Author: News Desk Benkiyabale

ತುಮಕೂರು :       ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಕಾನೂನು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ರಾಘವೇಂದ್ರ ಶೆಟ್ಟಿಗಾರ್ ಅವರು ತಿಳಿಸಿದರು.       ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ(ದಕ್ಷಿಣ ಶೈಕ್ಷಣಿಕ ಜಿಲ್ಲೆ) ಹಾಗೂ ಮಕ್ಕಳ ಸಹಾಯವಾಣಿ -1098 ಅಭಿವೃದ್ಧಿ ಸಾಮಾಜಿಕ ಸೇವಾ ಸಂಸ್ಥೆ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಹಿಂದಿನ ಕಾಲದಿಂದಲೂ ಶೋಷಿತ ವರ್ಗವೆಂದೇ ಕರೆಸಿಕೊಳ್ಳುವ ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಹಾಗೂ ಶಿಕ್ಷಣದ ಬಗ್ಗೆ ಪ್ರತಿಯೊಬ್ಬರು ಯೋಚಿಸಬೇಕು. ಹೆಣ್ಣು ಭ್ರೂಣಹತ್ಯೆ, ವರದಕ್ಷಿಣೆ, ಬಾಲ್ಯವಿವಾಹ, ಅತ್ಯಾಚಾರ ಸೇರಿದಂತೆ ಮುಂತಾದ ಸಮಸ್ಯೆಗಳಿಂದ ಬಳಲುತ್ತಿರುವ ಹೆಣ್ಣಿನ ರಕ್ಷಣೆಗೆ ಈ ಆಧುನಿಕ ಯುಗದಲ್ಲಿ ಕಾನೂನು ಅನಿವಾರ್ಯ. ಹಾಗಾಗಿ ಎಲ್ಲರೂ ಕಾನೂನನ್ನು ಅರಿತುಕೊಳ್ಳಬೇಕು ಎಂದು ಮಕ್ಕಳಿಗೆ…

Read More

ತುಮಕೂರು:        ಲಂಚ ಸ್ವೀಕಾರ ಪ್ರಕರಣವೊಂದರಲ್ಲಿ ಸಿಕ್ಕಬಿದ್ದಿದ್ದ ಕುಣಿಗಲ್ ಪುರಸಭೆ ಕಂದಾಯ ಅಧಿಕಾರಿ ವಿ.ರಮೇಶ್ ಅವರಿಗೆ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುಧೀಂದ್ರನಾಥ್ ಅವರು, ಜನವರಿ 21ರಂದು ಆರೋಪಿಗೆ 4 ವರ್ಷ ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.  ಪ್ರಕರಣದ ಹಿನ್ನೆಲೆ:-       ಪ್ರಕರಣ ಪೀಯಾರ್ದುದಾರ ಕುಣಿಗಲ್ ನಗರ ನಿವಾಸಿ ಶಬ್ಬೀರ್‍ಖಾನ್ ಎಂಬ ವ್ಯಕ್ತಿಯು ವಿಲ್ ಪ್ರಕಾರ ತನ್ನ ಹೆಂಡತಿ ಹೆಸರಿಗೆ ಭಾಗ ಬರಬೇಕಾಗಿದ್ದು, ಅದನ್ನು ಹೆಂಡತಿ ಹೆಸರಿಗೆ ಪಾವತಿ ಖಾತೆ ಮಾಡಿಕೊಂಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸಕ್ಕಾಗಿ ಆರೋಪಿ ರಮೇಶ್‍ನು 5000 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡ ಹಣವಾಗಿ 500 ರೂ.ಗಳನ್ನು ಪಡೆದಿದ್ದರು.       ಲಂಚ ಹಣವನ್ನು ನೀಡಲು ಇಷ್ಟವಿಲ್ಲದ ಶಬ್ಬೀರ್‍ಖಾನ್ ಕಂದಾಯ ಅಧಿಕಾರಿ ರಮೇಶ್ ಅವರು ಸರ್ಕಾರಿ ಕೆಲಸ ಮಾಡಿಕೊಡಲು ಲಂಚ ಕೇಳಿರುವ ಬಗ್ಗೆ ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿಕೊಂಡು 2014…

Read More

ತುಮಕೂರು:       ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರ ಮೇಲೆ ರಾಮನಗರದ ಕ್ಯಾತಿಗಾನಹಳ್ಳಿ ಗ್ರಾಮದಲ್ಲಿ ಹಲ್ಲೆ ನಡೆಸಿರುವುದನ್ನು ಖಂಡಿಸಿ, ಹಲ್ಲೆಕೋರರನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ತುಮಕೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.        ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಸಿ.ತಮ್ಮಣ್ಣ 200 ಎಕರೆ ಭೂಮಿಯನ್ನು ಅಕ್ರಮವಾಗಿ ಕಬಳಿಕೆ ಮಾಡಿದ್ದಾರೆಂದು ಲೋಕಾಯುಕ್ತರು ನೀಡಿದ್ದ ವರದಿಯನ್ನು ಜಾರಿ ಮಾಡುವಂತೆ, ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಎಸ್.ಆರ್.ಹಿರೇಮಠ್ ಅವರು ದಾಖಲಿಸಿದ್ದು, ನ್ಯಾಯಾಲಯದ ಆದೇಶದ ವಸ್ತುಸ್ಥಿತಿ ಅರಿಯಲು ಬಿಡದಿ ಬಳಿಯ ಕ್ಯಾತಿಗಾನಹಳ್ಳಿಗೆ ಹೋಗಿದ್ದಾಗ ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಕುಣಿಹಳ್ಳಿ ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದರು.       ಹಲ್ಲೆ ನಡೆಸಿರುವ ಹಲ್ಲೆಕೋರರನ್ನು ತಕ್ಷಣ ಬಂಧಿಸಬೇಕು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಹೋರಾಟಗಾರರ ಮೇಲೆ ಹಲ್ಲೆ ನಡೆಸುತ್ತಿರುವುದು…

Read More

ಚಿಕ್ಕನಾಯಕನಹಳ್ಳಿ :       ಅಂತರ್ಜಲ ಅಭಿವೃದ್ದಿಗಾಗಿ ದೇಶದ ಮಹತ್ವದ ಯೋಜನೆಯೆನಿಸಿದ ಅಟಲ್ ಭೂಜಲ್ ಯೋಜನೆ ಜಾರಿಗಾಗಿ ದೇಶದಲ್ಲಿಯೇ ಪ್ರಥಮಬಾರಿಗೆ ಪ್ರಾಯೋಗಿಕವಾಗಿ ಜಿಲ್ಲೆಯನ್ನು ಆಯ್ಕೆಮಾಡಿಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.        ಈ ಯೋಜನೆಯ ಅನುಷ್ಠಾನಕ್ಕಾಗಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದರು.     ಈ ಯೋಜನೆಯ ಕುರಿತಾಗಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿಇಲಾಖೆಯ ರಾಜ್ಯ ಕಾರ್ಯದರ್ಶಿ ಮೃತ್ಯುಂಜಯಸ್ವಾಮಿ ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರಮೋದಿಯವರು ದೆಹಲಿಯ ಭಾರತೀಯ ವಿಜ್ಞಾನ ಭವನದಲ್ಲಿ ಆರು ಸಾವಿರ ಕೋಟಿರೂ.ಗಳ ಈ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಇದರಲ್ಲಿ ರಾಜ್ಯಕ್ಕೆ 1200ಕೋಟಿರೂ. ನಿಗಧಿ ಮಾಡಲಾಗಿದೆ. ಯೋಜನೆ ಪೂರ್ಣಗೊಳ್ಳಲು ಐದುವರ್ಷ ನಿಗಧಿ ಮಾಡಲಾಗಿದೆ. ರಾಜ್ಯದ 14 ಜಿಲ್ಲೆಗಳ 41 ತಾಲ್ಲೂಕು 1199 ಗ್ರಾಮಪಂಚಾಯಿತಿ,39703 ಚದರ ಕಿಲೋಮೀಟರ್‍ಗಳಲ್ಲಿ ಅಂತರ್ಜಲ ಅಭಿವೃದ್ದಿಗೊಳಿಸುವ ಮೂಲಕ 82,47186 ಜನರಿಗೆ ಇದರಿಂದ ಲಾಭವಾಗಲಿದೆ.       ಜಿಲ್ಲೆಯಲ್ಲಿ ಚಿ.ನಾ.ಹಳ್ಳಿ, ತಿಪಟೂರು,…

Read More

ತುಮಕೂರು :       ತುಮಕೂರು ಜಿಲ್ಲೆಯಾದ್ಯಂತ ಉದ್ಯೋಗಕ್ಕೆ ಅವಕಾಶವಿರುವ ಉದ್ಯೋಗಾಧಾರಿತ ಕೋರ್ಸ್‍ಗಳನ್ನು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆರಂಭಿಸುವಂತೆ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಸೂಚಿಸಿದರು.       ತುಮಕೂರು ವಿಶ್ವವಿದ್ಯಾನಿಲಯಕ್ಕೆ ಇಂದು ಭೇಟಿ ನೀಡಿ ಕುಲಪತಿ ಕಾರ್ಯಾಲಯದಲ್ಲಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಹಾಗೂ ಡೀನ್‍ಗಳ ಸಭೆ ನಡೆಸಿ ಅವರು ಮಾತನಾಡಿದರು. ವಿಶ್ವವಿದ್ಯಾನಿಲಯದ ಕ್ಯಾಂಪಸ್ ಪ್ರದೇಶ, ವಿದ್ಯಾರ್ಥಿಗಳ ಸಂಖ್ಯೆ, ಮೂಲಭೂತ ಸೌಲಭ್ಯಗಳು, ಜಿಲ್ಲೆಯಲ್ಲಿರುವ ಪಿ.ಜಿ. ಸೆಂಟರ್ ಬಗ್ಗೆ, ಬಿದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕ್ಯಾಂಪಸ್ ಕುರಿತು ಸಭೆಯಲ್ಲಿ ಮಾಹಿತಿ ಪಡೆದರು.       ನಗರದ ಮಧ್ಯಭಾಗದಲ್ಲಿ ವಿಶ್ವವಿದ್ಯಾನಿಲಯವು ಇರುವುದರಿಂದ ಉತ್ತಮವಾಗಿ ಇದನ್ನು ಬಳಸಿಕೊಂಡು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿಗೆ ಅನುವು ಮಾಡಿಕೊಡುವುದರ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾನಿಲಯದಿಂದ ಹೊರತರುವಂತಹ ಪ್ರಯತ್ನವಾಗಬೇಕು. ಬಹಳ ಉತ್ತಮವಾಗಿ ಕ್ಯಾಂಪಸ್ ಬೆಳೆಸಬೇಕು. ಶೈಕ್ಷಣಿಕ ಗುಣಮಟ್ಟ ಕುಸಿತದ ಬಗ್ಗೆ ಗಮನ ಹರಿಸಿ, ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.…

Read More

ತುಮಕೂರು :       ತುಮಕೂರು ಜಿಲ್ಲೆಯಲ್ಲಿ ಶಿಶುಮರಣ ಉಂಟಾಗುತ್ತಿರುವ ಬಗ್ಗೆ ಕಾರಣವನ್ನು ಪತ್ತೆ ಹಚ್ಚಿ ಶಿಶುಮರಣವನ್ನು ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಿಕಾ ಅವರಿಗೆ ಸೂಚಿಸಿದರು.       ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ 2019-20ನೇ ಸಾಲಿನ ಮೂರನೇ ತ್ರೈಮಾಸಿಕ ಸಭೆ ನಡೆಸಿ ಅವರು ಮಾತನಾಡಿದರು. ಇತ್ತೀಚೆಗೆ ತಾಲೂಕುವಾರು ಪ್ರಾಥಮಿಕ ಆಸ್ಪತ್ರೆಗಳಿಗೆ ಬರುವ ಗರ್ಭಿಣಿಯರನ್ನು ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುತ್ತಿದ್ದಾರೆ. ಸಣ್ಣ-ಪುಟ್ಟ ಸಮಸ್ಯೆಗಳಿರುವ ಗರ್ಭಿಣಿಯರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸುತ್ತಿರುವುದು ಗಮನಕ್ಕೆ ಬಂದಿದೆ ಅಲ್ಲದೆ ಜಿಲ್ಲೆಯಲ್ಲಿ ಶಿಶುಮರಣ ಸಂಖ್ಯೆ ಹೆಚ್ಚಾಗುತ್ತಿದೆ ಇದನ್ನು ನಾನು ಸಹಿಸುವುದಿಲ್ಲ.       ಗುಬ್ಬಿ ತಾಲೂಕು ಆಸ್ಪತ್ರೆಯನ್ನು ನೋಡಿದ್ದೇನೆ. ಅಲ್ಲಿ ಸಂಜೆ 4 ಗಂಟೆಯಾದರೆ ಯಾವ ವೈದ್ಯರು ಇರುವುದಿಲ್ಲ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಮತ್ತು ಜಿಲ್ಲೆಯಲ್ಲಿ ಯಾವ ಸಮಸ್ಯೆಯಿಂದ ಶಿಶುಮರಣವಾಗುತ್ತಿದೆ…

Read More

ತುಮಕೂರು:       ವಾರ್ಡ್‍ನಂ-15ರಲ್ಲಿರುವ ವಸತಿಸಂಸ್ಥೆ(ಪಿಜಿ) ಹಾಸ್ಟೆಲ್‍ಗಳನ್ನು ನಡೆಸಲು ಪಾಲಿಕೆಯಿಂದ ಅಧಿಕೃತವಾಗಿ ಪರವಾನಿಗೆ ಪಡೆಯಬೇಕು ಹಾಗೂ ಕಮರ್ಷಿಯಲ್ ಆಗಿ ಬದಲಾಯಿಸಿಕೊಳ್ಳಬೇಕು ಎಂದು ಪಾಲಿಕೆ ಸದಸ್ಯೆ ಗಿರಿಜಾಧನಿಯಾಕುಮಾರ್ ತಿಳಿಸಿದ್ದಾರೆ.       ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15ನೇ ವಾರ್ಡ್ ವ್ಯಾಪ್ತಿಯಲ್ಲಿರುವ ರೈಲ್ವೆ ನಿಲ್ದಾಣದ ಬಳಿ ಆಟೋ ನಿಲ್ದಾಣದಿಂದ ಟ್ರಾಫಿಕ್ ಸಮಸ್ಯೆಯಾಗುತ್ತಿದ್ದು, ಪ್ರತಿದಿನ 25 ಸಾವಿರಕ್ಕೂ ಹೆಚ್ಚು ಮಂದಿ ಓಡಾಟ ಮಾಡುತ್ತಿದ್ದು, ಆಟೋಗಳನ್ನು ಅಡ್ಡಾದಿಡ್ಡಿ ನಿಲುಗಡೆ ಮಾಡುತ್ತಿರುವುದರಿಂದ ಸಂಚಾರ ದಟ್ಟಣೆಯಾಗುತ್ತಿದ್ದು, ಟ್ರಾಫಿಕ್ ಪೊಲೀಸರು ಇಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ಸ್ಮಾರ್ಟ್‍ಸಿಟಿ ಅಡಿಯಲ್ಲಿ ಸ್ಮಾರ್ಟ್ ಆಟೋ ನಿಲ್ದಾಣವನ್ನು ಮಾಡಬೇಕು ಎಂದು ಒತ್ತಾಯಿಸಿದರು.        ಗಾಂಧಿನಗರದಲ್ಲಿರುವ ಟ್ಯಾಕ್ಸಿ ಹಾಗೂ ಟಿಟಿ ವಾಹನಗಳ ನಿಲ್ದಾಣವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸಾರ್ವಜನಿಕರು ದೂರು ನೀಡುತ್ತಿದ್ದು, ಪಾಲಿಕೆ ಟ್ಯಾಕ್ಸಿ ಹಾಗೂ ಟಿಟಿ ವಾಹನ ನಿಲ್ದಾಣಕ್ಕೆ ಪಾಲಿಕೆ ಜಾಗ ಗುರುತಿಸಬೇಕು ಎಂದು ವಾರ್ಡ್ ವ್ಯಾಪ್ತಿಯಲ್ಲಿರುವ ಪಿಜಿಗಳಿಗೆ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳಬೇಕು ಹಾಗೂ ಸ್ವಚ್ಛತೆಯನ್ನು ಕಾಪಾಡಬೇಕು, ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ…

Read More

ತುಮಕೂರು :       ಹೇಮಾವತಿ ತುಮಕೂರು ಶಾಖಾ ನಾಲೆಯ 75.5 ಕಿ.ಮೀ ನಾಲೆಯನ್ನು 475 ಕೋಟಿ. ರೂಗಳಲ್ಲಿ ಆಧುನೀಕರಣದಿಂದ, ಈ ಭಾಗದ ಎಲ್ಲಾ ಜನರ ಬಹು ದಿನಗಳ ಕನಸು ನನಸಾಗಿದೆ. ಇದರಿಂದ ಎಲ್ಲಾ ಕೆರೆಗಳಿಗೆ ಶೀಘ್ರ ನೀರು ತುಂಬಿಸುವುದರಿಂದ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.       ಅವರು ಇಂದು ಬೆಳಗರಹಳ್ಳಿಯಲ್ಲಿ ನಾಲೆಯ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಹೇಮಾವತಿಯಿಂದ 24.83 ಟಿ.ಎಂ.ಸಿ ನೀರನ್ನು ನಾಲೆಗಳ ಮೂಲಕ ಹರಿಸಿ ಕೆರೆಗಳನ್ನು ತುಂಬಿಸುವುದರಿಂದ ಈ ಭಾಗದ ಜನರಿಗೆ ಕುಡಿಯುವ ನೀರು ಸರಬರಾಜು, ರೈತರಿಗೆ ಬೆಳೆ ಬೆಳೆಯಲು ಅನುಕೂಲ ಆಗುವುದರ ಜೊತೆಗೆ ಅಂತರ್ಜಲ ಹೆಚ್ಚಾಗಲಿದೆ, ನಾಲೆಯಿಂದ ವ್ಯರ್ಥವಾಗಿ ಹರಿದು ಹೋಗುತ್ತಿದ್ದ, ನೀರನ್ನು ಉಳಿಸಿ ಸದ್ಭಳಕೆ ಮಾಡಿಕೊಳ್ಳಲು ಈ ಯೋಜನೆ ಅತ್ಯವಶ್ಯಕವಾಗಿತ್ತು ಎಂದು ಅವರು ಹೇಳಿದರು. ಈ…

Read More

ಗುಬ್ಬಿ :       ಕಳೆದ ಐದು ವರ್ಷದಿಂದ ಕಸ ವಿಲೇವಾರಿ ಘಟಕದಿಂದ ತೀವ್ರ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯಿತಿ ಯಾವುದೇ ಪರಿಹಾರ ಕಂಡುಕೊಳ್ಳದೇ ಮಾರುತಿನಗರ ಬಡಾವಣೆಯ ನಿವಾಸಿಗಳಿಗೆ ಅನಾರೋಗ್ಯಕ್ಕೆ ತುತ್ತು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ ಗ್ರಾಮಸ್ಥರು ಘಟಕದಲ್ಲಿ ಕೆಲಸ ಮಾಡಲು ಬಂದ ಜೆಸಿಬಿ ಯಂತ್ರವನ್ನು ತಡೆದು ಅಧಿಕಾರಿಗಳನ್ನು ಘೇರಾವ್ ಮಾಡಿ ಪ್ರತಿಭಟಿಸಿದ ಘಟನೆ ನಡೆಯಿತು.       ಕಳೆದ 10 ವರ್ಷದ ಹಿಂದೆ ಕಸ ವಿಲೇವಾರಿ ಘಟಕವನ್ನು ಪಟ್ಟಣದ ಹೊರವಲಯದ ಮಾರುತಿನಗರ ಬಡಾವಣೆ ಸಮೀಪ ನಿರ್ಮಾಣ ಮಾಡಿದ ಪಟ್ಟಣ ಪಂಚಾಯಿತಿ ಕಸವನ್ನು ಈ ಸ್ಥಳದ 4 ಎಕರೆ ಪ್ರದೇಶದಲ್ಲೇ ಶೇಖರಿಸಲಾಯಿತು. ಈ ಕಸವನ್ನು ಯಾವುದೇ ರೀತಿ ಪರಿಷ್ಕರಿಸದೇ ಒಣ ಮತ್ತು ಹಸಿ ಕಸವನ್ನು ವಿಂಗಡಿಸದೇ ಎಲ್ಲಂದರಲ್ಲಿ ಕಸವನ್ನು ಬಿಸಾಡಲಾಗಿದೆ. ಈ ಜತೆಗೆ ಸತ್ತ ಜಾನುವಾರುಗಳ ಕಳೇಬರ, ಕೋಳಿ ತ್ಯಾಜ್ಯವನ್ನು ಸಹ ಇಲ್ಲಿ ಎಸೆಯಲಾಗಿದೆ. ತ್ಯಾಜ್ಯ ತಿನ್ನಲು ಬರುವ ನಾಯಿಗಳ ಹಿಂಡು…

Read More

ತುಮಕೂರು :        ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರು ಹಾಗೂ ಕಾರ್ಮಿಕ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಅವರು ಜಿಲ್ಲೆಯ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕಿನ ವಿವಿಧ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.       ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೋನಿ, ಮಧುಗಿರಿ ತಾಲೂಕಿನ ಕೆರೆಗಳ ಪಾಳ್ಯ ಹಾಗೂ ಪಾವಗಡ ತಾಲ್ಲೂಕಿನ ರಾಜವಂತಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸಿದರು.       ಕೊರಟಗೆರೆ ತಾಲೂಕಿನ ಮತಗಟ್ಟೆ ಸಂಖ್ಯೆ 199ರ ಮನೆಯೊಂದಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬವೊಂದು ಹಳೆಯ ಹಾಗೂ ಹೊಸ ಎಪಿಕ್ ಕಾರ್ಡುಗಳನ್ನು ಹೊಂದಿರುವುದು ವೀಕ್ಷಕರ ಗಮನಕ್ಕೆ ಬಂದಾಗ ಮತದಾರರು ಎರಡೆರಡು ಕಾರ್ಡು ಹೊಂದದೆ ವ್ಯಾಲಿಡ್ (ಮಾನ್ಯ) ಇರುವ ಎಪಿಕ್ ಕಾರ್ಡನ್ನೇ ಹೊಂದಿರಬೇಕು. ಅಧಿಕಾರಿಗಳು ಎಲ್ಲ ಮತದಾರರು ವ್ಯಾಲಿಡ್…

Read More