ತುಮಕೂರು : ಮೂರನೇ ಹಂತದ ಕೋರೋನಾ ವೈರಸ್ ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ 144 ಸೆಕ್ಷನ್ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಸೋಮವಾರ ಕರೆದಿದ್ದ ತುಮಕೂರು ನಗರಪಾಲಿಕೆ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿ ಸಭೆಯನ್ನು ಮುಂದೂಡಲಾಯಿತು. ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಮಲ್ಲಿಕಾರ್ಜುನ್ಯ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿ ಎಲ್ಲಡೆ ಕೋರೋನ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರಪಾಲಿಕೆಯ ಸುಮಾರು 400 ಜನ ಸಿಬ್ಬಂದಿ ಹಾಗೂ 400 ಜನ ಪೌರಕಾರ್ಮಿಕರು ಸೇರಿದಂತೆ 800 ಜನರಿಗೆ ಪಾಲಿಕೆ ವತಿಯಿಂದ ಎನ್.91 ಮಾಸ್ಕ್ ಮತ್ತು ಅಗತ್ಯ ಮುಂಜಾಗ್ರತಾ ಸಲಕರಣೆಗಳನ್ನು ವಿತರಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಒತ್ತಾಯಿಸಿದರು. ಕೋರೋನ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರಪಾಲಿಕೆ ಪಿ.ಕೆ.ಎಸ್.ಗಳು ಹಗಲಿರುಳೆನ್ನದೆ ಸ್ವಚ್ಚತೆಯಲ್ಲಿ ತೊಡಗಿದ್ದಾರೆ.ಅವರು ಮತ್ತಷ್ಟು ಹುರುಪಿನಿಂದ ಕೆಲಸ ಮಾಡುವಂತೆ ಮಾಡಬೇಕಾದರೆ ಅವರಿಗೆ ಮುಂಜಾಗ್ರತಾ ಸಲಕರಣೆಗಳನ್ನು ನೀಡಬೇಕಿದೆ. ಈ ನಿಟ್ಟಿನಲ್ಲಿ ಪಾಲಿಕೆ ಮೇಯರ್ರವರು ಹಾಗೂ…
Author: News Desk Benkiyabale
ಚಿಕ್ಕನಾಯಕನಹಳ್ಳಿ : ರಾಗಿ ಖರೀದಿ ಕೇಂದ್ರದ ಮುಂದೆ ಸರತಿಯಲ್ಲಿ ನಿಂತು ಸರ್ಕಾರದ ಬೆಂಬಲಬೆಲೆಗೆ ರಾಗಿಯನ್ನು ರೈತರು ಮುಗಿಬಿದ್ದು ಮಾರಾಟ ಮಾಡುತ್ತಿದ್ದಾರೆ. ತಾಲ್ಲೂಕು ಅತಿ ಹೆಚ್ಚು ರಾಗಿಬೆಳೆ ಬೆಳೆಯಲಾಗುತ್ತಿದೆ. ಕಳೆದ ವರ್ಷ ಉತ್ತಮ ಮಳೆಗಾಲ ಆದಕಾರಣ ಬಂಪರ್ಬೆಳೆಯನ್ನು ರೈತರು ನಿರೀಕ್ಷಿಸಿದ್ದರು ಆದರೆ . ಕೆಲವಡೆ ಅತಿಹೆಚ್ಚು ಮಳೆಯಾದಕಾರಣ ಉತ್ತಮವಾಗಿ ಬೆಳೆದುನಿಂತ ರಾಗಿಯ ಮೇಲೆ ತೀವ್ರ ಪರಿಣಾಮ ಬೀರಿತು, ಮತ್ತೆ ಕೆಲವಡೆ ಹೊಲದಲ್ಲಿ ಕೊಯ್ದರಾಗಿಗಳು ಅಲ್ಲೆ ಮಣ್ಣುಪಾಲಾದಾರೂ ಒಟ್ಟಾರೆ ತಾಲ್ಲೂಕಿನಲ್ಲಿ ಬೆಳೆದ ರೈತರಿಗೆ ಆನ್ಯಾಯವೆಸಗದೆ ಉತ್ತಮ ಇಳುವರಿ ದೊರೆತಿದೆ. ಆದರೆ ಈಗಿನ ರೈತರ ಶ್ರಮ ಹಾಗೂ ಖರ್ಚಿನ ದೃಷ್ಠಿಯಿಂದ ನೋಡಿದರೆ ರಾಗಿ ಬೆಳೆಯುವ ಸಣ್ಣ ಹಾಗೂ ಮಧ್ಯಮವರ್ಗದ ರೈತರಿಗೆ ಲಾಭದಾಯಕವಂತೂ ಅಲ್ಲ. ಮುಂದಿನ ದಿನಗಳಲ್ಲಿ ಮನೆಯಲ್ಲಿರುವ ರಾಸುಗಳ ಮೇವಿನ ಸಮಸ್ಯೆ ನೀಗಲಿದೆ ಎಂಬ ಸಮಾಧಾನ ರೈತರಿಗಿದೆ. ಕಳೆದ ನಾಲ್ಕೈದು ವರ್ಷ ಒಳ್ಳೆ ಮಳೆಗಾಲವಾಗದ ಕಾರಣ ರಾಗಿಬೆಳೆ ಹಾಗೂ ಬೆಳೆಯುವ ಪ್ರದೇಶ ಕುಂಟಿತಗೊಂಡುತ್ತಾ…
ತುಮಕೂರು: ತುಮಕೂರು ಜಿಲ್ಲೆಗೆ ವಿವಿಧ ದೇಶಗಳಿಂದ ಬಂದಿರುವಂತಹ 277 ಜನರನ್ನು ಕೊರೊನಾ ತಪಾಸಣೆಗೊಳಪಡಿಸಿ, ಅವರೆಲ್ಲರೂ ತೀವ್ರ ನಿಗಾವಣೆಯಲ್ಲಿ ವೈದ್ಯರ ಸಂಪರ್ಕದಲ್ಲಿದ್ದಾರೆ. ಜಿಲ್ಲೆಯಲ್ಲಿ ಇದುವರೆವಿಗೂ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲವೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ಕುಮಾರ್ ತಿಳಿಸಿದರು. ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕರೆಯಲಾಗಿದ್ದ ಕೊರೊನಾ ಸೋಂಕು ತಡೆಯುವ ಮುಂಜಾಗ್ರತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಆರೋಗ್ಯ ಇಲಾಖೆಯವರು ಹೊರಡಿಸಿರುವ “ನಿಮ್ಮನ್ನು ಮತ್ತು ಇತರರನ್ನು ರಕ್ಷಿಸಿ” ಎಂಬ ಕರ ಪತ್ರದೊಂದಿಗೆ ಗ್ರಾಮೀಣ ಭಾಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಕೊರೋನಾ ಸೋಂಕಿನ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದ್ದು, ಪಾಲಿಕೆ ಹಾಗೂ ನಗರ ಸ್ಥಳೀಯ ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ಕೊರೋನಾ ನಿಯಂತ್ರಣ ಮುಂಜಾಗ್ರತಾ ಕ್ರಮಗಳ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ವಿದೇಶದಿಂದ ಬರುವವರ ಬಗ್ಗೆ ಮಾಹಿತಿ:- ವಿದೇಶಗಳಿಂದ ಬಂದಿರುವ ಪ್ರಯಾಣಿಕರ…
ಪಾವಗಡ : ಕಟಾವಿಗೆ ಬಂದಿರುವ ಬಾಳೆಗೆ ಕೊರೊನ ವೈರಸ್ನಿಂದ ಸ್ಥಗಿತವಾದ ಮಾರುಕಟ್ಟೆಯಿಂದ ಕಾಯಿಯ ಬಾರಕ್ಕೆ ಗಿಡಗಳೇ ಮುರಿದು ಬಿದ್ದಿರಿರುವ ಆಮಾನವೀಯ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಕಣಿವೇನ ಹಳ್ಳಿ ಗ್ರಾಮದ ಬಳಿ ರೈತ ಅಂಜನೇಯಲು ಎಂಬುವವರು 6 ಎಕರೆ ಪ್ರದೇಶದಲ್ಲಿ 7500 ಬಾಳೆ ಗಿಡಗಳನ್ನು ಹಾಕಿದ್ದರು, ಕಟಾವಿಗೆ ಬಂದಿರುವ ಬಾಳೆಗೆ ವ್ಯಾಪಾರಸ್ಥರಿಲ್ಲದೆ ಮಾರುಕಟ್ಟೆ ಇಲ್ಲದೆ ಸ್ಥಗಿತವಾದ ಕಾರಣ ಸುಮಾರು 2 ಸಾವಿರಕ್ಕೂ ಹೆಚ್ಚು ಗಿಡಗಳು ಹಣ್ಣಿನ ಬಾರದಿಂದ ಮುರಿದು ಬಿದ್ದಿವೆ. ಇದೇ ವೇಳೆ ರೈತ ಮುಖಂಡರಾದ ರಾಮಲಿಂಗರೆಡ್ಡಿ ಮಾತನಾಡಿ ಅಂಜನೇಯಲು ಎಂಬ ರೈತ 6 ಎಕರೆ ಭೂಮಿಯಲ್ಲಿ 7500 ಬಾಳೆ ಗಿಡಗಳನ್ನು ಬೆಳೆದಿದ್ದು, ಕಟಾವಿಗೆ ಬಂದಾ ಕಾಯಿಗೆ ಕೊರೊನ ವೈರಸ್ ಹಿನ್ನೆಲೆ ಮಾರುಕಟ್ಟೆ, ವ್ಯಾಪಾರ ವಹಿವಾಟು ನಿಂತ ಕಾರಣ ಬಾಳೆ ಮಾರಾಟವಾಗದೆ ಕಾಯಿಯ ಬಾರಕ್ಕೆ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಗಿಡಗಳು ಮುರಿದು ಬಿದ್ದಿದ್ದು ಇದರಿಂದ ರೈತನಿಗೆ ಸುಮಾರು…
ತುಮಕೂರು : ಕೊರಟಗೆರೆ ತಾಲ್ಲೂಕು ಸಿ.ಎನ್.ದುರ್ಗಾ ಹೋಬಳಿ ದಾಸಲುಕುಂಟೆ ಗ್ರಾಮದ ನಿವಾಸಿ ಮಂಜುನಾಥ್ ಎಂಬ ರೈತನಿಂದ 15ಸಾವಿರ ರೂ.ಗಳ ಲಂಚದ ಹಣ ಪಡೆಯುವಾಗ ಗ್ರಾಮ ಲೆಕ್ಕಿಗ ಚನ್ನೇಗೌಡ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣದ ಹಿನ್ನೆಲೆ: ದಾಸಲುಕುಂಟೆ ಗ್ರಾಮದ ಮಂಜುನಾಥ್ ಅವರ ತಾಯಿ ನಾಗರತ್ನಮ್ಮ ಅವರ ಹೆಸರಿಗೆ ಕ್ರಯವಾಗಿರುವ ದಾಸಲುಕುಂಟೆ ಗ್ರಾಮದ ಸರ್ವೇ ನಂ.34ರ ಎರಡು ಎಕರೆ 37 ಗುಂಟೆ ಜಮೀನಿನ ಪಹಣಿ ಮತ್ತು ಖಾತೆ ಬದಲಾವಣೆ ಮಾಡಿಸಿಕೊಡುವ ಸಲುವಾಗಿ ಗ್ರಾಮ ಲೆಕ್ಕಿಗ ಚನ್ನೇಗೌಡ 30ಸಾವಿರ ರೂ.ಗಳ ಹಣಕ್ಕೆ ಬೇಡಿಕೆ ಇಟ್ಟು ನಂತರ 15ಸಾವಿರ ರೂ.ಗಳಿಗೆ ಒಪ್ಪಿ ಮುಂಗಡವಾಗಿ 5ಸಾವಿರ ರೂ. ಹಣವನ್ನು ಪಡೆದುಕೊಂಡಿರುತ್ತಾನೆ. ನಂತರ ಮಾರ್ಚ್ 20ರಂದು ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಸಾರ್ವಜನಿಕ ವಾಚನಾಲಯದಲ್ಲಿರುವ ಗ್ರಾಮ ಲೆಕ್ಕಾಧಿಕಾರಿ ಕಛೇರಿಯಲ್ಲಿ ಉಳಿದ ಲಂಚದ ಹಣವನ್ನು ಪಡೆಯುವ ಸಂದರ್ಭದಲ್ಲಿ ಎಸಿಬಿ ಡಿವೈಎಸ್ಪಿ ಬಿ.ಉಮಾಶಂಕರ್ ನೇತೃತ್ವದಲ್ಲಿ ತನಿಖಾಧಿಕಾರಿಯಾದ ಪೊಲೀಸ್ ಇನ್ಸ್ಪೆಕ್ಟರ್…
ತುಮಕೂರು: ಕೋವಿಡ್-19 ಸೋಂಕು ರೋಗವನ್ನು ತಡೆಯುವ ಸಲುವಾಗಿ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ಮೆಸ್, ಬೇಕರಿ, ಟೀ/ಕಾಫಿ ಶಾಪ್, ಜ್ಯೂಸ್ ಸೆಂಟರ್, ನಂದಿನಿ ಮಿಲ್ಕ್ ಅಂಡ್ ಐಸ್ ಕ್ರೀಂ ಪಾರ್ಲರ್ಗಳ ಮಾಲೀಕರು ಕಡ್ಡಾಯವಾಗಿ ಸ್ವಚ್ಚತೆಯನ್ನು ಕಾಪಾಡಬೇಕು ಎಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್ ಸೂಚನೆ ನೀಡಿದ್ದಾರೆ. ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್, ಮೆಸ್, ಬೇಕರಿ ಮತ್ತಿತರೆ ಉದ್ದಿಮೆಗಳ ಮಾಲೀಕರು ತಾವು ನಡೆಸುತ್ತಿರುವ ಉದ್ದಿಮೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿದಿನ 30 ಗ್ರಾಂ ಬ್ಲಿಚಿಂಗ್ ಪೌಡರ್ ಅನ್ನು 1 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಿ ಶುಚಿಗೊಳಿಸಬೇಕು. ಬಂದ ಗ್ರಾಹಕರಿಗೆ ಉಪಹಾರ ಸೇವಿಸುವ ಮುನ್ನ ಕಡ್ಡಾಯವಾಗಿ ಹ್ಯಾಂಡ್ವಾಶ್/ಹ್ಯಾಂಡ್ ಸ್ಯಾನಿಟೈಜರ್ಗಳನ್ನು ಒದಗಿಸಬೇಕು ಹಾಗೂ ಕುಡಿಯಲು ಬಿಸಿ ನೀರನ್ನು ನೀಡಬೇಕು. ಗ್ರಾಹಕರು ಉಪಹಾರ ಸೇವಿಸಿ ಹೋದ ನಂತರದ ಮೇಜು ಮತ್ತು ಕುರ್ಚಿಗಳನ್ನು ಸೋಂಕು ನಿವಾರಕಗಳಿಂದ ಸ್ವಚ್ಚಗೊಳಿಸಬೇಕು. ಉದ್ದಿಮೆಗಳಲ್ಲಿ ಬಳಸುವ ತಟ್ಟೆ, ಲೋಟ, ಅಡುಗೆ, ಮತ್ತಿತರ…
ತುಮಕೂರು : ತುಮಕೂರು ಜಿಲ್ಲೆಗೆ ವಿವಿಧ ದೇಶಗಳಿಂದ ಬಂದಿರುವಂತಹ 256 ಜನರನ್ನು ಕೊರೊನಾ ತಪಾಸಣೆಗೊಳಪಡಿಸಿ, ಅವರೆಲ್ಲರೂ ತೀವ್ರ ನಿಗಾವಣೆಯಲ್ಲಿ ವೈದ್ಯರ ಸಂಪರ್ಕದಲ್ಲಿದ್ದಾರೆ. 12 ಗಂಟಲು ಸ್ರಾವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಎಲ್ಲವೂ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್ಕುಮಾರ್ ತಿಳಿಸಿದರು. ಅವರು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಕರೆಯಲಾಗಿದ್ದ ಕೊರೊನಾ ಸೋಂಕು ತಡೆಯುವ ಮುಂಜಾಗ್ರತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಒಟ್ಟಾರೆ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಸೋಂಕು ಪ್ರಕರಣಗಳು ದೃಢಪಟ್ಟಿರುವುದಿಲ್ಲ. ಸಾರ್ವಜನಿಕರು ಯಾವುದೇ ಕಾರಣಕ್ಕೆ ಭಯಪಡದೆ ಮುನ್ನೆಚ್ಚರಿಕೆ ಕ್ರಮವಾಗಿ ಜನರಿಂದ ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವುದು, ಜ್ವರ, ಕೆಮ್ಮು, ನೆಗಡಿ ಪೀಡಿತರು ಹತ್ತಿರದ ಆಸ್ಪತ್ರೆಗಳಲ್ಲಿ ತಪಾಸಣೆಗೊಳಪಡಬೇಕು. ಯಾವುದೇ ಸಭೆ ಸಮಾರಂಭಗಳು, ಮದುವೆ, ಇನ್ನಿತರೆ ಜನಸಂದಣಿ ಕಾರ್ಯಕ್ರಮಗಳು ನಡೆಯಬಾರದೆಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ಸಾರ್ವಜನಿಕರು ಇದನ್ನು ಗಂಭೀರವಾಗಿ ಪರಿಗಣಿಸದೆ…
ತುಮಕೂರು: ಮಾರ್ಚ್ 27ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗಳು ಯಾವುದೇ ಲೋಪದೋಷವಿಲ್ಲದೇ ಪಾರದರ್ಶಕವಾಗಿ ನಡೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಮಾರ್ಚ್ 27ರಿಂದ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಟೇಬಲ್, ಕುಡಿಯುವ ನೀರು ಮತ್ತು ಎಲ್ಲಾ ರೀತಿಯ ಮೂಲಭೂತ ಸೌಕರ್ಯ ವ್ಯವಸ್ಥೆ ಕಲ್ಪಿಸಬೇಕು ಅಲ್ಲದೇ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಾಗಲಿ, ಪರೀಕ್ಷಾ ಕೇಂದ್ರಗಳಲ್ಲಿ ಗುಂಪಾಗಿ ಸೇರದಂತೆ ನೋಡಿಕೊಳ್ಳುವುದು ಎಲ್ಲಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಜವಾಬ್ದಾರಿ ಎಂದು ಅವರು ಸೂಚಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವಾಗ/ಉತ್ತರ ಪತ್ರಿಕೆಗಳನ್ನು ತರುವಾಗ ಸೂಕ್ತ ಭದ್ರತೆಗಳಿಂದ ಪೊಲೀಸ್ ಇಲಾಖೆ ಕ್ರಮವಹಿಸಬೇಕು. ಅಲ್ಲದೇ ಪರೀಕ್ಷಾ ಕಾರ್ಯಕ್ಕಾಗಿ ಸೂಕ್ತ ವಾಹನಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಆರ್ಟಿಓ ಅಧಿಕಾರಿಗಳಿಗೆ…
ತುಮಕೂರು: ಅಪಾಯಕಾರಿ ಸಾಂಕ್ರಾಮಿಕ ರೋಗ ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಮಾರ್ಚ್ 31ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ರಾಜ್ಯದ ಬೆಂಗಳೂರು ಹಾಗೂ ಕಲ್ಬುರ್ಗಿಗಳಲ್ಲಿ ಕೊರೋನಾ ವೈರಸ್(ಕೋವಿಡ್-19) ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮವಹಿಸಬೇಕಾಗಿದೆ. ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೋನಾ ವೈರಸ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಗಳಿದ್ದು, ಹೆಚ್ಚಿನ ಜನಸಂದಣಿ ಸೇರಬಾರದಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಸಹ ಗುಂಪುಗುಂಪಾಗಿ ಜನರು ಸೇರುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಸಾರ್ವಜನಿಕ ಸ್ವಾಸ್ಥ್ಯಕ್ಕೆ ತೊಂದರೆಯಾಗಬಹುದು ಹಾಗೂ ಪ್ರಾಣಹಾನಿಯಾಗುವ ಸಂಭವವಿದೆ ಎಂಬುದನ್ನು ಮನಗಂಡು ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆಯನ್ವಯ ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಈ ಆದೇಶವು ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಳ್ಳುವವರಿಗೆ…
ತುಮಕೂರು: ಜಗತ್ತಿನಾದ್ಯಂತ ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯೂ ಇಳಿಮುಖವಾಗಿದೆ. ವಿಶ್ವದೆಲ್ಲೆಡೆ ರಣಕೇಕೆ ಹಾಕುತ್ತಿರುವ ಈ ಕೊರೊನಾ ವೈರಸ್ ಸೋಂಕು ತನ್ನ ಕದಂಬ ಬಾಹುಗಳನ್ನು ಎಲ್ಲೆಡೆ ಚಾಚುತ್ತಾ ಸೋಂಕು ಹರಡಲು ಹವಣಿಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜನಜಾಗೃತಿ ಮೂಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಣ್ಣಪುಟ್ಟ ಕಾಯಿಲೆಗಳನ್ನು ತೋರಿಸಲು ಆಸ್ಪತ್ರೆಗಳಿಗೆ ತೆರಳುತ್ತಿದ್ದ ರೋಗಿಗಳ ಸಂಖ್ಯೆ ತಾನಾಗಿಯೇ ಕ್ಷೀಣಿಸಿದೆ. ಜನದಟ್ಟಣೆ ಜಾಸ್ತಿ ಇರುವ ಕಡೆ ಈ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆದಷ್ಟು ಜನಸಂಪರ್ಕ ಕಡಿಮೆ ಇರುವಂತೆ ನೋಡಿಕೊಳ್ಳಬೇಕು. ಜನಸಾಮಾನ್ಯರೂ ಸಹ ಜನಸಂದಣಿ ಇರುವಲ್ಲಿ ಹೆಚ್ಚು ಸಮಯ ಬೆರೆಯಬಾರದು ಎಂಬೆಲ್ಲಾ ಅಂಶಗಳನ್ನು ಅರಿತಿರುವುದರಿಂದ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಪ್ರತಿನಿತ್ಯ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ರಿಂದ…










