ತುಮಕೂರು: ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದೇ ಇರುವ 11 ಗುತ್ತಿಗೆದಾರರಿಗೆ ಒಟ್ಟು 1.53 ಕೋಟಿ ರೂ.ಗಳ ದಂಡ ವಿಧಿಸಲಾಗಿದೆ ಎಂದು ಸ್ಮಾರ್ಟ್ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ. ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಪ್ರಗತಿಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿರುವುದರಿಂದ ಕಾಮಗಾರಿ ಪ್ರಗತಿಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಗುತ್ತಿಗೆದಾರರಿಗೆ ಈ ದಂಡವನ್ನು ವಿಧಿಸಲಾಗಿದೆ. ಅಲ್ಲದೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರವಹಿಸಿ ನಿಗಧಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಆದೇಶ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ 11 ಗುತ್ತಿಗೆದಾರರಿಗೆ…
Author: News Desk Benkiyabale
ತುಮಕೂರು : ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ, ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 26ರಂದು ನಡೆಯುವ ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಪ್ತಪದಿ ರಥಕ್ಕೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್ಕುಮಾರ್ ಅವರು ಚಾಲನೆ ನೀಡಿದರು. ಅನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಸಪ್ತಪದಿ ರಥ ಸಂಚರಿಸಲಿದ್ದು, ಜನರಿಗೆ ಸಪ್ತಪದಿ ಸರಳ ಸಾಮೂಹಿಕ ವಿವಾಹದ ಬಗ್ಗೆ ಮಾಹಿತಿ ನೀಡಲಿದೆ. ಜಿಲ್ಲೆಯ ಜನತೆ ಸರಳ ಸಾಮೂಹಿಕ ವಿವಾಹದ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶೇಖರ್, ತಹಶೀಲ್ದಾರ್ ಮೋಹನ್, ರಾಜ್ಯ ಧಾರ್ಮಿಕ ಪರಿಷತ್ನ ಸದಸ್ಯ ಸಿದ್ಧಲಿಂಗ ಪ್ರಭು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹೆಚ್.ಸವಿತ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ತುಮಕೂರು : ಸಾಮಾಜಿಕ ಅರಣ್ಯ, ಡೀಮ್ಡ್ ಅರಣ್ಯ, ಗೋಮಾಳ ಮತ್ತು ಸರ್ಕಾರಿ ಭೂಮಿಗಳಲ್ಲಿ ಬಗರ್ಹುಕುಂ ಸಾಗುವಳಿ ಮಾಡುತ್ತಿರುವ ಭೂಮಿಯ ಸರ್ವೇ ಕಾರ್ಯ ನಡೆಸಿ ಪರಿಶೀಲಿಸಿ ಸಾಗುವಳಿದಾರರಿಗೆ ಭೂಮಿ ನೀಡುವಂತೆ ಕಾನೂನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಮಾಧುಸ್ವಾಮಿ ಅವರು ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಬಗರ್ಹುಕುಂ ಸಾಗುವಳಿದಾರರ ಹೋರಾಟ ಸಮಿತಿಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಗುಬ್ಬಿ ತಾಲೂಕು ಮಂಚಲದೊರೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ಅರಣ್ಯಭೂಮಿಯ ಜಂಟಿ ಸರ್ವೇ ಕಾರ್ಯ ನಡೆಸಿ ಹಿಂದೆ ಭೂಮಿ ಕಳೆದುಕೊಂಡವರಿಗೆ ಭೂಮಿ ನೀಡುವುದಾಗಿ ಭರವಸೆ ನೀಡಿದರು. ತುಮಕೂರು ತಾಲೂಕು ಶೀಬಿ ಮತ್ತು ಇತರೆ ಗ್ರಾಮಗಳಲ್ಲಿ ಸಾಮಾಜಿಕ ಅರಣ್ಯ, ಡೀಮ್ಡ್ ಫಾರೆಸ್ಟ್ ಪ್ರಕರಣಗಳಲ್ಲಿ ಬಗರ್ಹುಕುಂ ಸಾಗುವಳಿ ಸಕ್ರಮ ಮಾಡುವುದಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಚಿಕ್ಕನಾಯಕನಹಳ್ಳಿ ಬೋರನಕಣಿವೆ ಜಲಾಶಯದ…
ತುಮಕೂರು : ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ವತಿಯಿಂದ ಸ್ಮಾರ್ಟ್ ಲಾಂಜ್, ಡಿಜಿಟಲ್ ಲೈಬ್ರರಿ ಮತ್ತು ಡಿಜಿಟಲ್ ಕ್ಲಾಸ್ರೂಮ್ ಯೋಜನೆಗಳನ್ನು ಅನುಷ್ಠಾನಗೊಳಿಸಿ ನಗರದ ನಾಗರಿಕರಿಗೆ ಉತ್ತಮ ಗುಣಮಟ್ಟದ ಜೀವನ ಮತ್ತು ವಾಸಯೋಗ್ಯ ಹಾಗೂ ಸುಸ್ಥಿರವಾಗಿಸಿರುವುದಕ್ಕಾಗಿ “ಸರ್ಟಿಫಿಕೇಟ್ ಆಫ್ ಮೇರಿಟ್ ಪ್ರಶಸ್ತಿ” ದೊರೆತಿದೆ. ದೆಹಲಿಯಲ್ಲಿಂದು ನಡೆದ Ministry of Urban Affairs ರವರಿಂದ ಆಯೋಜೀತ “ಸ್ಮಾರ್ಟ್ ಸಿಟಿ ಎಮ್ ಪವರಿಂಗ್ ಇಂಡಿಯಾ ಅವಾರ್ಡ್-2019”(Smart City Empowering India Awards-2019)ಕಾರ್ಯಕ್ರಮದಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಭೂಬಾಲನ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ ಎಂದು ಲಿಮಿಟೆಡ್ನ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಸಿದ್ದಾರೆ.
ತುಮಕೂರು : ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಲತಾ ರವಿಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಜರುಗಿದ ವಿಶೇಷ ಸಾಮಾನ್ಯ ಸಭೆಯಲ್ಲಿ ಈಗಾಗಲೇ ಕೃಷಿ ಇಲಾಖೆ ವತಿಯಿಂದ ಖರೀದಿಸಲಾಗಿದ್ದ ಶೇಂಗಾ ಬಿತ್ತನೆ ಬೀಜದ ಮೊತ್ತ 400 ಲಕ್ಷ ರೂ. ಪಾವತಿಸಲು ಹಾಗೂ ಪಶುಸಂಗೋಪನಾ ಇಲಾಖೆಯಿಂದ ಜಾನುವಾರುಗಳಿಗೆ ಖರೀದಿ ಮಾಡಿರುವ ಔಷಧಿಗಳ ಮೊತ್ತ ರೂ. 1.25ಕೋಟಿ ಅನುದಾನವನ್ನು ಪಾವತಿಸಲು ಘಟನೋತ್ತರ ಮಂಜೂರಾತಿ ನೀಡಿ ಸಭೆಯಲ್ಲಿ ಅನುಮೋದಿಸಲಾಯಿತು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರೆಯಲಾಗಿದ್ದ ವಿಶೇಷ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಘಟನೋತ್ತರ ಮಂಜೂರಾತಿ ಕುರಿತು ಪ್ರಸ್ತಾವನೆಯನ್ನು ವಿಶೇಷ ಸಾಮಾನ್ಯ ಸಭೆ ಶೀಘ್ರದಲ್ಲೇ ಕರೆದು ಸದರಿ ಸಭೆಯಲ್ಲಿ ಅಧಿಕಾರಿಗಳು ಸಲ್ಲಿಸಿ ಅನುಮೋದನೆ ಪಡೆಯುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರಸಕ್ತ ಹಣಕಾಸು ವರ್ಷದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗೆ ಬಂದಿರುವ ಹಣವನ್ನು ಯಾವುದೇ ಕಾರಣಕ್ಕೆ ಲ್ಯಾಪ್ಸ್ ಆಗದ ರೀತಿಯಲ್ಲಿ ಬಳಸಿಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸರ್ವಾನುಮತದಿಂದ ಜಿಲ್ಲಾ ಪಂಚಾಯತ್…
ತುಮಕೂರು: ಬ್ಯಾಂಕ್ ನಿವೃತ್ತರ ಪಿಂಚಣಿಯನ್ನು ಶೀಘ್ರ ಪರಿಷ್ಕರಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟ ಜಿಲ್ಲಾ ಶಾಖೆ ವತಿಯಿಂದ ಮಹಾನಗರಪಾಲಿಕೆ ಆವರಣದ ಮುಂದೆ ಶುಕ್ರವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ರ್ಯಾಲಿಯನ್ನುದ್ಧೇಶಿಸಿ ಮಾತನಾಡಿದ ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟದ ಜಿಲ್ಲಾಧ್ಯಕ್ಷ ಟಿ.ವಾಸುದೇವ ತವಳ, ಕಳೆದ ಸುಮಾರು 25 ವರ್ಷಗಳಿಂದಲೂ ಕೇಂದ್ರ ಸರ್ಕಾರ ಬ್ಯಾಂಕ್ ನಿವೃತ್ತರ ಪಿಂಚಣಿಯನ್ನು ಪರಿಷ್ಕರಿಸದೆ ನಿರ್ಲಕ್ಷ್ಯ ವಹಿಸಿದೆ. ಆದ್ದರಿಂದ ಕೂಡಲೇ ನಿವೃತ್ತರ ಪಿಂಚಣಿಯನ್ನು ಪರಿಷ್ಕರಿಸಬೇಕೆಂದು ಒತ್ತಾಯಿಸಿದರು. 2002 ಕ್ಕೂ ಹಿಂದೆ ನಿವೃತ್ತರಾದವರ ತುಟ್ಟಿಭತ್ಯೆಯಲ್ಲಿರುವ ಅಸಮಾನತೆಯನ್ನು ನಿವಾರಿಸಿ ಅವರಿಗೂ ಇತರ ನಿವೃತ್ತರಂತೆಯೇ ಸಂಪೂರ್ಣ ತುಟ್ಟಿಭತ್ಯೆ ಕೊಡಬೇಕು, ಅಲ್ಪಪ್ರಮಾಣದಲ್ಲಿರುವ ಕೌಟುಂಬಿಕ ಪಿಂಚಣಿಯನನು ಕೇಂದ್ರ ಸರ್ಕಾರದ ಇತರ ಪಿಂಚಣಿದಾರರಂತೆ ಪರಿಷ್ಕರಿಸಿ ಕೌಟುಂಬಿಕ ಪಿಂಚಣಿದಾರರೂ ಸಹ ಗೌರವಯುತವಾದ ಜೀವನವನ್ನು ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು. ಅಖಿಲ ಭಾರತ ಬ್ಯಾಂಕ್ ನಿವೃತ್ತರ…
ಮಧುಗಿರಿ : ಗ್ರಾಮಗಳು ಅಭಿವೃದ್ದಿ ಹೊಂದಬೇಕಾದರೆ ಗ್ರಾಮಸ್ಥರು ದ್ವೇಷ ಹಾಗೂ ರಾಜಕೀಯ ಬಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲೂಕಿನ ರಂಟವಳಲು ಗ್ರಾಮದಲ್ಲಿನ ಅಂಬೇಡ್ಕರ್ ಭವನ ಹಾಗೂ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿ ಜನರು ಚುನಾವಣೆಯ ಸಂದರ್ಭಗಳಲ್ಲಿ ಮಾತ್ರ ರಾಜಕೀಯ ಮಾಡಬೇಕು, ಉಳಿದ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಪ್ರೀತಿ-ವಿಶ್ವಾಸ ದಿಂದ ಬದುಕಲು ಪ್ರಯತ್ನಿಸಿ ಎಂದು ಹೇಳಿದರು. ಕುಮಾರಸ್ವಾಮಿ ನೇತೃತ್ವದ ಸರಕಾರ ಅಸ್ಥಿತ್ವದಲ್ಲಿದ್ದರೆ ಈ ಬಾರಿಯ ಬಜೆಟ್ನಲ್ಲಿ ಮಧುಗಿರಿ ಕಂದಾಯ ಜಿಲ್ಲೆಯಾಗಿ ಘೋಷಣೆಯಾಗುವ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೆವು. ಕ್ಷೇತ್ರದ ಅಭಿವೃದ್ದಿಯಾಗ ಬೇಕೆಂದರೆ ಅನುದಾನ ಬಿಟ್ಟು ಕಂದಾಯ ಜಿಲ್ಲೆಯನ್ನಾಗಿ ಪರಿವರ್ತನೆ ಮಾಡುವುದು ಒಳಿತು. ಆದ್ದರಿಂದ ಈಗಿನ ಮುಖ್ಯಮಂತ್ರಿಗಳ ಗಮನ ಸೆಳೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವೆ ಎಂದ ಅವರು, ಎತ್ತಿನಹೊಳೆ ಯೋಜನೆಗೆ ದೊಡ್ಡೇರಿ ಹೋಬಳಿಯ 5 ಕೆರೆಗಳನ್ನು ಸೇರಿಸಲಾಗಿದ್ದು, ರೈತರು ಆತಂಕಪಡುವ ಅವಶ್ಯಕತೆ ಇಲ್ಲ…
ತುಮಕೂರು: ಸಂಸದರಾದ ಜಿ.ಎಸ್. ಬಸವರಾಜು ಅವರು ಕೇಂದ್ರ ಪುರಸ್ಕøತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಭೌಗೋಳಿಕ ಮಾಹಿತಿ ವ್ಯವಸ್ಥೆಯ ವೆಬ್ಸೈಟ್ಅನ್ನು ಚಾಲನೆ ನೀಡಿದರು. ಭೌಗೋಳಿಕ ಮಾಹಿತಿ ಸಂಗ್ರಹಿಸುವ ವ್ಯವಸ್ಥೆಯಡಿ ಪ್ರಥಮ ಬಾರಿಗೆ ತುಮಕೂರು ಜಿಲ್ಲೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕøತ ಕಾರ್ಯಕ್ರಮಗಳ(ದಿಶಾ) ಸಭೆಯ ಅಧ್ಯಕ್ಷತೆವಹಿಸಿ ಈ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದರು. ಯೋಜನಾ ನಿರ್ದೇಶಕ ಎಂ.ಜಯಚಂದ್ರನ್ ಕಾರ್ಯಕ್ರಮದ ಅನುಷ್ಠಾನ ಕುರಿತು ಮಾಹಿತಿ ನೀಡುತ್ತಾ, ಕರ್ನಾಟಕ ರಾಜ್ಯದ ದೂರ ಸಂವೇದಿ ಅನ್ವಯಿಕ ಕೇಂದ್ರದ ವತಿಯಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಭೌಗೋಳಿಕ ಮಾಹಿತಿಯನ್ನು ಸಂಗ್ರಹಿಸುವ ವ್ಯವಸ್ಥೆಯನ್ನು ರಾಜ್ಯದಲ್ಲೇ ಪ್ರಥಮವಾಗಿ ತುಮಕೂರು ಜಿಲ್ಲೆಯನ್ನು ಆಯ್ದುಕೊಂಡು ಸರ್ವೆವಾರು ಇಂಚಿಂಚು ಮಾಹಿತಿಯನ್ನು ನಕ್ಷೆಯಲ್ಲಿ ಸಂಗ್ರಹಿಸುವ ಕಾರ್ಯ ಜರುಗಿಸಲಾಗುತ್ತಿದೆ ಎಂದು ಅವರು ಸಭೆಗೆ ತಿಳಿಸಿದರು. ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ…
ತುಮಕೂರು: ತುಮಕೂರು ನಗರವು ಬೆಂಗಳೂರಿನ ಸಮೀಪವಿದ್ದು, ತುಮಕೂರು ನಗರ ಅಭಿವೃದ್ಧಿಗೆ ಕೈಗೊಂಡಿರುವ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ, ಬೇಸಿಗೆ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರು ಸರಬರಾಜಿಗೆ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ ಕಾಮಗಾರಿಗಳನ್ನು ಹಂತಹಂತವಾಗಿ ಪೂರ್ಣಗೊಳಿಸಲು ನಗರಾಭಿವೃದ್ಧಿ ಸಚಿವರಾಗಿರುವ ಬಿ.ಎ. ಬಸವರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಮಹಾನಗರ ಪಾಲಿಕೆಯಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಹಾಗೂ ಮಹಾನಗರ ಪಾಲಿಕೆಯ ಸದಸ್ಯರುಗಳ ಸಭೆಯಲ್ಲಿ ಅವರು ಮಾತನಾಡಿದರು. ಸ್ಮಾರ್ಟ್ಸಿಟಿ ಕಾಮಗಾರಿಗಳ ಪ್ರಗತಿ ಬಗ್ಗೆ ಸಾರ್ವಜನಿಕರಿಂದ ಬಹಳ ದೂರುಗಳು ಬರುತ್ತಿದ್ದು, ರಸ್ತೆ ನಿರ್ಮಾಣ ಕೈಗೊಳ್ಳುವಾಗ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಒನ್ ಬೈ ಒನ್ ರಂತೆ ಕಾಮಗಾರಿ ಕೈಗೊಂಡು ಇರುವ ಸಮಸ್ಯೆಗಳನ್ನು ಪರಿಹರಿಸುತ್ತಾ ಅಭಿವೃದ್ಧಿ ಸಾಧಿಸಲು ಮುಖ್ಯ ಇಂಜಿನಿಯರ್ ಸಿದ್ಧಗಂಗಪ್ಪ ಅವರಿಗೆ ತಿಳಿಸಿದರು. ತುಮಕೂರು ನಗರಕ್ಕೆ ಸುಮಾರು 22 ಹಳ್ಳಿಗಳು ವಿಲೀನಗೊಂಡಿದ್ದು, ಈ ಹಳ್ಳಿಗಳ ರಸ್ತೆಗಳ ಅಭಿವೃದ್ಧಿಗೂ ಅಧಿಕಾರಿಗಳು ಗಮನಹರಿಸಬೇಕು. ಸಚಿವರಾದ ಮೇಲೆ ಪ್ರಥಮ ಬಾರಿಗೆ ತುಮಕೂರಿನ…
ಚಿಕ್ಕನಾಯಕನಹಳ್ಳಿ : ನೀರಾವರಿ ಹೋರಾಟ ಸಮಿತಿ ಹಾಗೂ ರೈತಸಂಘದ ಸದಸ್ಯರೊಂದಿಗೆ ನಾಲಾಕಾಂಗಾರಿ ವೀಕ್ಷಣಗೆ ಜೊತೆಯಲ್ಲಿ ತೆರಳಿದ್ದ ಕನ್ನಡ ಪ್ರಭ ವರದಿಗಾರನ ಮೇಲೆ ಸಚಿವರ ಬೆಂಬಲಿಗರೊಬ್ಬರು ಹಲ್ಲೆಗೆ ಮುಂದಾದ ಘಟನೆ ನಡೆದಿದೆ. ಕಾಮಗಾರಿ ವೀಕ್ಷಣೆಯ ನಂತರ ಮೇಲ್ಕಂಡ ತಂಡದ ಸದಸ್ಯರನ್ನು ಕನ್ನಡ ಪ್ರಭ ವರದಿಗಾರ ಅಣೇಕಟ್ಟೆ ಸಿದ್ದರಾಮಯ್ಯನವರು ಈ ಹಿಂದೆ ಹೇಮಾವತಿ ನಾಲಾ ಭೂಸ್ವಾಧೀನದ ವಿಚಾರದಲ್ಲಿ ರೈತರಿಗೆ ಪರಿಹಾರ ಕೋಡುವವರೆಗೂ ಕಾಮಗಾರಿ ಮಾಡದಂತೆ ಅಡ್ಡಿಪಡಿಸಲಾಗಿತ್ತು. ಇದಕ್ಕೆ ಅಂದಿನ ಮಾಜಿ ಶಾಸಕರಾಗಿದ್ದ ಜೆ.ಸಿ.ಮಾಧುಸ್ವಾಮಿಯವರು ರೈತರ ನಿಲುವಿಗೆ ಬೆಂಬಲವ್ಯಕ್ತಪಡಿಸಿದ್ದ ಕಾರಣ ಪರಿಹಾರ ದೊರೆತು ಕಾಂಗಾರಿ ಆರಂಭಗೊಂಡಿತು. ಆದರೆ ಈ ಭಾಗದಲ್ಲಿಯೇ ಎತ್ತಿನಹೊಳೆ ಕಾಮಗಾರಿ ಆರಂಭಗೊಂಡಿದ್ದು ನಾಲೆಗೆ ಭೂಮಿ ಕಳೆದುಕೊಂಡ ರೈತರಿಗೆ ತಿಳುವಳಿಕೆ ಪತ್ರವನ್ನಾಗಲಿ, ಭೂಸ್ವಾಧೀನ ಪಡಿಸಿಕೊಂಡಿರುವ ಬಗ್ಗೆ ಅವಾರ್ಡ್ನ್ನಾಗಲಿ, ಅವರು ಕಳೆದುಕೊಳ್ಳುತ್ತಿರುವ ಭೂಮಿಯ ಮೌಲ್ಯವನ್ನು ನಿರ್ಧರಿಸುವ ಯಾವುದೇಪ್ರಕ್ರಿಯೆ ಪೂರ್ಣಗೊಂಡಿಲ್ಲ. ಆದರೂ ಏಕಾಏಕಿ ರೈತರ ಜಮೀನಿನಲ್ಲಿ ಕಾಮಗಾರಿ ಭರದಿಂದ ನಡೆಯುತ್ತಿದೆ. ಈಬಗ್ಗೆ ರೈತಸಂಘ ಮತ್ತು…











