ಮಧುಗಿರಿ:- ಪಟ್ಟಣದ ಹೃದಯ ಭಾಗದಲ್ಲಿ ಹರಿಹರ ಸಂಗಮದಂತೆ ಮಧುಗಿರಿಯ ಎರಡು ಕಣ್ಣುಗಳಂತೆ ಐತಿಹಾಸಿಕ ಶ್ರೀ ಮಲ್ಲೇಶ್ವರ ಸ್ವಾಮಿ ಮತ್ತು ಶ್ರೀ ವೆಂಕಟರಮಣ ಸ್ವಾಮಿ ದೇವಾಲಯಗಳಿವೆ. ಮಹಾಶಿವರಾತ್ರಿ ಹಬ್ಬದ ಜಾಗರಣೆ ಪ್ರಯುಕ್ತ ಶ್ರೀ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಂಸ್ಕøತಿಕ ಭಜನಾ ಕಾರ್ಯಕ್ರಮಗಳು, ರುದ್ರಾಭಿಷೇಕ ಮತ್ತು ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದೆ. ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮಧ್ಯೆರಾತ್ರಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ದೇವಸ್ಥಾನದ ಇತಿಹಾಸ: ಜಗತ್ತಿನ ಜೀವನದಲ್ಲಿ ಜನತೆಯ ನಂಬುಗೆಯ ಶಕ್ತಿಯಿಂದ ಭಕ್ತಿಪೂರ್ಣದಿಂದ ವಿವಿಧ ರೂಪದಿಂದ ಪರಮಾತ್ಮನು ತನ್ನ ದರ್ಶನವನ್ನು ಅನೇಕ ಕಡೆ ಪ್ರದರ್ಶನ ಮಾಡಿ ತೋರಿಸಿರುವಂತೆ ವನದೇವತೆಯ ಮಡಿಲೆನಿಸಿದ ಈ ಮಧುಗಿರಿ ಎಂಬ ಸುಗ್ರಾಮದಲ್ಲಿ ಉದ್ಭವಿಸಿ ಜನತೆಯನ್ನು ಮುಗ್ಧಗೊಳಿಸಿರುತ್ತಾನೆ. ಈ ಮೂರ್ತಿಯು ಪ್ರಪಂಚಕ್ಕೆ ಸುಪ್ರಸಿದ್ದವಾದ ಕಾಶೀಲಿಂಗ ಮೂರ್ತಿಯನ್ನು ಹೋಲುತ್ತದೆ ಇಂತಹ ದಿವ್ಯ ಸುಂದರ ಉದ್ಬವ ಮೂರ್ತಿಯ ಸೃಷ್ಠಿಯನ್ನು ಜನವಾಖ್ಯಗಳಿಂದ ಆರಿವಾಗುತ್ತದೆ. ಪ್ರಾರಂಭದಲ್ಲಿ ಈ ದೇವಸ್ಥಾನವು ಮೂರು ನಾಲ್ಕು ಬಂಡೆಗಳಿಂದ…
Author: News Desk Benkiyabale
ಮಧುಗಿರಿ : ನರೇಂದ್ರ ಮೋದಿಯ ಜನಪರ ಆಡಳಿತವನ್ನು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಈ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದ್ದು, ಮತ್ತೊಮ್ಮೆ ಮೋದಿ ಕೇಂದ್ರದಲ್ಲಿ ಆಡಳಿತ ನಡೆಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಮಧುಗಿರಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಇ.ರಮೇಶ್ರೆಡ್ಡಿ ತಿಳಿಸಿದರು. ಪಟ್ಟಣದ ಶ್ರೀದಂಡಿನ ಮಾರಮ್ಮ ದೇಗುಲದ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಸಮರ್ಥವಾಗಿ ಅಭಿವೃದ್ಧಿಯಾಗುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮೋ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂಬ ಅದಮ್ಯ ವಿಶ್ವಾಸವಿದೆ. ಅದಕ್ಕಾಗಿ ಕ್ಷೇತ್ರದ ಕಾರ್ಯಕರ್ತರ ಮನೆ ಮನೆಗೂ ತೆರಳಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಹಾಗೂ ಜನಪರ ಆಡಳಿತವನ್ನು ಮನದಟ್ಟು ಮಾಡಿಕೊಡಬೇಕಿದೆ. ಆಯುಶ್ಮಾನ್ ಭಾರತ್, ಫಸಲ್ಭೀಮಾ, ಉಜ್ವಲ್, ಕಿಸಾನ್ ಸಮ್ಮಾನ್ ಹಾಗೂ ಇತರೆ ಕೃಷಿ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಸ್ಥಾಪಿಸಿರುವ ಜನಪರ ಯೋಜನೆಗಳನ್ನು ಪ್ರಚಾರ ಮಾಡಬೇಕಿದೆ. ಪ್ರಸ್ತುತ ರೈತರ ಖಾತೆಗೆ 6 ಸಾವಿರ ಹಣವನ್ನು ಹಾಕುವ ಕಾರ್ಯಕ್ಕೆ ಚಾಲನೆ…
ತುಮಕೂರು : ಬಿಜೆಪಿ ಮುಖಂಡನೊರ್ವನನ್ನು ದೂರೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆತಂದಿದ್ದಕ್ಕೆ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡರು ಪೊಲೀಸ್ ಠಾಣೆಯ ಮುಂದೆ ಮಲಗಿ ಪ್ರತಿಭಟನೆ ಮಾಡಿದ್ದಾರೆ. ತಾಲೂಕು ಪಂಚಾಯ್ತಿಯ ಬಿಜೆಪಿ ಮಾಜಿ ಸದಸ್ಯ ಹನುಮಂತರಾಜು ವಿರುದ್ಧ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಶಿವು ಎಂಬವರ ನಡುವೆ ಪೈಪ್ ಲೈನ್ ವಿಚಾರದಲ್ಲಿ ಗಲಾಟೆ ನಡೆದಿತ್ತು. ಆದ್ದರಿಂದ ಶಿವು ಅವರು ಹನುಮಂತರಾಜು ಅವರ ಮೇಲೆ ಕ್ಯಾತಸಂದ್ರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹೀಗಾಗಿ ಹನುಮಂತರಾಜು ಅವರನ್ನು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದರು. ಈ ಹಿನ್ನಲೆಯಲ್ಲಿ ಆಕ್ರೊಶಗೊಂಡ ಬಿ.ಸುರೇಶ್ ಗೌಡರು, ತುಮಕೂರು ಗ್ರಾಮಾಂತರ ಕ್ಷೇತ್ರದ ಊರ್ಡಿಗೆರೆ ಹೋಬಳಿ ಬೆಟ್ಟಸೀತಕಲ್ಲು ಗ್ರಾಮದ ವಾಸಿಯಾದ ತಾಪಂ ಸದಸ್ಯರು ಆಗಿರುವ ಹನುಮಂತರಾಜು ದಲಿತ ಸಮುದಾಯಕ್ಕೆ ಸೇರಿರುವ ಇವರ ಮೇಲೆ ಇದೇ ಗ್ರಾಮದ ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯ ಗೌರಿಶಂಕರ ಬೆಂಬಲಿಗನಾದ ಶಿವು ಎಂಬಾತ ಪೈಪು ಲೈನು ಕಾಮಗಾರಿ ಮಾಡುತ್ತಿದ್ದು ಕಳೆದ…
ತುಮಕೂರು: ಗಂಡ, ಅತ್ತೆ, ಮಾವಂದಿರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ನಗರದ ಗೋಕುಲ ಬಡಾವಣೆ ನಿವಾಸಿ ರಾಜೇಶ್ವರಿ ಹಾಗೂ ಈಕೆಯ ತಮ್ಮ ಮೋಹನ್ ಕುಮಾರ್ ಅವರಿಗೆ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ರಾಜೇಶ್ವರಿಯು ತನ್ನ ಗಂಡ ಆನಂದ, ಮಾವ ರಾಮಕೃಷ್ಣ ಹಾಗೂ ಅತ್ತೆ ನಿಂಗಮ್ಮ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವುದು ವಿಚಾರಣೆಯಿಂದ ತಿಳಿದುಬಂದಿದೆ. ಈಕೆಯು ಮನೆಯಲ್ಲಿ ಸರಿಯಾಗಿ ಕೆಲಸ ಮಾಡದೆ, ಮನೆಯವರನ್ನು ಗೌರವ ತೋರದೆ ಏಕವಚನದಲ್ಲಿ ಬೈಯುವುದು, ಗಂಡನನ್ನು ಷಂಡನನ್ನ ಮಗ ಎಂದು ಪದೇಪದೇ ಹಿಯ್ಯಾಳಿಸಿ ತವರು ಮನೆಗೆ ಹೋಗುವುದು, ತನ್ನ ತಮ್ಮ ಮೋಹನ್ಕುಮಾರ್ನೊಂದಿಗೆ ಸೇರಿ ನೀವೆಲ್ಲಾ ಇರುವುದಕ್ಕಿಂತ ಕೆರೆಗೋ-ಬಾವಿಗೋ ಬಿದ್ದು ಸಾಯಿರಿ. ವರದಕ್ಷಿಣೆ ಕೇಸು ಕೊಟ್ಟು ಜೈಲಿನಲ್ಲಿ ಕೊಳೆಯುವಂತೆ ಮಾಡುತ್ತೇನೆ ಎಂದು ಅವಮಾನ ಮಾಡಿದ್ದರಿಂದ ಕಿರುಕುಳ ತಾಳಲಾರದೆ ಆರೋಪಿಯ ಗಂಡ ಆನಂದ, ಅತ್ತೆ ನಿಂಗಮ್ಮ, ಮಾವ…
ತುಮಕೂರು: ಜಿಲ್ಲೆಯು ಬರಪೀಡಿತವೆಂದು ಘೋಷಣೆಯಾಗಿರುವ ಹಿನ್ನಲೆಯಲ್ಲಿ ಬೆಳೆ ನಷ್ಟದ ವಾಸ್ತವಿಕ ಪರಿಸ್ಥಿತಿಯನ್ನು ಅರಿತು 15 ದಿನಗೊಳಗಾಗಿ ಸಂಕಷ್ಟದಲ್ಲಿರುವ ಅರ್ಹ ರೈತರ ಖಾತೆಗೆ ಪರಿಹಾರಧನವನ್ನು ಜಮಾ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಕೃಷಿ ಇಲಾಖೆ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ ಅವರಿಗೆ ತಾಕೀತು ಮಾಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 9551 ರೈತರ ಅರ್ಜಿಗಳು ತಿರಸ್ಕೃತಗೊಂಡಿರುವ ಬಗ್ಗೆ ರಾಜ್ಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಅವರು ಪ್ರಶ್ನಿಸಿದಾಗ, ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ಉತ್ತರಿಸುತ್ತಾ ಬ್ಯಾಂಕ್ ಹಾಗೂ ವಿಮಾ ಕಂಪನಿಗಳ ಲೋಪದೋಷದಿಂದ ಅರ್ಜಿಗಳು ತಿರಸ್ಕøತವಾಗಿವೆ. ಬೆಳೆ ನಷ್ಟ ಪರಿಹಾರ ಧನವನ್ನು ವಿತರಿಸಲು ಕೇಂದ್ರ ಸರ್ಕಾರದಿಂದ ಈಗಾಗಲೇ 681ಲಕ್ಷ ರೂ.ಗಳ ಹಣ ಬಿಡುಗಡೆಯಾಗಿದ್ದು, ಅರ್ಹ ಫಲಾನುಭವಿಗಳ ಖಾತೆಗೆ ತ್ವರಿತವಾಗಿ ಜಮಾ ಮಾಡಲಾಗುವುದು ಎಂದು ತಿಳಿಸಿದರು. …
ತುರುವೇಕೆರೆ : ವಿಧಾನಸಭಾ ಕ್ಷೇತ್ರದ ಮುಸ್ಲಿಂ ಕಾಲೋನಿಗಳಿಗೆ ಉತ್ತಮ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಮಸಾಲಾಜಯರಾಮ್ ತಿಳಿಸಿದರು. ತಾಲೂಕಿನ ಅಕ್ಕಳಸಂದ್ರ ಕಾಲೋನಿ 20 ಲಕ್ಷ ಹಾಗೂ ಚಂಡೂರು ಮುಸ್ಲಿಂ ಕಾಲೋನಿ 10 ಲಕ್ಷ ರೂ ವೆಚ್ಚದಲ್ಲಿ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ಮಂಜೂರಾದ ಅನುದಾನದಲ್ಲಿ ನಿರ್ಮಾಣ ಮಾಡುತ್ತಿರುವ ಸಿ.ಸಿ ರೋಡ್ ಮತ್ತು ಬಾಕ್ಸ್ಚರಂಡಿ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರೆವೇರಿಸಿ ಮಾತನಾಡಿ ಕ್ಷೇತ್ರಕ್ಕೆ ಅಲ್ಪಸಂಖ್ಯಾತರ ಇಲಾಖೆಯಲ್ಲಿ ವಿಶೇಷ ಅನುದಾನವನ್ನು ತಂದು ಮುಸ್ಲಿಂ ಕಾಲೋನಿಗಳಿಗೆ ಕಾಂಕ್ರೇಟ್ ರಸ್ತೆ, ಚರಂಡಿ ಕಾಮಗಾರಿಗಳನ್ನು ಈಗಾಗಲೇ ಮಾಯಸಂದ್ರ ಸೇರಿದಂತೆ ಹಲವು ಹಳ್ಳಿಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಗುತ್ತಿಗೆದಾರರು ಕಳಪೆ ಮಾಡದಂತೆ ಸಾರ್ವಜನಿಕರು ಹೆಚ್ಚು ನಿಗಾವಹಿಸಿ ಉತ್ತಮ ಗುಣಮಟ್ಟ ಕಾಮಾಗಾರಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ರಸ್ತ ಅಭಿವೃದ್ದಿ ಸಂಸ್ಥೆಯಿಂದ ಮುಂಜೂರಾಗಿದ್ದ 94.20 ಲಕ್ಷ ವ್ಯಚ್ಚದಲ್ಲಿನ ಹುಲ್ಲೆಕೆರೆಯಿಂದ ಜಕ್ಕನಹಳ್ಳಿವರೆಗಿನ ರಸ್ತೆ ಕಾಮಗಾರಿಗೆ ಡಾಂಬರೀಕರಣಕ್ಕೆ…
ತುಮಕೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ(ಮಾರ್ಚ್ 2) ತುಮಕೂರಿಗೆ ಆಗಮಿಸುತ್ತಿದ್ದಾರೆ . ಮಧ್ಯಾಹ್ನ 1 ಗಂಟೆಗೆ ನಗರಕ್ಕೆ ಭೇಟಿ ನೀಡಿ ಗಾಜಿನ ಮನೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತುಮಕೂರು: ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ದೃಷ್ಟಿಯಿಂದ ಸರ್ಕಾರವು ಸ್ತ್ರೀಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸದ ಎಸ್.ಪಿ ಮುದ್ದಹನುಮೇಗೌಡ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ “ಸ್ತ್ರೀ ಶಕ್ತಿ ಸಮಾವೇಶ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ತ್ರೀಶಕ್ತಿ ಗುಂಪುಗಳು ಮಹಿಳೆಯರಿಗೆ ಹೊಸ ಚೈತನ್ಯ ನೀಡಿ ಆರ್ಥಿಕ, ಸಾಮಾಜಿಕ ಸದೃಢತೆಯನ್ನು ತಂದುಕೊಟ್ಟಿದೆ. ಸ್ತ್ರೀಶಕ್ತಿ ಸಂಘಗಳು ಅನೇಕ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 10937 ಸ್ತ್ರೀಶಕ್ತಿ ಗುಂಪುಗಳು ರಚನೆಯಾಗಿದ್ದು, 1.20 ಲಕ್ಷಕ್ಕೂ ಹೆಚ್ಚು ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುವುದರ ಜೊತೆಗೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ…
ತುಮಕೂರು: ಜಿಲ್ಲೆಯ ತಿಪಟೂರು, ಪಾವಗಡ, ತುಮಕೂರು ತಾಲ್ಲೂಕುಗಳಲ್ಲಿ ಒಆಖ ಕ್ಷಯ ಪತ್ತೆಗಾಗಿ ಜೀನ್ ಎಕ್ಸ್ಪರ್ಟ್ (CBNAAT) ಯಂತ್ರವನ್ನು ಅಳವಡಿಸಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ: ಸನತ್ ಕುಮಾರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿಂದು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು(ಯೋಜನೆಗಳ) ಕುರಿತು ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು. ಅಃಓಂಂಖಿ ಯಂತ್ರದ ನೆರವಿನಿಂದ ಸೂಕ್ಷ್ಮತೆಯಿಲ್ಲದ ರೋಗನಿರೋಧಕ ಕ್ಷಯ (MDR) ರೋಗವನ್ನು 2 ಗಂಟೆಗಳ ಅವಧಿಯಲ್ಲಿಯೇ ಪತ್ತೆ ಮಾಡಬಹುದಾಗಿದೆ. ಪ್ರಾಥಮಿಕ ಹಂತದ ಚಿಕಿತ್ಸೆಗೆ ಸ್ಪಂದಿಸದವರನ್ನು MDR ಕ್ಷಯ ರೋಗಿಗಳೆಂದು ಗುರುತಿಸಲಾಗುವುದು. ಇವರಿಗೆ ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಚಿಕಿತ್ಸಾ ಸೌಲಭ್ಯವಿದ್ದು, 9 ರಿಂದ 11 ತಿಂಗಳ ಕಾಲ…
ತುಮಕೂರು: ಕಟ್ಟಡ ಮತ್ತಿತರ ನಿರ್ಮಾಣ ಕಾಮಗಾರಿಗಳಲ್ಲಿ ದುಡಿಯುವ ಕಾರ್ಮಿಕ ಕೈಗಳಿಗೆ ಎಲ್ಲರಂತೆ ಗೌರವ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ತಿಳಿಸಿದರು. ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗಳ ಸಹಯೋಗದಲ್ಲಿಂದು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ “ಕಾರ್ಮಿಕ ಸಮ್ಮಾನ ಪ್ರಶಸ್ತಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅರ್ಹ ಫಲಾನುಭವಿಗಳಿಗೆ ಕಾರ್ಯಕ್ರಮಗಳ ಸೌಲಭ್ಯ ತಲುಪಬೇಕು. ಕಟ್ಟಡ ಕಾರ್ಮಿಕರು ಹಾಗೂ ವಾಹನ ಚಾಲಕರಿಗೆ ವಿಮಾ ಸೌಲಭ್ಯ ನೀಡಲು ಅನುದಾನ ಲಭ್ಯವಿದ್ದು, ಅಧಿಕಾರಿಗಳು ಸೌಲಭ್ಯಗಳನ್ನು ಶೀಘ್ರವೇ ಅರ್ಹರಿಗೆ ನೀಡಬೇಕು. ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ, ಹೆರಿಗೆ, ಮದುವೆಗಾಗಿ ಧನಸಹಾಯ ಹಾಗೂ ವಸತಿ ನಿರ್ಮಾಣ, ವಿದ್ಯಾರ್ಥಿ ವೇತನದಂತಹ ಸವಲತ್ತುಗಳನ್ನು ಸರ್ಕಾರ ಒದಗಿಸುತ್ತಿದ್ದು, ಕಾರ್ಮಿಕರು ಈ ಸೌಲಭ್ಯವನ್ನು ಬಳಸಿಕೊಂಡು…