Author: News Desk Benkiyabale

ತುಮಕೂರು :       2020ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ 2020ರ ಮಾರ್ಚ್ 4ರಿಂದ 23ರವರೆಗೆ ನಡೆಯಲಿದ್ದು, ತುಮಕೂರು ಜಿಲ್ಲೆಯಲ್ಲಿ ಈ ಹಿಂದೆ ಘಟಿಸಿರುವಂತಹ ಘಟನೆಗಳು ಮರುಕಳಿಸದಂತೆ ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.       ಅವರು ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ತುಮಕೂರು ಜಿಲ್ಲಾ ಖಜಾನೆಯಿಂದ ತುಮಕೂರು, ಗುಬ್ಬಿ, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ ಮತ್ತು ಕುಣಿಗಲ್ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ 24 ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳು ರವಾನೆ ಆಗಲಿವೆ. ಅದೇರೀತಿ ಮಧುಗಿರಿ ಉಪ ಖಜಾನೆಯಿಂದ ಮಧುಗಿರಿ, ಶಿರಾ, ಪಾವಗಡ ಹಾಗೂ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ 10 ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳು ಪರೀಕ್ಷಾ ಕೇಂದ್ರಗಳಿಗೆ ರವಾನೆ ಆಗಲಿವೆ. ಎರಡು ಖಜಾನೆಗಳಲ್ಲಿ ದಿನದ 24ಗಂಟೆ ಕಾರ್ಯನಿರ್ವಹಿಸುವ ಸಿಸಿ…

Read More

ತುಮಕೂರು :       ರಾಜಕೀಯದಲ್ಲಿ ಧರ್ಮ ಬೆರೆಯಬಾರದು, ಧರ್ಮದ ಮಾರ್ಗದರ್ಶನ ರಾಜಕೀಯಕ್ಕೆ ಇರಬೇಕು ಸೋಮೇಕಟ್ಟೆ ಕಾಡಸಿದ್ಧೇಶ್ವರ ಮಠದ ಅಧ್ಯಕ್ಷ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.       ಮಠದ ಆವರಣದಲ್ಲಿ ಆಯೋಜಿಸಿದ್ದ ಧರ್ಮ ಸಭೆಯಲ್ಲಿ ಪ್ರವಚನ ನೀಡುತ್ತಾ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ಅಧಿಕಾರದಲ್ಲಿ ನ್ಯೂನತೆ ಬರದಂತೆ ದಯೆ ಪಾಲಿಸಿ ಎಂದು ಕೇಳಿಕೊಂಡರು. ಅವರ ಆಶಯದಂತೆ ಕಾಡಸಿದ್ಧೇಶ್ವರರನ್ನು ಸ್ಮರಿಸಿದ್ದೇವೆ ಎಂದರು.       ವಸತಿ ಸಚಿವ ವಿ.ಸೋಮಣ್ಣ, ಯಡಿಯೂರಪ್ಪ ಅವರು ಮೂರು ವರ್ಷ ನಾಲ್ಕು  ತಿಂಗಳು ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ಅವರ ಆಡಳಿತದಲ್ಲಿ ರಾಜ್ಯವು ದೇಶದಲ್ಲಿಯೇ ಸಂಪದ್ಭರಿತ ರಾಜ್ಯವಾಗಲಿ ಎಂದು ಆಶೀರ್ವದಿಸಲು ನಾವು ಕೇಳಿಕೊಳ್ಳುತ್ತೇವೆ ಎಂದು ಹೇಳಿದರು.      ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಈ ಮಠವು ಹಿಂದಿನಿಂದಲೂ ಅನೇಕ ಸಂಸ್ಥಾನಗಳಿಗೆ ಮಾರ್ಗದರ್ಶನ ಮಾಡಿದೆ. ಸಮಾಜದಲ್ಲಿ ಸೌಹಾರ್ದತೆಯಿಂದ ಬದುಕಲು ಕಲಿಸುತ್ತಿದೆ. ಅನ್ನ ಮತ್ತು ಅಕ್ಷರ ದಾಸೋಹ ಮಾಡುತ್ತಿದೆ. ಜನರ ಸಂಕಷ್ಟ ನಿವಾರಿಸಲು ಶ್ರಮಿಸುತ್ತಿದೆ. ಧಾರ್ಮಿಕ,…

Read More

ತುಮಕೂರು :       ಒಕ್ಕಲಿಗ ಹಾಗೂ ಹಲವು ಸಮುದಾಯಗಳ ಆರಾಧ್ಯ ದೇವ ಕಾಲಬೈರವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ಮಹಾ ಕುಂಬಾಭಿಷೇಕ ಮಹೋತ್ಸವವನ್ನು ಮಾ.2ರಿಂದ ಮಾ.10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಆದಿಚುಂಚನಗಿರಿ ಮಠಾಧೀಶ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.       ತಾಲ್ಲೂಕಿನ ಮಂಚಕಲ್ ಕುಪ್ಪೆಯಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ತುಮಕೂರು ಜಿಲ್ಲಾ ಶಾಖೆಯಲ್ಲಿ ಜಾತ್ರಾ ಮಹೋತ್ಸವ ಹಾಗೂ ಮಹಾಕುಂಬಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.       1800 ವರ್ಷಗಳ ಹಿಂದೆ ನಾಥ ಪರಂಪರೆಗೆ ಭದ್ರ ಬುನಾದಿಯನ್ನು ಹಾಕಿದ ಗೋರಕ್ಷ ನಾಥ ಅವರು ಜ್ಞಾನ ದೀಕ್ಷೆಯನ್ನು ಪಡೆದ ಜಾಗ ಆದಿ ಚುಂಚನಗಿರಿ, ಇಲ್ಲಿಯೇ ಭಗವಾನ್ ಈಶ್ವರರು ಧ್ಯಾನ ಮಾಡಿದ್ದರು ಎನ್ನುವ ಪ್ರತೀತಿ, ನಂಬಿಕೆ ನಮ್ಮಲ್ಲಿ ಇದೆ, ಅವಿದ್ಯಾವಂತರಿಗೆ ರಾಮಾಯಣ, ಮಹಾಭಾರತ ಗೊತ್ತಿದೆ ಆದರೆ ವಿದ್ಯಾವಂತರಿಗೆ ನಮ್ಮ ಪರಂಪರೆಯ ಇತಿಹಾಸವೇ ಗೊತ್ತಿಲ್ಲದಿರುವುದು ವಿಪರ್ಯಾಸ ಎಂದರು.       ಇತಿಹಾಸವನ್ನು ತಿಳಿದುಕೊಳ್ಳಲು ಇಂದಿನ ಯುವ…

Read More

ತುಮಕೂರು:         ತುಮಕೂರು ವಲಯದ ಅಬಕಾರಿ ನಿರೀಕ್ಷಕರು ಮತ್ತು ಸಿಬ್ಬಂದಿ ಫೆಬ್ರುವರಿ 14 ರಂದು ರಾತ್ರಿ 9 ಗಂಟೆ ಸಮಯದಲ್ಲಿ ಹೊನ್ನುಡಿಕೆ ಹ್ಯಾಂಡ್‍ಪೋಸ್ಟ್ ಬಳಿ ರಸ್ತೆ ಗಾವಲು ನಡೆಸುವಾಗ ಬಜಾಜ್ ಡಿಸ್ಕವರಿ ವಾಹನದಲ್ಲಿ ಅಕ್ರಮವಾಗಿ 600 ಗ್ರಾಂ ಒಣ ಗಾಂಜಾವನ್ನು ಸಾಗಾಣಿಕೆ ಮಾಡುತ್ತಿದ್ದ ಗೂಳೂರು ಹೋಬಳಿಯ ಚೋಳಂಬಳ್ಳಿ ಗ್ರಾಮದ ಸುಮಾರು 35 ವರ್ಷದ ರಿಜ್ವಾನ್ ಖಾನ್ ಬಿನ್ ನೂರ್ ಖಾನ್ ಎಂಬುವನನ್ನು ಬಂಧಿಲಾಗಿದೆ.       ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಹಾಗೂ ಜಿಲ್ಲಾ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರು ಇವರ ಸೂಚನೆ ಮೇರೆಗೆ ರಿಜ್ವಾನ್ ಖಾನ್ ಅನ್ನು ಬಂಧಿಸಿ 600 ಗ್ರಾಂ ಒಣ ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಜಿಲ್ಲಾ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ಹೆಚ್.ಜಿ.ವಿರೂಪಾಕ್ಷಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತುಮಕೂರು :       ನಗರದ 15ನೇ ವಾರ್ಡಿನಲ್ಲಿರುವ ಹಳೆ ಎನ್‍ಇಪಿಎಸ್ ಹಿಂಭಾಗದ ಉದ್ಯಾನದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಪಾಲಿಕೆ ಮೇಯರ್ ಫರೀಧಾ ಬೇಗಂ, ಉಪಮೇಯರ್ ಶಶಿಕಲಾ , ಆಯುಕ್ತ ಟಿ.ಭೂಬಾಲನ್ ಸೇರಿದಂತೆ ಸ್ಥಳೀಯರು ಸ್ವಚ್ಛಯಾ ಕಾರ್ಯದಲ್ಲಿ ಭಾಗವಹಿಸಿದ್ದರು.       ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್ ಫರೀಧಾ ಬೇಗಂ ವಾರ್ಡಿನ ಸದಸ್ಯರು ಸೇರಿದಂತೆ ಆಯುಕ್ತರೊಂದಿಗೆ ಸೋಮವಾರ ಚರ್ಚೆ ಮಾಡಿದ ರೀತಿಯಲ್ಲಿ ಸಾವರ್ಕರ್ ಉದ್ಯಾನವನದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಅಕ್ಕಪಕ್ಕದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದ ಧೂಳು ಹೆಚ್ಚಾಗುತ್ತಿದ್ದು, ಸ್ಥಳೀಯರಿಗೆ ತೊಂದರೆಯಾಗುತ್ತಿದೆ. ಅದಕ್ಕಾಗಿ ಪ್ರಾಯೋಗಿಕವಾಗಿ ಉದ್ಯಾನವನ ಸ್ವಚ್ಛಗೊಳಿಸಲು ತೀರ್ಮಾನ ಮಾಡಿದಂತೆ ಕಾರ್ಯ ಮಾಡಲಾಗುತ್ತಿದೆ. ಇಂದು ಪ್ರಾರಂಭವಾದ ಕಾರ್ಯ ಎಂದಿಗೂ ನಿಲ್ಲದಂತೆ ಮುಂದುವರೆಸಬೇಕು ಎಂದು ತಿಳಿಸಿದರು.       ಎರಡು ತಿಂಗಳೊಳಗೆ ಉದ್ಯಾನವನವನ್ನು ಯಥಾಸ್ಥಿತಿಗೆ ತಂದು ಇಲ್ಲಿ ಮೊದಲಿನಂತೆ ವಾಕಿಂಗ್ ಮಾಡಲು, ಮಕ್ಕಳು ಆಟವಾಡಲು ಅನುಕೂಲವಾಗುವಂತೆ ಮಾಡಲಾಗುತ್ತದೆ. ಇದಕ್ಕೆ ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ. ಇಂದು…

Read More

ತುಮಕೂರು :       ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತದಾನದ ಅರಿವು ಕುರಿತು ಜಿಲ್ಲೆಯಲ್ಲಿ ಕೈಗೊಂಡಿರುವ ಸ್ವೀಪ್ ಕಾರ್ಯಕ್ರಮಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಕಚೇರಿಯ ರಾಜ್ಯಮಟ್ಟದ ಸ್ವೀಪ್ ಸಂಚಾಲಕರಾದ ಪಿ.ಎಸ್.ವಸ್ತ್ರದ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.       ಜಿಲ್ಲಾ ಪಂಚಾಯತ್ ಕಚೇರಿಯಲ್ಲಿರುವ ಮಿನಿ ಸಭಾಂಗಣದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆವಹಿಸಿ ಜಿಲ್ಲೆಯಲ್ಲಿ ಕೈಗೊಂಡಿರುವ ಸ್ವೀಪ್ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.        ಲೋಕಸಭಾ ಸಾರ್ವತ್ರಿಕ-2019ರ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ವಿಭಿನ್ನ ರೀತಿಯ ಪ್ರಚಾರ ಕಾರ್ಯಕ್ರಮಗಳು ರಾಜ್ಯಕ್ಕೆ ಮಾದರಿಯಾಗಿವೆ. ಈ ರೀತಿಯ ಸ್ವೀಪ್ ಕಾರ್ಯದಿಂದಾಗಿ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಮತದಾನವಾಗಿದೆ ಎಂದು ಅವರು ತಿಳಿಸಿದರು.       ಜಿಲ್ಲೆಯಲ್ಲಿ 1-1-2020ಕ್ಕೆ 18 ವರ್ಷ ತುಂಬಿರುವವರು ಮತದಾರರ ಪಟ್ಟಿಗೆ ಕಡ್ಡಾಯವಾಗಿ ತಮ್ಮ ಹೆಸರನ್ನು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಯುವ ಮತದಾರರನ್ನು ನೋಂದಾಯಿಸುವಲ್ಲಿ ಪಿಯುಸಿ, ಪ್ರಥಮದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳ ಪಾತ್ರ ಅತಿ ದೊಡ್ಡದು. ಈಗಾಗಲೇ ಕಾಲೇಜುಗಳಲ್ಲಿ…

Read More

ತುಮಕೂರು :       ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದನಗಳ ಜಾತ್ರೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಬಹುಮಾನ ನೀಡಲು ಉತ್ತರ ರಾಸುಗಳ ಆಯ್ಕೆ ಪ್ರಕ್ರಿಯೆ ನಡೆಯಿತು.       ಉತ್ತಮ ರಾಸುಗಳ ಆಯ್ಕೆಯಲ್ಲಿ ಹೋರಿಗಳು ಮತ್ತು ಎತ್ತುಗಳು ಎಂದು 2 ವಿಭಾಗಗಳಾಗಿ ವಿಂಗಡಿಸಲಾಗಿತ್ತು. ಈ ಪೈಕಿ ಹೋರಿಗಳಲ್ಲಿ 5 ವಿಭಾಗ ಹಾಗೂ ಎತ್ತುಗಳಲ್ಲಿ 5 ವಿಭಾಗದಂತೆ ಒಟ್ಟು 10 ರೀತಿಯಲ್ಲಿ ರಾಸುಗಳನ್ನು ಆಯ್ಕೆ ಪ್ರಕ್ರಿಯೆಗೆ ಒಳಪಡಿಸಲಾಯಿತು.       ಹೋರಿಗಳ ವಿಭಾಗದಲ್ಲಿ ಹಾಲು ಹಲ್ಲು, 2 ಹಲ್ಲು, 4 ಹಲ್ಲು, 6 ಹಲ್ಲು ಹಾಗೂ ಬಾಯಿಗೂಡಿದ ಹೋರಿಗಳು ಎಂದು ವಿಂಗಡಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.  ಎತ್ತುಗಳಲ್ಲೂ ಸಹ ತಳಿ, ಲಕ್ಷಣಗಳು, ಮುಖ ಛಾಯೆ, ಮೈಬಣ್ಣ, ನಡಿಗೆ, ಕಾಲು ಎಲ್ಲವನ್ನೂ ಗಮನಿಸಿ ಬಹುಮಾನಕ್ಕೆ ರಾಸುಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಉತ್ತಮ ರಾಸುಗಳ ಆಯ್ಕೆ ಸಮಿತಿಯ ಕೋರಿ ಮಂಜಣ್ಣ ತಿಳಿಸಿದರು.    …

Read More

ತುಮಕೂರು :       ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳಾಗಿರುವ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ತುಮಕೂರು ಜಿಲ್ಲೆಯಲ್ಲಿ ಫೆಬ್ರವರಿ 19ರಂದು ಕೈಗೊಂಡಿರುವ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮದ ವಿವರ.       ಮಾನ್ಯ ಮುಖ್ಯಮಂತ್ರಿಗಳು ಬೆಳಿಗ್ಗೆ 8 ಗಂಟೆಗೆ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ (ಹೆಲಿಕ್ಯಾಪ್ಟರ್) ಮೂಲಕ ಪ್ರಯಾಣ ಬೆಳೆಸಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಹೆಲಿಪ್ಯಾಡ್‍ಗೆ 8-45ಕ್ಕೆ ಆಗಮಿಸುವರು. ಮುಖ್ಯಮಂತ್ರಿಗಳು ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದ ವತಿಯಿಂದ ಆಯೋಜಿಸಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು.          ಬೆಳಿಗ್ಗೆ 9-30ಕ್ಕೆ ನೊಣವಿನಕೆರೆ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಮಾನ್ಯ ಮುಖ್ಯಮಂತ್ರಿಗಳು ಮರುಪ್ರಯಾಣ ಮಾಡುವರು ಎಂದು ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತುಮಕೂರು :       ಒಂದು ಕುಟುಂಬ ನಿರ್ವಹಿಸುವಲ್ಲಿ ಸ್ತ್ರೀ-ಪುರುಷರ ಪಾತ್ರ ಬಹಳ ಮಹತ್ವದ್ದಾಗಿದ್ದು, ಕುಟುಂಬದ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಇಬ್ಬರೂ ಸಂಸ್ಕಾರಯುತ ಜೀವನ ಸಾಗಿಸಿ, ಆತ್ಮಾವಲೋಕನದ ಮೂಲಕ ತಮ್ಮ ದುಷ್ಚಟಗಳಿಂದ ದೂರವಿರಲು ಸಾಧ್ಯವಿದೆ ಎಂದು ಮಹಾಪೌರರಾದ ಫರಿದಾ ಬೇಗಂ ತಿಳಿಸಿದರು.        ಅವರು ಇಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಜಿಲ್ಲಾಡಳಿತ, ನೆಹರು ಯುವಕೇಂದ್ರ, ತುಮಕೂರು ಇವರ ಸಹಯೋಗದಲ್ಲಿ ತುಮಕೂರು ಬಾಲಭವನ ಸಭಾಂಗಣದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜಿಲ್ಲಾ ಮಟ್ಟದ ಜನಜಾಗೃತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.       ವಿಭಿನ್ನ ಸಂಸ್ಕøತಿ, ಸಂಪ್ರದಾಯಗಳ ದೇಶವಾಗಿರುವ ಭಾರತದಲ್ಲಿ ಏಕಸ್ವಾಮ್ಯತೆಯಿಂದ ಬದುಕಿರುವ ನಾವು ಪಾಶ್ಚತ್ಯ ದೇಶದ ಅನುಕರಣೆಯಿಂದ ಧೂಮಪಾನ, ಮದ್ಯಪಾನದಂತಹ ದುಷ್ಚಟಗಳ ದಾಸರಾಗಿದ್ದೇವೆ. ಸಂತೋಷ ಮತ್ತು ದುಃಖಗಳ ಸಂದರ್ಭಗಳಲ್ಲಿಯೂ ಸಹ ಮದ್ಯಪಾನ ಮಾಡಿ ಸಂಭ್ರಮಿಸುವುದು ಪಾಶ್ಚತ್ಯ ದೇಶದ ಸಂ‍ಸ್ಕೃತಿಯಾಗಿದೆ. ಈ ಸಂ‍ಸ್ಕೃತಿ ನಮ್ಮದಲ್ಲ.…

Read More

      ‘ಜಾತ್ರೆ ಎಂದರೆ ದೇವರ ಉತ್ಸವ, ರಥೋತ್ಸವ, ಮೆರವಣಿಗೆ, ವಿಶೇಷ ಪೂಜೆ ಸೇರಿದಂತೆ ಶ್ರದ್ಧಾಭಕ್ತಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಜತೆಗೆ ನೆರೆದ ಭಕ್ತರ ಮನರಂಜನೆಗಾಗಿ ನಾಟಕ, ನೃತ್ಯ, ಗಾಯನ, ರಸಮಂಜರಿ ವಿಭಿನ್ನ ರೀತಿಯ ಸಾಂಸ್ಕøತಿಕ ಕಾರ್ಯಕ್ರಮ ಇತ್ಯಾದಿ ತಟ್ಟನೆ ನೆನಪಿಗೆ ಬರುತ್ತದೆ. ಆದರೆ, ತುಮಕೂರಿನ ಸಿದ್ಧಗಂಗಾ ಪವಿತ್ರ ಕ್ಷೇತ್ರದಲ್ಲಿ ನಡೆಯುವ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇದಕ್ಕೆ ವಿಭಿನ್ನವಾಗಿದೆ. ‘ರೈತರಿಂದ ರೈತರಿಗಾಗಿ’ ಸಿದ್ಧಗಂಗೆ ಜಾತ್ರೆ ನಡೆಯುತ್ತದೆ. 116 ವರ್ಷ ಇತಿಹಾಸ ಹೊಂದಿರುವ ಸಿದ್ಧಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ನಾಡಿನ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಮಹಾಶಿವರಾತ್ರಿಯ ಮರುದಿನ ರಥೋತ್ಸವ ಜರುಗಿಸುವುದು. ಆರಂಭದಿಂದಲೂ ನಡೆದು ಬರುತ್ತಿರುವ ಸಂಪ್ರದಾಯ.       ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ತೆರೆಯಲಾಗಿದ್ದ ರಾಜ್ಯ ಸರ್ಕಾರದ ಸಾಧನೆ ಮತ್ತು ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗಿದೆ.       ಮಳಿಗೆಯನ್ನು…

Read More