ತುಮಕೂರು: ಸರ್ಕಾರಿ ಜಮೀನನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡವರಿಗೆ ಶೀಘ್ರವೇ ಒತ್ತುವರಿ ತೆರವಿಗಾಗಿ ನೋಟೀಸ್ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಹಶೀಲ್ದಾರ್ ರಾಜೇಶ್ವರಿಗೆ ಸೂಚನೆ ನೀಡಿದರು. ತಾಲ್ಲೂಕಿನ ಹೆಬ್ಬೂರು ಹೋಬಳಿ ಬನ್ನಿಕುಪ್ಪೆ ಗ್ರಾಮದ ಸ.ನಂ. ೮೨ರ ಸರ್ಕಾರಿ ಗೋಮಾಳ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಬಗ್ಗೆ ಶಾಸಕರು ನೀಡಿದ ದೂರಿನ ಮೇರೆಗೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಕೂಡಲೇ ಸರ್ಕಾರಿ ಜಮೀನಿನ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ನಿರ್ದೇಶನ ನೀಡಿದಾಗ ಮಾತನಾಡಿದ ಕಂದಾಯ ನಿರೀಕ್ಷಕ ಎಂ.ಮAಜುನಾಥ ಮಾತನಾಡಿ, ಈಗಾಗಲೇ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದ್ದು, ಜಮೀನು ಮಂಜೂರಿಗಾಗಿ ಸಲ್ಲಿಸಿರುವ ನಮೂನೆ-೫೭ನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ನಂತರ ಸ.ನಂ. ೧೫೬ರ ಹೆಬ್ಬೂರು ಅಮಾನಿಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು. ಸುಮಾರು ೪೨೦ ಎಕರೆ ವಿಸ್ತೀರ್ಣವನ್ನು ಹೊಂದಿರುವ ಈ ಕೆರೆಯ ಮಣ್ಣನ್ನು ಅಕ್ರಮವಾಗಿ ತೋಟ, ಇಟ್ಟಿಗೆ ಕಾರ್ಖಾನೆಗಳಿಗೆ ಸಾಗಾಟ ಮಾಡಲಾಗುತ್ತಿದೆ ಎಂಬ ಸಾರ್ವಜನಿಕ ದೂರುಗಳು ಬಂದಿವೆ. ಅಕ್ರಮವಾಗಿ…
Author: News Desk Benkiyabale
ತುಮಕೂರು: ಜಿಲ್ಲೆಯಲ್ಲಿ ಸರ್ಕಾರದಿಂದ ಭೂಮಂಜೂರಾತಿಯಾದ ಜಮೀನುಗಳನ್ನು ಸಾಗುವಳಿ ಮಾಡುವ ರೈತರಿಗೆ ಎರಡು ಮೂರು ತಲೆ ಮಾರುಗಳಿಂದ ಪೋಡಿ ದುರಸ್ಥಿಯಾಗದೇ ಕ್ರಯ, ವಿಭಾಗ, ಹದ್ದುಬಸ್ತು ಕಾರ್ಯಗಳಿಗೆ ಹಾಗೂ ಹಕ್ಕು ವರ್ಗಾವಣೆಗಳಿಗೆ ಅನಾನುಕೂಲವಾಗುತ್ತಿದ್ದು, ೧೦೦೩ ದುರಸ್ಥಿಯಾಗಿರುವ ದರಖಾಸ್ತು ಕಡತಗಳ ಪ್ರಗತಿ ಸಾಧಿಸಿ ವಿಲೇವಾರಿ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಜಿಲ್ಲೆಯು ಪ್ರ ಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ದರಖಾಸ್ತು ಪೋಡಿ ದುರಸ್ಥಿ ಸಂಬAಧ ಸಾವಿರಾರು ಸಂಖ್ಯೆಯಲ್ಲಿ ರೈತರು ಕಚೇರಿಗಳಿಗೆ ಅಲೆದಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ನಂತರ ಇತ್ತೀಚೆಗೆ ಸರ್ಕಾರದಿಂದ ದರಖಾಸ್ತು ಪೋಡಿ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿ ಆದೇಶಿಸಲಾಗಿದೆ. ಈ ಆದೇಶದ ಮೇರೆಗೆ ನಮೂನೆ ೧ ರಿಂದ ೫ರವರೆಗಿನ ಮಾಹಿತಿಯನ್ನು ತಂತ್ರಾAಶದಲ್ಲಿ ಭರ್ತಿ ಮಾಡಿ ಜಿಲ್ಲೆಯ ಎಲ್ಲಾ ತಹಸೀಲ್ದಾರರು ಅನುಬಂಧ-೧ನ್ನು ಸೃಜಿಸಿ ಭೂದಾಖಲೆಗಳ ಇಲಾಖೆಗೆ ಪೋಡಿ ದುರಸ್ತಿಗಾಗಿ ವರ್ಗಾಯಿಸುವ ಪ್ರಕ್ರಿಯೆಯನ್ನು ಕಾರ್ಯರೂಪಕ್ಕೆ ತಂದಿದೆ. ಇಂತಹ ಭೂ ಮಂಜೂರಿದಾರರಿಗೆ ತಹಸೀಲ್ದಾರರು ಅನುಬಂಧ-೧ರ ನಂತರ ಎಲ್ಲಾ ಭೂ ಮಂಜೂರಾತಿದಾರರಿಗೆ ನಿಯಾನುಸಾರ ಅಳತೆ ಮಾಡಿ ಹೊಸ ಸರ್ವೆ…
ತುಮಕೂರು: ವಿದ್ಯಾರ್ಥಿಗಳು ಆಶಾವಾದದ ಚಿಂತನೆಗಳೊ0ದಿಗೆ ನಿರ್ದಿಷ್ಟ ಗುರಿಗಳನ್ನು ಸಿದ್ಧಪ ಡಿಸಿಕೊಂಡಾಗ ಜೀವನ ದರ್ಶನ ಸಾಧ್ಯವಾಗುತ್ತದೆ. ಜಾಗತಿಕ ವೇದಿಕೆಯಲ್ಲಿ ಔದ್ಯೋಗಿಕ ಸ್ಥಾನಮಾನ ಪಡೆಯಬೇಕಾದರೆ ನಿರ್ವಹಣಾ ಸಾಮ ರ್ಥ್ಯ ಮತ್ತು ಕೌಶಲ್ಯಗಳನ್ನು ಹೊಂದಿರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಾಣಿಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪ್ರೊ. ಬಿ ಶೇಖರ್ ತಿಳಿಸಿದರು. ತುಮಕೂರಿನ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರದಲ್ಲಿ ನಡೆದ ಎಂ.ಕಾA. ಎರಡನೇ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬದ್ಧತೆ, ಸಮಯಪಾಲನೆ, ವಸ್ತುನಿಷ್ಠ ಮಾದರಿಯು, ವ್ಯಕ್ತಿತ್ವ ವಿಕಸನಕ್ಕೆ ದಾರಿ ಮಾಡುವ ಮುಖೇನ ಗುಣಮಟ್ಟದ ಜೀವನಕ್ಕೆ ನಮ್ಮನ್ನು ಕರೆದೊಯ್ಯುತ್ತದೆ. ಮೌಲ್ಯಾಧಾರಿತ ಸಂಬ0ಧಗಳನ್ನು ಕಟ್ಟುವ ಶಿಕ್ಷಣವೇ ಶ್ರೇಷ್ಠ ಎಂದರು. ಪ್ರಾಚೀನ ಕಾಲದಲ್ಲಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು, ಹೆಣ್ಣಿನ ಅಂತಃಶಕ್ತಿ ಅರಿಯದ ಅಂದಿನ ವ್ಯವಸ್ಥೆ ಅವಳನ್ನು ನಾಲ್ಕು ಗೋಡೆಗಳ ಮಧ್ಯೆ ಬಂಧಿಸಿ ಬಾಯಿ ಮುಚ್ಚಿಸಲಾಗಿತ್ತು. ಆ ದರೆ, ಕಾಲ ಬದಲಾಗಿದೆ ಶೈಕ್ಷಣಿಕ ರಾಜಕೀಯ ಸಾಮಾಜಿಕ ವೈದ್ಯಕೀಯ ಹೀಗೆ ಎಲ್ಲ…
ಪಾವಗಡ: ಬಹು ದಿನಗಳ ಕನಸಿನ ಯೋಜನೆ ಗಳೂಂದಾದ ಜಲಜೀವನ ಮಿಷನ್ ವತಿಯಿಂದ ಪ್ರತಿ ಮನೆಮನೆಗೂ ಶುದ್ಧ ಕುಡಿಯುವ ನೀರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಯಿಂದ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಯಾದ ಶುಭ ಕಲ್ಯಾಣ್ ರವರು ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಾ, ತಾಲ್ಲೂಕಿನ ಜನತೆಗೆ ತುಂಗಭದ್ರಾ ನದಿ ಮೂಲದ ಶುದ್ಧ ಕುಡಿಯುವ ನೀರನ್ನು ನೀಡುವ ಸದುದ್ದೇಶದಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಜುಲೈ ೨೧ ಸೋಮವಾರ ಆಗಮಿಸುತ್ತಾರೆ. ತಾಲ್ಲೂಕಿನಲ್ಲಿ ಪೂರ್ಣಗೊಂಡಿರುವ ಕಾಲವು ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಗುವುದು. ತಾಲ್ಲೂಕಿನ ಜನತೆಗೆ ಫ್ಲೋರೈಡ್ ರಹಿತವಾದ ನದಿ ಮೂಲದ ಶುದ್ಧ ಕುಡಿಯುವ ನೀರನ್ನು ನೀಡುವ ಸಲುವಾಗಿ ಸುಮಾರು ೪೩೬ ಕೋಟಿ ವೆಚ್ಚದ ಯೋಜನೆಯ ಕಾಮಗಾರಿಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಇದರಿಂದ ತಾಲೂಕಿನ ೩೩ ಹಳ್ಳಿಗಳ ಮನೆಮನೆಗೂ ನೀರನ್ನು ನೀಡಲಾಗುವುದು. ಪಿಡಬ್ಲ್ಯೂಡಿ ಇಲಾಖೆಯಿಂದ…
ಚಿಕ್ಕನಾಯಕನಹಳ್ಳಿ: ದೇಶದ ರಾಜಕಾರಣಿಗಳು ವಾರ್ಷಿಕವಾಗಿ ಶೇಕಡ ೧೦ ಹತ್ತರಷ್ಟು ಕುಡುಕ ಪ್ರಜೆಗಳನ್ನು ಸೃಷ್ಟಿಸುತ್ತಿವೆ ದುಡಿಯುವ ರೈತನಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೂಡ ರಾಜಕಾರಣಿಗಳ ಪಾಲಾಗುವ ಸ್ಥಿತಿ ತಲುಪಿದ್ದೇವೆ ರೈತರ ಪಾಲಿನ ಹಕ್ಕನ್ನು ಪಡೆಯಲು ಹೋರಾಟ ಒಂದೇ ದಾರಿ ಎಂದು ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ಹೊಸಳ್ಳಿ ಚಂದ್ರಣ್ಣ ಬಣದ ರಾಜ್ಯಾಧ್ಯಕ್ಷ ಹೊಸಳ್ಳಿ ಚಂದ್ರಣ್ಣ ಆತಂಕ ವ್ಯಕ್ತಪಡಿಸಿದರು. ತಾಲೂಕಿನ ಶೆಟ್ಟಿಕೆರೆ ಹೋಬಳಿ ಅಗಸರಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಾ ದೇಶದ ಐದು ಲಕ್ಷದ ನಲವತ್ತೇಳು ಸಾವಿರ ಹಳ್ಳಿಗಳು ಈ ಭಾರತದ ಆಧಾರ ಸ್ಥಂಭಗಳಾಗಿವೆ ಇವುಗಳ ಮೂಲಕವೇ ದೇಶದ ಪ್ರಗತಿಗೆ ರೈತರು ಮುನ್ನೆಲೆಯಾಗಿದ್ದಾರೆ ಇಂತಹ ಹಳ್ಳಿಗಳ ಭವಿಷ್ಯಗಳನ್ನು ನಮ್ಮ ನಾಡುವ ಜನಪ್ರತಿನಿಧಿಗಳು ತೀರಾ ಸಂಕಷ್ಟಕ್ಕೆ ದುಡುತ್ತ ಕೇವಲ ಶೇಕಡ ೩೦ರಷ್ಟಿರುವ ವ್ಯಾಪಾರಸ್ಥರ ಪರವಾಗಿ ಎಲ್ಲಾ ಸರ್ಕಾರಗಳು ಕೆಲಸ ಮಾಡುತ್ತಿವೆ ದೇಶದ ಪ್ರಗತಿ ಹಾಗೂ ದೇಶಕ್ಕೆ ಅನ್ನ ನೀಡುವ ಅನ್ನದಾತನ ಸಂಕಷ್ಟಕ್ಕೆ ಬಾರದಿರುವುದು…
ತುಮಕೂರು: ಹನ್ನೇರಡನೇ ಶತಮಾನದಲ್ಲಿ ಸಮ ಸಮಾಜದ ಕನಸು ಕಂಡು, ಅದನ್ನು ಸಕಾರಗೊಳಿಸಲು ಶ್ರಮಿಸಿದ ಶಿವಶರ ಣರಲ್ಲಿ ಹಡಪದ ಅಪ್ಪಣ್ಣ ಅವರು ಒಬ್ಬರು. ಬಸವಣ್ಣನವರ ಸಮಕಾಲಿನರಾಗಿ, ಕಾಯಕಯೋಗಿ, ಕರ್ಮಯೋಗಿಯಾಗಿ ಬದುಕಿದ್ದ ಅಪ್ಪಣ್ಣ ಅವರ ನಡೆ, ನುಡಿಗಳು ಇಂದಿಗೂ ಪ್ರಸ್ತುತಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದ್ದಾರೆ. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಮತ್ತು ತುಮಕೂರು ಜಿಲ್ಲಾ ಮತ್ತು ತಾಲೂಕು ಸವಿತಾ ಸಮಾಜ (ರಿ), ವತಿಯಿಂದ ಆಯೋಜಿಸಿದ್ದ ಶ್ರೀಹಡಪದ ಅಪ್ಪಣ್ಣಅವರ ಜನ್ಮಜಯಂತಿಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ೧೨ ಶತಮಾನದಲ್ಲಿ ಇದ್ದ ಯಾವ ಕಾಯಕವೂ ಮೇಲು, ಕೀಳು ಎಂಬ ಭಾವನೆ ಹೊಂದಿರಲಿಲ್ಲ. ಎಲ್ಲವೂ ಪರಸ್ವರ ಪೂರಕವಾಗಿ ಸಮಾಜದ ಅಭಿವೃದ್ದಿಗೆ ಅತ್ಯಂತ ಅವಶ್ಯಕ ಎಂದು ಭಾವಿಸಲಾಗಿತ್ತು. ಎಲ್ಲಾ ವೃತ್ತಿಗಳಿಗೂ ಅದರದ್ದೇ ಆದ ಘನತೆ, ಗೌರವಗಳಿದ್ದವೂ. ಆದರೆ ಅಂತಹ ವೃತ್ತಿಗಳೇ ಜಾತಿಗಳಾಗಿರುವುದು ವಿಪರ್ಯಾಸ ಎಂದರು. ಸ್ವದೇಶಿ ವಿಶ್ವನಾಥ್ ಮಾತನಾಡಿ, ಬಸವ ಕಲ್ಯಾಣದಲ್ಲಿ…
ತುಮಕೂರು: ರಾಮಕೃಷ್ಣ ನಗರದ ಶ್ರೀ ಶಿರಡಿಸಾಯಿನಾಥ ದೇಗುಲ ಸೇರಿದಂತೆ ನಗರದ ವಿವಿಧಡೆ ಇರುವ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ರಾಮಕೃಷ್ಣ ನಗರದ ಸಾಯಿನಾಥ ಮಂದಿರದಲ್ಲಿ ಬೆಳಿಗ್ಗೆ ೬ ಗಂಟೆಗೆ ಕಾಕಡ ಆರತಿ, ೭ ಗಂಟೆಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಅಲಂಕಾರ, ೮ ಗಂಟೆಗೆ ರುದ್ರಾಭಿಷೇಕ, ೧೦ ಗಂಟೆಗೆ ೧೦೮ ಗುರುಗಳ ಅವಾಹನೆ ಪೂಜಾ, ಮಧ್ಯಾಹ್ನ ೧೨ಕ್ಕೆ ಮಹಾಮಂಗಳಾರತಿ ನೆರವೇರಿತು. ಭಕ್ತಾದಿಗಳಿಗಾಗಿ ಬೆಳಿಗ್ಗೆಯಿಂದ ರಾತ್ರಿ ವರೆಗೂ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ರಾಮಕೃಷ್ಣನಗರದ ಸಾಯಿನಾಥ ಮಂದಿರದಲ್ಲಿ ೧೦೮ ಗುರುಗಳ ಅವಾಹನೆ ಪೂಜೆ ನೆರವೇರಿಸಿದ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ವೇದಗಳನ್ನು ವಿಭಜನೆ ಮಾಡಿ ೪ ವೇದ ಮತ್ತು ೧೮ ಪುರಾಣಗಳನ್ನು ಜನರಿಗೆ ಪರಿಚಯಿಸಿದ ಕೀರ್ತಿ ವೇದ ವ್ಯಾಸರಾಜರಿಗೆ ಸಲ್ಲುತ್ತದೆ. ಶಂಕರಾಚಾರ್ಯ, ಸ್ವಾಮಿ ವಿವೇಕಾನಂದರು, ಶಿರಡಿ ಬಾಬಾರವರು ಮಹಾನ್ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದವರು ಎಂದರು. ಗುರುತ್ವಾಕರ್ಷಣೆಯನ್ನು ಕಂಡು ಹಿಡಿದ ನ್ಯೂಟನ್ನಗೆ ಭೂಮಿ ತಾಯಿಯೇ ಗುರುವಾಗಿ ಪರಿಣಿಮಿಸಿದಳು.…
ತುಮಕೂರು: ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಆಹಾರ ಇಲಾಖೆ ಸಹಾಯವಾಣಿ ಸಂಖ್ಯೆ ೧೯೬೭ನ್ನು ನಮೂದಿಸುವಂತೆ ನ್ಯಾಯ ಬೆಲೆ ಅಂಗಡಿಗಳ ಮಾಲೀಕರಿಗೆ ನಿರ್ದೇಶನ ನೀಡಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಅನ್ನ ಭಾಗ್ಯ ಯೋಜನೆಯಡಿ ಪಡಿತರ ವಿತರಣೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ೧೦ ಕೆಜಿ ಅಕ್ಕಿಗೆ ಬದಲಾಗಿ ೮ ಕೆಜಿ ಮಾತ್ರ ವಿತರಿಸಲಾಗುತ್ತಿದೆ. ಬಯೋಮೆಟ್ರಿಕ್ ಪಡೆಯುವ ಸಂದರ್ಭದಲ್ಲೂ ಸಾರ್ವಜನಿಕರಿಂದ ೧೦ ರೂ.ಗಳ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಪಡಿತರ ವಿತರಿಸುವ ಸ್ಥಳವನ್ನು ಸ್ವಚ್ಛವಾಗಿಟ್ಟುಕೊಂಡಿರುವುದಿಲ್ಲ ಎಂದೂ ಸಾರ್ವಜನಿಕ ದೂರುಗಳು ವ್ಯಕ್ತವಾಗುತ್ತಿವೆ. ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಇಂತಹ ಸಮಸ್ಯೆಗಳು ಕಂಡು ಬಂದಲ್ಲಿ ನೇರವಾಗಿ ಸಹಾಯವಾಣಿ ಸಂಖ್ಯೆ ೧೯೬೭ನ್ನು ಸಂಪರ್ಕಿಸಿ ದೂರು ನೀಡುವ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ…
ತುಮಕೂರು: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ,ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡಯ ಬೇಕು, ದೇಶದ ಅಸ್ತಿಗಳನ್ನು ಮೂರು ಕಾಸಿಗೆ – ಆರು ಕಾಸಿಗೆ ಮಾರಟ ಮಾಡುವ, ಜನ ಸಮಾನ್ಯ ತೆರಿಗೆ ಹಣದಿಂದ ಕಟ್ಟಲಾದ ಸಾರ್ವಜನಿಕ ಅಸ್ತಿಗಳ ಹಿಗೆ ಮಾರುವುದು ದೇಶ ವಿರೋಧಿಸಿ. ಅಗತ್ಯ ವಸ್ತುಗಳ ಬೇಲೆ ಏರಿಕೆ ತಡೆಗಟ್ಟಬೆಕು. ಉದ್ಯೋಗ ಸೃಷಿ, ಬದುಕಲು ಯೋಗ್ಯ ಕನಿಷ್ಟ ಕೂಲಿ ಮಾಸಿಕ ೩೬೦೦೦ ನಿಗಧಿಗೆ, ಎಂಟು ಗಂಟೆಯ ಕೆಲಸದ ಅವಧಿಯನ್ನು ೧೨ ಗಂಟೆಗೆ ವಿಸ್ತರಿಸುವುದನ್ನು ಹಿಂಪಡೆಯ ಬೆಕು.ಕೆಲಸ, ಗುತ್ತಿಗೆ ಕಾರ್ಮಿಕ ಖಾಯಂಮಾತಿ, ಅಸಂಘಟಿತ ಕಾರ್ಮಿಕರು ಮತ್ತು ಸ್ಕೀಂ ನೌಕರರಿಗೆ ಸಮಾಜಿಕ ಭದ್ರತೆಗಾಗಿ ಒತ್ತಾಯಿಸಿ. ಬಲವಂತದ ಭೂಸ್ವಾಧಿನ ವಿರೋಧಿಸಿ, ಬಗೇರ್ ಹುಕುಂ ಸಾಗುವಳಿದಾರರ ಒಕ್ಕಲೆಬ್ಬಿ ಸುವುನ್ನು ವಿರೋಧಿಸಿ, ಸ್ಮಾಟ್ ಮಿಟರ್ ಹೇರಿಕೆ ವಿರೋಧಿಸಿ.ಎಲ್ಲಾರಿಗೊ ಕನಿಷ್ಟ ಮಾಸಿಕ ಪಿಂಚಣಿ ರೂ,೯೦೦೦ ನಿಗಧಿಗೆ ಒತ್ತಾಯಿಸಿ. ರಾಷ್ಟಿçÃಯ ಸಾರ್ವರ್ತಿಕ ಮುಷ್ಕ ರದ ಅಂಗವಾಗಿ ಸಾವಿರಾರು ಪ್ಯಾಕ್ಟರಿಗಳ ಕಾರ್ಮಿಕರು, ಅಂಗನವಾಡಿ, ಆಶಾ, ಮುನಿಸಿಪಲ್…
ತುಮಕೂರು: ಜಿಲ್ಲೆಯಲ್ಲಿ ಐಟಿ(ಇನ್ಫಾರ್ಮೇಷನ್ ಟೆಕ್ನಾಲಜಿ) ಕಂಪನಿಗಳ ಸ್ಥಾಪನೆಯಿಂದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹಲವಾರು ಬದಲಾವಣೆ ಹೊಂದಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ನ್ಯಾಯಿಕ ಸಭಾಂಗಣದಲ್ಲಿ ಬುಧವಾರ ಐಟಿ ಕಂಪನಿಗಳ ಉದ್ಯಮಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು ನಮ್ಮ ಜಿಲ್ಲೆಯಿಂದ ಬೆಂಗಳೂರು ನಗರಕ್ಕೆ ಸುಮಾರು ೪,೦೦೦ ಉದ್ಯೋಗಿಗಳು ಐಟಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿಯೇ ಐಟಿ ಕಂಪನಿಗಳನ್ನು ಸ್ಥಾಪಿಸುವುದರಿಂದ ಬೇರೆ ನಗರಗಳಲ್ಲಿ ಈಗಾಗಲೇ ಉದ್ಯೋಗ ಮಾಡುತ್ತಿರುವ ಸ್ಥಳೀಯ ಉದ್ಯೋಗಿಗಳಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು. ಐಟಿ ಕಂಪನಿಗಳ ಸ್ಥಾಪನೆಯಿಂದ ಬಿಎಸ್ಸಿ, ಬಿಇ, ಎಂಸಿಎ ಮುಂತಾದ ವಿದ್ಯಾರ್ಹತೆ ಪಡೆದವರಿಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯೋಗವಕಾಶಗಳು ಹಾಗೂ ಸ್ಥಳೀಯ ಆರ್ಥಿಕ ಚಟುವಟಿಕೆಗಳು ಹೆಚ್ಚುತ್ತವೆ. ಇದರಿಂದ ಡಿಜಿಟಲ್ ತಂತ್ರಜ್ಞಾನ ಸೇರಿದಂತೆ ರಸ್ತೆ, ವಿದ್ಯುತ್ ಮುಂತಾದ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತವೆ. ಸ್ಥಳೀಯ ಕಾಲೇಜು ಮತ್ತು ತರಬೇತಿ ಕೇಂದ್ರಗಳಲ್ಲಿ ಐಟಿ ಸಂಬAಧಿತ ಕೋರ್ಸುಗಳು ಆರಂಭವಾಗಬಹುದು. ಐಟಿ ಹಬ್ ರೂಪುಗೊಳ್ಳುವುದರಿಂದ ಜಿಲ್ಲೆಯ ಮುಂದಿನ ೧೦ ವರ್ಷಗಳ ಅಭಿವೃದ್ಧಿಗೆ ನಾಂದಿ…











