ತುಮಕೂರು : ಪ್ರಧಾನಿ ನರೇಂದ್ರ ಮೋದಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯ ಗದ್ಧುಗೆ ದರ್ಶನ ಪಡೆದರು. ಮಧ್ಯಾಹ್ನ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಲು ಹೊದೆಸಿ, ಮೈಸೂರು ಪೇಟಾ ತೊಡಿಸಿ ಸ್ವಾಗತಿಸಿದರು. ನಂತರ ವಿಶೇಷ ಹೆಲಿಕಾಫ್ಟರ್ ಮೂಲಕ ತುಮಕೂರಿಗೆ ತೆರಳಿದರು. ತುಮಕೂರು ಹೆಲಿಪ್ಯಾಡ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಪ್ರಧಾನಿಯವರನ್ನು ಸ್ವಾಗತಿಸಿದರು. ಈ ವೇಳೆ ಯಡಿಯೂರಪ್ಪ ಸಹ ಇದ್ದರು. ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಸ್ವಾಗತಿಸಿದರು. ಮೋದಿ ಅವರು ಡಾ.ಶಿವಕುಮಾರ ಸ್ವಾಮೀಜಿ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ಮತ್ತು ಮಠದ ಆವರಣದಲ್ಲಿ ಬಿಲ್ವಪತ್ರೆ ಗಿಡ ನೆಟ್ಟು ಮಕ್ಕಳ ಜತೆ ಸಂವಾದ ನಡೆಸುವರು.
Author: News Desk Benkiyabale
ತುಮಕೂರು : ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಗರದಲ್ಲಿ ಜನವರಿ 2ರಂದು ಪಾಲ್ಗೊಳ್ಳಲಿರುವ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸೇರಿದಂತೆ ವಿವಿಧ ರಾಜ್ಯಗಳ ಸಚಿವರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಕೇಂದ್ರದ ಕ್ಯಾಬಿನೆಟ್ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರಾಜ್ಯ ಕೃಷಿ ಸಚಿವರಾದ ಪರ್ಷೋತ್ತಮ್ ರೂಪಾಲ ಹಾಗೂ ಕೈಲಾಶ್ ಚೌಧರಿ, ರಾಜ್ಯ ರೈಲ್ವೇ ಸಚಿವ ಸುರೇಶ್ ಸಿ.ಅಂಗಡಿ, ಹರಿಯಾಣ ರಾಜ್ಯದ ಕೃಷಿ ಸಚಿವ ಜೆ.ಪಿ.ದಲಾಲ್, ತ್ರಿಪುರ ರಾಜ್ಯದ ಕೃಷಿ ಸಚಿವ ಪ್ರಣಜಿತ್ ಸಿಂಗ್ ರಾಯ್, ಹಿಮಾಚಲ್ ಪ್ರದೇಶದ ಕೃಷಿ ಸಚಿವ ಡಾ: ರಾಮ್ ಲಾಲ್ ಮರ್ಕಂದ, ಛತ್ತೀಸ್ಗಡ್ನ ಕೃಷಿ ಅಭಿವೃದ್ಧಿ ಸಚಿವ ರವೀಂದ್ರ ಚೌಬೇಜಿ, ಬಿಹಾರ್ ರಾಜ್ಯದ ಕೃಷಿ ಸಚಿವ ಪ್ರೇಮ್ಕುಮಾರ್, ಉತ್ತರ ಪ್ರದೇಶದ ಕೃಷಿ ಸಚಿವ ಸೂರ್ಯಲಪ್ರತಾಪ್ ಶಶಿ, ಗುಜರಾತ್ನ ಕೃಷಿ ಸಚಿವ ರಣಚೋದ್ಬಾಯ್ ಚಣಬಾಯ್ ಫಾಲ್ದು, ತಮಿಳುನಾಡು…
ತುಮಕೂರು : ನಗರದಲ್ಲಿ ಜನವರಿ 2ರಂದು ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ 16 ಮಹಿಳಾ ರೈತರು ಹಾಗೂ 16 ಪುರುಷ ರೈತರು ಸೇರಿದಂತೆ ಒಟ್ಟು 32 ರೈತ ಬಾಂಧವರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಕ್ಕೆ ಪ್ರಧಾನ ಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ನಗರದ ಜೂನಿಯರ್ ಕಾಲೇಜು ಮೈದಾನದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದರು. ಕೇಂದ್ರ ಕೃಷಿ ಇಲಾಖೆಯಿಂದ ಕೃಷಿ ಸಮ್ಮಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ರೈತರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಆಯ್ಕೆಯಲ್ಲಿ ಕರ್ನಾಟಕ 3ನೇ ಸ್ಥಾನ ಪಡೆದಿದೆ. ರಾಜ್ಯದ ಪರವಾಗಿ ಈ ಪ್ರಶಸ್ತಿಯನ್ನು ರಾಜ್ಯದ…
ತುಮಕೂರು : ತುಮಕೂರು ನಗರದಲ್ಲಿ ಜನವರಿ 2ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಂದೂವರೆ ಲಕ್ಷ ರೈತರು ಸೇರುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ನಗರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠ ಹಾಗೂ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಹಾಗೂ ಅಧಿಕಾರಿಗಳ ಸಭೆ ನಡೆಸಿ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ/ರೈತರಿಗೆ ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ರಸ್ತೆಗಳಲ್ಲಿ ಧ್ವನಿವರ್ಧಕಗಳನ್ನು ಹಾಗೂ ಎಲ್ಇಡಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಜನವರಿ 2ರಂದು ಮಧ್ಯಾಹ್ನ ಸುಮಾರು 2.15ಕ್ಕೆ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಡಾ: ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ನಂತರ ಮಠದ ವಿದ್ಯಾರ್ಥಿಗಳ…
ಚಿಕ್ಕನಾಯಕನಹಳ್ಳಿ : 1914 ರ ಡಿಸೆಂಬರ್ಗೂ ಹಿಂದೆ ನಮ್ಮ ದೇಶಕ್ಕೆ ಮೂರು ಇಸ್ಲಾಂ ದೇಶದಿಂದ ಕಿರುಕುಳಕ್ಕೊಳಗಾಗಿ ಇಲ್ಲಿಗೆ ಬಂದ 6 ಧಾರ್ಮಿಕ ನಿರಾಶ್ರಿತರಿಗೆ ಯಾವುದೇ ದಾಖಲೆಯಿಲ್ಲದೆ ಪೌರತ್ವ ನೀಡುವ ಕಾಯ್ದೆ ಇದಾಗಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಸ್ಪಷ್ಟಪಡಿಸಿದರು. ಅವರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಕಾರ್ಯಾಲಯದಲ್ಲಿ ಈ ಕುರಿತು ಮಾತನಾಡಿ ಈ ಕಾಯ್ದೆಯಿಂದ ಈ ದೇಶದ ಮಸ್ಲಿಂರಿಗೆ ಕಿಂಚಿತ್ಭಾದೆಯಿಲ್ಲ. ಮುಸ್ಲಿಂ ರಾಷ್ಟ್ರಗಳೆನಿಸಿದ ಪಾಕಿಸ್ಥಾನ, ಆಫ್ಘಾಸ್ಥಾನ ಹಾಗೂ ಬಾಂಗ್ಲಾದೇಶದಿಂದ ಮುಸ್ಲಿಂಮೇತರರಾದ ಆರು ಧರ್ಮಿಯರು ಅಲ್ಲಿನ ಕಿರುಕುಳ ಸಹಿಸಲಾರದೆ ಬದುಕುಳಿಯಲು ನಮ್ಮ ದೇಶಕ್ಕೆ ವಲಸೆ ಬಂದಿದ್ದಾರೆ. ಇವರಲ್ಲಿ ಯಾವುದೇ ದಾಖಲೆಗಳಿಲ್ಲ. ದಾಖಲೆಗಳಿದ್ದ ಕಾರಣ ಇವರಿಗೆ ದೇಶದ ಯಾವುದೇ ಸವಲತ್ತುಗಳು ದೊರೆಯುತ್ತಿಲ್ಲ. ಇಂತಹ ಆರು ಧರ್ಮೀಯರಾದ ಹಿಂದೂ, ಪಾರ್ಸಿ, ಸಿಖ್, ಕ್ರಿಶ್ಚಯನ್, ಜೈನ, ಭೌದ್ದಮತದ ಸುಮಾರು 30 ಸಾವಿರ ಅಜುಬಾಜಿನಲ್ಲಿರುವರಿಗೆ ದಾಖಲೆಗಳಿಲ್ಲದಿದರೂ ಪೌರತ್ವ ನೀಡುವ ಕಾಯ್ದೆ ಇದಾಗಿದೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲವೆಂದರು. …
ತುಮಕೂರು : ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ನಾಡಿನ ಸುಪ್ರಸಿದ್ದ ದೇವರಾಯನ ದುರ್ಗದಲ್ಲಿ 10 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಭರದಿಂದ ಸಾಗಿದೆ. ನಾಡಿನ ಮೂಲೆಮೂಲೆಯಲ್ಲಿ ಭಕ್ತಾಧಿಗಳನ್ನು ಹೊಂದಿರುವ ದೇವರಾಯನದುರ್ಗದ ಯೋಗ ನರಸಿಂಹಸ್ವಾಮಿ ಕ್ಷೇತ್ರ ಹಲವು ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿತ್ತು, ದೇವರಾಯನ ದುರ್ಗಕ್ಕೆ ಬರುವ ಭಕ್ತಾಧಿಗಳು ಅನುಭವಿಸುತ್ತಿದ್ದ ಸಮಸ್ಯೆಯನ್ನು ಸ್ತಳೀಯರು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾದ ಡಿ ಸಿ ಗೌರೀಶಂಕರ್ ಅವರ ಗಮನಕ್ಕೆ ತಂದಿದ್ದರು, ಸ್ತಳೀಯರ ಸಮಸ್ಯೆ ಆಲಿಸಿದ್ದ ಡಿ ಸಿ ಗೌರೀಶಂಕರ್ ಅವರು ಶಾಸಕರಾಗಿ ಆಯ್ಕೆಯಾದ ಮೇಲೆ ಆದ್ಯತೆ ಮೇಲೆ ದೇವರಾಯನದುರ್ಗದಲ್ಲಿ ಮೂಲಬೂತ ಸೌಕರ್ಯ ಕಲ್ಪಿಸಲು ಸಂಕಲ್ಪ ತೊಟ್ಟು ಸಾಕಾರಗೊಳಿಸಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಗ್ರಾಮಾಂತರ ಶಾಸಕ ಡಿ ಸಿ ಗೌರೀಶಂಕರ್ ಮುಖ್ಯಂಮಂತ್ರಿಗಳಿಗೆ ಒತ್ತಡ ತಂದು ದೇವರಾಯನ ದುರ್ಗದ ಸಮಗ್ರ ಅಭಿವೃದ್ದಿಗೆ 10 ಕೋಟಿ ಅನುಧಾನ ಮಂಜೂರು ಮಾಡಿಸುವಲ್ಲಿ ಸಫಲರಾಗಿದ್ದು,…
ತುಮಕೂರು: ವಿಜ್ಞಾನದ ಆವಿಷ್ಕಾರಗಳು ಮನುಷ್ಯ ಹಾಗೂ ಸಮಾಜದ ಬೆಳವಣಿಗೆಗೆ ಪೂರಕವಾಗಬೇಕೇ ಹೊರತು ಮಾರಕವಾಗಬಾರದು ಎಂದು ಶ್ರೀ ಸಿದ್ಧಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮೀಜಿಗಳು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ತುಮಕೂರು(ದ)ಜಿಲ್ಲೆ ಇವರ ಸಹಯೋಗದಲ್ಲಿಂದು ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ 2019-20 ನೇ ಸಾಲಿನ “ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ” ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಅವರು, ವಿಜ್ಞಾನವೆಂಬುದು ಸತ್ಯದ ಅನ್ವೇಷಣೆಯಾಗಿದ್ದು, ವಿಜ್ಞಾನದ ನೂತನ ಆವಿಷ್ಕಾರಗಳು ಮನುಷ್ಯನ ಯೋಗಕ್ಷೇಮಕ್ಕೆ ಅನುಗುಣವಾಗಿರಬೇಕು ಎಂದು ಅವರು ತಿಳಿಸಿದರು. ವಿಜ್ಞಾನದ ಆವಿಷ್ಕಾರಗಳಿಂದ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯ ಸೋಮಾರಿತನ ಬೆಳೆಸಿಕೊಂಡು ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾನೆ. ವಿಜ್ಞಾನದ ಆವಿಷ್ಕಾರಗಳು ನಮಗೆ ಬೇಕು ಆದರೆ ಎಷ್ಟು ಬೇಕು ಅಷ್ಟನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಮಕ್ಕಳಲ್ಲಿ ಶಾಸ್ತ್ರೀಯ ವಿಜ್ಣಾನ ಅಭ್ಯಸಿಸುವ ಗುಣವನ್ನು ಬೆಳೆಸಬೇಕು. ಮಕ್ಕಳಲ್ಲಿ ಉತ್ತಮ ವಿಜ್ಣಾನಿಯಾಗಬೇಕೆಂಬ ಆಸಕ್ತಿ ಕುಂದುತ್ತಿದೆ.…
ತುಮಕೂರು : ಪ್ರಧಾನ ನರೇಂದ್ರ ಮೋದಿ ಅವರು ಜನವರಿ 2ರಂದು ತುಮಕೂರು ಆಗಮಿಸಿ, ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಕಾರ್ಯಕ್ರಮ ಹಾಗೂ ರೈತ ಸಮಾವೇಶಕ್ಕೆ ರಾಜ್ಯದ ವಿವಿಧ ಜಿಲ್ಲೆಯಿಂದ ಸುಮಾರು 1 ಲಕ್ಷ ರೈತರು ಸೇರುವ ಸಾಧ್ಯತೆಯಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ನಗರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿ ಮಾತನಮಾಡಿದ ಅವರು ಜನವರಿ 2ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಜಿಲ್ಲೆಗೆ ಆಗಮಿಸಲಿದ್ದು, ಮೊದಲು ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ನಂತರ ಮಠದ ಮಕ್ಕಳ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು. ದೇಶದ 6 ರಾಜ್ಯಗಳಲ್ಲಿ ಕೃಷಿ ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿದ 30 ಕ್ಕೂ ಹೆಚ್ಚು ಮಂದಿ ರೈತರಿದ್ದಾರೆ. ಈ ಪೈಕಿ…
ತುಮಕೂರು : ವಿದ್ಯಾರ್ಥಿಗಳು ಬೆಳಗಿನ ವೇಳೆಯಲ್ಲಿ ಶಾಲೆ-ಕಾಲೇಜುಗಳಿಗೆ ಬರಲು ಅನುಕೂಲವಾಗುವಂತೆ ಶೀಘ್ರವಾಗಿ ಬಸ್ ಸೌಲಭ್ಯ ಕಲ್ಪಿಸದಿದ್ದರೆ, ತುಮಕೂರಿನ ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಮುಂದೆ ವಿದ್ಯಾರ್ಥಿಗಳ ಸಹಿತ ಮುತ್ತಿಗೆ ಹಾಕಿ ಹೋರಾಟ ಮಾಡುವುದಾಗಿ ಬಿಜೆಪಿ ತಾ.ಪಂ. ಸದಸ್ಯೆ ಆರ್. ಕವಿತಾ ರಮೇಶ್ ಸಾರಿಗೆ ಸಂಸ್ಥೆಗೆ ಎಚ್ಚರಿಕೆ ನೀಡಿದರು. ತುಮಕೂರು ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ ತಾ.ಪಂ., ಅಧ್ಯಕ್ಷ ಗಂಗಾಂಜನೇಯ ಅವರ ಅಧ್ಯಕ್ಷತೆಯಲ್ಲಿ ಏರ್ಪಟ್ಟಿದ್ದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಈ ಪ್ರಸಂಗ ಜರುಗಿತು.ತುಮಕೂರು-ಶಿರಾ ಹೆದ್ದಾರಿಯಲ್ಲಿ ತುಮಕೂರು ತಾಲ್ಲೂಕಿಗೆ ಒಳಪಡುವ ಶೀಬಿ ಕಡೆಯಿಂದ ತುಮಕೂರು ಕಡೆಗೆ ದೊಡ್ಡ ಸಂಖ್ಯೆಯಲ್ಲಿ ಶಾಲೆ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರತಿನಿತ್ಯ ಬಂದು ಹೋಗುತ್ತಾರೆ. ಶೀಬಿ, ಸೋಮಸಾಗರ ಗೇಟ್, ನೆಲಹಾಳ್, ಸೋರೆಕುಂಟೆ ಗೇಟ್, ತಿಮ್ಮರಾಜನಹಳ್ಳಿ ಗೇಟ್, ಬೆಳ್ಳಾವಿ ಕ್ರಾಸ್ನಿಂದ ಬರುವ ಬಡಕುಟುಂಬಕ್ಕೆ ಸೇರಿದ ನೂರಾರು ವಿದ್ಯಾರ್ಥಿಗಳು ಕೆ.ಎಸ್.ಆರ್.ಟಿ.ಸಿ. ಬಸ್ಗಳನ್ನೇ ಅವಲಂಬಿಸಿದ್ದಾರೆ. ಪ್ರತಿನಿತ್ಯ ಮುಂಜಾನೆ ಶಾಲೆ-ಕಾಲೇಜಿಗೆ ಬರಲು ಸೂಕ್ತ…
ತುಮಕೂರು: ವಿದ್ಯಾರ್ಥಿಗಳೇ ಪ್ರದರ್ಶಿಸಿದ ಯಕ್ಷಗಾನ ‘ಏಕಾದಶಿ ದೇವಿ ಮಹಾತ್ಮೆ’ ಹಾಗೂ ಹವ್ಯಾಸಿ ಕಲಾವಿದರು ಪ್ರದರ್ಶಿಸಿದ ‘ಗದಾಯುದ್ಧ’ ತುಮಕೂರಿನ ಕಲಾರಸಿಕರ ಮೆಚ್ಚುಗೆಗೆ ಪಾತ್ರವಾದವು. ನಗರದ ‘ಯಕ್ಷದೀವಿಗೆ’ಯ ನೇತೃತ್ವದಲ್ಲಿ ನಡೆದ ಐದು ಗಂಟೆಗಳ ಸುದೀರ್ಘ ಯಕ್ಷಗಾನ ಪ್ರದರ್ಶನವು ಪ್ರೇಕ್ಷಕರ ಮನರಂಜಿಸಿತು. ಕರ್ನಾಟಕ ಯಕ್ಷಗಾನ ಅಕಾಡೆಮಿಯು ದಕ್ಷಿಣ ಕನ್ನಡ ಮಿತ್ರವೃಂದ ಹಾಗೂ ಯಕ್ಷದೀವಿಗೆಯ ಸಹಕಾರದೊಂದಿಗೆ ಎಸ್.ಎಸ್.ಪುರಂನ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಸಿದ ಒಂದು ದಿನದ ವಿಚಾರ ಸಂಕಿರಣದ ಅಂಗವಾಗಿ ಎರಡು ಯಕ್ಷಗಾನ ಪ್ರದರ್ಶನಗಳು ನಡೆದವು. ಯಕ್ಷದೀವಿಗೆಯ ಅಧ್ಯಕ್ಷೆ ಹಾಗೂ ಯಕ್ಷಗಾನ ಅಕಾಡೆಮಿ ಸದಸ್ಯೆ ಆರತಿ ಪಟ್ರಮೆಯವರಿಂದ ತರಬೇತಿ ಪಡೆದ ನಗರದ ವಿವಿಧ ಶಾಲೆಯ ವಿದ್ಯಾರ್ಥಿಗಳು ಬಣ್ಣಹಚ್ಚಿ ಗೆಜ್ಜೆ ತೊಟ್ಟು ‘ಏಕಾದಶಿ ದೇವಿ ಮಹಾತ್ಮೆ’ ಎಂಬ ಯಕ್ಷಗಾನವನ್ನು ಪ್ರದರ್ಶಿಸಿದರು. ಮಾರುತಿ ವಿದ್ಯಾಕೇಂದ್ರ, ಬಿಷಪ್ ಸಾರ್ಜೆಂಟ್ ಶಾಲೆ, ಶ್ರೀ ಗುರುಕುಲ್, ಚೇತನ ವಿದ್ಯಾಮಂದಿರ, ವಿದ್ಯಾವಾಹಿನಿ ಕಾಲೇಜು, ಶ್ರೀಚೈತನ್ಯ ಟೆಕ್ನೋ ಸ್ಕೂಲ್, ಎಚ್ಎಂಎಸ್ ಐಟಿ, ತುಮಕೂರು ವಿಶ್ವವಿದ್ಯಾನಿಲಯ…










