Author: News Desk Benkiyabale

ತುಮಕೂರು :       ಜಿಲ್ಲೆಯ ವಸಂತನರಸಾಪುರ ಕೈಗಾರಿಕ ಪ್ರದೇಶದಲ್ಲಿರುವ ಗಿನಾ ಕನಸ್ಟ್ರಕ್ಷನ್ ಗ್ರೂಫ್‍ನ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಪರೀಕ್ಷೆ ನಡೆಸಿದ್ದಾರೆ.       ಈ ಸಂದರ್ಭದಲ್ಲಿ ನೋಡೆಲ್ ಅಧಿಕಾರಿಗಳಾದ ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಂಗೇಗೌಡ, ವಿಕಲಚೇತನರ ಕಲ್ಯಾಣಾಧಿಕಾರಿ ರಮೇಶ್, ಮತ್ತಿತರರು ಹಾಜರಿದ್ದರು.

Read More

ತುಮಕೂರು:       ಶಿರಾ ತಾಲ್ಲೂಕಿನಲ್ಲಿ ಕೊರೋನಾ ವೈರಸ್ ಸೋಂಕಿತ ವ್ಯಕ್ತಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿರಾ ಸಾರ್ವಜನಿಕ ಆಸ್ಪತ್ರೆ ಹಾಗೂ ಶಿರಾ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ 2 ಫೀವರ್ ಕ್ಲಿನಿಕ್‍ಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಬಿ.ಆರ್. ಚಂದ್ರಿಕಾ ತಿಳಿಸಿದರು.       ತಮ್ಮ ಕಛೇರಿಯಲ್ಲಿಂದು ಮಾಹಿತಿ ನೀಡಿದ ಅವರು, ಕೊರೋನಾ ಸೋಂಕಿತ ಮೃತ ವ್ಯಕ್ತಿಯ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್‍ಮೆಂಟ್ ವಲಯವೆಂದು ಘೋಷಿಸಿದ್ದು, ಈ ವಲಯದ ಮನೆಗಳನ್ನು ಪ್ರತಿದಿನ ಆರೋಗ್ಯ ಸಿಬ್ಬಂದಿಗಳು ಸಮೀಕ್ಷೆ ಮಾಡುತ್ತಿದ್ದಾರೆ. ಜ್ವರ, ತಲೆನೋವು, ಕೆಮ್ಮು, ನೆಗಡಿ ಮತ್ತಿತರ ಕೊರೋನಾ ವೈರಸ್ ರೋಗಲಕ್ಷಣಗಳು ಕಂಡು ಬಂದರೆ ಕೂಡಲೇ ಫೀವರ್ ಕ್ಲಿನಿಕ್‍ಗೆ ಚಿಕಿತ್ಸೆಗಾಗಿ ಕಳುಹಿಸಲಾಗುವುದು. ಯಾವುದೇ ತೊಂದರೆ ಇಲ್ಲವೆಂದು ದೃಢಪಟ್ಟಲ್ಲಿ ಮಾತ್ರ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗುವುದು. ಜ್ವರ ಕಡಿಮೆಯಾಗದೆ ಕೆಮ್ಮಿನಿಂದ ಬಳಲುತ್ತಿದ್ದು ಸಂದೇಹ ಬಂದರೆ ಆಸ್ಪತ್ರೆಯ ಐಸೋಲೇಷನ್‍ನಲ್ಲಿ ಇಡಲಾಗುವುದು ಎಂದು ತಿಳಿಸಿದರು.    …

Read More

ತುಮಕೂರು:       ಕೋವಿಡ್-19 ಸೋಂಕು ರೋಗದ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅವರು ಭಾನುವಾರ ಗಾಂಧಿ ನಗರದ ಸರ್ಕಾರಿ ಬಾಲಕರ ಬಾಲಮಂದಿರ ಹಾಗೂ ಅಮರ ಜ್ಯೋತಿ ನಗರದ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿ ಮಕ್ಕಳಿಗೆ ಒದಗಿಸಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.       ನಂತರ ಬಾಲಮಂದಿರದ ಮಕ್ಕಳ ಆರೋಗ್ಯ ವಿಚಾರಿಸಿದ ಅವರು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಪ್ರತಿ 2 ಗಂಟೆಗಳಿಗೊಮ್ಮೆ ಕೈಗಳನ್ನು ತೊಳೆಯಬೇಕೆಂದು ಮಕ್ಕಳಿಗೆ ಸಲಹೆ ನೀಡಿದರಲ್ಲದೆ, ಕಾಲಕಾಲಕ್ಕೆ ಮಕ್ಕಳನ್ನು ವೈದ್ಯಕೀಯ ತಪಾಸಣೆಗೊಳಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.       ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಮಾತನಾಡಿ, ಬಾಲಮಂದಿರದಲ್ಲಿ 7 ಬಾಲಕರು ಹಾಗೂ 21 ಬಾಲಕಿಯರಿದ್ದು, ಎಲ್ಲಾ ಮಕ್ಕಳಿಗೂ ಕಣ್ಣು, ಬಾಯಿ, ಮೂಗನ್ನು ಮುಟ್ಟಿಕೊಳ್ಳದಂತೆ ಪ್ರತ್ಯೇಕವಾಗಿ ಹ್ಯಾಂಡ್ ಕರ್ಚೀಫ್‍ಗಳನ್ನು ಹಾಗೂ ಹ್ಯಾಂಡ್ ಟವಲ್‍ಗಳನ್ನು ಒದಗಿಸಲಾಗಿದೆ. ಸ್ಯಾನಿಟೈಸರ್ ಬಳಸುವ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು…

Read More

ತುಮಕೂರು:       ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಮಹಾನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್ ದಿಢೀರ್ ದಾಳಿ ನಡೆಸಿ ಎರಡು ಅಂಗಡಿಗಳಿಗೂ ಬೀಗ ಹಾಕಿಸಿರುವ ಘಟನೆ ನಗರದಲ್ಲಿಂದು ನಡೆದಿದೆ.        ನಗರದ ಕೋತಿತೋಪು ಸೇರಿದಂತೆ ವಿವಿಧೆಡೆ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಟನ್ ಮತ್ತು ಚಿಕನ್ ಮಾರಾಟ ಮಾಡಲಾಗುತ್ತಿದೆ ಎಂಬ ಕುರಿತು ಬಂದ ದೂರಿನ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಟಿ. ಭೂಬಾಲನ್, ಆರೋಗ್ಯಾಧಿಕಾರಿ ಡಾ. ನಾಗೇಶ್‍ಕುಮಾರ್ ಅವರು ಇಂದು ಕೋತಿತೋಪಿನ ಎರಡು ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿದಾಗ ಹೆಚ್ಚಿನ ಬೆಲೆಗೆ ಮಾಂಸ ಮಾರಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.       ತಕ್ಷಣ ಆಯುಕ್ತರು ಒಂದು ಮಾಂಸದ ಅಂಗಡಿ ಮತ್ತು ಒಂದು ಕೋಳಿ ಅಂಗಡಿ ಸೇರಿ ಎರಡೂ ಅಂಗಡಿಗಳ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಅಂಗಡಿಗಳ ಬಾಗಿಲು ಮುಚ್ಚಿಸಿ ಬೀಗ ಹಾಕಿಸಿದರು.       ನಂತರ…

Read More

 ತುಮಕೂರು :       ಕೊರೋನಾ ವೈರಸ್ ಕೋವಿಡ್-19 ಹರಡದಂತೆ ತಡೆಗಟ್ಟಲು ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪರಿಶೀಲನೆ ನಡೆಸಿದರು.        ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ವೈರಸ್ ಕೋವಿಡ್-19 ಹರಡದಂತೆ ತಡೆಯಲು ಸೋಂಕಿತರ ಸಂಪರ್ಕದಲ್ಲಿದ್ದ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದವರನ್ನು (ಪ್ರೈಮರಿ ಅಂಡ್ ಸೆಕೆಂಡರಿ ಕಾಂಟ್ಯಾಕ್ಟ್) ಸಂಪೂರ್ಣವಾಗಿ ಪತ್ತೆಹಚ್ಚಿ ಅವರನ್ನು ಕ್ವಾರಂಟೈನ್ ಮಾಡಿ, ಅವರ ಮೇಲೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.      ಕೋವಿಡ್‍ಗೆ ಸಂಬಂಧಿಸಿದವರನ್ನು ತಾಲ್ಲೂಕು ಆಸ್ಪತ್ರೆ ಅಥವಾ ತಾಲ್ಲೂಕು ಕೇಂದ್ರಗಳಲ್ಲಿ ಇಟ್ಟು ನಿಗಾವಹಿಸುವ ಬದಲು ಎಲ್ಲರನ್ನು ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಿ, ಅಲ್ಲಿಯೇ ಚಿಕಿತ್ಸೆ/ ನಿಗಾವಹಿಸಲು ಸುಲಭವಾಗುತ್ತದೆ. ಆರೋಗ್ಯ ಸಿಬ್ಬಂದಿಗಳಿಗೆ ಹಾಗೂ ನಿರ್ವಹಣೆಗೆ ಅನುಕೂಲವಾಗಲಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.…

Read More

ತುಮಕೂರು :       ಕೊರೋನಾ ವೈರಸ್ ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸಿದ್ಧಗಂಗಾ ಮಠ ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆ ವತಿಯಿಂದ 50ಲಕ್ಷ ರೂ.ಗಳ ಡಿಡಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.        ಸಿದ್ಧಗಂಗಾ ಮಠದಲ್ಲಿಂದು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಸಿದ್ಧಗಂಗಾ ಮಠದಿಂದ 25ಲಕ್ಷ ರೂ. ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆಯಿಂದ 25ಲಕ್ಷ ರೂ.ಗಳು ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು.      ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಸಿದ್ಧಗಂಗಾ ಮಠದ ವಿಶ್ವನಾಥಯ್ಯ, ಟಿ.ಕೆ. ನಂಜುಂಡಪ್ಪ, ಮತ್ತಿತರರು ಹಾಜರಿದ್ದರು.

Read More

ತುಮಕೂರು :       ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ 303 ಮಂದಿಯನ್ನು ಹೋಂ ಕ್ವಾರೆಂಟೈನ್‍ನಲ್ಲಿ ಇರಿಸಲಾಗಿದೆ.       ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಸೂಚಿಸಲಾಗಿದೆ. ಒಟ್ಟು 92 ಮಂದಿಯನ್ನು ಐಸೋಲೇಷನ್‍ನಲ್ಲಿ ಇಡಲಾಗಿದ್ದು, 67 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 140 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 135 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ.       2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. 3 ಮಾದರಿಗಳು ತಿರಸ್ಕøತಗೊಂಡಿವೆ ಎಂದು ಡಿಹೆಚ್‍ಓ ಡಾ: ಚಂದ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕೊರಟಗೆರೆ:       ಕೊರೊನಾ ವೈರೇಸ್ ಹರಡುವಿಕೆ ತಡೆಯಲು ಪ್ರತಿನಿತ್ಯ ಸೈನಿಕರಂತೆ ಕೆಲಸ ಮಾಡುತ್ತೀರುವ ಕೋಳಾಲ ಜಿಪಂ ಕ್ಷೇತ್ರದ ಆಸ್ಪತ್ರೆ, ಪೊಲೀಸ್, ಗ್ರಾಪಂ ಮತ್ತು ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ 3 ಸಾವಿರ ಸಾನಿಟೈಸರ್ ಮತ್ತು ಮಾಸ್ಕ್ ವಿತರಣೆ ಮಾಡಲಾಗಿದೆ ಎಂದು ಕೋಳಾಲ ಜಿಪಂ ಸದಸ್ಯ ಶಿವರಾಮಯ್ಯ ತಿಳಿಸಿದರು.       ತಾಲೂಕಿನ ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯ ಕರ್ತವ್ಯನಿರತ ಕೊರೊನಾ ಸೈನಿಕರಿಗೆ ಉಚಿತವಾಗಿ ಇತ್ತೀಚಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ ಮಾಡಿದ ವೇಳೆ ಮಾತನಾಡಿದರು.       ಕೋಳಾಲ ಜಿಪಂ ಕ್ಷೇತ್ರದಲ್ಲಿ ಕೊರೊನಾ ಸೈನಿಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ ಮಾಡಿದ್ದೇನೆ. ನನ್ನ ಮತಕ್ಷೇತ್ರದ ಪ್ರತಿಮನೆಯ ಸದಸ್ಯರಿಗೂ ಉಚಿತವಾಗಿ 30ಸಾವಿರ ಮಾಸ್ಕ್ ಮತ್ತು ಸ್ಯಾನಿಟೈಸರ್ ಅವರ ಮನೆಯ ಬಳಿಯೇ ಹೋಗಿ ವಿತರಣೆ ಮಾಡುತ್ತೇನೆ. ಈಗಾಗಲೇ ಜನಸಂಖ್ಯೆಯ ಅಂಕಿಅಂಶ ಕಳೆಹಾಕಿದ್ದೇನೆ ನಮ್ಮ ಕ್ಷೇತ್ರದ ಜನರ ಆರೋಗ್ಯ ರಕ್ಷಣೆ ನನಗೆ ಬಹುಮುಖ್ಯವಾಗಿದೆ ಎಂದು ಹೇಳಿದರು.      …

Read More

ತುಮಕೂರು :       ತುಮಕೂರು ಜಿಲ್ಲೆಯಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‍ಡೌನ್ ಇರುವುದರಿಂದ ಜಿಲ್ಲೆಯ ರೈತರು ಬೆಳೆದಿರುವ ಕಲ್ಲಂಗಡಿ, ಕರಬೂಜ, ಟಮೋಟೋ ಹಾಗೂ ಪಪ್ಪಾಯ ಹಣ್ಣುಗಳನ್ನು ಹಾಪ್‍ಕಾಮ್ಸ್ ಹಾಗೂ ವ್ಯಾಪಾರಸ್ಥರನ್ನು ಲಿಂಕ್ ಮಾಡುವ ಮೂಲಕ ಖರೀದಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.       ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಾ, ಇದಕ್ಕಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ಕ್ರಮ ಕೈಗೊಂಡಿದ್ದು, ಜಿಲ್ಲೆಗೆ ಅಗತ್ಯವಿರುವಷ್ಟು ಜಿಲ್ಲೆಯಲ್ಲೇ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಚಿತ್ರದುರ್ಗ, ಬೆಂಗಳೂರು ಜಿಲ್ಲೆಗಳಿಗೆ ಕಳುಹಿಸಲು ಹಾಗೂ ನೆರೆಯ ರಾಜ್ಯದ ಅನಂತಪುರದಲ್ಲಿರುವ ವ್ಯಾಪಾರಸ್ಥರನ್ನು ಲಿಂಕ್ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.       ತುಮಕೂರು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳನ್ನು ಎಪಿಎಂಸಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿ ಮನೆ-ಮನೆಗೆ ಹಾಪ್‍ಕಾಮ್ಸ್…

Read More

ತುಮಕೂರು :       ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ಇಂದು ಶಿರಾ ತಾಲ್ಲೂಕಿಗೆ ಭೇಟಿ ನೀಡಿ ತಾಲ್ಲೂಕಿನಾದ್ಯಂತ ಕೋವಿಡ್-19 ಕುರಿತು ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.        ಉತ್ತರ ಕರ್ನಾಟಕದಿಂದ ವಲಸೆ ಬಂದಿರುವ ಕಾರ್ಮಿಕರಿಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಸುಮಾರು 100 ಜನಕ್ಕೆ ಆಶ್ರಯ ಕಲ್ಪಿಸಲಾಗಿದ್ದು, ಅವರಿಗೆ ಕೊರೋನಾ ವೈರಸ್ ಹರಡುವ ಬಗ್ಗೆ ಅರಿವು ಮೂಡಿಸಿ ಮನೋಸ್ಥೈರ್ಯ ತುಂಬಿದರು ಹಾಗೂ ಅವರಿಗೆ ಒದಗಿಸಲಾಗಿರುವ ಮೂಲಭೂತ ಸೌಲಭ್ಯಗಳ ಬಗ್ಗೆಯೂ ಪರಿಶೀಲನೆ ನಡೆಸಿ ದಿನನಿತ್ಯ ಬೇಕಾಗುವ ಅಗತ್ಯ ಸಾಮಗ್ರಿಗಳಾದ ಪೇಸ್ಟ್, ಸೋಪು, ಸ್ಯಾನಿಟರಿ ಪ್ಯಾಡ್ಸ್ ಹಾಗೂ ಬ್ರಷ್‍ಗಳನ್ನು ಸ್ಥಳದಲ್ಲಿಯೇ ವಿತರಿಸಿದರು. ಅವರಿಗೆ ಕುಡಿಯುವ ನೀರಿನ ಪೂರೈಕೆಗೆ ಮತ್ತು ಅವರು ತಂಗಿರುವ ಕೊಠಡಿ ಮತ್ತು ಶೌಚಾಲಯಗಳ ಸ್ವಚ್ಛತೆ ಕಾಪಾಡುವ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿರಾ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದ ಅವರು ಹೊರರೋಗಿಗಳ ಚಿಕಿತ್ಸೆ ಕುರಿತು ಆಸ್ಪತ್ರೆ…

Read More