ತುಮಕೂರು : ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಅವರು ಇಂದು ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮ ಪಂಚಾಯತಿಗೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರನ್ನು ಹೊರತುಪಡಿಸಿ ಉಳಿದ ಸಿಬ್ಬಂದಿಗಳಾದ ದ್ವಿತೀಯ ದರ್ಜೆ ಲೆಕ್ಕ ಸಹಾಯಕ, ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಜವಾನ ಸೇರಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಚೇರಿ ಕೆಲಸಕ್ಕೆ ಹಾಜರಾಗದಿರುವುದು ಕಂಡು ಬಂದಿದ್ದರಿಂದ ಸಂಬಂಧಿಸಿದವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲು ಉಪಕಾರ್ಯದರ್ಶಿ (ಅಭಿವೃದ್ಧಿ) ಟಿ.ಕೆ. ರಮೇಶ್ ಅವರಿಗೆ ಸೂಚಿಸಿದರು. ಅಲ್ಲದೆ ಸದರಿ ಗ್ರಾಮ ಪಂಚಾಯಿತಿಯಲ್ಲಿ ಸಕಾಲ ಯೋಜನೆಯ ನಾಮಫಲಕವನ್ನು ಅಳವಡಿಸದೇ ಇರುವುದನ್ನು ಗಮನಿಸಿ ಕೂಡಲೇ ಅಳವಡಿಸುವಂತೆ ಪಂಚಾಯತಿ ಕಾರ್ಯದರ್ಶಿಗೆ ಸೂಚಿಸಿದರಲ್ಲದೆ ಗ್ರಾಮ ಪಂಚಾಯಿತಿಯ ಹಾಜರಾತಿ ವಹಿ ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯ 1 ರಿಂದ 7 ರಿಜಿಸ್ಟರ್ಗಳನ್ನು ಪರಿಶೀಲಿಸಿದರು. ನಂತರ ಕೂಲಿ ಕಾರ್ಮಿಕರ ಆಧಾರ್ ನಂಬರ್ಗಳನ್ನು ಬ್ಯಾಂಕ್ಗೆ ಲಿಂಕ್ ಮಾಡಿರುವ ಪ್ರಗತಿ ಕೇವಲ…
Author: News Desk Benkiyabale
ತುಮಕೂರು : ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರು ನಗರವನ್ನು ಡೆನ್ಮಾರ್ಕ್ ದೇಶದ ಅಲ್ಬೋರ್ಗ್ ಮಾದರಿಯಲ್ಲಿ ಅತ್ಯಾಧುನಿಕ ಮೂಲ ಡಿಜಿಟಲ್ ಸೌಕರ್ಯವಿರುವ ಮಹಾನಗರವನ್ನಾಗಿ ಅಭಿವೃದ್ಧಿಪಡಿಸಲು ಒತ್ತು ನೀಡಿ, ಯೋಜನೆ ಅನುಷ್ಠಾನ ಮತ್ತು ನಿರ್ವಹಣೆಯನ್ನು ಕಾರ್ಯ ನಿರ್ವಹಣೆ ಸಮಿತಿ ವತಿಯಿಂದ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ನಗರ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು. ಡೆನ್ಮಾರ್ಕ್ ದೇಶದ ಕನ್ಸಲ್ಟೆಂಟ್ ಮುಖ್ಯಸ್ಥರಾಗಿರುವ ಜೆಟ್ಟೆ ಬೆಜ್ರೆಮ್ ಅವರು ಇಂದು ನಗರದಲ್ಲಿರುವ ಸ್ಮಾರ್ಟ್ ಸಿಟಿ ಲಿಮಿಟೆಡ್ನ ಕಚೇರಿಯಲ್ಲಿ ಡೆನ್ಮಾರ್ಕ್ ತಂಡ ಮತ್ತು ಕಾರ್ಯನಿರ್ವಾಹಣಾ ಸಮಿತಿ ಸಭೆಯ ಮುಖ್ಯಸ್ಥರು ಮತ್ತು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೋನ ವಂಶಿಕೃಷ್ಣ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಟಿ. ಭೂಬಾಲನ್ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ತುಮಕೂರು ತೆಂಗು ಬೆಳೆಯುವ ಕಲ್ಪತರ ನಾಡಾಗಿದ್ದು ಶಿಕ್ಷಣದ ಬೀಡಾಗಿದೆ. ಸ್ಮಾರ್ಟ್ ರಸ್ತೆ,…
ತುಮಕೂರು : ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರು ಹಾಗೂ ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರು ಜಿಲ್ಲೆಯ ತುರುವೇಕೆರೆ, ಕುಣಿಗಲ್, ಗುಬ್ಬಿ, ಚಿಕ್ಕನಾಯಕನಹಳ್ಳಿ ಹಾಗೂ ತಿಟಪೂರು ತಾಲೂಕಿನ ವಿವಿಧ ಗ್ರಾಮಗಳ ಮನೆಗಳಿಗೆ ಇಂದು ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು. ಜಿಲ್ಲೆಯ ತುರುವೇಕೆರೆ ತಾಲೂಕಿನ ಜಿ.ದೊಡ್ಡೇರಿ, ಶೆಟ್ಟಿಗೊಂಡನಹಳ್ಳಿ, ಗುಬ್ಬಿ ತಾಲೂಕಿನ ಕಲ್ಲೂರು, ನಿಟ್ಟೂರು, ತಿಪಟೂರು ತಾಲೂಕಿನ ಕೆ.ಬಿ ಕ್ರಾಸ್, ಚಿಕ್ಕನಾಯಕನಹಳ್ಳಿ ತಾಲೂಕಿನ ಜೆ.ಸಿ.ಪುರ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸಿದರು. ವೀಕ್ಷಕರಾದ ಮಣಿವಣ್ಣನ್ ಅವರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಮನೆಯ ಸದಸ್ಯರೆಲ್ಲರ ಹೆಸರು ಸೇರ್ಪಡೆಯಾಗಿರುವ, ಮರಣ ಹೊಂದಿದವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಿರುವ ಹಾಗೂ ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಸ್ಥಳಾಂತರಗೊಂಡಿರುವ ಮತದಾರರ ಹೆಸರನ್ನು ಪಟ್ಟಿಯಲ್ಲಿ…
ತುಮಕೂರು: ಮಹಾ ನಗರಪಾಲಿಕೆಯ ನೂತನ ಮೇಯರ್ ಆಗಿ 13ನೇ ವಾರ್ಡ್(ಕುರಿಪಾಳ್ಯ)ನ ಫರೀದ ಬೇಗಂ ಹಾಗೂ ಉಪ ಮೇಯರ್ ಆಗಿ 33(ಕ್ಯಾತ್ಸಂದ್ರದ ಚೌಡೇಶ್ವರ ನಗರ)ನೇ ವಾರ್ಡ್ನ ಶಶಿಕಲಾ ಗಂಗಹನುಮಯ್ಯ ಅವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕಳೆದ ವರ್ಷದಂತೆ ಮತ್ತೊಮ್ಮೆ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳು ಮಹಿಳೆಯರಿಗೊಲಿದಿವೆ. ಬೆಂಗಳೂರು ಪ್ರಾದೇಶಿಕ ಆಯುಕ್ತರು ಹಾಗೂ ಪಾಲಿಕೆ ಚುನಾವಣಾಧಿಕಾರಿ ಡಾ|| ಎನ್.ವಿ. ಪ್ರಸಾದ್ ಅವರು ಮೇಯರ್, ಉಪ ಮೇಯರ್ ಹಾಗೂ 4 ವಿವಿಧ ಸ್ಥಾಯಿ ಸಮಿತಿಗಳಿಗೆ ಗುರುವಾರ ಪಾಲಿಕೆ ಸಭಾಂಗಣದಲ್ಲಿ ನಡೆಸಿದ ಚುನಾವಣೆ ಪ್ರಕ್ರಿಯೆಯಲ್ಲಿ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಈ ಅವಿರೋಧ ಆಯ್ಕೆ ನಡೆಯಿತು. ಚುನಾವಾಣಾಧಿಕಾರಿಗಳು ಬೆಳಿಗ್ಗೆ 11.30 ಗಂಟೆಗೆ ಸರಿಯಾಗಿ ಹಾಜರಿದ್ದ ನಗರ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಹಾಗೂ 35 ವಾರ್ಡ್ಗಳ ಪಾಲಿಕೆ ಸದಸ್ಯರು ಸೇರಿ ಒಟ್ಟು 38 ಜನರಿಂದ ಹಾಜರಾತಿ ಪಡೆದು ಚುನಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸಿದರು. ಮೊದಲಿಗೆ…
ತುಮಕೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಕ್ಕೆ ಸಂಬಂಧಿಸಿದಂತೆ ಹೆಚ್ಚಿನ ನಿಗಾವಹಿಸಿ ಕೋಟ್ಪಾ ಕಾಯ್ದೆಯಡಿ ಹೆಚ್ಚಿನ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಕೋನ ವಂಶಿಕೃಷ್ಣ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ತಂಬಾಕಿನಿಂದಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾನೂನಿನ ಬಗ್ಗೆ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇನ್ನೂ ಹೆಚ್ಚಿನ ರೀತಿಯಲ್ಲಿ ಕೋಟ್ಪಾ ಕಾರ್ಯಾಚರಣೆ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ದಾಖಲಿಸಿಕೊಳ್ಳುವಂತೆ ಅವರು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕ ಮಾತನಾಡಿ,…
ತುಮಕೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ “ಎ” ದರ್ಜೆಯ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ “ಸಪ್ತಪದಿ” ಕಾರ್ಯಕ್ರಮವನ್ನು ಆಯೋಜಿಸುವ ಕುರಿತಂತೆ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಎಡೆಯೂರು ಸಿದ್ಧಲಿಂಗೇಶ್ವರ ದೇವಾಲಯ, ದೇವರಾಯನದುರ್ಗದ ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನ ಹಾಗೂ ಕುಣಿಗಲ್ ತಾಲ್ಲೂಕಿನ ಹಳೇಊರು ಹುಲಿಯೂರಮ್ಮ ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿಸಲು ಸರ್ಕಾರ ಆಯ್ಕೆ ಮಾಡಿದೆ ಎಂದು ಅವರು ತಿಳಿಸಿದರು. ಸರಳ ವಿವಾಹ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಧು-ವರರು ಆಗಮಿಸಿ, ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಜಿಲ್ಲೆಯ ಮೂರು ದೇವಾಲಯಗಳಲ್ಲಿ ಮೇ 24ರಂದು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಬಗ್ಗೆ ವಿಸ್ತøತವಾಗಿ ಚರ್ಚಿಸಲಾಯಿತು. ಅಲ್ಲದೆ ಮೇ 24 ದಿನಾಂಕವನ್ನು ತಾತ್ಕಾಲಿಕವಾಗಿ ನಿಗಧಿಪಡಿಸಿ, ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳೋಣ ಎಂದರು. …
ತಿಪಟೂರು : ಹೇಮಾವತಿ ನಾಲಾ ಅಚ್ಚುಕಟ್ಟು ಪ್ರದೇಶಕ್ಕೆ ಫೆಬ್ರವರಿ ಮೊದಲ ವಾರದಲ್ಲಿ ನೀರು ಬಿಡಲಾಗುವುದು, ಆದರೆ ಕೆರೆಗೆ ಮತ್ತು ಕಾಲುವೆಗೆ ಅಕ್ರಮವಾಗಿ ಪಂಪ್ಸೆಟ್ ಹಾಕಿ ನೀರು ಹೊಡೆದರೆ ಸಕ್ಷೆನ್ 36ರ ಅಡಿ ಸೂಕ್ತ ಕ್ರಮ ಜರುಗಿಸಲಾಗುವುದೆಂದು ಉಪವಿಭಾಗಾಧಿಕಾರಿ ಕೆ.ಆರ್.ನಂದಿನಿ ತಿಳಿಸಿದರು. ತಾಲ್ಲೂಕು ಕಛೇರಿಯಲ್ಲಿ ಕರೆದಿದ್ದ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಮಾವತಿ ಎಂಜಿನಿಯರ್ಗಳ ಪ್ರಕಾರ ಅಚ್ಚುಕಟ್ಟು ಪ್ರದೇಶಕ್ಕೆ ನೀಡಬಹುದಾದ ನೀರಿನ ಪ್ರಮಾಣ ಸಾಸಲಹಳ್ಳಿ ಕೆರೆ 5.88 ಎಂ.ಟಿಎಫ್, ನೊಣವಿನಕೆರೆ 103.60, ಬಜಗೂರು 17.04 ಎಂ.ಟಿಎಫ್, ವಿಘ್ನಸಂತೆ 18.73 ಎಂ.ಟಿಎಫ್, ಮತ್ತು ಆಲ್ಬೂರು ಎಂ.ಟಿಎಫ್ ಕೆರೆಗಳಲ್ಲಿ ನೀರು ಬಳಸಬಹುದು. ಮತ್ತು ತುರುವೇಕೆರೆ ವಿಭಾಗದಲ್ಲಿ ಮಲ್ಲಾಘಟ್ಟ 212-72 ಎಂ.ಟಿಎಫ್, ತುರುವೇಕೆರೆ 67.19 ಎಂ.ಟಿಎಫ್, ಸಾರಿಗೇಹಳ್ಳಿ 59.81 ಎಂ.ಟಿಎಫ್, ಗೋಣಿ ತುಮಕೂರು 1.08 ಎಂ.ಟಿಎಫ್, ಕೊಂಡಜ್ಜಿ 9.98 ಎಂ.ಟಿಎಫ್, ಗಂಗನಘಟ್ಟ 2.45 ಎಂ.ಟಿಎಫ್, ಅಮ್ಮಸಂದ್ರ 6.90 ಎಂ.ಟಿಎಫ್, ಸಂಪಿಗೆ 21.79 ಎಂ.ಟಿಎಫ್, ವೀರಸಾಗರ 14.33 ಎಂ.ಟಿಎಫ್,…
ಪಾವಗಡ : ಒರಿಸ್ಸಾದಲ್ಲಿನ ಸುಮಾರು 500 ಜನ ಕುಷ್ಠ ರೋಗಿಗಳನ್ನು ದತ್ತು ಪಡೆದು ಸುಮಾರು 15 ಲಕ್ಷ ವ್ಯಚ್ಚದಲ್ಲಿ ಅವರಿಗೆ ನೇರವು ನೀಡಲಾಗುತ್ತಿದೆ ಎಂದು ಶ್ರೀರಾಮಕೃಷ್ಣ ಗ್ರಾಮಾಂತರ ಆರೋಗ್ಯದ ಅದ್ಯಕ್ಷರಾದ ಜಪಾನಂದಾ ಸ್ವಾಮಿಜಿ ತಿಳಿಸಿದ್ದಾರೆ. ಪಟ್ಟಣದ ಶ್ರೀರಾಮಕೃಷ್ಣ ಸೇವಾಶ್ರದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿ ಒರಿಸ್ಸಾದಲ್ಲಿನ ಸುಮಾರು 500 ಜನ ಕುಷ್ಠರೋಗಿಗಳನ್ನು ದತ್ತು ಪಡೆದಿದ್ದು ಅವರ ಯೋಗಕ್ಷೇಮಕ್ಕಾಗಿ ಅವರ ಭವಿಷ್ಯಕ್ಕೆ ಕತ್ತಲು ಕವಿಯಭಾರದು ಎಂಬ ಧ್ಯೇಯದಿಂದ ಸ್ವಾಮಿ ವಿವೇಕನಂದರ ಆಶಯದಂತೆ ನೊಂದವರ ಪರವಾಗಿ ನಿಂತು ಅವರ ಸೇವೆ ಮಾಡಬೇಕು ಎಂಬ ಸಂಕಲ್ಪದಿಂದ ಶ್ರೀರಾಮಕೃಷ್ಣ ಸೇವಾಶ್ರಮ ಮತ್ತು ಇನ್ಪೋಸ್ಸಿಸ್ ಸಹಯೋಗದಲ್ಲಿ ಸಮರ್ಪಣಾ ತಂಡದ ಸಹಕಾರದಿಂದ 15 ಲಕ್ಷ ವ್ಯಚ್ಚದಲ್ಲಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು. ಒರಿಸ್ಸಾದಲ್ಲಿನ ಎರಡು ಕಾಲೋನಿಗಳನ್ನು ದತ್ತು ಪಡೆದಿದ್ದು ಅಲ್ಲಿ ಪನಿ ಬಿರುಗಾಳಿಯಿಂದ ತಾತ್ಕಾಲಿಕವಾಗಿ ನಿರ್ಮಾಣ ಮಾಡಲಾಗಿದ್ದ ಕುಷ್ಠ ರೋಗಿಗಳ ವಾಸಸ್ಥಳಗಳು ಶಿಥಿಲವಾಗಿದ್ದು ಜೀವನ ನಡೆಸುವುದು ಕೂಡ…
ತುಮಕೂರು : ಜಿಲ್ಲೆಯ ಕುಣಿಗಲ್ ತಾಲೂಕಿನ ಗಿರಿ ಗೌಡನ ಪಾಳ್ಯದ ಅರವಿಂದ ಇಂಟರ್ನ್ಯಾಷನಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಮೃತ ವಿದ್ಯಾರ್ಥಿಯನ್ನು ಧ್ರುವ ಕುಮಾರ್ (16)ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸೋಮವಾರ ರಾತ್ರಿ ತನ್ನ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಸಹಪಾಠಿಗಳು ಆತನ ರಕ್ಷಿಸಿ ಶಿಕ್ಷಕರ ಗಮನಕ್ಕೆ ತಂದಿದ್ದಾರೆ ಕೂಡಲೇ ವಿದ್ಯಾರ್ಥಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ವಿವಿಧ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾನೆ. ಪೋಷಕರಿಗೆ ಮಾಹಿತಿ ನೀಡಿ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೊದಲನೇ ಪಿಯುಸಿಯ. ವ್ಯಾಸಂಗ ಮಾಡುತ್ತಿದ್ಗ. ಬೆಂಗಳೂರಿನ ಮತ್ತಿಕೆರೆ ವಾಸಿ ನಾಗರಾಜ್ ರವರ ಮಗನಾಗಿದ್ದು, ಇವರು ಖಾಸಗಿ ಶಿಕ್ಷಕರಾಗಿ ಟ್ಯುಷನ್ ಮಾಡುತ್ತಿದ್ದರು. ಘಟನೆಗೆ ಸಂಬಂಧಿಸಿದಂತೆ ಪೋಷಕರು ಕುಣಿಗಲ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಮುಂದಿನ ಕ್ರಮ…
ಗುಬ್ಬಿ : ತಾಲ್ಲೂಕಿನ ಎಸ್.ಕೊಡಗೀಹಳ್ಳಿ ಪಂಚಾಯಿತಿ ವ್ಯಾಪ್ತಿಯ ಎಂ.ಎಸ್.ಪಾಳ್ಯ ಗ್ರಾಮದಲ್ಲಿ ರಸ್ತೆಯನ್ನೇ ಒತ್ತುವರಿ ಮಾಡಿದ್ದ ಮನೆಗಳ ಕಾಂಪೌಂಡ್ ತೆರೆವಿಗೆ ಕಾನೂನು ಬದ್ದ ಕ್ರಮವನ್ನು ಅನುಸರಿಸಲಾಗಿದೆ. ಅಕ್ರಮ ಕಾಂಪೌಂಡ್ ನಿರ್ಮಾಣ ಮಾಡಿದ್ದು ಅಲ್ಲದೇ ಅಧಿಕಾರಿಗಳ ಮೇಲೆ ಸಲ್ಲದ ಲಂಚ ಆರೋಪ ಮಾಡುವುದು ಸರಿಯಲ್ಲ ಎಂದು ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷೆ ಗೀತಾ ಪ್ರತಾಪ್ ಸ್ಪಷ್ಟನೆ ನೀಡಿದರು. ತಾಲ್ಲೂಕಿನ ಎಸ್.ಕೊಡಗೀಹಳ್ಳಿ ಗ್ರಾಪಂ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಎಂ.ಎಸ್.ಪಾಳ್ಯದಲ್ಲಿ ರಸ್ತೆ ಅಭಿವೃದ್ದಿ ಮತ್ತು ಬಾಕ್ಸ್ ಚರಂಡಿಗೆ ಕಾಮಗಾರಿ ಆರಂಭಿಸಲಾಗಿತ್ತು. ಬಾಕ್ಸ್ ಚರಂಡಿ ನಿರ್ಮಾಣಕ್ಕೂ ಮುನ್ನ ಈ ಹಿಂದೆ ಇದ್ದ ಚರಂಡಿ ಗುರುತು ಮಾಡಿ ಕೆಲಸ ಮಾಡಲು ಸೂಚಿಸಲಾಗಿತ್ತು. ಆದರೆ ಈ ರಸ್ತೆಯಲ್ಲಿ ಮುಸ್ತಾಫ್ ಎಂಬುವವರ ಮನೆಯ ಕಾಂಪೌಂಡ್ ರಸ್ತೆಯನ್ನೇ ಆವರಿಸಿಕೊಂಡು ಅತಿಕ್ರಮಣವಾಗಿರುವುದು ತಿಳಿಯಿತು ಎಂದರು. ಅಕ್ರಮ ಕಾಂಪೌಂಡ್ ತೆರವಿಗೆ ಮನೆಯ ಮಾಲೀಕನಿಗೆ ತಿಳುವಳಿಕೆ ಪತ್ರ ನೀಡಲಾಯಿತು. ಮೂರು ಬಾರಿ ಕಾನೂನು ರೀತಿ ನೋಟೀಸ್…











