Author: News Desk Benkiyabale

ತುಮಕೂರು :        ಕೊರೋನಾ ಕೋವಿಡ್-19ರ ಹರಡುವಿಕೆಯನ್ನು ನಿಯಂತ್ರಿಸಲು ಸಾಮಾಜಿಕ ಅಂತರ ಮುಖ್ಯ. ಸುರಕ್ಷತಾ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜಿಲ್ಲಾ ಆರೋಗ್ಯ ಕಾರ್ಯಪಡೆಯ ಸಭೆಯನ್ನು ನಡೆಸಲು ಮಾಹಿತಿ ತಂತ್ರಜ್ಞಾನವನ್ನು ಜಿಲ್ಲಾಡಳಿತ ಸಮರ್ಥವಾಗಿ ಬಳಸಿಕೊಂಡಿದೆ.       ವೆಬ್‍ಬೇಸ್ಡ್ ವಿಡಿಯೋ ಕಾನ್ಫರೆನ್ಸ್‍ಅನ್ನು ಟೆಕ್ನಾಲಜಿ ತಾಂತ್ರಿಕತೆಯನ್ನು ನ್ಯಾಷನಲ್ ಇನ್‍ಪಾರೆನ್ಸ್‍ಷನ್ ಸೆಂಟರ್(ಎನ್‍ಐಸಿ)ಯ ಸಹಕಾರದೊಂದಿಗೆ ಜಿಲ್ಲಾಡಳಿತ ಬಳಕೆ ಮಾಡಲು ಮುಂದಾಗಿದೆ.       ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ತಮ್ಮ ಕಛೇರಿಯ ಸಭಾಂಗಣದಲ್ಲಿಯೇ ಕುಳಿತು, ಜಿಲ್ಲಾ ಆರೋಗ್ಯ ಪಡೆಯ ಎಲ್ಲಾ ಅಧಿಕಾರಿಗಳನ್ನು/ಸದಸ್ಯರನ್ನು ವೆಬ್ ಬೇಸ್ಟ್ ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋವಿಡ್-19 ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ.       ಅಧಿಕಾರಿಗಳು ತಮ್ಮ ಕಛೇರಿಯ ಅಥವಾ ಬೇರೆ ಎಲ್ಲಿಯೇ ಇದ್ದರೂ ತಮ್ಮ ಮೊಬೈಲ್ ಅಥವಾ ಲ್ಯಾಪ್‍ಟ್ಯಾಪ್ ಮೂಲಕ ವೀಡಿಯೋ ಸಂವಾದದಲ್ಲಿ ಭಾಗವಹಿಸಬಹುದು.       ಮಾಹಿತಿ ತಂತ್ರಜ್ಞಾನದ ಸಹಕಾರದಿಂದ ಸಾಮಾಜಿಕ ಅಂತರವ ನ್ನು ಕಾಯ್ದುಕೊಂಡು ಪ್ರತಿನಿತ್ಯ ಕೊರೋನಾ ಕೋವಿಡ್‍ನ…

Read More

ತುಮಕೂರು :       ಜಿಲ್ಲೆಯ ತುಮಕೂರು ತಾಲೂಕು ಹೆಬ್ಬೂರು ಹೋಬಳಿ ಅರಿಯೂರು ಗ್ರಾಮಪಂಚಾಯತಿ ವ್ಯಾಪ್ತಿಯ ಚನ್ನಿಗಪ್ಪನಪಾಳ್ಯದ ಕೆರೆ ಬಳಿ ನಾಲ್ಕೈದು ದಿನಗಳಿಂದ ಪ್ರತ್ಯಕ್ಷವಾಗಿ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿ ಸಾಕು ಪ್ರಾಣಿಗಳನ್ನು ಭಕ್ಷಿಸುತ್ತಿದ್ದ ಸುಮಾರು 2 ವರ್ಷದ ಗಂಡು ಚಿರತೆಯನ್ನು ತುಮಕೂರು ವಲಯದ ಅರಣ್ಯ ಸಿಬ್ಬಂದಿಗಳು ಇಂದು ಕಾರ್ಯಾಚರಣೆ ನಡೆಸಿ ಬೋನಿನಲ್ಲಿ ಸೆರೆ ಹಿಡಿದಿದ್ದಾರೆ.       ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

Read More

ತುಮಕೂರು:       ಕೊರೋನಾ ವೈರಸ್(ಕೋವಿಡ್-19)ನಿಂದ ದೇಶ-ವಿದೇಶಗಳಲ್ಲಿ ಭಯಂಕರ ಸಾವು-ನೋವುಗಳು ಸಂಭವಿಸುತ್ತಿರುವುದರಿಂದ ತುಮಕೂರು ನಗರದ ಶ್ರೀನಗರ-ಬಂಡೇಪಾಳ್ಯ ಬಡಾವಣೆಯ ನಾಗರಿಕರೆಲ್ಲ ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕರೋನ ವೈರಸ್ ಅನ್ನು ಹೊಡೆದೋಡಿಸುವ ಪಣ ತೊಟ್ಟಿದ್ದಾರೆ.        ಸುತ್ತೆಲ್ಲ ದೇಶಗಳಲ್ಲಿ ಮಹಾಮಾರಿ ಕೋವಿಡ್-19 ವೈರಾಣು ತನ್ನ ಕಬಂಧ ಬಾಹುಗಳಿಂದ ಅಸಂಖ್ಯಾತ ಜನರ ಜೀವವನ್ನು ಬಲಿತೆಗೆದುಕೊಳ್ಳುತ್ತಿರುವುದನ್ನು ಕಂಡು ಎಚ್ಚೆತ್ತ ಶ್ರೀನಗರ ನಾಗರೀಕ ಕ್ಷೇಮಾಭಿವೃದ್ಧಿ ಸಮಿತಿಯು ಸ್ಥಳೀಯ ನಾಗರಿಕರೊಂದಿಗೆ ಸಮಾಲೋಚಿಸಿ ಕೆಲವು ನಿರ್ಧಾರಗಳನ್ನು ಕೈಗೊಂಡು ಕಾರ್ಯೋನ್ಮುಖವಾಗಿದೆ. ಮುಖ್ಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದರಿಂದ ಈ ಮಹಾಮಾರಿ ರೋಗವನ್ನು ತೊಲಗಿಸಬಹುದೆಂದು ಸ್ಥಳೀಯರೆಲ್ಲ ತಮಗೆ ತಾವೇ ನಿರ್ಬಂಧಗಳನ್ನು ಹಾಕಿಕೊಂಡು ಇತರರಿಗೆ ಮಾದರಿಯಾಗಿದ್ದಾರೆ. ನಾಳೆ ಬನ್ನಿ :       ಕೊರೋನಾ ವೈರಸ್‍ನಿಂದ ಪಾರಾಗಲು ಸಾಮಾಜಿಕ ಅಂತರ ಕಾಯ್ದುಕೊಳ್ಳವುದೇ ಉತ್ತಮ ಮಾರ್ಗೋಪಾಯವೆಂದು ಮಾನ್ಯ ಪ್ರಧಾನಿಗಳು ಮಾರ್ಚ್ 24ರ ಮಧ್ಯರಾತ್ರಿಯಿಂದ ದೇಶದಾದ್ಯಂತ ಲಾಕ್‍ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಎಷ್ಟೇ ಹತ್ತಿರದ ಸಂಬಂಧಿಕರಾಗಲೀ, ಆಪ್ತ ಸ್ನೇಹಿತರಾಗಲೀ ಮನೆಗೆ ಬರದ ಹಾಗೆ…

Read More

ತುಮಕೂರು :       ಜಿಲ್ಲೆಯಲ್ಲಿ ಕರೋನ ಮಹಾಮಾರಿಗೆ ಮೊದಲ ಬಲಿಯಾದ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಾದ್ಯಂತ ಹೆಚ್ಚಿನ ಭದ್ರತೆಯನ್ನ ಮಾಡಿದ್ದು, ತುಮಕೂರು ನಗರ ಸೇರಿದಂತೆ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ವ್ಯಾಪಕವಾದ ಭದ್ರತೆ ಹಾಗೂ ಗಸ್ತನ್ನು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿ ನಿರ್ವಹಿಸುತ್ತಿದ್ದು, ಹೆದ್ದಾರಿಗಳ ಭದ್ರತೆ ಮತ್ತು ವಿನಾಕಾರಣ ಜನತೆ ರಸ್ತೆಗಿಳಿಯುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಬ್ಯಾರಿಕೇಡ್‍ಗಳನ್ನ ಹಾಕಿ ಖುದ್ದು ಪಿಎಸ್‍ಐಗಳೇ ರಸ್ತೆಯಲ್ಲಿ ನಿಂತು ರಸ್ತೆಗಿಳಿದ ಸಾರ್ವಜನಿಕರ ತಪಾಸಣೆಗಿಳಿದಿರುವುದನ್ನ ಗಮನಿಸಿದರೆ, ಕೊರೊನಾ ಮಹಾಮಾರಿಯ ಭೀಬತ್ಸತೆಯನ್ನ ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಬಹುಮುಖ್ಯ ಎನ್ನುವ ನಿರ್ಧಾರಕ್ಕೆ ಜಿಲ್ಲಾ ಪೊಲೀಸರು ಬಂದಿರುವಂತಿದೆ.       ರಾಷ್ಟ್ರೀಯ ಹೆದ್ದಾರಿಗಳು ಮತ್ತು ಹೊರಜಿಲ್ಲೆಯ ಗಡಿ ಹಾಗೂ ಅಂತರಾಜ್ಯ ಗಡಿಗಳನ್ನ ಗಡಿಯ ಮುಖೇನ ಅಂತರಾಜ್ಯ ಹಾಗೂ ಹೊರಜಿಲ್ಲೆಯ ಜನತೆ ಜಿಲ್ಲೆಯೊಳಗೆ ನುಸುಳದಂತೆ ಜಾಗೃತಿ ವಹಿಸುವುದು ಒಂದೆಡೆಯಾದರೆ ತುಮಕೂರು ನಗರದ ಹಾಗೂ ಜಿಲ್ಲೆಯ ಒಳಗಿನ ಜನ ಕಾನೂನನ್ನು ಉಲ್ಲಂಘಿಸಿ ವಿನಾಕಾರಣ ರಸ್ತೆಗಿಳಿದು ಸೋಂಕನ್ನ ಹರಡುವುದು ಮತ್ತು…

Read More

 ತುಮಕೂರು :       ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಖ್ಯಾತ ಕಾರುಗಳ್ಳರ ಬಂಧನವಾಗಿದೆ.       ಇತ್ತೀಚಿನ ದಿನಗಳಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಅಮೃತೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಚಿನ್ನಾಭರಣ, ಲ್ಯಾಪ್ ಟಾಪ್, ಮೊಬೈಲ್ಗಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಮಾಲುಗಳನ್ನ ಕಳ್ಳತನ ಮಾಡಲಾಗಿತ್ತು. ಸದರಿ ವಿಚಾರವಾಗಿ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸರಿಯಷ್ಟೇ. ಇದಕ್ಕಾಗಿ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಿಶೇಷ ತಂಡವನ್ನ ರಚಿಸಿದ್ದು, ಆ ತಂಡವು ಸದರಿ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿದೆ.         ವಿಶೇಷ ತಂಡದ ಜಾಲದಲ್ಲಿ ಸಿಲುಕಿದ್ದ ಸದರಿ ಪ್ರಕರಣದ ಆರೋಪಿ ಲೊಕೇಶ್.ಬಿ.ಪಿ ಆಲಿಯಾಸ್ ಲೋಕಿ ಆಲಿಯಾಸ್ ಜಗ್ಗುದಾದ(41) ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ. ಈತನು ಈ ಪ್ರಕರಣದ ಆರೋಪಿ ಎಂದು ಶಂಕಿಸಿ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಅನುಮಾನಗೊಂಡ ಆರೋಪಿಯು…

Read More

ತುಮಕೂರು :       ಜಿಲ್ಲೆಯ ತುಮಕೂರು ತಾಲೂಕು ಹೆಬ್ಬೂರು ಹೋಬಳಿ ತಾವರೆಕೆರೆ ಗ್ರಾಮದಲ್ಲಿ ಹಲವಾರು ದಿನಗಳಿಂದ ಪ್ರತ್ಯಕ್ಷವಾಗಿ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿ ಸಾಕು ಪ್ರಾಣಿಗಳನ್ನು ಭಕ್ಷಿಸುತ್ತಿದ್ದ ಸುಮಾರು 5 ವರ್ಷದ ಗಂಡು ಚಿರತೆಯನ್ನು ತುಮಕೂರು ವಲಯದ ಅರಣ್ಯ ಸಿಬ್ಬಂದಿಗಳು ಇಂದು ಕಾರ್ಯಾಚರಣೆ ನಡೆಸಿ ಬೋನಿನಲ್ಲಿ ಸೆರೆ ಹಿಡಿದಿದ್ದು, ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

Read More

ತುಮಕೂರು:      ಕೊರೊನಾ ಸೋಂಕಿಗೆ ಜಿಲ್ಲೆಯ ಶಿರಾ ಮೂಲದ ಸುಮಾರು 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರದೆ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮನವಿ ಮಾಡಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವನ್ನಪ್ಪಿರುವ ಕೊರೊನಾ ಸೋಂಕಿತ ವ್ಯಕ್ತಿಯು ಮಾರ್ಚ್ 5ರಂದು ತುಮಕೂರಿನಿಂದ ಸಂಪರ್ಕಕ್ರಾಂತಿ ರೈಲಿನಲ್ಲಿ ದೆಹಲಿಗೆ ಪ್ರಯಾಣ. ದೆಹಲಿಯ ಜಾಮೀಯಾ ಮಸೀದಿಯ ಹೋಟೆಲ್ ರೂಂನಲ್ಲಿ ವಾಸ್ತವ್ಯ. ಮಾರ್ಚ್ 11ರಂದು ಕೊಂಗು ಎಕ್ಸ್‍ಪ್ರೆಸ್‍ನಲ್ಲಿ ಯಶವಂತಪುರಕ್ಕೆ ಪ್ರಯಾಣ, ಅಲ್ಲಿಂದ ಮಾರ್ಚ್ 14ರಂದು ಚಿತ್ರದುರ್ಗ ಕಡೆ ಹೋಗುವ ಬಸ್ ಮೂಲಕ ಶಿರಾಗೆ ತಲುಪಿದ್ದರು ಎಂದು ತಿಳಿಸಿದರು.       ಮಾರ್ಚ್ 18ರಂದು ಜ್ವರ ಬಂದಿದ್ದು, ಶಿರಾದಲ್ಲಿಯೇ ಖಾಸಗಿ ಆಸ್ಪತ್ರೆಯಲ್ಲಿ ಓಪಿಡಿ ಚಿಕಿತ್ಸೆ ಪಡೆದರು ಸಹ ಜ್ವರ ಕಡಿಮೆಯಾಗದ ಕಾರಣ ಮಾ.21ರಂದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಮಾ.23ರಂದು ಜಿಲ್ಲಾಸ್ಪತ್ರೆಯ ಒಪಿಡಿಯಲ್ಲಿ ಚಿಕಿತ್ಸೆ ಪಡೆದು ಶಿರಾಕ್ಕೆ…

Read More

ತುಮಕೂರು :       ವಿಶ್ವದಾದ್ಯಂತ ಕಾಡುತ್ತಿರುವ ಕೊರೊನಾ ವೈರಾಣು ಸೋಂಕಿನ ವಿರುದ್ಧ ದೇಶ ಮತ್ತು ನಾಡಿನ ಜನತೆ ಹೋರಾಟ ನಡೆಸಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕರೆ ನೀಡಿದ್ದಾರೆ.       ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ಜನತಾ ಕಫ್ರ್ಯೂನಂತೆ ಪ್ರತಿಯೊಬ್ಬರೂ ಸ್ವಯಂ ನಿಯಂತ್ರಣ ಹೇರಿಕೊಂಡು ಸುಮಾರು 15 ದಿನಗಳ ಕಾಲ ಮನೆಯಿಂದ ಹೊರಗೆ ಬಾರದೆ ಈ ಸೋಂಕು ಹರಡದಂತೆ ನಿಯಂತ್ರಿಸಲು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಪ್ರತಿಯೊಬ್ಬರೂ ಮನೆಯಲ್ಲೇ ಇದ್ದು, ಈ ಮಹಾಮಾರಿಯನ್ನು ದೇಶದಿಂದ ಓಡಿಸಲು ಮುಂದಾಗಬೇಕು ಎಂದು ಅವರು ಸಲಹೆ ಮಾಡಿದರು.   ಭಕ್ತರಿಗೆ ನಿರ್ಬಂಧ:       ರಾಜ್ಯದಲ್ಲಿ ಕೊರೊನಾ ಸೋಂಕು ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠಕ್ಕೆ ಭಕ್ತಾದಿಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದರು. ಕೊರೊನಾ ಸೋಂಕನ್ನು ತಡೆಗಟ್ಟುವ ಸಲುವಾಗಿ ನಾವೆಲ್ಲರೂ ಸ್ವಯಂ ಪ್ರೇರಿತರಾಗಿಯೇ ಮುಂದಾಗಬೇಕು. ಹಾಗಾಗಿ ಭಕ್ತರೂ…

Read More

ತುಮಕೂರು  :       ಕೋವಿಡ್-19 ಸೋಂಕು ರೋಗವನ್ನು ತಡೆಯುವ ಸಲುವಾಗಿ ಮಾರ್ಚ್ 31ರವರೆಗೆ ಲಾಕ್‍ಡೌನ್ ಮಾಡಲಾಗಿದ್ದು, ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು/ಉದ್ದಿಮೆದಾರರು ಈ ಕೆಳಕಂಡ ನಿರ್ಧಾರವನ್ನು ಪಾಲಿಸಬೇಕೆಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ. ಮುಚ್ಚುವುದು:-       ಟೈರ್ ಅಂಗಡಿ, ಮೆಕಾನಿಕಲ್ ಮತ್ತು ಇತರೆ ವರ್ಕ್ ಶಾಪ್, ಆಕ್ಸಸರೀಸ್, ಕಬ್ಬಿಣ ಹಾಗೂ ಸ್ಕ್ರಾಪ್ ವ್ಯಾಪಾರದ ಅಂಗಡಿ, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಸಾಮಾಗ್ರಿಗೆಗಳ ಮಾರಾಟ ಮಳಿಗೆ, ಜವಳಿ ಮಳಿಗೆ, ಚಪ್ಪಲಿ ಮತ್ತು ಫ್ಯಾನ್ಸಿ ಸ್ಟೋರ್, ಚಿನ್ನಾಭರಣ ಮತ್ತು ಗಿರವಿ ಅಂಗಡಿ, ಹೋಮ್ ಅಪ್ಲೈನ್ಸಸ್ ಮತ್ತು ಎಲೆಕ್ಟ್ರಾನಿಕ್ಸ್ ಅಂಗಡಿ, ಜಿಮ್ ಮತ್ತು ವ್ಯಾಯಾಮ ಕೇಂದ್ರ, ಕೋಚಿಂಗ್ ಸೆಂಟರ್, ಸಾರ್ವಜನಿಕ ಸಾರಿಗೆ ವ್ಯವಸ್ಥೆ(ಬಸ್, ಆಟೋ, ಟ್ಯಾಕ್ಸಿ), ಟೀ ಮತ್ತು ಚಾಟ್ಸ್ ಅಂಗಡಿ, ತಳ್ಳುವ ಗಾಡಿ ಮೇಲೆ ಮಾರಾಟ ಮಾಡುವ ಆಹಾರ ಪದಾರ್ಥಗಳು ಹಾಗೂ ಹಣ್ಣಿನ ಗಾಡಿಗಳು ಮತ್ತು ಬೇಕರಿ, ದೇವಸ್ಥಾನ, ಮಸೀದಿ, ಚರ್ಚ್ ಮತ್ತು ಇನ್ನಿತರೆ ಧಾರ್ಮಿಕ ಸ್ಥಳಗಳು, ಎಲ್ಲಾ ಧರ್ಮಗಳ…

Read More

ಕೊರಟಗೆರೆ :       ಕೊರಟಗೆರೆ ಗಡಿ ಭಾಗದ ಗೌರಿಬಿದನೂರು ತಾಲ್ಲೂಕಿನಲ್ಲಿ ಎರಡು ಸೋಂಕಿತ ಕೊರೊನಾ ಪತ್ತೆಯಾದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಕೊರಟಗೆರೆ ಗಡಿಭಾಗದ ಅರಸಾಪುರ ಬಳಿಯ ಕಾಶಾಪುರ ಗೇಟ್‍ನ ಬಳಿ ಚೆಕ್‍ಪೋಸ್ಟ್ ನಿರ್ಮಿಸಿ ಕೊರಟಗೆರೆ ಭಾಗದ ಕಡೆ ಬರುವ ಎಲ್ಲಾ ಜನರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.       ಇತ್ತೀಚೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿದ್ದು, ಕೊರೊನಾ ವೈರಸ್ ಮಹಾಮಾರಿಗೆ ಭಯ ಪಡುತ್ತಿರುವ ಸಂದರ್ಭದಲ್ಲಿ ಕೊರಟಗೆರೆ ಗಡಿಭಾಗದ ಗೌರಿಬಿದನೂರು ತಾಲ್ಲೂಕಿನಲ್ಲಿ ಕೊರೋನಾ ಸೋಂಕಿತರು ಪತ್ತೆಯಾದ ಕಾರಣ ತಾಲ್ಲೂಕಿನಲ್ಲೂ ಭಯದ ವಾತಾವರಣ ಸೃಷ್ಟಿಯಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಗೌರಿಬಿದನೂರು ಭಾಗದ ಕಡೆಯಿಂದ ಬರುವಂತಹ ಎಲ್ಲರನ್ನು ಚೆಕ್‍ಪೋಸ್ಟ್‍ನಲ್ಲಿ ಪರೀಕ್ಷೆಗೊಳಪಡಿಸಲಾಗುತ್ತಿದೆ.       ಕೊರೊನಾ ಮಾಹಾಮಾರಿಗೆ ಇಡಿ ರಾಜ್ಯವೇ ಭಯಪಡುತ್ತಿರುವಂತಹ ಸಂದರ್ಭದಲ್ಲಿ ಕೊರಟಗೆರೆ ಗಡಿಭಾಗ ಗೌರಿಬಿದನೂರಿನಲ್ಲಿ ಕೊರೊನಾ ಸೋಂಕಿತ ಪತ್ತೆಯಾದ ಹಿನ್ನೆಲೆಯಲ್ಲಿ ಗೌರಿಬಿದನೂರು ಭಾಗದಿಂದ ಕೊರಟಗೆರೆ ತಾಲ್ಲೂಕಿಗೆ ಹೆಚ್ಚು ಆರ್ಥಿಕ ವ್ಯವಹಾರ ಇರುವ ಕಾರಣ ಇಲ್ಲಿನ ಬಹುತೇಕ ಕಬ್ಭಿಣ, ಬೋರ್‍ವೆಲ್‍ಗೆ ಸಂಭಂದಿಸಿದ…

Read More