಳನ್ನು ರೈತರಿಗೆ ನೀಡಲಾಗುತ್ತಿದೆ. ಆಲ, ಅತ್ತಿ, ಹಲಸು, ಮಹೋಗನಿ, ಬೇವು, ಅರಳಿ…

Read More

ಮಧುಗಿರಿ :       ರೈತರ ಮನೆ ಬಾಗಿಲಿಗೆ ತೆರಳಿ ನೇರವಾಗಿ ಜಾನುವಾರುಗಳ ಸಮಸ್ಯೆಗೆ ಸ್ಪಂದಿಸಿ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ವಿನೂತನ ಕಾರ್ಯಕ್ರಮ ಪಶು ಸಂಗೋಪನಾ ಇಲಾಖೆಯ ಈ ಗ್ರಾಮ ವಾಸ್ತವ್ಯ ಎಂದು ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ರೆ.ಮಾ.ನಾಗಭೂಷಣ್ ಎಂದು ತಿಳಿಸಿದರು.       ತಾಲೂಕಿನ ಮರಬಳ್ಳಿ-ರಂಗನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಾಲೂಕಿನ ಪ್ರಥಮ ಕಾರ್ಯಕ್ರಮ ಇದಾಗಿದ್ದು ಗ್ರಾಮದ ಪಶು ಸಾಕಣೆ, ರಕ್ಷಣೆ ಹಾಗೂ ಆರೋಗ್ಯದ ಬಗ್ಗೆ ಅರಿವನ್ನು ಮೂಡಿಸುವುದರ ಜೊತೆಗೆ,ಜಾನುವಾರುಗಳ ಆರೋಗ್ಯ ಅಭಿವೃದ್ಧಿ ಬಗ್ಗೆ ರೈತರಿಗೆ ಮಾಹಿತಿ ನೀಡಿದರು, ಇಂತಹ ಗ್ರಾಮ ವಾಸ್ತವ್ಯವನ್ನು 15 ದಿನಗಳಿಗೊಮ್ಮೆ ಪ್ರತಿ ಗ್ರಾಮದಲ್ಲೂ ನಡೆಸುತ್ತೇವೆ ಎಂದು ಡಾ.ನಾಗಭೂಷಣ್ ತಿಳಿಸಿದರು.       ಇದೇ ಸಂದರ್ಭದಲ್ಲಿ ಸುಮಾರು 10 ಜಾನುವಾರುಗಳಿಗೆ ಬಂಜೆತನಕ್ಕೆ ಚಿಕಿತ್ಸೆ, 4 ಕ್ಕೆ ಗರ್ಭ ಪರೀಕ್ಷೆ, 5 ರಾಸುಗಳಿಗೆ ಸಾಮಾನ್ಯ ಪರೀಕ್ಷೆ ನೆಡೆಸಿದ್ದು, ಎಲ್ಲ ರಾಸುಗಳಿಗೆ ಜಂತು ನಿವಾರಕ…

Read More

ಕೊಡಿಗೇನಹಳ್ಳಿ:       ಜಯಮಂಗಲಿ ಕೃಷ್ಣ ಮೃಗ ವನ್ಯಧಾಮದ ವ್ಯಾಪ್ತಿಯಲ್ಲಿ ಕಳೆದ 10 ದಿನಗಳಿಂದ ಸಂಜೆ ಹೊತ್ತಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗುತ್ತಿದ್ದು ಈ ಭಾಗದ ರೈತರಲ್ಲಿ ಆತಂಕ ಸೃಷ್ಟಿಸಿದೆ.       ಹೋಬಳಿಯ ಮೈದನಹಳ್ಳಿ ವನ್ಯಧಾಮದ ಗಡಿಯಲ್ಲಿರುವ ದೊಡ್ಡೇನಹಳ್ಳಿ ಸರ್ವೆ ನಂ 9, 11, 12 ವ್ಯಾಪ್ತಿಯಲ್ಲಿ ನಾಯಿಗಳು ಹಾಗೂ ಜಿಂಕೆಗಳ ಮೇಲೆ ದಾಳಿ ಮಾಡುತ್ತಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸಂಜೀವರಾಯಪ್ಪ ಎಂಬುವವರ ಹಸು ಮೇಲೆ ದಾಳಿ ಮಾಡಿದ್ದು, ರಮೇಶ ಎಂಬುವವರ ಸುಮಾರು 2 ಕುರಿಗಳನ್ನು ಹೊತ್ತೋಯ್ದದ ಘಟನೆ ನಡೆದಿದೆ.       ಹೊಲಗಳಲ್ಲಿ ಸಾಕಿದ್ದ ನಾಯಿಗಳನ್ನು ಎಳೆದೊಯ್ಯುತಿದ್ದು, ಜಾನುವಾರುಗಳ ಮೇಲೆ ಎರಗುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳಾದ ರಾಜಣ್ಣ, ಶಾಂತರಾಜು, ಸುರೇಶ್. ಎನ್ ಕೆ. ಗಂಗಯ್ಯ, ವಿಜಿ ಕುಮಾರ್ ಆರೋಪಿಸಿದ್ದಾರೆ.       ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದು ಮಧುಗಿರಿ ರೇಂಜರ್ ಕಚೇರಿಗೆ ದೂರು ಕೊಡಿ ಎಂದು ಇಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರೆ ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು…

Read More

ತುಮಕೂರು:        ಕೋವಿಡ್-19 ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಲು ಕಷ್ಯ ಸಾಧ್ಯ. ಹಾಗಾಗಿ ಪದಗ್ರಹಣ ಸಮಾರಂಭವನ್ನು ಪ್ರತಿಯೊಬ್ಬ ಕಾರ್ಯಕರ್ತರು ವೀಕ್ಷಿಸಲು ಅನುವಾಗುವಂತೆ ಜಿಲ್ಲೆಯ ಎಲ್ಲ ಪಂಚಾಯ್ತಿ ಮಟ್ಟದಲ್ಲಿ ಮತ್ತು ವಾರ್ಡ್‍ಗಳ ವ್ಯಾಪ್ತಿಯಲ್ಲಿ ಎಲ್.ಇ.ಡಿ. ಅಳವಡಿಸಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್. ರಾಜೇಂದ್ರ ಹೇಳಿದರು.        ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಸಮರ್ಥ ಹಾಗೂ ದಕ್ಷ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿರುವುದು ಪಕ್ಷಕ್ಕೆ ದೊಡ್ಡ ಶಕ್ತಿಯನ್ನು ತಂದಿದೆ. ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರುವಂತಹ ಕೆಲಸವನ್ನು ಮಾಡುವುದಾಗಿ ಹೇಳಿದರು.  …

Read More

ತುಮಕೂರು:       ಕೆಲವು ದಿನಗಳ ಹಿಂದೆ ಜಿಲ್ಲೆಯಾದ್ಯಂತ ಸುದ್ದಿಯಾಗಿದ್ದ ಮತ್ತಿಬ್ಬರು ಕೊರೊನಾ ರೋಗಿಗಳು ಪತ್ತೆಯಾಗಿದ್ದಾರೆ ಎಂಬ ವಿಚಾರ ಸುಳ್ಳಾಗಿದ್ದು, ಅವರೆಡು ಕೂಡ ಹಳೆಯ ಪ್ರಕರಣಗಳೇ ಎಂದಿದ್ದಾರೆ.       ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗೇಂದ್ರಪ್ಪ ಮಾತನಾಡಿದ್ದು, `ರಾಜ್ಯ ಇಲಾಖೆ ಪ್ರಕಟಿಸಿರುವ 2 ಪ್ರಕರಣಗಳು ಹಳೆಯದಾಗಿವೆ. ಪಿ-1612, ಪಿ-1614 ಕೊರೊನಾ ಸೋಂಕಿತ ವ್ಯಕ್ತಿಗಳು ಮೇ 21ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪದ್ಧ್ದತಿಯಂತೆ ಇವರ 10ನೇ ದಿನದ ವರದಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ರಾಜ್ಯಮಟ್ಟದಲ್ಲಿ ಅನಾವಶ್ಯಕವಾಗಿ ಕಣ್ತಪ್ಪಿನಿಂದಾಗಿದ್ದು, ಈ ಸಂಬಂಧ ಯಾವುದೇ ಭಯಪಡುವ ಅಗತ್ಯವಿಲ್ಲ. ಹಳೆಯ ಪ್ರಕರಣಗಳನ್ನೇ ಹೊಸ ಪ್ರಕರಣವೆಂದು ದಾಖಲಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Read More

ತುಮಕೂರು:       ತುಮಕೂರು ಜಿಲ್ಲಾ ಪಂಚಾಯ್ತಿ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ಸದಸ್ಯರ 3 ನೇ ಅವಧಿಗೆ ಮಂಗಳವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.       ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಚಿಕ್ಕನಾಯಕನಹಳ್ಳಿ ತಾಲೂಕು ಕಂದಿಕೆರೆ ಕ್ಷೇತ್ರದ ಸದಸ್ಯೆ ಮಂಜುಳಾ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಧುಗಿರಿ ತಾಲೂಕಿನ ದೊಡ್ಡೇರಿ ಕ್ಷೇತ್ರದ ಸದಸ್ಯ ಚೌಡಪ್ಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಂದನಕೆರೆ ಕ್ಷೇತ್ರದ ರಾಮಚಂದ್ರಯ್ಯ ಆಯ್ಕೆಯಾಗಿದ್ದಾರೆ.       ಉಳಿದಂತೆ ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಲತಾ ರವಿಕುಮಾರ್ ಹಾಗೂ ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಾರದ ನರಸಿಂಹಮೂರ್ತಿ ಮುಂದುವರೆದಿದ್ದಾರೆ. ವಿವಿಧ ಸಮಿತಿಗಳಿಗೆ ಆಯ್ಕೆಯಾದ ಸದಸ್ಯರ ಪಟ್ಟಿ: ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ : ಗೌರಮ್ಮ ಎಸ್.ಟಿ.ಮಹಾಲಿಂಗಯ್ಯ, ಭಾರತಿ ಹಿತೇಶ್, ಜೆ.ಶಿವಮ್ಮ ಗಾಯಿತ್ರಿದೇವಿ. ಎಸ್. ಪದ್ಮ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ…

Read More

ತುಮಕೂರು :       ತುಮಕೂರಿನಲ್ಲಿ ಸಿಆರ್​ಪಿಎಫ್ ಯೋಧನ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಸಾವನಪ್ಪಿರುವುದು ಅನುಮಾನ ಮೂಡಿಸಿದೆ.       ತುಮಕೂರು  ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು,  24 ವರ್ಷದ ಗೌರಮ್ಮ ಮೃತ ಮಹಿಳೆ. ಸಿಆರ್​ಪಿಎಫ್​ ಯೋಧ ರವೀಶ್ ಹಾಗೂ ಗೌರಮ್ಮ 6 ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಆಕೆಗೆ ಗಂಡನ ಮನೆಯಲ್ಲಿ ನಿರಂತರವಾಗಿ ಕಿರುಕುಳ ನೀಡಲಾಗುತ್ತಿತ್ತು ಎಂದು ಮೃತಳ ತಂದೆ ತಾಯಿ ಆರೋಪಿಸಿದ್ದಾರೆ. ಇದೀಗ ನೇಣು ಬಿಗಿದುಕೊಂಡು ಗೌರಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ, ರವೀಶ್​ ಕುಟುಂಬಸ್ಥರು ಪರಾರಿಯಾಗಿದ್ದಾರೆ.          ಮದುವೆ ಸಂದರ್ಭದಲ್ಲಿ ಸಾಕಷ್ಟು ಒಡವೆ ನೀಡಿ ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಇಷ್ಟಾದರೂ ಗೌರಮ್ಮನಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ಇದೀಗ ಆಕೆಯ ಸಾವಿಗೂ ಗಂಡನ ಮನೆಯವರ ಕಿರುಕುಳ ಕಾರಣ. ಗೌರಮ್ಮನನ್ನು ಚೆನ್ನಾಗಿ ಥಳಿಸಿ ಸಾಯಿಸಿದ್ದಾರೆ. ಬಳಿಕ ನೇಣು ಬಿಗಿಯಲಾಗಿದೆ ಎಂದು ಗೌರಮ್ಮನ ಕುಟುಂಬಸ್ಥರು ದೂರಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಗೌರಮ್ಮಳನ್ನು ಜಿಲ್ಲಾಸ್ಪತ್ರೆಗೆ…

Read More

 ತುಮಕೂರು :       ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ಜಿಲ್ಲಾ ವ್ಯಾಪ್ತಿಯಿಂದ ತಾಲ್ಲೂಕು ಕೇಂದ್ರಗಳಿಗೆ ಹಾಗೂ ತಾಲ್ಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಕ್ಕೆ ಕೊನೆಯ ವಾಹನಗಳ ಕಾರ್ಯಾಚರಣೆಯ ಸಮಯ ನಿಗಧಿಪಡಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರಕುಮಾರ್ ಅವರು ತಿಳಿಸಿದ್ದಾರೆ.        ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಣಾಮದಿಂದ ದಿನಾಂಕ 31-05-2020ರವರೆಗೆ ಜಾರಿಯಾಗಿದ್ದ 04 ನೇ ಹಂತದ ಲಾಕ್ ಡೌನ್ ನ್ನು ಸರ್ಕಾರವು ದಿನಾಂಕ-01/06/2020 ರಿಂದ ಜಾರಿಗೆ ಬರುವಂತೆ ವಿನಾಯಿತಿ ನೀಡಿ 5 ನೇ ಹಂತದ ಲಾಕ್‍ಡೌನ್‍ನ್ನು ಜಾರಿಗೊಳಿಸಿರುವಂತೆ ಕಾರ್ಯಾಚರಣೆಯನ್ನು ನಡೆಸುತ್ತಿರುವುದು ಸರಿಯಷ್ಠೆ. ಸರ್ಕಾರದ ನಿರ್ದೇಶನದಂತೆ ರಾತ್ರಿ 09:00 ಗಂಟೆಯಿಂದ ಬೆಳಗ್ಗೆ 05:00 ಗಂಟೆಯವರೆಗೆ ಕಫ್ರ್ಯೂ ಜಾರಿಯಲ್ಲಿದ್ದು ಬೆಳಗ್ಗೆ 05:00 ಗಂಟೆಯಿಂದ ರಾತ್ರಿ 09:00 ಗಂಟೆಯವರೆಗೆ ವಾಹನ ಸಂಚಾರ ಇರುತ್ತದೆ.       ತುಮಕೂರು ಜಿಲ್ಲಾ ಕೇಂದ್ರದಿಂದ ತಾಲ್ಲೂಕು ಕೇಂದ್ರ ಹಾಗೂ ತಾಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಕ್ಕೆ ಕೊನೆಯ ವಾಹನಗಳ ಸಮಯ ಇಂತಿದೆ. ಜಿಲ್ಲಾ…

Read More