Author: News Desk Benkiyabale

ತುಮಕೂರು:        ಪ್ರತಿದಿನ ದೇಶದೆಲ್ಲೆಡೆ ಕೊರೊನಾ ಅಟ್ಟಹಾಸ ಮರೆದಿದ್ದು, ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಹೋಗುತ್ತಿದೆ. ಬಂದುಬಳಗ, ರಕ್ತಸಂಬಂಧಿಗಳು ಸತ್ತರು ಹತ್ತಿರ ಹೋಗಿ ಮರಣೋತ್ತರ ಕಾರ್ಯವನ್ನು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಇಂತಹದೇ ಒಂದು ಘಟನೆ ಸೀಲ್ಡ್ ಡೌನ್ ಪ್ರದೇಶವಾಗಿರುವ ಕೆ ಎಚ್ ಬಿ ಕಾಲೋನಿಯಲಿ ತುಮಕೂರಿನಲ್ಲಿ ನಡೆದಿದೆ. ಆದರೇ ಇಲ್ಲಿ ಮುಸ್ಲೀಂ ಯುವಕರು ಮೃತ ವೃದ್ಧನ ಶವನ್ನು ಸಾಗಿಸಿ ಮಾನವೀಯತೆ ಮರೆದಿದ್ದಾರೆ.       ತುಮಕೂರಿನ ಕೆ ಎಚ್ ಬಿ ಕಾಲೋನಿಯಲ್ಲಿ ಕರೊನಾ ಸೊಂಕಿತ ಪಿ 535 ವೃದ್ಧ ಸಾವನ್ನಪ್ಪಿದ್ದು, ಈತನಿಂದ ಪಕ್ಕದ ಮನೆಯ ದಂಪತಿಗಳಿಬ್ಬರಿಗೂ ಸೊಂಕು ತಗುಲಿತ್ತು. ಇದರಿಂದ ಕೆ ಎಚ್ ಬಿ ಕಾಲೋನಿಯನ್ನು ಸೀಲ್ಡ್ ಡೌನ್ ಮಾಡಲಾಗಿತ್ತು. ಈ ಸೀಲ್ಡ್ ಡೌನ್ ಏರಿಯಾದಲ್ಲಿ ಕಳೆದ ರಾತ್ರಿ ಮತ್ತೊಬ್ಬ ವೃದ್ಧ ಅನಾರೋಗ್ಯದಿಂದ ಸಹಜವಾಗಿ ಸಾವನ್ನಪ್ಪಿದ್ದು, ಮುಸಲ್ಮಾನ್ ಯುವಕರು ಅಂತ್ಯಕ್ರಿಯೆ ನೆರವೇರಿಸಲು ಸಹಾಯ ಮಾಡಿದ್ದಾರೆ.       ನಗರದ ಎರಡನೇ ಕಂಟೈನ್ಮೆಂಟ್ ಝೋನ್ ಕೆ ಎಚ್ ಬಿ…

Read More

ಮಧುಗಿರಿ:       ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಂಬಾಕು ಉತ್ಪನ್ನಗಳನ್ನು ನಿಷೇಶಿದ್ದರೂ ಪುರಸಭೆಯ ವ್ಯಾಪ್ತಿಯಲ್ಲಿ ಈ ಉತ್ಪನ್ನಗಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಪುರಸಭೆ ಗಂಭೀರ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ನಗರಾಧ್ಯಕ್ಷ ಹಾಗೂ ಪುರಸಭೆ ಸದಸ್ಯ ಎಂ.ಎಸ್.ಚಂದ್ರಶೇಖರ್‍ಬಾಬು ಒತ್ತಾಯಿಸಿದರು.       ಪುರಸಭೆಯ ಸಭಾಂಗಣದಲ್ಲಿ ಸಭೆ ಸೇರಿದ್ದ ಎಲ್ಲ ಸದಸ್ಯರ ಪರವಾಗಿ ಈ ಒತ್ತಾಯ ಮಾಡಿದ ಇವರು, ಈ ಗುಟ್ಕಾ, ತಂಬಾಕು ಉತ್ಪನ್ನಗಳು ನಿಷೇಧಸಲ್ಪಟ್ಟಿದ್ದು ದುಪ್ಪಟ್ಟು ದರಕ್ಕೆ ಮಾರಾಟವಾಗುತ್ತಿದೆ.       ಅಂಗಡಿಗಳಲ್ಲಿ ದರಪಟ್ಟಿ ಹಾಕದೆ ಗ್ರಾಹಕರಿಗೆ ವಂಚಿಸುತ್ತಿದ್ದು, ದಿನಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ ಎಂದರು. ಮಟನ್ ಮಾರ್ಕೆಟ್‍ನಲ್ಲಿ ಸ್ವಚ್ಛತೆಯಿಲ್ಲ, ಸಾಮಾಜಿಕ ಅಂತರವಿಲ್ಲದೆ 700 ರೂಗೆ ಕೆಜಿ ಮಾಂಸ ಮಾರುತ್ತಿದ್ದು, ಕೇಳುವವರಿಲ್ಲವೇ ಎಂದು ಸದಸ್ಯ ಎಂ.ಆರ್.ಜಗನ್ನಾಥ್ ಅಸಮಧಾನ ವ್ಯಕ್ತಪಡಿಸಿದರು. ಇದಕ್ಕೆ ಸದಸ್ಯರಾದ ಗೋವಿಂದರಾಜು, ರಾಧಿಕಾ ಕೃಷ್ಣ, ಸುಜಾತ ಶಂಕರನಾರಾಯಣ್ ಸಹಮತ ವ್ಯಕ್ತಪಡಿಸಿದರು.       ಸದಸ್ಯರ…

Read More

ತುಮಕೂರು:       2020-21ನೇ ಸಾಲಿನಲ್ಲಿ ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆದ ಪರಿಣಾಮ ಜಿಲ್ಲೆಯಲ್ಲಿ ದುಡಿಯುವ ಕೈಗಳಿಗೆ ಕೆಲಸವಿಲ್ಲದ ಸಮಯದಲ್ಲಿ ನರೇಗಾ ಸಂಜೀವಿನಿಯಾಗಿ ಕೈತುಂಬಾ ಕೆಲಸವನ್ನು ನೀಡಿ ಧೈರ್ಯ ತುಂಬಿದೆ.        ಕೊರಟಗೆರೆ, ಮಧುಗಿರಿ, ಶಿರಾ ಸೇರಿದಂತೆ ಜಿಲ್ಲೆಯ ತಾಲ್ಲೂಕುಗಳಲ್ಲಿ ಜಿಲ್ಲಾ ಪಂಚಾಯತಿ ವತಿಯಿಂದ ನರೇಗಾ ಯೋಜನೆಯಡಿಯಲ್ಲಿ ದನದ ಕೊಟ್ಟಿಗೆ ನಿರ್ಮಾಣ, ಕೃಷಿಹೊಂಡ, ಮನೆ ನಿರ್ಮಾಣ, ಗೋಕಟ್ಟೆ ಅಭಿವೃದ್ಧಿ, ಕೆರೆ-ಕಾಲುವೆಗಳ ಹೂಳೆತ್ತುವುದು, ರಸ್ತೆ ಬದಿಗಳಲ್ಲಿ ಸಸಿ ನೆಡುವುದು ಹೀಗೆ ಹಲವಾರು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ದುಡಿಯುವ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಮಧುಗಿರಿ ತಾಲ್ಲೂಕಿನಲ್ಲಿ ಮೇ ತಿಂಗಳ ಮೊದಲ ವಾರದ ಅಂತ್ಯಕ್ಕೆ 32623 ಮಾನವ ದಿನಗಳನ್ನು ನರೇಗಾದಡಿ ಸೃಜನೆ ಮಾಡಲಾಗಿದೆ. ಮಧುಗಿರಿ ತಾಲ್ಲೂಕಿನಲ್ಲಿ 39 ಗ್ರಾಮಪಂಚಾಯತಿಗಳ ವ್ಯಾಪ್ತಿಯಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಹಾಗೂ ದನದ ಕೊಟ್ಟಿಗೆ ನಿರ್ಮಾಣ, ಬದು ನಿರ್ಮಾಣ, ಕೃಷಿ ಹೊಂಡ, ಮನೆ ನಿರ್ಮಾಣ, ಸಮುದಾಯ ಕಾರ್ಯಕ್ರಮಗಳಾದ ಗೋಕಟ್ಟೆ ಅಭಿವೃದ್ಧಿ ಸೇರಿದಂತೆ 159 ಕಾಮಗಾರಿಗಳು ಚಾಲ್ತಿಯಲ್ಲಿವೆ. ಕೊರಟಗೆರೆ…

Read More

ತುಮಕೂರು:        ನಗರದಲ್ಲಿ ಕೊರೋನಾ ಕೊವಿಡ್-19 ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ವೈರಾಣು ಹರಡದಂತೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರು ನಗರಕ್ಕೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾವಹಿಸಲು ಮತ್ತು ತಪಾಸಣೆಗಾಗಿ ನಾಲ್ಕು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ.       ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಬರುವ 4 ಪ್ರಮುಖ ರಸ್ತೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದ್ದು, ಈ ಚೆಕ್‍ಪೋಸ್ಟ್‍ಗಳಲ್ಲಿ ಕಂದಾಯ ಇಲಾಖೆ, ಆರೋಗ್ಯ ಹಾಗೂ ಪೊಲೀಸ್ ಇಲಾಖೆಯ ತಲಾ ಇಬ್ಬರು ಸಿಬ್ಬಂದಿಗಳು 24×7 ಗಂಟೆಯೂ ಮೂರು ಪಾಳಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಹೊರಗಡೆಯಿಂದ ತುಮಕೂರು ನಗರಕ್ಕೆ ಪ್ರವೇಶಿಸುವ ವಾಹನ/ವ್ಯಕ್ತಿಗಳನ್ನು ತೀವ್ರ ತಪಾಸಣೆ ಮಾಡಲಾಗುವುದು. ತಪಾಸಣೆ ಮಾಡಿದ ನಂತರ ಅವರ ಆರೋಗ್ಯ ಪರಿಸ್ಥಿತಿಯನ್ನು ಆಧರಿಸಿ ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್‍ಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ…

Read More

ತುಮಕೂರು :       ಹೊರ ರಾಜ್ಯದಿಂದ ತುಮಕೂರು ಜಿಲ್ಲೆಗೆ ಬರುವ ಸಾರ್ವಜನಿಕರು ವರದಿ ಮಾಡಿಕೊಳ್ಳಲು ಜಿಲ್ಲಾಡಳಿತ ವತಿಯಿಂದ ನಗರದ ತಾತ್ಕಾಲಿಕ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ “ಸೆಲ್ಫ್ ರಿಪೋರ್ಟಿಂಗ್ ಸೆಂಟರ್” ಮಾಡಿರುವ ಬಗ್ಗೆ ಜಿಲ್ಲಾಧಿಕಾರಿ ಡಾ|| ರಾಕೇಶ್‍ಕುಮಾರ್ ಅವರು ವೀಕ್ಷಣೆ ಮಾಡಿದರು.       ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರ ರಾಜ್ಯದಿಂದ ಜಿಲ್ಲೆಗೆ ಬರಲು ಸೇವಾ ಸಿಂಧುನಲ್ಲಿ ಈಗಾಗಲೇ 1200ಕ್ಕೂ ಹೆಚ್ಚು ಜನರು ನೊಂದಾಯಿಸಿಕೊಂಡಿದ್ದಾರೆ. ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಜನರು, ಕಡ್ಡಾಯವಾಗಿ ಸ್ವಯಂ ವರದಿ ಮಾಡಿಕೊಳ್ಳಬೇಕು. ಇಲ್ಲಿ ಇವರಿಗೆ ಪರೀಕ್ಷೆಗೊಳಪಡಿಸಲಾಗುವುದು. ರೋಗ ಲಕ್ಷಣಗಳು ಇರುವವರನ್ನು ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಸ್ಥಳಾಂತರಿಸಲಾಗುವುದು. ನಗರ ಪಟ್ಟಣ ಪ್ರದೇಶದವರನ್ನು ಹೋಂ ಕ್ವಾರೆಂಟೈನ್‍ಗೆ ಕಳುಹಿಸಲಾಗುವುದು. ಆದರೆ ಗ್ರಾಮೀಣ ಪ್ರದೇಶದವರನ್ನು ಸಾಂಸ್ಥಿಕ ಹೋಂ ಕ್ವಾರೆಂಟೈನ್ ಮಾಡಲಾಗುವುದು. ಹೊರ ರಾಜ್ಯದಿಂದ ಖಾಸಗಿ ವಾಹನಗಳಲ್ಲಿ ಬಂದರೆ ಗಡಿ ಭಾಗಗಳಲ್ಲಿ ಅವರು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿಯೇ ಬರಬೇಕು. ಅಲ್ಲದೇ ಹೊರ ರಾಜ್ಯದಿಂದ ಬಂದು ಸ್ವಯಂ ವರದಿ ಮಾಡಿಕೊಳ್ಳದೇ ನೇರವಾಗಿ…

Read More

ತುಮಕೂರು :       ಜಿಲ್ಲೆಯಲ್ಲಿ ಒಟ್ಟು 11 ಪ್ರಕರಣಗಳು ಕೊರೊನಾ ಸೋಂಕಿತರು ಎಂದು ದೃಢಪಟ್ಟಿದ್ದು, ಇಂದು ಶಿರಾ ಮತ್ತು ಪಾವಗಡ ಸೇರಿದಂತೆ 4 ಕೋವಿಡ್-19 ಪಾಸಿಟೀವ್ ವರದಿ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ.       ಶಿರಾ ನಗರಕ್ಕೆ ಬೆಂಗಳೂರಿನ ಪಾದರಾಯನಪುರದ ಪುಂಡನೊಬ್ಬ ಪಾದರಾಯನಪುರ ಗಲಾಟೆಯಿಂದ ತಪ್ಪಿಸಿಕೊಂಡು ಶಿರಾ ಸಂಬಂಧಿಕರ ಮನೆಗೆ ಬಂದಿದ್ದು, ತಾಲ್ಲೂಕು ಆಡಳಿತದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಆತನನ್ನ ಕ್ವಾರೆಂಟೈನ್ ಮಾಡಲಾಗಿತ್ತು. ಆತನ ಗಂಟಲು ಮತ್ತು ಮೂಗಿನ ದ್ರವವನ್ನು ತೆಗೆದು ಕಳುಹಿಸಲಾಗಿತ್ತು. ಆತನಿಗೂ ಸಹಾ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಶಿರಾ ನಗರದ ಜನರಲ್ಲಿ ಆತಂಕಕ್ಕೀಡುಮಾಡಿದೆ. ಜಿಲ್ಲೆಯಲ್ಲಿ ಮೊಟ್ಟಮೊದಲಿಗೆ ಕೊರೊನಾ ಸೋಂಕು ತಗುಲಿದ್ದ ವ್ಯಕ್ತಿ ಶಿರಾ ನಗರದವರು ಎಂಬುದು ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗಿತ್ತು. ಶಿರಾ ನಗರದ ಜನರಲ್ಲಿ ಅಂದಿನಿಂದ ಆತಂಕ ಮಡುಗಟ್ಟಿತ್ತು. ಎಲ್ಲವೂ ಮುಗಿದುಹೋಯಿತು ಎನ್ನುವಷ್ಟರಲ್ಲಿ ಮತ್ತೊಂದು ಸೋಂಕು ದೃಢಪಟ್ಟ ಹಿನ್ನೆಲೆ ಪಾದರಾಯನಪುರದ ಪುಂಡನ ಪಾದಸ್ಪರ್ಷ ಶಿರಾ ನಗರದ ಜನರನ್ನ…

Read More

ತುಮಕೂರು :       ಪಿಪಿಇ ಕಿಟ್ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ||ಚಂದ್ರಿಕಾ ದಿಢೀರ್ ವರ್ಗಾವಣೆಯಾಗಿದೆ. ಗುಬ್ಬಿ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಅವರು ಈ ಅವ್ಯವಹಾರ ಕುರಿತಂತೆ ಸುದ್ಧಿಗೋಷ್ಠಿ ನಡೆಸಿ ಆರೋಪಿಸಿದ್ದರು. ಡಿಎಚ್‍ಓ ಚಂದ್ರಿಕಾ ರವರು ಇಡೀ ಜಿಲ್ಲೆಯಾದ್ಯಂತ ಭ್ರಷ್ಟಾಚಾರವೆಸಗಿದ್ದು, ಕೋವಿಡ್-19 ಪರೀಕ್ಷೆ ಮಾಡಲು ಬಳಸುತ್ತಿದ್ದ ಕಿಟ್‍ಗಳನ್ನು ತಾಲ್ಲೂಕ್ ಆಸ್ಪತ್ರೆಗಳು ಖರೀದಿಸುವ ವಿಚಾರದಲ್ಲಿ ತಮಗೆ ಬೇಕಾದ ಕಂಪನಿಗಳೊಂದಿಗೆ ಶಾಮೀಲಾಗಿ ಭ್ರಷ್ಟಾಚಾರ ಮಾಡಿದ್ದಾರೆ.       ಸಾವಿನ ಮನೆಯಲ್ಲಿ ಹಣ ಮಾಡುವ ದಂಧೆಗಿಳಿದಿದ್ದಾರೆ ಎನ್ನುವಂತಹ ಆರೋಪಗಳು ಪ್ರಬಲವಾಗಿ ಕೇಳಿ ಬಂದ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಾದ್ಯಂತ ಡಿಎಚ್‍ಓ ಚಂದ್ರಿಕಾ ರವರ ಭ್ರಂಹಾಂಡ ಭ್ರಷ್ಟಾಚಾರ ಕುರಿತು ತೀವ್ರವಾದ ವಿರೋಧ ಬಂದ ಹಿನ್ನೆಲೆಯಲ್ಲಿ ನಮ್ಮ ಪತ್ರಿಕೆಯೂ ಸೇರಿದಂತೆ ಮಾಧ್ಯಮಗಳು ಚಂದ್ರಿಕಾ ರವರ ಭ್ರಷ್ಟಾಚಾರ ಕುರಿತು ವರದಿಯನ್ನ ಪ್ರಕಟಿಸಿತ್ತು. ಮೇಲ್ನೋಟಕ್ಕೆ ಭ್ರಷ್ಟಾಚಾರ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಭ್ರಷ್ಟಾಚಾರದ ಸುದ್ಧಿ ಇದರ ಕುರಿತು ಟೀಕೆಗಳು ಆರಂಭವಾಗಿದ್ದು ದಾಖಲೆಗಳ ಸಮೇತ ಆರೋಪ ಸಾಭೀತಾಗುತ್ತಿರುವುದರಿಂದ…

Read More

ತುಮಕೂರು:       ಕೊರೋನಾದಿಂದ ದೇಶ ಸಂಕಷ್ಟದಲ್ಲಿದ್ದು, ರೈತರು ಬೆಳೆದರೆ ಮಾತ್ರ ದೇಶ ಉದ್ಧಾರ ಆಗಲು ಸಾಧ್ಯ ಎನ್ನುವುದನ್ನು ಅರಿತು ಕೃಷಿ ವಲಯಕ್ಕೆ ಲಾಕ್ ಡೌನ್ ನಡುವೆಯೂ ಸಡಿಲಿಕೆಯನ್ನು ನೀಡಲಾಗಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಯ್ಯ ತಿಳಿಸಿದರು.       ತಾಲ್ಲೂಕಿನ ಬುಗುಡನಹಳ್ಳಿ ಗ್ರಾಮದಲ್ಲಿ ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಪಡಿತರ ವಿತರಿಸಿ ಮಾತನಾಡಿದ ಅವರು, ಆಹಾರವನ್ನು ಸರಿಯಾಗಿ ಪೂರೈಕೆ ಮಾಡದ 150 ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.       ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪಡಿತರವನ್ನು ಉಚಿತವಾಗಿ ನೀಡಲಾಗುತ್ತಿದೆ, ರಾಜ್ಯ ಸಂಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿ ಹಣ ಪಡೆಯದಂತೆ ಮನವಿ ಮಾಡಿದರೂ, ಅಂಗಡಿ ಮಾಲೀಕರು ಕೇಳದೇ ಮೋಸ ಮಾಡುತ್ತಿದ್ದ ಅಂಗಡಿಗಳು ಹಾಗೂ ಕಾರ್ಯ ನಿರ್ವಹಿಸದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.       ರಾಜ್ಯದಲ್ಲಿ ಕೊರೋನಾ ಸಂಕಷ್ಟದಲ್ಲಿ ರಾಜ್ಯ ಸರ್ಕಾರ ನೀಡುವ ಪಡಿತರವನ್ನು 4.65…

Read More

ತುಮಕೂರು:       ತುಮಕೂರು ಜಿಲ್ಲೆಯಲ್ಲಿ ಗುಜರಾತ್ ಮೂಲದ ಕೋವಿಡ್-19 ಪಿ-447 ಸೋಂಕಿತ ವ್ಯಕ್ತಿಯು ಸಂಪೂರ್ಣವಾಗಿ ಗುಣಮುಖರಾಗಿ ಇಂದು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.        ಮಹಾಮಾರಿ ಕೋವಿಡ್-19ರ ಸೋಂಕಿಗೆ ಒಳಾಗಿದ್ದ ವ್ಯಕ್ತಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಂಕಿನಿಂದ ಮುಕ್ತರಾಗಿರುವ ಸಂತಸ ಅವರ ಮುಖದಲ್ಲಿ ಕಾಣಿಸುತ್ತಿತ್ತು. ಸೋಂಕಿತ ವ್ಯಕ್ತಿಯು ಮಾರ್ಚ್ 12ರಂದು ತುಮಕೂರು ಜಿಲ್ಲೆಗೆ ಆಗಮಿಸಿದ್ದು, ದೇಶದಲ್ಲಿ ಲಾಕ್‍ಡೌನ್ ಆಗಿರುವುದರಿಂದ ಇಲ್ಲೇ ಉಳಿದುಕೊಂಡಿದ್ದರು, ಹೊರ ರಾಜ್ಯದಿಂದ ಬಂದಿರುವ ವ್ಯಕ್ತಿಗಳನ್ನು ರ್ಯಾಂಡ್‍ಮ್ ಆಗಿ ತಪಾಸಣೆಗೊಳಪಡಿಸಲಾಗಿತ್ತು. ಇದರಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಿತ್ತು. ಕಳೆದ 14 ದಿನಗಳಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, 12ನೇ ದಿನ ಮತ್ತು 13 ದಿನದಂದು ಲ್ಯಾಬ್‍ಗೆ ಕಳುಹಿಸಿದ ಮಾದರಿ ನೆಗೆಟಿವ್ ಬಂದಿದ್ದು, ಸಾಂಸ್ಥಿಕ ಹೋಂ ಕ್ವಾರೆಂಟೈನ್‍ನಲ್ಲಿ ಇಡಲಾಗುವುದು. ಇವರು ಹೊರ ರಾಜ್ಯದವರಾಗಿರುವುದರಿಂದ ಮತ್ತೆ 28ನೇ ದಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ನೆಗೆಟಿವ್ ಬಂದ ನಂತರ ಸರ್ಕಾರದ ಸೂಚನೆಯಂತೆ ಅವರನ್ನು…

Read More

 ತುಮಕೂರು:       ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ರವರ ಆಪ್ತ ಸಹಾಯಕನಾಗಿದ್ದ ಕುಮಾರ್ ಚಲಿಸುತ್ತಿದ್ದ ಕಾರು ಅಪಘಾತವಾಗಿದ್ದು ಗಾಯಾಳು ಮೈಸೂರಿನ ಕೊಲಂಬಿಯ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.       ಕುಣಿಗಲ್ ತಾಲೂಕಿನ ಹುಲಿಯೂದುರ್ಗ ಪೊಲೀಸ್ ಠಾಣಾ ಸರಹದ್ದಿನಲ್ಲಿ ಬರುವ ನಿಡಸಾಲೆ (ಕುಣಿಗಲ್-ಮದ್ದೂರು ರಸ್ತೆ )ಬಳಿ ಏಂ 06, P-5738 ನಂಬರಿನ ಸ್ವಿಫ್ಟ್ ಕಾರಿನಲ್ಲಿ ತಮ್ಮ ಸ್ವಗ್ರಾಮ ಯಡವಾಣಿಗೆ ದಿನಾಂಕ:05-05-2020ರ ಮಂಗಳವಾರ ರಾತ್ರಿ 8:30ರ ಸಮಯದಲ್ಲಿ ಶಾಸಕರ ಆಪ್ತ ಕುಮಾರ್ ಡ್ರೈವ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಅಪಘಾತವಾಗಿದೆ. ಅಪಘಾತವಾದ ನಂತರ ಡ್ರೈವಿಂಗ್ ಸೀಟ್‍ನಿಂದ ಮುಂದಿನ ಬಲಭಾಗದ ಕಾರಿನ ಡೋರ್ ತೆಗೆದು ಚಾಲಕ ಕುಮಾರ್ ರಸ್ತೆಯ ಇಕ್ಕೆಲದಲ್ಲಿ ಅಂಗಾತವಾಗಿ ಬಿದ್ದಿರುವಂತಹ ದೃಶ್ಯ ಕಂಡುಬಂದಿದ್ದು, ಅಪಘಾತವಾದ ರೀತಿಯಲ್ಲಿ ಇದ್ದ ಕಾರನ್ನು ಮತ್ತು ಪ್ರಜ್ಞಾವಸ್ಥೆಯಲ್ಲಿರದ ರೀತಿಯಲ್ಲಿದ್ದ ಕುಮಾರ್‍ರನ್ನು ಕಂಡಂತಹ ಪೊಲೀಸರು ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೊಲಂಬಿಯಾ ಏಷಿಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ.        ಬುಧವಾರ ಈ ಸಂಬಂಧ…

Read More