Author: News Desk Benkiyabale

ತುಮಕೂರು:       ರಸ್ತೆ ಪಕ್ಕ ನಿಲ್ಲಿಸಿದ್ದ ಕಾರಿನ ಗಾಜು ಹೊಡೆದ ಕಳ್ಳರು ಕಾರಿನಲ್ಲಿದ್ದ ಕ್ಯಾಮೆರಾ, ಹಾರ್ಡ್ ಡಿಸ್ಕ್ ಹಾಗೂ 49 ಸಾವಿರ ರೂ. ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಇಲ್ಲಿನ ಎಂ.ಜಿ. ರಸ್ತೆಯಲ್ಲಿ ನಡೆದಿದೆ.       ತಾಲ್ಲೂಕಿನ ಕೋರಾ ಹೋಬಳಿಯ ಕೋಡಿಹಳ್ಳಿ ವಾಸಿ ರಾಜಣ್ಣ ಎಂಬುವರು ತುಮಕೂರಿನ ಎಂ.ಜಿ. ರಸ್ತೆಯಲ್ಲಿರುವ ಎಸ್‍ಬಿಐ ಬ್ಯಾಂಕ್‍ಗೆ ಹಣ ಕಟ್ಟಲು ಹೋದಾಗ ಕಾರಿನ ಹಿಂದಿನ ಬಾಗಿಲ ಗಾಜು ಹೊಡೆದಿರುವ ಕಳ್ಳರು ಕಾರಿನಲ್ಲಿದ್ದ ಕ್ಯಾಮೆರಾ, ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ರಾಜಣ್ಣ  ಪೊಲೀಸ್ ರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.       ಈ ಸಂಬಂಧ ತುಮಕೂರು ನಗರ ಠಾಣೆ  ಪೊಲೀಸ್ ರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ತುಮಕೂರು:       ಮಾಜಿ ಪ್ರಧಾನಿ,  ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್ ಡಿ ದೇವೇಗೌಡ ಹಾಗು ಗ್ರಾಮಾಂತರ ಶಾಸಕ ಡಿ.ಸಿ.ಗೌರೀಶಂಕರ್ ವಿರುದ್ದ ಅವಹೇಳನಕಾರಿ ಮಾತನಾಡಿದ್ದ ಮಾಜಿ ಶಾಸಕ ಸುರೇಶ್ ಗೌಡರ ಉದ್ದಟತನದ ನಡವಳಿಕೆ ಖಂಡಿಸಿ ಗ್ರಾಮಾಂತರ ಭಾಗದ ಸಾವಿರಾರು ಕಾರ್ಯಕರ್ತರು ಗ್ರಾಮಾಂತರ ಕ್ಷೇತ್ರದ ನಾಗವಲ್ಲಿಯಲ್ಲಿ ಭಾನುವಾರ ಬೃಹತ್ ಮೌನ ಪ್ರತಿಭಟನೆ ನಡೆಸಿದರು.       ನಾಗವಲ್ಲಿ ಸರ್ಕಲ್‍ನಲ್ಲಿ ಜಮಾಯಿಸಿದ ಸಾವಿರಾರು ಕಾರ್ಯಕರ್ತರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ, ಶಾಸಕ ಡಿ ಸಿ ಗೌರೀಶಂಕರ್ ಹಾಗು ಜೆಡಿಎಸ್ ಪಕ್ಷದ ಪರವಾಗಿ ಘೋಷಣೆ ಕೂಗಿದರು, ನಡುರಸ್ತೆಯಲ್ಲೇ ಕುಳಿತು ಜೆಡಿಎಸ್ ಪಕ್ಷದ ವರಿಷ್ಟರು ಹಾ ಶಾಸಕ ಡಿ ಸಿ ಗೌರೀಶಂಕರ್ ಮತ್ತು ಅವರ ಕುಟುಂಬದ ವಿರುದ್ದ ಅವಹೇಳನಕಾರಿ ಮಾತನಾಡಿರುವ ಮಾಜಿ ಶಾಸಕ ಸುರೇಶ್ ಗೌಡ ಬಹಿರಂಗವಾಗಿ ಹೇಳಿಕೆ ವಾಪಾಸು ಪಡೆಯುವಂತೆ ಆಗ್ರಹಿಸಿದರು.       ಪ್ರತಿಭಟನಾನಿರತರನ್ನುದ್ದೇಶಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿಮಹೇಶ್ ಮಾತನಾಡಿ ಮಾಜಿ…

Read More

ತುಮಕೂರು:       ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರ ಸ್ಪರ್ಧೆಯಿಂದ ರಾಷ್ಟ್ರ ರಾಜಕಾರಣದ ಕೆಂಗಣ್ಣಿಗೆ ಗುರಿಯಾಗಿತ್ತು. ತಮ್ಮ ಇಳಿ ವಯಸ್ಸಿನಲ್ಲಿ ಮೊಮ್ಮಕ್ಕಳಿಬ್ಬರನ್ನು ಕಣಕ್ಕಿಳಿಸಿ, ತನ್ನ ಸ್ಪರ್ಧೆ ಬಯಸಿ ತುಮಕೂರಿಗೆ ಅಡಿಯಿಟ್ಟ ದೇವೇಗೌಡರು ತನ್ನ ಕೊನೆಯ ಚುನಾವಣೆ ಎಂದಿದ್ದರಾದರೂ ಹಾಲಿ ಸಂಸದ ಮುದ್ದಹನುಮೇಗೌಡರ ಬೆಂಬಲಿಗರ ಆಕ್ರೋಷ ದೇವೇಗೌಡರ ನಿದ್ದೆ ಕೆಡಿಸಿತ್ತು. ದೇವೇಗೌಡರು ಜಾತ್ಯಾತೀತ ಜನತಾದಳದ ಪರಮೋಚ್ಚ ನಾಯಕರಾಗಿದ್ದರೂ ತುಮಕೂರು ಜಿಲ್ಲೆಯ ರಾಜಕಾರಣದ ವ್ಯಾಪ್ತಿಗೆ ಗೌಡರ ಪಾದಾರ್ಪಣೆಯನ್ನ ವ್ಯಾಪಕವಾಗಿ ವಿರೋಧಿಸಿದ್ದ ಇಲ್ಲಿನ ಒಕ್ಕಲಿಗ ಸಮುದಾಯವು ಸೇರಿದಂತೆ ಇತರರು ಯಾರೂ ಒಪ್ಪಿಕೊಂಡಿರಲಿಲ್ಲ. ಹಾಗಾಗಿ ಟಿಕೆಟ್ ವಂಚಿತ ಹಾಲಿ ಸಂಸದ ಮುದ್ದಹನುಮೇಗೌಡರ ಪರವಾಗಿ ದೇವೇಗೌಡರ ವಿರೋಧಿ ಬಣ ತೊಡೆತಟ್ಟಿ ನಿಂತಿತ್ತು. ಮುದ್ದಹನುಮೇಗೌಡರಿಗೆ ಬೆಂಬಲವಾಗಿ ನಿಂತಿತ್ತು. ಮುದ್ದಹನುಮೇಗೌqರ ಬಂಡಾಯ ಸ್ಪರ್ಧೆ ಗೌಡರ ಕುಟುಂಬವಲ್ಲದೇ ಇಡೀ ಜೆಡಿಎಸ್ ಪಕ್ಷದ ನಾಯಕರ ನಿದ್ದೆಗೆಡಿಸಿತ್ತು. ಒಕ್ಕಲಿಗರ ಮತಗಳು ಇಬ್ಭಾಗವಾಗಿ ದೇವೇಗೌಡರ ವಿರೋಧಿ ಮತಗಳು ಮುದ್ದಹನುಮೇಗೌಡರ ಕಡೆ ವಾಲುತ್ತವೆ ಎಂ¨ ಭೀತಿಯಿಂದ ಮುದ್ದಹನುಮೇಗೌಡರ ಉಮೇದುವಾರಿಕೆಯನ್ನು ಹಿಂಪಡೆಯುವಂತೆ ರಾಜಿ-ಸಂಧಾನಗಳು ನಡೆಯುತ್ತಲೇ ಇದ್ದವು.       ಆರಂಭದಲ್ಲಿ…

Read More

ಚಿಕ್ಕನಾಯಕನಹಳ್ಳಿ :       ಶಾಸಕರಾಗಿರುವ ಮಾಧುಸ್ವಾಮಿರವರು ಮೂರು ತಿಂಗಳಲ್ಲಿ ತಾಲ್ಲೂಕಿಗೆ ನೀರು ಹರಿಸುತ್ತೇನೆ ಎಂದು ಹೇಳಿದ್ದರು ಒಂದು ವರ್ಷವಾಯಿತು ತಾಲ್ಲೂಕಿನಲ್ಲಿ ಇದುವರೆವಿಗೂ ಯಾವುದೇ ಅಭಿವೃದ್ದಿ ಮಾಡಿಲ್ಲ, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ತಂದಂತಹ ಯೋಜನೆಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿರುವುದೇ ಅವರ ಅಭಿವೃದ್ದಿಯಾಗಿದೆ ಎಂದು ಮಾಜಿ ಶಾಸಕ ಸಿ.ಬಿ.ಸುರೇಶ್‍ಬಾಬು ಆರೋಪಿಸಿದರು.\      ಪಟ್ಟಣದ ತಮ್ಮ ಗೃಹ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಅಭಿವೃದ್ದಿಯ ಕೆಲವು ಕಾಮಗಾರಿಗಳು ಶಂಕುಸ್ಥಾಪನೆ ಮಾಡಿದ್ದರೂ ಪುನಃ ಶಂಕಸ್ಥಾಪನೆ ಮಾಡಿ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಶಾಸಕರು ಪ್ರಯತ್ನಿಸುತ್ತಿದ್ದಾರೆ, ನನ್ನ ಅಭಿವೃದ್ದಿ ಕಾರ್ಯಗಳನ್ನು ತಮ್ಮ ಅಭಿವೃದ್ದಿ ಕಾರ್ಯಗಳೆಂದು ಬೆಂಬಲಿಸಲು ಶಾಸಕರು ಹೊರಟಿದ್ದಾರೆ ನಾನು ಒಂದು ವರ್ಷ ಏನು ಮಾತನಾಡಬಾರದು ಎಂದು ಸುಮ್ಮನಿದ್ದೆ ಎಂದ ಅವರು, ತಾಲ್ಲೂಕಿನ ಅಭಿವೃದ್ದಿಗಾಗಿ ಮುಖ್ಯಮಂತ್ರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ನಮ್ಮ ಕ್ಷೇತ್ರದ ಅಭಿವೃದ್ದಿ ಕಾಮಗಾರಿಗಳಿಗೆ ನನ್ನ ಬೆಂಬಲವಿದೆ, ಈಗಾಗಲೇ ತುಮಕೂರು ಜಿಲ್ಲೆಗೆ 5ಸಾವಿರ ಕೋಟಿ ಅನುದಾನವನ್ನು…

Read More

ಮೈಸೂರು:       ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬೈಕ್ ನಲ್ಲಿ ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.        ನಂಜನಗೂಡಿನ ಮಾಕನಪುರ ಮತ್ತು ಕಸವನಹಳ್ಳಿ ಸಮೀಪ ಈ ಘಟನೆ ನಡೆದಿದೆ.  ಹಗಿನವಾಳು ಗ್ರಾಮದಿಂದ ಪರೀಕ್ಷೆ ಬರೆಯಲು ಕಸುವಿನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.       ನಂಜನಗೂಡು ತಾಲೂಕಿನ ಹಗಿನವಾಳು ಗ್ರಾಮದ ನಿವಾಸಿ ಮಣಿಕಂಠ (16) ಮೃತ ವಿದ್ಯಾರ್ಥಿ. ಪರೀಕ್ಷೆ ಬರೆಯಲು ದ್ವಿಚಕ್ರ ವಾಹನದಲ್ಲಿ ಮೂವರು ಸಹಪಾಠಿಗಳು ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ.       ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮಣಿಕಂಠ ಸಾವಿಗೀಡಾದರೆ, ದರ್ಶನ್ (16) ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ತುರ್ತು ನಿಗಾ…

Read More

ಹುಬ್ಬಳ್ಳಿ:       ನಿರ್ಮಾಣ ಹಂತದ ಕಟ್ಟಡದ ಗೋಡೆ ಮನೆಯ ಮೇಲೆ‌ ಬಿದ್ದು ಮನೆಯೊಂದು ಜಖಂಗೊಂಡ ಘಟನೆ ಹುಬ್ಬಳ್ಳಿ ನಗರದ ಕೇಶ್ವಾಪುರದಲ್ಲಿ‌ ನಡೆದಿದೆ.       ಮಹ್ಮದ್ ಅಲಿ ಮಕಾಂದಾರ ಎನ್ನುವವರಿಗೆ ಸೇರಿದ ಮನೆಯೇ ಜಖಂಗೊಂಡಿದೆ. ಪಕ್ಕದ ಮನೆಯ ನಿರ್ಮಾಣ ಹಂತದ ಗೋಡೆ ಮಹ್ಮದ್ ಅಲಿಯವರ ಮನೆ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರದಿದಕ್ಕೆ ಭಾರಿ ಅನಾಹುತ ತಪ್ಪಿದೆ.       ಆದ್ರೆ ಮನೆಯಲ್ಲಿ ಮೇಲ್ಛಾವಣಿ ಸೇರಿದಂತೆ ಮನೆಯಲ್ಲಿನ ವಸ್ತುಗಳಿಗೆ ಹಾನಿಯಾಗಿವೆ. ಬಿಲ್ಡರ್ ರಾಜು ಹಿರೇಮಠ ಅವರ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಹಾನಿಗೊಳದಗಾದ ಮಹ್ಮದ್ ಅಲಿ ಆರೋಪಿಸಿದ್ದಾರೆ. ಸ್ಥಳಕ್ಕೆ ಕೇಶ್ವಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.       ಧಾರವಾಡ ಕಟ್ಟಡ ದುರಂತ ಪ್ರಕರಣ ಮಾಸುವ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ನಿರ್ಮಾಣ‌ ಹಂತದ ಕಟ್ಟಡ ಕುಸಿದಿದೆ.

Read More

ತುಮಕೂರು:       ರಂಗ ಕಲೆ ನಶಿಸುವ ಹಾದಿಯತ್ತ ಮುಖ ಮಾಡಿದ್ದು, ಪ್ರತಿಯೊಬ್ಬರು ರಂಗ ಕಲೆಯನ್ನು ಉಳಿಸಿ, ಬೆಳಸಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ.ಕೆ.ಎನ್.ಗಂಗಾನಾಯಕ್ ಹೇಳಿದರು       ನಗರದ ಸಾಹಿತ್ಯ ಪರಿಷತ್ ಭವನದಲ್ಲಿ ನಾಟಕಮನೆ ತುಮಕೂರು ವತಿಯಿಂದ ಹೇಮಾದ್ರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಗುರುಶ್ರೀ ಕಾಲೇಜ್ ಆಫ್ ಕಾಮರ್ಸ್ ಅಂಡ್ ಸೋಷಿಯಲ್ ವರ್ಕ್, ರಾಜ್ಯ ಯುವ ಬರಹಗಾರರ ಒಕ್ಕೂಟ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರಂಗಭೂಮಿ ದಿನಾಚರಣೆಯನ್ನು ನಗಾರಿ ಭಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವಜನತೆ ಸಿನಿಮಾ ಗೀಳಿನಲ್ಲಿ ಸಿಲುಕಿ ಒದ್ದಾಡುತ್ತಿದ್ದು, ಇದರಿಂದ ಹೊರಬಂದು ಪಠ್ಯೇತರ ಚಟುವಟಿಕೆಗಳಾದ ನಾಟಕ, ರಂಗಕಲೆ, ಮತ್ತಿತರೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಕಲೆಗೆ ಮೂಲ ಗ್ರೀಕ್ ದೇಶ, ಸಾಹಿತ್ಯ, ರಂಗಕಲೆ, ನಾಟಕ ಹೀಗೆ ಬೇರೆ ಬೇರೆ ಕಲೆಗಳೂ ಸಹ ಗ್ರೀಕ್‍ನಲ್ಲೇ ಮೊದಲು ಹುಟ್ಟಿದ್ದು,…

Read More

ತುಮಕೂರು:       ರಾಜ್ಯದಲ್ಲಿ ಏ. 18 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹಾಗೂ ಮಾಜಿ ಸಂಸದ ಜಿ.ಎಸ್. ಬಸವರಾಜು ಇಂದು ಮಧ್ಯಾಹ್ನ ತಮ್ಮ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರಿಗೆ ಸಲ್ಲಿಸಿದರು.       ನಗರದ ಕಾಲ್ಟ್ಯಾಕ್ಸ್‍ನಲ್ಲಿರುವ ಶ್ರೀ ಸಿದ್ದಿವಿನಾಯಕ ದೇವಾಲಯಕ್ಕೆ ಮಾಜಿ ಸಚಿವರಾದ ವಿ. ಸೋಮಣ್ಣ, ಮಾಜಿ ಶಾಸಕ ಬಿ.ಸುರೇಶ್‍ಗೌಡ, ಸೊಗಡು ಶಿವಣ್ಣ, ಶಾಸಕರಾದ ಜೆ.ಸಿ. ಮಾಧುಸ್ವಾಮಿ, ಜಿ.ಬಿ. ಜ್ಯೋತಿಗಣೇಶ್, ಬಿ.ಸಿ. ನಾಗೇಶ್ ಸೇರಿದಂತೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಸಿದ್ದಿವಿನಾಯಕನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.       ನಂತರ ಸಿದ್ದಿವಿನಾಯಕ ದೇವಾಲಯದಲ್ಲಿ ವಿವಿಧ ಜಾನಪದ ಕಲಾ ತಂಡಗಳ ಆಕರ್ಷಕ ಪ್ರದರ್ಶನದೊಂದಿಗೆ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಅಪಾರ ಬೆಂಬಲಿಗರೊಂದಿಗೆ ಬೃಹತ್ ಮಟ್ಟದಲ್ಲಿ ಟೌನ್‍ಹಾಲ್ ವೃತ್ತ, ಎಂ.ಜಿ. ರಸ್ತೆ ಮುಖೇನ…

Read More

ತುರುವೇಕೆರೆ :       ತಾಲೂಕಿನ ಮಾಜಿ ಶಾಸಕ ಹೆಚ್.ಬಿ.ನಂಜೇಗೌಡ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನೆಗೆ ವಿಧಾನ ಪರಿಷತ್ ಸದಸ್ಯ ಬೆಮಲ್ ಕಾಂತರಾಜ್ ರವರೊಂದಿಗೆ ತೆರಳಿದ ಮಾಜಿ ಶಾಸಕ ಹೆಚ್.ಬಿ.ನಂಜೇಗೌಡ ತಮ್ಮ ಮಾತೃ ಪಕ್ಷ ಜೆಡಿಎಸ್ ಗೆ ಸೇರ್ಪಡೆಗೊಂಡರು.        ತಮ್ಮ ರಾಜಕೀಯ ಗುರುಗಳಾಗಿರುವ ದೇವೇಗೌಡರೇ ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಅವರ ಗೆಲುವಿಗೆ ಶ್ರಮಿಸುವುದು ತಮ್ಮ ಕರ್ತವ್ಯವಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃಧ್ಧಿಗೆ ದೇವೇಗೌಡರು ಶ್ರಮಿಸುವರು. ಅವರ ಗೆಲುವು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿದ ನಂಜೇಗೌಡರು ತಾಲೂಕಿನಲ್ಲಿ ದೇವೇಗೌಡರಿಗೆ ನಿರೀಕ್ಷೆಗೂ ಮೀರಿದ ಮತಗಳು ಲಭಿಸುವುವು. ಅವರು ಸ್ಪರ್ಧಿಸುತ್ತಿರುವುದು ಜೆಡಿಎಸ್ ಕಾರ್ಯಕರ್ತರಿಗೆ ರೋಮಾಂಚನವನ್ನು ಉಂಟು ಮಾಡಿದೆ. ಮುಂಬರುವ ದಿನಗಳಲ್ಲಿ ಬೆಮಲ್ ಕಾಂತರಾಜ್ ಹಾಗೂ ಇನ್ನಿತರ ಮುಖಂಡರ ನೇತೃತ್ವದಲ್ಲಿ ಜೆಡಿಎಸ್ ನ್ನು ಭದ್ರಗೊಳಿಸಲಾಗುವುದು ಎಂದು ಹೆಚ್.ಬಿ.ನಂಜೇಗೌಡ ಹೇಳಿದರು.       ಆಶಾಭಾವನೆ – ಜಿಲ್ಲೆಯ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಮಾಜಿ ಪ್ರಧಾನಿ ದೇವೇಗೌಡರ…

Read More

ತುಮಕೂರು:       ಕಾಂಗ್ರೆಸ್ ಪಕ್ಷದಲ್ಲಿ ಹಾಲಿ ಸಂಸದರಿಗೆಲ್ಲರಿಗೂ ಸೀಟು ನೀಡಿ ಮುದ್ದಹನುಮೇಗೌಡರೊಬ್ಬರಿಗೆ ಟಿಕೆಟ್ ಕೈ ತಪ್ಪಿರುವುದು ನನಗೂ ನೋವು ತಂದಿದೆ. ಆದರೆ ದೋಸ್ತಿ ಪಕ್ಷಗಳ ಕ್ಷೇತ್ರ ಹಂಚಿಕೆಯಲ್ಲಿ ತುಮಕೂರು ಜೆಡಿಎಸ್ ಪಕ್ಷಕ್ಕೆ ದೊರೆತಿರುವುದರಿಂದ ಉಭಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು.       ನಗರದಲ್ಲಿ ನಿನ್ನೆ ಸಂಜೆ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕೇವಲ ತುಮಕೂರು ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ. ರಾಜ್ಯದ 28 ಕ್ಷೇತ್ರಗಳಿಗೂ ಹೋಗಿ ಪ್ರಚಾರ ಮಾಡಬೇಕಾಗಿದೆ. 28 ಕ್ಷೇತ್ರಗಳಲ್ಲೂ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.       ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಅವರು ಹೇಳಿದರು. ನಾನು 29 ವರ್ಷಗಳ ಕಾಲ ಎಂಪಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದೇನೆ. ಹಾಗಾಗಿ ನಾನು ಚುನಾವಣೆಗೆ…

Read More