ತುರುವೇಕೆರೆ : ವಿಧಾನಸಭಾ ಕ್ಷೇತ್ರದ ಮುಸ್ಲಿಂ ಕಾಲೋನಿಗಳಿಗೆ ಉತ್ತಮ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಮಸಾಲಾಜಯರಾಮ್ ತಿಳಿಸಿದರು. ತಾಲೂಕಿನ ಅಕ್ಕಳಸಂದ್ರ ಕಾಲೋನಿ 20 ಲಕ್ಷ ಹಾಗೂ ಚಂಡೂರು ಮುಸ್ಲಿಂ ಕಾಲೋನಿ 10 ಲಕ್ಷ ರೂ ವೆಚ್ಚದಲ್ಲಿ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ ಮಂಜೂರಾದ ಅನುದಾನದಲ್ಲಿ ನಿರ್ಮಾಣ ಮಾಡುತ್ತಿರುವ ಸಿ.ಸಿ ರೋಡ್ ಮತ್ತು ಬಾಕ್ಸ್ಚರಂಡಿ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರೆವೇರಿಸಿ ಮಾತನಾಡಿ ಕ್ಷೇತ್ರಕ್ಕೆ ಅಲ್ಪಸಂಖ್ಯಾತರ ಇಲಾಖೆಯಲ್ಲಿ ವಿಶೇಷ ಅನುದಾನವನ್ನು ತಂದು ಮುಸ್ಲಿಂ ಕಾಲೋನಿಗಳಿಗೆ ಕಾಂಕ್ರೇಟ್ ರಸ್ತೆ, ಚರಂಡಿ ಕಾಮಗಾರಿಗಳನ್ನು ಈಗಾಗಲೇ ಮಾಯಸಂದ್ರ ಸೇರಿದಂತೆ ಹಲವು ಹಳ್ಳಿಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಗುತ್ತಿಗೆದಾರರು ಕಳಪೆ ಮಾಡದಂತೆ ಸಾರ್ವಜನಿಕರು ಹೆಚ್ಚು ನಿಗಾವಹಿಸಿ ಉತ್ತಮ ಗುಣಮಟ್ಟ ಕಾಮಾಗಾರಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ರಸ್ತ ಅಭಿವೃದ್ದಿ ಸಂಸ್ಥೆಯಿಂದ ಮುಂಜೂರಾಗಿದ್ದ 94.20 ಲಕ್ಷ ವ್ಯಚ್ಚದಲ್ಲಿನ ಹುಲ್ಲೆಕೆರೆಯಿಂದ ಜಕ್ಕನಹಳ್ಳಿವರೆಗಿನ ರಸ್ತೆ ಕಾಮಗಾರಿಗೆ ಡಾಂಬರೀಕರಣಕ್ಕೆ…
Author: News Desk Benkiyabale
ತುಮಕೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ(ಮಾರ್ಚ್ 2) ತುಮಕೂರಿಗೆ ಆಗಮಿಸುತ್ತಿದ್ದಾರೆ . ಮಧ್ಯಾಹ್ನ 1 ಗಂಟೆಗೆ ನಗರಕ್ಕೆ ಭೇಟಿ ನೀಡಿ ಗಾಜಿನ ಮನೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತುಮಕೂರು: ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ದೃಷ್ಟಿಯಿಂದ ಸರ್ಕಾರವು ಸ್ತ್ರೀಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸದ ಎಸ್.ಪಿ ಮುದ್ದಹನುಮೇಗೌಡ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ “ಸ್ತ್ರೀ ಶಕ್ತಿ ಸಮಾವೇಶ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ತ್ರೀಶಕ್ತಿ ಗುಂಪುಗಳು ಮಹಿಳೆಯರಿಗೆ ಹೊಸ ಚೈತನ್ಯ ನೀಡಿ ಆರ್ಥಿಕ, ಸಾಮಾಜಿಕ ಸದೃಢತೆಯನ್ನು ತಂದುಕೊಟ್ಟಿದೆ. ಸ್ತ್ರೀಶಕ್ತಿ ಸಂಘಗಳು ಅನೇಕ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 10937 ಸ್ತ್ರೀಶಕ್ತಿ ಗುಂಪುಗಳು ರಚನೆಯಾಗಿದ್ದು, 1.20 ಲಕ್ಷಕ್ಕೂ ಹೆಚ್ಚು ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುವುದರ ಜೊತೆಗೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ…
ತುಮಕೂರು: ಜಿಲ್ಲೆಯ ತಿಪಟೂರು, ಪಾವಗಡ, ತುಮಕೂರು ತಾಲ್ಲೂಕುಗಳಲ್ಲಿ ಒಆಖ ಕ್ಷಯ ಪತ್ತೆಗಾಗಿ ಜೀನ್ ಎಕ್ಸ್ಪರ್ಟ್ (CBNAAT) ಯಂತ್ರವನ್ನು ಅಳವಡಿಸಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ: ಸನತ್ ಕುಮಾರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿಂದು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು(ಯೋಜನೆಗಳ) ಕುರಿತು ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು. ಅಃಓಂಂಖಿ ಯಂತ್ರದ ನೆರವಿನಿಂದ ಸೂಕ್ಷ್ಮತೆಯಿಲ್ಲದ ರೋಗನಿರೋಧಕ ಕ್ಷಯ (MDR) ರೋಗವನ್ನು 2 ಗಂಟೆಗಳ ಅವಧಿಯಲ್ಲಿಯೇ ಪತ್ತೆ ಮಾಡಬಹುದಾಗಿದೆ. ಪ್ರಾಥಮಿಕ ಹಂತದ ಚಿಕಿತ್ಸೆಗೆ ಸ್ಪಂದಿಸದವರನ್ನು MDR ಕ್ಷಯ ರೋಗಿಗಳೆಂದು ಗುರುತಿಸಲಾಗುವುದು. ಇವರಿಗೆ ನಗರದ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಉಚಿತ ಚಿಕಿತ್ಸಾ ಸೌಲಭ್ಯವಿದ್ದು, 9 ರಿಂದ 11 ತಿಂಗಳ ಕಾಲ…
ತುಮಕೂರು: ಕಟ್ಟಡ ಮತ್ತಿತರ ನಿರ್ಮಾಣ ಕಾಮಗಾರಿಗಳಲ್ಲಿ ದುಡಿಯುವ ಕಾರ್ಮಿಕ ಕೈಗಳಿಗೆ ಎಲ್ಲರಂತೆ ಗೌರವ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ತಿಳಿಸಿದರು. ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗಳ ಸಹಯೋಗದಲ್ಲಿಂದು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ “ಕಾರ್ಮಿಕ ಸಮ್ಮಾನ ಪ್ರಶಸ್ತಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅರ್ಹ ಫಲಾನುಭವಿಗಳಿಗೆ ಕಾರ್ಯಕ್ರಮಗಳ ಸೌಲಭ್ಯ ತಲುಪಬೇಕು. ಕಟ್ಟಡ ಕಾರ್ಮಿಕರು ಹಾಗೂ ವಾಹನ ಚಾಲಕರಿಗೆ ವಿಮಾ ಸೌಲಭ್ಯ ನೀಡಲು ಅನುದಾನ ಲಭ್ಯವಿದ್ದು, ಅಧಿಕಾರಿಗಳು ಸೌಲಭ್ಯಗಳನ್ನು ಶೀಘ್ರವೇ ಅರ್ಹರಿಗೆ ನೀಡಬೇಕು. ಅಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ, ಹೆರಿಗೆ, ಮದುವೆಗಾಗಿ ಧನಸಹಾಯ ಹಾಗೂ ವಸತಿ ನಿರ್ಮಾಣ, ವಿದ್ಯಾರ್ಥಿ ವೇತನದಂತಹ ಸವಲತ್ತುಗಳನ್ನು ಸರ್ಕಾರ ಒದಗಿಸುತ್ತಿದ್ದು, ಕಾರ್ಮಿಕರು ಈ ಸೌಲಭ್ಯವನ್ನು ಬಳಸಿಕೊಂಡು…
ಮಧುಗಿರಿ : ಇಂದಿನ ಪರಿಸ್ಥಿತಿಯಲ್ಲಿ ಶುದ್ದ ಕುಡಿಯುವ ನೀರಿನ ಅವಶ್ಯಕತೆ ಎಲ್ಲರಿಗೂ ಅಗತ್ಯವಾಗಿದ್ದು, ಜನತೆ ನೀರನ್ನು ವ್ಯರ್ಥ ಮಾಡದೇ ಬಳಸಿಕೊಳ್ಳಬೇಕು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು. ಪಟ್ಟಣದ ವಿವಿಧ ಭಾಗಗಳಲ್ಲಿ ಇತ್ತೀಚೆಗೆ ಒಂದೇ ದಿನದಲ್ಲಿ 6 ಶುದ್ದ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದರು. ಪಟ್ಟಣದಲ್ಲಿ ಈಗ ಒಂದು ಶುದ್ದ ಕುಡಿಯುವ ನೀರಿನ ಘಟಕ ಮಾತ್ರ ಕಾರ್ಯನಿರ್ವಹಹಿಸುತ್ತಿದ್ದು, ಇದರಿಂದ ಜನತೆಗೆ ಕುಡಿಯುವ ನೀರಿಗೆ ಬಹಳ ತೊಂದರೆಯುಂಟಾಗಿತ್ತು. ಇದನ್ನು ಮನಗಂಡು ಸರ್ಕಾರದ ವತಿಯಿಂದ ಅನುಧಾನ ಬಿಡುಗಡೆಗೊಳಿಸಿ ಪಟ್ಟಣದ ವಿವಿಧ ವಾರ್ಡುಗಳಲ್ಲಿ 6 ಕಡೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಜನತೆಗೆ ಕುಡಿಯುವ ನೀರಿನ ಬವಣೆ ತಪ್ಪಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಲಿಂಗೇನಹಳ್ಳಿ ಮತ್ತು ರಿಲಯನ್ಸ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಹಕ್ಕುಪತ್ರ ಪಡೆದು ಕಳೆದ 40 ವರ್ಷಗಳಿಂದಲೂ ವಾಸಿಸುತ್ತಿರುವವರಿಗೆ ಮನೆ ಖಾತೆ ಮಾಡಿಕೊಡಬೇಕೆಂದು ಸಾರ್ವಜನಿಕರು…
ತುಮಕೂರು: ಗ್ರಾಮಾಂತರ ಜನರ ಋಣ ನನ್ನ ಮೇಲಿದೆ, ಮತ ಹಾಕಿ ಕೊಲಿ ಮಾಡಲು ಕಳುಹಿಸಿಕೊಟ್ಟಿದ್ದಾರೆ, ಕೆಲಸ ಮಾಡಿ ಋಣ ತೀರಿಸುತ್ತೇನೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದ್ದಾರೆ. ಗ್ರಾಮಾಂತರ ಕ್ಷೇತ್ರದ ಹೊನ್ನುಡಿಕೆ ಜಿ.ಪಂ.ವ್ಯಾಪ್ತಿಯಲ್ಲಿ 311 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ, ಶಾಸಕನಾದ ಮೇಲೆ ಲೂಟಿ ಮಾಡಿದ, ಅದು ಇದು ಎಂದೆಲ್ಲ ಮಾಜಿ ಶಾಸಕರು ಮಾತನಾಡುತ್ತಾರೆ, ನನ್ನ ಕುಟುಂಬ ಇಷ್ಟು ಕೀಳು ಮಟ್ಟಕ್ಕೆ ಇಳಿದಿಲ್ಲ, ಮೊದಲು ನೀವು ಮಾನವೀಯತೆ ರೂಢಿಸಿಕೊಳ್ಳಿ ನಂತರ ರಾಜಕಾರಣ ಮಾಡೋಣ, ತಂದೆಗೆ ಹುಷಾರಿಲ್ಲದ ಸಮಯದಲ್ಲಿ ಮಾತೆತ್ತಿದ್ದರೆ ಕಿರುಕುಳ ನೀಡಿದರು ಎಂದು ಭಾವುಕರಾದರು. ನಾನು ಇಂಡಿಯಾ ಇನ್ ಇಂಡಿಯಾ ಪ್ರಾಡೆಕ್ಟ್, ಅವ್ರು ಮೇಡ್ ಇನ್ ಚೀನ್ ಯೂಸ್ ಅಂಡ್ ಥ್ರೋ ಅಷ್ಟೇ, ಒಂದು ಬಾರಿ ಕೈಹಿಡಿದರೆ ಕೈಬಿಡುವ ಪ್ರಶ್ನೆಯೇ ಇಲ್ಲ, ಆ ಕಮಲ ಈ…
ತುಮಕೂರು: ಶಿರಾ ವಿಧಾನ ಸಭಾ ಕ್ಷೇತ್ರ ಶಾಸಕ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಬಿ.ಸತ್ಯನಾರಾಯಣ ಅವರು ತುಮಕೂರು ವಿಭಾಗದ ಕಛೇರಿಗೆ ಭೇಟಿ ನೀಡಿ ವಿಭಾಗೀಯ ಕಛೇರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾರ್ಯ ಚಟುವಟಿಕೆಗಳ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್.ಗಜೇಂದ್ರ ಕುಮಾರ್ ಹಾಗೂ ವಿಭಾಗದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ತುಮಕೂರು: ನಗರದ ಖಾಸಗೀ ಹೋಟೆಲ್ ನಲ್ಲಿ ಸುದ್ಧಿಗೋಷ್ಠಿ ನಡೆಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಗ್ರಾಮಾಂತರ ಮಾಜಿ ಶಾಸಕ ಬಿ.ಸುರೇಶ್ ಗೌಡರವರು ಹಾಲಿ ಶಾಸಕರಾದ ಡಿ.ಸಿ.ಗೌರಿಶಂಕರ್ ವಿರುದ್ಧ ಹರಿಹಾಯ್ದರು. ಗೌರಿಶಂಕರ್ ವಿರುದ್ಧ ಎಕ್ಸ್ಟ್ರಾಕ್ಷನ್ ಕೇಸು ದಾಖಲಿಸಲಬೇಕು ಮತ್ತು ಪ್ರಾಮಾಣಿಕ ಅಧಿಕಾರಿಯಿಂದ ತನಿಖೆ ನಡೆಸಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿಯನ್ನು ಮುಖ್ಯ ಸಾಕ್ಷಿಯಾಗಿ ಪರಿಗಣಿಸಬೇಕು. ಭೂ ವಿಜ್ಞಾನಿಯವರು ಗಣಿ ಇಲಾಖೆಯ ಉಪ ನಿರ್ದೇಶಕರಿಗೆ ನೀಡಿರುವ ಹೇಳಿಕೆಯನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕು. ಶಾಸಕರು ಕಾನೂನನ್ನು ಕೈಗೆತ್ತಿಕೊಂಡಿರುವುದರಿಂದ ಇವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಬಂಧಿಸಬೇಕು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಪಾರದರ್ಶಕ ತನಿಖೆಗೆ ಅನುವುಮಾಡಿಕೊಡಬೇಕು. ತಮ್ಮ ಪಕ್ಷದ ಶಾಸಕನನ್ನು ರಕ್ಷಣೆ ಮಾಡಬಾರದು ಎಂದು ಒತ್ತಾಯಿಸಿದರು. ದಿನಾಂಕ 21-.01-2019 ರಂದು ಭ್ರಷ್ಠಾಚಾರ ನಿಗ್ರಹದಳದ ಪೋಲೀಸ್ ಉಪಾದೀಕ್ಷಕರಿಗೆ ದೂರು ನೀಡಲಾಗಿದ್ದು ಸದರೀ ದೂರಿನ ಸಂಭಂದ 25.01.2019 ರಂದು ಪತ್ರಿಕಾಗೋಷ್ಠಿ ನಡೆಸಲಾಗಿತ್ತು ಆದರೆ ಭ್ರಷ್ಠಾಚಾರ ನಿಗ್ರಹ ದಳದ…
ತುರುವೇಕೆರೆ: ಕಾಮಗಾರಿ ನಿರ್ವಹಣೆ ವೇಳೆ ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಸುಸಜ್ಜಿತವಾದ ಚೆಕ್ ಡ್ಯಾಂ ಹಾಗೂ ಸೇತುವೆಯನ್ನು ನಿಗದಿತ ಅವಧಿಯೊಳಗೆ ಸಾರ್ವಜನಿಕ ಸೇವೆಗೆ ನೀಡುವಂತೆ ಗುತ್ತಿಗೆದಾರರಿಗೆ ಶಾಸಕ ಮಸಾಲ ಜಯರಾಮ್ ಸೂಚನೆ ನೀಡಿದರು. ತಾಲ್ಲೂಕಿನ ವಿಠಲದೇವರಹಳ್ಳಿ ಗ್ರಾಮದ ಬಳಿಯ ಲಕ್ಷ್ಮೀನರಸಿಂಹ ಸ್ವಾಮಿ ದೇಗುಲದ ಸಮೀಪದಲ್ಲಿ 100 ಲಕ್ಷ ರೂಗಳ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಠಲದೇವರಹಳ್ಳಿ ಗ್ರಾಮದ ಜನತೆ ತಮ್ಮ ಜಮೀನುಗಳಿಗೆ ಹಾಗೂ ಅರೆಮಲ್ಲೇನಹಳ್ಳಿ ಗ್ರಾಮಗಳಿಗೆ ಮಳೆಗಾಲದಲ್ಲಿ ತೆರಳುವುದು ದುಸ್ತರವಾಗಿವೆನಿಸಿತ್ತು. ಸುಮಾರು ವರ್ಷಗಳಿಂದ ಸರ್ವಋತು ಸೇತುವೆ ನಿರ್ಮಾಣಕ್ಕಾಗಿ ಜನತೆ ಚಾತಕ ಪಕ್ಷಿಗಳಂತೆ ಕಾದಿದ್ದರು. ಇದೀಗ ಜನತೆ ಆಶಯದಂತೆ ಕೋಟಿ ರೂ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖಾ ವತಿಯಿಂದ ಸೇತುವೆ ಹಾಗೂ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತುಕೊಂಡಿದ್ದು ಅತಿ ಶೀಘ್ರದಲ್ಲಿ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದರು. ಸಂಸದರಾದ ಮುದ್ದಹನುಮೇಗೌಡ ಮಾತನಾಡಿ ಅಂತರ್ಜಲವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಚೆಕ್…