Author: News Desk Benkiyabale

ಗುಬ್ಬಿ:      ಬೈಕ್‍ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್‍ಐ ಲಾರಿಗೆ ಸಿಲುಕಿ ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸೋಮವಾರ ತಾಲ್ಲೂಕಿನ ಉದ್ದೇಹೊಸಕೆರೆ ಗ್ರಾಮದ ಬಳಿ ಶಿರಾ ನೆಲ್ಲಿಗೆರೆ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ನಡೆದಿದೆ.       ತುರುವೇಕೆರೆ ತಾಲ್ಲೂಕು ಅಂಗರೇಖನಹಳ್ಳಿ ಗ್ರಾಮ ಮೂಲದ ಭುವನೇಶ್ವರ್‍ಕುಮಾರ್ (58) ಮೃತಪಟ್ಟ ಚೇಳೂರು ಠಾಣಾ ಎಎಸ್‍ಐ ಅಧಿಕಾರಿಯಾಗಿದ್ದರು. ತಮ್ಮ ಸ್ವಗ್ರಾಮದಿಂದ ಚೇಳೂರು ಠಾಣೆಗೆ ಬೈಕ್‍ನಲ್ಲಿ ತೆರಳುವ ಮಾರ್ಗ ಮಧ್ಯೆ ಹರಿಯಾಣ ರಾಜ್ಯದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಹೊಟ್ಟೆಭಾಗಕ್ಕೆ ತೀವ್ರ ಪೆಟ್ಟು ಬಿದ್ದ ನರಳುತ್ತಿದ್ದ ಮೃತರನ್ನು ತುಮಕೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಎಎಸ್‍ಐ ಭುವನೇಶ್ವರ್‍ಕುಮಾರ್ ಸಾವನ್ನಪ್ಪಿದರು.       ಅಪಘಾತ ಮಾಡಿ ಸ್ಥಳದಿಂದ ಪಲಾಯಾನವಾಗಿದ್ದ ಲಾರಿಯನ್ನು ಚಾಲಕ ಸಹಿತ ಕೆ.ಬಿ.ಕ್ರಾಸ್ ಬಳಿ ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಸಿಪಿಐ ಸಿ.ರಾಮಕೃಷ್ಣಯ್ಯ ಭೇಟಿ ನೀಡಿ ಪರಿಶೀಲಿಸಿದರು. ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋವಿಡ್ 19 ವೈರಸ್ ತಡೆಗೆ ನಡೆದಿದ್ದ ಪೊಲೀಸ್ ಬಂದೋಬಸ್ತ್…

Read More

ತುಮಕೂರು :       ಕೋವಿಡ್-19ರ ನಿಯಂತ್ರಣದ ಹಿನ್ನಲೆಯಲ್ಲಿ ಲಾಕ್‍ಡೌನ್ ಆಗಿರುವುದರಿಂದ ಮನೆ ಮನೆಗೆ ಹಣ್ಣು-ತರಕಾರಿ ತಲುಪಿಸುವ ಮಾದರಿಯಲ್ಲೇ ದೇಸಿ ತಳಿಯ ಕುರಿ ಮತ್ತು ಮೇಕೆ ಮಾಂಸವನ್ನು ತಲುಪಿಸುವ ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರು ಇಂದು ಚಾಲನೆ ನೀಡಿದರು.       ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಬೆಂಗಳೂರು ವತಿಯಿಂದ ತುಮಕೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಕುವೆಂಪು ನಗರದಲ್ಲಿ ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಚಾಲನೆ ನೀಡಿ, ಮಾತನಾಡಿದ ಅವರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ರಾಜ್ಯದಲ್ಲೇ ಪ್ರಥಮ ಬಾರಿಗೆ ತುಮಕೂರಿನಲ್ಲಿ ಸಂಚಾರಿ ಮಾಂಸ ಮಾರಾಟ ಮಳಿಗೆಯನ್ನು ಸ್ಥಾಪಿಸಿದೆ. ಇದಕ್ಕೆ ಮಹಾನಗರ ಪಾಲಿಕೆಯು ಸಹಕಾರ ನೀಡುತ್ತಿದೆ ಎಂದರು.       ಲಾಕ್‍ಡೌನ್ ಜಾರಿಯಲ್ಲಿ ಇರುವ ಈ ಅವಧಿಯಲ್ಲಿ ಪ್ರತಿಯೊಂದು ಸಮಸ್ಯೆಗೂ ಒಂದು ಪರಿಹಾರವನ್ನು ಹುಡುಕುವ ಕೆಲಸ ಮಾಡಲಾಗುತ್ತಿದೆ. ಅದೇ ರೀತಿ ಮಾಂಸ ತಿನ್ನುವವರಿಗೆ ಮನೆ ಮನೆಗೆ…

Read More

 ತುಮಕೂರು:       ಭಾರತೀಯ ಜನತಾ ಪಕ್ಷ ರೈತ ಮೋರ್ಚಾ ಘಟಕವು ರೈತರಿಂದ ಖರೀದಿ ಮಾಡಿದ ತರಕಾರಿ ಮತ್ತು ಹಣ್ಣುಗಳನ್ನು ಶನಿವಾರ ನಗರದ ಶೆಟ್ಟಿಹಳ್ಳಿ ಶ್ರೀಆಂಜನೇಯಸ್ವಾಮಿ ದೇವಸ್ಥಾನದ ಸುತ್ತಮುತ್ತಲ ಬಡಾವಣೆಗಳ ನಾಗರೀಕರಿಗೆ ಮನೆ ಮನೆಗೆ ತೆರಳಿ ಉಚಿತವಾಗಿ ವಿತರಣೆ ಮಾಡಲಾಯಿತು.       ನಗರದ ಶೆಟ್ಟಿಹಳ್ಳಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ತರಿಕಾರಿ ಮತ್ತು ಹಣ್ಣು ವಿತರಣಾ ಕಾರ್ಯಕ್ರಮಕ್ಕೆ ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸಿದ್ಧಗಂಗಾ ಆಸ್ಪತ್ರೆಯ ನಿರ್ದೇಶಕರಾದ ಡಾ.ಪರಮೇಶ್ ಚಾಲನೆ ನೀಡಿದರು.       ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಸ್.ಶಿವಪ್ರಸಾದ್ ಮಾತನಾಡಿ, ಕೊರೋನ ವೈರಸ್ ಹರಡುವ ಭೀತಿಯಿಂದ ಲಾಕ್‍ಡೌನ್ ಘೋಷಣೆಯಾಗಿದ್ದು, ಇದರಿಂದ ಅನೇಕ ರೈತರು ತಾವು ಬೆಳೆದಿರುವ ತರಕಾರಿ, ಹಣ್ಣು ಹಂಪಲುಗಳನ್ನು ಮಾರಾಟ ಮಾಡಲು ಕೆಲವು ಕಡೆ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು ನೇರವಾಗಿ ರೈತರಿಂದ ತರಕಾರಿ ಮತ್ತು ಹಣ್ಣು ಹಂಪಲುಗಳನ್ನು ಖರೀದಿ ಮಾಡಿ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ…

Read More

ತುಮಕೂರು:       ಕೋವಿಡ್-19 ಬಾದಿತರು ಆಸ್ಪತ್ರೆಗೆ ದಾಖಲಾಗುವ ಅಥವಾ ತೊಂದರೆಗೆ ಒಳಾಗುವ ವ್ಯಕ್ತಿ ಮತ್ತು ವ್ಯಕ್ತಿಯ ಸಂಬಂಧಿಕರು, ವಯಸ್ಕರು ಮನೆಯಿಂದ ಹೊರಬರದ ಜನರಿಗೆ ಆಹಾರ, ಊಟ ಮತ್ತು ಔಷಧೋಪಚಾರ ಸಮಸ್ಯೆಗಳಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸಹಾಯವಾಣಿಯನ್ನು ಆರಂಭಿಸಿದೆ.       ಸಾರ್ವಜನಿಕರು ಈ ಸಹಾಯವನ್ನು ಪಡೆದುಕೊಳ್ಳಲು ಮತ್ತು ಸಹಾಯವಾಣಿ ಮೂಲಕ ಸಾರ್ವಜನಿಕರಿಗೆ ಸಹಾಯ ಮಾಡಲು ಇಚ್ಛಿಸುವವರು ಸಹಾಯವಾಣಿ ಸದಸ್ಯರ ಸಂಪರ್ಕ ವಿವರ ಇಂತಿದೆ.       ವಕೀಲರಾದ ಕೆ.ಬಿ ಚಂದ್ರಚೂಡ್ – 9448661446, ಎಸ್.ಮಂಜುನಾಥ್-9844228971, ಭೋಜಕುಮಾರ್-9964531291, ಬೇಬಿ ಕವಿತಾ-9844080412, ಟಿ.ಓಬಯ್ಯ-9448071002, ಮೊಹಮ್ಮದ್ ಜಬಿವುಲ್ಲಾ-9844285433, ಹೆಚ್.ನರಸಿಂಹಪ್ಪ-9480059569, ಹೆಚ್.ರೇಣುಕಯ್ಯ-9845099601, ಕಾಂತರಾಜು-9035333353, ಕೃಷ್ಣಮೂರ್ತಿ-9964433250 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಹಂಚಾಟೆ ಸಂಜೀವಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

 ತುಮಕೂರು:       ತುಮಕೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿರುವ ಶ್ರೀ ಹಂಚಾಟೆ ಸಂಜೀವ್ ಕುಮಾರ್ ಅವರು ತುಮಕೂರು ನಗರದ ಹೊರವಲಯದಲ್ಲಿ ವಾಸವಾಗಿರುವ 32 ನಿರಾಶ್ರಿತ ಹಕ್ಕಿ-ಪಿಕ್ಕಿ ಬಡ ಕುಟುಂಬಗಳಿಗೆ ಅಗತ್ಯ ಪಡಿತರಗಳನ್ನು ವಿತರಿಸಿದರು.       ಅವರು ಇಂದು ಅರಕೆರೆ ಕೇಂದ್ರೀಯ ವಿದ್ಯಾಲಯದ ಬಳಿಯಿರುವ ಹಕ್ಕಿ-ಪಿಕ್ಕಿ ಜನಾಂಗ ವಾಸಿಸುತ್ತಿರುವ ಗುಡಿಸಲುಗಳಿಗೆ ಭೇಟಿ ನೀಡಿ ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದರು.       ಈ ಸಂದರ್ಭದಲ್ಲಿ ಜನಾಂಗದ ಮುಖಂಡರಾಗಿರುವ ರವಿಕುಮಾರ್ ತಮ್ಮ ಸಮಸ್ಯೆಗಳ ಕುರಿತು ನ್ಯಾಯಾಧೀಶರಲ್ಲಿ ನಿವೇದಿಸಿಕೊಂಡರು. ಕಳೆದ 5-6ವರ್ಷಗಳಿಂದ ಈ ಗುಡಿಸಲುಗಳಲ್ಲಿ 130 ಜನರು ವಾಸವಾಗಿದ್ದು, ಹಿಂದಿನ ಜಿಲ್ಲಾಧಿಕಾರಿಗಳಾದ ಮೋಹನ್‍ರಾಜ್ ಅವರು ನಮಗೆ ಈ ಜಾಗವನ್ನು ಮಂಜೂರು ಮಾಡಿದ್ದು, ಆದರೆ ಮನೆಗಳನ್ನು ಕಟ್ಟಿಸಿಕೊಡುವ ವ್ಯವಸ್ಥೆ ಆಗಿರುವುದಿಲ್ಲ. ವಿದ್ಯುತ್ ಸಂಪರ್ಕವಿಲ್ಲ ಹಾಗೂ ಯಾವುದೇ ಮೂಲಭೂತ ಸೌಕರ್ಯವಿರುವುದಿಲ್ಲ. ಈ ಪ್ರದೇಶದಲ್ಲಿ ಕಾಡುಪ್ರಾಣಿಗಳು ಸಂಚಾರ ಮಾಡುತ್ತಿದ್ದು, ಮಕ್ಕಳು ಮತ್ತು ಮಹಿಳೆಯರು…

Read More

ತುಮಕೂರು:      ಜಿಲ್ಲೆಯಲ್ಲಿ ಕೋವಿಡ್-19ರ ಸೋಂಕಿತ ಶಿರಾ ತಾಲೂಕಿನ ಪಿ-84 ಸಂಪೂರ್ಣ ಗುಣಮುಖರಾಗಿದ್ದಾರೆಂದು ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ತಿಳಿಸಿದ್ದಾರೆ.        ಜಿಲ್ಲೆಯ 202 ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಶೀಘ್ರದಲ್ಲಿ ಹಣ ಬಿಡುಗಡೆಗೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ ತುಮಕೂರು(ಕ.ವಾ) ಏ.16: ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ 2017-18ನೇ ಸಾಲಿನಲ್ಲಿ ಮಾಡಿರುವ 202 ಚೆಕ್ ಡ್ಯಾಂಗಳ ನಿರ್ಮಾಣ ಕಾಮಗಾರಿಗಳ ಬಗ್ಗೆ ಚರ್ಚಿಸಿ ಶೀಘ್ರದಲ್ಲಿ ಹಣ ಬಿಡುಗಡೆಗೆ ಕ್ರಮವಹಿಸಲಾಗುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.       ಕುಣಿಗಲ್ ತಾಲೂಕಿನ ಯಡಿಯೂರು ಸಮೀಪದ ಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕೋವಿಡ್-19 ಸಂಬಂಧಪಟ್ಟಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್‍ಪೋರ್ಸ್ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       ಚೆಕ್ ಡ್ಯಾಂಗಳ ಪೈಕಿ 13 ಚೆಕ್…

Read More

ತುಮಕೂರು :       ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಬಾಲಮಂದಿರಗಳಲ್ಲಿ ಇರುವ ಮಕ್ಕಳನ್ನು ಚಟುವಟಿಕೆಯಿಂದಿಡಲು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವಂತೆ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ನಿರ್ದೇಶಕರ ಆದೇಶದ ಮೇರೆಗೆ ತುಮಕೂರಿನ ಬಾಲಮಂದಿರದಲ್ಲಿರುವ ಬಾಲಕಿಯರಿಗೆ ಮತ್ತು ಬಾಲಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.       ಏಪ್ರಿಲ್ 15ರಂದು 6-12ವರ್ಷ ಹಾಗೂ 13-18ವರ್ಷ ವಯೋಮಾನದ ಬಾಲಕ ಮತ್ತು ಬಾಲಕಿಯರ 2 ಗುಂಪುಗಳನ್ನು ಮಾಡಿ ಬಾಲಮಂದಿರದಲ್ಲಿ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. 6-12 ವರ್ಷದ ಬಾಲಕಿಯರಲ್ಲಿ ಕು|| ಅಪ್ಸನಾ (ಪ್ರಥಮ), ಕು|| ರೇಷ್ಮಾ (ದ್ವಿತೀಯ), ಕು|| ಸಂಧ್ಯಾ (ತೃತೀಯ) ಸ್ಥಾನಗಳನ್ನು, 13 ರಿಂದ 18ವರ್ಷದ ಗುಂಪಿನಲ್ಲಿ ಬಾಲಕಿಯರಲ್ಲಿ ಕು|| ಅರ್ಪಿತಾ (ಪ್ರಥಮ), ಕು|| ಕಲ್ಪನಾ (ದ್ವಿತೀಯ), ಕು|| ಸುಶ್ಮಿತಾ (ತೃತೀಯ) ಸ್ಥಾನಗಳನ್ನು ಪಡೆದಿರುತ್ತಾರೆ. ಬಾಲಕರ ಬಾಲಮಂದಿರದಿಂದ ಕು|| ಅಜಯ್ (ಪ್ರಥಮ), ಕು|| ಅಭಿ (ದ್ವಿತೀಯ), ಕು|| ಸಂತೋಷ್ (ತೃತೀಯ) ಸ್ಥಾನಗಳನ್ನು, ಕು|| ವೀರಭದ್ರ (ಪ್ರಥಮ), ಕು|| ಆನಂದ (ದ್ವಿತೀಯ),…

Read More

ತುಮಕೂರು :       ಕೋವಿಡ್-19ಕ್ಕೆ ಸಂಬಂಧಪಟ್ಟಂತೆ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ಪಿ-84 ವ್ಯಕ್ತಿಯು ಸಂಪೂರ್ಣ ಗುಣಮುಖರಾಗಿ ಇಂದು ಜಿಲ್ಲೆಗೆ ವಾಪಸ್ ಬಂದಿದ್ದು, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಲು ತಿಳಿಸಲಾಗಿದೆ.      ಶಿರಾಗೆ ಭೇಟಿ ನೀಡಿ ಅವರ ಸಂಬಂಧಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಂದಿನ 14 ದಿನಗಳವರೆಗೂ ಹೋಂ ಕ್ವಾರೆಂಟೈನ್ ಮಾಡಲಾಗಿದ್ದು, 2 ಬಾರಿಯೂ ಸಹ ಅವರ ಸಂಬಂಧಿಕರದ್ದು ನೆಗೆಟಿವ್ ಬಂದಿದ್ದು, ಅವರನ್ನು ಮನೆಗೆ ಕಳುಹಿಸಲಾಗುತ್ತಿದೆ. ಈ ಹಿಂದೆ ತಬ್ಲಿಘಿ ಜಮಾತ್‍ಗೆ ತೆರಳಿರುವವರ ಮಾದರಿಗಳನ್ನು ಕಳುಹಿಸಲಾಗಿದೆ.       ಅಲ್ಲದೇ ಮೇ 3ರವರೆಗೆ ಲಾಕ್‍ಡೌನ್ ವಿಸ್ತರಿಸಿದ್ದು, ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಮನವಿ ಮಾಡಿದ್ದಾರೆ.

Read More

ತುಮಕೂರು:         ಸರ್ಕಾರದ ಹೊಸ ಆದೇಶದಂತೆ ಜಿಲ್ಲೆಯಲ್ಲಿ ಮೇ 3ರವರೆಗೆ ಲಾಕ್‍ಡೌನ್ ವಿಸ್ತರಣೆಯಾಗಿದ್ದು, ಸಾರ್ವಜನಿಕರು ಅನಗತ್ಯವಾಗಿ ಓಡಾಡದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ ಅವರು ಮನವಿ ಮಾಡಿದ್ದಾರೆ.        ನಗರದ ಜೆ.ಸಿ.ಆರ್ ಕಾಲೋನಿಯಲ್ಲಿ ಜನ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ಅಗತ್ಯವಿದ್ದರೆ ಮಾತ್ರ ಬೈಕ್‍ಗಳಲ್ಲಿ ಇಬ್ಬರ ಬದಲು ಒಬ್ಬರು ಹೋಗಬೇಕು. ದ್ವಿಚಕ್ರ ವಾಹನಗಳಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ 2500 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಗತ್ಯ ವಸ್ತುಗಳನ್ನು ವಾರಕ್ಕೊಮ್ಮ ಆಗುವಷ್ಟು ಖರೀದಿಸಿ, ಹತ್ತಿರವಿರುವ ಅಂಗಡಿಗಳಿಗೆ ನಡೆದುಕೊಂಡು ಹೋಗಿ ತೆಗೆದುಕೊಂಡರೆ, ವಾಹನದಲ್ಲಿ ಓಡಾಡುವುದನ್ನು ಕಡಿಮೆ ಮಾಡಬಹುದು. ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜಿಲ್ಲೆಗೆ ಕೊರೊನಾ ಬರದಂತೆ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಿಯಮ ಪಾಲನೆ ಮಾಡದಿದ್ದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಈಗಾಗಲೇ ಸುಮಾರು 150 ಪ್ರಕರಣ ದಾಖಲಾಗಿವೆ. ನಿಯಮ ಉಲ್ಲಂಘನೆ ಮಾಡಿದರೆ 1-2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ. ಆದ್ದರಿಂದ ಎಲ್ಲರೂ ಸಹಕರಿಸಬೇಕು. ಇಲ್ಲವಾದರೆ…

Read More

ತುಮಕೂರು:       ಪ್ರಸಕ್ತ ವರ್ಷದ ಪೂರ್ವ ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು, 23.91 ಮಿ.ಮೀ ವಾಡಿಕೆ ಮಳೆಯಾಗಬೇಕಾಗಿದ್ದು, 30.68 ಮಿ.ಮೀ ಮಳೆಯಾಗಿರುತ್ತದೆ. ರೈತರು ಭೂಮಿ ಉಳುಮೆ ಕಾರ್ಯದಲ್ಲಿ ನಿರತರಾಗಿದ್ದು, ಬಿತ್ತನೆಗೆ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದೆ. ಪ್ರಸಕ್ತ ವರ್ಷ 381300 ಹೆ. ಬಿತ್ತನೆ ಕ್ಷೇತ್ರದ ಗುರಿ ಹೊಂದಲಾಗಿದ್ದು, ಇದರಲ್ಲಿ ಪೂರ್ವ ಮುಂಗಾರು ಬೆಳೆಗಳಾದ ಹೆಸರು-12000 ಹೆ, ಉದ್ದು-900 ಹೆ, ಅಲಸಂದೆ-5600 ಹೆ. ಬಿತ್ತನೆ ಕ್ಷೇತ್ರದ ಗುರಿ ಹೊಂದಲಾಗಿದ್ದು, ಚಿಕ್ಕನಾಯ್ಕನಹಳ್ಳಿ, ತಿಪಟೂರು, ತುರುವೇಕೆರೆ, ಕುಣೆಗಲ್, ಗುಬ್ಬಿ, ತುಮಕೂರು ಮತ್ತು ಶಿರಾ ತಾಲ್ಲೂಕಗಳಲ್ಲಿ ಬಿತ್ತನೆಯಾಗುತ್ತದೆ.       ಸದರಿ ತಾಲ್ಲೂಕಗಳ ರೈತ ಸಂಪರ್ಕ ಕೇಂದ್ರಗಳಲ್ಲಿ ಪೂರ್ವ ಮುಂಗಾರು ಬೆಳೆಗಳಾದ ಹೆಸರು–358.80 ಕ್ವಿಂ, ಉದ್ದು–2.00 ಕ್ವಿಂ, ಅಲಸಂದೆ–71.40 ಕ್ವಿಂ ಮತ್ತು ಹೈ.ಜೋಳ–5.40 ಕ್ವಿಂ. ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದ್ದು, ರೈತರಿಗೆ ಸಹಾಯಧನದಡಿ ವಿತರಣೆ ಮಾಡಲಾಗುತ್ತಿದೆ. ಬೇಡಿಕೆಗನುಗುಣವಾಗಿ ಬಿತ್ತನೆ ಬೀಜ ದಾಸ್ತಾನು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.       ಜೋಳ ಪ್ರಮಾಣಿತ ಪೂರ್ಣ ದರ(ಪ್ರತಿ…

Read More