ಮಧುಗಿರಿ: ಮಹಿಳೆಯೊಬ್ಬರ ಮೇಲೆ ವಿನಾಕಾರಣ ಪೊಲೀಸ್ ಇನ್ಸ್ಪೆಕ್ಟರ್ ಹಲ್ಲೆ ನಡೆಸಿರುವ ಘಟನೆ ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ದೊಡ್ಡೇರಿ ಹೋಬಳಿ ಕೋನಹಳ್ಳಿ ಗ್ರಾಮದ ರತ್ನಮ್ಮ ಎಂಬುವರು ಹಲ್ಲೆಗೊಳಗಾದ ಮಹಿಳೆ, ಸೋಮವಾರದಂದು ಈಕೆಗೂ ಪಕ್ಕದ ಮನೆಯವರಿಗೂ ಕ್ಷುಲ್ಲಕ ವಿಚಾರವಾಗಿ ಜಗಳ ಆರಂಭವಾಗಿದೆ ಈ ಸಂಭಂದ ಇದೇ ಸ್ಥಳಕ್ಕೆ ಆಗಮಿಸಿದ ಪಿಐ ಪ್ರಭಾಕರ್ ವಿಚಾರಣೆ ನಡೆಸಿ ರತ್ನಮ್ಮಳನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳಾ ಪೊಲೀಸರಿಲ್ಲದೆ ಪಿಐ ಪ್ರಭಕಾರ್ ಮಹಿಳೆ ಮೇಲೆ ಕೈ ಮಾಡಿದ್ದು ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಪ್ರಸ್ತುತ ರತ್ನಮ್ಮ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಘಟನೆ ಬಗ್ಗೆ ಸಂಬಂಧಿಕರು ಮಧುಗಿರಿ ಡಿವೈಎಸ್ಪಿ ಅವರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
Author: News Desk Benkiyabale
ತುಮಕೂರು: ಶಿರಾದ ರಾಮ್ ಮನೋಹರ್ ಲೋಹಿಯಾ ಸಮತಾ ವಿದ್ಯಾಲಯ ಟ್ರಸ್ಟ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಮಾಸ್ಕ್, ಸ್ಯಾನಿಟೈಸರ್ ಮತ್ತು ಹ್ಯಾಂಡ್ ಗ್ಲೌಸ್ಗಳನ್ನು ನರ್ಸ್, ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರುಗಳಿಗೆ ವಿತರಿಸಲು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಮಾಸ್ಕ್ ಸ್ಯಾನಿಟೈಜರ್ಗಳನ್ನು ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ|| ರಾಕೇಶ್ಕುಮಾರ್ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸುತ್ತಾ, ನಿಮ್ಮ ಕಾರ್ಯವೈಖರಿಯನ್ನು ಇಡೀ ದೇಶವೇ ನೋಡುತ್ತಿದೆ ಎಂದರು. ಡಿಹೆಚ್ಓ ಕಚೇರಿ ಆವರಣದಲ್ಲಿ ಸ್ಯಾನಿಟೈಜರ್ಗಳನ್ನು ಹಸ್ತಾಂತರಿಸಿ ಮಾತನಾಡಿದ ಹೈಕೋರ್ಟಿನ ಹಿರಿಯ ವಕೀಲರಾದ ಪ್ರೊ|| ರವಿವರ್ಮ ಕುಮಾರ್ ಅವರು, ಲಾಕ್ಡೌನ್ ಆಗಿರುವುದರಿಂದ ಕೊರೊನಾ ವಾರಿಯರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ಗಳ ಸಮಸ್ಯೆಯಾಗುತ್ತಿದೆ. ಮನೆ-ಮನೆಗೆ ಭೇಟಿ ನೀಡಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಿ, ಕುಟುಂಬ ಸದಸ್ಯರಿಗೆ ತಪಾಸಣೆ…
ತುಮಕೂರು: ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಅನವಶ್ಯಕವಾಗಿ ಓಡಾಡುವ ವಾಹನಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ “ಸುಬಾಹು” ಎನ್ನುವ ಹೊಸ ಅಪ್ಲಿಕೇಶನ್ ಅನ್ನು ಅಳವಡಿಸಿಕೊಂಡಿದ್ದು, ಇದರಲ್ಲಿ ಪ್ರತಿಯೊಂದು ವಾಹನಗಳ ವಿವರ/ಛಾಯಾಚಿತ್ರಗಳನ್ನು ಹಾಗೂ ವಾಹನ ಪ್ರಯಾಣಿಕರು/ಚಾಲಕರು ಸಂಚರಿಸಿಸಬಹುದಾದ ಸ್ಥಳ ಹಾಗೂ ಉದ್ದೇಶಗಳನ್ನು ನಮೂದಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ ಅವರು ತಿಳಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ತೆರೆದಿರುವ ಎಲ್ಲಾ ಚೆಕ್ಪೋಸ್ಟ್ಗಳಲ್ಲಿ ವಾಹನಗಳು ಸಂಚರಿಸುವ ಬಗ್ಗೆ “ಸುಬಾಹು” ಆ್ಯಪ್ ಅನ್ನು ಅಳವಡಿಸಲಾಗಿದೆ. ತುಮಕೂರಿನ ಎಲ್ಲಾ ಟ್ರಾಫಿಕ್ ಪಾಯಿಂಟ್ಗಳಲ್ಲಿ ಇದನ್ನು ಬಳಸಬಹುದಾಗಿದೆ. ಪೊಲೀಸ್ ಸಿಬ್ಬಂದಿಯು ಈ ಆ್ಯಪ್ ಮೂಲಕ ವಾಹನಗಳ ಸಂಖ್ಯೆಯನ್ನು ಸ್ಕ್ಯಾನ್ ಮಾಡಿ, ಯಾವ ಕಾರಣಕ್ಕೆ ಸಂಚರಿಸುತ್ತಿದ್ದಾರೆ ಎಂಬುದು ಅಪ್ಲೋಡ್ ಮಾಡಲಾಗುವುದು. ಈ ವಿವರಗಳನ್ನು ಜಿಲ್ಲೆಯ ಎಲ್ಲಾ ಚೆಕ್ ಪಾಯಿಂಟ್ಗಳಲ್ಲಿ ಎಲ್ಲಿ ಬೇಕಾದರೂ ಪರಿಶೀಲನೆ ಮಾಡಬಹುದು. ದಿನದಲ್ಲಿ ಎಷ್ಟು ವಾಹನಗಳು ಯಾವ ಕಾರಣಕ್ಕೆ ಸಂಚರಿಸಿವೆ ಎಂಬುದು ತಿಳಿಯುತ್ತದೆ. ಇದರಿಂದ ಅನವಶ್ಯಕವಾಗಿ…
ತುಮಕೂರು : ತುಮಕೂರಿನ ಹೆಗ್ಗೆರೆ ಬಸ್ ನಿಲ್ದಾಣದ ಬಳಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ವಿನೂತನವಾಗಿ ತೆರೆದಿರುವ ಬಡವರ ಬಾಗಿಲು ಹೊಸ ಕಾರ್ಯಕ್ರಮ ಏ.24 ರ ಶುಕ್ರವಾರ ಬೆಳಗ್ಗೆ ಆರಂಭವಾಗಿ ವಿಶೇಷ ಜನಾಕರ್ಷಣೆಯ ನೆರವಿನ ಹಸ್ತವಾಗಿ ಜನಮನ್ನಣೆ ಗಳಿಸಿತು. ಎರಡನೆಯ ದಿನವಾದ ಇಂದು ಬಡವರ ಬಾಗಿಲು ಮಳಿಗೆಯಲ್ಲಿ ತುಮಕೂರು ನಗರದ ಜೆಡಿಎಸ್ ಮುಖಂಡ, ಗುತ್ತಿಗೆದಾರ ನರಸೇಗೌಡ ಇಂದು ಸಂಪೂರ್ಣ ಎಲ್ಲ ಪದಾರ್ಥಗಳನ್ನ ತಂದು ಅದರಲ್ಲಿ ಜೋಡಿಸಿ ನೆರವಿನ ಹಸ್ತ ಚಾಚಿದರು. ಸ್ಥಳೀಯ ಬಡವರು ಬಂದು ಅಗತ್ಯ ವಸ್ತುಗಳನ್ನು ತಮ್ಮ ಸ್ವಂತ ಮನೆಯ ಕಪಾಟಿನಂತೆ ಕೊಂಡೊಯ್ಯುತ್ತಿದ್ದುದು ವಿಶೇಷವಾಗಿತ್ತು. ಯಾರು ತಂದು ಕೈ ಎತ್ತಿ ಕೊಡುವುದಿಲ್ಲ. ಸಹಾಯ ಮಾಡಲಿಚ್ಚಿಸುವವರು ಈ ರ್ಯಾಕಿನಲ್ಲಿ ತಂದು ಜೋಡಿಸಿ ಹೋಗಿರುತ್ತಾರೆ. ಬೇಕಾದವರು ಬಂದು ಯಾವುದೇ ಆತಂಕ, ಮುಜುಗರಗಳಿಲ್ಲದೆ ಕೊಂಡೊಯ್ಯುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಿಂದ ಮಾಡಿದ ಈ ವಿಶೇಷ ಕಾರ್ಯಕ್ರಮ ಜಿಲ್ಲೆಯಲ್ಲದೇ ರಾಜ್ಯದ ಹೊಸ ಮಾದರಿಯ ಕಾರ್ಯಕ್ರಮವಾಗಿರುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಇನ್ನಷ್ಟು ಕಡೆಗಳಲ್ಲಿ ಇಂತಹ…
ಬುಕ್ಕಾಪಟ್ಟಣ : ಲಾಕ್ಡೌನ್ ಪರಿಸ್ಥಿತಿಯಿಂದಾಗಿ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗಿ ಹಣ್ಣು-ತರಕಾರಿ ಬೆಳೆದ ರೈತರು ತಮ್ಮ ಬೆಳೆಯನ್ನು ಮಾರುಕಟ್ಟೆಯಲ್ಲಿ ಮಾರಲು ಸಾಧ್ಯವಾಗದೆ ಶೋಚನೀಯ ಪರಿಸ್ಥಿತಿಯಲ್ಲಿದ್ದಾರೆ. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಬುಕ್ಕಾಪಟ್ಟಣದ ಬಂಗಾರಿಹಟ್ಟಿಯ ಕೃಷಿಕ ತಮ್ಮಣ್ಣ ಸೇರಿದಂತೆ ಹಲವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಬೆಳೆದ ಟೊಮೆಟೊವನ್ನು ಮಾರುಕಟ್ಟೆಗೆ ಕೊಂಡೊಯ್ಯಲು ಸಾಧ್ಯವಾಗದೆ ಜಮೀನಿನಲ್ಲೇ ಬಿಟ್ಟು ನಷ್ಟ ಉಂಟಾಗಿತ್ತು. ರೈತನ ಸಮಸ್ಯೆ ಬಗ್ಗೆ ಅರಿತ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ಪೂರಾ ಬೆಳೆಯನ್ನು ಹಣಕೊಟ್ಟು ಖರೀದಿಸಿ ತಮ್ಮ ಕಾರ್ಯಕರ್ತರ ಮೂಲಕ ಹುಳಿಯಾರು ಸೇರಿದಂತೆ ಅನೇಕ ಕಡೆ ಉಚಿತವಾಗಿ ಹಂಚಿಸಿದರು. ಲಾಕ್ಡೌನ್ ಸಂದರ್ಭದಲ್ಲಿ ರೈತರು ಗ್ರಾಮೀಣ ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿರುವ ಬಗ್ಗೆ ಸರ್ಕಾರ ವಿವರ ತರಿಸಿಕೊಂಡು ನಷ್ಟ ಭರಿಸಬೇಕು. ಆ ಮೂಲಕ ರೈತರ ಹಿತ ಕಾಪಾಡಲು ಮುಂದಾಗಬೇಕು ಎಂದು ಈ ಸಂದರ್ಭದಲ್ಲಿ ಅವರು…
ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗೆ ಸರ್ಕಾರ ನೀಡುತ್ತಿರುವ ಪಡಿತರ ಅಕ್ಕಿಯನ್ನ ಅಕ್ರಮವಾಗಿ ಕದ್ದೊಯ್ದು ಶಾಸಕ ಗೌರಿಶಂಕರ್ ಹೆಸರಿನಲ್ಲಿ ವಿತರಿಸಲಾಗುತ್ತಿದೆ ಎನ್ನುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗ್ರಾಮಾಂತರ ಕ್ಷೇತ್ರದ ಹೆಬ್ಬೂರು ಹೋಬಳಿ ನಿಡುವಳಲು ಗ್ರಾಮದ ವ್ಯವಸಾಯ ಸಹಕಾರ ಸಂಘದಲ್ಲಿ ಸರ್ಕಾರ ಬಡವರಿಗಾಗಿ ಉಚಿತವಾಗಿ ನೀಡುತ್ತಿರುವ ಪಡಿತರ ಅಕ್ಕಿಯನ್ನ ಶಾಸಕರ ಅಣತಿಯಂತೆ ಸಹಕಾರ ಸಂಘದ ಅಧ್ಯಕ್ಷ ಲಕ್ಷ್ಮೀಕಾಂತಯ್ಯ ಅಕ್ರಮವಾಗಿ ಕದ್ದು ತೆಗೆದುಕೊಂಡು ಹೋಗಿ ಅದನ್ನು ಶಾಸಕ ಡಿ.ಸಿ.ಗೌರಿಶಂಕರ್ ರವರ ಬೆಂಬಲಿಗ ಗುತ್ತಿಗೆದಾರರಾದ ಕೃಷ್ಣಪ್ಪರವರ ಮನೆಯಲ್ಲಿ ಇಟ್ಟಿದ್ದು, ಅದನ್ನು 5 ಕೆ.ಜಿ.ಯಂತೆ ಪ್ಯಾಕ್ ಮಾಡಿ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ರವರ ಹೆಸರಿನಲ್ಲಿ ಶಾಸಕರೇ ಖುದ್ದು ಹಂಚುತ್ತಿದ್ದಾರೆ ಎಂದು ನಿಡವಳಲು ಗ್ರಾಮದ ಸ್ಥಳೀಯರು ಶಾಸಕರು ಮತ್ತು ಅವರ ಅನುಯಾಯಿ ಅಧ್ಯಕ್ಷ ಲಕ್ಷ್ಮೀಕಾಂತಯ್ಯ ಮತ್ತು ಗುತ್ತಿಗೆದಾರರಾದ ಕೃಷ್ಣಪ್ಪ ಮತ್ತು ಬೆಂಬಲಿಗರ ವಿರುದ್ಧ ಆಪಾದಿಸುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೋವಿಡ್-19 ಸಂದರ್ಭದಲ್ಲಿ ಲಾಕ್ ಡೌನ್…
ತುಮಕೂರು: ರಾಜ್ಯದಲ್ಲಿ ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಆರೋಗ್ಯ ಇಲಾಖೆ ವತಿಯಿಂದ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19ರ ತಪಾಸಣೆಯನ್ನು ಉಚಿತವಾಗಿ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. ಸರ್ಕಾರದ ಆದೇಶದ ಮೇರೆಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿನಿತ್ಯ ತಮ್ಮ ಆರೋಗ್ಯ ಲೆಕ್ಕಿಸದೇ ಸುದ್ದಿ ಸಂಗ್ರಹಿಸುತ್ತಿದ್ದಾರೆ. ಅಂತಹವರ ಬಗ್ಗೆ ಎಚ್ಚರವಹಿಸಿ ಅವರ ರಕ್ಷಣೆಗೆ ಮುಂದಾಗುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಎಲ್ಲಾ ಮಾಧ್ಯಮ ಪ್ರತಿನಿಧಿಗಳಿಗೂ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ ಅವರು ಮಾತನಾಡಿ, ಕೋವಿಡ್ ನಿಯಂತ್ರಣದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಮಾಧ್ಯಮದವರು ಕೊರೊನಾ ವಾರಿಯರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಪತ್ರಿಕಾ ಹಾಗೂ ಟಿವಿ ಮಾಧ್ಯಮದವರಿಗೆ ಕೋವಿಡ್ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಆಯಾ ತಾಲೂಕಿನಲ್ಲಿರುವ ಮಾಧ್ಯಮದವರು ತಾಲೂಕು ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಲಾಗುವುದು ಎಂದರು.…
ತುಮಕೂರು: ಕೊರೊನಾ ವೈರಸ್ನಿಂದ ಬಳಲುತ್ತಿರುವ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡುವ ಪ್ರಯೋಗಕ್ಕೆ ಮುಂದಾಗಿದ್ದು, ಸೋಂಕಿನಿಂದ ಗುಣಮುಖರಾಗಿರುವವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮನವಿ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೋವಿಡ್-19 ನಿಯಂತ್ರಣದ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ಮೊದಲ ಬಾರಿಗೆ ದಿಟ್ಟ ಹೆಜ್ಜೆಯೊಂದನ್ನು ಇಡುತ್ತಿದೆ. ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಡಾ.ಯುಎಸ್ ವಿಶಾಲ್ ರಾವ್ ನೇತೃತ್ವದ ತಂಡ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ ಎಂದರಲ್ಲದೇ ಆದ್ದರಿಂದ ರಾಜ್ಯದಲ್ಲಿ 489 ಪಾಸಿಟಿವ್ ಪ್ರಕರಣಗಳಲ್ಲಿ 153 ಜನರು ಗುಣಮುಖರಾಗಿದ್ದಾರೆ. ಇವರನ್ನು ಸಂಪರ್ಕ ಮಾಡುತ್ತಿದ್ದೇವೆ. ಇವರು 15 ದಿನಕ್ಕೊಮ್ಮೆ ರಕ್ತ ನೀಡಬಹುದು. ಗುಣಮುಖರಾದವರು ಸ್ವಯಂ ಪ್ರೇರಣೆಯಿಂದ ಬಂದು ನಮಗೆ ಸಹಕಾರ ನೀಡಬೇಕು ಎಂದರು. ಜಿಲ್ಲೆಯಲ್ಲಿ ಖಾಸಗಿ ಕ್ಲಿನಿಕ್ ಹಾಗೂ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಐಎಲ್ಎ…
ತುಮಕೂರು : ರೈತನಿಂದ ಬೆಳೆ ಸಾಲ ಮಂಜೂರು ಮಾಡಲು ಲಂಚದ ಹಣ ಪಡೆಯುವಾಗ ಸಹಕಾರ ಸಂಘದ ಕಾರ್ಯದರ್ಶಿಯೊಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ. ಬೇಡತ್ತೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಿ.ಡಿ.ಅವಲಮೂರ್ತಿ 3 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮಿಡಿಗೇಶಿ ಹೋಬಳಿಯ ಎಮ್ಮೆತಿಮ್ಮನಹಳ್ಳಿ ಗ್ರಾಮದ ದೊಡ್ಡರಂಗೇಗೌಡರು ತಮ್ಮ ತಾಯಿಯ ಹೆಸರಿನಲ್ಲಿದ್ದ ಜಮೀನಿನ ಮೇಲೆ ಬೆಳೆ ಸಾಲಕ್ಕೆ ಅರ್ಜಿ ಸಲ್ಲಿಸಿದ್ದು, 50 ಸಾವಿರ ಹಣ ಮಂಜೂರು ಮಾಡಿಕೊಡಬೇಕಿದ್ದ ಸಹಕಾರ ಸಂಘದ ಕಾರ್ಯದರ್ಶಿ ಹಣಕ್ಕಾಗಿ ಬಡ ರೈತನಿಗೆ ಬೇಡಿಕೆಯಿಟ್ಟಿದ್ದು, ಹಣ ಕೊಡಲಾಗದ ಸ್ಥಿತಿಯಲ್ಲಿದ್ದ ಆತ ಕೋವಿಡ್-19 ಸಂದರ್ಭದಲ್ಲಿ ತನ್ನ ಕೆಲಸಕ್ಕಾಗಿ ಲಂಚಕ್ಕಾಗಿ ಬೇಡಿಕೆಯಿಟ್ಟಿರುವ ಬಿ.ಡಿ.ಅವಮೂರ್ತಿಯ ವಿರುದ್ಧ ತುಮಕೂರು ಭ್ರಷ್ಟಾಚಾರ ನಿಗ್ರಹ ದಳ ಕಛೇರಿಯಲ್ಲಿ ಎಸಿಬಿ ಡಿವೈಎಸ್ಪಿ ಬಿ.ಉಮಾಶಂಕರ್ ರವರಿಗೆ ದೂರು ನೀಡಿದ್ದು ಲಂಚಕ್ಕೆ…
ತುಮಕೂರು: ಸೂರತ್ನಿಂದ ತುಮಕೂರಿನ ಮಸೀದಿಗೆ ಧರ್ಮ ಪ್ರಚಾರಕ್ಕೆ ಆಗಮಿಸಿದ್ದ 14 ಜನರಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಪತ್ತೆಯಾಗಿರುವ ಕೋವಿಡ್-19 ಸೋಂಕು ಪೀಡಿತ ವ್ಯಕ್ತಿ ಮೂಲತಃ ತುಮಕೂರು ಜಿಲ್ಲೆಗೆ ಸೇರಿದವನಲ್ಲ. ಬದಲಾಗಿ ಗುಜರಾತ್ ರಾಜ್ಯದ ಸೂರತ್ ಮೂಲದವ. ಮಾ. 12ರಂದೇ ನಗರಕ್ಕೆ ಬಂದಿದ್ದರು. ಒಟ್ಟು 14 ಮಂದಿ ಸೂರತ್ನಿಂದ ತುಮಕೂರಿನ ಮಸೀದಿಗೆ ಧರ್ಮ ಪ್ರಚಾರಕ್ಕೆ ಆಗಮಿಸಿದ್ದರು. ಪಿ.ಹೆಚ್. ಕಾಲೋನಿಯಲ್ಲಿರುವ ಮಸೀದಿಯಲ್ಲಿ ತಂಗಿದ್ದರು. ಇಡೀ ದೇಶದಲ್ಲಿ ಲಾಕ್ಡೌನ್ ಘೋಷಣೆ ಆದ ನಂತರ ವಾಪಸ್ ಸೂರತ್ ಹೋಗಲು ಆಗಿರಲಿಲ್ಲ. ಹೀಗಾಗಿ ಮಸೀದಿಯಲ್ಲಿಯೇ ಉಳಿದುಕೊಂಡಿದ್ದರು. ಕಳೆದ ರಾತ್ರಿ ಈತನನ್ನ ವಶಕ್ಕೆ ಪಡೆದಿರುವ ಜಿಲ್ಲಾಡಳಿತ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವ್ಯಕ್ತಿಯನ್ನ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಇನ್ನು ಈತನ ಜೊತೆಯಲ್ಲಿದ್ದ ಉಳಿದ 13 ಮಂದಿಯನ್ನ ಮಸಿದಿಯಲ್ಲೆ ಕ್ವಾರೆಂಟೈನ್ ಮಾಡಲಾಗಿದೆ. ಪಿ.ಎಚ್. ಕಾಲೋನಿಯ ನಿಮ್ರಾ ಮಸೀದಿ ಸುತ್ತ 150 ಮೀಟರ್ ಸೀಲ್ಡೌನ್…











