Author: News Desk Benkiyabale

 ತುಮಕೂರು:       ತುಮಕೂರು ವಿವಿಯ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಸಿ.ಜೆ.ಶಿಲ್ಪಾ, ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕಪರಿಶೋಧನಾ ಇಲಾಖೆಯ ಲೆಕ್ಕಾಧಿಕಾರಿ ರೋಷನ್ ಹಾಗೂ ಸಿಂಧು ಎನ್. ಸೇರಿದಂತೆ 3 ಮಂದಿಗೆ ಡಾಕ್ಟರೇಟ್ ದೊರೆತಿದೆ.       ಸಿ.ಜೆ.ಶಿಲ್ಪಾ ಅವರು ಡಾ. ಹೆಚ್. ನಾಗಭೂಷಣ ಅವರ ಮಾರ್ಗದರ್ಶನದಲ್ಲಿ ” ಸಿಂಥೆಸಿಸ್ ಆಫ್ ರೇರ್ ಅರ್ತ್ ಆ್ಯಂಡ್ ಟ್ರಾನ್ಸಿಷನ್ ಮೆಟಲ್ ಅಯಾನ್ಸ್ ಡೋಪ್ಡ್ ನ್ಯಾನೋಪಾರ್ಟಿಕಲ್ಸ್: ಸ್ಟ್ರಕ್ಚರಲ್ ಮಾರ್ಫಾಲಾಜಿಕಲ್ ಆ್ಯಂಡ್ ಲ್ಯುಮಿನೆಸನ್ಸ್ ಸ್ಟಡೀಸ್” ವಿಷಯ ಕುರಿತು ಮಂಡಿಸಿದ ಸಂಶೋಧನಾ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪ್ರದಾನ ದೊರೆತಿದ್ದು, ಇತ್ತೀಚೆಗೆ ಜರುಗಿದ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಪಿಹೆಚ್‍ಡಿ ಪದವಿ ಪ್ರದಾನ ಮಾಡಲಾಯಿತು.       ರೋಷನ್ ಅವರು ಮಂಡಿಸಿದ “ಬೆಂಗಳೂರು ನಗರದಲ್ಲಿ ಆಟೋ ರಿಕ್ಷಾ ಸಾರಿಗೆ ಸೇವೆ, ಆಟೋ ಚಾಲಕರ ಮತ್ತು ಪ್ರಯಾಣಿಕರ ಸಂಬಂಧ ಕುರಿತ ಅಧ್ಯಯನ ” ಸಂಶೋಧನಾ ಮಹಾ ಪ್ರಬಂಧಕ್ಕೆ ತಮಿಳುನಾಡಿನ ಭಾರತೀಯಾರ್ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ನೀಡಿದ್ದು, ಬೆಂಗಳೂರಿನ ಆಚಾರ್ಯ ಇನ್ಸಿಟಿಟ್ಯೂಟ್…

Read More

 ತುಮಕೂರು:       ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅವರು ಅಭಿಪ್ರಾಯಪಟ್ಟರು.       ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ), ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿಂದು ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       ಮಾಧ್ಯಮಗಳು ಇಲ್ಲದಿದ್ದರೆ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮುಟ್ಟಿಸಲು ಕಷ್ಟಸಾಧ್ಯವಾಗುತ್ತಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶದ ಅಭ್ಯುದಯಕ್ಕಾಗಿ ಹಲವಾರು ಯೋಜನೆಗಳಿಗಾಗಿ ಲಕ್ಷಾಂತರ ಕೋಟಿ ರೂ.ಗಳನ್ನು ವ್ಯಯಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಲಾಭ ತಲುಪಿದಾಗ ಮಾತ್ರ ಸರ್ಕಾರದ ಮಹತ್ತರ ಉದ್ದೇಶ ಸಾರ್ಥಕವಾಗುತ್ತದೆ ಎಂದರಲ್ಲದೆ, ರಾಜ್ಯದ ಅಭಿವೃದ್ಧಿಯಲ್ಲಿ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದಷ್ಟೇ ಪತ್ರಿಕಾರಂಗದ…

Read More

 ತುಮಕೂರು:        ವಿಶೇಷ ಚೇತನರು ಸಹ ಇತರರಂತೆ ಸರ್ವತೋಮುಖ ಬೆಳವಣಿಗೆ ಹೊಂದಲು ಪ್ರೋತ್ಸಾಹಿಸುವುದು ಪೋಷಕರ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್.ನಟರಾಜ್ ತಿಳಿಸಿದರು.       ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಬಾಲಭವನದಲ್ಲಿಂದು ವಿಕಲಚೇತನ ಮಕ್ಕಳಿಗಾಗಿ ಏರ್ಪಡಿಸಿದ್ದ “ಮಕ್ಕಳೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಶೇಷ ಚೇತನರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಜಾರಿಗೆ ತಂದಿದ್ದು, ಅದರ ಸದುಪಯೋಗಪಡೆದುಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ವಿಶೇಷ ಚೇತನರು ಸಾಂಸ್ಕøತಿಕ, ಕ್ರೀಡೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಅವರ ಕೀರ್ತಿ ಮತ್ತಷ್ಟು ಹೆಚ್ಚಿಸಲು ನಾವೆಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.       ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿಕಲಚೇತನರ ಕೌಶಲ್ಯಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣದ ಎಡಿಐಪಿ ಯೋಜನೆಯಡಿಯಡಿ ಬುದ್ದಿಮಾಂದ್ಯ ವಿಕಲಚೇತನ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ 6 ಶಾಲೆಯ 120 ವಿಕಲಚೇತನ ಮಕ್ಕಳು ಭಾಗವಹಿಸಿದ್ದರು. ವೇಷಭೂಷಣ…

Read More

ಮಧುಗಿರಿ :       ತುರ್ತು ವಾಹನ 108 ಅಂಬುಲೆನ್ಸ್‍ನ್ನು ತಾಲ್ಲೂಕಿನ ಹೋಬಳಿ ಒಂದರಂತೆ ಮಂಜೂರು ಮಾಡಿಸಿಕೊಡಬೇಕೆಂದು ಜಯಕರ್ನಾಟಕ ಮಧುಗಿರಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.       ಮಧುಗಿರಿಯು ಉಪವಿಭಾಗ ಕೇಂದ್ರವಾಗಿದ್ದು 4 ತಾಲ್ಲೂಕುಗಳು ಒಳಪಟ್ಟಿರುವುದರಿಂದ ಇಲ್ಲಿ ಜನ ಸಂದಣಿ ದಟ್ಟವಾಗಿರುತ್ತದೆ. ಆದ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಹಾಲಿ ಈಗ ಇರುವ ಏಕೈಕ ತುರ್ತು ವಾಹನ ಕಾರ್ಯನಿರ್ವಹಿಸಲು ಕಷ್ಟಕರವಾಗಿರುತ್ತದೆ. ಆದ್ದರಿಂದ ಹೋಬಳಿಗೆ ಒಂದರಂತೆ 5 ತುರ್ತು ವಾಹನಗಳನ್ನು ಮತ್ತು ತಾಲೂಕಿಗೆ ವೈಕುಂಠ ವಾಹನವನ್ನು ಮಂಜೂರು ಮಾಡಿಸಿಕೊಡಬೇಕು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಐಸಿಯು ಮತ್ತು ಡಯಾಲಿಸಿಸ್ ಇರುವುದರಿಂದ ಸಿಬ್ಬಂದಿಕೊರತೆ ಇದೆ. ಹಾಗೂ ಚರ್ಮ ರೋಗ ತಜ್ಞರು, ನರ್ಸ್‍ಗಳ ಅವಶ್ಯಕತೆ ಮತ್ತು ಸಿಟಿ ಸ್ಕಾನಿಂಗ್ ವ್ಯವಸ್ಥೆ ಮಾಡಿಕೊಡಬೇಕು. ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆಯಿರುವುದರಿಂದ ಆಸ್ಪತ್ರೆ ಆವರಣದಲ್ಲಿ ಕೊಳವೆ ಬಾವಿ ಕೊರೆಸಿಕೊಡಬೇಕಾಗಿ ಮನವಿ ಯಲ್ಲಿ ಒತ್ತಾಯಿಸಲಾಗಿದೆ.       ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ…

Read More

ತುಮಕೂರು:       ತಾಲ್ಲೂಕಿನ ಹೆಬ್ಬೂರು ಹೋಬಳಿ ರಾಯವಾರ ಗ್ರಾಮದ ದಲಿತ ಯುವಕನಿಗೆ ಕಿರುಕುಳ ನೀಡಿ ಆತ್ಮಹತ್ಯೆಗೆ ಕಾರಣವಾಗಿರುವ 11 ಆರೋಪಿತರನ್ನು ಬಂಧಿಸಬೇಕು, ಆರೋಪಿತರಿಗೆ ಬಿ ರಿಪೋರ್ಟ್ ನೀಡಬಾರದು ಎಂದು ಒತ್ತಾಯಿಸಿ ದಲಿತ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.       ರಾಯವಾರದ ಜಯಣ್ಣ ಎಂಬುವ ಯುವಕ ಸವರ್ಣೀಯರ ಬೆದರಿಕೆಗೆ ಹೆದರಿ, 11 ಮಂದಿಯ ಹೆಸರನ್ನು ಉಲ್ಲೇಖಿಸಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಜಾತಿನಿಂದನೆ ಪ್ರಕರಣವೊಂದರಲ್ಲಿ ಆರೋಪಿತರ ಪರವಾಗಿ ಸಾಕ್ಷಿ ಹೇಳದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ತೋಟದ ಮನೆಯಲ್ಲಿ ಕೂಡಿಹಾಕಿದ್ದು, 24-11-18ರಂದು ಸರ್ವಣೀಯರ ಬೆದರಿಕೆಗೆ ಹೆದರಿ ಜಯಣ್ಣ ಆತ್ಮಹತ್ಯೆಗೆ ಶರಣಾಗಿದ್ದಾನೆ.       ಆರೋಪಿತರಲ್ಲಿ ಕೆಂಪೇಗೌಡ ರೌಡಿಶೀಟರ್ ಆಗಿದ್ದು, ರಘುಕುಮಾರ್ ಎಂಬುವರ ಮೇಲೆ ಮೂರು ಜಾತಿ ನಿಂದನೆ ಪ್ರಕರಣಗಳು ದಾಖಲಾಗಿದ್ದು, ರಾಜಕೀಯ ಮತ್ತು ಹಣ ಬಲದಿಂದ ಬಿ ರಿಪೋರ್ಟ್ ಹಾಕಿಸಿಕೊಂಡಿದ್ದು, ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಪಡೆದುಕೊಳ್ಳಲು ಪ್ರಭಾವ ಬೀರುತ್ತಿದ್ದು,…

Read More

 ತುಮಕೂರು:       ಪವರ್ ಗ್ರಿಡ್ ಸಂಸ್ಥೆ ಮತ್ತು ಕೂಡ್ಗಿ ಸಂಸ್ಥೆಯಿಂದ ಅನ್ಯಾಯಕ್ಕೊಳಗಾದ ಜಿಲ್ಲೆಯ ರೈತರಿಗೆ ಸೂಕ್ತ ಪರಿಹಾರವನ್ನು ಮುಂಬರುವ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಜಿಲ್ಲಾಧಿಕಾರಿಗಳು ಸಭೆ ಕರೆದು ರೈತರಿಗೆ ಸೂಕ್ತ ಪರಿಹಾರ ನೀಡುವ ಅನುಮೋದನೆ ನೀಡಬೇಕು ಇಲ್ಲದಿದ್ದರೆ ರೈತರು ಕುಟುಂಬ ಸಮೇತ ಸಾಮೂಹಿಕವಾಗಿ ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಕೃಷಿಕ ಸಮಾಜ, ನವದೆಹಲಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಕಂಚೇನಹಳ್ಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ನಿಯೋಗ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.       ಈ ಸಂದರ್ಭದಲ್ಲಿ ಮಾತನಾಡಿದ ಕೃಷಿಕ ಸಮಾಜ ನವದೆಹಲಿ ಜಿಲ್ಲಾಧ್ಯಕ್ಷ ಸುರೇಶ್ ಕಂಚೇನಹಳ್ಳಿ ತುಮಕೂರು ತಾಲ್ಲೂಕಿನ ಬೆಳ್ಳಾವಿ ಮತ್ತು ಕೋರಾ ಹೋಬಳಿ, ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಕಸಬಾ ಮತ್ತು ಹುಲಿಕುಂಟೆ ಹೋಬಳಿ, ಮಧುಗಿರಿ ತಾಲ್ಲೂಕಿನ ಕಸಬಾ, ದೊಡ್ಡೇರಿ ಹೋಬಳಿ, ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಗಳಲ್ಲಿನ ರೈತರ ಜಮೀನುಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಯಾದ ಹೈ ಟೆನ್ಷನ್ ವಿದ್ಯುತ್ ಕಂಬಗಳ ಮತ್ತು ತಂತಿ…

Read More

ಚಿಕ್ಕನಾಯಕನಹಳ್ಳಿ:       ಪರಿಸರದಲ್ಲಿ ಗಿಡ ಮರಗಳನ್ನು ಬೆಳೆಯಲು ಸರ್ಕಾರ ಯತ್ತೇಚ್ಛವಾಗಿ ಹಣ ನೀಡುತ್ತಿದೆ ಇದನ್ನು ಉಪಯೋಗಿಸಿಕೊಳ್ಳುವಂತೆ ಶಾಸಕ ಜೆ.ಸಿ.ಮಾಧುಸ್ವಾಮಿ ರೈತರಿಗೆ ಸಲಹೆ ನೀಡಿದರು.       ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಎಸ್.ಎಂ.ಎಫ್, ಎನ್.ಆರ್.ಇ.ಜಿ ಹಾಗೂ ಕೆ.ಎ.ಪಿ.ವೈ ಯೋಜನೆಯಡಿ ರೈತರಿಗೆ ಸಾರ್ವಜನಿಕರಿಗೆ ದೊರೆಯುವ ಸವಲತ್ತುಗಳು ಹಾಗೂ ಯೋಜನೆಯ ರೂಪುರೇಷೆಗಳ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ, ಹಿಂದಿನ ನಮ್ಮ ಹಿರಿಯರು ತೋಪುಗಳು ನೆಡುತೋಪು, ಅರಣ್ಯ ಹಾಗೂ ಕೃಷಿ ಅರಣ್ಯ ಭೂಮಿಯಾಗಿ ವಿಂಗಡಿಸಿ ಮರಗಿಡಗಳನ್ನು ಬೆಳೆಸಿದ್ದರು. ಈಗ ವಿದ್ಯಾವಂತರಾಗುತ್ತಿದ್ದು, ಸ್ವಾರ್ಥ ಹೆಚ್ಚಾಗುತ್ತಿದೆ. ನಮ್ಮ ಕಣ್ಣುಮುಂದೆ ಏನು ನಡೆಯುತ್ತಿದ್ದರೂ ನಮಗೆ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದೇವೆ. ತಂಪಿರುವ ಕಡೆ ಮಳೆಯಾಗುತ್ತಿದ್ದು, ಮಳೆ ಇರುವ ಕಡೆ ತಂಪಿದೆ ಋತುಮಾನ ಬದಲಾದಂತೆ ಮಳೆ ಕಡಿಮೆಯಾಗುತ್ತಿದೆ. ಕರ್ನಾಟಕದ 7 ರಿಂದ 8 ಜಿಲ್ಲೆಗಳ ಭೂಮಿ ಬರಡಾಗುತ್ತಿದ್ದು, ನಾವು ಎಚ್ಚೇತ್ತುಕೊಳ್ಳದೆ ಹೋದರೆ ಮರುಭೂಮಿಯಾಗುವುದರಲ್ಲಿ ಅನುಮಾನವಿಲ್ಲ ಮರಗಿಡಗಳಿಲ್ಲದೇ ಹೋದರೆ ನಾವು ಉಸಿರಾಡಲು ಅಮ್ಲಜನಕ ದೊರೆಯುವುದಿಲ್ಲ…

Read More

 ತುಮಕೂರು:       ತುಮಕೂರು ವಿಶ್ವವಿದ್ಯಾನಿಲಯದಲ್ಲಿಂದು ನಡೆದ ವಾರ್ಷಿಕ 12ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಕಂಡು ಪೋಷಕರು ಸಂಭ್ರಮಿಸಿದರು.       ಈ ಘಟಿಕೋತ್ಸವದಲ್ಲಿ 67 ಮಂದಿಗೆ ಪಿಎಚ್‍ಡಿ, 68 ವಿದ್ಯಾರ್ಥಿಗಳಿಗೆ 89 ಚಿನ್ನದ ಪದಕ ಹಾಗೂ 9442 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಹೆಚ್ಚು ಚಿನ್ನದ ಪದಕ ಪಡೆದವರು:-       ಎಂ.ಎಸ್ಸಿ ಗಣಿತಶಾಸ್ತ್ರ ವಿಭಾಗದಲ್ಲಿ ಕೆ.ಆರ್ ಕಿಶೋರ್‍ಕುಮಾರ್ 5 ಚಿನ್ನದ ಪದಕ ಹಾಗೂ ಎಂ.ಎ ಕನ್ನಡ ವಿಭಾಗದಲ್ಲಿ ಕೆ.ಎಂ. ಗೋವಿಂದರಾಜು ಅವರಿಗೆ 4 ಚಿನ್ನದ ಪದಕ ಪ್ರದಾನ ಮಾಡಲಾಗಿದೆ. ಬಿ.ಎ ಕನ್ನಡ (ಐಚ್ಛಿಕ)ವಿಭಾಗದಲ್ಲಿ ಕೆ.ಎನ್. ಪವನ, ಬಿ.ಕಾಂ ವಿಭಾಗದಲ್ಲಿ ಕೆ.ವಿ ಶ್ರೀವಲ್ಲಿ, ಬಿ.ಎಸ್ಸಿ ಗಣಿತಶಾಸ್ತ್ರ ಮತ್ತು ಭೌತಶಾಸ್ತ್ರ ವಿಭಾಗದ ಚಿರಾಗ್ ಎಸ್., ಎಂ.ಕಾಂ ವಿಭಾಗದ ಕೆ.ಎನ್. ವಸುಧ ಅವರು ತಲಾ 3 ಚಿನ್ನದ ಪದಕ ಗಳಿಸಿದ್ದಾರೆ. ಬಿ.ಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಸಂತೋಷ್ ಜೆ.ಆರ್, ಎಂ.ಎ ಅರ್ಥಶಾಸ್ತ್ರ ವಿಭಾಗದಲ್ಲಿ ಸುರೇಖ, ಎಂ.ಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಎಂ.ಅನುರಾಧ,…

Read More

  ತುರವೇಕೆರೆ:       ಸಾಂಸ್ಕೃತಿಕ ಹಾಗೂ ಸೌಂದರ್ಯ ಪ್ರಜ್ಞೆ ಇದ್ದವರು ನಮ್ಮ ದೇಶದ ಕಲೆ, ಸಂಸೃತಿ ಪ್ರೀತಿಸುತ್ತಾ ಸಮಾಜದಲ್ಲಿ ಸಾಮರಸ್ಯ ಬದುಕು ರೂಪಿಸುತ್ತಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ತಿಳಿಸಿದರು.      ಪಟ್ಟಣದ ಕೆ. ಹಿರಣ್ಣಯ್ಯ ಬಯಲು ರಂಗ ಮಂದಿರ ಆವರಣದಲ್ಲಿ ಸೋಮವಾರ ಸಂಜೆ ಸಂಗಮ ಸಾಂಸ್ಕೃತಿಕ ಟ್ರಸ್ಟ್, ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ, ರೊಟರಿ ಕ್ಲಬ್ ತುರುವೇಕೆರೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮೂಡಬಿದರೆ ಆಳ್ವಾಸ್ ಸಂಸ್ಥೆಯು ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.       ರಾಜ ಮಹಾರಾಜರ ಕಾಲದಲ್ಲಿ ತಮ್ಮ ನಾಡಿನ ಕಲೆ, ಸಂಸೃತಿಯನ್ನು ಹೆಚ್ಚು ಪ್ರೋತ್ಸಾಹಿಸಿ ಬೆಳಸುತ್ತಿದ್ದರು. ಈಗ ಸರ್ಕಾರಗಳು ಸಹ ನಮ್ಮ ಕಲೆ ಸಂಸೃತಿಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಿದೆ. ನಮ್ಮ ಆಳ್ವಾಸ್ ನುಡಿ ಸಿರಿ ಕಾರ್ಯಕ್ರಮಗಳು ಜನರಲ್ಲಿ ಸಾಂಸ್ಕೃತಿಕ ಪ್ರಜ್ಞೆಯನ್ನು ಮೂಡಿಸುವುದರ ಜೊತೆಗೆ, ಮನಸ್ಸನ್ನು ಕಟ್ಟಲು ಸಹಕಾರಿಯಾಗಿವೆ. ನಾವಿಂದು…

Read More

ತುಮಕೂರು:       ತುಮಕೂರು ಗ್ರಾಮಾಂತರ ಶಾಸಕರಾದ ಡಿ.ಸಿ.ಗೌರಿಶಂಕರ್ ರವರಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಆದೇಶಿಸಿರುತ್ತಾರೆ.       ತುಮಕೂರು ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಯ ಹೊಣೆ ಹೊತ್ತಿದ್ದ ಶಾಸಕ ಗೌರಿಶಂಕರ್ ರವರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನದ ಹೆಚ್ಚಿನ ಹೊಣೆಗಾರಿಕೆಯನ್ನ ಹೊರಿಸುವುದರ ಮುಖೇನ ಕರ್ನಾಟಕ ರಾಜ್ಯವ್ಯಾಪಿ ಇರುವ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್‍ಐಎಲ್) ಅಭಿವೃದ್ಧಿಯ ಹೆಚ್ಚಿನ ಜವಾಬ್ಧಾರಿಯನ್ನ ನೀಡಿರುವುದರಿಂದ ಸಮರ್ಥವಾಗಿ ನಿಭಾಯಿಸುವ ಸಾಮಥ್ರ್ಯ ನಮ್ಮ ಶಾಸಕರಿಗಿದೆ ಎಂದು ಅವರ ಅಭಿಮಾನಿ ವರ್ಗ ಸಂಭ್ರಮಾಚರಣೆ ಮಾಡಿದರು.

Read More