Author: News Desk Benkiyabale

 ತುಮಕೂರು:        ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಇಂದಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಜನವರಿ 21ರಂದು ಲಿಂಗೈಕ್ಯರಾದ ಶತಾಯುಷಿ, ನಡೆದಾಡುವ ದೇವರು, ಪರಮಪೂಜ್ಯ ಶ್ರೀಶ್ರೀಶ್ರೀ ಡಾ: ಶಿವಕುಮಾರ ಮಹಾಸ್ವಾಮೀಜಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದರು.       ಅನ್ನದಾಸೋಹ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಮೂಲಕ ವಿಶ್ವದಾದ್ಯಂತ ಕೋಟ್ಯಾಂತರ ಭಕ್ತರನ್ನು ಹೊಂದಿರುವ ಪರಮಪೂಜ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸದೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಪರಮಪೂಜ್ಯರಿಗೆ ಭಾರತರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಈ ಹಿಂದೆ ಹಲವಾರು ಬಾರಿ ಒತ್ತಾಯ ಮಾಡಿದ್ದರೂ ಈವರೆಗೂ ನೀಡದೇ ಇರುವುದು ದುರಾದುಷ್ಟಕರ. ಈಗಲಾದರೂ ಪರಮಪೂಜ್ಯ ಶ್ರೀಗಳ ಸಾಧನೆಯನ್ನು ಗುರುತಿಸಿ ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿಯನ್ನು ನೀಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

Read More

 ತುಮಕೂರು:       ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ನಡುವೆ ಇರುವ ಸಾಮರಸ್ಯದ ಕೊರತೆಯಿಂದ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳಲು ವಿಳಂಬವಾಗುತ್ತಿದೆ ಎಂದು ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಅಧ್ಯಕ್ಷೆ ಡಾ: ಶಾಲಿನಿ ರಜನೀಶ್ ಬೇಸರ ವ್ಯಕ್ತಪಡಿಸಿದರು.       ನಗರದ ಬಾರ್‍ಲೈನ್ ರಸ್ತೆಯಲ್ಲಿಂದು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಸಿಸಿ ರಸ್ತೆ, ಚರಂಡಿ ಹಾಗೂ ಪಾದಚಾರಿ ಮಾರ್ಗ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಅಧಿಕಾರಿಗಳಿಗೆ ಸೂಚನೆ ನೀಡುತ್ತಾ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು ಪಾಲಿಕೆಯಲ್ಲಿರುವ ನಗರದ ನಕ್ಷೆಯನ್ನು ಅವಲೋಕಿಸಿದ ನಂತರ ಕಾಮಗಾರಿಗಳನ್ನು ಯೋಜಿತ ರೀತಿಯಲ್ಲಿ ಕೈಗೊಳ್ಳಬೇಕು ಎಂದು ತಿಳಿಸಿದರು.       ಸಿಸಿ ರಸ್ತೆಯೊಂದನ್ನು ಪರಿಶೀಲಿಸುತ್ತಾ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ನಂತರ ಚರಂಡಿ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಕ್ರಮ ಸರಿಯಲ್ಲ. ಇದರಿಂದ ಯೋಜನೆಯ ಹಣ ಪೋಲಾಗುತ್ತದೆಯಲ್ಲದೆ ಕಾಮಗಾರಿಯನ್ನು ದೀರ್ಘ ಕಾಲ ಕೈಗೊಳ್ಳುವುದರಿಂದ ಜನ ಸಂಚಾರಕ್ಕೆ ಅಡಚಣೆ ಉಂಟಾಗುತ್ತದೆ ಎಂದು ತಿಳಿಸಿದರು.    …

Read More

 ತುಮಕೂರು:       ಸಿರಾ ತಾಲ್ಲೂಕು ಕಲ್ಲುಕೋಟೆ ಗ್ರಾಮದ ಹೆಚ್.ಪಿ. ಪೆಟ್ರೋಲ್ ಬಂಕ್ ಪಕ್ಕದಲ್ಲಿ ಜನವರಿ 20ರಂದು ಎರಡು ಟ್ಯಾಂಕರ್‍ಗಳಿಂದ ಮದ್ಯಸಾರವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ದಸ್ತಗಿರಿ ಮಾಡಿ ಬಂಧಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.       ಬಂಧಿತ ಆರೋಪಿಗಳಿಂದ 92,00,950ರೂ ಮೌಲ್ಯದ 48,910 ಲೀಟರ್ ಮದ್ಯ ಸಾರ ಹಾಗೂ 2 ಟ್ಯಾಂಕರ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಉಪ ಆಯುಕ್ತ ಜೆ.ಗಿರಿ ಇವರ ಮಾರ್ಗದರ್ಶನದಲ್ಲಿ ತಿಪಟೂರು ವಿಭಾಗದ ಅಬಕಾರಿ ಉಪ ಅಧೀಕ್ಷಕ ಎಂ. ರಂಗಪ್ಪ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕ ಎ.ಕೆ.ನವೀನ್ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.       ತಿಪಟೂರು ನಗರದ ಹೊರ ವಲಯದಲ್ಲಿರುವ ಅಣ್ಣಾಪುರ ಗೇಟ್‍ನಲ್ಲಿ 2018ರ ಡಿಸೆಂಬರ್ 29ರಂದು ಟಾಟಾ ಸುಮೋ ಮತ್ತು 25 ರಟ್ಟಿನ ಪೆಟ್ಟಿಗೆಯಲ್ಲಿ 216 ಲೀ. ಅಕ್ರಮ ನಕಲಿ ಮದ್ಯವನ್ನು ಜಪ್ತಿಮಾಡಿ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಈ ಮೊಕದ್ದಮೆಗೆ ಸಂಬಂಧಿಸಿದಂತೆ ಜನವರಿ…

Read More

ಬೆಂಗಳೂರು:          ಬೆಂಗಳೂರು ಮಹಾನಗರದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಠಾಣೆಯ 71 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.       ಕುಮಾರಸ್ವಾಮಿ ಲೇಔಟ್ ಠಾಣೆಯ 71 ಸಿಬ್ಬಂದಿಯನ್ನು ಏಕ ಕಾಲಕ್ಕೆ ವರ್ಗಾವಣೆ ಮಾಡಿ ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಆದೇಶ ಹೊರಡಿಸಿದ್ದಾರೆ. ಠಾಣೆಯಲ್ಲಿ 78 ಸಿಬ್ಬಂದಿ ಇದ್ದಾರೆ. ಅವರಲ್ಲಿ 71 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ.        ಇತಿಹಾಸದಲ್ಲಿಯೇ ಒಂದೇ ಠಾಣೆಯ 71 ಸಿಬ್ಬಂದಿಯನ್ನು ಏಕ ಕಾಲಕ್ಕೆ ವರ್ಗಾವಣೆ ಮಾಡಿರುವುದು ಇದೇ ಮೊದಲು ಎನ್ನಲಾಗಿದೆ. ಠಾಣೆಯ ಸಿಬ್ಬಂದಿ ನಡುವಿನ ಒಳ ಜಗಳ ತಪ್ಪಿಸುವ ಉದ್ದೇಶದಿಂದ ಈ ವರ್ಗಾವಣೆ ಮಾಡಲಾಗಿದೆ.       ಇತ್ತೀಚೆಗೆ ಠಾಣೆಯ ಎ.ಎಸ್.ಐ. ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು, ಸುದ್ದಿಯಾಗಿತ್ತು. ಈ ವಿಡಿಯೋವನ್ನು ಮತ್ತೊಂದು ಗುಂಪಿನವರು ತೆಗೆದು ಬಹಿರಂಗಪಡಿಸಿದ್ದರು. ಅಲ್ಲದೇ, ಠಾಣೆಯಲ್ಲಿನ ಠಾಣಾಧಿಕಾರಿಯನ್ನು ಸಸ್ಪೆಂಡ್ ಮಾಡಿಸುವ ಉದ್ದೇಶದಿಂದ ರೈಫಲ್ ಕಳವು ಮಾಡಲಾಗಿತ್ತು. ಸಿಬ್ಬಂದಿ ನಡುವೆ ಒಳ ಜಗಳದಿಂದ ಹಲವು ಬೆಳವಣಿಗೆ ನಡೆದಿದ್ದವು.…

Read More

ನವದೆಹಲಿ:        ಭಾರತದ ಕುಖ್ಯಾತ ಭೂಗತಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಬಂಧನಗಲ್ ದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.       ಹಫ್ತಾ ವಸೂಲಿ, ಕೊಲೆ ಬೆದರಿಕೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಸಿಸಿಬಿಯ ಹಿಟ್ ಲಿಸ್ಟ್ ನಲ್ಲಿ ಅಗ್ರ ಸಾಲಿನಲ್ಲಿದ್ದನೆನ್ನಲಾಗಿದೆ. ರಿಮೋಟ್ ರೌಡಿಸಂ ನಡೆಸಿದ ಮೊದಲ ಭೂಗತ ಪಾತಕಿ ಎಂಬ ಕುಖ್ಯಾತಿಯೂ ರವಿ ಪೂಜಾರಿಗಿದೆ. ಇಂಟರ್ ಪೋಲ್ ನಿಂದಲೂ ಪೂಜಾರಿ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ನೀಡಲಾಗಿತ್ತು.       ಕರ್ನಾಟಕ, ಮಹಾರಾಷ್ಟ್ರ ರಾಜ್ಯದ ಹಲವೆಡೆ ರವಿ ಪೂಜಾರಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕೆಲ ದಿನಗಳ ಹಿಂದಷ್ಟೇ ಮುಂಬೈ ಪೊಲೀಸರು ರವಿ ಪೂಜಾರಿ ಗ್ಯಾಂಗ್​ನ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದರು. ಈ ಬಂಧಿತರಲ್ಲಿ ಬೆಂಗಳೂರಿನ ಆಕಾಶ್ ಶೆಟ್ಟಿ ಕೂಡ ಒಬ್ಬ. ಭೂಗತ ಪಾತಕಿಯು ಬ್ಯುಲ್ಡರ್​ವೊಬ್ಬರಿಗೆ ಫೋನ್​ನಲ್ಲಿ ಬೆದರಿಕೆ ಹಾಕಿದ್ದನೆನ್ನಲಾಗಿದೆ. ರವಿ ಪೂಜಾರಿಗೆ ನಗರದಲ್ಲಿರುವ ಬ್ಯುಲ್ಡರ್​ಗಳ ಬಗ್ಗೆ ಮಾಹಿತಿ ಕೊಡುತ್ತಿದ್ದುದು ಆಕಾಶ್ ಶೆಟ್ಟಿ ಮತ್ತು…

Read More

 ತುಮಕೂರು:       ಜಿಲ್ಲಾ ಪಂಚಾಯತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶುಭಾ ಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದರು.       ಶುಭಾ ಕಲ್ಯಾಣ್ ಅವರು ಈ ಹಿಂದೆ 2014ರ ಐಎಎಸ್ ಅಧಿಕಾರಿಗಳ ತಂಡದಲ್ಲಿ ನೇಮಕಾತಿ ಹೊಂದಿ, ಮಂಡ್ಯ ಜಿಲ್ಲೆಯ ಪ್ರೊಬೆಷನರಿ ಅಧಿಕಾರಿಯಾಗಿ ನಂತರ ಕೋಲಾರ ಜಿಲ್ಲೆಯಲ್ಲಿ ಹಿರಿಯ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.       ಜಿಲ್ಲಾ ಪಂಚಾಯತಿ ಸಿಇಓ ಕೊಠಡಿಯಲ್ಲಿಂದು ಪೂರ್ವಾಹ್ನ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಎಲ್ಲಾ ತಾಲ್ಲೂಕುಗಳ ಬರ ನಿರ್ವಹಣೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.       ಶಿಕ್ಷಣ ಕ್ಷೇತ್ರದಲ್ಲಿ ವೈಯಕ್ತಿಕವಾಗಿ ನನಗೆ ಹೆಚ್ಚಿನ ಆಸಕ್ತಿ ಇದ್ದು, ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜಿಲ್ಲೆಯನ್ನು ಮೊದಲನೇ ಸ್ಥಾನಕ್ಕೆ ತರುವ ಗುರಿ ಇಟ್ಟುಕೊಂಡಿದ್ದೇನೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸಲಾಗುವುದು ಎಂದರಲ್ಲದೆ, ಅರಣ್ಯ, ತೋಟಗಾರಿಕೆ, ಕೃಷಿ ಇಲಾಖೆಗಳ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ…

Read More

 ತುಮಕೂರು:       ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದಲ್ಲಿ ಹಣಕಾಸು ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಮಂಡಿಸಿರುವ ಮಧ್ಯಂತರ ಬಜೆಟ್ ಯುವಕರ, ನಿರುದ್ಯೋಗಿಗಳ ಹಾಗೂ ರೈತರ ವಿರೋಧಿ ಬಜೆಟ್ ಆಗಿದೆ ಎಂದು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷ ಡಾ.ಇಂತಿಯಾಜ್ ಅಹಮದ್ ಆರೋಪಿಸಿದ್ದಾರೆ.       ಕೇಂದ್ರದ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಇಂದು ಮಂಡನೆಯಾಗಿರುವ ಕೇಂದ್ರ ಬಜೆಟ್ ಮುಂಬರುವ ಲೋಕಸಭಾ ಚುನಾವಣೆ ದೃಷ್ಠಿಯಲ್ಲಿಟ್ಟುಕೊಂಡು ಮಾಡಲಾಗಿದೆ. ಈ ಬಜೆಟ್‍ನಲ್ಲಿ ನಿರುದ್ಯೋಗ ಯುವಕರಿಗೆ ಉದ್ಯೋಗ ಕಲ್ಪಿಸುವ ಯಾವುದೇ ಯೋಜನೆ ಜಾರಿಗೆ ತಂದಿಲ್ಲ, ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರಗೊಳ್ಳುವ ಲಕ್ಷಣಗಳು ಹೆಚ್ಚಾಗಲಿವೆ ಎಂದಿದ್ದಾರೆ.        ದೇಶದ ಬೆನ್ನೆಲುಬಾಗಿರುವ ರೈತರ ಸಾಲಮನ್ನಾ ಹುಸಿಗೊಳಿಸಿರುವ ಈ ಬಜೆಟ್‍ನಲ್ಲಿ 5 ಎಕರೆಗಿಂತ ಕಡಿಮೆ ಭೂಮಿ ಇರುವ ರೈತರಿಗೆ ವಾರ್ಷಿಕವಾಗಿ 6 ಸಾವಿರ ರೂ. ಅವರ ಖಾತೆಗೆ ಜಮೆ ಮಾಡುವ ಮೂಲಕ ರೈತರ ಮೂಗಿಗೆ ತುಪ್ಪ ಸವರಲು…

Read More

 ತುಮಕೂರು :       ಯಾವುದೇ ಕೌಟುಂಬಿಕ ಕಲಹಗಳಿಗೆ ಬೇಗ ನ್ಯಾಯ ಸಿಗಬೇಕು. ಇಲ್ಲವಾದಲ್ಲಿ ಕಲಹಗಳ ನಡುವಿನ ಅಂತರ ಹೆಚ್ಚಾಗಿ ಭಿನ್ನಾಬಿಪ್ರಾಯಕ್ಕೆ ಕಾರಣವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬದಾಮಿಕರ್ ಅಭಿಪ್ರಾಯಪಟ್ಟರು.       ಜಿಲ್ಲಾ ಕೌಟುಂಬಿಕ ನ್ಯಾಯಾಲಯಗಳ ಆವರಣದಲ್ಲಿಂದು 1ನೇ ಅಧಿಕ ಪ್ರಧಾನ ಕೌಟುಂಬಿಕ ನ್ಯಾಯಾಲಯ ಉದ್ಘಾಟಿಸಿ ಅವರು ಮಾತನಾಡುತ್ತಾ, ಕೌಟುಂಬಿಕ ಪ್ರಕರಣಗಳು ಎಷ್ಟು ಕಡಿಮೆಯಾಗುತ್ತವೆಯೋ ಅಷ್ಟು ಸಮಾಜದ ಏಳ್ಗೆಯಾಗುತ್ತದೆ. ಯಾವುದೇ ಕಕ್ಷಿದಾರರಿಗೆ ಕೌಟುಂಬಿಕ ನ್ಯಾಯಾಲಯದಲ್ಲಿ ಬೇಗ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ ಈ ಕೌಟುಂಬಿಕ ನ್ಯಾಯಾಲಯವನ್ನು ಸ್ಥಾಪಿಸಲಾಗಿದ್ದು, ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಮನವಿ ಮಾಡಿದರು.       ಕೌಟುಂಬಿಕ ನ್ಯಾಯಾಲಯದ 1ನೇ ಅಧಿಕ ಪ್ರಧಾನ ನ್ಯಾಯಾಧೀಶೆ ಉಷಾರಾಣಿ ಮಾತನಾಡಿ, ಮನಸ್ಸಿದ್ದರೆ ಮಾರ್ಗ ಎಂಬಂತೆ ಯಾವುದೇ ಕೆಲಸ ಕಷ್ಟವಾದರೂ ಸಹ ಮನಸಾರೆ ಸಂತೋಷದಿಂದ ಆ ಕೆಲಸವನ್ನು ಮಾಡಬೇಕು. ಕೌಟುಂಬಿಕ ನ್ಯಾಯಾಲಯಕ್ಕೆ ಬರುವ ಕಕ್ಷಿದಾರರ ಕಲಹಗಳನ್ನು ಬೇಗನೆ ಇತ್ಯರ್ಥಪಡಿಸಲು ತಮ್ಮೆಲ್ಲರ ಸಹಕಾರ…

Read More

 ತುಮಕೂರು :       ದೆಹಲಿಯಲ್ಲಿ ಕಳೆದ ಜನವರಿ 26ರಂದು ನಡೆದ ಗಣರಾಜ್ಯೋತ್ಸವ ದಿನದಂದು ಎನ್‍ಸಿಸಿ ಶಿಬಿರವನ್ನು ಪ್ರತಿನಿಧಿಸಿ ಭಾಗವಹಿಸುವ ಮೂಲಕ ಕು.ಕವನ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.              ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ|| ಕೇಶವ್ ರಾಜ್ ಹಾಗೂ ಡಾ|| ಆಶಾ ದಂಪತಿಗಳ ಪುತ್ರಿಯಾಗಿರುವ ಕವನ ಅವರು ನಗರದ ಬಿಷಪ್ ಸಾರ್ಜೆಂಟ್ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಎನ್‍ಸಿಸಿ ಕೆಡೆಟ್‍ಗೆ ಆಯ್ಕೆಯಾದ ಜಿಲ್ಲೆಯ ಏಕೈಕ ಬಾಲಕಿಯಾಗಿರುವ ಇವರು ಎನ್‍ಸಿಸಿ ಕೆಡೆಟ್‍ನಲ್ಲಿ ಭಾಗವಹಿಸುವ ಕನಸನ್ನು ಕಂಡಿದ್ದರು. ರಾಷ್ಟ್ರ ಮಟ್ಟದ ಈ ಎನ್‍ಸಿಸಿ ಶಿಬಿರಕ್ಕೆ ಕರ್ನಾಟಕ-ಗೋವಾ ವಿಭಾಗದಿಂದ ಒಟ್ಟು 106 ಎನ್‍ಸಿಸಿ ಕೆಡೆಟ್‍ಗಳು ಪ್ರತಿಧಿಸಲು ಆಯ್ಕೆಯಾಗಿ ಪ್ರಧಾನಮಂತ್ರಿ ಬ್ಯಾನರ್ ಹಾಗೂ ಟ್ರೋಫಿ ಪ್ರಶಸ್ತಿ ಪಡೆದಿರುತ್ತಾರೆ. ಕರ್ನಾಟಕವು 15 ವರ್ಷಗಳ ನಂತರ ಈ ಪ್ರಶಸ್ತಿಯನ್ನು ಪಡೆದಿರುವುದು ಸಂತಸದ ವಿಚಾರವಾಗಿದೆ.

Read More

ತುಮಕೂರು:       ಯಾರು ಅಹಂಕಾರವನ್ನು ನಿರಾಕರಿಸುತ್ತಾನೋ ಅವನೇ ನಿಜವಾದ ಶರಣ ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು.        ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಮತ್ತು ತಾಲೂಕು ಮಡಿವಾಳ ಜನಸಂಘಗಳ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       ಮಾಚಿದೇವರು 12ನೇ ಶತಮಾನದಲ್ಲಿ ನಡೆದ ವಚನ ಕ್ರಾಂತಿಯಲ್ಲಿ ಮುಂಚೂಣಿಯಲ್ಲಿದ್ದವರು. ಸಮಾಜವನ್ನು ಸರಿದಾರಿಗೆ ತಂದ ಮಹಾ ದಾರ್ಶನಿಕರು. ಶಿಕ್ಷಣ ಪಡೆದವರು ಮಾತ್ರ ಸಬಲರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಮಡಿವಾಳ ಜನಾಂಗದವರು ವಿದ್ಯಾವಂತರಾಗಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡುವಂತೆ ತಿಳಿಸಿದರು. ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ಸೌಲಭ್ಯ ದೊರೆಯು ವಂತೆ ಮಾಡಲು ಪ್ರಯತ್ನಿಸುತ್ತನೆ ಎಂದರು.       ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಮಾತನಾಡಿದ ಹಿರೇಮಠದ ಶ್ರೀ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಅವರು ಮಡಿವಾಳ ಮಾಚಿದೇವ…

Read More